Author: editor.udayarashmi@gmail.com

ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶಾಲಾ-ಕಾಲೇಜುಗಳ ನೌಕರರ ಸಂಘ ಮನವಿ ವಿಜಯಪುರ: ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘ (ರಿ) ಅನುದಾನಿತ ಶಾಲಾ ಕಾಲೇಜುಗಳ ನೌಕರರ ಪ್ರಮುಖ ಬೇಡಿಕೆಗಳನ್ನು ಕೂಡಲೇ ಈಡೇರಿಸುವಂತೆ ಒತ್ತಾಯಿಸಿ ವಿಜಯಪುರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಕರ್ನಾಟಕ ಖಾಸಗಿ ಶೈಕ್ಷಣಿಕ ಸಂಸ್ಥೆಗಳ ಸಿಬ್ಬಂದಿಗಳ (ವೇತನ, ನಿವೃತ್ತಿ ವೇತನ ಮತ್ತು ಇತರೆ ಸೌಲಭ್ಯಗಳ ನಿಯಂತ್ರಣ) ವಿಧೇಯಕ ೨೦೧೪ ಕ್ಕೆ ತಿದ್ದುಪಡಿ ತಂದು ಅಥವಾ ರದ್ದುಪಡಿಸಿ ಭವಿಷ್ಯವರ್ತಿಯಾಗಿ ಜಾರಿಗೆ ಬರುವಂತೆ ಕ್ರಮವಹಿಸುವ ಮೂಲಕ ದಿನಾಂಕ: ೦೧-೦೪-೨೦೦೬ರ ಪೂರ್ವದಲ್ಲಿ ನೇಮಕವಾಗಿ ನಂತರ ಅನುದಾನಕ್ಕೆ ಒಳಪಟ್ಟ ನೌಕರರ ಅನುದಾನಕ್ಕೂ ಪೂರ್ವದ ಸೇವೆಯನ್ನು ಕೇವಲ ಪಿಂಚಣಿ ಸೌಲಭ್ಯಕ್ಕೆ ಮಾತ್ರ ಪರಿಗಣಿಸಿ “ಹಳೆಯ ನಿಶ್ಚಿತ ಪಿಂಚಣಿ” ಸೌಲಭ್ಯ ನೀಡುವುದು. ಹಳೆಯ ನಿಶ್ಚಿತ ಪಿಂಚಣಿ ಸೌಲಭ್ಯ (ಓಪಿಎಸ್) ವನ್ನು ಜಾರಿಗೊಳಿಸುವುದು ಸೇರಿದಂತೆ ಹಲವು ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಸಂಘದ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.ಒಂದು ವೇಳೆ ಸೆ.೫ ರ ಶಿಕ್ಷಕರ ದಿನಾಚರಣೆಯ ಒಳಗಾಗಿ…

Read More

ವಿಜಯಪುರ:ನಗರದ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವಿಜಯಪುರ ಹಾಗೂ ಅಲ್ ಹಸ್ನಾತ ಪದವಿ ಪೂರ್ವ ಕಾಲೇಜು ವಿಜಯಪುರ ಸಂಯುಕ್ತ ಆಶ್ರಯದಲ್ಲಿ ನಡೆದ ೨೦೨೪-೨೫ ನೇ ಸಾಲಿನ ವಿಜಯಪುರ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾವಳಿಯನ್ನು ಪ್ರಾಚಾರ್ಯ ಎಲ್ ಆರ್ ಹಳ್ಳದಮನಿ ಉದ್ಘಾಟಿಸಿ ಮಾತನಾಡಿ, ಕ್ರೀಡೆ ಮಕ್ಕಳ ಮನಸ್ಸಿಗೆ ಮುದ ನೀಡುತ್ತದೆ. ವಿದ್ಯಾರ್ಥಿಗಳನ್ನು ದೈಹಿಕ ಹಾಗೂ ಮಾನಸಿಕವಾಗಿ ವಿಶಾಲಗೊಳಿಸುತ್ತದೆ ಎಂದು ಹೇಳಿದರು.ಮಕ್ಕಳ ಮನಸ್ಸು ಕಲಿಕೆಯತ್ತ ಸಾಗಿಸಲು ದೈಹಿಕ ಶಿಕ್ಷಣದ ಅವಶ್ಯಕತೆ ಇದೆ. ಮಕ್ಕಳು ದೈನಂದಿನ ಕೆಲಸ ಕಾರ್ಯಗಳ ಜೊತೆಗೆ ಕ್ರೀಡೆಯಲ್ಲಿ ಭಾಗವಹಿಸಿ ಎಂದು ಅಲ್ ಹಸ್ನಾತ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎ ಎ ಬಿಜಾಪುರ ಹೇಳಿದರು.ಅಲ್ ಹಸ್ನಾತ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಂ ಡಿ ರೂಗಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಈ ಸಂದರ್ಭದಲ್ಲಿ ಉಪಾಧ್ಯಕ್ಷ ಎ ಎ ಶಟಗಾರ, ಉಪನ್ಯಾಸಕರಾದ ಬಿ ಎಸ್ ಗೌರಿ, ಕ್ರೀಡಾ ಸಂಯೋಜಕ ಎಸ್ ಆರ್ ಮುತ್ತಗಿ, ಗಣೇಶ ಗುನ್ನಾಪೂರ, ಪ್ರೌಢಶಾಲೆಯ ಮುಖ್ಯ ಶಿಕ್ಷಕ ಎಸ್ ಎಸ್ ಹರಿಯಾಲ, ಪ್ರಾಥಮಿಕ…

Read More

ವಿಜಯಪುರ: ವಿಜಯಪುರ ಜಿಲ್ಲಾ ಹೂಗಾರ ಸಮಾಜ ಹಾಗೂ ಶ್ರೀ ಕಲ್ಮೇಶ್ವರ ಶೈವ ಗುರವ ಸಂಸ್ಥಾನ ಮಠ ಹಾವಿನಾಳ ಇವರ ಸಹಯೋಗದಲ್ಲಿ ಇತ್ತೀಚೆಗೆ ವೀರಶೈವ ಲಿಂಗಾಯತ ಸಮುದಾಯ ಭವನದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮವು ಅದ್ಧೂರಿಯಾಗಿ ಜರುಗಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜ್ಞಾನ ಯೋಗಾಶ್ರಮದ ನಿಂಗಯ್ಯ ಶ್ರೀಗಳು ಆಗಮಿಸಿದ್ದರು. ಅಧ್ಯಕ್ಷತೆಯನ್ನು ಸಿದ್ದರಾಮಯ್ಯ ಮಠ,ದಿವ್ಯ ಸಾನಿಧ್ಯವನ್ನು ಶರಣಬಸವ ಶರಣರು ಚಿಂಚೋಳಿ, ಉದ್ಘಾಟಕರಾಗಿ ಬಿ ಎಸ್ ಬಿರಾದಾರ, ಸಮಾಜದ ಜಿಲ್ಲಾಧ್ಯಕ್ಷರಾದ ಸಂಗಮೇಶ ಗುರವ ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಹೂಗಾರ ಸಮಾಜದ ೨೦೨೩-೨೪ನೇ ಸಾಲಿನ ಪ್ರತಿಭಾನ್ವಿತ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಸನ್ಮಾನ ಮತ್ತು ಪ್ರತಿಭಾ ಪುರಸ್ಕಾರ ಸೇರಿದಂತೆ ಸಮಾಜದ ಪರವಾಗಿ ಶಿಕ್ಷಣ,ಕ್ರೀಡೆ, ಸಾಮಾಜಿಕ ಸೇವೆ, ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ವಿಜಯಪುರ ಜಿಲ್ಲೆಯ ಎಲ್ಲಾ ತಾಲೂಕು ಅಧ್ಯಕ್ಷರುಗಳು ಸೇರಿದಂತೆ ಸಮಾಜದ ಎಲ್ಲ ಬಾಂಧವರು ಭಾಗವಹಿಸಿದ್ದರು.ಪ್ರಸಾದ( ಸುರೇಶ)ಪೂಜಾರಿ ನಿರೂಪಿಸಿದರು.

