Subscribe to Updates
Get the latest creative news from FooBar about art, design and business.
Author: editor.udayarashmi@gmail.com
ದೇವರಹಿಪ್ಪರಗಿ: ರಾಘವೇಂದ್ರ ಸ್ವಾಮಿಗಳ ೩೫೩ನೇ ಮಧ್ಯಾರಾಧನೆ ಮಹೋತ್ಸವ ಭಕ್ತಿಭಾವದಿಂದ ಅದ್ಧೂರಿಯಾಗಿ ಜರುಗಿತು.ಪಟ್ಟಣದ ವಿಠ್ಠಲಮಂದಿರದಲ್ಲಿ ಕಳೆದ ೨ ದಿನಗಳಿಂದ ಆರಂಭಗೊಂಡ ಆರಾಧನಾ ಮಹೋತ್ಸವದಲ್ಲಿ ಮೊದಲದಿನ ಪೂರ್ವಾರಾಧನೆ, ಎರಡನೆಯ ದಿನ ಮಧ್ಯಾರಾಧನೆ ಜರುಗಿದ್ದು, ನಾಳೆ ಉತ್ತರಾಧನೆ ಜರುಗಲಿದೆ. ಪ್ರತಿದಿನ ಬೆಳಿಗ್ಗೆ ರಾಯರ ಮಹಾಪೂಜೆ, ಅಷ್ಠೋತ್ತರ ಸಾಂಗವಾಗಿ ಜರುಗಿ ನಂತರ ತೀರ್ಥ, ಮಹಾಪ್ರಸಾದ ವಿತರಣೆಯಾಗುತ್ತಿದ್ದು. ರಾತ್ರಿ ರಾಯರ ಕುರಿತು ಭಕ್ತಿಗೀತೆಗಳ ಭಜನೆ ಜರುಗಲ್ಪಡುತ್ತಿವೆ.ರಾಯರ ಆರಾಧನೆ ಅಂಗವಾಗಿ ಪ್ರತಿವರ್ಷ ಮೊದಲದಿನ ಪೂರ್ವಾರಾಧನೆ ಅಂಗವಾಗಿ ಶ್ರೀನಿವಾಸ ಪಾಟೀಲ(ವರ್ಕಾನಳ್ಳಿ) ಎರಡನೆಯ ದಿನ ಮಧ್ಯಾರಾಧನೆಯಂದು ಡಾ.ಆರ್.ಆರ್.ನಾಯಿಕ್ ಮೂರನೆಯ ದಿನ ಎಂ.ಆರ್.ಪುರೋಹಿತ(ಮಣೂರ) ಪೂಜಾವಿಧಿವಿಧಾನ ಹಾಗೂ ಮಹಾಪ್ರಸಾದ ನೆರವೇರಿಸುತ್ತಾರೆ.ಮಹೋತ್ಸವದಲ್ಲಿ ವೈದ್ಯರುಗಳಾದ ಆರ್.ಆರ್.ನಾಯಿಕ್, ಸತೀಶ ನಾಡಗೌಡ, ಚಿದಂಬರ ಸೇವಾ ಸಮಿತಿಯ ಶ್ರೀಧರ ನಾಡಗೌಡ, ವೆಂಕಟೇಶ ಕುಲಕರ್ಣಿ, ಶ್ರೀನಿವಾಸ ಪಾಟೀಲ. ಸುಧೀರ ಪಾಟೀಲ, ಶ್ರೀಪಾದಭಟ್ ಜೋಷಿ, ಗುರುರಾಜ್ ಕುಲಕರ್ಣಿ, ನರೇಂದ್ರ ನಾಡಗೌಡ, ಪ್ರಲ್ಹಾದ ಕುಲಕರ್ಣಿ, ಪ್ರಭಾಕರ ಕುಲಕರ್ಣಿ, ಅಶೋಕಭಟ್ ಜೋಷಿ, ಪ್ರವೀಣ ಕುಲಕರ್ಣಿ, ಉಮಾಕಾಂತ ನಾಡಗೌಡ, ರಾಘವೇಂದ್ರ ಕುಲಕರ್ಣಿ, ಆನಂದ ಕುಲಕರ್ಣಿ, ಶ್ರೀನಿವಾಸ ಕುಲಕರ್ಣಿ, ಕೃಷ್ಣಾಜೀ ಕುಲಕರ್ಣಿ,…
