Author: editor.udayarashmi@gmail.com

ಕೆಂಭಾವಿ: ಯಾದಗಿರಿ, ಕಲಬುರ್ಗಿ, ರಾಯಚೂರು ಜಿಲ್ಲೆಗಳ ಜೀವನಾಡಿಯಾದಸುರಪುರ ಮತಕ್ಷೇತ್ರದ ಹುಣಸಗಿ ತಾಲ್ಲೂಕಿನ ವ್ಯಾಪ್ತಿಯಲ್ಲಿರುವ ನಾರಾಯಣಪುರ ಜಲಾಶಯ ಬಸವಸಾಗರ ಭರ್ತಿಯಾಗಿದ್ದು, ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅವರು ಮಂಗಳವಾರ ಬಾಗಿನ ಅರ್ಪಿಸಿದರು.ಇದೇ ವೇಳೆ ಸುದ್ದಿಗಾರೊಂದಿಗೆ ಮಾತನಾಡಿದ ಸಚಿವ ಶರಣಬಸಪ್ಪಗೌಡ, ಪ್ರತಿ ವರ್ಷ ಜೂನ್ ತಿಂಗಳಲ್ಲಿ ಜಲಾಶಯ ಭರ್ತಿಯಾಗುತ್ತಿತ್ತು, ಆದರೆ ಈ ಬಾರಿ ಅಗಸ್ಟ್ ಮೊದಲ ವಾರದಲ್ಲಿ ಭರ್ತಿಯಾಗಿದ್ದು, ಕೃಷ್ಣಾ ಭಾಗ್ಯ ಜಲ ನಿಗಮದ ಅಚ್ಚುಕಟ್ಟು ಪ್ರದೇಶದ ಜಿಲ್ಲೆಯ ರೈತರಿಗೆ ವರದಾನವಾಗಿದೆ ಎಂದವರು, ಶೀಘ್ರದಲ್ಲೇ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ಅವರೊಂದಿಗೆ ಚರ್ಚಿಸಿ ಆಲಮಟ್ಟಿ ಮಾದರಿಯಲ್ಲಿ ಉದ್ಯಾನವನ ನಿರ್ಮಿಸಲಾಗುವುದು, ನಮ್ಮ ಸರ್ಕಾರ ರೈತರ ಹಿತಕಾಪಾಡಲು ಬದ್ದವಾಗಿದೆ. ನಾವು ನೀಡಿದ ಎಲ್ಲಾ ಭರವಸೆಗಳನ್ನು ಆದಷ್ಟು ಬೇಗ ಈಡೇರಿಸಲು ಕ್ರಮವಹಿಸುವುದಾಗಿ ತಿಳಿಸಿದರು.ಸುರಪುರ ಶಾಸಕ ರಾಜಾ ವೇಣುಗೋಪಾಲ ನಾಯಕ, ಮುದ್ದೇಬಿಹಾಳ ಶಾಸಕ ಅಪ್ಪಾಜಿ ನಾಡಗೌಡ, ಜಿಲ್ಲಾಧಿಕಾರಿ ಡಾ ಸುಶೀಲ್ ಬಿ, ಶಂಕ್ರಣ್ಣ ವಣಿಕ್ಯಾಳ, ಡ್ಯಾಂ ಮುಖ್ಯ ಎಂಜಿನಿಯರ್, ಸೇರಿದಂತೆ…

