Author: editor.udayarashmi@gmail.com

ಲೇಖನ- ವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ನಮ್ಮ ಕರ್ನಾಟಕದ ಗಡಿ ಭಾಗಗಳಾದ ನೆರೆಯ ಮಹಾರಾಷ್ಟ್ರ, ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಭಾಷೆಗಳನ್ನು ಕಲಿಯಬೇಕು, ಅಲ್ಲಿಯ ಸಾಹಿತ್ಯವನ್ನು ಓದಬೇಕು ಚಲನಚಿತ್ರಗಳನ್ನು ನೋಡಬೇಕು, ಸಾಂಸ್ಕೃತಿಕ ವೈವಿಧ್ಯವನ್ನು ಅರಿಯಬೇಕು ಎಂಬುದು ನನ್ನ ಹಲವಾರು ವರ್ಷಗಳ ಕನಸು ಆದರೆ ಇಂದಿಗೂ ಕೂಡ ಅದು ನನಸಾಗಿಲ್ಲ. ಮರಾಠಿ ಭಾಷೆಯ ಚಲನ ಚಿತ್ರಗಳು, ಕಥೆಗಳು, ಪುಸ್ತಕಗಳು ಅಲ್ಲಿಯ ಸಂತರ ಕೀರ್ತನೆಗಳು, ಅವರ ಬದುಕಿನ ಕಥೆಗಳು ನಮಗೆ ಅತ್ಯಂತ ಅಪ್ಯಾಯಮಾನವಾದದ್ದು. ಬಹುಷ್ಯ ಒಂದೊಮ್ಮೆ ಕರ್ನಾಟಕದ ಭಾಗವೇ ಆಗಿದ್ದ ಅಲ್ಲಿ ನಮ್ಮದೇ ಜನರ ಮೂಲ ಬೇರುಗಳು ಇರುವುದು ಇದಕ್ಕೆ ಕಾರಣವಿರಬಹುದು ಅಥವಾ ಮರಾಠಿ ಭಾಷೆಯ ಜನರು ಇಂದಿಗೂ ಕೂಡ ತಮ್ಮ ಭಾಷೆ ಹಾಗೂ ಸಂಸ್ಕೃತಿಯ ಕುರಿತಾದ ಅಭಿಮಾನ ನಮ್ಮಲ್ಲಿ ಆ ಭಾವನೆಯನ್ನು ಮೂಡಿಸಬಹುದು. ಇನ್ನು ಕೆಲವು ತಮಿಳು ಚಲನಚಿತ್ರಗಳು ಅಲ್ಲಿಯ ಲೇಖಕರ ಅನುವಾದಿತ ಕೃತಿಗಳು ಕಾದಂಬರಿಗಳು ನಮ್ಮಲ್ಲಿ ಆ ಭಾಷೆಯ ಕುರಿತು ಕಲಿಯಬೇಕು ಎಂಬ ಆಶಯವನ್ನು ಹುಟ್ಟಿಸಿರಬಹುದು.ಈ ಮಾತನ್ನು ಇಲ್ಲಿ…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಅಖಂಡ ಬಸವನ ಬಾಗೇವಾಡಿ ಮತಕ್ಷೇತ್ರದ ವ್ಯಾಪ್ತಿಯ ರೈತರಿಗೆ ಅನುಕೂಲವಾಗುವ ಉದ್ದೇಶದಿಂದ ಈ ಭಾಗದಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪನೆ ಮಾಡುವ ಬಹುದಿನಗಳ ಕನಸು ಇದೀಗ ನನಸಾಗುವ ಹಂತಕ್ಕೆ ಬಂದಿದೆ ಎಂದು ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಹೇಳಿದರು.ಪಟ್ಟಣದ ದ್ಯಾಮವ್ವ ದೇವಿ ದೇವಸ್ಥಾನದ ಕಾಂಪ್ಲೆಕ್ಸ್‌ನಲ್ಲಿ ನಿಡಗುಂದಿ ತಾಲೂಕಿನ ಅಂಗಡಗೇರಿ ಗ್ರಾಮದ ಹತ್ತಿರ ನಿರ್ಮಾಣವಾಗುತ್ತಿರುವ “ಕೊಲ್ಹಾರ ಕೇನ್ಸ್ ಲಿಮಿಟೆಡ್, ಅಂಗಡಗೇರಿ” ಸಂಸ್ಥೆಯ ಸಕ್ಕರೆ ಅಭಿವೃದ್ದಿ ಕಚೇರಿ ಉದ್ಘಾಟಿಸಿ, ಶೇರು ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.ಈ ಭಾಗದ ರೈತರು ಬೆಳೆದ ಕಬ್ಬನ್ನು ದೂರದ ಕಾರ್ಖಾನೆಗಳಿಗೆ ಸಾಗಿಸಲು ಬಹಳ ಕಷ್ಟಪಡುವ ಸ್ಥಿತಿ ಇತ್ತು. ಇದನ್ನು ಮನಗಂಡು ಬಸವನ ಬಾಗೇವಾಡಿ, ಮುದ್ದೆಬಿಹಾಳ, ನಿಡಗುಂದಿ, ಕೊಲ್ಹಾರ ಹಾಗೂ ಬಬಲೇಶ್ವರ ತಾಲೂಕಿನ ರೈತರ ಅನುಕೂಲಕ್ಕಾಗಿ ಮಧ್ಯ ಭಾಗದಲ್ಲೇ ಸಕ್ಕರೆ ಕಾರ್ಖಾನೆ ಸ್ಥಾಪನೆ ಮಾಡುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು.ಒಂದು ಶೇರುಗೆ ₹25,000 ನಿಗದಿಪಡಿಸಲಾಗಿದ್ದು, ರೈತರು, ಉದ್ಯಮಿಗಳು ಹಾಗೂ ವ್ಯಾಪಾರಸ್ಥರು ಶೇರುಗಳನ್ನು ಪಡೆದು ಕಾರ್ಖಾನೆಯ ಅಭಿವೃದ್ಧಿಗೆ…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಶೋಷಿತ ವರ್ಗಗಳ ಆಶಾದೀಪವಾಗಿದ್ದ ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಹಾಗೂ ಭಾರತದ ಮಾಜಿ ಉಪ ಪ್ರಧಾನಿ ಬಾಬು ಜಗಜೀವನ್ ರಾಂ ಅವರ ಕೊಡುಗೆ ಅಪಾರ ಮತ್ತು ಅನುಪಮ ಎಂದು ತಹಶೀಲ್ದಾರ ಸಂತೋಷ ಮ್ಯಾಗೇರಿ ಹೇಳಿದರು.ತಾಲೂಕು ಆಡಳಿತದ ವತಿಯಿಂದ ಹಮ್ಮಿಕೊಂಡಿದ್ದ ಡಾ. ಬಾಬು ಜಗಜೀವನ್ ರಾಂ ಅವರ 119ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಾಬು ಜಗಜೀವನ್ ರಾಂ ಅವರು ಕೇಂದ್ರ ಸರ್ಕಾರದಲ್ಲಿ ನಾಲ್ಕು ದಶಕಗಳ ಕಾಲ ಮಂತ್ರಿಯಾಗಿ ಸೇವೆ ಸಲ್ಲಿಸಿ ವಿಶಿಷ್ಟ ದಾಖಲೆ ನಿರ್ಮಿಸಿದ ಮಹಾನ್ ರಾಜಕೀಯ ಮುತ್ಸದ್ದಿ ಎಂದು ಹೇಳಿದರು.ಸಾಮಾಜಿಕ ನ್ಯಾಯ, ಸಮಾನತೆ ಹಾಗೂ ತಳ ಸಮುದಾಯಗಳ ಉದ್ಧಾರಕ್ಕಾಗಿ ತಮ್ಮ ಜೀವನವನ್ನೇ ಸಮರ್ಪಿಸಿದ ಅವರು, ಕಾರ್ಮಿಕ, ಆಹಾರ, ರೈಲ್ವೆ, ರಕ್ಷಣಾ, ಕೃಷಿ, ಸಾರಿಗೆ ಮತ್ತು ಸಂಪರ್ಕ ಸೇರಿದಂತೆ ವಿವಿಧ ಪ್ರಮುಖ ಖಾತೆಗಳಲ್ಲಿ ಸಚಿವರಾಗಿ ಹಾಗೂ ಉಪ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದಾರೆ. ಹಸಿರು ಕ್ರಾಂತಿಯ ಹರಿಕಾರರಾಗಿ ದೇಶವನ್ನು ಆಧುನಿಕತೆಯ ದಾರಿಗೆ ತಂದ ಮಹನೀಯರೆಂದರು.ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ…

