Author: editor.udayarashmi@gmail.com

ಮುದ್ದೇಬಿಹಾಳ: ಪತ್ರಕರ್ತರಾದ ನಾವು ಯಾರ ಗುಲಾಮರಲ್ಲಾ. ನಮಗೆ ಭಯ ಭೀತಿ ಎಂಬುದು ಬೇಡ ಎಂದು ಹಿರಿಯ ಪತ್ರಕರ್ತ ಜಿ.ಟಿ.ಘೋರ್ಪಡೆ ಹೇಳಿದರು.ಪಟ್ಟಣದ ರಾಘವೇಂದ್ರ ಮಂಗಲ ಕಾರ್ಯಾಲಯದಲ್ಲಿ ತಾಳಿಕೋಟೆ ಮತ್ತು ಮುದ್ದೇಬಿಹಾಳ ಪತ್ರಕರ್ತರ ಸಂಘದ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾ ದಿನಾಚರಣೆ, ನೂತನ ದಿನಪತ್ರಿಕೆಯ ಲೋಕಾರ್ಪಣೆ ಹಾಗೂ ಸಾಧಕ ಪತ್ರಕರ್ತರಿಗೆ ಸನ್ಮಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಎಲ್ಲರಂತೆ ನಮಗೂ ಸಾವು ಎಂಬುದು ಇದ್ದೇ ಇದೆ. ಒಳ್ಳೆಯ ಕೆಲಸ ಒಳ್ಳೆಯ ಬರವಣಿಗೆಯನ್ನು ಮಾಡಿ ಸಾಯುವಂತಹ ಕೆಲಸ ಮಾಡೋಣ. ಯಾರ ಮುಲಾಜಿಗೂ ಒಳಗಾಗುವದು ಬೇಡಾ ಎಂದರು.ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದ ಪತ್ರಿಕೋಧ್ಯಮ ಮತ್ತು ಸಮೂಹ ಸಂಹನ ವಿಭಾಗದ ಪ್ರಾಧ್ಯಾಪಕ ಅರುಣ ಹೊಸಮಠ ಮಾತನಾಡಿ, ಜನರನ್ನು ಒಗ್ಗೂಡಿಸುವದು ಜಾಗೃತಿ ಮೂಡಿಸುವಂತಹ ಕಾರ್ಯ ಮಾಧ್ಯಮಗಳು ಮಾಡುತ್ತವೆ. ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು ದಲಿತ ನಾಯಕ ಎಂಬ ತಮ್ಮದೇ ಆದ ಪತ್ರಿಕೆಯನ್ನು ಹೊರಡಿಸಿ ಬ್ರಿಟಿಷರ ವಿರುದ್ಧ ಹೋರಾಡಲು ತಮ್ಮ ಪತ್ರಿಕಾ ಬಳಗದಿಂದ ಸೇವಾ ಕಾರ್ಯಕ್ಕೆ ಮುಂದಾಗಿದ್ದರು. ಸಮಾಜದ ಕಣ್ಣು ತೆರೆಸುವ…

Read More

ವಿಜಯಪುರ: ಜಿಲ್ಲಾಡಳಿತದ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿಜಯಪುರ ಇವರ ಸಹಯೋಗದಲ್ಲಿ ಆ.೨೦ ರಂದು ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ದಿ: ಡಿ.ದೇವರಾಜ್ ಅರಸುರವರ ೧೦೯ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಅಂದು ಬೆಳಿಗ್ಗೆ ೯ ಗಂಟೆಗೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಡಿ.ದೇವರಾಜ್ ಅರಸು ಅವರ ಭಾವಚಿತ್ರ ಮೆರವಣಿಗೆ ಚಾಲನೆ ಹಾಗೂ ಬೆಳಿಗ್ಗೆ ೧೦ ಗಂಟೆಗೆ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಜಯಂತಿ ಕಾರ್ಯಕ್ರಮ ಜರುಗಲಿದ್ದು, ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Read More

ವಿಜಯಪುರ: ಸಮಾಜ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿಗಳು ರಾಜ್ಯದಿಂದ ದಿನಾಂಕ : ೧೦-೧೦-೨೦೨೪ ರಿಂದ ೧೪-೧೦-೨೦೨೪ರ ವರೆಗೆ ಪ್ರತಿ ವರ್ಷದಂತೆ ನಾಗಪೂರದ ದೀಕ್ಷಾ ಭೂಮಿಗೆ ಭೇಟಿ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಸಮಾಜ ಕಲ್ಯಾಣ ಇಲಾಖೆಯ ವೆಬ್‌ಸೈಟ್ https:swdservices.karnataka.gov.inಮೂಲಕ ದಿನಾಂಕ : ೩೧-೦೮-೨೦೨೪ರವರೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಜಿಲ್ಲೆಯ ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿಗಳು ನಿಗದಿತ ಅವಧಿಯೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ ಸಮಾಜ ಕಲ್ಯಾಣ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆಗಸ್ಟ್ ೧೯ರಂದು ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮವನ್ನು ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.ಅಂದು ಬೆಳಿಗ್ಗೆ ೯:೩೦ ಗಂಟೆಗೆ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರವರೆಗೆ ನುಲಿಯ ಚಂದಯ್ಯ ಭಾವಚಿತ್ರದ ಮೆರವಣಿಗೆ ನಡೆಯಲಿದೆ.ಬೆಳಿಗ್ಗೆ ೧೦:೩೦ಕ್ಕೆ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಡೆವ ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಸಚಿವರು, ಶಾಸಕರು ಗಣ್ಯರು ಪಾಲ್ಗೊಳ್ಳಲಿದ್ದಾರೆ.