Read More

ಕೆಂಭಾವಿ: ಅಕ್ಕರೆಯ ಅನುಬಂಧ, ಭ್ರಾತೃತ್ವದ ಭಾವ ಬಂಧ, ಸಹೋದರ, ಸಹೋದರಿಯರ ಬಾಂಧವ್ಯದ ಸಂಬಂಧ, ಭಾವೈಕ್ಯತೆಯ ಮಧುರ ಮಂಕರದ, ಮನೆ ಮನೆಗಳಲ್ಲಿ ಸಡಗರ ಸಂಭ್ರಮದಿ ಆಚರಿಸುವ ಸಾಂಪ್ರದಾಯಿಕ ಹಬ್ಬವೇ ‘ರಕ್ಷಾಬಂಧನ’ ಎಂದು, ಹಿರಿಯ ವರ್ತಕರು ಹಾಗೂ ವಲಯ ಕಸಾಪದ ಗೌರವಾಧ್ಯಕ್ಷ ಸುಮಿತ್ರಪ್ಪ ಅಂಗಡಿ ಹೇಳಿದರು.ಪಟ್ಟಣದ ಶ್ರೀ ಗುರು ಕಾಂತೇಶ್ವರ ಜನ ಕಲ್ಯಾಣ ಸೇವಾ ಪ್ರತಿಷ್ಠಾನದ ವತಿಯಿಂದ ಸೋಮವಾರ ಸಂಜೆ ಜರುಗಿದ ಮಾಸಿಕ ಹುಣ್ಣಿಮೆಯ ಶಿವಾನುಭವ ಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಆಧುನಿಕತೆಯ ಭರಾಟೆಯಲ್ಲಿ ಅಣ್ಣ, ತಮ್ಮ, ಅಕ್ಕ, ತಂಗಿಯ ಸಂಬಂಧಗಳ ಕಣ್ಮರೆಯಾಗುತ್ತಿವೆ ಎಂದವರು, ಶ್ರೀಮಂತ ಸಂಸ್ಕೃತಿಯ ವಾರಸುದಾರರಾದ ನಾವು ಸಂಸ್ಕಾರ, ಸಂಸ್ಕೃತಿ, ಸನ್ನಡತೆ, ಸೌಹಾರ್ದತೆಯನ್ನು ಆರಾಧಿಸುವ ಮನೋಭಾವ ನಮ್ಮದಾಗಲಿ, ಭಾರತದ ಬಹು ದೊಡ್ಡ ಪರಂಪರೆ, ವೈಶಿಷ್ಟ್ಯತೆ, ಹಾಗೂ ವೈಭವವನ್ನು ಸದಾ ಎತ್ತಿ ಹಿಡಿಯುವ ಮೂಲಕ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಂಡು ಮಾದರಿಯಾಗಿ ಬಾಳೋಣ ಎಂದರು.ಸನ್ಮಾನ ಸ್ವೀಕರಿಸಿ ಮಾತನಾಡಿದ ವಲಯ ಕಸಾಪ ಅಧ್ಯಕ್ಷ ಮಡಿವಾಳಪ್ಪಗೌಡ ಪಾಟೀಲ್ ಹೆಗ್ಗನದೊಡ್ಡಿ, ಬಾಲ್ಯದಿಂದಲೇ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುವಲ್ಲಿ ಪಾಲಕ…

