Subscribe to Updates
Get the latest creative news from FooBar about art, design and business.
Author: editor.udayarashmi@gmail.com
Udayarashmi kannada daily newspaper
70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ | ಕಾಂತಾರ ಸಿನಿಮಾ ಅಭಿನಯಕ್ಕಾಗಿ ರಿಷಭ್ ಶೆಟ್ಟಿಗೆ ಪ್ರಶಸ್ತಿ | KGF-2 ಗೆ ಕನ್ನಡದ ಅತ್ಯುತ್ತಮ ಚಿತ್ರ ಪ್ರಶಸ್ತಿ ನವದೆಹಲಿ: 70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ವಿಜೇತರನ್ನು ಶುಕ್ರವಾರ ಪ್ರಕಟಿಸಲಾಗಿದೆ. ಕನ್ನಡದ ಕಾಂತಾರ ಸಿನಿಮಾದಲ್ಲಿ ಅತ್ಯುತ್ತಮ ಅಭಿನಯಕ್ಕಾಗಿ ನಟ ರಿಷಭ್ ಶೆಟ್ಟಿ ಅತ್ಯುತ್ತಮ ನಟ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಅತ್ಯುತ್ತಮ ಜನಪ್ರಿಯ ಹಾಗೂ ಮನರಂಜನಾ ಚಿತ್ರವಾಗಿ ಎರಡು ವಿಭಾಗದಲ್ಲಿ ‘ಕಾಂತಾರ’ ಪ್ರಶಸ್ತಿ ಬಾಚಿಕೊಂಡಿದೆ.2022ನೇ ಸಾಲಿನಲ್ಲಿ ಚಿತ್ರರಂಗದಲ್ಲಿ ಅತ್ಯುತ್ತಮ ಸಾಧನೆಗೈದ ಚಿತ್ರಗಳ ಪಟ್ಟಿಯನ್ನು ಕೇಂದ್ರ ವಾರ್ತಾ ಪ್ರಸಾರ ಮತ್ತು ಮಾಹಿತಿ ಸಚಿವಾಲಯ ಘೋಷಿಸಿದೆ. ಅತ್ಯುತ್ತಮ ನಟರ ರೇಸ್ ನಲ್ಲಿ ರಿಷಬ್ ಶೆಟ್ಟಿ ಹಾಗೂ ಮಲೆಯಾಳಂ ನಟ ಮಮ್ಮುಟ್ಟಿ ನಡುವೆ ಭಾರಿ ಸ್ಪರ್ಧೆ ಎರ್ಪಟ್ಟಿತ್ತು. ಕೊನೆಗೆ ರಿಷಭ್ ಶೆಟ್ಟಿಗೆ ಪ್ರಶಸ್ತಿ ಒಲಿದುಬಂದಿದೆ.ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್-2 ಅತ್ಯುತ್ತಮ ಕನ್ನಡ ಚಿತ್ರವಾಗಿ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದೆ. ಸಾಹಸ ನಿರ್ದೇಶನ ವಿಭಾಗದಲ್ಲೂ ಕೆಜಿಎಫ್-2 ಪ್ರಶಸ್ತಿ ಗೆದ್ದಿದೆ.ಜನವರಿ 1, 2022 ರಿಂದ ಡಿಸೆಂಬರ್…
ಆಲಮಟ್ಟಿ: ನಮ್ಮ ದೇಶದ ಇತಿಹಾಸ, ಪರಂಪರೆ, ಸಂಸ್ಕೃತಿಗಳು ದಿವ್ಯಾನು ದಿವ್ಯತೆಯುಳ್ಳ ಭವ್ಯಾನುಭೂತಿಯ ಪರದಿಯಲ್ಲಿ ಕೂಡಿವೆ. ಅವು ಅನ್ಯ ದೇಶಗಳ ಮೇಲೆ ಪ್ರಭಾವ ಬೀರಿವೆ. ವಿವಿಧೆತೆಯಲ್ಲಿ ಏಕತೆ ಸಾಧಿಸಿ ಜಗದೆಡೆಗಳಲ್ಲಿ ಭಾರತ ಮಿನುಗುತ್ತಿದೆ ಎಂದು ಮುಖ್ಯೋಪಾಧ್ಯಾಯ ಜಿ.ಎಂ.ಕೋಟ್ಯಾಳ ಅಭಿಪ್ರಾಯಿಸಿದರು. ಗುರುವಾರ ಸ್ಥಳೀಯ ಎಸ್.ವ್ಹಿ. ವ್ಹಿ. ಸಂಸ್ಥೆಯ ರಾವಬಹದ್ದೂರ ಡಾ,ಫ.