ತಿಕೋಟಾ: ಗ್ರಾಮೀಣ ಭಾಗದಲ್ಲಿ ಶಿಕ್ಷಣ ಪಡೆಯುವ ಮಕ್ಕಳಿಗೆ ಒಳ್ಳೆಯ ಸೌಕರ್ಯ ಒದಗಿಸಿದರೆ ಉತ್ತಮ ಸಾಧನೆ ಮಾಡುತ್ತಾರೆ ಎಂದು ಮುಂಬೈ ಮೂಲದ ತಪಸಿದಾಸ, ತುಳಸಿದಾಸ ಮತ್ತು ವೃಜದಾಸ ಚಾರಿಟೇಬಲ್ ಟ್ರಸ್ಟನ ಸಂಯೋಜಕ ವಿಶ್ವನಾಥ ಸಿಂದಗಿ ಹೇಳಿದರು.ತಾಲ್ಲೂಕಿನ ಬಾಬಾನಗರ ಗ್ರಾಮದ ಸರ್ಕಾರಿ ಕನ್ನಡ ಗಂಡು ಮಕ್ಕಳ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಟ್ರಸ್ಟ್ ವತಿಯಿಂದ ನೀಡಿದ ಸ್ಮಾರ್ಟ ಬೋರ್ಡ್ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳು ಉತ್ತಮವಾಗಿ ಶಿಕ್ಷಣ ಪಡೆದು ಶೈಕ್ಷಣಿಕವಾಗಿ ಮಾಡುವ ಸಾಧನೆಯೇ ಸಮಾಜಕ್ಕೆ ಕೊಡುವ ದೊಡ್ಡ ಕೊಡುಗೆಯಾಗಿದೆ ಎಂದರು.ಈ ಸಂದರ್ಭದಲ್ಲಿ ಎಸ್.ಐ.ರುದ್ರಗೌಡರ, ಎಸ್.ಬಿ.ಬಿರಾದಾರ, ಬಿ.ಎಸ್.ಕುಮಟಗಿ, ಎಸ್.ಐ.ಬಾಗಲಕೋಟ, ಎ.ಎಂ.ಚಮಕೇರೆ, ಜೆ.ಎನ್.ಬಾಗಲಕೋಟ, ಅಮೃತಾ ಪತ್ತಾರ, ಗ್ರಾಮ ಪಂಚಾಯತ ಸದಸ್ಯರು, ಎಸ್ಡಿಎಂಸಿ ಅಧ್ಯಕ್ಷರು, ಸದಸ್ಯರು ಭಾಗವಹಿಸಿದ್ದರು.
ವಿಜಯಪುರ: ನಗರದ ಸಿದ್ದೇಶ್ವರ ‘ಬಿ’ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟದ ಬಾಲಕ ವಿಭಾಗದ ಖೋ ಖೋ ಸ್ಪರ್ಧೆಯಲ್ಲಿ ವಿಜಯಶಾಲಿಗಳಾಗಿ ತಾಲೂಕಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷ ಡಿ.ಎಲ್.ಚವ್ಹಾಣ್, ಕಾರ್ಯಾಧ್ಯಕ್ಷ ಕೆ.ಜಿ.ರಾಠೋಡ, ಕಾರ್ಯದರ್ಶಿ ರಾಜಶೇಖರ ರಾಠೋಡ, ಶಾಲೆಯ ಮುಖ್ಯ ಗುರು ಸಂದೀಪ ರಾಠೋಡ, ತಂಡದ ಮ್ಯಾನೇಜರ್ ಅಶೋಕ ರಾಠೋಡರವರುಗಳು ಸೇರಿದಂತೆ ಶಾಲಾ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.
