Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ಕರ್ನಾಟಕದ ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಆ.೨೨ರಂದು ಬೆಳಿಗ್ಗೆ ೧೦ ರಿಂದ ೧-೩೦ರವರೆಗೆ ಹಾಗೂ ಮಧ್ಯಾಹ್ನ ೨-೩೦ರಿಂದ ೫ ಗಂಟೆಯವರೆಗೆ ನಗರದ ಸ್ಟೇಶನ್ ರಸ್ತೆಯ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ ವಿಚಾರಣೆ ನಡೆಸಲಿದ್ದು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ತಮ್ಮ ಸಮಸ್ಯೆ-ಅಹವಾಲುಗಳಿಗೆ ಪರಿಹಾರ ಪಡೆದುಕೊಳ್ಳುವಂತೆ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಕೋರಿದ್ದಾರೆ.ಸರ್ಕಾರಿ ಅಧಿಕಾರಿ-ನೌಕರರು ಕಾನೂನು ರಿತ್ಯ ಕಾರ್ಯ ಮಾಡಲು ವಿಳಂಬವಾಗುತ್ತಿದ್ದಲ್ಲಿ, ಅಥವಾ ಅಧಿಕಾರಿ-ನೌಕರರು ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ವೃಥಾ ತೊಂದರೆ ಕೊಡುವುದು ಅಥವಾ ಇನ್ನಾವುದೇ ತರಹದ ದುರಾಡಳಿತದಲ್ಲಿ ತೊಡಗಿದ್ದಲ್ಲಿ ತೊಂದರೆಗೊಳಗಾದ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಲಿಖಿತ ರೂಪದಲ್ಲಿ ದಾಖಲೆ, ಸಾಕ್ಷಾಧಾರಗಳೊಂದಿಗೆ ಸಲ್ಲಿಸಿ ಬಗೆಹರಿಸಿಕೊಳ್ಳಬಹುದಾಗಿದೆ.ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ ತನಿಖೆ-ವಿಚಾರಣೆಗೆ ಬಾಕಿ ಇರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ಕಾನೂನು ರಿತ್ಯ ಆ.೨೩ರಂದು ಬೆಳಿಗ್ಗೆ ೧೦ ರಿಂದ ಮಧ್ಯಾಹ್ನ ೧-೩೦ರವರೆಗೆ ಮತ್ತು ಮಧ್ಯಾಹ್ನ ೨-೩೦ರಿಂದ ೫ ಗಂಟೆಯವರೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿಚಾರಣೆ ನಡೆಸಲಿದ್ದಾರೆ.…
ವಿಜಯಪುರ: ಮೀನುಗಾರಿಕೆ ಇಲಾಖೆಯ ವತಿಯಿಂದ ೨೦೨೪-೨೫ನೇ ಸಾಲಿನ ಜಿಲ್ಲಾ ವಲಯ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಜಲಾಶಯ, ನದಿಭಾಗ, ಕೆರೆಗಳ ವ್ಯಾಪ್ತಿಯ ವೃತ್ತಿಪರ ಮೀನುಗಾರರಿಗೆ ಮೀನು ಹಿಡಿಯುವ ಬಲೆ ಖರೀದಿಗೆ ಸಹಾಯ ಧನ ಹಾಗೂ ಭಾವಿ- ಹೊಂಡಗಳಿಗೆ ಮೀನುಮರಿ ಸರಬರಾಜು, ಮೀನು ಸಲಕರಣೆ ಕಿಟ್ ವಿತರಣೆ, ಮೀನು ಕೃಷಿಕೊಳ ನಿರ್ಮಾಣಕ್ಕೆ ಮತ್ತು ಹೂಡಿಕೆ ವೆಚ್ಚಗಳಿಗೆ ಸಹಾಯ ಧನ,ದ್ವಿಚಕ್ರ ವಾಹನ, ತ್ರಿಚಕ್ರ ಹಾಗೂ ನಾಲ್ಕು ಚಕ್ರ ವಾಹನ ಮತ್ತು ಶಾಖ ನಿರೋಧಕ ಪೆಟ್ಟಿಗೆ ಖರೀದಿಗೆ ಸಹಾಯ ಧನ ಯೋಜನೆಗಳಿಗಾಗಿ ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ.ವೃತ್ತಿಪರ ಮೀನುಗಾರರು, ಮೀನು ಕೃಷಿಕರು ಹಾಗೂ ಮೀನುಗಾರರ ಸಹಕಾರ ಸಂಘದ ಸದಸ್ಯರು ನಿಗದಿತ ನಮೂನೆಯಲ್ಲಿ ಸೂಕ್ತ ದಾಖಲಾತಿಗಳೊಂದಿಗೆ ಆಯಾ ತಾಲ್ಲೂಕಿನ ಮೀನುಗಾರಿಕೆ ಇಲಾಖೆಯ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಸೆಪ್ಟೆಂಬರ್ ೧೦ ಕೊನೆಯ ದಿನವಾಗಿದೆ.ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ವಿಜಯಪುರ ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕರು (ಮೊ:೯೯೮೬೧೩೨೭೧೭), ವಿಜಯಪುರ,ಬಬಲೇಶ್ವರ, ತಿಕೋಟಾ,ದೇವರ ಹಿಪ್ಪರಗಿ, ಸಿಂದಗಿ, ಆಲಮೇಲ, ಇಂಡಿ…