ಗು.ಹಳಕಟ್ಟಿ (ಆರ್.ಬಿ.ಪಿ.ಜಿ) ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ೭೮ ನೇ ಸ್ವಾತಂತ್ರೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.ಶಿಕ್ಷಕ ಎನ್.ಎಸ್.ಬಿರಾದಾರ, ದೈಹಿಕ ಶಿಕ್ಷಣ ಶಿಕ್ಷಕ ಎಸ್.ಎಚ್.ನಾಗಣಿ ಮಾತನಾಡಿದರು. ಅತಿಥೇಯ ಶಾಲೆ ಹಾಗೂ ಅಂಗಸಂಸ್ಥೆಯ ಎಂಎಚ್ಎಂ ಆಂಗ್ಲ ಮಾದ್ಯಮ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳು ಡಿಸ್ ಪ್ಲೇ ಚಟುವಟಿಕೆಗಳಲ್ಲಿ ಹಲ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಿದರು. ಪ್ರೌಢಶಾಲಾ ಮಕ್ಕಳ ಶಿಸ್ತು ಬದ್ಧ ಪಥಸಂಚಲನ ಆಕರ್ಷಿಸಿತು.ಮುಖ್ಯ ಗುರು ಗೌರವ ವಂದನೆ ಸ್ವೀಕರಿಸಿದರು. ದೇಶಭಕ್ತಿ ಗೀತ ಗಾಯನಗಳಿಗೆ ಎಂಎಚ್ಎಂ ಆಂಗ್ಲ ಶಾಲೆ ಪುಟಾಣಿ ಬಾಲೆಯರು, ಹಳಕಟ್ಟಿ ಹೈಸ್ಕೂಲ್ ವಿದ್ಯಾರ್ಥಿನಿಯರು ನೃತ್ಯ ಮಾಡಿ ಖುಷಿಪಟ್ಟರು. ಚುಟುಕು ಭಾಷಣ,…
– ಚೇತನ ಶಿವಶಿಂಪಿಮುದ್ದೇಬಿಹಾಳ: ವಿದ್ಯಾರ್ಥಿಗಳಿಬ್ಬರಿಗೆ ೭೮ನೇ ಸ್ವಾತಂತ್ರೋತ್ಸವದ ಧ್ವಜಾರೋಹಣವನ್ನು ನೆರವೇರಿಸುವ ಸೌಭಾಗ್ಯ ಲಭಿಸಿದೆ.ಪಟ್ಟಣದ ಹುಡ್ಕೋ ಬಡಾವಣೆಯ ಶಿರವಾಳ ಲೇಔಟ್ ನಲ್ಲಿರುವ ವೀರಭದ್ರೇಶ್ವರ ಶೈಕ್ಷಣಿಕ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ವಿದ್ಯಾ ಭಾರತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಧ್ವಜಾರೋಹಣ ನೆರವೇರಿಸುವ ಸೌಭಾಗ್ಯ ಕಲ್ಪಿಸಿಕೊಡಲಾಗಿದೆ.ವಿಧ್ಯಾರ್ಥಿಗಳಾದ ಅಕುಲ ನಾಟೆಕಾರ ಮತ್ತು ಶರತ ಹಡಪದ ಧ್ವಜಾರೋಹಣ ನೆರವೇರಿಸಿದ ಭಾಗ್ಯಶಾಲಿ ವಿದ್ಯಾರ್ಥಿಗಳು.ಕಳೆದ ಮೂರು ವರ್ಷಗಳಿಂದ ವಲಯ ಮಟ್ಟದ ಖೋಖೋ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದ ಕಾರಣ ಈ ಅವಕಾಶ ಕಲ್ಪಿಸಿರುವದಾಗಿ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಎನ್.ಎಸ್.ಹಿರೇಮಠ ತಿಳಿಸಿದ್ದಾರೆ.ಅದೆಷ್ಟೋ ದೇಶಪ್ರೇಮಿಗಳು ತಮ್ಮ ಜೀವಿತಕಾಲದಲ್ಲಿ ಒಮ್ಮೆಯಾದರೂ ಧ್ವಜಾರೋಹಣವನ್ನು ನೆರವೇರಿಸಬೇಕು ಎಂದುಕೊಂಡಿದ್ದರೂ ಲಭಿಸದ ಭಾಗ್ಯ ವಿದ್ಯಾರ್ಥಿಗಳಿಗೆ ಲಭಿಸಿದ್ದು ಹೆಮ್ಮೆಯ ವಿಷಯ.
