Author: editor.udayarashmi@gmail.com

ವಿಜಯಪುರ: ಕೌಶಲಾಭಿವೃದ್ಧಿ ಉಧ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ದೀನ್ ದಯಾಳ್ ಅಂತ್ಯೋದಯ ಯೋಜನೆ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ(ಡೆ-ನಲ್ಮ್) ಯೋಜನೆಯಡಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗಳನ್ನು ಸೃಜಿಸಿ ಗೌರವಧನ ಆಧಾರದ ಮೇರೆಗೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಸ್ವ ಸಹಾಯ ಸಂಘಗಳ ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತರು ಮಹಾನಗರ ಪಾಲಿಕೆ ಕಾರ್ಯಾಲಯದ ಅವಧಿಯಲ್ಲಿ ಸಮುದಾಯ ಸಂಘಟನಾಧಿಕಾರಿಗಳನ್ನು ಸಂಪರ್ಕಿಸಿ ನಿಗದಿಪಡಿಸಿದ ಅರ್ಜಿ ನಮೂನೆಯಲ್ಲಿ ಧೃಡೀಕೃತ ದಾಖಲೆಗಳೊಂದಿಗೆ ದಿನಾಂಕ: ೩೧-೦೮-೨೦೨೪ರೊಳಗಾಗಿ ಅರ್ಜಿ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ಮಹಾನಗರ ಪಾಲಿಕೆ ಡೇ-ನಲ್ಮ್ ಯೋಜನೆಯ ಸಮುದಾಯ ಸಂಘಟನಾಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಮಹಾನಗರಪಾಲಿಕೆ ಆಯುಕ್ತರ ಪ್ರಕಟನೆ ತಿಳಿಸಿದೆ.

Read More

ವಿಜಯಪುರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಆಚರಿಸುತ್ತಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ೧೫೫ನೇ ಜಯಂತಿಯ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ‍್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಇತ್ಯಾದಿ ವಿಚಾರಗಳ ಬಗ್ಗೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ / ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ.ವಿವಿಧ ವಿಷಯಗಳ ಕುರಿತು ಪ್ರೌಢಶಾಲೆ, ಪದವಿ ಪೂರ್ವ ಶಿಕ್ಷಣ ಹಾಗೂ ಪದವಿ-ಸ್ನಾತಕೋತ್ತರ ಪದವಿಗಳ ಹಂತದ ವಿದ್ಯಾರ್ಥಿಗಳಿಗೆ ಒಟ್ಟು ೩ ವಿಭಾಗಗಳಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಆಯೋಜಿಸಲು ಉದ್ದೇಶಿಸಲಾಗಿದೆ. ವಿಜೇತರಿಗೆ ರಾಜ್ಯಮಟ್ಟದಲ್ಲಿ ಪ್ರಥಮ ೩೧ ಸಾವಿರ ರೂ. ದ್ವಿತೀಯ ೨೧ ಸಾವಿರ ರೂ. ಮತ್ತು ತೃತೀಯ ೧೧ ಸಾವಿರ ರೂ. ಹಾಗೂ ಜಿಲ್ಲಾಮಟ್ಟದಲ್ಲಿ ಪ್ರಥಮ ೩ ಸಾವಿರ ರೂ. ದ್ವಿತೀಯ ೨ ಸಾವಿರ ರೂ ಮತ್ತು ತೃತೀಯ…

Read More

ವಿಜಯಪುರ: ಜಿಲ್ಲಾಧಿಕಾರಿಗಳಾದ ಟಿ.ಭೂಬಾಲನ್ ಅವರು ಮಂಗಳವಾರ ನಿಡಗುಂದಿಯ ತಹಸೀಲ್ದಾರ ಕಚೇರಿಗೆ ಭೇಟಿ ನೀಡಿ, ನಿರ್ವಹಿಸುವ ಕಡತ ಮತ್ತು ವಹಿ ಪರಿಶೀಲನೆ ನಡೆಸಿದರು.ಮೋಜಣಿ, ಪೈಕಿ, ೩&೯ ಪ್ರಕರಣಗಳು, ನ್ಯಾಯಾಲಯ ಪ್ರಕರಣಗಳ ಕುರಿತು ಪರಿಶೀಲನೆ ನಡೆಸಿ ಸಂಬಂಧಿಸಿದ ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆ ನೀಡಿದರು.ಈ ಸಂದರ್ಭದಲ್ಲಿ ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ,ತಹಶೀಲ್ದಾರ ಎ.ಡಿ.ಅಮರಾವಡಗಿ ಸೇರಿದಂತೆ ಅಧಿಕಾರಿ,ಸಿಬ್ಬಂದಿ ಉಪಸ್ಥಿತರಿದ್ದರು.