ವಿಜಯಪುರ: ೨೦೨೪-೨೫ನೇ ಸಾಲಿಗಾಗಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ, ಅರೆ ಅಲೆಮಾರಿ, ಪ್ರವರ್ಗ-೧ರ ವಿದ್ಯಾರ್ಥಿಗಳಿಂದ ಅರ್ಹ ಪಿಯುಸಿ ಮತ್ತು ಸಮಾನಾಂತರ, ಸಾಮಾನ್ಯ ಪದವಿ ಮತ್ತು ಸಂಯೋಜಿತ ಉಭಯ ಪದವಿ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ- ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ವಿದ್ಯಾರ್ಥಿಗಳುhttps://ssp.postmatric.karnataka.gov.in ನಲ್ಲಿ ಸೆಪ್ಟೆಂಬರ್ ೧೫ರೊಳಗಾಗಿ ಅರ್ಜಿ ಸಲ್ಲಿಸಬಹುದು.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ೮೦೫೦೭೭೦೦೦೫ ಅಥವಾ ವೆಬ್ಸೈಟ್ https:bcwd.karnataka.gov.inವೀಕ್ಷಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ಆಗಸ್ಟ್-೨೦೨೪ರ ಮಾಹೆಯಲ್ಲಿ ಜಿಲ್ಲೆಯ ಆಸಕ್ತ ರೈತರಿಗೆ ‘ಕುರಿ ಮತ್ತು ಆಡು ಸಾಕಾಣಿಕೆ ಹಾಗೂ ಹೈನುಗಾರಿಕೆ ಕುರಿತು ತರಬೇತಿ ಹಮ್ಮಿಕೊಳ್ಳಲಾಗಿದೆ.ಆಸಕ್ತ ರೈತರು ಆಗಸ್ಟ್ ೨೧ರೊಳಗಾಗಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ವಿಜಯಪುರ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಕೃಷಿ ಅಧಿಕಾರಿಗಳಾದ ಶ್ರೀಮತಿ ಗೀತಾ ಭಜಂತ್ರಿ (ಮೊ:೮೨೭೭೯೩೦೬೧೯) ಅವರನ್ನು ಸಂಪರ್ಕಿಸುವಂತೆ ವಿಜಯಪುರ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಉಪ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ಝಳಕಿ ೧೧೦ ಕೆವ್ಹಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹೆಚ್ಚುವರಿಯಾಗಿ ೩೩ಕೆವ್ಹಿ ಬಸ್ ನಿರ್ಮಾಣ ಮಾಡುವ ಕಾಮಗಾರಿ ಕೈಗೊಂಡಿರುವುದರಿಂದ ದಿನಾಂಕ : ೧೮-೦೮-೨೦೨೪ ರಂದು ಮಧ್ಯಾಹ್ನ ೧೨ ರಿಂದ ಸಂಜೆ ೬ ಗಂಟೆಯವರೆಗೆ ಸದರಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲ ಮಾರ್ಗಗಳಿಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.ಝಳಕಿ ೧೧೦ ಕೆವ್ಹಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೋಗುವ ೩೩ ಕೆವ್ಹಿ ಹೊರ್ತಿ, ನಿವರಗಿ, ಧೂಳಖೇಡ, ಹಲಸಂಗಿ ವಿದ್ಯುತ್ ವಿತರಣಾ ಕೇಂದ್ರದ ಮೇಲೆ ಬರುವ ಎಲ್ಲ ೧೧ ಕೆವ್ಹಿ ಮಾರ್ಗಗಳಿಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು, ಸಾರ್ವಜನಿಕರು ಸಹಕರಿಸುವಂತೆ ಇಂಡಿ ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.