ಸಿಂದಗಿ: ಪಟ್ಟಣದ ವಿರಕ್ತಮಠದ ಲಿಂ.ಸಿದ್ದಲಿಂಗ ಮಹಾಸ್ವಾಮಿಗಳ ೩ನೇ ಪುಣ್ಯಸ್ಮರಣೆ ಅಂಗವಾಗಿ ಅವರ ಕರ್ತೃ ಗದ್ದುಗೆಗೆ ಮಹಾ ಅಭಿಷೇಕ ಪೂಜಾ ಕಾರ್ಯಕ್ರಮವನ್ನು ಮಾಡಲಾಯಿತು.ಮಹಾ ಅಭಿಷೇಕ ನೇರವರಿಸಿ ಮಾತನಾಡಿದ ಗುರುರಾಜ ಮಠ, ಶ್ರೀಗಳು ಮಠವನ್ನಷ್ಟೇ ಅಗಲಿಲ್ಲ. ಇಡೀ ಸಿಂದಗಿ ಜನರನ್ನು ಅಗಲಿದ್ದಾರೆ. ದೈಹಿಕವಾಗಿ ಅವರು ನಮ್ಮ ಜತೆ ಇಲ್ಲವಾದರೂ ಮಾನಸಿಕವಾಗಿ ನಮ್ಮೊಡನೆ ಇದ್ದಾರೆ. ಶ್ರೀಗಳು ಹಾಕಿ ಕೊಟ್ಟ ದಾರಿಯಲ್ಲಿ ನಾವು ನಡೆಯುತ್ತಿದ್ದೇವೆ. ಚಿಕ್ಕ ಮಕ್ಕಳಿಂದ ಹಿಡಿದು ಹಿರಿಯ ನಾಗರಿಕರಿಗೆ ಅವರ ತಾಯತ ಪ್ರಸಾದದ ಪವಾಡ ಗೊತ್ತಿತ್ತು ಎಂದು ಹೇಳಿದರು.