Read More

ವಿಜಯಪುರ: ನಗರದ ದಿವಟಗೇರಿಯಲ್ಲಿರುವ ಶ್ರೀ ರಾಘವೇಂದ್ರ ಮಹಾಸ್ವಾಮಿಗಳ ವೃಂದಾವನ ಸನ್ನಿಧಾನದಲ್ಲೂ ಶ್ರೀ ರಾಘವೇಂದ್ರ ಮಹಾಸ್ವಾಮಿಗಳ ೩೫೩ ನೇ ಆರಾಧನಾ ಮಹೋತ್ಸವ ವೈಭವದಿಂದ ಆರಂಭಗೊಂಡಿತು.ಪೂರ್ವಾರಾಧನೆ ಹಿನ್ನೆಲೆಯಲ್ಲಿ ಬೆಳಿಗ್ಗೆ ಸುಪ್ರಭಾತ, ನಂತರ ಗೋಪೂಜೆ, ಧ್ವಜಾರೋಹಣ, ಶ್ರೀ ಗುರುರಾಜರ ಭಾವಚಿತ್ರದ ಮೆರವಣಿಗೆ, ಶ್ರೀ ಹರಿ ವಾಯುಸ್ತುತಿ ಪುನಶ್ಚರಣ, ಶ್ರೀ ಗುರುಸಾರ್ವಭೌಮರಿಗೆ ಕ್ಷೀರಾಭಿಷೇಕ, ನೈವೇದ್ಯ, ಮಹಾಪಂಚಾಮೃತ ಅಭಿಷೇಕ ನಡೆಯಲಿದ್ದು, ಮಧ್ಯಾಹ್ನ ಮಹಾಪೂಜೆ, ನಂತರ ನೈವ್ಯೆದ್ಯ, ಅಲಂಕಾರ, ಹಸ್ತೋದಕ, ಮಹಾಮಂಗಳಾರತಿ, ತೀರ್ಥಪ್ರಸಾದ ವಿತರಣೆ ನಡೆಯಿತು.ಸಾಯಂಕಾಲ ಪಲ್ಲಕ್ಕಿ ಸೇವೆ, ರಥೋತ್ಸವ, ಡೋಲೋತ್ಸವ, ಅಷ್ಟಾವಧಾನ ಸೇವೆ, ಮಹಾಮಂಗಳಾರತಿ, ಮಂತ್ರಪುಷ್ಪ, ಸ್ವಸ್ತಿವಾಚನ, ಶ್ರೇಯ: ಪ್ರಾರ್ಥನೆ ಶ್ರದ್ಧಾಭಕ್ತಿಪೂರ್ವಕವಾಗಿ ನಡೆದವು.

Read More

ಢವಳಗಿ:ಇಂದಿನ ಮಕ್ಕಳೇ,ದೇಶದ ಮುಂದಿನ ನಾಯಕರು ಆಗುತ್ತಾರೆ. ಮಕ್ಕಳಲ್ಲಿರುವ ಪ್ರತಿಭೆ ಮತ್ತು ಕಲೆಯನ್ನು ಹೋರತೆಗೆಯುದೇ ಪ್ರತಿಭಾ ಕಾರಂಜಿ ಎಂದು ಢವಳಗಿ ವಲಯದ ಬಿ ಆರ್ ಪಿ ಶಂಕರಗೌಡ ಗೌಡರ ಹೇಳಿದರು.ಸಮೀಪದ ಹಳ್ಳೂರ ಕ್ರಾಸ ಬಳಿ ಇರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರದಂದು ಢವಳಗಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯನ್ನು ಗ್ರಾಮದ ಶ್ರೀ ಮುತ್ತಪ್ಪ ಪೂಜಾರಿ ಅವರು ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿದರು.ವಿದ್ಯಾದೇವಿ ಶ್ರೀ ಸರಸ್ವತಿ ಮಾತೆಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿದರು. ಢವಳಗಿ ಎಮ್ ಪಿ ಎಸ್ ಶಾಲೆಯ ಮುಖ್ಯಗುರುಗಳಾದ ಬಿ ಎಸ್ ಶೇಕಣ್ಣವರು ಮಾತನಾಡಿ, ಮಕ್ಕಳು ಪಠ್ಯ ಮತ್ತು ಪಠ್ಯೇತರ ಎರಡು ಚಟುವಟೆಕೆಗಳಲ್ಲಿ ಭಾಗವಹಿಸಬೇಕು. ಮಕ್ಕಳು ಬರಿ ಪುಸ್ತಕದಲ್ಲಿಯೇ ಮುಳಗಬಾರದು ಕ್ರೀಡೆ,ಸಾಂಸ್ಕೃತಿಕ ಸೇರಿದಂತೆ ಇನ್ನಿತರ ಚಟುವಟಿಕೆಯಲ್ಲಿ ಭಾಗವಹಿಸಬೇಕು. ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಹೊರತೆಗೆಯುವದೇ ಪ್ರಾಥಮಿಕ ಶಾಲೆಯಾಗಿದೆ. ಮಕ್ಕಳಿಗೆ ಕಲಿಯಲು ಸದೃಡ ಮನಸ್ಸು ಬೇಕು ಮತ್ತು ಆರೋಗ್ಯವಾಗಿರಲು ಸದೃಡ ದೇಹ ಇರಬೇಕು. ಇವೆರಡು ಇರಬೇಕೆಂದರೆ ಮಕ್ಕಳು ಇಂತಹ ಸಂಸ್ಕೃತಿಕ…