Read More

ಆ.೨೨ರಂದು ಕರ್ನಾಟಕ ಉಪ ಲೋಕಾಯುಕ್ತರಿಂದ ಅಹವಾಲು ಸ್ವೀಕಾರ ವಿಜಯಪುರ: ಕರ್ನಾಟಕದ ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಆ.೨೨ರಂದು ನಗರದ ಸ್ಟೇಶನ್ ರಸ್ತೆಯ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ ವಿಚಾರಣೆ ನಡೆಸಲಿದ್ದು ಅಹವಾಲು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವುದರಿಂದ ವ್ಯವಸ್ಥಿತವಾಗಿ ನಿರ್ವಹಣೆ ಮಾಡುವಂತೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚನೆ ನೀಡಿದ್ದಾರೆ.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಕರ್ನಾಟಕದ ಉಪ ಲೋಕಾಯುಕ್ತರು ಅಂದು ಬೆಳಿಗ್ಗೆ ೧೦ ರಿಂದ ೧-೩೦ರವರೆಗೆ ಹಾಗೂ ಮಧ್ಯಾಹ್ನ ೨-೩೦ರಿಂದ ೫ ಗಂಟೆಯವರೆಗೆ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ ವಿಚಾರಣೆ ನಡೆಸಲಿದ್ದು ಅಹವಾಲು ಕಾರ್ಯಕ್ರಮ ವ್ಯವಸ್ಥಿತವಾಗಿ ನಿರ್ವಹಣೆಗೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು. ಕಾರ್ಯಕ್ರಮದಲ್ಲಿ ಭಾಗವಹಿಸಿ ಅಹವಾಲುಗಳನ್ನು ಸಲ್ಲಿಸುವ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಅಹವಾಲುಗಳ ಸ್ವೀಕಾರ ಸೂಕ್ತ ವ್ಯವಸ್ಥೆ ಕೈಗೊಳ್ಳಬೇಕು. ಪ್ರತ್ಯೇಕವಾಗಿ ೪ ಕೌಂಟರ್‌ಗಳನ್ನು ತೆರೆಯುವ ಮೂಲಕ ಅಹವಾಲುಗಳ ಸ್ವೀಕಾರ ಸುಗಮಗೊಳಿಸಬೇಕು. ಕಾರ್ಯಕ್ರಮದಲ್ಲಿ ೫೦೦ ಕ್ಕೂ…

Read More

ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಯ ೨೧ನೇ ಅವಧಿಗೆ ವಿವಿಧ ನಾಲ್ಕು ಸ್ಥಾಯಿ ಸಮಿತಿಗಳ ಸದಸ್ಯರನ್ನು ಚುನಾಯಿಸಲು ದಿನಾಂಕ : ೧೯-೦೮-೨೦೨೪ ರಂದು ನಿಗದಿಪಡಿಸಿದ ಚುನಾವಣೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ವಿಜಯಪುರ ಮಹಾನಗರ ಪಾಲಿಕೆ ಅಧ್ಯಕ್ಷಾಧಿಕಾರಿಗಳಾದ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಎಸ್.ಬಿ.ಶೆಟ್ಟೆಣ್ಣವರ ತಿಳಿಸಿದ್ದಾರೆ.

Read More

ತಿಕೋಟಾ: ತಾಲ್ಲೂಕಿನ ಕಳ್ಳಕವಟಗಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಎಸ್ಡಿಎಂಸಿ ಅಧ್ಯಕ್ಷರಾಗಿ ಶೇಖಸಾಬ ಮುಲ್ಲಾ ಹಾಗೂ ಉಪಾಧ್ಯಕ್ಷರಾಗಿ ಭೀಮವ್ವಾ ದೊಡಮನಿ ಆಯ್ಕೆಯಾಗಿದ್ದಾರೆ.