ಸಿಂದಗಿ: ಯೋಗ ಮಾಡುವುದರ ಉದ್ದೇಶ ಆರೋಗ್ಯ ಪಡೆಯಬೇಕೆಂಬುದಲ್ಲ ಈ ಜೀವಿತ ಶರೀರ ಸಮಾಧಿಯನ್ನು ತಲುಪಬೇಕೆಂಬುವುದು. ಸಮಾಧಿ ತಲುಪುವ ಯೋಗ ನಾವು ಮಾಡಿದರೆ ಆರೋಗ್ಯ ತನ್ನಿಂತಾನೆ ಬರುತ್ತದೆ ಎಂದು ಸಾರಂಗಮಠದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಹೇಳಿದರು.ಅವರು ಪಟ್ಟಣದ ಎಚ್ಜಿ ಕಾಲೇಜಿನ ಆವರಣದಲ್ಲಿ ಯೋಗೋತ್ಸವ ಸಮಿತಿ ವತಿಯಿಂದ ನಿರಂತರ ೨೧ದಿನಗಳ ಕಾಲ ಹಮ್ಮಿಕೊಂಡಿರುವ ಯೋಗ, ಧ್ಯಾನ ಶಿಬಿರದ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಪುರಾತನ ಕಾಲದಲ್ಲಿ ಋಷಿ ಮುನಿಗಳ ದೀರ್ಘಕಾಲದ ಆರೋಗ್ಯದ ಬದುಕಿನ ಗುಟ್ಟೆಂದರೆ ಅದು ಯೋಗ ಸಾಧನೆ. ಪ್ರಸ್ತುತ ದಿನಗಳಲ್ಲಿ ಯುವ ಜನತೆ ದೈಹಿಕ ಚಟುವಟಿಕೆಗಳಿಗೆ ಪೂರಕವಾದ ಆಟ ಪಾಠಗಳಿಲ್ಲದ ಆಲಸ್ಯಮಯ ಜೀವನಶೈಲಿ ಹಾಗೂ ಅಹಿತಕರ, ಇತಿಮಿತಿ ಇಲ್ಲದ ಆಹಾರ ಶೈಲಿಯೂ ಆರೋಗ್ಯಕ್ಕೆ ಮಾರಕವಾಗುತ್ತಿದೆ. ಇದನ್ನು ತಪ್ಪಿಸಲು ದಿನನಿತ್ಯ ಯೋಗ ಸಾಧನೆ ಮಾಡಬೇಕು ಎಂದ ಅವರು ಶಾಸಕ ಮನಗೂಳಿ ಹಾಗೂ ಯೋಗೋತ್ಸವ ಸಮಿತಿಯ ಸಂಗಡಿಗರು ಹಮ್ಮಿಕೊಂಡಿರುವ ಈ ಕಾರ್ಯ ಶ್ಲಾಘನೀಯ ಎಂದರು.ಈ ವೇಳೆ ಶಾಸಕ ಅಶೋಕ ಮನಗೂಳಿ ಮಾತನಾಡಿ, ಆಧುನಿಕ ಒತ್ತಡದ ಜೀವನದಲ್ಲಿ…
ವಿಜಯಪುರ: ದೂಳಿನಿಂದ ಮುಕ್ತವಾದ ನಗರ ವಿಜಯಪುರ ನಗರ ಎಂಬುವುದು ಹೆಮ್ಮೆಯ ವಿಷಯ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.ನಗರದ ವಾರ್ಡ ನಂ.೩೫ ರ ವ್ಯಾಪ್ತಿಯ ಮಹಾತ್ಮ ಗಾಂಧಿ ಕಾಲೊನಿಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಿಂದ ಮಂಜೂರಾದ ರೂ.೪೮೨.