Read More

ಮೋರಟಗಿ:ನಿರಂತರ ಪರಿಶ್ರಮದಿಂದ ಮಾತ್ರ ವಿದ್ಯಾರ್ಥಿಯ ಜೀವನ ಯಶಸ್ವಿಯಾಗಲು ಸಾಧ್ಯವಾಗುತ್ತದೆ ಎಂದು ಕುಂಟೋಜಿ ಹಿರೇಮಠದ ಷ.ಬ್ರ. ಅಭಿನವ ರುದ್ರಮುನಿ ಶಿವಾಚಾರ್ಯರು ಹೇಳಿದರು.ಮಂಗಳವಾರ ಗ್ರಾಮದ ಕಲ್ಪವೃಕ್ಷ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ. ವಿದ್ಯಾರ್ಥಿಗಳಿಗೆ ಸ್ವಾಗತ, ಪಠ್ಯ ಹಾಗೂ ಪಠ್ಯಪೂರಕ ಚಟುವಟಿಕೆ ಸಮಾರಂಭದಲ್ಲಿ ದಿವ್ಯ ಸಾನಿಧ್ಯ ವಹಿಸಿ ಅವರು ಮಾತನಾಡಿದರು.ಮಕ್ಕಳು ಯೋಗ, ಧ್ಯಾನ ಅಳವಡಿಸಿಕೊಂಡರೆ ಮನಸ್ಸು ಹತೋಟಿಯಲ್ಲಿರುತ್ತದೆ ಸಮಯಕ್ಕೆ ವಿದ್ಯಾರ್ಥಿಗಳು ಬಹಳಷ್ಟು ಪ್ರಾಮುಖ್ಯತೆ ನೀಡಬೇಕು. ಒಮ್ಮೆ ಕಳೆದ ವಿದ್ಯಾರ್ಥಿ ಜೀವನ ಕೋಟಿ ಕೊಟ್ಟರು ಸಿಗಲಾರದು ವಿದ್ಯಾರ್ಥಿ ಜೀವನ ಬಂಗಾರವಿದ್ದಂತೆ ಬಂಗಾರದಂತ ಜೀವನ ಬೀದಿಗೆ ಬರಬಾರದು ನಿಮ್ಮ ಪಾಲಕರು ನಿಮ್ಮನ್ನೇ ನಂಬಿ ಕೂಲಿ ಮಾಡಿ ಉನ್ನತ ಶಿಕ್ಷಣ ನೀಡುತ್ತಿದ್ದಾರೆ ಅವರುಗಳ ಕನಸು ನನಸು ಮಾಡುವ ಜವಾಬ್ದಾರಿ ತಮ್ಮದಾಗಿದೆ ಗುರುಗಳು ಹಾಕಿದ ಮಾರ್ಗದಲ್ಲಿ ನಡೆದು ತಾಯಿ ತಂದಿ ಕಂಡಿರುವ ಕನಸು ನನಸಾಗಿಸಲು ಮುಂದಾಗಬೇಕು ಎಂದರು.ಸಂಸ್ಥೆಯ ಅಧ್ಯಕ್ಷ ಶಿವಶರಣಗೌಡ ಬಿರಾದಾರ ಮಾತನಾಡಿ, ವಿದ್ಯಾರ್ಥಿಗಳು ಇತರರೊಂದಿಗೆ ಹೋಲಿಕೆ ಮಾಡಿಕೊಳ್ಳದೆ ಸ್ವಂತ ಸಾಮರ್ಥ್ಯದಿಂದ ಶೈಕ್ಷಣಿಕವಾಗಿ ಮುಂದುವರೆಯಬೇಕು ನಮ್ಮ ಸಂಸ್ಥೆಯಲ್ಲಿ ಪ್ರತಿ ವರ್ಷ…