ರೈತ ಚಿಂತನಾ ಸಭೆ ಹಾಗೂ ಜಂಬಗಿ ಗ್ರಾಮ ಘಟಕ ಉದ್ಘಾಟನಾ ಸಮಾರಂಭ ವಿಜಯಪುರ :ದೇಶದಲ್ಲಿ ಬಹುಸಂಖ್ಯಾತರಾಗಿರುವ ರೈತರು ದಿನನಿತ್ಯ ಅನೇಕ ತೊಂದರೆಗಳೊಂದಿಗೆ ಕೃಷಿ ಮಾಡುತ್ತಾ ಸಕಲ ಮಾನವ ಕುಲಕ್ಕೆ ಯಾವುದೇ ಫಲಾಪೇಕ್ಷೆ ಇಲ್ಲದೇ ಅನ್ನ ನೀಡುತ್ತಾ ತನ್ನ ಜೀವನವನ್ನು ಯಾವುದೇ ಆಡಂಬರವಿಲ್ಲದೇ ಸರಳ ರೀತಿಯಲ್ಲಿ ಬದುಕು ಸಾಗಿಸುತ್ತಿದ್ದು, ಇಂದಿನ ಆಧುನಿಕ ಯುಗದ ತುಟ್ಟಿ ಜಗತ್ತಿನಲ್ಲಿ ಬದುಕು ನಡೆಯುವುದು ದುಸ್ತರವಾಗಿದೆ, ಅನ್ನದಾತನ ಹೆಸರಲ್ಲಿ ಚುನಾವಣೆಯಲ್ಲಿ ಗೆದ್ದು ಬಂದಿರುವ ಜನಪ್ರತಿನಿಧಿಗಳು ರೈತರ ಪರ ಧ್ವನಿ ಎತ್ತುತ್ತಿಲ್ಲ ಎಂದು ರೈತ ಸಂಘದ ಜಿಲ್ಲಾ ಅಧ್ಯಕ್ಷರಾದ ಸಂಗಮೇಶ ಸಗರ ಅವರು ರೈತ ಚಿಂತನಾ ಸಭೆ ಹಾಗೂ ಜಂಬಗಿ ಗ್ರಾಮ ಘಟಕ ಉದ್ಘಾಟನಾ ಸಮಾರಂಭದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ರೈತ ಸಂಘದ ಜಿಲ್ಲಾ ಸಂಚಾಲಕ ರಾಮನಗೌಡ ಪಾಟೀಲ ಮಾತನಾಡುತ್ತಾ, ರೈತ ಸಂಘದಿಂದ ಜಿಲ್ಲೆಯಲ್ಲಿ ಅನೇಕ ಕಾರ್ಯಗಳನ್ನು ಮಾಡುತ್ತಾ ಬಂದಿರುತ್ತೇವೆ, ಇದರಿಂದಾಗಿ ಅನೇಕ ರೈತರಿಗೆ ಅನುಕೂಲಗಳಾಗಿ ಪ್ರತಿನಿತ್ಯ ನೂರಾರು ಜನ ರೈತರು ಸಂಗಟನೆಗೆ ಬರುತ್ತಿದ್ದಾರೆ, ಮುಂಬರುವ ಮಾರ್ಚ ತಿಂಗಳ ಒಳಗಾಗಿ ಲಕ್ಷ…
ಇಂಡಿ: ಅಕ್ಷರ ಕಲಿತ ಮಕ್ಕಳು ಭ್ರಷ್ಟರಾಗಬಹುದು. ಆದರೆ ಸಂಸ್ಕಾರ ಕಲಿತ ಮಕ್ಕಳು ಎಂದಿಗೂ ಭ್ರಷ್ಟನಾಗಲು ಸಾಧ್ಯವಿಲ್ಲ ಎಂದು ಅಂಕಣಕಾರ, ಸಾಹಿತಿ, ಮಂಜುನಾಥ ಜುನಗೊಂಡ ಹೇಳಿದರು.ಅವರು ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಬಿಎ, ಬಿಕಾಂ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಹಾಗೂ ಸಾಂಸ್ಕೃತಿಕ ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.ದೇಶ ಕಟ್ಟುವಲ್ಲಿ ಯುವ ವಿದ್ಯಾರ್ಥಿ ಸಮೂಹ ಎಡಬಲ ಆಲೋಚನೆಗಳಲ್ಲಿ ಮುಳುಗದೆ ಹೆಚ್ಚು ಸಕ್ರಿಯವಾಗಬೇಕಿದೆ. ಇಂದು ನಮ್ಮತನ ಬೆಳಿಸಿಕೊಳ್ಳಬೇಕಿದೆ. ಹಲಸಂಗಿ ಗೆಳೆಯರು ನಮ್ಮ ನೆಲದ ಅಸ್ಮಿತೆ. ಅಂತಹವರ ಬಗ್ಗೆ ಅರಿತುಕೊಳ್ಳಬೇಕಿದೆ, ನಮ್ಮವರ ಬಗ್ಗೆ ತಿಳಿದುಕೊಳ್ಳದೇ ಜಾಗತಿಕ ಸಂಗತಿಗಳನ್ನು ತಿಳಿದುಕೊಳ್ಳಲು ಹಂಬಲಿಸುತ್ತಿರುವ ಯುವ ಸಮೂಹದ ನಡೆ ನಿಜಕ್ಕೂ ವಿಷಾಧಕರ ಸಂಗತಿಯಾಗಿದೆ ಎಂದರು.