Read More

ವಿಜಯಪುರ: ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆಗಳನ್ನು ಹೊರಗೆಳೆದು ವೇದಿಕೆ ಒದಗಿಸಿದಾಗ ಅಗಾಧ ಜ್ಞಾನ ಹೊರಬರುತ್ತದೆ ಎಂದು ರವೀಂದ್ರನಾಥ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ಉಮಾ ಭೋಸಲೆ ಹೇಳಿದರು.ನಗರದ ಗುರುದೇವ ಇಂಟರನ್ಯಾಶನಲ್ ಪ್ರೌಡಶಾಲೆಯಲ್ಲಿ ಹಮ್ಮಿಕೊಂಡ ಗಣಿತ ಹಬ್ಬ ಉದ್ಘಾಟಿಸಿ ಪ್ರಥಮ ಸ್ಥಾನ ಪಡೆದ ಕುಮಾರಿ ಮಿನಾಜ್ ಕಬೂಲ್ ಕೊಕಟನೂರ ಇವಳಿಗೆ ಬಹುಮಾನ ವಿತರಣೆ ಮಾಡಿ ಮಾತನಾಡಿದ ಅವರು, ತಾಂತ್ರಿಕ ಯುಗದಲ್ಲಿ ವಿದ್ಯಾರ್ಥಿಗಳಲ್ಲಿ ಸಾಕಷ್ಟು ಪ್ರತಿಭೆ ಇರುತ್ತದೆ ಅದನ್ನು ಒರೆಗೆ ಹಚ್ಚಿ ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಪ್ರೇರೆಪಿಸಬೇಕು. ಅದನ್ನು ನಮ್ಮ ಶಾಲೆಯ ಶಿಕ್ಷಕರು ಉತ್ತಮ ರೀತಿಯಲ್ಲಿ ಮಾಡುತ್ತಿದ್ದಾರೆ. ಪ್ರತಿ ವರ್ಗದಲ್ಲಿ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವನೆ ಬೆಳೆಸಬೇಕು ಜೀವನ ಮಾರ್ಗ ಕಲಿಸುವತ್ತ ಗಮನ ಹರಿಸಬೇಕೆಂದರು.೧೦ನೇ ವರ್ಗದ ಶಿಕ್ಷಕಿ ತಹಸೀನ್ ದಫೇದಾರ ಮಾತನಾಡಿ,ಮಕ್ಕಳಲ್ಲಿ ಕ್ರೀಯಾಶೀಲತೆಯನ್ನು ಹೆಚ್ಚಿಸಲು ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಅದರಲ್ಲಿ ನಮ್ಮ ಶಾಲೆಯ ೧೦ನೇ ತರಗತಿ ವಿದ್ಯಾರ್ಥಿನಿ ಮಿನಾಜ್ ಕೊಕಟನೂರ ಉತ್ತಮ ಮಾಡಲ್ ಮಾಡಿ ಪ್ರಥಮ ಸ್ಥಾನ ಪಡೆದಿದ್ದಾಳೆ ಎಂದರು.ಸಂಸ್ಥೆಯ ಅಧ್ಯಕ್ಷ ಡಾ. ರವೀಂದ್ರ ಭೋಸಲೆ ಅಧ್ಯಕ್ಷೆತೆ ವಹಿಸಿದ್ದರು.…

