Subscribe to Updates
Get the latest creative news from FooBar about art, design and business.
Author: editor.udayarashmi@gmail.com
ದೇವರಹಿಪ್ಪರಗಿ: ರೈತ ಸಮುದಾಯದ ಒಳಿತಿಗಾಗಿ ತಾಲ್ಲೂಕು ಕೇಂದ್ರದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ (ಎಪಿಎಂಸಿ) ಆರಂಭಕ್ಕೆ ಕ್ರಮ ವಹಿಸುವಂತೆ ಆಗ್ರಹಿಸಿ ತಾಲ್ಲೂಕು ರೈತಸಂಘ ಪದಾಧಿಕಾರಿಗಳು ಶಾಸಕ ರಾಜುಗೌಡ ಪಾಟೀಲ(ಕುದರಿ ಸಾಲವಾಡಗಿ) ಅವರಿಗೆ ಮನವಿ ಸಲ್ಲಿಸಿದರು.ಪಟ್ಟಣದಲ್ಲಿ ಗುರುವಾರ ಸ್ವಾತಂತ್ರೋತ್ಸವ ಧ್ವಜಾರೋಹಣದ ನಂತರ ಶಾಸಕರನ್ನು ಭೇಟಿ ಮಾಡಿದ ರೈತಸಂಘದ ಪದಾಧಿಕಾರಿಗಳು, ತಾಲ್ಲೂಕಿನಲ್ಲಿ ಕೃಷಿ ಉತ್ಪನ್ನಗಳು ಬೆಳವಣಿಗೆ ಈಗ ಅಧಿಕವಾಗುತ್ತಿದೆ. ಆದರೆ ಮಧ್ಯವರ್ತಿಗಳ ಮತ್ತು ವ್ಯಾಪಾರಿಗಳ ಶೋಷಣೆಯಿಂದ ಬೆಳೆದ ಉತ್ಪನ್ನಗಳಿಗೆ ಉತ್ತಮ ಬೆಲೆ ಸಿಗದೇ ಪರದಾಡುವಂತಾಗಿದೆ. ಮಧ್ಯವರ್ತಿಗಳ ಮತ್ತು ವ್ಯಾಪಾರಿಗಳ ಶೋಷಣೆಯಿಂದ ರೈತರನ್ನು ರಕ್ಷಿಸಲು ಹಾಗೂ ಉತ್ಪನ್ನಗಳಿಗೆ ಉತ್ತಮ ಬೆಲೆ ಮತ್ತು ಸಕಾಲಿಕ ಪಾವತಿಗೆ ಎಪಿಎಂಸಿ ಆರಂಭ ಈಗ ಅಗತ್ಯವಾಗಿದೆ. ಆದ್ದರಿಂದ ನಮ್ಮ ನೂತನ ತಾಲ್ಲೂಕಿನ ರೈತ ಸಮುದಾಯಕ್ಕೆ ಅನುಕೂಲವಾಗಲು ಕೂಡಲೇ ಮಾರುಕಟ್ಟೆ ಸ್ಥಾಪನೆಗೆ ಕ್ರಮವಹಿಸಲು ಆಗ್ರಹಿಸಿದರು.ರೈತರ ಮನವಿ ಸ್ವೀಕರಿಸಿದ ಶಾಸಕರು ಮಾರುಕಟ್ಟೆಯ ಬಗ್ಗೆ ಅಗತ್ಯ ಕ್ರಮವಹಿಸುವ ಭರವಸೆ ನೀಡಿದರು.ಜಿಲ್ಲಾ ರೈತಸಂಘದ ಉಪಾಧ್ಯಕ್ಷ ಸಂಪತ್ ಜಮಾದಾರ, ತಾಲ್ಲೂಕು ರೈತಸಂಘ ಹಾಗೂ ಹಸಿರುಸೇನೆ ಅಧ್ಯಕ್ಷ ರಾಮು ದೇಸಾಯಿ, ಪಟ್ಟಣದ…
