Author: editor.udayarashmi@gmail.com

ತಿಕೋಟಾ: ಸುಂದ‌ರ ಸಮಾಜ ನಿರ್ಮಾಣ ಮಾಡಲು ಸಮಾಜದ ಒಳಿತಿಗಾಗಿ ತಮ್ಮ ಜೀವನವನ್ನು ಮುಡುಪಾಗಿಟ್ಟು ಸಮಾಜಕ್ಕಾಗಿ ಬದುಕಿದವರು ಹಾನಗಲ್ ಕುಮಾರ ಶಿವಯೋಗಿಗಳು ಎಂದು ಯರನಾಳದ ಹಿರೇಮಠ ಸಂಸ್ಥಾನದ ಶಿವಪ್ರಸಾದ ದೇವರು ಹೇಳಿದರು.ತಾಲ್ಲೂಕಿನ ಕಳ್ಳಕವಟಗಿ ಗ್ರಾಮದ ಸಂಗಮನಾಥ ದೇವಾಲಯದ ಜಾತ್ರಾ ನಿನಿತ್ಯ ಶ್ರಾವಣ ಮಾಸದಲ್ಲಿ ನಡೆದ ಕುಮಾರ ಶಿವಯೋಗಿಗಳ ಪುರಾಣ ಮಂಗಲ ಕಾರ್ಯಕ್ರಮದಲ್ಲಿ ಅವರು ಹೇಳಿದರು.ಯೋಗಿಯಾದರೇನು ಬೋಗಿಯಾದರೆನು ಮುಗಿದ ಮೇಲೆ ನಾವು ಭೂಮಿಯನ್ನು ತೊರೆಯಲೆಬೇಕು. ಸಾವು ಯಾರನ್ನು ಬಿಟ್ಟಿಲ್ಲ ಶಿವನೆಡೆಗೆ ಕರೆದುಕೊಂಡು ಹೋಗುತ್ತದೆ ಎಂದರು.ಅದ್ದೂರಿ ಜಾತ್ರೆ: ಶ್ರಾವಣ ಮೊದಲ‌ ಸೋಮವಾರದಿಂದ ಮೂರನೇ ಸೋಮವಾರದವರೆಗೆ ಹಾನಗಲ್ ಕುಮಾರ ಶಿವಯೋಗಿಗಳ ಪುರಾಣವು ಯರನಾಳ ಹಿರೇಮಠ ಸಂಸ್ಥಾನದ ಶ್ರೀ ಶಿವಪ್ರಸಾದ ದೇವರು ಅವರಿಂದ ನಡೆಯಿತು. ಸಂಗಮನಾಥ ದೇವರ ಪಲ್ಲಕ್ಕಿ, ಮಾಳಿಂಗೇಶ್ವರ ದೇವರ ಪಲ್ಲಕ್ಕಿ, ನಂದಿಕೋಲ ಭವ್ಯ ಮೆರವಣಿಗೆ, ಗೊಂಬೆ ಕುಣಿತ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಾಗಿತು. ಜಾತ್ರೆಗೆ ಆಗಮಿಸಿದ ಭಕ್ತರಿಗೆ ಅನ್ನಪ್ರಸಾದ ವಿತರಣೆಯಾಯಿತು. ಮಹಾರಾಷ್ಟ್ರ ಕರ್ನಾಟಕ ಕುಸ್ತಿ ಪಟುಗಳಿಗೆ ಜಂಗಿ ಕುಸ್ತಿ ನಡೆಯಿತು. ರಾತ್ರಿ ಮಾನವಂತರ ಮನೆತನ‌ ನಾಟಕ…