Read More

ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅಭಿಮತ ವಿಜಯಪುರ: ಸರ್ವಜನಾಂಗದ ಒಳಿತಿಗಾಗಿ ಶ್ರಮಿಸಿದವರು ಬ್ರಹ್ಮಶ್ರೀ ನಾರಾಯಣಗುರು ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿಜಯಪುರ ಇವರ ಸಹಯೋಗದಲ್ಲಿ ಮಂಗಳವಾರ ನಗರದ ಶ್ರೀ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಂಡ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಸಮಾಜದಲ್ಲಿರುವ ಜಾತಿ ತಾರತಮ್ಯ, ಮೌಢ್ಯತೆ, ಸಾಮಾಜಿಕ ಪಿಡುಗುಗಳ ವಿರುದ್ಧ ಹೋರಾಟ ಮಾಡಿ ಸಾಮಾಜಿಕ ಸಮಾನತೆಗೆ ಅನೇಕ ಸುಧಾರಣೆಗಳನ್ನು ತಂದರು. ಸರ್ವರೂ ಸಮಾನ ಎಂದು ಪ್ರತಿಪಾದಿಸಿದ ಅವರ ಸಮಾಜ ಮುಖಿ ಸುಧಾರಣೆಗಳನ್ನು ತಂದರು ಎಂದು ಹೇಳಿದರು.ಸಮಾಜದ ವ್ಯವಸ್ಥೆ ಬದಲಾವಣೆ ಮಾಡಲು ತಮ್ಮ ಜೀವನವನ್ನು ಮುಡಿಪಾಗಿಟ್ಟು ಶ್ರಮಿಸಿದ ಮಹನೀಯರ ಆದರ್ಶಗಳನ್ನು ಜೀವನ ಚರಿತ್ರೆ ಯನ್ನು ನಾವು ಅರಿಯಬೇಕಾಗಿದೆ ಎಂದು ಹೇಳಿದರು.ಉಪನ್ಯಾಸಕ ಕಾಶೀನಾಥ ಕೊಣೆನವರ, ಶ್ರೀ ನಾರಾಯಣ ಗುರುಗಳು ಕೇರಳದಲ್ಲಿ ಜನಿಸಿದರು. ಅವರು ತತ್ವಜ್ಞಾನಿ, ಆಧ್ಯಾತ್ಮಿಕ ನಾಯಕ ಮತ್ತು ಸಮಾಜ ಸುಧಾರಕರಾಗಿದ್ದರು. ಸಾಮಾಜಿಕ ಸಮಾನತೆಯನ್ನು ತರಲು, ಸುಧಾರಣಾ ಪ್ರಯತ್ನವನ್ನು…