Read More

ವಿಜಯಪುರ: ಭಾರತ ಚುನಾವಣಾ ಆಯೋಗವು ೦೧.೦೧.೨೦೨೫ ನ್ನು ಅರ್ಹತಾ ದಿನಾಂಕವಾಗಿ ಭಾವಚಿತ್ರ ಸಹಿತ ಮತದಾರರ ಪಟ್ಟಿಯ ಪರಿಷ್ಕರಣೆಗೆ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಜಿಲ್ಲೆಯ ಅರ್ಹ ಮತದಾರರು ತಮ್ಮ ಹೆಸರನ್ನು ಮತದಾರ ಪಟ್ಟಿಯಲ್ಲಿ ನೊಂದಾಯಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದ್ದಾರೆ.ಜಿಲ್ಲೆಯ ಎಲ್ಲಾ ಮತಗಟ್ಟೆ ಮಟ್ಟದ ಅಧಿಕಾರಿಗಳು ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕಾಗಿ ದಿನಾಂಕ:೨೦-೮-೨೦೨೪(ಮಂಗಳವಾರದಿಂದ) ರಿಂದ ೧೮-೧೦-೨೦೨೪ (ಶುಕ್ರವಾರ) ರವರೆಗೆ ಪ್ರತಿ ಮನೆ-ಮನೆಗೆ (ಊ೨ಊ) ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ದಿನಾಂಕ:೧-೧೦-೨೦೨೪ಕ್ಕೆ ನೋಂದಣಿಯಾಗದ ಅರ್ಹ ನಾಗರಿಕರು. ಮುಂಬರುವ ಅರ್ಹತಾ .(ದಿನಾಂಕ:೧-೧೦-೨೦೨೫) ದಿನಾಂಕದಂತೆ ೧೮ ವರ್ಷ ತುಂಬುವ ಯುವ ಮತದಾರರ ಹೆಸರು ಸೇರ್ಪಡೆ ಕುರಿತು ಅರ್ಜಿಗಳನ್ನು ಸಲ್ಲಿಸಬಹುದಾಗಿದ್ದು, ಈ ಸಮಯದಲ್ಲಿ ಮತದಾರರ ಪಟ್ಟಿಯಲ್ಲಿ ಯಾವುದೇ ರೀತಿಯ ತಿದ್ದುಪಡಿ, ಹೆಸರು ನೋಂದಣಿ, ಮೃತ ಮತ್ತು ಸ್ಥಳಾಂತರಗೊಂಡ ಮತದಾರರ ಹೆಸರುಗಳನ್ನು ತೆಗೆದು ಹಾಕುವ ಕುರಿತು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.ಹಕ್ಕು ಮತ್ತು ಆಕ್ಷೇಪಣೆಗಳ ಅವಧಿಯ ವಿಶೇಷ ಅಭಿಯಾನ ದಿನಾಂಕಗಳನ್ನು ನಿಗದಿಪಡಿಸಲಾಗಿದೆ. ಸಾರ್ವಜನಿಕರು ವಿಶೇಷ ಅಭಿಯಾನದ ಸೌಲಭ್ಯವನ್ನು ಬಳಸಿಕೊಳ್ಳುವಂತೆ ಹಾಗೂ ಅವಶ್ಯವಿರುವ ತಿದ್ದುಪಡಿ, ಸೇರ್ಪಡೆ…