Read More

ಇಂಡಿ: ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕರ ಅಧಿಕಾರಿಗಳ ಮಧ್ಯೆ ಖುರ್ಚಿಗಾಗಿ ಪೈಪೋಟಿ ನಡೆದಿದೆ. ಕಾರ್ಯನಿರ್ವಾಹಕ ಅಧಿಕಾರಿ ಓರ್ವ ಅಧಿಕಾರದ ಕುರ್ಚಿ ನೀಡುವಂತೆ ಇಂಡಿ ತಾಲೂಕ ಪಂಚಾಯತ್ ಕಚೇರಿಯ ಮುಂದೆ ಧರಣಿ ಸತ್ಯಾಗ್ರಹ ನಡೆಸುತ್ತಿರುವ ಘಟನೆ ಸೋಮವಾರ ನಡೆದಿದೆ.ಪ್ರತಿಭಟನೆ ನಡೆಸುತ್ತಿರುವ ತಾ.ಪಂ ಇಓ ಗುರುಶಾಂತಪ್ಪ ಬೆಳ್ಳುಂಡಗಿ ಜುಲೈ ೨೯ ರಂದು ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕು ಪಂಚಾಯತಿಯಿಂದ ವಿಜಯಪುರ ಜಿಲ್ಲೆಯ ಇಂಡಿ ತಾಲೂಕ ಪಂಚಾಯತ್‌ಗೆ ವರ್ಗಾವಣೆಗೊಂಡು ಅಧಿಕಾರ ಸ್ವೀಕರಿಸಿದ್ದರು. ಮತ್ತೆ ಸರ್ಕಾರ ಅವರನ್ನು ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಾ ಪಂಚಾಯತ್ ಕಾರ್ಯಾಲಯಕ್ಕೆ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಆದ್ರೇ, ಅಧಿಕಾರ ಸ್ವೀಕರಿಸಿ ಕೇವಲ ಒಂದು ವಾರ ಕಳೆದಿದೆ. ಆದರೆ ಒಂದೇ ವಾರದಲ್ಲಿ ಮತ್ತೆ ವರ್ಗಾವಣೆ ಹೇಗೆ ಸಾಧ್ಯ? ಜುಲೈ ೨೯ರ ವರೆಗೆ ಸರ್ಕಾರ ವರ್ಗಾವಣೆಗೆ ದಿನಾಂಕ ನಿಗದಿಗೊಳಿಸಿತ್ತು. ಆದರೂ ಸಹ ಜುಲೈ ೩೧ ರಂದು ಆದೇಶ ಹೊರಡಿಸಿ ಇಂಡಿ ತಾಲೂಕ ಪಂಚಾಯತ್ ಕಚೇರಿಗೆ ಬಾಬುರಾವ್ ರಾಠೋಡ ಅವರನ್ನು ಹೆಚ್ಚುವರಿಯಾಗಿ ನಿಯುಕ್ತಿಗೊಳಿಸಿರುವುದು ಎಷ್ಟು ಸರಿ?…