Read More

ಇಂಡಿ: ರಾಜ್ಯದಲ್ಲಿ ಭೂಒಡೆತನ, ಮೀಸಲಾತಿ ಸೌಲಭ್ಯ ಕಲ್ಪಿಸಿ ಶೋಷಿತ ಸಮುದಾಯಗಳಿಗೆ ಅಸ್ಮಿತೆಯನ್ನು ತಂದುಕೊಟ್ಟ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಸಾಮಾಜಿಕ ಕ್ರಾಂತಿಯ ಹರಿಕಾರ ಎಂದು ಕಂದಾಯ ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಪಟ್ಟಣದ ಗುರುಭವನದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯತ್ ‌ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 109ನೇ ಜನ್ಮದಿನಾಚಣೆ ಸಮಾರಂಭದಲ್ಲಿ ಅವರು ಮಾತನಾಡಿದರು.‘ಉಳುವವನೆ ಭೂಮಿಯ ಒಡೆಯ ಕಾಯ್ದೆ ರಾಜ್ಯದ ಹಲವು ಜನರಿಗೆ ಭೂಒಡೆತನದ ಹಕ್ಕು ನೀಡಿತು. ನಿರುದ್ಯೋಗಿಗಳಿಗೆ ಸಹಾಯಧನದಂತಹ ಕಾರ್ಯಕ್ರಮಗಳನ್ನು ರೂಪಿಸಿ ಸಾವಿರಾರು ಯುವಜನರಿಗೆ ನೆರವಾದರು. ಜೀತ ಪದ್ಧತಿ, ಮಲಹೊರುವ ಪದ್ಧತಿ ನಿರ್ಮೂಲನೆಯ ಮೂಲಕ ಸಾಮಾಜಿಕ ಪರಿವರ್ತನೆಗೆ ಶ್ರಮಿಸಿದರು. ಸಮಾಜಮುಖಿ ಕಾರ್ಯಗಳತ್ತ ಅವರ ಮನಸು ಸದಾ ತುಡಿಯುತ್ತಿತ್ತು’ ಎಂದು ಹೇಳಿದರು.ಇನ್ನೂ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆಯ ಅಧ್ಯಕ್ಷ ಕಾಂತು ಇಂಡಿ ಉಪನ್ಯಾಸ ನೀಡಿದ ಅವರು, ಅಧಿಕಾರ, ಸಂಪತ್ತು ಮತ್ತು ಅವಕಾಶದ ಸಮಾನ ಹಂಚಿಕೆಯ ಹೊರತಾಗಿ ನಿಜವಾದ…

