Author: editor.udayarashmi@gmail.com

ಸಿಂದಗಿ: ಪಟ್ಟಣದ ಪುರಸಭೆ ಅಧಿಕಾರಿಗಳಿಗೆ ಹೇಳುವವರು ಕೇಳುವವರು ಯಾರೂ ಇಲ್ಲದಂತಾಗಿದೆ. ಏಕೆಂದರೆ ಅಲ್ಲಿ ಆಡಳಿತ ಮಂಡಳಿಯಿಲ್ಲ. ಅವರು ಮಾಡಿದ್ದೇ ಆಟವಾಗಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಸಂತೋಷ ಪಾಟೀಲ ಡಂಬಳ ಆಕ್ರೋಶ ವ್ಯಕ್ತಪಡಿಸಿದರು.ಪಟ್ಟಣದ ತಾಲೂಕು ಆಡಳಿತ ಸೌಧದಲ್ಲಿ ಪುರಸಭೆ ಅಧಿಕಾರಿಗಳ ಬೇಜವಾಬ್ದಾರಿಯಿಂದ ತಲೆ ಕೆಳಗಾಗಿ ತ್ರಿವರ್ಣ ಧ್ವಜ ಹಾರಿದ ಹಿನ್ನಲೆ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ಮೇಲೆ ಹಾಗೂ ಕೃತ್ಯ ಎಸಗಿದ ಕಿಡಿಗೇಡಿಗಳ ಮೇಲೆ ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಪ್ರತಿಭಟಿಸಿ ಬಿಜೆಪಿ ಪಕ್ಷದ ವತಿಯಿಂದ ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು.ಆಡಳಿತ ಮಂಡಳಿ ಇಲ್ಲ ಎಂದು ತಿಳಿದುಕೊಂಡು ಎಲ್ಲೆಲ್ಲಿ ಹಗರಣ ಮಾಡಬೇಕು. ಯರ‍್ಯಾರ ಪ್ಲಾಟ್ ಎತ್ತಿ ಬಡಿಬೇಕು ಎಂಬ ವಿಚಾರದಲ್ಲಿಯೇ ಇದ್ದಾರೆ. ಇದರಿಂದ ಅಧಿಕಾರಿಗಳು ಮಾಡಿದ್ದೇ ಆಟವಾಗಿದೆ. ಇನ್ನೂ ಆಡಳಿತಾಧಿಕಾರಿ ಅಭೀದ ಗದ್ಯಾಳ ಅವರು ಅಮಾವಾಸ್ಯೆ, ಹುಣ್ಣಿಗೊಮ್ಮೆ ಭೇಟಿ ನೀಡಿ ಬಿಲ್‌ಗಳಿಗೆ ಸಹಿ ಮಾಡಿ ಹೋಗುತ್ತಾರೆ. ಪಟ್ಟಣದ ನೈರ್ಮಲ್ಯದ ಕುರಿತು ಪುರಸಭೆಗೆ ಕಾಳಜಿಯೇ ಇಲ್ಲ. ಹಗರಣ ಮಾಡುವುದೇ…