Read More

ಉದಯ ರಶ್ಮಿ ದಿನಪತ್ರಿಕೆ ಅಥಣಿ: “ಬಾಬು ಜಗಜೀವನ ರಾಮ್ ಅವರು ಕೇವಲ ಒಬ್ಬ ನಾಯಕರಲ್ಲ, ಅವರು ದೇಶದ ಹಸಿರು ಕ್ರಾಂತಿಯ ಹರಿಕಾರರು. ಅವರ ತತ್ತ್ವಗಳನ್ನು ಅಳವಡಿಸಿಕೊಂಡು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿದಾಗ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ,” ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.ಸ್ಥಳೀಯ ತಾಲೂಕು ಆಡಳಿತ, ತಾಲೂಕು ಪಂಚಾಯತ್, ಪುರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ ರಾಮ್ ಅವರ 119ನೇ ಜಯಂತಿ ಕಾರ್ಯಕ್ರಮವನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದ ಅವರು ಗಾಂಧೀಜಿ, ಅಂಬೇಡ್ಕರ್ ಹಾಗೂ ಜಗಜೀವನ ರಾಮ್ ಅವರು ಅಸ್ಪೃಶ್ಯತೆ ನಿವಾರಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಮಹನೀಯರು. ಕೇಂದ್ರದ ವಿವಿಧ ಇಲಾಖೆಗಳಲ್ಲಿ ಅವರು ತೋರಿದ ದಕ್ಷತೆ ಇಂದಿನ ಆಡಳಿತಗಾರರಿಗೆ ಮಾದರಿ. ಕೃಷಿ ಕ್ಷೇತ್ರದಲ್ಲಿ ಅವರು ತಂದ ಕ್ರಾಂತಿಕಾರಿ ಬದಲಾವಣೆಗಳಿಂದಾಗಿ ದೇಶ ಆಹಾರ ಭದ್ರತೆ ಪಡೆಯಲು ಸಾಧ್ಯವಾಯಿತು” ಎಂದರುಈ ವೇಳೆ ಉಪನ್ಯಾಸವನ್ನು ಟಿ ಎಸ್ ವಂಟಗೂಡಿ…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ಡಾ.ಬಾಬು ಜಗಜೀವನ ರಾಂ ಅವರು ಒಬ್ಬ ಹಸಿರು ಕ್ರಾಂತಿಯ ಹರಿಕಾರ ಎಂದು ತಹಶೀಲದಾರ ಸಂಜಯ ಇಂಗಳೆ ಹೇಳಿದರು.ತಹಶೀಲದಾರ ಕಛೇರಿಯ ಆವರಣದಲ್ಲಿ ರವಿವಾರ ಆಯೋಜಿಸಲಾಗಿದ್ದ ಡಾ|| ಬಾಬು ಜಗಜೀವನ ರಾಂ ಅವರ 119ನೇ ಜಯಂತಿಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ದಲಿತ ಕುಟುಂಬದಲ್ಲಿ ಜನಿಸಿದ ಡಾ|| ಬಾಬು ಜಗಜೀವನ ರಾಂ ಅವರು, ಅಂದಿನ ಕಾಲದಲ್ಲಿ ದಲಿತ ವರ್ಗಗಳ ಮೇಲೆ ಆಗುತ್ತಿರುವ ಅನ್ಯಾಯ, ಶೋಷಣೆಗಳನ್ನು ಎದುರಿಸಿ ಮೆಟ್ಟಿ ನಿಂತ ಅವರು, ಒಬ್ಬ ವಿದ್ಯಾವಂತನಾಗಿ ಹೊರಹೊಮ್ಮಿ, ದೇಶದ ವಿವಿಧ ಮಂತ್ರಿ ಸ್ಥಾನಗಳನ್ನು ಅಲಂಕರಿಸಿ ದೇಶದ ಉನ್ನತ ಹುದ್ದೆಯಾದ ಉಪಪ್ರಧಾನಿಯಾಗುವಲ್ಲಿ ಯಶಸ್ವಿಯಾದರು. ಸತತ ದೀರ್ಘ 30 ವರ್ಷಗಳ ವರೆಗೆ ಸಂಸದರಾಗಿ ದಾಖಲೆಯನ್ನು ಮಾಡಿದರು. 1974ರಲ್ಲಿ ದೇಶ ಭೀಕರ ಬರಗಾಲ ಪರಿಸ್ಥಿತಿ ಎದುರಿಸುತ್ತಿರುವಾಗ ಕೇಂದ್ರದ ಕೃಷಿ ಸಚಿವರಾಗಿದ್ದ ಅವರು, ಹೆಚ್ಚು ಉತ್ಪಾದನೆ ಕೊಡುವ ಬೀಜಗಳ ಬಳಕೆಯನ್ನು ಉತ್ತೇಜಿಸಿ, ರೈತರಿಗೆ ರಸಗೊಬ್ಬರ, ನೀರಾವರಿ ಸೌಲಭ್ಯಗಳನ್ನು ಒದಗಿಸಲು ಸರಕಾರದ ಯೋಜನೆಗಳನ್ನು ಬಲಪಡಿಸಿ, ಭಾರತದಲ್ಲಿ ಹಸಿರು ಕ್ರಾಂತಿ ಮತ್ತು ಭಾರತೀಯ ಕೃಷಿಯನ್ನು…

Read More

ಇಂದು (ಏಪ್ರೀಲ್ ೭, ಮಂಗಳವಾರ) “ವಿಶ್ವ ಆರೋಗ್ಯ ದಿನ” ದ ಪ್ರಯುಕ್ತ ಈ ವಿಶೇಷ ಲೇಖನ ಲೇಖನ- ಮಲ್ಲಪ್ಪ. ಸಿ. ಖೊದ್ನಾಪೂರ (ತಿಕೋಟಾ)ವಿಜಯಪುರ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಜಾಯ್ಸ್ ಮೇಯರ್ ಅವರು, “ I beಟieve ಣhe besಣ giಜಿಣ ಥಿou ಛಿಚಿಟಿ give ಥಿouಡಿ ಜಿಚಿmiಟಥಿ ಚಿಟಿಜ ಣhe ತಿoಡಿಟಜ, is ಚಿ ಊeಚಿಟಣhಥಿ ಙou” ಎಂದು ಹೇಳಿದ್ದಾರೆ. ಇಂದಿನ ಒತ್ತಡಮಯ ಮತ್ತು ಸಂಘರ್ಷಯುಕ್ತ ಬದುಕಿನಲ್ಲಿ ಮಾನವ ತನ್ನ ಆರೋಗ್ಯವನ್ನು ಕಳೆದುಕೊಳ್ಳುತ್ತಿದ್ದಾನೆ. ಸಂಪತ್ತು ಗಳಿಕೆ, ಆದಾಯ ಸಂಪಾದನೆ ಮತ್ತು ವ್ಯವಹಾರಿಕ ಜೀವನದಲ್ಲಿ ಆರೋಗ್ಯದ ಕಡೆಗೆ ಕಿಂಚಿತ್ತೂ ಲಕ್ಷ್ಯ ಕೊಡುತ್ತಿಲ್ಲ. ಅದಕ್ಕಾಗಿ ಆರೋಗ್ಯವೇ ಭಾಗ್ಯ ಎಂಬುದನ್ನು ಮನಗಂಡು ಆರೋಗ್ಯವು ದೈಹಿಕ, ಮಾನಸಿಕ, ಬೌದ್ಧಿಕ ಮತ್ತು ಸಾಮಾಜಿಕ ಯೋಗಕ್ಷೇಮವನ್ನು ಚೆನ್ನಾಗಿ ಇಟ್ಟುಕೊಳ್ಳಲೇ ಬೇಕಾಗಿರುವುದು ಅಗತ್ಯವಾಗಿದೆ. ಉತ್ತಮ ಆರೋಗ್ಯಕ್ಕಾಗಿ ಸಮತೋಲಿತ ಆಹಾರ, ನಿಯಮಿತ ವ್ಯಾಯಾಮ, ಧ್ಯಾನ, ಯೋಗ, ನಿಯಮಿತ ನಿದ್ರೆ ಮತ್ತು ಒತ್ತಡ-ಮುಕ್ತ ಜೀವನ ಶೈಲಿ ಹೊಂದುವುದು ಅತಿ ಅವಶ್ಯಕ. ಆರೋಗ್ಯವಂತ ವ್ಯಕ್ತಿ ಪ್ರತಿ…