Read More

ಇಂಡಿ: ಓದುವ ಹವ್ಯಾಸವು ಮಕ್ಕಳಲ್ಲಿ ಶಬ್ದ ಭಂಡಾರ, ಗ್ರಹಿಕಾ ಸಾಮರ್ಥ್ಯ, ಏಕಾಗ್ರತೆಯ ಶಕ್ತಿ, ಭಾಷಾ ಕೌಶಲ,ವಿಮರ್ಶಾತ್ಮಕ ಚಿಂತನೆ, ತಾರ್ಕಿಕತೆ, ವಿಶ್ಲೇಷಣಾ ಸಾಮರ್ಥ್ಯ ಕಲ್ಪನಾ ಶಕ್ತಿ, ಸೃಜನಶೀಲತೆಯನ್ನು ಬೆಳೆಸುವಲ್ಲಿ ಅತ್ಯಂತ ಪ್ರಮುಖ ಸಾಧನವಾಗಿದೆ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ಅವರು ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ‘ಓದುವ ಹವ್ಯಾಸ-ಜ್ಞಾನದ ವಿಕಾಸ’ ಕಾರ್ಯಕ್ರಮವನ್ನು ಉದ್ಧೇಶಿಸಿ ಮಾತನಾಡಿದರು.ಓದುವುದು ಜ್ಞಾನದ ಪ್ರಮುಖ ಬಾಗಿಲಾಗಿದೆ. ಈಹವ್ಯಾಸದಿಂದ ಮನಸ್ಸು ಉಲ್ಲಾಸಗೊಳ್ಳುವ ಜತೆಗೆ ನಮ್ಮಲ್ಲಿ ಜ್ಞಾನ ಹಾಗೂ ಕೌಶಲವನ್ನು ಹೆಚ್ಚಿಸುವುದರೊಂದಿಗೆ ನಮ್ಮ ಭವಿಷ್ಯ ನಿರ್ಮಾಣಕ್ಕೂ ದಾರಿದೀಪವಾಗುತ್ತದೆ. ಕಲಿಕೆ ಮತ್ತು ಓದು ಬದುಕಿನ ಅವಿಭಾಜ್ಯ ಅಂಗ ಎಂಬ ರೀತಿಯಲ್ಲಿ ಓದುವ ಅಭ್ಯಾಸವನ್ನು ಮಕ್ಕಳಲ್ಲಿ ರೂಢಿಸಿಕೊಳ್ಳಬೇಕಾಗಿದೆ ಎಂದು ಹೇಳಿದರು.ಶಿಕ್ಷಕಿ ಎಸ್ ಪಿ ಪೂಜಾರಿ ಮಾತನಾಡಿ, ವಿದ್ಯಾಭ್ಯಾಸವು ಜೀವನದ ಅತ್ಯಗತ್ಯವಾದ ಸಂಗತಿ. ಇದು ಬದುಕಿನಲ್ಲಿ ಉತ್ತಮ ಬೆಳವಣಿಗೆ ಹಾಗೂ ಭವಿಷ್ಯವನ್ನು ಸೃಷ್ಟಿಸುವುದು.ಅದರಲ್ಲೂ ಮಕ್ಕಳಲ್ಲಿ ಓದುವ ಹವ್ಯಾಸವನ್ನು ಹೆಚ್ಚು ಬೆಳೆಸುವುದು ಅವಶ್ಯಕವಾಗಿದ್ದು, ಕಲಿಕೆಯೊಂದಿಗೆ ಓದು ಕೂಡ ಜೊತೆಯಲ್ಲಿ ಸಾಗಬೇಕು ಎಂದು ಹೇಳಿದರು.ಮುಖ್ಯ ಶಿಕ್ಷಕ ಎಸ್ ಎಸ್…