Read More

ಸಿಂದಗಿ: ಶಿಕ್ಷಕರ ದಿನಾಚರಣೆ ಪ್ರಯುಕ್ತ ತಾಲೂಕಿನ ಬೋರಗಿ ಗ್ರಾಮದ ನಬಿರೋಶನ್ ಪ್ರಕಾಶನ ವತಿಯಿಂದ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಹಾಗೂ ಕವಿಗೋಷ್ಠಿ ಸಮಾರಂಭವನ್ನು ಸೆಪ್ಟೆಂಬರ್ ತಿಂಗಳಲ್ಲಿ ಆಯೋಜನೆ ಮಾಡಲು ನಿರ್ಧರಿಸಿದೆ. ಆಸಕ್ತ ಕವಿಗಳು ಶಿಕ್ಷಕರ ಕುರಿತಾದ ಎರಡು ಸ್ವರಚಿತ ತಮ್ಮ ಕವನಗಳನ್ನು ೯೭೪೨೮೪೯೬೬೩ ಈ ವಾಟ್ಸಪ್ ನಂಬರ್‌ಗೆ ಆ.೩೧ರ ಒಳಗಾಗಿ ಕಳುಹಿಸಲು ಕೋರಲಾಗಿದೆ. ದಿನಾಂಕ ಮತ್ತು ಸ್ಥಳದ ವಿವರವನ್ನು ಆಯ್ಕೆಯಾದ ಕವಿಗಳಿಗೆ ತಿಳಿಸಲಾಗುವುದು ಎಂದು ಆಯೋಜಕ ಮೌಲಾಲಿ ಆಲಗೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಗವರ್ನರ್ ಒಂದು ಸಾಂವಿಧಾನಿಕ ಹುದ್ದೆ | ಕೇಂದ್ರ ಸರ್ಕಾರದ ಪ್ರತಿನಿಧಿಯಲ್ಲ ಎಂದ ಸಿಎಂ ಸಿದ್ದರಾಮಯ್ಯ ಬೆಂಗಳೂರು: ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಅವರು ರಾಷ್ಟ್ರಪತಿಗಳ ಪ್ರತಿನಿಧಿಯಂತೆ ಕಾರ್ಯನಿರ್ವಹಿಸಬೇಕೇ ಹೊರತು ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ವಿಷಯದಲ್ಲಿ ಕೆಲವರನ್ನು ಮಾತ್ರ ಆಯ್ಕೆ ಮಾಡಬಾರದು. ಗವರ್ನರ್ ಒಂದು ಸಾಂವಿಧಾನಿಕ ಹುದ್ದೆ ಮತ್ತು ನಾವು ಅದನ್ನು ಗೌರವಿಸುತ್ತೇವೆ. ನಾವು ಹೇಳುವುದೇನೆಂದರೆ ಅವರು ರಾಷ್ಟ್ರಪತಿಗಳ ಪ್ರತಿನಿಧಿಯಾಗಿ ಕೆಲಸ ಮಾಡಬೇಕೇ ಹೊರತು ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಅಲ್ಲ ಎಂದರು.ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ತಡೆ ಕಾಯ್ದೆಯ 17ಎ ಅಡಿಯಲ್ಲಿ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸಲು ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ, 2023 ರ ಸೆಕ್ಷನ್ 218 ರ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲು ಆಗಸ್ಟ್ 16 ರಂದು ರಾಜ್ಯಪಾಲರು ಅನುಮತಿ ನೀಡಿದ್ದಾರೆ.ಶ್ರೀ ಸಾಯಿ ವೆಂಕಟೇಶ್ವರ…

Read More

ಮುದ್ದೇಬಿಹಾಳ: ಪಟ್ಟಣದ ಕಿಲ್ಲಾ ಗಲ್ಲಿಯಲ್ಲಿರುವ ಶ್ರೀ ಬಲಮುರಿ ಗಣಪ, ಶ್ರೀ ಗುಗ್ಗಳ ಬಸವೇಶ್ವರ ಹಾಗೂ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.ಸೋಮುವಾರ ಬೆಳಿಗ್ಗೆ ೭ಗಂಟೆಗೆ ಶ್ರೀ ಕಾಳಿಕಾದೇವಿ ದೇವಸ್ಥಾನದಿಂದ ದೇವಿಯ ಉತ್ಸವ ಮೂರ್ತಿಯನ್ನು ದೇವಸ್ಥಾನಕ್ಕೆ ಕರೆತರಲಾಯಿತು. ಮಂಗಳವಾರ ಪ್ರಾಥಃಕಾಲ ೫ಗಂಟೆಗೆ ಶ್ರೀ ವೀರಭದ್ರೇಶ್ವರರ ಪಲ್ಲಕ್ಕಿ ಹಾಗೂ ಕಳಸವನ್ನು ತಂಗಡಗಿಯ ಕೃಷ್ಣಾ ನದಿಗೆ ಗಂಗಸ್ಥಳಕ್ಕೆ ಕರೆದೊಯ್ಯಲಾಯಿತು. ೬ಗಂಟೆಗೆ ದೇವಸ್ಥಾನದಲ್ಲಿನ ಮೂಲ ಮೂರ್ತಿಗೆ ರುದ್ರಾಭಿಷೇಕ ನೆರವೇರಿಸಲಾಯಿತು. ಅತ್ತ ಗಂಗಸ್ಥಳದಲ್ಲಿ ಸ್ನಾನಾಧಿಕಾರ್ಯಗಳ ಬಳಿಕ ೮ಗಂಟೆಗೆ ಶ್ರೀ ವೀರಭದ್ರೇಶ್ವರರ ಪಲ್ಲಕ್ಕಿ ಹಾಗೂ ಕಳಸವು ಪುರ ಪ್ರವೇಶಿಸಿದವು. ಪಿಲೇಕಮ್ಮ ದೇವಸ್ಥಾನದಿಂದ ಸಕಲ ವಾದ್ಯ ವೈಭವಗಳೊಂದಿಗೆ ಹಾಗೂ ಪುರವಂತರ ಸೇವೆಯೊಂದಿಗೆ ಶ್ರೀ ವೀರಭದ್ರೇಶ್ವರರ ಪಲ್ಲಕ್ಕಿ ಮಹಾ ಉತ್ಸವವು ಬಸವೇಶ್ವರ ವೃತ್ತ, ಮುಖ್ಯ ಬಜಾರ, ಸರಾಫ ಬಜಾರ ಮೂಲಕ ದೇವಸ್ಥಾನದವರೆಗೆ ಸಾಗಿದವು.ಮಧ್ಯಾಹ್ನ ಲಿಂ|| ಗಿರಿಜಾಬಾಯಿ ಮತ್ತು ಲಿಂ|| ರಾಚಪ್ಪ ಕಲಬುರ್ಗಿ ಇವರ ಸ್ನರಣಾರ್ಥ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲಬುರ್ಗಿ ಇವರ ಭಕ್ತಿ ಸೇವೆಯಲ್ಲಿ ಅನ್ನಸಂತರ್ಪಣೆ ಜರುಗಿತು.…