Read More

ಯಡ್ರಾಮಿ: ಕೊಲ್ಕಾತ್ತಾದಲ್ಲಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಹಾಗೂ ಬರ್ಬರ ಹತ್ಯೆ ನಡೆದಿರುವುದು ಅಮಾನುಷ ಕೃತ್ಯವಾಗಿದೆ. ಈ ಪ್ರಕರಣದಲ್ಲಿ ನಿಷ್ಪಕ್ಷವಾಗಿ ತನಿಖೆ ನಡೆಸಿ ವಿದ್ಯಾರ್ಥಿನಿಯ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಖಾಸಗಿ ವೈದ್ಯಾಧಿಕಾರಿಗಳ ಸಂಘದ ತಾಲೂಕು ಅಧ್ಯಕ್ಷ ಡಾ.ವ್ಹಾಯ್.ಎ.ಛಾಯಗೋಳ ಆಗ್ರಹಿಸಿದರು.ಯಡ್ರಾಮಿ ಪಟ್ಟಣದ ತಹಸೀಲ್ ಕಛೇರಿಯಲ್ಲಿ ಶನಿವಾರ ಐಎಮ್ಎ (ಭಾರತೀಯ ವೈದ್ಯಕೀಯ ಸಂಘ) ನೀಡಿರುವ ಮುಷ್ಕರಕ್ಕೆ ಬೆಂಬಲ ಸೂಚಿಸಿ ಖಾಸಗಿ ವೈದ್ಯಾಧಿಕಾರಿಗಳ ಸಂಘದಿಂದ ಗ್ರೇಡ್-2 ತಹಸೀಲ್ದಾರ್ ಸತ್ಯಪ್ರಸಾದ ಅವರಿಗೆ ಮನವಿ ಸಲ್ಲಿಸಿ ಮಾತನಾಡಿ, ಸಾರ್ವಜನಿಕರಿಗಾಗಿ ಹಗಲಿರುಳು ಸೇವೆ ಸಲ್ಲಿಸುತ್ತಿರುವ ವೈದ್ಯರ ಮೇಲೆ ಹಲ್ಯೆಯಂತಹ ಪ್ರಕರಣಗಳು ನಡೆಯುತ್ತಿವೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುವ ವೈದ್ಯರಿಗೆ ಸೂಕ್ತ ರಕ್ಷಣೆ ನೀಡಬೇಕು. ಹಾಗೂ ಕಠಿಣ ಕಾನೂನು ಜಾರಿಗೆ ತರಬೇಕು ಎಂದರು.ಈ ವೇಳೆ ವೈದ್ಯರಾದ ಡಾ.ಎಮ್.ಎಮ್. ಬಿರಾದಾರ, ಡಾ.ರವೀಂದ್ರ, ಡಾ.ಶಿವಪ್ರಸಾದ ಪಾಟೀಲ, ಡಾ.ಪ್ರಕಾಶ ಹವಲ್ದಾರ, ಡಾ.ಉಮೇಶ ಬದ್ರಶೆಟ್ಟಿ, ಡಾ.ಪ್ರಭು ಪೊಲೀಸಪಾಟೀಲ, ಡಾ.ಎಮ್.ಎಮ್.ಗುಡ್ನಾಳ, ಡಾ.ರಾಹುಲಗೌಡ ಬಿರಾದಾರ, ಡಾ.ವಿನೋದ ರಾಠೋಡ, ಡಾ.ಶರಣು ನೂಲಾ, ಡಾ.ಲಂಕೇಶ, ಡಾ.ಅನೀಲಕುಮಾರ, ಡಾ.ಮಹಾಂತೇಶ ಹಾಗೂ ಪ್ರಮುಖರಾದ…