Read More

ವಿಜಯಪುರ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ವಿಷಯವಾರು ರಸಪ್ರಶ್ನೆ ಸ್ಪರ್ಧೆ ಸೇರಿದಂತೆ ಪಠ್ಯ ಚಟುವಟಿಕೆಗಳಿಗೆ ಪೂರಕವಾಗುವ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಜ್ಞಾನದ ಮಟ್ಟ ವೃದ್ಧಿಸುತ್ತದೆ ಎಂದು ಬಂಜಾರಾ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಇ ಡಿ ಲಮಾಣಿ ಹೇಳಿದರು.ಶನಿವಾರದಂದು ಬಂಜಾರಾ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ‘ರಸಪ್ರಶ್ನೆ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು. ಪ್ರತಿ ಶನಿವಾರಕ್ಕೊಮ್ಮೆ ಇಂಥ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಹಾಗೂ ಹೆಚ್ಚಿನ ಫಲಿತಾಂಶವನ್ನು ಇದರಿಂದ ನಿರೀಕ್ಷಿಸಬಹುದು. ಶಿಕ್ಷಕರು ಪ್ರತಿಯೊಂದು ಮಗುವಿನ ವೈಯಕ್ತಿಕವಾಗಿ ಜ್ಞಾನದ ಮಟ್ಟವನ್ನು ಅರಿತು ಬೋಧನಾ ಕ್ರಮದಲ್ಲಿ ಬದಲಾವಣೆ ಮಾಡಿಕೊಳ್ಳಬೇಕು. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳು, ವಿಷಯವಾರು ರಸಪ್ರಶ್ನೆ ಕಾರ್ಯಕ್ರಮಗಳು, ಮುಂತಾದ ಪಠ್ಯೇತರ ಚಟುವಟಿಕೆಗಳನ್ನು ಏರ್ಪಡಿಸುವ ಮೂಲಕ ಮಕ್ಕಳು ಭಯ ಭೀತರಾಗದೆ ಸಂತೋಷವಾಗಿ ಪರೀಕ್ಷೆಯಲ್ಲಿ ಪಾಲ್ಗೊಳ್ಳುವಂತೆ ಮಾಡಲಾಗುತ್ತಿದೆ ಎಂದರು.ಎಸ್ ವಿ ದೇಶಪಾಂಡೆ ಮಾತನಾಡಿ, ಶಾಲೆಯ ಒಟ್ಟು ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ವಿಭಾಗಿಸಿ, ಎಲ್ಲಾ ಶಿಕ್ಷಕರಿಗೂ ಇಂತಿಷ್ಟು ವಿದ್ಯಾರ್ಥಿಗಳೆಂದು ದತ್ತು ನೀಡುವ ವ್ಯವಸ್ಥೆ ಜಾರಿಗೊಳಿಸಿ, ಆಯಾ ಶಿಕ್ಷಕರು…