Read More

ಮುದ್ದೇಬಿಹಾಳ: ಸಾಂಕ್ರಾಮಿಕ ರೋಗಗಳು ಹೆಚ್ಚುತ್ತಿರುವ ಹಿನ್ನೆಲೆ ಪಟ್ಟಣದ ಗಣೇಶ ನಗರದಲ್ಲಿರುವ ಉತ್ತರ ಪ್ರದೇಶ ಮೂಲದ ವ್ಯಕ್ತಿಯ ಗುಜರಿ ಅಂಗಡಿಗೆ ಆರೋಗ್ಯ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಎಚ್ಚರಿಸಿದರು.ಒಡೆದ ಪ್ಲಾಸ್ಟಿಕ್ ಘನತ್ಯಾಜ್ಯ ವಸ್ತುಗಳಲ್ಲಿ ನೀರು ನಿಲ್ಲುವುದರಿಂದ ಸೊಳ್ಳೆಗಳ ಸಂತಾನೋತ್ಪತ್ತಿ ಹೆಚ್ಚಾಗಿ ಸಾಂಕ್ರಾಮಿಕ ರೋಗಗಳಾದ ಡೆಂಗ್ಯೂ ಚಿಕುನ್ ಗುನ್ಯಾ ಮುಂತಾದ ರೋಗ ಹರಡುವ ಭೀತಿ ಇದ್ದು ತಕ್ಷಣ ಇವುಗಳನ್ನು ವಿಲೇವಾರಿ ಮಾಡಬೇಕು, ಇಲ್ಲದಿದ್ದರೆ ನಿಮ್ಮ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವದು ಎಂದು ಎಚ್ಚರಿಸಿದರು.

Read More

ಸಿಂದಗಿ: ಗ್ರಾಮೀಣ ಪ್ರದೇಶಗಳಿಗೆ ರಸ್ತೆ ಸಾರಿಗೆ ಬಸ್ಸಿನ ಸೌಲಭ್ಯಗಳು ದೊರೆಯುವಂತಾಗಲಿ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಸೋಮವಾರ ಸಾಯಂಕಾಲ ನಗರದ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಹಾಗೂ ಗ್ರಾಮಸ್ಥರ ಬೇಡಿಕೆಯ ಮೇರೆಗೆ ಸಿಂದಗಿಯಿಂದ ಚಾಂದಕವಟೆ-ಬಂಥನಾಳ-ತಾಂಬಾ ಮಾರ್ಗವಾಗಿ ವಿಜಯಪುರ ಸಂಚಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಹಲವು ವರ್ಷಗಳಿಂದ ಈ ಭಾಗಕ್ಕೆ ಸಾರ್ವಜನಿಕರ ಬೇಡಿಕೆ ಇತ್ತು. ಇಲ್ಲಿನ ವಿದ್ಯಾರ್ಥಿಗಳ, ರೈತರ, ಗ್ರಾಮಸ್ಥರು ನಗರಕ್ಕೆ ತೆರಳಲು ಪರದಾಡುತ್ತಿದ್ದರು, ಇನ್ನೂ ಮುಂದೆ ಇದು ಜನರಿಗೆ ಅನುಕೂಲವಾಗಲಿದೆ ಎಂದರು.ಇದೆ ಸಂದರ್ಭದಲ್ಲಿ ಘಟಕ ವ್ಯವಸ್ಥಾಪಕ ರೇವಣಸಿದ್ದ ಖೈನೂರ, ಭೀಮು ವಾಲೀಕಾರ ಸೇರಿದಂತೆ ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಗಳು, ಪಕ್ಷದ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Read More