೯೦ ಲಕ್ಷ ಮೊತ್ತದಲ್ಲಿ ನೂತನವಾಗಿ ನಿರ್ಮಾಣ ಮಾಡಲಾದ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ವೃತ್ತಿಪರ ಬಾಲಕಿಯರ ವಸತಿ ನಿಲಯ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಅಧಿಕಾರಿಗಳು, ಗುತ್ತಿಗೆದಾರರು ಹಾಗೂ ಜನರ ಸಹಕಾರದಿಂದ ವಿಜಯಪುರ ನಗರ ನಿರೀಕ್ಷೆ ಮೀರಿ ಅಭಿವೃದ್ಧಿ ಕಂಡಿದ್ದು, ದೂಳಿನಿಂದ ಮುಕ್ತವಾಗಿ, ದೇಶದಲ್ಲಿ ಒಳ್ಳೆಯ ಗಾಳಿ ಬಿಸುವ ನಗರಗಳ ಪಟ್ಟಿಯಲ್ಲಿ ೬ನೇ ಸ್ಥಾನದಲ್ಲಿರುವುದೇ ಸಾಕ್ಷಿ ಎಂದರು.ಬಡ ಮಕ್ಕಳ ಅನುಕೂಲಕ್ಕಾಗಿ ಸುಮಾರು ಸುಮಾರು ರೂ. ೫ ಕೋಟಿ ಖರ್ಚು ಮಾಡಿ, ಅತ್ಯುತ್ತಮವಾದ ವಸತಿ ನಿಲಯ ನಿರ್ಮಾಣ ಮಾಡಲಾಗಿದೆ. ಇದು ನಿಮ್ಮ ಆಸ್ತಿಯಾಗಿದ್ದು, ಹಾಳು ಮಾಡದೆ ನಿಮ್ಮ ಮನೆಯಷ್ಟೇ ಸರಿಯಾಗಿ ಸ್ವಚ್ಛತೆಯೊಂದಿಗೆ ವಾಸ ಮಾಡಬೇಕು. ನೀವು ಹೋದ ಮೇಲೆ ಬೇರೆ ಬಡ ಮಕ್ಕಳಿಗೂ…
ವಿಜಯಪುರ: ಸಂತ ಮಹಾಂತರ ಬದುಕು ಉರಿಯುವ ಕರ್ಪುರದಂತಾಗಬೇಕು. ಮಠಾಧಿಪತಿಗಳಿಗೆ ಮನೋನಿಗ್ರಹ ಮೂಲವಾಗಬೇಕು. ಜಪ ತಪ ಮೌನ ಅನುಷ್ಠಾನಗಳು ಮನುಷ್ಯನನ್ನು ದೈವತ್ವಕ್ಕೇರಿಸುತ್ತವೆ. ಆಗ ಅಧ್ಯಾತ್ಮದ ಹಾದಿ ಸುಗಮವಾಗುತ್ತದೆ ಎಂದು ಗುಣದಾಳ ಹಿರೇಮಠದ ಪೂಜ್ಯ ಡಾ ವಿವೇಕಾನಂದ ದೇವರು ಅಭಿಪ್ರಾಯಪಟ್ಟರು.ಬಬಲೇಶ್ವರ ತಾಲೂಕಿನ ಹರಳಯ್ಯನಗುಂಡ ಕ್ಷೇತ್ರದಲ್ಲಿ ಚಿಕ್ಕಗಲಗಲಿಯ ಸಾಯಿಬಾಬಾ ಆಶ್ರಮದ ಪೀಠಾಧಿಪತಿ ಶರಣ ಚಮನಸಾಬ ಬಾಬಾ ಕೈಕೊಂಡ ಮೌನ ಅನುಷ್ಠಾನ ಮುಕ್ತಾಯ ಸಮಾರಂಭದಲ್ಲಿ ಮಂತ್ರಘೋಷ ನೆರವೇರಿಸಿ ಮಾತನಾಡುತ್ತಾ , ಅನುಷ್ಠಾನಕ್ಕೆ ದಿವ್ಯ ಶಕ್ತಿ ಇದೆ. ಕಠಿಣ ಪರಿಶ್ರಮಕ್ಕೆ ಕರ್ತೃತ್ವ ಶಕ್ತಿ ಪ್ರಾಪ್ತಿಯಾಗುತ್ತದೆ. ಈ ಶಕ್ತಿ ಸಮಾಜಕ್ಕೆ ವಿನಿಯೋಗವಾಗಲಿ ಎಂದರು.