Read More

ಮುದ್ದೇಬಿಹಾಳ: ಭಾರತದ ಸಂಸ್ಕೃತಿಗೂ ಆಚರಿಸುವ ಹಬ್ಬಗಳಿಗೂ ಅವಿನಾಭಾವ ಸಂಬಂಧವಿದೆ ಎಂದು ಪ್ರೌಢ ಶಾಲಾ ಮುಖ್ಯೋಪಾಧ್ಯಾಯ ರಾಮಚಂದ್ರ ಹೆಗಡೆ ಹೇಳಿದರು.ಪಟ್ಟಣದ ಜ್ಞಾನ ಭಾರತಿ ವಿದ್ಯಾ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ದಾರ್ಶನಿಕ ವಚನಕಾರ ನೂಲಿ ಚಂದಯ್ಯನ ಜಯಂತಿ ಮತ್ತು ರಕ್ಷಾ ಬಂಧನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಸಹೋದರತೆಯ ಪ್ರತೀಕವಾಗಿ ನಾವು ರಕ್ಷಾ ಬಂಧನವನ್ನು ಆಚರಿಸುತ್ತೇವೆ. ಅರ್ಥಪೂರ್ಣವಾಗಿ ರಕ್ಷಾ ಬಂಧನವನ್ನು ಆಚರಿಸಿ, ಅದರಂತೆ ಅನುಸರಿಸಿದಲ್ಲಿ ನಮ್ಮ ಸಂವಿಧಾನದ ಆಶಯದಲ್ಲಿ ಒಂದಾದ ಭ್ರಾತೃತ್ವ ಭಾವನೆ ವೃದ್ಧಿಯಾಗಿಸುವಲ್ಲಿ ಸಹಕಾರಿಯಾಗುತ್ತದೆ. ಇದರಿಂದ ದೇಶ ಶಾಂತಿ ಕಾಣಬಹುದಾಗಿದೆ. ಇವತ್ತಿನ ದಿನಗಳಲ್ಲಿ ನಾವು ಶತಶತಮಾನಗಳಿಂದ ನಮ್ಮ ಪೂರ್ವಜರು ಆಚರಿಸಿಕೊಂಡು ಬಂದಿರುವ ಹಬ್ಬಗಳ ಆಚರಣೆಯನ್ನು ಬಿಟ್ಟು ಪಾಶ್ಚಾತ್ಯ ಸಂಸ್ಕೃತಿಯ ಆಚರಣೆಗಳಾದ ಸ್ನೇಹಿತರ ದಿನ, ಪ್ರೇಮಿಗಳ ದಿನ, ನ್ಯೂ ಇಯರ್ ಇತ್ಯಾದಿ ಹಬ್ಬಗಳ ಆಚರಣೆಗೆ ಒಲವು ತೋರುತ್ತಿರುವುದು ವಿಪರ್ಯಾಸದ ಸಂಗತಿಯಾಗಿದೆ. ಅರ್ಥವೇ ಇಲ್ಲದಂತಿರುವ ಹಬ್ಬಗಳ ಆಚರಣೆಗಳಲ್ಲಿ ನಾವು ತೋರಿಸುವ ಆಸಕ್ತಿ ಸಹಜತೆಯಿಂದ ಹೊರಗುಳಿದು ಮನುಷ್ಯನ ಕಾಮನೆಗಳನ್ನು ವಿಕೃತಗೊಳಿಸುತ್ತದೆ. ಇದರಿಂದ ಮನುಷ್ಯನು ಸಮಾಜ ಘಾತಕ ಕೆಲಸಗಳನ್ನು ಮಾಡಲು ಮುಂದಾಗಿ ಮನೋವಿಕಾರಗಳಿಗೆ…