Read More

ಬಸವನಬಾಗೇವಾಡಿ: ತಾಲೂಕಿನ ಇಂಗಳೇಶ್ವರ ಗ್ರಾಮದ ಬಸವ ಮಾತಾ ಮಾದಲಾಂಬಿಕೆ ಸ್ಮಾರಕ ಭವನದಲ್ಲಿ ಭಾನುವಾರ ಶ್ರಾವಣ ಮಾಸದಂಗವಾಗಿ ಸ್ಮಾರಕ ಭವನದಲ್ಲಿ ಪ್ರವಚನ ಹಮ್ಮಿಕೊಳ್ಳುವ ಕುರಿತಂತೆ ಪೂರ್ವಭಾವಿ ಸಭೆ ಜರುಗಿತು. ಸಭೆಯಲ್ಲಿ ಆಗಷ್ಟ್ ೨೪ ರಿಂದ ಸೆಪ್ಟೆಂಬರ್ ೩ ರವರೆಗೆ ಕರಿಭಂಟನಾಳ ಗ್ರಾಮದ ಗುರುಗಂಗಾಧೇಶ್ವರ ಹಿರೇಮಠದ ಪೀಠಾಧಿಪತಿ ಶಿವಕುಮಾರ ಸ್ವಾಮೀಜಿ ಅವರಿಂದ ಪ್ರತಿನಿತ್ಯ ಸಂಜೆ ೭ ರಿಂದ ೮ ಗಂಟೆಯವರೆಗೆ ಶರಣರ ಚರಿತಾಮೃತ ಪ್ರವಚನ ನಡೆಸುವ ಕುರಿತು ತೀರ್ಮಾನಿಸಲಾಯಿತು. ಸೆ.೩ ರಂದು ಸಮಾರೋಪ ಸಮಾರಂಭ ನಡೆಸುವ ಕುರಿತಂತೆ ಚರ್ಚಿಸಲಾಯಿತು. ಸಭೆಯಲ್ಲಿ ವಿಶ್ವಗುರು ಬಸವ ಮಾತಾ ಮಾದಲಾಂಬಿಕೆ ಸಂಸ್ಥೆಯ ಅಧ್ಯಕ್ಷ ಸಂಗನಗೌಡ ಪಾಟೀಲ, ರೈತ ಮುಖಂಡ ಅರವಿಂದ ಕುಲಕರ್ಣಿ, ಈರಣ್ಣ ಬೆಕಿನಾಳ, ಬಸಯ್ಯ ಹಿರೇಮಠ, ಸಿದ್ದಪ್ಪ ನಡಕಟ್ಟಿ, ಮಲ್ಲಪ್ಪ ತಕ್ಕೋಡ, ಪ್ರಭು ಡಿಗ್ಗಾವಿ, ಶ್ರೀಶೈಲ ಭೀಮರಾಯ ತಾಳಿಕೋಟಿ, ಶ್ರೀಶೈಲ ತಾಳಿಕೋಟಿ, ಸಿದ್ದಪ್ಪ ಹದಿಮೂರ, ಸುಭಾಸ ಜುಮನಾಳ, ನಾಗಣ್ಣ ಚಿಗರಿ, ಶರಣಪ್ಪ ಶ್ಯಾಮಾಗೋಳ, ಅಪ್ಪು ಪತಂಗೆ ಇತರರು ಇದ್ದರು.

Read More

ಬಸವನಬಾಗೇವಾಡಿ: ಪಟ್ಟಣದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ(ನಾಗವಾರ ಬಣ)ದ ಮುಖಂಡರು, ಕಾರ್ಯಕರ್ತರು ಸೋಮವಾರ ಸಂಗನಾಳ ದಲಿತ ಯುವಕನ ಹತ್ಯೆ ಖಂಡಿಸಿ ಹಾಗೂ ಯಾದಗಿರಿ ಪಿಎಸ್ಐ ಅವರ ಸಾವಿನ ಕುರಿತು ಸಿಐಡಿ ತನಿಖೆಗೆ ಆಗ್ರಹಿಸಿ ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಅವರಿಗೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಮನವಿ ಪತ್ರ ಓದಿದ ಡಿಎಸ್ಎಸ್ ಜಿಲ್ಲಾ ಸಂಘಟನಾ ಸಂಚಾಲಕ ಗುರುರಾಜ ಗುಡಿಮನಿ ಮಾತನಾಡಿ, ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದ ಯಮನೂರಪ್ಪ ಬಸಪ್ಪ ಬಂಡಿಹಾಳ ಅವರು ಅದೇ ಗ್ರಾಮದ ಮುದುಕಪ್ಪ ಹಡಪದ ಅವರ ಕಟಿಂಗ್ ಸಲೂನ್ಗೆ ಕಟಿಂಗ್ ಮಾಡಿಸಿಕೊಳ್ಳಲು ಹೋದ ಸಂದರ್ಭದಲ್ಲಿ ಅಂಗಡಿ ಮಾಲೀಕ ಮುದುಕಪ್ಪ ಅವರು ಜಾತಿ ನಿಂದನೆ ಮಾಡುವ ಜೊತೆಗೆ ನೀನು ಇಲ್ಲಿಗೆ ಬರಬೇಡ ಎಂದಾಗ ಇಬ್ಬರಲ್ಲಿ ವಾಗ್ವಾದ ನಡೆದಾಗ ಕಟಂಗ್ ಮಾಡುವ ಕತ್ತರಿಯಿಂದ ಇರಿದು ಕೊಂದಿರುವ ಘಟನೆ ಶೋಚನೀಯವಾಗಿದೆ. ಇದನ್ನು ಸಂಘಟನೆ ತೀವ್ರವಾಗಿ ಖಂಡಿಸುತ್ತದೆ ಎಂದರು.ಯಾದಗಿರಿಯ ಪಿಎಸ್ಐಯಾಗಿದ್ದ ಪರಶುರಾಮ ಚಲವಾದಿ ಅವರ ಅನುಮಾನಾಸ್ಪದ ಸಾವಿನ ಕುರಿತು ಯಾದಗಿರಿ…