ಮುದ್ದೇಬಿಹಾಳ: ಪಟ್ಟಣದ ಪುರಸಭೆ ಕಾರ್ಯಾಲಯದಲ್ಲಿ ತಾಲೂಕ ಸಾರ್ವಜನಿಕ ಆಸ್ಪತ್ರೆಯ ಎನ್.ಸಿ. ಡಿ ಘಟಕದಿಂದ ಪೌರಕಾರ್ಮಿಕರಿಗೆ ಉಚಿತವಾಗಿ ಆರೋಗ್ಯ ತಪಾಸಣೆಯನ್ನು ಹಮ್ಮಿಕೊಳ್ಳಲಾಗಿತ್ತು.ರಕ್ತದೊತ್ತಡ, ಮಧುಮೇಹ ಪರೀಕ್ಷೆ ಹಾಗೂ ಕ್ಯಾನ್ಸರ್ ಸ್ಕ್ರೀನಿಂಗ್ (ಅ ಸಾಂಕ್ರಾಮಿಕ ರೋಗಗಳ) ತಪಾಸನೆಯನ್ನು ನಡೆಸಲಾಯಿತು.ಈ ವೇಳೆ ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ ಮಾತನಾಡಿ, ಪಟ್ಟಣದ ನೈರ್ಮಲ್ಯದ ಸ್ವಚ್ಛತೆಯಲ್ಲಿ ತೊಡಗಿಕೊಳ್ಳುವ ಪೌರಕಾರ್ಮಿಕರು ತಮ್ಮ ಆರೋಗ್ಯದ ಮೇಲೆ ಹೆಚ್ಚಿನ ನಿಗಾವಹಿಸಬೇಕು ಮತ್ತು ಪುರಸಭೆಯಿಂದ ನೀಡಲಾದ ಆರೋಗ್ಯ ಸುರಕ್ಷಾ ಕವಚಗಳನ್ನು ನಿತ್ಯ ಧರಿಸಿ ತಮ್ಮ ಕಾರ್ಯದಲ್ಲಿ ತೊಡಗಿಕೊಳ್ಳಬೇಕು ಎಂದರು.ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಎಸ್.ಗೌಡರ ಮಾತನಾಡಿ, ಪ್ರತಿನಿತ್ಯ ರಸ್ತೆ, ಚರಂಡಿ ಗಳಲ್ಲಿ ಕೆಲಸ ಮಾಡುವ ಪೌರಕಾರ್ಮಿಕರಿಗೆ ಅತಿ ಬೇಗ ರೋಗಗಳು ಕಾಣಿಸಿ ಕೊಳ್ಳುವ ಭೀತಿ ಇರುತ್ತದೆ. ತಂಬಾಕು, ಗುಟ್ಕಾ, ಬೀಡಿ, ಸಿಗರೇಟ್‌ಗಳ ಸೇವನೆಯಿಂದ ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆ, ಶ್ವಾಸಕೋಶದ ಕಾಯಿಲೆಗಳಿಗೆ ತಂಬಾಕು ಸೇವನೆಯೇ ಪ್ರಮುಖ ಕಾರಣ. ಪೌರಕಾರ್ಮಿಕರು ಇಂತಹ ವಸ್ತುಗಳಿಂದ ದೂರ ಇರಬೇಕು. ಆರೋಗ್ಯದ ಕಡೆಗೆ ಹೆಚ್ಚಿನ ಆಸಕ್ತಿ ತೋರಬೇಕು. ಯಾವುದೇ ಕಾರಣಕ್ಕೂ…