Read More

ದೇವರಹಿಪ್ಪರಗಿ: ಸುಮಾರು ಒಂದು ಗಂಟೆಗಳ ಕಾಲ ಸುರಿದ ಬಿರುಸಾದ ಗುಡುಗು, ಸಿಡಿಲುಭರಿತ ಮಳೆಗೆ ಪಟ್ಟಣದ ವಿವಿಧ ಜಮೀನುಗಳಲ್ಲಿನ ಕಬ್ಬು ಹಾಗೂ ದಾಳಿಂಬೆ ಬೆಳೆಗಳು ಹಾಳಾಗಿದ್ದು ರೈತರಿಗೆ ಹಾನಿಯುಂಟು ಮಾಡಿದೆ.ಪಟ್ಟಣದಲ್ಲಿ ಸೋಮವಾರ ಸಂಜೆ ೭ ಗಂಟೆಗೆ ಆರಂಭವಾದ ಮಳೆಗೆ ಇಂಗಳಗಿ ಕೆರೆಯ ಹತ್ತಿರದ ನಾನಾಗೌಡ ಬಿರಾದಾರ ಎಂಬುವವರಿಗೆ ಸೇರಿದ ೫೭೫/೨ ಸರ್ವೆ ಸಂಖ್ಯೆಯಲ್ಲಿನ ಎಂಟು ಎಕರೆ ಕಬ್ಬು ನೆಲಕ್ಕೋರಗಿ ಸಂಪೂರ್ಣ ಹಾಳಾಗಿದ್ದರೆ, ರಾಮು ದೇಸಾಯಿ ಎಂಬುವವರಿಗೆ ಸೇರಿದ ದಾಳಿಂಬೆಯ ೮೦೦ ಗಿಡಗಳಲ್ಲಿ ೫೦೦ ಗಿಡಗಳು ಹಾಗೂ ಹಣಮಂತ್ರಾಯ ಕೋಟಿನ್ ಎಂಬುವವರ ೮೦ ನಿಂಬೆ ಗಿಡಗಳಲ್ಲಿ ೨೦ಕ್ಕೂ ಹೆಚ್ಚು ನಿಂಬೆ ಗಿಡಗಳು ಬೇರು ಸಹಿತ ನೆಲಕ್ಕೋರಗಿವೆ. ಇದರಿಂದ ಆಳೆತ್ತರದ ಕಬ್ಬು ಹಾಗೂ ದಾಳಿಂಬೆ, ನಿಂಬೆ ಗಿಡಗಳು ಹಣ್ಣುಗಳ ಸಹಿತ ಹಾಳಾಗಿವೆ.ತೋಟಗಾರಿಕೆಯ ಇಲಾಖೆಯ ಡಿಡಿ ರಾಹುಲಕುಮಾರ ಭಾವಿದೊಡ್ಡಿ, ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಎಸ್.ಎಸ್.ಪಾಟೀಲ, ಹೋಬಳಿಮಟ್ಟದ ತೋಟಗಾರಿಕಾ ಅಧಿಕಾರಿ ಅಕ್ಷತಾ ಹೊಂಗಲ ಕೃಷಿ ಇಲಾಖೆಯ ಸಿಂದಗಿ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ಎಚ್.ವೈ.ಸಿಂಗೇಗೋಳ, ಗ್ರಾಮ ಆಡಳಿತಾಧಿಕಾರಿ…

Read More

ಆ.೨೧ರಂದು ಆಲಮಟ್ಟಿ ಜಲಾಶಯಕ್ಕೆ ಮುಖ್ಯಮಂತ್ರಿಗಳಿಂದ ಬಾಗಿನ ಅರ್ಪಣೆ ವಿಜಯಪುರ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆ.೨೧ರಂದು ಆಲಮಟ್ಟಿಯ ಕೃಷ್ಣೆಯ ಜಲಧಿಗೆ ಗಂಗಾ ಪೂಜೆ ಹಾಗೂ ಬಾಗಿನ ಅರ್ಪಿಸುವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕೆಬಿಜೆಎನ್‌ಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ಮೋಹನ್‌ರಾಜ್ ಹಾಗೂ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಮಂಗಳವಾರ ಆಲಮಟ್ಟಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆ ನೀಡಿದರು.ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಲು ಮುಖ್ಯಮಂತ್ರಿಗಳು ಆಗಮಿಸುವ ಹಿನ್ನೆಲೆಯಲ್ಲಿ ಜಂಟಿಯಾಗಿ ಪರಿಶೀಲನೆ ನಡೆಸಿದ ಅವರು, ಹೆಲಿಪ್ಯಾಡ ಸ್ಥಳ ಹಾಗೂ ಅಲ್ಲಿನ ಭದ್ರತೆ, ಬಾಗಿನ ಅರ್ಪಿಸುವ ಸ್ಥಳಕ್ಕೆ ಭೇಟಿ ನೀಡಿ, ಪೂಜಾ ಸ್ಥಳ, ಅಲ್ಲಿ ಹೂವಿನ ಅಲಂಕಾರ, ಶಾಮಿಯಾನ ವ್ಯವಸ್ಥೆ, ಸೂಕ್ತ ಆಸನ ವ್ಯವಸ್ಥೆ ಶಾಮಿಯಾನ ವ್ಯವಸ್ಥೆ ಕುರಿತು ಪರಿಶೀಲನೆ ನಡೆಸಿದ ಅವರು, ಎಲ್ಲ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಡಿವೈಎಸ್ಪಿ ಬಲ್ಲಪ್ಪ ನಂದಗಾವಿ, ವಿಜಯಪುರ ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ಬಿಟಿಡಿಎ…