Read More

ಬಸವನಬಾಗೇವಾಡಿ: 12 ನೇ ಶತಮಾನದ ಬಸವಾದಿ ಶರಣರ ಬದುಕು ನಮಗೆ ಸದಾಕಾಲಕ್ಕೆ ಪ್ರೇರಣೆಯಾಗಿದೆ. ಬಸವಾದಿ ಶರಣರಲ್ಲಿ ಒಬ್ಬರಾಗಿದ್ದ ನೂಲಿಯ ಚಂದಯ್ಯ ಅವರ ಕಾಯಕ ತತ್ವ ಸರ್ವಕಾಲಕ್ಕೂ ಪ್ರತಿಯೊಬ್ಬರಿಗೂ ಪ್ರೇರಣೆಯಾಗಿದೆ ಎಂದು ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಹೇಳಿದರು.ಪಟ್ಟಣದ ತಹಸೀಲ್ದಾರ ಕಚೇರಿಯ ಸಭಾಂಗಣದಲ್ಲಿ ತಾಲೂಕಾಡಳಿತದಿಂದ ಸೋಮವಾರ ಹಮ್ಮಿಕೊಂಡಿದ್ದ ನೂಲಿಯ ಚಂದಯ್ಯ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ನೂಲಿಯ ಚಂದಯ್ಯ ಭಾವಚಿತ್ರಕ್ಕೆ ನಮನ ಸಲ್ಲಿಸಿದ ನಂತರ ಮಾತನಾಡಿದ ಅವರು, ಮಹಾಮಾನವತಾವಾದಿ ಬಸವಣ್ಣವರ ನೇತೃತ್ವದಲ್ಲಿ 12 ನೇ ಶತಮಾನದಲ್ಲಿ ಸಮಾಜ ಪರಿವರ್ತನೆಗೆ ದೊಡ್ಡ ಕ್ರಾಂತಿ ನಡೆಯಿತು. ಬಸವಣ್ಣವರ ಕ್ರಾಂತಿಗೆ ಹಲವಾರು ಶರಣರು ಕೈ ಜೋಡಿಸಿದ್ದರು. ಅದರಲ್ಲಿ ಪ್ರಮುಖವಾಗಿ ನೂಲಿಯ ಚಂದಯ್ಯನವರು ಕೂಡ ಒಬ್ಬರಾಗಿದ್ದರು.ಕಾಯಕಕ್ಕೆ ಹೆಚ್ಚಿನ ಮಹತ್ವ ನೀಡಿದ ಚಂದಯ್ಯನವರು ಸರ್ವಕಾಲಕ್ಕೂ ನಮಗೆ ಪ್ರೇರಣೆಯಾಗಿ ನಿಲ್ಲುತ್ತಾರೆ. ಶರಣರ ವಚನಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಂಡಾಗ ನಮ್ಮ ಬದುಕು ಸಾರ್ಥಕವಾಗುತ್ತದೆ ಎಂದು ಹೇಳಿದರುಚನ್ನಬಸವೇಶ್ವರ ಪ್ರತಿಷ್ಠಾನದ ಅಧ್ಯಕ್ಷ, ಸಾಹಿತಿ ವಿವೇಕಾನಂದ ಕಲ್ಯಾಣಶೆಟ್ಟಿ ಮಾತನಾಡಿ, ಬಸವಣ್ಣನವರು ಬಿದ್ದವರನ್ನು ಮೇಲೆತ್ತಿದ ಧ್ವನಿ ಇಲ್ಲದವರಿಗೆ ಧ್ವನಿ ನೀಡಿದ ಮಹಾನ್…