Read More

ಮುದ್ದೇಬಿಹಾಳ: ತಾಲೂಕು ಆಡಳಿತ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಭ್ರಹ್ಮಶ್ರೀ ಆದಿ ನಾರಾಯರಾಯಣ ಗುರೂಜಿಯವರ ಜಯಂತಿ ಕಾರ್ಯಕ್ರಮದಲ್ಲಿ ಗುರೂಜಿಯವರ ಗಾಜು ಒಡೆದಿರುವ ಫೋಟೊ ಇರಿಸಿ ಪೂಜೆ ಮಾಡಿ ಅಪಮಾನ ಮಾಡಲಾಗಿದೆ. ಕೂಡಲೇ ಸಂಬಂಧಿಸಿದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆರ್ಯ ಈಡಿಗ ಸಮುದಾಯದವರು ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.ಈ ಕುರಿತು ಸಮುದಾಯ ಮುಖಂಡ ಟಿ ಭಾಸ್ಕರ್ ಮಾಧ್ಯಮದರೊಂದಿಗೆ ಮಾತನಾಡಿ, ತಾಲೂಕು ಆಡಳಿತದ ವತಿಯಿಂದ ಮಂಗಳವಾರ ಡಿ.ದೇವರಾಜ ಅರಸು ಹಾಗೂ ಭ್ರಹ್ಮಶ್ರೀ ಆದಿ ನಾರಾಯರಾಯಣ ಗುರೂಜಿಯವರ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರದಲ್ಲಿ ಗುರೂಜಿಯವರ ಒಡೆದಿರುವ ಫೋಟೋ ಇರಿಸಲಾಗಿತ್ತು. ಬ್ಯಾನರ್ ನಲ್ಲೂ ಸಹ ಗುರೂಜಿಯ ಫೋಟೋ ಆಗಲಿ ಅಥವಾ ಹೆಸರು ಆಗಲಿ ಇರಲಿಲ್ಲ. ಅಲ್ಲದೇ ಗುರೂಜಿಯವರ ಚರಿತ್ರೆಯ ಉಪನ್ಯಾಸಕರನ್ನೂ ಸಹ ನೇಮಿಸಿರಲಿಲ್ಲ. ಉದ್ದೇಶ ಪೂರ್ವಕವಾಗಿ ನಮ್ಮ ಸಮುದಾಯಕ್ಕೆ ಅಪಮಾನ ಮಾಡಲಾಗಿದೆ. ಸಂಬಂಧಿಸಿದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಕಚೇರಿಯ ಆವರಣದಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದರು.ಮನವಿ ಪತ್ರಕ್ಕೆ ಸಮುದಾಯದ ತಾಲೂಕು…

Read More

ತಾಳಿಕೋಟಿ: ತಾಲೂಕಿನ ಹಗರಗುಂಡ ಗ್ರಾಮದಲ್ಲಿ ಕೆಲವು ದುಷ್ಕರ್ಮಿಗಳು ಗ್ರಾಮದಲ್ಲಿರುವ ವೀರ ಸಂಗೊಳ್ಳಿ ರಾಯಣ್ಣನ ಭಾವಚಿತ್ರಕ್ಕೆ ಅಪಮಾನ ಎಸಗಿರುವ ಘಟನೆ ನಡೆದಿದೆ.ಘಟನೆ ವಿವರ: ತಾಲೂಕಿನ ಹಗರಗುಂಡ ಗ್ರಾಮದಲ್ಲಿ ಆಗಸ್ಟ್ 19ರ ಮಧ್ಯರಾತ್ರಿಯಲ್ಲಿ ಗ್ರಾಮದ ಹನುಮಂತ ದೇವರ ದೇವಸ್ಥಾನದ ಹತ್ತಿರ ಇರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಕಟ್ಟೆಯ ಮೇಲೆ ಭಾವಚಿತ್ರ ಇರುವ ಬ್ಯಾನರ್ಗೆ ಚಪ್ಪಲಿ ಹಾರ ಹಾಕಿ ಅದೇ ಬ್ಯಾನರ್ ಕೆಳಗೆ ಕಪ್ಪು ಬಣ್ಣದ ಗುರುತಿನಿಂದ ಟಿಪ್ಪು ಸುಲ್ತಾನ್ ಅಂತ ಬರೆದುಕೊಂಡಿದ್ದಾರೆ. ಈ ಘಟನೆಯ ಸುದ್ದಿ ಮುಂಜಾನೆ ಗ್ರಾಮದಲ್ಲಿ ಹರಡಿ ಕೆಲವು ಸಮಯದವರೆಗೆ ಉದ್ವಿಗ್ನ ವಾತಾವರಣ ಉಂಟಾಗಿತ್ತು. ಸ್ಥಳಕ್ಕೆ ಡಿವಾಯ್ಎಸ್ ಪಿ ನಂದಗಾಂವಿ ಅವರು ಭೇಟಿ ನೀಡಿ ಗ್ರಾಮಸ್ಥರಿಗೆ ತಿಳಿಹೇಳಿ ಪರಿಸ್ಥಿತಿ ಶಾಂತಗೊಳಿಸಿದರು. ಪ್ರಕರಣ ದಾಖಲು: ಘಟನೆಗೆ ಸಂಬಂಧಿಸಿದಂತೆ ತಾಳಿಕೋಟಿ ಪೊಲೀಸ್ ಠಾಣೆಯಲ್ಲಿ ಹಗರಗುಂಡ ಗ್ರಾಮದ ಸೋಮಪ್ಪ ತಂದೆ ಸಿದ್ದಪ್ಪ ಗಾಡಿ ಇವರು ಪಿರ್ಯಾದಿ ನೀಡಿದ್ದು ಕಲಂ ಗುನ್ನೆ ನಂಬರ149/2024 ಕಲಂ.298 ಭಾರತೀಯ ನ್ಯಾಯ ಸಂಹಿತೆ 2023ರ ಪ್ರಕಾರ ಪ್ರಕಾರ ದಾಖಲಿಸಿದ್ದು ಪೊಲೀಸರು ಕಿಡಿಗೇಡಿಗಳನ್ನು…

Read More

ಕೊಲ್ಹಾರ: ತಾಲೂಕಿನ ನಾಗರದಿನ್ನಿ ಗ್ರಾಮದ ಹೊರವಲಯದ ಜಮೀನಿನಲ್ಲಿ ಮಂಗಳವಾರ ಮತ್ತೆ ಎರಡು ಚಿರತೆ ಮರಿಗಳು ಪ್ರತ್ಯಕ್ಷ ವಾಗಿರುವುದು ಸಾಬಿತಾಗಿದೆ.ಪ್ರೇಮಾ ಸಂಜು ನಾವಿ ರೈತಮಹಿಳೆಯ ಹೇಳಿಕೆಯ ಮೇರೆಗೆ ಪ್ರಾದೇಶಿಕ ವಲಯ ಅರಣ್ಯಾಧಿಕಾರಿ ಬಸವನಗೌಡ ಬಿರಾದಾರ ಹಾಗೂ ಬಸವರಾಜ ಕೊಣ್ಣೂರ ಸೇರಿದಂತೆ ಅವರ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿ ಚಿರತೆ ಮರಿಗಳ ಹೆಜ್ಜೆ ಗುರುತು ಪರಿಶೀಲನೆ ಮಾಡಿದ ಬಳಿಕ ಚಿರತೆ ಇರುವುದು ಖಚಿತ ಪಡಿಸಿಕೊಂಡ ಹಿನ್ನೆಲೆ ಚಿರತೆಯ ಹುಡುಕಾಟಕ್ಕೆ ನಾವು ಎಂಟು ಸಿಬ್ಬಂದಿಯನ್ನು ನೇಮಿಸಿದ್ದೇವೆ. ಭಾನುವಾರ ಸಂಜೆಯಿಂದಲೇ ನಮ್ಮ ಅರಣ್ಯ ಇಲಾಖೆ ಸಿಬ್ಬಂದಿಗಳು ಹಾಗೂ ನಾವು ಹುಡುಕಾಟ ನಡಿಸಿದ್ದೇವೆ. ಆದರೆ ಇದುವರೆಗೆ ಎಲ್ಲಿಯೂ ಕೂಡಾ ಚಿರತೆ ಪ್ರಾಣಹಾನಿ ಮಾಡಿರುವುದು ನಮಗೆ ಕಂಡು ಬಂದಿಲ್ಲ. ಚಿರತೆಮದ್ಯಾಹ್ನದ ವೇಳೆ ಹೆಚ್ಚು ತಿರುಗಾಡುವುದು ಕಡಿಮೆ‌ ಸಾಯಂಕಾಲ ಹಾಗೂ ಮುಂಜಾನೆಯ ಸಂದರ್ಭದಲ್ಲಿ ಹೆಚ್ಚು ತಿರುಗಾಡುತ್ತದೆ. ಅದಕ್ಕಾಗಿ ನಾವು ಇಂದಿನಿಂದ ಸಾಯಂಕಾಲ ಹಾಗೂ ಮುಂಜಾನೆ ಸಂದರ್ಭದಲ್ಲಿ ಡ್ರೋನ್ ಕ್ಯಾಮರಾ ಬಿಟ್ಟು ಚಿರತೆಯ ಹುಡುಕಾಟ ನಡೆಸುವುದಾಗಿ ತಿಳಿಸಿದ್ದಾರೆ. ” ನಾಗರದಿನ್ನಿ ಗ್ರಾಮದ…

Read More