Read More

ಮುದ್ದೇಬಿಹಾಳ: ಶ್ರೀ ಸರ್ವಜ್ಞೇಂದ್ರ ಸರಸ್ವತಿ ಪ್ರತಿಷ್ಠಾನ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಸೋಂದಾ ಸ್ವರ್ಣವಲ್ಲೀ ಸಂಸ್ಥಾನ ಶಿರಸಿಯ ಯತಿವರೇಣ್ಯರಾದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಮದ್ ಗಂಗಾಧರೇಂದ್ರ ಸರಸ್ವತಿ ಮಹಾಸ್ವಾಮಿಗಳು ಆಯೋಜಿಸಿರುವ ಭಗವದ್ಗೀತಾ ಅಭಿಯಾನ ಕರ್ನಾಟಕ-೨೦೨೪ನ್ನು ಮುದ್ದೇಬಿಹಾಳ ತಾಲೂಕಿನಾದ್ಯಂತ ಸಂಘಟಿಸುವ ಸಲುವಾಗಿ ತಾಲೂಕಾ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು.ಅಧ್ಯಕ್ಷರಾಗಿ ಶ್ರೀಶೈಲ ದೊಡಮನಿ, ಉಪಾಧ್ಯಕ್ಷರುಗಳಾಗಿ ಬಿ.ಎಸ್.ಮೇಟಿ, ಎಸ್.ಎಲ್.ಗುರವ, ಎ.ಆರ್.ಪಾಟೀಲ್, ಅಜೀತ್ ಜೋಶಿ, ಸಂಗಮ್ಮ ದೇವರಳ್ಳಿ, ನಿತ್ಯಾನಂದ ಹಿರೇಮಠ, ಸಂಘಟನಾ ಕಾರ್ಯದರ್ಶಿಗಳಾಗಿ ರವೀಂದ್ರ ಬಿರಾದಾರ, ಪ್ರಧಾನ ಕಾರ್ಯದರ್ಶಿಗಳಾಗಿ ಡಾ.ವೀರೇಶ ಪಾಟೀಲ, ವಿಕ್ರಮ ಓಸ್ವಾಲ, ಭಾರತಿ ಪಾಟೀಲ, ಕಾರ್ಯದರ್ಶಿಯಾಗಿ ಸಂತೋಷ ಬಾದರಬಂಡಿ, ಪ್ರಶಿಕ್ಷಣ ಪ್ರಮುಖರಾಗಿ ಮದನ ಕುಲಕರ್ಣಿ, ಬಿ.ಎಸ್.ಪಾಟೀಲ, ಬಿ.ಎಸ್.ಕುಲಕರ್ಣಿ, ರಂಜಿತಾ ಹೆಗಡೆ, ಮಹಿಳಾ ಮಂಡಲದ ಪ್ರಮುಖರುಗಳಾಗಿ ಪ್ರೀತಿ ದೇಗಿನಾಳ, ಸಹನಾ ಬಡಿಗೇರ, ಪ್ರತಿಭಾ ಅಂಗಡಗೇರಿ, ಶಶಿಕಲಾ ರಾಮವಡಗಿ, ಇಂದು ನಾಯಕ, ಪ್ರಭಾ ಹೆಬ್ಬಾರ, ಅಂಜನಾ ದೇಶಪಾಂಡೆ, ಸ್ವಾಮಿಜಿಗಳ ನಿರ್ವಹಣೆಯ ಪ್ರಮುಖರಾಗಿ ಬಸವರಾಜ ನಂದಿಕೇಶ್ವರಮಠ, ಪ್ರಸರಣ ವಿಭಾಗದ ಪ್ರಮುಖರುಗಳಾಗಿ ಉದಯ ರಾಯಚೂರ, ಮಹಾಂತೇಶ ಸಜ್ಜನ, ದೇವಾಲಯಗಳ ಪ್ರಮುಖರಾಗಿ ಕೃಷ್ಣಾಜಿಭಟ್ಟ ಹುನಗುಂದ ಮಾರ್ಗದರ್ಶಕರುಗಳಾಗಿ…