Read More

ಬಸವನಬಾಗೇವಾಡಿ: ಪಟ್ಟಣದ ಗಂಗಾಧರ ಲೇಔಟ್ನಲ್ಲಿರುವ ಡಿ.ದೇವರಾಜ ಅರಸು ಭವನದಲ್ಲಿ ತಾಲೂಕಾಡಳಿತ, ತಾಲೂಕು ಪಂಚಾಯತ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಆ.೨೦ ರಂದು ಬೆಳಗ್ಗೆ ೧೧ ಗಂಟೆಗೆ ಹಿಂದುಳಿದ ವರ್ಗಗಳ ಭಾಗ್ಯ ಜ್ಯೋತಿ, ರಾಜ್ಯ ಮಾಜಿ ಮುಖ್ಯಮಂತ್ರಿ ದಿ.ಡಿ.ದೇವರಾಜ ಅರಸುರವ ೧೦೯ ನೇ ಜನ್ಮದಿನಾಚರಣೆಯ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಸಮಾರಂಭವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಸಚಿವ ಶಿವಾನಂದ ಪಾಟೀಲ ವಹಿಸುವರು. ಮುಖ್ಯಅತಿಥಿಗಳಾಗಿ ಕರ್ನಾಟಕ ಸರ್ಕಾರದ ನವದೆಹಲಿಯ ವಿಶೇಷ ಪ್ರತಿನಿಧಿ, ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಯಮಿತ ಅಧ್ಯಕ್ಷ, ಶಾಸಕ ಅಪ್ಪಾಜಿ ನಾಡಗೌಡ, ಸಂಸದ ರಮೇಶ ಜಿಗಜಿಣಗಿ, ರಾಜ್ಯಸಭೆ ಸದಸ್ಯೆ ಸುಧಾಮೂರ್ತಿ, ವಿಧಾನ ಪರಿಷತ್ ಸದಸ್ಯರಾದ ಹಣಮಂತ ನಿರಾಣಿ, ಪ್ರಕಾಶ ರಾಠೋಡ, ಸುನೀಲಗೌಡ ಪಾಟೀಲ, ಪಿ.ಎಚ್.ಪೂಜಾರ, ಶಾಸಕ ಭೀಮನಗೌಡ (ರಾಜುಗೌಡ) ಪಾಟೀಲ, ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯ್ಕ, ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಆಗಮಿಸುವರು. ಸ್ಥಳೀಯ ಸರ್ಕಾರಿ…

Read More

ಬಸವನಬಾಗೇವಾಡಿ: ಪಟ್ಟಣದ ಉತ್ತರಾದಿ ಮಠದಲ್ಲಿ ಆ.೨೦ ರಿಂದ ೨೨ ರವರೆಗೆ ಕಲಿಯುಗದ ಕಲ್ಪವೃಕ್ಷ ಕಾಮಧೇನು ರಾಘವೇಂದ್ರ ಸ್ವಾಮಿಗಳವರ ೩೫೩ ನೇ ಆರಾಧನಾ ಮಹೋತ್ಸವ ಜರುಗಲಿದೆ. ಆರಾಧನಾ ಮಹೋತ್ಸವದಂಗವಾಗಿ ಪ್ರತಿದಿವಸ ಬೆಳಗ್ಗೆ ೭.೩೦ ಗಂಟೆಗೆ ಅಷ್ಟೋತ್ತರ ಮಹಾ ಪಂಚಾಮೃತ, ಅಭಿಷೇಕ, ಮಧ್ಯಾನ್ಹ ೧೨.೩೦ ಗಂಟೆಗೆ ನೈವೇದ್ಯ ಹಾಗೂ ಮಹಾಮಂಗಳಾರತಿ ಹಾಗೂ ತೀರ್ಥ ಪ್ರಸಾದ ಜರುಗುವದು. ಸಂಜೆ ೬.೩೦ ಗಂಟೆಗೆ ಪಲ್ಲಕ್ಕಿ ಸೇವಾ, ಭಜನಾ ಕಾರ್ಯಕ್ರಮ ಜರುಗಲಿದೆ.ಸಕಲ ಸದ್ಭಕ್ತರು ರಾಯರ ಆರಾಧನಾ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ರಾಯರ ಅನುಗ್ರಹಕ್ಕೆ ಪಾತ್ರರಾಗಬೇಕೆಂದು ಪ್ರಕಟಣೆ ತಿಳಿಸಿದೆ.