ವಿಜಯಪುರ: ೨೦೨೪-೨೫ನೇ ಸಾಲಿಗಾಗಿ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ-ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಸಾಮಾನ್ಯ ಪದವಿ ಮಟ್ಟದ ಕೋರ್ಸಿನ ವಿದ್ಯಾರ್ಥಿಗಳಿಂದ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಿಲಾಗಿದೆ. ದಿನಾಂಕ: ೧೩-೦೮-೨೦೨೪ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಸಕ್ತ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿ ನಿಲಯ ತಂತ್ರಾಂಶ https://shp.karnataka.gov.inದಿನಾಂಕ: ೧೨-೦೯-೨೦೨೪ರವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪಂಚಾಯಿತಿ ರಸ್ತೆಯಲ್ಲಿರುವ ಮೌಲಾನಾ ಆಝಾದ ಭವನದ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳ ಕಚೇರಿಯನ್ನು ಅಥವಾ ದೂರವಾಣಿ ಸಂಖ್ಯೆ: ೦೮೩೫೨-೨೯೫೫೨೩, ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಬಸವನಬಾಗೇವಾಡಿ: ವಿದ್ಯಾರ್ಥಿಗಳು ಕ್ರಿಯಾಶೀಲರಾದರೆ ಮಾತ್ರ ಸ್ಪರ್ಧಾ ಜಗತ್ತನ್ನು ಧೈರ್ಯವಾಗಿ ಎದುರಿಸಬಹುದು ಎಂದು ಕರ್ನಾಟಕ ರಾಜ್ಯ ಮಹಿಳಾ ವಿಶ್ವವಿದ್ಯಾಲಯದ ಕುಲ ಸಚಿವ ಶಂಕರಗೌಡ ಸೋಮನಾಳ ಹೇಳಿದರು.ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸಾಂಸ್ಕ್ರತಿಕ, ಕ್ರೀಡೆ, ಎನ್ಎಸ್ಎಸ್ ಹಾಗೂ ವಿವಿಧ ಘಟಕಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಪದವಿ ಹಂತದಲ್ಲಿಯೇ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಅರಿತುಕೊಂಡು ಅಗತ್ಯ ಸಿದ್ಧತೆ ಮಾಡಿಕೊಂಡರೆ ಖಂಡಿತ ಅವರು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಪಡೆದುಕೊಳ್ಳಬಹುದು. ಭಾರತೀಯ ಆಡಳಿತ ಸೇವೆಯ ಸ್ಪರ್ಧಾತ್ಮಕ ಪರೀಕ್ಷೆಯನ್ನು ಹೇಗೆ ಎದುರಿಸಬಹದು. ಅದರ ಸಿದ್ಧತೆ ಹೇಗೆ ಮಾಡಿಕೊಳ್ಳಬಹುದು ಎಂಬುವದರ ಮಾಹಿತಿ ನೀಡಿದರು.ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಈರಣ್ಣ ಪಟ್ಟಣಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ಕೇವಲ ಪದವಿ ಶಿಕ್ಷಣಕ್ಕೆ ಸಿಮೀತಗೊಳಿಸದೇ ಉನ್ನತ ಶಿಕ್ಷಣವನ್ನು ಪಡೆಯಲು ಮುಂದಾಗಬೇಕು. ಉನ್ನತ ಶಿಕ್ಷಣವನ್ನು ಪಡೆದುಕೊಂಡು ಉನ್ನತ ಸ್ಥಾನಮಾನ ಪಡೆದುಕೊಳ್ಳಬೇಕೆಂದು ಸಲಹೆ ನೀಡಿದರು.ಸಾಹಿತಿ ಶಂಕರ ಬೈಚಬಾಳ ಮಾತನಾಡಿ, ವಿಜಯಪುರ ಜಿಲ್ಲೆಯ ಇತಿಹಾಸ ಸ್ವತಂತ್ರ ಹೋರಾಟಗಾರರ ಕುರಿತು ಮಾಹಿತಿ ನೀಡಿದರು.ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ…
ಬಸವನಬಾಗೇವಾಡಿ: ಅಖಿಲ ಕರ್ನಾಟಕ ಬಂಜಾರಾ ಧರ್ಮಗುರುಗಳ ಮಹಾಸಭಾದಿಂದ ಆ. 11 ರಿಂದ ಸಂತರ ನಡೆ ತಾಂಡಾ ಕಡೆ ಎಂಬ ಕಾರ್ಯಕ್ರಮದ ಮೂಲಕ ಜಿಲ್ಲೆ ಪ್ರತಿ ತಾಂಡಾಗಳಲ್ಲಿ ಭೋಗ ಭಂಡಾರ ಹಾಗೂ ಜನಜಾಗೃತಿ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಚಿತ್ತರಗಿ ಸಂಸ್ಥಾನ ಮಠದ ಶಾಖಾ ಮಠದ ಲಿಂಗಸೂರಿನ ಸಿದ್ದಲಿಂಗ ಸ್ವಾಮೀಜಿ ಹೇಳಿದರು.ಪಟ್ಟಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂಜಾರ ಸಂಸ್ಕ್ರತಿ ಸಂರಕ್ಷಣೆ, ಉದ್ಯೋಗ, ಶಿಕ್ಷಣ, ಮತಾಂತರ ತಡೆಗಟ್ಟುವಿಕೆ,ಬಾಂಧವರು ದುಶ್ಚಟಗಳಿಂದ ದೂರವಿರಬೇಕು. ಯಾವುದೇ ಕಾರಣಕ್ಕೂ ಮದುವೆಯಲ್ಲಿ ವರದಕ್ಷಿಣೆ ತೆಗೆದುಕೊಳ್ಳಬಾರದು. ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಸಮಾಜದ ಮುಖ್ಯವಾಹಿನಿಯಲ್ಲಿ ತರುವುದು ಸೇರಿದಂತೆ ಬಂಜಾರ ಬಾಂಧವರಿಗೆ ಧರ್ಮ ಸಂದೇಶಗಳನ್ನು ಮುಟ್ಟಿಸುವ ಉದ್ದೇಶದಿಂದ ಈ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದ ಅವರು, ಆ.11 ರಂದು ನಿಡಗುಂದಿ ತಾಂಡಾದಿಂದ ಜನಜಾಗೃತಿ ಯಾತ್ರೆ ಆರಂಭವಾಗಿ ದೇವಲಾಪೂರ ತಾಂಡಾ, ಆಲಮಟ್ಟಿ ಆರ್ಎಸ್ ತಾಂಡಾ, ಚಿಮ್ಮಲಗಿ ತಾಂಡಾ, ಗಣಿ ತಾಂಡಾ, ಮಾಡಗಿ ತಾಂಡಾ, ಸೇರಿದಂತೆ ನಿಡಗುಂದಿ, ಕೊಲ್ಹಾರ, ಬಸವನಬಾಗೇವಾಡಿ ತಾಲೂಕಿನಲ್ಲಿ ಬರುವ ಎಲ್ಲ ತಾಂಡಾಗಳಿಗೆ…