Read More

ಇಂಡಿ: ಕೊಲ್ಕತ್ತಾದ ಆರ್ ಜಿ ಕರ್ ವೈದ್ಯಕೀಯ ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ಸ್ನಾತಕೋತ್ತರ ತರಬೇತಿ ವೈದ್ಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಕೊಲೆ ಪ್ರಕರಣ ಖಂಡಿಸಿ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಗ್ರೇಡ್ 2 ತಹಶೀಲ್ದಾರ್ ಧನಪಾಲಶೆಟ್ಟಿ ದೇವೂರ ಅವರಿಗೆ ಎಬಿವಿಪಿ ಕಾರ್ಯಕರ್ತರು ಶನಿವಾರ ಮನವಿ ಸಲ್ಲಿಸಿದರು.ಪ್ರತಿಭಟನಾಕಾರರು ಪ್ರಮುಖ ಬೀದಿಯಲ್ಲಿ ಪ್ರತಿಭಟಿಸಿ ತದನಂತರ, ತಾಲೂಕು ಆಡಳಿತ ಸೌಧಕ್ಕೆ ಆಗಮಿಸಿ ನಿರ್ಲಕ್ಷ್ಯ ವಹಿಸಿರುವ ಸರಕಾರದ ವಿರುದ್ಧ ದಿಕ್ಕಾರ ಕೂಗಿದರು.ಈ ಸಂದರ್ಭದಲ್ಲಿ ಎಬಿವಿಪಿ ನಗರ ಕಾರ್ಯದರ್ಶಿ ಸಚಿನ ದಾನಗೊಂಡ ಮಾತನಾಡಿ, ವೈದ್ಯೋ ನಾರಾಯಣೋ ಹರಿಃ ಎಂಬ ಮಾತಿನಂತೆ ವೈದ್ಯನಾದವನು ದೇವರಿಗೆ ಸಮನಾದವನು ಎಂಬ ಮಾತಿದೆ. ಆದರೆ ಪಶ್ಚಿಮ ಬಂಗಾಳದ ಕೊಲ್ಕತ್ತಾದ ಆರ್ ಜಿ ಕರ್ ವೈದ್ಯಕೀಯ ಕಾಲೇಜಿನ ಹಾಲ್ ನಲ್ಲಿ ಸ್ನಾತಕೋತ್ತರ ತರಬೇತಿ ವೈದ್ಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಕೊಲೆ ಪ್ರಕರಣ ಮಾನವೀಯ ಸಮಾಜ ತಲೆತಗ್ಗಿಸುವಂತೆ ಆಗಿದೆ. ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ಅತ್ಯಾಚಾರದಂತಹ ಘಟನೆ ನಡೆಯಲು ಮೂಲ ಕಾರಣ ಅಲ್ಲಿನ…

Read More

ಮುದ್ದೇಬಿಹಾಳ: ದೇಶದಾದ್ಯಂತ ಆಕ್ರೋಶಕ್ಕೆ ಕಾರಣವಾಗಿರುವ ಪಶ್ಚಿಮ ಬಂಗಾಳದ ಮಹಿಳಾ ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಕೊಲೆ ಖಂಡಿಸಿ ಶನಿವಾರ ಕರ್ನಾಟಕ ರಾಜ್ಯ ವೈದ್ಯಾಧಿಕಾರಿಗಳ ಸಂಘ ಹಾಗೂ ಭಾರತೀಯ ವೈದ್ಯಾಧಿಕಾರಿಗಳ ಸಂಘದ ವತಿಯಿಂದ ಇಲ್ಲಿನ ಸರ್ಕಾರಿ ಆಸ್ಪತ್ರೆಯ ಒಂದು ದಿನದ ಹೊರ ರೋಗಿಗಳ ಸೇವೆ (ಓಪಿಡಿ) ಸ್ಥಗಿತಗೊಳಿಸಿ ಆಕ್ರೋಶ ಹೊರಹಾಕಿದ್ದಾರೆ.ಅಗತ್ಯ ತುರ್ತು ಸೇವೆಗಳನ್ನು ಒದಗಿಸುವ ಮೂಲಕ ಇನ್ನುಳಿದ ಸೇವೆಗಳನ್ನು ಸ್ಥಗಿತಗೊಳಿಸಿ ಪ್ರತಿಭಟನೆಗೆ ಎಲ್ಲ ವೈದ್ಯಾಧಿಕಾರಿಗಳು ಹಾಗೂ ಆಸ್ಪತ್ರೆಯಲ್ಲಿನ ಎಲ್ಲ ಸಿಬ್ಬಂದಿ ವರ್ಗದವರು ಸಾಥ್ ನೀಡಿದರು. ಸಾರ್ವಜನಿಕರಿಗೆ ಅಗತ್ಯ ಸೇವೆಗೆ ಯಾವುದೇ ತೊಂದರೆ ಆಗದಂತೆ ಮುನ್ನೆಚ್ಚರಿಕೆ ವಹಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದರು.ಈ ವೇಳೆ ತಾಲೂಕು ಆಡಳಿತ ವೈದ್ಯಾಧಿಕಾರಿ ಅನೀಲಕುಮಾರ ಶೇಗುಣಸಿ ಮಾತನಾಡಿ, ಘಟನೆಯನ್ನು ಅತ್ಯಂತ ಗಂಭೀರವಾಗಿ ಖಂಡಿಸುತ್ತೇವೆ. ಸಾರ್ವಜನಿಕರ ತಿಳಿವಳಿಕೆಗೋಸ್ಕರ ಓಪಿಡಿಯನ್ನು ಸ್ಥಗಿತಗೊಳಿಸಿ ಪ್ರತಿಭಟಿಸಲಾಗುತ್ತಿದೆ. ದೇಶದಲ್ಲಿ ವೈದ್ಯರಿಗೆ ಯಾವುದೇ ರಕ್ಷಣೆ ಇಲ್ಲದಂತಾಗಿದೆ. ಕಠಿಣ ಕಾನೂನುಗಳು ಜಾರಿಗೆ ಬರಬೇಕಾಗಿದೆ. ತಪ್ಪಿತಸ್ಥರಿಗೆ ಅತ್ಯಂತ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದರು.ಡಾ. ಹಸನಡೊಂಗ್ರಿ ಬೀಳಗಿ ಮಾತನಾಡಿ, ತುರ್ತು ಸೇವೆಗಳನ್ನು ಒದಗಿಸುವ…