ಪ್ರಾಚಾರ್ಯ ಪ್ರೊ. ಆರ್.ಎಚ್. ರಮೇಶ ಅಧ್ಯಕ್ಷತೆವಹಿಸಿ ಮಾತನಾಡಿ, ನಮ್ಮ ಕಾಲೇಜು ಕೇಂದ್ರ ಸರಕಾರದ ಪ್ರಧಾನ ಮಂತ್ರಿ ಉಷಾ ಯೋಜನೆಗೆ ಆಯ್ಕೆಯಾಗಿದ್ದು, ರೂ. ೫ಕೋಟಿ ಮಂಜೂರು ಮಾಡಿದೆ, ಅದನ್ನು ಅತ್ಯಂತ ಪಾರದರ್ಶಕವಾಗಿ ಬಳಕೆ ಮಾಡಿಕೊಂಡು ಕಾಲೇಜಿನ ಶೈಕ್ಷಣ ಕ ಮತ್ತು…
ತುಂಗಭದ್ರಾ ಅಣೆಕಟ್ಟು ಕ್ರಸ್ಟ್ಗೇಟ್ ವಿಚಾರದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯ ಬೆಂಗಳೂರು/ಕೊಪ್ಪಳ: “ತುಂಗಭದ್ರಾ ಅಣೆಕಟ್ಟು ಕ್ರಸ್ಟ್ ಗೇಟ್ ಅವಘಡ ವಿಚಾರವಾಗಿ ವಿರೊಧ ಪಕ್ಷಗಳು ಕೇವಲ ಟೀಕೆ ಮತ್ತು ರಾಜಕೀಯ ಮಾಡುತ್ತಿದ್ದವು. ಆದರೆ ನಮ್ಮ ಕೆಲಸಗಳು ಉಳಿದುಕೊಂಡಿತು, ಅವರ ಟೀಕೆಗಳು ಸತ್ತು ಹೋದವು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.ಬೆಂಗಳೂರಿನ ಸದಾಶಿವ ನಗರದ ನಿವಾಸ ಹಾಗೂ ತದ ನಂತರ ಕೊಪ್ಪಳದ ಗಿಣಿಗೇರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಬುಧವಾರ ಮಾತನಾಡಿದ ಅವರು “ನಮ್ಮ ತಂತ್ರಜ್ಞರು, ಅಧಿಕಾರಿಗಳು, ಇಂಜಿನಿಯರ್ ಗಳು, ಕಾರ್ಮಿಕರು, ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಈ ಭಾಗದ ಶಾಸಕರು ಅವಘಡ ನಡೆದ ದಿನದಿಂದ ಒಂದು ರಾತ್ರಿಯೂ ನಿದ್ದೆ ಮಾಡದೆ ಕೆಲಸ ಮಾಡಿದ್ದಾರೆ. ದೇವರ, ಜನರ ಆಶೀರ್ವಾದದಿಂದ ಈ ಕೆಲಸ ನಡೆದಿದೆ. ನಮ್ಮ ರೈತರನ್ನು ನಾವು ಬದುಕಿಸಿದ್ದೇವೆ” ಎಂದರು.ನವಲಿ ಅಣೆಕಟ್ಟಿನ ಬಗ್ಗೆ ಸರ್ಕಾರದ ಆಲೋಚನೆತುಂಗಭದ್ರಾ ಅಣೆಕಟ್ಟಿನ ಆಯಸ್ಸು ಕಡಿಮೆಯಿದೆ ಎನ್ನುವ ಬಗ್ಗೆ ಕೇಳಿದಾಗ “ಯಾವ ಆಯಸ್ಸು ಕಡಿಮೆಯಿಲ್ಲ. ತುಂಗಭದ್ರಾ ಅಣೆಕಟ್ಟು ಕಟ್ಟುವಾಗಲೇ ಪ್ರತಿವರ್ಷ…