ತಿಕೋಟಾ: ಸುಧೀರ್ಘ ಹನ್ನೊಂದು ವರ್ಷಗಳ ಕಾಲ ಸೇವೆ ಸಲ್ಲಿಸಿ ವರ್ಗಾವಣೆಯಾದ ಶಿಕ್ಷಕಿಯೊಬ್ಬರು ತಾವು ಸೇವೆ ಸಲ್ಲಿಸಿದ ಶಾಲೆಗೆ ₹50 ಸಾವಿರ ದೇಣಿಗೆ ನೀಡಿ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.ತಾಲ್ಲೂಕಿನ ಘೋಣಸಗಿ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸವಿತಾ ಹತ್ತಿಕಾಳ ಎಂಬ ಶಿಕ್ಷಕಿ ಇತ್ತೀಚೆಗೆ ಹೊನವಾಡ ಕೆಜಿಎಸ್ ಶಾಲೆಗೆ ವರ್ಗಾವಣೆ ಹೊಂದಿದ್ದು, ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಲಾ ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಸನ್ಮಾನ ಸ್ವೀಕರಿಸಿ, ಗ್ರಾಮದ ಹಿರಿಯರ ಹಾಗೂ ಎಸ್ಡಿಎಂಸಿ ಸಮ್ಮುಖದಲ್ಲಿ ಶಾಲೆಗೆ 50 ಸಾವಿರ ದೇಣಿಗೆ ಹಣ ನೀಡಿ ಮಕ್ಕಳನ್ನು ಕಂಡು ಭಾವುಕರಾದರು.ದೇಣಿಗೆ ನೀಡಿದ ₹ 50 ಸಾವಿರ ಹಣವನ್ನು ಎಸ್ಡಿಎಂಸಿ ಹಾಗೂ ಮುಖ್ಯಗುರುಗಳ ಜಂಟಿ ಖಾತೆಯಲ್ಲಿ ಠೇವಣಿ ಇಟ್ಟು ಅದರಿಂದ ಪ್ರತಿ ವರ್ಷ ಬರುವ ಬಡ್ಡಿ ಹಣದಲ್ಲಿ ಐದನೇ, ಆರನೇ ಹಾಗೂ ಏಳನೇ ತರಗತಿಯಲ್ಲಿ ವ್ಯಾಸಂಗ ಮಾಡಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮಾಡಿ ಪ್ರೋತ್ಸಾಹಿಸಬೇಕು ಎಂದು ಹೇಳಿದರು.ವೃತ್ತಿ ಬದುಕಿನಲ್ಲಿ ಗ್ರಾಮಸ್ಥರ…
ವಿಶ್ವದರ್ಜೆಯಲ್ಲಿ ಪ್ರವಾಸಿ ತಾಣಗಳ ಆಯ್ಕೆಗೆ ದೇಖೋ ಅಪನಾ ದೇಶ ಕಾರ್ಯಕ್ರಮ ವಿಜಯಪುರ: ಜಿಲ್ಲೆಯಲ್ಲಿರುವ ಪ್ರವಾಸಿ ತಾಣಗಳನ್ನು ಆಯ್ಕೆ ಮಾಡಲು ಸಾರ್ವಜನಿಕರಿಗೆ ಸುವರ್ಣಾವಕಾಶವಿದ್ದು, ಜಿಲ್ಲೆಯ ಪ್ರವಾಸಿ ತಾಣಗಳನ್ನು ಆದ್ಯತಾ ಪ್ರವಾಸಿ ತಾಣಗಳನ್ನಾಗಿ ಆಯ್ಕೆಗೊಳ್ಳುವಂತೆ ಮಾಡಲು https://innovationindia.mygov.in/dekho-apna-desh/ಲಿಂಕ್ ಮೂಲಕ ಜಿಲ್ಲೆಯ ಪ್ರವಾಸಿಗರು, ಸಾರ್ವಜನಿಕರು ಓಟ್ ಮಾಡುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಮನವಿ ಮಾಡಿಕೊಂಡಿದ್ದಾರೆ. ಎಂದು ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.ಪ್ರವಾಸೋದ್ಯಮವನ್ನು ಮೇಲ್ದರ್ಜೆಗೇರಿಸಲು ಹಾಗೂ ಎಲ್ಲ ವರ್ಗಗಳಾದ ಧಾರ್ಮಿಕ, ಸಾಂಸ್ಕೃತಿಕ, ಪಾರಂಪರಿಕ, ನೈಸರ್ಗಿಕ ಹಾಗೂ ವನ್ಯಜೀವಿ ಮತ್ತು ಸಾಹಸ ಚಟುವಟಿಕೆಗಳು ಹಾಗೂ ಇತರೆ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ದೃಷ್ಟಿಕೋನದಲ್ಲಿ ಪ್ರಮುಖ ಪ್ರವಾಸಿ ತಾಣಗಳನ್ನು ಗುರುತಿಸಿ ಮೇಲ್ದರ್ಜೆಯಲ್ಲಿ ಅಭಿವೃದ್ದಿಪಡಿಸಲು ಕೇಂದ್ರ ಪ್ರವಾಸೋದ್ಯಮ ಸಚಿವಾಲಯದಿಂದ ದೇಖೋ ಅಪನಾ ದೇಶ Peoಠಿಟe’s ಅhoiಛಿe ೨೦೨೪ ಎಂಬ ಕಾರ್ಯಕ್ರಮವನ್ನು ಪ್ರಾರಂಭಿಸಿದ್ದು, ಓಟ್ ಮಾಡಲು ದಿನಾಂಕ : ೧೫-೦೯-೨೦೨೪ ಕೊನೆಯ ದಿನಾಂಕವಾಗಿದೆ. ಜಿಲ್ಲೆಯ ಪ್ರವಾಸಿ ತಾಣಗಳನ್ನು ವಿಶ್ವದರ್ಜೆಯಲ್ಲಿ ಸೇರ್ಪಡೆಗೊಳಿಸಲು ಪ್ರವಾಸಿಗರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಲಿಂಕ್ನ ಮೂಲಕ ಓಟ್ ಮಾಡುವಂತೆ ಪ್ರಕಟಣೆ ತಿಳಿಸಿದೆ.
ವಿಜಯಪುರ: ವಿದ್ಯಾರ್ಥಿಗಳು ಸರಿಯಾದ ಯೋಜನೆ, ಕಠಿಣ ಪರಿಶ್ರಮ, ಸಮರ್ಪಣಾ ಮನೋಭಾವ ಹಾಗೂ ಛಲದೊಂದಿಗೆ ಮುನ್ನಡೆದರೆ ಸಾಧನೆಯ ಪಥ ತಲುಪಲು ಸಾಧ್ಯ. ಜೀವನದಲ್ಲಿ ಯಶಸ್ವಿಯಾಗಲು ಸಕಾರಾತ್ಮಕ ಮನೋಭಾವ ಹೊಂದಬೇಕು ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ಅವರು ನಗರದ ಆಲಕುಂಟೆ ನಗರದಲ್ಲಿ ಪಿನ್ಯಾಕಲ್ ಕ್ಲಾಸಿಸ್ ವತಿಯಿಂದ ‘ವರ್ಷದ ಸಂಸ್ಕೃತಿ ಸಂಭ್ರಮ-2024’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ವಿದ್ಯಾರ್ಥಿಗಳು ತಮ್ಮ ಜವಾಬ್ದಾರಿ ಅರಿತು, ಸ್ವಯಂ ಶಿಸ್ತು, ಬದ್ಧತೆಯೊಂದಿಗೆ ಗಂಭೀರವಾಗಿ ಅಧ್ಯಯನ ಮಾಡಬೇಕು. ವಿದ್ಯಾರ್ಥಿಯು ಶೈಕ್ಷಣಿಕ ಉತ್ಕೃಷ್ಟತೆ ಸಾಧಿಸಲು ಅವರ ಪರಿಶ್ರಮದೊಂದಿಗೆ ಪೋಷಕರ ಪ್ರೋತ್ಸಾಹ ಬಹುಮುಖ್ಯ.ವಿದ್ಯಾರ್ಥಿಗಳಿಗೆ ‘ಪುಸ್ತಕ ಹಿಡಿ ಮೊಬೈಲ್ ಬಿಡಿ’ ಎಂದು ಕಿವಿಮಾತು ಹೇಳುತ್ತಾ, ಮಕ್ಕಳು ಪಾಲಕರ ಕಷ್ಟವನ್ನು ಅರಿತು ಚೆನ್ನಾಗಿ ಅಭ್ಯಾಸ ಮಾಡಿದಾಗ ಪಾಲಕರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಕ್ಕಂತಾಗುತ್ತದೆ ಎಂದರು.ಭಾರತ ಯುವ ವೇದಿಕೆ ಚಾರಿಟೇಬಲ್ ಫೌಂಡೇಶನ್ ಅಧ್ಯಕ್ಷ ಸುನೀಲ ಜೈನಾಪುರ ಮಾತನಾಡಿ, ನಮ್ಮ ಜೀವನ ಶೈಲಿ ವರ್ಷದಿಂದ ವರ್ಷಕ್ಕೆ ಅಭಿವೃದ್ಧಿ ಆಗಬೇಕು. ಶಿಕ್ಷಣದ ಮೂಲಕ ಮಕ್ಕಳು ಸಹಿಷ್ಣುತೆ, ದಯೆ ಮತ್ತು ಸಮಾಜದ ಜವಾಬ್ದಾರಿಗಳ ಮಹತ್ವವನ್ನು…
ಪಶ್ಚಿಮ ಬಂಗಾಳದ ಕೊಲ್ಕತ್ತದಲ್ಲಿ ಕರ್ತವ್ಯನಿರತ ಯುವ ವೈದ್ಯೆ ಹತ್ಯೆ ಪ್ರಕರಣ ವಿಜಯಪುರ: ಪಶ್ಚಿಮ ಬಂಗಾಳದ ಕೊಲ್ಕತ್ತದಲ್ಲಿ ಕರ್ತವ್ಯನಿರತ ಯುವ ವೈದ್ಯೆಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಕ್ರೂರ ಹತ್ಯೆಯನ್ನು ಖಂಡಿಸಿ ವಿಜಯಪುರದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜಿನ ನೇತೃತ್ವದಲ್ಲಿ ಭಾರತೀಯ ವೈದ್ಯಕೀಯ ಸಂಘ ಮತ್ತು ಅಲ್ ಅಮೀನ್ ವೈದ್ಯಕೀಯ ಕಾಲೇಜಿನ ವೈದ್ಯರು ಹಾಗೂ ವಿದ್ಯಾರ್ಥಿಗಳು ಇಂದು ಶುಕ್ರವಾರ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಪ್ರತಿಭಟನಾ ಜಾಥಾ ನಡೆಸಿದ ನೂರಾರ ವೈದ್ಯರು, ಗಾಂಧಿಚೌಕ್, ಬಸವೇಶ್ವರ ಚೌಕ್ ಮೂಲಕ ಸಂಚರಿಸಿ ಡಾ. ಬಿ. ಆರ್. ಅಂಬೇಡ್ಕರ್ ಚೌಕಿನಲ್ಲಿ ಮಾನವ ಸರಪಳಿ ನಡೆಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಡಿಸಿ ಟಿ. ಭೂಬಾಲನ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ರ್ಯಾಲಿ ಸಂಯೋಜಕ ಮತ್ತು ಬಿ.ಎಲ್.ಡಿ.ಇ ಆಸ್ಪತ್ರೆಯ ವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ. ಸಂಜೀವಕುಮಾರ ಬೆಂಟೂರ, ಕೊಲ್ಕತ್ತದಲ್ಲಿ ನಡೆದ ಯುವವೈದ್ಯೆಯ ಮೇಲಿನ…
“ವೀಣಾಂತರಂಗ”- ವೀಣಾ ಹೇಮಂತ್ ಗೌಡ ಪಾಟೀಲ್, ಮುಂಡರಗಿ – ಗದಗ 2012 ರ ಡಿಸೆಂಬರ್ ನಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಬರ್ಲಾಡ್ ನವರ್ರೇ ಎಂಬಲ್ಲಿ ನಡೆಯುತ್ತಿದ್ದ ಕ್ರಾಸ್ ಕಂಟ್ರಿ ಓಟದಲ್ಲಿಕೀನ್ಯಾದ ನೀಗ್ರೋ ಓಟಗಾರ ಅಬೆಲ್ ಮಥಾಯಿ ಸ್ಪರ್ಧೆಯಲ್ಲಿ ಎಲ್ಲರಿಗಿಂತ ಮುಂಚೂಣಿಯಲ್ಲಿದ್ದ, ಆತನ ಹಿಂದೆಯೇ ಸ್ಪೇನ್ ದೇಶದ ಇವಾನ್ ಫರ್ನಾಂಡಿಸ್ ಓಡಿ ಬರುತ್ತಿದ್ದನು. ಇನ್ನೇನು ಓಟದ ಹಾದಿಯ ಅಂತಿಮ ರೇಖೆಯನ್ನು ಮುಟ್ಟುವ ಸಮಯದಲ್ಲಿ ಅಬೆಲ್ ಅಂತಿಮ ಗೆರೆಯನ್ನು ತಪ್ಪಾಗಿ ಊಹಿಸಿಕೊಂಡು ಓಟವನ್ನು ಪೂರೈಸಿದ್ದೇನೆ ಎಂದು ನಿಧಾನವಾಗಿ ಓಟವನ್ನು ಇನ್ನೇನು ನಿಲ್ಲಿಸಬೇಕು ಎಂಬಷ್ಟರಲ್ಲಿ ಹಿಂದಿನಿಂದ ಬರುತ್ತಿದ್ದ ಇವಾನ್ ಫರ್ನಾಂಡಿಸ್ ಗೆ ಅಬೆಲ್ಗೆ ಉಂಟಾದ ಗೊಂದಲದ ಅರಿವಾಯಿತು. ಸ್ಪಾನಿಷ್ ಭಾಷೆಯಲ್ಲಿ ಇನ್ನೂ ಮುಂದೆ ಹೋಗು, ಅಂತಿಮ ಗೆರೆ ಮುಂದೆ ಇದೆ ಎಂದು ಜೋರಾಗಿ ಕೂಗಿದನಾದರೂ ಭಾಷೆ ಗೊತ್ತಿಲ್ಲದ ಕೀನ್ಯದ ಅಬೆಲ್ ಮತ್ತಷ್ಟು ಗೊಂದಲಕ್ಕೀಡಾದನು. ಆಗ ಇವಾನ್ ಅಬೆಲ್ ನನ್ನು ಮುಂದಕ್ಕೆ ತಳ್ಳುತ್ತಾ, ತಾನು ನಿಧಾನವಾಗಿ ಓಡುತ್ತಾ ಅಬೆಲ್ ಅಂತಿಮ ರೇಖೆಯನ್ನು ಮುಟ್ಟಿದ ಮೇಲೆ ತಾನು ಆತನ ಹಿಂದೆ…