Read More

ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಅಭಿಮತ ವಿಜಯಪುರ: ನೊಂದವರ ನೋವಿಗೆ ಧ್ವನಿಯಾಗಿ ಸರ್ಕಾರದ ಯೋಜನೆಗಳನ್ನು ಎಲ್ಲಾ ವರ್ಗದವರಿಗೂ ತಲುಪಿಸಿ ನಾಡಿನ ಶ್ರೇಯೋಭಿವೃದ್ಧಿಗೆ ಶ್ರಮಿಸಿ ದೇಶಕ್ಕೆ ಮಾದರಿಯಾದವರು ಡಿ.ದೇವರಾಜ ಅರಸು ಎಂದು ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಮಂಗಳವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಿದ್ದ ಹಿಂದುಳಿದ ವರ್ಗಗಳ ಧೀಮಂತ ನಾಯಕ, ಸಾಮಾಜಿಕ ಪರಿವರ್ತನೆಯ ಹರಿಕಾರ ಹಾಗೂ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ದಿ. ಡಿ. ದೇವರಾಜ ಅರಸು ಅವರ ೧೦೯ ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ತ್ಯಾಗ, ಪ್ರೀತಿ ಜೀವನದ ಉಸಿರಾಗಿಸಿಕೊಂಡು ನೊಂದವರ, ಅಶಿಕ್ಷಿತರ, ನಿರ್ಲಕ್ಷಿತ ಸಮುದಾಯಗಳ ಪರ ಇಡೀ ಜೀವನವನ್ನು ಮೀಸಲಿಟ್ಟು, ಭೂಸುಧಾರಣೆಯ ಕಾಯ್ದೆಯಂತಹ ಮಹತ್ವದ ಯೋಜನೆ ರೂಪಿಸಿದ ಮಹನೀಯರಾಗಿದ್ದಾರೆ ಎಂದು ಸಂಗಮೇಶ ಬಬಲೇಶ್ವರ ಹೇಳಿದರು.ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯಕ ಮಾತನಾಡಿ, ಉಳುವವನೆ…

Read More

ವಿಜಯಪುರ: ಜಿಲ್ಲಾ ನೂತನ ಛಾಯಾಗ್ರಾಹಕರ ಸಂಘ ವಿಜಯಪುರ ಹಾಗೂ ಕರ್ನಾಟಕ ಛಾಯಾಚಿತ್ರಗ್ರಾಹಕರ ಸಂಘ ಬೆಂಗಳೂರು ಇವರ ಸಹಯೋಗದಲ್ಲಿ “ವಿಶ್ವ ಛಾಯಾಗ್ರಹಣ ದಿನಾಚರಣೆಯ” ಅಂಗವಾಗಿ ಛಾಯಾಗ್ರಹಣ ಕ್ಷೇತ್ರದ ಹಿರಿಯರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಮತ್ತು ಛಾಯಾಚಿತ್ರಗಳ ಪ್ರದರ್ಶನವನ್ನು ಆ.೨೧ ರಂದು ಬೆಳಿಗ್ಗೆ ೧೧-೦೦ಗಂಟೆಗೆ “ಸರಕಾರಿ ಆರ್ಟ್ ಗ್ಯಾಲರಿ” ಪ್ರವಾಸೋದ್ಯಮ ಇಲಾಖೆ, ಹಳೆ ಐ.ಬಿ ಸ್ಟೇಶನ್ ರಸ್ತೆ, ವಿಜಯಪುರ ಇಲ್ಲಿ ಏರ್ಪಡಿಸಲಾಗಿದೆ.ಉದ್ಘಾಟಕರಾಗಿ ಧಾರವಾಡದ ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಆಗಮಿಸಲಿದ್ದಾರೆ,ಮುಖ್ಯ ಅತಿಥಿಗಳಾಗಿ ಬಿ.ಎಲ್.ಡಿ.ಇ ವಿಶ್ವವಿದ್ಯಾಲಯ, ಸಹಾಯಕ ಪ್ರಾಧ್ಯಾಪಕರಾದ ಶಸ್ತ್ರ ಚಿಕಿತ್ಸಾ ವಿಭಾಗದ ಡಾ. ದೀಪಕ್ ಆರ್. ಚವ್ಹಾಣ. ಕರ್ನಾಟಕ ಛಾಯಾಚಿತ್ರಗ್ರಾಹಕರ ಸಂಘದ ನಿರ್ದೇಶಕರಾದ ನಾಗರಾಜ ಟಿ. ಸಿ. ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಕಟಪೂರ್ವ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಗದೀಶ ಬೋಳಸೂರ ಇವರು ಆಗಮಿಸಲಿದ್ದಾರೆ. ಅತಿಥಿಗಳು ಜಂಗಲಿಬಾಷಾ ಮುಜಾವರ ಅಧ್ಯಕ್ಷರು, ಬಬಲೇಶ್ವರ ತಾಲೂಕು ಛಾಯಾಗ್ರಾಹಕರ ಸಂಘ ಸಂಗಯ್ಯ ಮಠಪತಿ ಅಧ್ಯಕ್ಷರು, ಕೋಲ್ಟಾರ್ ತಾಲೂಕು ಛಾಯಾಗ್ರಾಹಕರ ಸಂಘ ಸಿದ್ದು ಕುದುರೆ…

Read More