Read More

ತಾಳಿಕೋಟಿ: ಪಶ್ಚಿಮ ಬಂಗಾಳದ ಕೊಲ್ಕತ್ತಾದ ಆರ್.ಜಿ.ಕರ್ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಕರ್ತವ್ಯ ನಿರತ ಯುವ ವೈದ್ಯೆ ಮೇಲೆ ನಡೆದ ಅತ್ಯಾಚಾರ ಮತ್ತು ಅಮಾನುಷ ಹತ್ಯೆಯನ್ನು ಖಂಡಿಸಿ ಪಟ್ಟಣದ ವೈದ್ಯರ ಸಂಘ,ಭಾರತೀಯ ವೈದ್ಯರ ಸಂಘ ತಾಳಿಕೋಟಿ,ಆಯುಷ್ ಫೆಡರೇಷನ್ ಹಾಗೂ ಕೆಜಿಎಂಓಎದ ಪದಾಧಿಕಾರಿಗಳು ಐಎಂಎ ಕರೆದ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ ಶನಿವಾರ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಪಟ್ಟಣದ ಶಿವಾಜಿ ಸರ್ಕಲ್ ದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ವೈದ್ಯರು ಮಹಾರಾಣಾ ಪ್ರತಾಪ್ ಸಿಂಹ ಸರ್ಕಲ್ ಬಸ್ ನಿಲ್ದಾಣದ ಮಾರ್ಗವಾಗಿ ಸಂಚರಿಸಿ ತಹಶೀಲ್ದಾರ್ ಕಾರ್ಯಾಲಯಕ್ಕೆ ತೆರಳಿ‌ ತಹಶೀಲ್ದಾರ್ ಕೀರ್ತಿ ಚಾಲಕ್ ಅವರ ಮೂಲಕ‌ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ತಾಳಿಕೋಟಿ ವೈದ್ಯಕೀಯ ಸಂಘದ ಅಧ್ಯಕ್ಷ ಡಾ.ಆರ್.ಪಿ.ಅಗರವಾಲ ಮಾತನಾಡಿ, ಧರ್ಮಶಾಸ್ತ್ರಗಳು ವೈದ್ಯರನ್ನು ನಾರಾಯಣೋ ಹರಿ ಎಂದು ಹೇಳುತ್ತವೆ. ಆದರೆ ದೇವರ ಸಮಾನರಾದ ವೈದ್ಯರಿಗೆ ಇಲ್ಲಿ ಮನುಷ್ಯರೆಂದು ಭಾವಿಸುತ್ತಿಲ್ಲ. ಅಷ್ಟು ಕೆಟ್ಟದಾಗಿ ಅವರೊಂದಿಗೆ ವರ್ತಿಸಲಾಗುತ್ತಿದೆ. ಕಳೆದ ಕೆಲವು ತಿಂಗಳುಗಳ ಹಿಂದೆ ಪಟ್ಟಣದಲ್ಲಿ ವೈದ್ಯರ ಮೇಲೆ ಹಲ್ಲೆಯ ಘಟನೆ…