Read More

ಬಸವನಬಾಗೇವಾಡಿ: ಪಟ್ಟಣದಲ್ಲಿರುವ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಎರಡು ಸ್ಥಾನಗಳು ರಾಜೀನಾಮೆಯಿಂದ ತೆರುವಾದ ಹಿನ್ನೆಲೆಯಲ್ಲಿ ಶನಿವಾರ ಜರುಗಿದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಅಮರೇಶ ಹಣಮಂತ್ರಾಯ ನಾಡಗೌಡ, ಉಪಾಧ್ಯಕ್ಷರಾಗಿ ಬಿ.ಎಸ್.ಇಜೇರಿ ಅವರು ಅವಿರೋಧ ಆಯ್ಕೆಯಾದರು ಎಂದು ಚುನಾವಣಾಧಿಕಾರಿ ನಜೀರಅಹ್ಮದ ಅವಟಿ ಘೋಷಿಸಿದರು.ಈ ಎರಡು ಸ್ಥಾನಗಳಿಗೆ ತಲಾ ಒಬ್ಬೊಬ್ಬರೇ ನಾಮಪತ್ರ ಸಲ್ಲಿಕೆ ಮಾಡಿದ್ದರು. ೨೦೨೪-೨೫ ನೇ ಸಾಲಿಗೆ ಅಧ್ಯಕ್ಷರಾಗಿ,ಉಪಾಧ್ಯಕ್ಷರಾಗಿ ಆಯ್ಕೆಯಾದ ಅಮರೇಶ ಹಣಮಂತ್ರಾಯ ನಾಡಗೌಡ, ಬಿ.ಎಸ್.ಇಜೇರಿ ಅವರನ್ನು ಸೊಸಾಯಿಟಿಯ ನಿರ್ದೇಶಕರು, ನಿವೃತ್ತ ಶಿಕ್ಷಕರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ನಿವೃತ್ತ ಮುಖ್ಯಶಿಕ್ಷಕರಾದ ಎಸ್.ಜಿ.ಮೊಕಾಶಿ, ಎಸ್.ಜಿ.ಪಾಟೀಲ ಮಾತನಾಡಿ, ನಮ್ಮ ಕಾಲಾವಧಿಯಲ್ಲಿ ಅಮರೇಶ ನಾಡಗೌಡ ಅವರ ತಂದೆ ನಿವೃತ್ತ ಶಿಕ್ಷಕ ದಿ.ಎಚ್.ಎ.ನಾಡಗೌಡ ಸೇರಿದಂತೆ ನಾವು ಹಾಗೂ ಅನೇಕರು ಸೊಸಾಯಿಟಿಯ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ದಿ.ಎಚ್.ಎ.ನಾಡಗೌಡ ಅವರು ಸೊಸಾಯಿಟಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುವ ಜೊತೆಗೆ ಸಮಸ್ತ ಶಿಕ್ಷಕರ ಬಾಂಧವರ ಸಹಕಾರದೊಂದಿಗೆ ಸೊಸಾಯಿಟಿಗೆ ಪ್ರಗತಿಗೆ ಸೇವೆ ಸಲ್ಲಿಸುವ ಮೂಲಕ ಸೊಸಾಯಿಟಿಯ ಪ್ರಗತಿಗೆ ನಾಂದಿ ಹಾಡಿದ್ದಾರೆ. ಇದೀಗ ಅವರ ಪುತ್ರ ಸೊಸಾಯಿಟಿಯ…

Read More

ಬಸವನಬಾಗೇವಾಡಿ: ೨೦೨೩-೨೪ ನೇ ಸಾಲಿನಲ್ಲಿ ಸಂಘವು ರೂ. ೫೯.೩೮ ಲಕ್ಷಗಳ ಆದಾಯವನ್ನು ಹೊಂದಿದ್ದು. ಒಟ್ಟು ರೂ. ೫೧೩.೭೬ ವೆಚ್ಚವಾಗಿದೆ. ಗರಿಷ್ಠ ಆದಾಯದಲ್ಲಿ ವೆಚ್ಚವನ್ನು ತೆಗೆದು ಒಟ್ಟು ರೂ.೭೬.೬೨ ಲಕ್ಷ ನಿವ್ವಳ ಲಾಭ ಹೊಂದಿದೆ ಎಂದು ಸ್ಥಳೀಯ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಅಧ್ಯಕ್ಷ ಸಂಗನಗೌಡ ಚಿಕ್ಕೊಂಡ ಹೇಳಿದರು.ಪಟ್ಟಣದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಆವರಣದಲ್ಲಿ ಶನಿವಾರ ಜರುಗಿದ ೨೦೨೩-೨೪ ನೇ ಸಾಲಿನ ೮೦ ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಮ್ಮ ಸಂಘವು ಬಸವನಬಾಗೇವಾಡಿ ಪುರಸಭೆ ವ್ಯಾಪ್ತಿ ಒಳಪಟ್ಟಿರುತ್ತದೆ. ಮಾ.೩೧ ರವರೆಗೆ ೬,೮೧೮ ಸದಸ್ಯರನ್ನು ಹೊಂದಿದೆ. ಒಟ್ಟು ಶೇರು ಬಂಡವಾಳ ರೂ. ೪೬೨.೩೦ ಲಕ್ಷ ಇದೆ. ದುಡಿಯುವ ಬಂಡವಾಳಕ್ಕೆ ಶೇ.೬.೫೬ ಇರುವುದು. ಒಟ್ಟು ನಿಽಗಳು ರೂ. ೮೬೧.೭೦ ಲಕ್ಷ ಇದೆ. ಇದು ದುಡಿಯುವ ಬಂಡವಾಳಕ್ಕೆ ಶೇ.೧೨.೨೨ ರಷ್ಟು ಇದೆ. ಒಟ್ಟು ಠೇವಣಿ ರೂ. ೪,೩೭೪.೦೪ ಲಕ್ಷ ಇದೆ. ಪ್ರತಿವರ್ಷವೂ ಠೇವಣಿ ಹೆಚ್ಚಳವಾಗಿರುವುದು ಠೇವುದಾರರು…

Read More