ವಿಜಯಪುರ: ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನದಿಂದಾಗಿ ನಮಗೆ ಸ್ವಾತಂತ್ರ್ಯ ಬಂದಿದ್ದು, ಅವರ ತತ್ವಾದರ್ಶಗಳು ನಮಗೆಲ್ಲರಿಗೂ ಪ್ರೇರಣೆಯಾಗಿವೆ ಎಂದು ಕರ್ನಲ್ ಸಂಗಪ್ಪ ಎಚ್. ವಿ. ಹೇಳಿದ್ದಾರೆ.ಗುರುವಾರ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್ ಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೋಂಡು ಅವರು ಮಾತನಾಡಿದರು.ದೇಶಕ್ಕೆ ಸ್ವಾತಂತ್ತ್ರ್ಯ ದೊರಕಲು ನಮ್ಮ ಹಿರಿಯರು ಜೀವದ ಹಂಗು ತೊರೆದು ಹೋರಾಡಿದ್ದಾರೆ. ಅಂದು ಅವರು ನಡೆಸಿದ ಹೋರಾಟದ ಫಲವಾಗಿ ಭಾರತ ಇಂದು ಎಲ್ಲ ಕ್ಷೇತ್ರಗಳಲ್ಲಿಯೂ ಮುನ್ನಡೆಯುತ್ತಿದೆ ಎಂದು ಅವರು ಹೇಳಿದರು.ಈ ಸಂದರ್ಭದಲ್ಲಿ ಸುಮಾರು 500 ವಿದ್ಯಾರ್ಥಿಗಳು ಭಾರತ ನಕ್ಷೆಯ ರೂಪದಲ್ಲಿ ನಿಂತುಕೊಂಡ ದೃಶ್ಯ ರೋಮಾಂಚನ ಗೊಳಿಸಿತು. ಮಕ್ಕಳು ನಡೆಸಿಕೊಟ್ಟ ಸ್ವಾತಂತ್ರ್ಯ ಹೋರಾಟ ಮತ್ತು ದೇಶಭಕ್ತಿ ರೂಪಕಗಳು ಗಮನ ಸೆಳೆದವು. ಬ್ರಿಟೀಷರ ವಿರುದ್ಧ ಹೋರಾಡಿದ ಹಲಗಲಿಯ ಬೇಡರು, ನರಗುಂದ ರೈತರ ಬಂಡಾಯ ಘಟನೆಗಳಾಧಾರಿತ ರೂಪಕಗಳು ಮನಸೂರೆಗೊಂಡವು. ನರ್ಸರಿ ಮತ್ತು ಎಲ್. ಕೆ.ಜಿ, ಯುಕೆಜಿ ಮಕ್ಕಳು ಸ್ವಾತಂತ್ರ ಹೋರಾಟಗಾರರ ವೇಷ ಭೂಷಣ ತೊಟ್ಟು ಗಮನ ಸೆಳೆದರು.ಈ ಸಂದರ್ಭದಲ್ಲಿ ಶಾಲೆಯ…