ಸಾನಿಧ್ಯ ವಹಿಸಿ ಮಾತನಾಡಿದ ಚಿಕ್ಕಲಕಿ ಭಗೀರಥ ಪೀಠದ ಪೂಜ್ಯ ಶಿವಾನಂದ ಸ್ವಾಮೀಜಿ, ಪ್ರಪಂಚದಲ್ಲಿದ್ದು ಪಾರಮಾರ್ಥ ಸಾಧಿಸುವುದು ಸಾಮಾನ್ಯ ಕೆಲಸವಲ್ಲ. ಸತ್ಯ ಶುದ್ಧ ಬದುಕು ಸಾಧಿಸುತ್ತ ಅಧ್ಯಾತ್ಮವಾದಿಯಾಗಿ ಭಾವೈಕ್ಯದ ಸಂತನೆನಿಸಿಕೊಂಡಿರುವ ಚಮನಸಾಬ ಬಾಬಾರು, ನೊಂದು ಬೆಂದವರ ಕಣ್ಣೀರೊರೆಸುವ ಕರುಣಾಮಯಿಯಾಗಿದ್ದಾರೆ. ಅಧ್ಯಾತ್ಮವಾದಿಗಳಿಗೆ ಆದರ್ಶರಾಗಿದ್ದಾರೆ. ಈ ಅನುಷ್ಠಾನದಿಂದ ಸಮಾಜಕ್ಕೆ ಒಳಿತಾಗಲಿ ಎಂದರು.ಅಧ್ಯಕ್ಷತೆ ವಹಿಸಿ ಮಾತನಾಡಿದ ಶಿರಸಂಗಿ ಲಿಂಗರಾಜ ದೇಸಾಯಿ ಟ್ರಸ್ಟಿ ಜಿ…
ಬೆಂಗಳೂರು: ಭಾರತ ಚುನಾವಣಾ ಆಯೋಗವು ಅರ್ಹತಾ ದಿನಾಂಕ: ೦೧.೦೧.೨೦೨೫ ರಂತೆ ಭಾವಚಿತ್ರ ಸಹಿತ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-೨೦೨೫ ರ ವೇಳಾಪಟ್ಟಿಯನ್ನು ಪ್ರಕಟಿಸಿದೆ.ಪೂರ್ವ ಪರಿಷ್ಕರಣೆ ಚಟುವಟಿಕೆಗಳ ಸಮಯದಲ್ಲಿ ರಾಜ್ಯದ ಎಲ್ಲಾ ಮತಗಟ್ಟೆ ಮಟ್ಟದ ಅಧಿಕಾರಿಗಳು ಪ್ರತಿ ಮನೆಗೂ ಭೇಟಿ ನೀಡಿ ಪರಿಶೀಲನೆ ಕೈಗೊಳ್ಳುತ್ತಾರೆ. ಈ ಸಮಯದಲ್ಲಿ ಸಾರ್ವಜನಿಕರು ಯಾವುದೇ ರೀತಿಯ ತಿದ್ದುಪಡಿಗಳು, ಹೆಸರು ನೋಂದಣಿ, ಮೃತ ಮತ್ತು ಸ್ಥಳಾಂತರಗೊಂಡ ಮತದಾರರ ಹೆಸರುಗಳ ತೆಗೆದು ಹಾಕುವಿಕೆ ಮತ್ತು ಮುಂಬರುವ ಅರ್ಹತಾ ದಿನಾಂಕಗಳಂತೆ ೧೮ ವರ್ಷ ತುಂಬುವ ಯುವ ಮತದಾರರ ಹೆಸರು ಸೇರ್ಪಡೆ ಕುರಿತು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.ಹಕ್ಕು ಮತ್ತು ಆಕ್ಷೇಪಣೆಗಳ ಅವಧಿಯಲ್ಲಿ ವಿಶೇಷ ಅಭಿಯಾನ ದಿನಾಂಕಗಳನ್ನು ನಿಗಧಿಪಡಿಸಲಾಗಿದೆ. ಸಾರ್ವಜನಿಕರು ವಿಶೇಷ ಅಭಿಯಾನಗಳ ಸೌಲಭ್ಯವನ್ನು ಬಳಸಿಕೊಳ್ಳುವಂತೆ ಹಾಗೂ ಅವಶ್ಯವಿರುವ ತಿದ್ದುಪಡಿ, ಸೇರ್ಪಡೆ ಹಾಗೂ ತೆಗೆದುಹಾಕುವಿಕೆಗಳಿಗೆ ಅರ್ಜಿಗಳನ್ನು ಸಲ್ಲಿಸುವಂತೆ ಮುಖ್ಯ ಚುನಾವಣಾಧಿಕಾರಿಗಳು ಮತದಾರರಲ್ಲಿ ಮನವಿ ಮಾಡಿದ್ದಾರೆ.ಸಾರ್ವಜನಿಕರು ಅರ್ಜಿ ನಮೂನೆ ೬ ಮತ್ತು೮ ಗಳನ್ನು ಸಲ್ಲಿಸುವಾಗ ಸ್ವಯಂಪ್ರೇರಿತವಾಗಿ ಆಧಾರ್ ಸಂಖ್ಯೆಗಳನ್ನು ಒದಗಿಸಬಹುದಾಗಿದೆ.ಎಲ್ಲಾ ರೀತಿಯ ಚುಣಾವಣಾ ಸಂಬಂಧಿತ ಸೇವೆಗಳಿಗಾಗಿ…