ಆಲಮಟ್ಟಿ: ಅಣೆಕಟ್ಟುಗಳ ಸುರಕ್ಷತೆ ಪರಿಶೀಲನೆಗಾಗಿ ಕೇಂದ್ರ ತಂಡ ಹಾಗೂ ಮಾಜಿ ಸಿಡ್ಬ್ಲೂ ಸಿ ಸದಸ್ಯರನ್ನು ಒಳಗೊಂಡ ತಾಂತ್ರಿಕ ಸಮಿತಿ ರಚನೆ ಮಾಡಲಾಗಿದೆ. ರಾಜ್ಯದ ಎಲ್ಲಾ ಅಣೆಕಟ್ಟುಗಳನ್ನು ಪರಿಶೀಲಿಸಲು ಈ ತಂಡ ಈಗಾಗಲೇ ರಾಜ್ಯದಾದ್ಯಂತ ಪ್ರವಾಸ ಮಾಡುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.ಲಾಲ್ ಬಹದ್ದೂರ್ ಶಾಸ್ತ್ರೀ (ಆಲಮಟ್ಟಿ) ಅಣೆಕಟ್ಟಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೂಡಿ ಬಾಗಿನ ಅರ್ಪಿಸಿದ ನಂತರ ನಡೆದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, “ಸಮಿತಿಯ ವರದಿಯ ಆದಾರದ ಮೇಲೆ ಅಣೆಕಟ್ಟುಗಳ ಸುರಕ್ಷತೆಗೆ ಸರ್ಕಾರ ಕೆಲಸ ಮಾಡಲಿದೆ. ನಾರಾಯಣಪುರ ಅಣೆಕಟ್ಟಿನ ಗೇಟುಗಳನ್ನು ಆಧುನಿಕ ತಂತ್ರಜ್ಞಾನ ಬಳಸಿ ಅಳವಡಿಸಲಾಗಿದೆ”ಎಂದು ತಿಳಿಸಿದರು.ಈ ಆಣೆಕಟ್ಟಿನ ಉದ್ಯಾನವನ ಉತ್ತಮವಾಗಿದೆ. ಪ್ರವಾಸಿಗರ ಸಂಖ್ಯೆಯೂ ಹೆಚ್ಚಿದೆ. ಇನ್ನಷ್ಟು ಪ್ರವಾಸಿಗರನ್ನು ಆಕರ್ಷಿಸಲು ಏನು ಕೆಲಸ ಮಾಡಬೇಕೋ ಅದನ್ನು ಸರ್ಕಾರ ಮಾಡಲಿದೆ ಎಂದರು.ಕೃಷ್ಣ ಮೇಲ್ದಂಡೆ ವಿಚಾರದಲ್ಲಿ ಭೂಮಿ ಕಳೆದು ಕೊಂಡವರು ಹಾಗೂ ಭೂಸ್ವಾಧೀನ ವಿಚಾರವಾಗಿ ಈ ಭಾಗದ ಮೂರು ಜನ ಮಂತ್ರಿಗಳು ಹಾಗೂ ಶಾಸಕರು ಪ್ರಸ್ತಾವನೆ ಮಾಡಿದ್ದಾರೆ. ಎಲ್ಲರ ಬಳಿ ಯಾವ, ಕೆಲಸಗಳನ್ನು…
ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯ ವಿಜಯಪುರ: ಇತ್ತೀಚೆಗೆ ಬಾರಿ ಸುದ್ದಿಯಲ್ಲಿರುವ ಕೊಲ್ಕತ್ತಾದ ವೈದ್ಯ ಮೇಲಾಗಿರುವ ಅತ್ಯಾಚಾರ ಘಟನೆ ನಮ್ಮೆಲ್ಲರಿಗೂ ಅತ್ಯಂತ ನೋವಿನ, ದುಃಖದ ಸಂಗತಿಯಾಗಿದೆ. ಕೊಲ್ಕತ್ತಾ ವೈದ್ಯೆಯ ಮೇಲಾಗಿರುವ ಅತ್ಯಾಚಾರ ಅತ್ಯಂತ ಭಯಾನಕರ ಇಂತಹ ಘಟನೆಗಳು ತಡೆಗಟ್ಟುವ ಕ್ರಮಗಳಾಗಬೇಕು ಎಂದು ಪ್ರಾಚಾರ್ಯೆ ಡಾ.ಆರ್.ಎಂ.ಮಿರ್ದೆ ಹೇಳಿದರು.ನಗರದ ಎಸ್ ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ ಸಂಯುಕ್ತಾಶ್ರಯದಲ್ಲಿ ಮಹಾವಿದ್ಯಾಲಯದ ಮಹಿಳಾ ಸಬಲೀಕರಣ ಘಟಕ ಮತ್ತು ಲೈಂಗಿಕ ದೌರ್ಜನ್ಯ್ ತಡೆಗಟ್ಟುವ ಘಟಕದ ಸಹಯೋಗದಲ್ಲಿ ಆಯೋಜಿಸಲಾದ ಇತ್ತೀಚೆಗೆ ಹೆಣ್ಣು ಮಕ್ಕಳ ಮೇಲಾಗುತ್ತಿರುವ ಲೈಂಗಿಕ ದೌರ್ಜನ್ಯಗಳ ವಿರುದ್ಧ ಮೇಣದಬತ್ತಿ ಹಚ್ಚಿ ಕಪ್ಪು ಬಟ್ಟೆ ಧರಿಸಿ ಜಾಗೃತಿ ಮೂಡಿಸಲಾಯಿತು. ಇತ್ತೀಚೆಗೆ ಕೊಲ್ಕತ್ತಾದ ವೈದ್ಯ ಮೇಲಾಗಿರುವ ಅತ್ಯಾಚಾರ ಘಟನೆ ಇದರ ಬೆನ್ನಲ್ಲಿಯೇ ಮಹಾರಾಷ್ಟ್ರದ ಚಿಕ್ಕ ಮಕ್ಕಳ ಮೇಲೆ ಎಸಗಿರುವ ಕ್ರೂರ ಕೃತ್ಯದ ಮೇಲೆ ಮಾತನಾಡಲು ಅಸಹ್ಯವಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು.ಇಂತಹ ಲೈಂಗಿಕ ದೌರ್ಜನ್ಯ ಘಟನೆಗಳನ್ನು ತಡೆಗಟ್ಟುವಲ್ಲಿ ಸಂಘಟನೆಗಳು ಮತ್ತು ಅಧಿಕಾರಿವರ್ಗ ಅರಿವು ಮೂಡಿಸಬೇಕು…
ಎಸ್.ಬಿ ಕಲಾ & ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಸಮಾರೋಪ ವಿಜಯಪುರ: ವಿದ್ಯಾರ್ಥಿ ಜೀವನದಲ್ಲಿ ಸತತ ಓದು,ಕ್ರೀಡಾ ಅಲ್ಲದೇ ಪಠ್ಯೇತರ ಸಾಂಸ್ಕೃತಿಕ, ಮಹಾವಿದ್ಯಾಲಯಲ್ಲಿನ ಎನ್.ಸಿ.ಸಿ, ಎನ್.ಎಸ್.ಎಸ್, ಸ್ಕೌಟ್ಸ್ ಮತ್ತು ಗೈಡ್ಸ್ ಇಂತಹ ಹಲವಾರು ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಂಡು ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಬೇಕು ಎಂದು ಬಿ.ಎಲ್.ಡಿ.ಇ.ಸಂಸ್ಥೆಯ ಪದವಿ ಕಾಲೇಜು ಆಡಳಿತಾಧಿಕಾರಿ ಡಾ.ವಿಲಾಸ ಬಗಲಿ ಹೇಳಿದರುನಗರದ ಎಸ್ ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಐ ಕ್ಯೂ ಎಸಿ ಸಂಯುಕ್ತಾಶ್ರಯದಲ್ಲಿ ೨೦೨೩-೨೪ ನೇ ಸಾಲಿನ ಶೈಕ್ಷಣಿಕ ವರ್ಷದ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ವಿದ್ಯಾರ್ಥಿ ಜೀವವದಲ್ಲಿ ಪ್ರತಿಯೊಂದು ಕ್ಷಣವೂ ಮೌಲ್ಯಯುತವಾದದ್ದು ಕಲಿಕಾ ಹಂತದಲ್ಲಿ ಚನ್ನಾಗಿ ಅಧ್ಯಯನ ಮಾಡಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು.ವಿದ್ಯಾರ್ಥಿಗಳು ನಿರಂತರ ಓದು,ಕ್ರೀಡಾ ಚಟುವಟಿಕೆ ಅಲ್ಲದೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪಾಲ್ಗೊಂಡು ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಬೇಕು. ಶೈಕ್ಷಣಿಕ ಜೊತೆಗೆ ಸಾಂಸ್ಕೃತಿಕ ಅಥವಾ ಕ್ರೀಡಾ ಚಟುವಟಿಕೆಗಳಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳವುದು ಅವಶ್ಯಕ.…
Udayarashmi kannada daily newspaper