Read More

ವಿಜಯಪುರ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ೨೦೨೪-೨೫ನೇ ಸಾಲಿನ ಕೇಂದ್ರ ಸರ್ಕಾರದ ನ್ಯಾಷನಲ್ ಇ-ಸ್ಕಾಲರ್‌ಶಿಪ್ ಯೋಜನೆಯಡಿ ವಿದ್ಯಾರ್ಥಿವೇತನಕ್ಕಾಗಿ ಅರ್ಹ ವಿಕಲಚೇತನ ವಿದ್ಯಾರ್ಥಿಗಳಿಂದ ಆನ್‌ಲೈನ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ದಿನಾಂಕ : ೩೧-೦೮-೨೦೨೪ ಹಾಗೂ ಮೆಟ್ರಿಕ್ ನಂತರದ ಹಾಗೂ ಉನ್ನತ ತರಗತಿ ವಿದ್ಯಾರ್ಥಿವೇತನಕ್ಕೆ ದಿನಾಂಕ : ೩೧-೧೦-೨೦೨೪ ಕೊನೆಯ ದಿನವಾಗಿದ್ದು, ಅರ್ಹ ವಿಕಲಚೇತನ ವಿದ್ಯಾರ್ಥಿಗಳು ಅರ್ಜಿಯನ್ನುhttps.scholarships.gov.in ವೆಬ್‌ಸೈಟ್ ನಲ್ಲಿ ಭರ್ತಿ ಮಾಡಿ ಸಲ್ಲಿಸಬೇಕು.ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ತಾಲೂಕಾ ಪಂಚಾಯತ್ ಕಾರ್ಯಾಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದ್ದೋದ್ದೇಶ ಪುನರ್ವಸತಿ ಕಾರ್ಯಕರ್ತರಾದ ವಿಜಯಪುರ ರವಿ ರಾಠೋಡ ಮೊ: ೯೦೦೩೫೫೫೩೩೭, ಇಂಡಿ ಪರಶುರಾಮ ಭೋಸಲೆ ಮೊ: ೯೯೭೨೪೪೧೪೬೪, ಸಿಂದಗಿ ಮುತ್ತುರಾಜ ಸಾತಿಹಾಳ ಮೊ: ೯೯೮೦೦೧೯೬೩೫, ಬಸವನಬಾಗೇವಾಡಿ ಎಸ್.ಡಿ.ಬಿರಾದಾರ ಮೊ: ೮೭೨೨೧೩೫೬೬೦ ಹಾಗೂ ಮುದ್ದೇಬಿಹಾಳ ಎಸ್.ಕೆ.ಘಾಟಿ ಮೊ: ೯೭೪೦೬೮೨೯೭೯ ಹಾಗೂ ಕಚೇರಿ ದೂರವಾಣಿ : ೦೮೩೫೨-೭೯೬೦೬೦ಗೆ ಸಂಪರ್ಕಿಸುವಂತೆ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಶ್ರೀಮತಿ ಸವಿತಾ ಕಾಳೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಇಂಡಿ: ವಿದ್ಯಾರ್ಥಿಗಳಿಗೆ ಶಿಕ್ಷಣದ ಜತೆಗೆ ವಿದ್ಯಾರ್ಥಿ ವೇತನ,ಬಡ ಮಕ್ಕಳಿಗಾಗಿ ವಿದ್ಯಾರ್ಥಿನಿಲಯಗಳ ಪರಿಕಲ್ಪನೆಯನ್ನು ಪರಿಚಯಿಸಿದ ಅರಸು ಅವರು ಸಮಾಜಕ್ಕೆ ನೀಡಿದ ಕೊಡುಗೆಗಳು ಅಪಾರ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ಅವರು ತಾಲೂಕಿನ ಹಿರೇರೂಗಿ ಗ್ರಾಮದ ಕೆಬಿಎಸ್, ಕೆಜಿಎಸ್, ಯುಬಿಎಸ್ ಶಾಲೆಯ ವತಿಯಿಂದ ಹಮ್ಮಿಕೊಂಡ ಡಿ.ದೇವರಾಜ ಅರಸು ಮತ್ತು ಬ್ರಹ್ಮರ್ಷಿ ನಾರಾಯಣ ಗುರು ಅವರ ಜಯಂತಿ ಆಚರಣೆಗೆ ಚಾಲನೆ ನೀಡಿ ಮಾತನಾಡಿದರು.ಅರಸು ಅವರು ಜೀತದಾಳು ಹಾಗೂ ಮಲಹೊರುವ ಪದ್ಧತಿ ನಿಷೇಧಿಸುವ ಮೂಲಕ ಪ್ರಜಾಪ್ರಭುತ್ವಕ್ಕೆ ಅರ್ಥ ಕಲ್ಪಿಸಿ, ಎಲ್ಲಾ ಬಡವರಿಗೂ ವಸತಿ ಸೌಲಭ್ಯ, ಶಿಕ್ಷಣದಲ್ಲಿ ಸಮಾನತೆ ಕಲ್ಪಿಸುವ ಮೂಲಕ ಸಮಾಜಮುಖಿಯಾಗಿ ಕೆಲಸ ಮಾಡಿದರು. ಮೌನಕ್ರಾಂತಿ ಮೂಲಕ ಸಾಮಾಜಿಕ ಬದಲಾವಣೆಗೆ ನಾಂದಿ ಹಾಡಿದರು ಎಂದು ಹೇಳಿದರು.ಶಿಕ್ಷಕ ಎಸ್ ಆರ್ ಚಾಳೇಕರ ಮಾತನಾಡಿ, ಸಮಾಜಸುಧಾರಣೆಗೆ ಅಧ್ಯಾತ್ಮಸ್ಪರ್ಶದ ಅಪೂರ್ವ ಕಾಂತಿಯನ್ನು ಒದಗಿಸಿದವರು ನಾರಾಯಣಗುರು.ಸಮಾಜಸುಧಾರಣೆ ಎನ್ನುವುದು ನಿರಂತರ ಪ್ರಕ್ರಿಯೆ. ನಮ್ಮ ಸಮಾಜದ ಶುದ್ಧೀಕರಣ ಕಾರ್ಯದಲ್ಲಿ ಬ್ರಹ್ಮರ್ಷಿ ನಾರಾಯಣ ಗುರುಗಳು ನಮಗೆಲ್ಲ ಬೆಳಕಾಗಿದ್ದಾರೆ ಎಂದು ಹೇಳಿದರು.ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕಿ ವ್ಹಿ ವೈ ಪತ್ತಾರ…