ಬೆಂಗಳೂರು: ಭಾರತ ಚುನಾವಣಾ ಆಯೋಗವು ಅರ್ಹತಾ ದಿನಾಂಕ: ೦೧.೦೧.೨೦೨೫ ರಂತೆ ಭಾವಚಿತ್ರ ಸಹಿತ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-೨೦೨೫ ರ ವೇಳಾಪಟ್ಟಿಯನ್ನು ಪ್ರಕಟಿಸಿದೆ.ಪೂರ್ವ ಪರಿಷ್ಕರಣೆ ಚಟುವಟಿಕೆಗಳ ಸಮಯದಲ್ಲಿ ರಾಜ್ಯದ ಎಲ್ಲಾ ಮತಗಟ್ಟೆ ಮಟ್ಟದ ಅಧಿಕಾರಿಗಳು ಪ್ರತಿ ಮನೆಗೂ ಭೇಟಿ ನೀಡಿ ಪರಿಶೀಲನೆ ಕೈಗೊಳ್ಳುತ್ತಾರೆ. ಈ ಸಮಯದಲ್ಲಿ ಸಾರ್ವಜನಿಕರು ಯಾವುದೇ ರೀತಿಯ ತಿದ್ದುಪಡಿಗಳು, ಹೆಸರು ನೋಂದಣಿ, ಮೃತ ಮತ್ತು ಸ್ಥಳಾಂತರಗೊಂಡ ಮತದಾರರ ಹೆಸರುಗಳ ತೆಗೆದು ಹಾಕುವಿಕೆ ಮತ್ತು ಮುಂಬರುವ ಅರ್ಹತಾ ದಿನಾಂಕಗಳಂತೆ ೧೮ ವರ್ಷ ತುಂಬುವ ಯುವ ಮತದಾರರ ಹೆಸರು ಸೇರ್ಪಡೆ ಕುರಿತು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.ಹಕ್ಕು ಮತ್ತು ಆಕ್ಷೇಪಣೆಗಳ ಅವಧಿಯಲ್ಲಿ ವಿಶೇಷ ಅಭಿಯಾನ ದಿನಾಂಕಗಳನ್ನು ನಿಗಧಿಪಡಿಸಲಾಗಿದೆ. ಸಾರ್ವಜನಿಕರು ವಿಶೇಷ ಅಭಿಯಾನಗಳ ಸೌಲಭ್ಯವನ್ನು ಬಳಸಿಕೊಳ್ಳುವಂತೆ ಹಾಗೂ ಅವಶ್ಯವಿರುವ ತಿದ್ದುಪಡಿ, ಸೇರ್ಪಡೆ ಹಾಗೂ ತೆಗೆದುಹಾಕುವಿಕೆಗಳಿಗೆ ಅರ್ಜಿಗಳನ್ನು ಸಲ್ಲಿಸುವಂತೆ ಮುಖ್ಯ ಚುನಾವಣಾಧಿಕಾರಿಗಳು ಮತದಾರರಲ್ಲಿ ಮನವಿ ಮಾಡಿದ್ದಾರೆ.ಸಾರ್ವಜನಿಕರು ಅರ್ಜಿ ನಮೂನೆ ೬ ಮತ್ತು೮ ಗಳನ್ನು ಸಲ್ಲಿಸುವಾಗ ಸ್ವಯಂಪ್ರೇರಿತವಾಗಿ ಆಧಾರ್ ಸಂಖ್ಯೆಗಳನ್ನು ಒದಗಿಸಬಹುದಾಗಿದೆ.ಎಲ್ಲಾ ರೀತಿಯ ಚುಣಾವಣಾ ಸಂಬಂಧಿತ ಸೇವೆಗಳಿಗಾಗಿ…