Read More

ಆಲಮಟ್ಟಿ: ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಗಳ ನೀರು ಮರು ಹಂಚಿಕೆ ಮಾಡುವಂತೆ ಆಗ್ರಹಿಸಿ ಅವಳಿ ಜಲಾಶಯಗಳ ನೀರು ಮರು ಹಂಚಿಕೆ ಹೋರಾಟ ಸಮಿತಿ ಪದಾಧಿಕಾರಿಗಳು ಸೋಮವಾರ ಪ್ರತಿಭಟನೆ ನಡೆಸಿದರು.ಇಲ್ಲಿನ ರಾಮಲಿಂಗೇಶ್ವರ ದೇವಸ್ಥಾನದಿಂದ ಕೆಬಿಜೆಎನ್‌ಎಲ್ ಎಂಡಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಮುಖ್ಯ ಎಂಜಿನಿಯರ್‌ಗೆ ಮನವಿ ಸಲ್ಲಿಸಿದರು.ವಿಜಯಪುರ, ಬಾಗಲಕೋಟೆ ಅವಳಿ ಜಿಲ್ಲೆಗೆ ನೀರು ಹಂಚಿಕೆಯಲ್ಲಿ ಅನ್ಯಾಯವಾಗಿದೆ. ಕೂಡಲೇ ಎರಡೂ ಡ್ಯಾಂಗಳ ನೀರು ಮರು ಹಂಚಿಕೆ ಮಾಡಿ ಜಿಲ್ಲೆಯ ರೈತರಿಗೆ ನ್ಯಾಯ ದೊರಕಿಸಿ ಕೊಡಬೇಕು. ಜಿಲ್ಲೆಯಲ್ಲಿ ೫ ನದಿಗಳು ಹರಿದರೂ ಕುಡಿವ ನೀರಿಗೂ ತೊಂದರೆ ಅನುಭವಿಸುವಂತಾಗಿದೆ. ಕೃಷಿಗೆ ನೀರುಣಿಸುವದು ಕನಸಿನ ಮಾತಾಗಿದೆ. ಅವಳಿ ಜಿಲ್ಲೆಗಳ ರೈತರ ಬದುಕು ಹಸನಾಗಲು ಅವಳಿ ಜಲಾಶಯಗಳ ನೀರು ಮರು ಹಂಚಿಕೆ ಮಾಡುವುದು ಅಗತ್ಯವಿದೆ ಎಂದು ಆಗ್ರಹಿಸಿದರು.ಅವಳಿ ಡ್ಯಾಂಗಳ ನರ‍್ಮಾಣಕ್ಕೆ ಅಖಂಡ ವಿಜಯಪುರ ಜಿಲ್ಲೆಯ ೨೦೧ ಗ್ರಾಮಗಳು ಬಾಧಿತಗೊಂಡು ೧೩೬ ಗ್ರಾಮಗಳು ಸಂಪೂರ್ಣ ಮುಳುಗಡೆ ಹೊಂದಿ ೪ ಲಕ್ಷ ಕುಟುಂಬಗಳು ನಿರಾಶ್ರಿತರಾಗಿದ್ದಾರೆ. ಅಖಂಡ ವಿಜಯಪುರ ಜಿಲ್ಲೆಯ ರೈತರ ಎಲ್ಲ ಜಮೀನುಗಳಿಗೆ…