Read More

ಇಂಡಿ: ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಶ್ರೀ ಸಿದ್ಧಲಿಂಗ ಮಹಾರಾಜರ ತೊಟ್ಟಿಲೋತ್ಸವವು ಶ್ರಾವಣ ಮಾಸದ ೩ನೇ ಸೋಮವಾರದಂದು ವಿಜ್ರಂಭಣೆಯಿಂದ ಜರುಗಿತು.ಈ ನಿಮಿತ್ಯ ಬೆಳಿಗ್ಗೆ ಶ್ರೀ ಸಿದ್ಧಲಿಂಗ ಮಹಾರಾಜರ ಕಮರಿಮಠದಲ್ಲಿ ಶ್ರೀ ಶಂಕರಲಿಂಗ ಮಹಾಶಿವಯೋಗಿಗಳ ಕತೃ ಗದ್ದುಗೆಗೆ, ಶ್ರೀ ಸಂಗನಬಸವ ಮಹಾಶಿವಯೋಗಿಗಳ ಶಿಲಾ ಮೂರ್ತಿಗೆ, ಸಿದ್ಧಲಿಂಗ ಮಹಾರಾಜರ ಶಿಲಾಮೂರ್ತಿಗೆ, ವಿಶೇಷ ಪೂಜೆ ನಡೆಯಿತು.ಬಳಿಕ ಸಂಜೆ ೫ ಗಂಟೆಗೆ ಸ್ಥಳಿಯ ಸದ್ಭಕ್ತರಾದ ಮಲ್ಲಿಕಾರ್ಜುನ ಮುಜಗೊಂಡ ಮನೆತನದವರಿಂದ ಸಂಪ್ರದಾಯದಂತೆ ತೊಟ್ಟಿಲು ಸೇವೆ ನಡೆಯಿತು. ಈ ನಿಮಿತ್ಯ ಮುಜಗೊಂಡ ಅವರ ಮನೆಯಿಂದ ಮಠದವರೆಗೆ ಶ್ರೀ ಸಿದ್ಧಲಿಂಗ ಮಹಾರಾಜರ ಬೆಳ್ಳಿಯ ಮೂರ್ತಿಯ ಮೆರವಣಿಗೆಯು ಕಕ್ಕಳಮೇಲಿಯ ಭಜನಾ ಕಲಾತಂಡ, ಸ್ಥಳಿಯ ಭಜನಾ ಕಲಾ ತಂಡಗಳ ವಾದ್ಯ ಮೇಳದೊಂದಿಗೆ ವಿಜ್ರಂಭಣೆಯಿಂದ ನೆರವೇರಿತು. ಬಳಿಕ ಬಂಥನಾಳ ಹಾಗೂ ಲಚ್ಯಾಣ ಮಠದ ಪೀಠಾಧೀಶ ಶ್ರೀ ಡಾ. ವೃಷಭಲಿಂಗೇಶ್ವರ ಮಹಾಶಿವಯೋಗಿಗಳು, ಹಳಿಂಗಳಿಯ ಶ್ರೀ ಶಿವಾನಂದ ಮಹಾಸ್ವಾಮೀಜಿ ಸಾನಿಧ್ಯದಲ್ಲಿ ತೊಟ್ಟಿಲೋತ್ಸವ ಕಾರ್ಯಕ್ರಮ ಮಠದ ಸಂಪ್ರದಾಯದಂತೆ ಅಕ್ಕನ ಬಳಗದವರ ಜೋಗುಳ ಪದದೊಂದಿಗೆ ಸಂಭ್ರಮದಿಂದ ನಡೆಯಿತು. ಈ ಸಂದರ್ಭದಲ್ಲಿ ಸ್ಥಳಿಯ ಹಾಗೂ…

Read More