ಬಸವನಬಾಗೇವಾಡಿ: ಪಟ್ಟಣದ ಆರಾಧ್ಯದೈವ ಮೂಲನಂದೀಶ್ವರ(ಬಸವೇಶ್ವರ) ಜಾತ್ರಾಮಹೋತ್ಸವದಂಗವಾಗಿ ಇದೇ ಪ್ರಥಮ ಬಾರಿಗೆ ಎರಡು ದಿನಗಳ ಕಾಲ ಹಮ್ಮಿಕೊಂಡಿರುವ ಕೃಷಿ ಮೇಳದ ಜಾಗೆಯನ್ನು ಕೃಷಿ ಇಲಾಖೆಯ ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಡಾ.ವಿಲಿಯಂ ರಾಜಶೇಖರ ಪರಿಶೀಲಿಸಿದರು.ನಂತರ ಮಾತನಾಡಿದ ಅವರು, ಜಾತ್ರೆಯಂಗವಾಗಿ ಹಮ್ಮಿಕೊಂಡಿರುವ ಕೃಷಿ ಮೇಳಕ್ಕೆ ನಮ್ಮ ಇಲಾಖೆಯಿಂದ ಎಲ್ಲ ರೀತಿಯ ಸಹಕಾರ ನೀಡಲಾಗುವದು. ಮೇಳದಲ್ಲಿ ನಮ್ಮ ಇಲಾಖೆಯಿಂದ ಒಂದು ಮಳಿಗೆಯನ್ನು ಹಾಕುವ ಮೂಲಕ ರೈತ ಬಾಂಧವರಿಗೆ ಅಗತ್ಯ ಮಾಹಿತಿಯನ್ನು ಒದಗಿಸಲಾಗುವದು. ಈ ಮೇಳದಲ್ಲಿ ಕೃಷಿ ಸಂಬಂಧಿತ ಉಪಕರಣಗಳ ಮಳಿಗೆಗಳು, ಬೀಜ-ಗೊಬ್ಬರ ಮಳಿಗೆಗಳು ಇರಲಿವೆ. ರೈತ ಬಾಂಧವರು ಈ ಕೃಷಿ ಮೇಳದ ಸದುಪಯೋಗ ಪಡೆಸಿಕೊಳ್ಳಬೇಕೆಂದರು. ಈ ಸಂದರ್ಭದಲ್ಲಿ ಮುಖಂಡರಾದ ಶೇಖರ ಗೊಳಸಂಗಿ, ಶಂಕರಗೌಡ ಬಿರಾದಾರ, ಎಂ.ಜಿ.ಆದಿಗೊಂಡ, ಅಶೋಕ ಕಲ್ಲೂರ, ಶ್ರೀಕಾಂತ ಪಟ್ಟಣಶೆಟ್ಟಿ, ಸಂಜೀವ ಬಿರಾದಾರ ಇದ್ದರು.
ಆಲಮಟ್ಟಿ: ಇಂದಿನ ಯುವಕರಲ್ಲಿ ಮೊದಲು ದೇಶಭಕ್ತಿ, ರಾಷ್ಟç ಪ್ರೇಮ ಮೂಡಿಬರಲಿ ಎಂದು ಪ್ರಾಚಾರ್ಯ ಪ್ರಭುಸ್ವಾಮಿ ಹೇಮಗಿರಿಮಠ ಹೇಳಿದರು. ಇಲ್ಲಿನ ಮಂಜಪ್ಪ ಹರ್ಡೇಕರ ಸ್ಮಾರಕ ಸಂಯುಕ್ತ ಪಪೂ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ೭೮ ನೇ ಸ್ವಾತಂತ್ರೋತ್ಸವ ದಿನಾಚರಣೆ ನಿಮಿತ್ಯ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಯುವ ವಿದ್ಯಾರ್ಥಿಗಳು ರಾಷ್ಟ್ರ ಭಕ್ತಿಗೆ ಪ್ರಥಮ ಆದ್ಯತೆ ನೀಡಬೇಕೆಂದರು. ೧೫೦ ಕೋಟಿ ಜನಸಂಖ್ಯೆ ಹೊಂದಿರುವ ಬಲಾಢ್ಯ ರಾಷ್ಟ್ರ ನಮ್ಮ ಭಾರತ ದೇಶ.ಸುಭದ್ರ ರಾಷ್ಟç ಇದ್ದರೆ ನೆಮ್ಮದಿಯಿಂದ ನಾವು ಬದುಕಲು ಸಾಧ್ಯ. ಆ ದಿಸೆಯಲ್ಲಿ ಯುವಜನತೆ ರಾಷ್ಟ್ರೀಯ ಹಬ್ಬಗಳ ಮಹತ್ವ ಅರಿಯಬೇಕು ಎಂದರು. ಈ ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನದ ಮೂಲಕ ತಮ್ಮನ್ನು ತಾವು ಅಪಿ೯ಸಿಕೊಂಡು ಅಸಂಖ್ಯಾತ ಮಹನೀಯರು ಹೋರಾಡಿ ಸ್ವಾತಂತ್ರ್ಯ ದಕ್ಕಿಸಿಕೊಟ್ಟಿದ್ದಾರೆ. ಅನೇಕ ಮಹನೀಯರು ಹುತಾತ್ಮರಾಗಿ ಪ್ರಾಣ ಕಳೆದುಕೊಂಡಿದ್ದಾರೆ. ಅವರೆಲ್ಲರೂ ಸ್ಮರಣೀಯರು.ಮಹಾತ್ಮ ಗಾಂಧಿ, ಸುಭಾಷ್ ಚಂದ್ರ ಬೋಸ್, ಲಾಲ್ ಬಹಾದ್ದೂರ್ ಶಾಸ್ತಿç, ಡಾ.ಅಂಬೇಡ್ಕರ್, ಚಂದ್ರಶೇಖರ ಆಜಾದ್ ಸೇರಿದಂತೆ ಹಲವಾರು…