Read More

ಮುದ್ದೇಬಿಹಾಳ: ಅ.೨೦ ರಿಂದ ೨೨ ರವರೆಗೆ ಪಟ್ಟಣದ ಮಹಾಂತೇಶ ನಗರದಲ್ಲಿರುವ ಶ್ರೀ ಗುರು ರಾಘವೇಂದ್ರ ಮಹಾಸ್ವಾಮಿಗಳ ಬೃಂದಾವನ ಸನ್ನಿಧಿಯಲ್ಲಿ ಗುರು ರಾಯರ ೩೫೩ನೇ ಆರಾಧನಾ ಮಹೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.ಅ.೨೦ ರಂದು ಬೆಳಿಗ್ಗೆ ೬ಗಂಟೆಗೆ ಸುಪ್ರಭಾತ, ೭ಕ್ಕೆ ಗೋ-ಪೂಜೆ, ಧ್ವಜಾರೋಹಣ, ೮ಕ್ಕೆ ವಾಯುಸ್ತುತಿ, ಅಷ್ಟೋತ್ತರ, ಪಂಚಾಮೃತ ಅಭಿಷೇಕ ಅಲಂಕಾರ, ೧೦ಕ್ಕೆ ರುದ್ರಾಭಿಷೇಕ, ೧೧ಕ್ಕೆ ಪ್ರವಚನ, ೧೨ಕ್ಕೆ ಸುಮಂಗಲೆಯರಿಂದ ಶ್ರೀ ಲಕ್ಷ್ಮೀ ಶೋಬಾನೆಯೊಂದಿಗೆ ಕುಂಕುಮಾರ್ಚನೆ, ಮಧ್ಯಾಹ್ನ ೧ರಿಂದ೩ ರವರೆಗೆ ತೀರ್ಥ ಪ್ರಸಾದ, ಸಂಜೆ ೭-೩೦ ಕ್ಕೆ ಶಿರಸಿಯ ಗಾಯತ್ರಿ ಭಟ್ ಇವರಿಂದ ಕೀರ್ತನೆ, ೧೦ಕ್ಕೆ ಮಹಾ ಮಂಗಳಾರುತಿ.ಅ.೨೧ ರಂದು ೬ಗಂಟೆಗೆ ಸುಪ್ರಭಾತ, ೮ಕ್ಕೆ ವಾಯುಸ್ತುತಿ, ಅಷ್ಟೋತ್ತರ, ಪಂಚಾಮೃತ ಅಭಿಷೇಕ ಅಲಂಕಾರ, ೧೦ಕ್ಕೆ ಮನ್ಯುಸೂಕ್ತ ಹೋಮ, ೧೧ಕ್ಕೆ ಲಕ್ಷ ಪುಷ್ಪಾರ್ಚನೆ, ಮದ್ಯಾಹ್ನ ೧ರಿಂದ೩ ರವರೆಗೆ ತೀರ್ಥ ಪ್ರಸಾದ, ಸಂಜೆ ೭-೩೦ ಕ್ಕೆ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕ್ವಿಜ್ ಕಾರ್ಯಕ್ರಮ, ೧೦ಕ್ಕೆ ಮಹಾ ಮಂಗಳಾರುತಿ.ಅ.೨೨ ರಂದು ೬ಗಂಟೆಗೆ ಸುಪ್ರಭಾತ, ೮ಕ್ಕೆ ವಾಯುಸ್ತುತಿ, ಅಷ್ಟೋತ್ತರ, ಪಂಚಾಮೃತ…

Read More