Read More

ವಿಜಯಪುರ: ನಗರ ವ್ಯಾಪ್ತಿಯ ಕರಾಡದೊಡ್ಡಿಯಲ್ಲಿ ನೂತನವಾಗಿ ನಿರ್ಮಿಸಲಾದ ಮೆಟ್ರಿಕ್ ನಂತರದ ಇಂಜನಿಯರಿಂಗ್ ಮತ್ತು ವೈದ್ಯಕೀಯ ಬಾಲಕರ ವಿದ್ಯಾರ್ಥಿ ನಿಲಯ ಕಟ್ಟಡವನ್ನು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಈಚೆಗೆ ಉದ್ಘಾಟಿಸಿದರು.ಬಡ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಿಂದ ಮಂಜೂರಾದ ರೂ.೨ ಕೋಟಿ ಅನುದಾನದಲ್ಲಿ ಅತ್ಯುತ್ತಮವಾದ ವಸತಿ ನಿಲಯ ನಿರ್ಮಾಣ ಮಾಡಲಾಗಿದ್ದು, ಇದರಲ್ಲಿ ವಾಸ ಮಾಡುವ ವಿದ್ಯಾರ್ಥಿಗಳು ಸ್ವಚ್ಛ ಹಾಗೂ ಹಾಳಾಗದಂತೆ ಉತ್ತಮವಾಗಿ ಉಪಯೋಗಿಸಿಕೊಳ್ಳಬೇಕು. ನಿಮ್ಮಂತೆ ಮುಂದೆ ಬರುವ ಬಡ ಮಕ್ಕಳಿಗೂ ಅನುಕೂಲ ಆಗಬೇಕು. ಅಧಿಕಾರಿಗಳು ಮತ್ತು ಸಿಬ್ಬಂದಿ ಕೂಡ ಸರಿಯಾಗಿ ನಿರ್ವಹಣೆ ಮಾಡುವಂತೆ ಶಾಸಕರು ಕಿವಿಮಾತು ಹೇಳಿದರು.ನಂತರ ಸಮಾರಂಭಕ್ಕೆ ಆಗಮಿಸಿದ್ದ ಸಾರ್ವಜನಿಕರ ಅಹವಾಲು ಆಲಿಸಿದರು.ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪುಂಡಲೀಕ ಮಾನವರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಈರಪ್ಪ ಆಶಾಪೂರ ಸೇರಿದಂತೆ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಇದ್ದರು.

Read More

ವಿಜಯಪುರ: ಕರ್ನಾಟಕ ಉಪ್ಪಾರ ಅಭಿವೃದ್ದಿ ನಿಗಮದಿಂದ ಅನುಷ್ಠಾನಗೊಳಿಸುವ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಗಂಗಾ ಕಲ್ಯಾಣ ಯೋಜನೆ, ಸ್ವಯಂ ಉದ್ಯೋಗ ಸಾಲ, ಅರಿವು ಶೈಕ್ಷಣಿಕ ಸಾಲ ಯೋಜನೆ(ಹೊಸದು), ಅರಿವು ಶೈಕ್ಷಣಿಕ ಸಾಲ ಯೋಜನೆ (ನವೀಕರಣ), ವಿದೇಶ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾವಲಂಬಿ ಸಾರಥಿ ಯೋಜನೆಯಡಿ ಸಾಲ-ಸೌಲಭ್ಯ ಪಡೆಯಲಿಚ್ಚಿಸುವವರು ಸೇವಾ ಸಿಂಧು ಮೂಲಕ, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರ, ಅಟಲ್‌ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರಿಕ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ದಿನಾಂಕ : ೧೬-೦೯-೨೦೨೪ ಕೊನೆಯ ದಿನಾಂಕವಾಗಿದೆ.ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ https://www.upparadevelopment.karnataka.gov.in ಅಥವಾ ನಿಗಮದ ಸಹಾಯವಾಣಿ ಸಂಖ್ಯೆ ೦೮೦-೨೨೫೨೫೫೫, ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More