Read More

ಉದಯರಶ್ಮಿ ದಿನಪತ್ರಿಕೆ ತಿಕೋಟಾ: 22 ವರ್ಷಗಳ ಕಾಲ ಭಾರತಾಂಬೆಯ ಸೇವೆಗೈದು ತಾಲ್ಲೂಕಿನ ಹೊನವಾಡ ಗ್ರಾಮಕ್ಕೆ ಆಗಮಿಸಿದ ನಿವೃತ್ತ ಯೋಧ ಸುರೇಶ ಬಸಪ್ಪ ಬ್ಯಾಡಗಿ ಅವರಿಗೆ ಗೆಳೆಯರ ಬಳಗದಿಂದ ಶನಿವಾರ ಸನ್ಮಾನಿಸಲಾಯಿತು.ಸನ್ಮಾನ ಸ್ವೀಕರಿಸಿ ಮಾತನಾಡಿದ ವೀರಯೋಧ ಸುರೇಶ ಬ್ಯಾಡಗಿ ಜೀವನದ ಅಮೂಲ್ಯವಾದ ಸಮಯವನ್ನು ದೇಶಕ್ಕಾಗಿ ಮುಡುಪಾಗಿಟ್ಟು ದೇಶ ಸೇವೆ ಮಾಡಿದ್ದು ಸ್ಮರಣೀಯವಾದುದು. ಜೀವನದಲ್ಲಿ ಶಿಸ್ತು, ಪ್ರಾಮಾಣಿಕತೆ ಮತ್ತು ದೇಶಭಕ್ತಿಯಿಂದ ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬೇಕು. ನಮ್ಮ ದೇಶದ ಸೇವೆ ಮಾಡುವುದು ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ವಿಷಯವಾಗಿದೆ. ನಾನು ಸೇನೆಯಲ್ಲಿ ಕಳೆದ ದಿನಗಳಲ್ಲಿ ನನಗೆ ಶಿಸ್ತು, ಧೈರ್ಯ ಮತ್ತು ದೇಶಪ್ರೇಮವನ್ನು ಕಲಿಸಿವೆ ಎಂದರು.ದೇಶದ ವಿವಿಧ ರಾಜ್ಯಗಳಾದ ರಾಜಸ್ಥಾನ, ಮೇಘಾಲಯ, ಆಸ್ಸಾಂ, ಪಂಜಾಬ, ಪಠಾಣಕೋಟ, ಜಾರ್ಖಂಡ್, ಜಮ್ಮು ಕಾಶ್ಮೀರಗಳಲ್ಲಿ ಸೇವೆ ಸಲ್ಲಿಸಿದ್ದು, ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲೂ ಕರ್ತವ್ಯ ನಿರ್ವಹಿಸಿದ್ದೇನೆ ಎಂದು ತಮ್ಮ ಅನುಭವ ಹಂಚಿಕೊಂಡರು.ಈ ಸಂದರ್ಭದಲ್ಲಿ ಹಣಮಂತ ಮೊಹಿತೆ, ಧರೆಪ್ಪ ಪಾಂಡೇಗಾವಿ, ಮಹಾಂತೇಶ ಮಂಗೊಂಡ, ನರಸಿಂಗ ಭೋಸಲೆ, ದೀಪಕ ಅಥಣಿ, ಶಿವಪ್ಪ ಗಸ್ತಿ, ಚಂದ್ರಕಾಂತ ಗುಗ್ಗರಿ,…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಡಾ.ಬಾಬು ಜೀವನರಾಮ ಅವರಂತಹ ಮೇರು ವ್ಯಕ್ತಿತ್ವದ ವ್ಯಕ್ತಿಯ ಅವಶ್ಯಕತೆ ಇಂದಿನ ದಿನಗಳಲ್ಲಿ ತುಂಬಾ ಅಗತ್ಯವಾಗಿದೆ ಇದೆ ಎಂದು ತಹಶೀಲ್ದಾರ ನಿಂಗಪ್ಪ ಬಿರಾದಾರ ಹೇಳಿದರು.ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ಭಾನುವಾರ ಕಂದಾಯ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ ಹಸಿರು ಕ್ರಾಂತಿಯ ಹರಿಕಾರ, ಡಾ.ಬಾಬು ಜಗಜೀವನರಾಮ್ ಜಯಂತಿ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ನಿವೃತ್ತ ಪ್ರೌಢಶಾಲಾ ಶಿಕ್ಷಕ ಕೆ.ಎಸ್.ಹಿರೇಕುರುಬರ ಮಾತನಾಡಿ, ಬಾಬೂಜೀ ಈ ದೇಶಕ್ಕೆ ನೀಡಿದ ಕೊಡುಗೆಯ ಕುರಿತು ವಿವರಿಸಿದರು.ಶಿರಸ್ತೇದಾರ ಸುರೇಶ ಮ್ಯಾಗೇರಿ, ಶರಣ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಎನ್.ಬಸವರೆಡ್ಡಿ, ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿ ಸರ್ವೇಶ ಆಲಮೇಲಕರ, ಹಣಮಂತ ಲಾತೂರ, ಅನೀಲ ಮೋಕಾಶಿ ಇಸ್ಮಾಯಿಲ್ ಮಂದೇವಾಲ್, ಶ್ರೀನಿವಾಸ ಬಂಡಿವಡ್ಡರ, ನಫೀಸಾ ದಪೇದಾರ, ಪೂಜಾ ನಿಕ್ಕಂ, ಸಿದ್ದು ಮೇಲಿನಮನಿ, ಸದಾಶಿವ ಗುಡಿಮನಿ, ಪ್ರಕಾಶ ಗುಡಿಮನಿ, ಜಿ.ಪಿ.ಬಿರಾದಾರ, ರಾಘು ಗುಡಿಮನಿ, ರಾಹುಲ ದೊಡಮನಿ, ನಾಗೇಶ ವಗ್ಗರ, ಕಿರಣ ವಗ್ಗರ, ಪರಶುರಾಮ ಸನಾದಿ, ರಾಕೇಶ್ ದೊಡಮನಿ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಸತ್ಕಾರ್ಯವೇ ಸೌಭಾಗ್ಯ ಎನ್ನುವಂತೆ ಬಡಜನರ ಹಾಗೂ ನಿರ್ಗತಿಕರ ಸೇವೆ ಮಾಡುವುದು ನಿಜವಾದ ಸೇವೆ ಎನಿಸಿಕೊಳ್ಳುತ್ತದೆ ಎಂದು ವಿಜಯಪುರ ಬಾಲಾಜಿ ಆಸ್ಪತ್ರೆಯ ಸಂಸ್ಥಾಪಕ ಡಾ.ಶ್ರೀಪಾದ ಕುಲಕರ್ಣಿ ಹೇಳಿದರು.ಮುಳಸಾವಳಗಿ ಗ್ರಾಮದ ಶ್ರೀಶೈಲ ಮಲ್ಲಿಕಾರ್ಜುನನ ಐದೇಶಿ ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಿದ ಉಚಿತ ನೇತ್ರ ಮತ್ತು ಮೂಳೆ, ಕೀಲು ತಪಾಸಣೆ ಶಿಬಿರದ ನೇತೃತ್ವ ವಹಿಸಿ ಮಾತನಾಡಿದರು.ಶಿಬಿರದ ಮೂಲಕ ಸುಮಾರು ೧೧೦ ಜನರ ತಪಾಸಣೆ ಹಾಗೂ ೧೧೫ ಜನರ ನೇತ್ರ ತಪಾಸಣೆಯನ್ನು ಮಾಡಲಾಯಿತು. ನೇತ್ರ ಶಸ್ತ್ರಚಿಕಿತ್ಸೆಗೆ ಅರ್ಹರಾದ ೧೫ ಜನರನ್ನು ಅನುಗ್ರಹ ಆಸ್ಪತ್ರೆಯಿಂದ ಉಚಿತವಾಗಿ ಶಸ್ತ್ರಚಿಕಿತ್ಸೆ ಮಾಡಲು ನಿರ್ಧರಿಸಲಾಯಿತು. ನಂತರ ಅನುಗ್ರಹ ಹಾಗೂ ಬಾಲಾಜಿ ಆಸ್ಪತ್ರೆಯ ಸಿಬ್ಬಂದಿಗಳನ್ನು ಜಾತ್ರಾ ಸಮಿತಿಯಿಂದ ಸನ್ಮಾನಿಸಲಾಯಿತು.ಅನುಗ್ರಹ ಆಸ್ಪತ್ರೆಯ ಸಂಗನಗೌಡ ಪಾಟೀಲ, ಪಿಕೆಪಿಎಸ್ ಅಧ್ಯಕ್ಷ ಸಂಗನಗೌಡ ಬಿರಾದಾರ, ಹಣಮಂತ ಹಿರೂರ, ಜಿ.ಪಿ.ಬಿರಾದಾರ ಮಾತನಾಡಿದರು.ಸಾಹೇಬಗೌಡ ಬಂಥನಾಳ, ವಿರುಪಾಕ್ಷಿ ರೋಡಗಿ, ಶ್ರೀಶೈಲ ಹದರಿ, ಶ್ರೀಶೈಲ ಮಠಪತಿ, ದಾನಯ್ಯ ಮಠಪತಿ, ಮಲ್ಲನಗೌಡ ಬಿರಾದಾರ, ಕಂಠೆಪ್ಪಗೌಡ ಬಿರಾದಾರ, ಸಂಗು ಬಂಥನಾಳ, ಕಿರಣ ಗಬ್ಬೂರ, ನಿತಿನ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಭಾರತದ ಮಾಜಿ ಉಪಪ್ರಧಾನಿ ಹಾಗೂ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ ರಾಂ119ನೇ ಜಯಂತಿ ಹಿನ್ನೆಲೆಯಲ್ಲಿ, ಏಪ್ರೀಲ್ 05 ರಂದು ನಗರದ ಸೆಟ್‌ಲೈಟ್ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಡಾ.ಬಾಬು ಜಗಜೀವನ ರಾಂ ಪ್ರತಿಮೆಗೆ ಗಣ್ಯರು ಮಾಲಾರ್ಪಣೆ‌ ಮಾಡಿ ಗೌರವ ಸಲ್ಲಿಸಿದರು.ಶಾಸಕರಾದ ವಿಠ್ಠಲ ಕಟಕಧೋಂಡ, ಪಾಲಿಕೆ ಮೇಯರ್ ಮಡಿವಾಳಪ್ಪ ಕರಡಿ, ಜಿಲ್ಲಾಧಿಕಾರಿಗಳಾದ ಡಾ.ಆನಂದ ಕೆ, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಿಷಿ ಆನಂದ ಅವರು ಮಾಲಾರ್ಪಣೆ‌ ಮಾಡಿ, ಗೌರವ‌ ನಮನ ಸಲ್ಲಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ, ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬದ್ರುದ್ದೀನ ಸೌದಾಗರ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಶಿವಾನಂದ ಮಾಸ್ತಿಹೊಳಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಹೇಶ ಪೋತದಾರ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿ, ಸಿಬ್ಬಂದಿ,ವಿವಿಧ ಸಂಘಟನೆಗಳ‌ ಮುಖಂಡರು,ಸಾರ್ವಜನಿಕರು ಮತ್ತು ಇತರರು ಇದ್ದರು.

Read More