ಇಂಡಿ: ತಾಲೂಕಿನ ಸರಕಾರಿ ಪ್ರೌಢಶಾಲೆ ಸಾತಲಗಾಂವದ ವಿದ್ಯಾರ್ಥಿನಿ ಕುಮಾರಿ ವಿಜಯಲಕ್ಷ್ಮೀ ಆಲಮೇಲ ಇವರಿಗೆ ಇಂಡಿಯ ಕ್ರೀಡಾಂಗಣದಲ್ಲಿ ನಡೆದ ೭೮ ನೆಯ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ರೂ.ಹತ್ತು ಸಾವಿರ ಚೆಕ್ ನ್ನು ಶಾಸಕ ಯಶವಂತರಾಯಗೌಡ ಪಾಟೀಲರು ನೀಡಿ ಗೌರವಿಸಿದರು.ವಿಜಯಲಕ್ಷ್ಮೀ ಆಲಮೇಲ ೨೦೨೪ ನೇ ಸಾಲಿನಲ್ಲಿ ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಇಂಡಿ ತಾಲೂಕಿನಲ್ಲಿ ಗಣಿತ ಮತ್ತು ವಿಜ್ಞಾನ ವಿಷಯದಲ್ಲಿ ಅತೀ ಹೆಚ್ಚು ಅಂಕ ಪಡೆದಿದ್ದರು.ಇಂಡಿಯ ಶ್ರೀ ಶಾಂತೇಶ್ವರ ಶಾಲೆಯಲ್ಲಿ ೧೯೮೯- ೯೦ ರಲ್ಲಿ ಎಸ್ಸೆಸ್ಸೆಲ್ಸಿ ಓದಿದ ಗೆಳೆಯರ ಬಳಗದಿಂದ ದಿವಂಗತ ಶಿಕ್ಷಕ ಸುರೇಶ ಕೋಳೆಕರ ಅವರ ಹೆಸರಿನಲ್ಲಿ ಪ್ರತಿ ವರ್ಷ ನೀಡಲಾಗುತ್ತಿದೆ.ಈ ವರ್ಷ ಈ ಪ್ರಶಸ್ತಿಗೆ ವಿಜಯಲಕ್ಷ್ಮೀ ಆಯ್ಕೆಯಾಗಿ ರೂ. ಹತ್ತು ಸಾವಿರ ಪಡೆದಿದ್ದಾರೆ.ಇಂಡಿಯ ಎಸಿ ಅಬೀದ ಗದ್ಯಾಳ, ಗೆಳೆಯರ ಬಳಗದ ಶಿಕ್ಷಕ ದಶರಥ ಕೋರಿ, ತಹಸೀಲ್ದಾರ ಬಿ.ಎಸ್.ಕಡಕಬಾವಿ,ಕ್ಷೇತ್ರಶಿಕ್ಷಣಾಧಿಕಾರಿ ಟಿ.ಎಸ್.ಅಲಗೂರ ಮತ್ತಿತರಿದ್ದರು.
ಇಂಡಿ: ತಾಲೂಕಿನ ಲಚ್ಯಾಣ ಗ್ರಾಮಕ್ಕೆ ಸಂಸದ ರಮೇಶ ಜಿಗಜಿಣಗಿ ರೈಲು ಅಧಿಕಾರಿಗಳು ಶುಕ್ರವಾವಾರದಂದು ಭೇಟಿ ನೀಡಿ ರೇಲ್ವೆ ಓವರ್ ಬ್ರಿಜ್ (ಆರ್ಓಬಿ) ಮತ್ತು ರೇಲ್ವೆ ಕೆಳ ಮಾರ್ಗದ ನಿರ್ಮಾಣ ಕುರಿತು ಯೋಜನೆ ರೂಪಿಸಲು ಸ್ಥಳ ಪರಿಶೀಲನೆ ನಡೆಸಿದರು.ಈ ಗ್ರಾಮದ ರೈಲು ನಿಲ್ದಾಣಕ್ಕೆ ಸಂಸದ ರಮೇಶ ಜಿಗಜಿಣಗಿ ರೈಲು ಅಧಿಕಾರಿಗಳು,ತಹಶೀಲ್ದಾರ್ ಗ್ರಾಮಸ್ಥರೊಂದಿಗೆ ಭೇಟಿ ಮಾಡಿ,ಸ್ಥಳ ಪರಿಶೀಲನೆ ನಡೆಸಿದ ಬಳಿಕ ಸಮೀಪದ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಸದಸ್ಯರ ಜೊತೆ ಇಲ್ಲಿನ ಶ್ರೀ ಸಿದ್ಧಲಿಂಗ ಮಹಾರಾಜರ ಕಮರಿಮಠದ ಸೇವಕರು, ತಹಶೀಲ್ದಾರರೊಂದಿಗೆ ಚರ್ಚಿಸಿದರು. ಬಳಿಕ ಮುಂಬರುವ ದಿನಗಳಲ್ಲಿ ಕೂಡಲೆ ಅಂತಿಮ ನಿರ್ಧಾರ ಕೈಗೊಂಡು ಯೋಜನೆ ರೂಪಿಸಿ, ಉತ್ತಮ ರೇಲ್ವೆ ಮೆಲ್ಸೆತುವೆ, ಕೆಳ ಮಾರ್ಗ ನಿರ್ಮಿಸಿ ಈ ಭಾಗದ ಜನರಿಗೆ ಸುಗಮ ಸಂಚಾರದ ವ್ಯವಸ್ಥೆ ಕಲ್ಪಿಸಲಾಗುವದು ಎಂದು ಜಿಗಜಿಣಗಿ ಸಾರ್ವಜನಿಕರಿಗೆ ತಿಳಿಸಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕಲಾವತಿ ಬಿರಾದಾರ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಅಶೋಕಗೌಡ ಪಾಟೀಲ, ಗ್ರಾಮದ ಗಣ್ಯರಾದ…
ಇಂಡಿ:ತಾಲ್ಲೂಕಿನ ಗೋರನಾಳ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ಚುನಾವಣೆಯಲ್ಲಿ ಸಂಘದ ಮಾಜಿ ಅಧ್ಯಕ್ಷ ವೆಂಕಟರಾಯ ಪಾಟೀಲ ಅವರ ಬಣದ ೧೨ಜನ ಸದಸ್ಯರು ಆಯ್ಕೆ ಆಗಿದ್ದಾರೆ ಎಂದು ಚುನಾವಣೆ ಅಧಿಕಾರಿ ಕೆ.ಎಚ್.ವಡ್ಡರ ಮತ್ತು ವಿ.ಪಿ.ನಾಯಕ ತಿಳಿಸಿದ್ದಾರೆ.ಚುನಾವಣೆ ಪತ್ರ ಪಡೆದ ನಂತರ ಸಂಘದ ಕಚೇರಿಯಲ್ಲಿ ವೆಂಕಟರಾಯ ಪಾಟೀಲ ಮಾತನಾಡಿ, ಸಂಘ ಸಮಾಜದಲ್ಲಿ ಆರ್ಥಿಕವಾಗಿ ದುರ್ಬಲರಾದವರಿಗೆ ಆರ್ಥಿಕ ಸಹಾಯ ನೀಡುವ ಮೂಲಕ ಸಮಾಜಮುಖಿ ಕೆಲಸ ಮಾಡುತ್ತಿರುವುದು ಶ್ಲಾಘನೀಯ. ಇಂದು ಅನೇಕ ಸಹಕಾರಿ ಸಂಘಗಳು ಸಾರ್ವಜನಿಕರಿಗೆ ಸ್ಪಂದಿಸುವ ಮೂಲಕ ಸಮಾಜಮುಖಿಯಾಗಿ ಒಳ್ಳೆಯ ಸಹಕಾರ ನೀಡುತ್ತಿವೆ. ಸಂಘಗಳು ಕೇವಲ ಲಾಭದ ಉದ್ದೇಶ ಹೊಂದಿರದೇ ಸಾರ್ವಜನಿಕರಿಗೆ ಸಹಕಾರಿಯಾಗಿ ಬೆಳೆಯಬೇಕು. ಜನರ ಸೇವಕರು ಎಂಬ ಭಾವನೆ ರಾಜಕೀಯ ನಾಯಕರಲ್ಲಿರಬೇಕು. ಮತ ಹಾಕಿದವರೂ ನಮ್ಮವರೇ, ಹಾಕದವರೂ ನಮ್ಮವರೇ. ಚುನಾವಣೆ ನಡೆದಾಗ ಮಾತ್ರ ರಾಜಕೀಯ ಮಾಡೋಣ. ಉಳಿದ ದಿನಗಳಲ್ಲಿ ಜನರ ಅಭಿವೃದ್ಧಿ ಪರ ಕೆಲಸ ಮಾಡಬೇಕಾಗಿರುವುದು ನಮ್ಮ ಕರ್ತವ್ಯ. ದೇಶದ ಪ್ರತಿ ಕ್ಷೇತ್ರದ ಅಭಿವೃದ್ಧಿಯಲ್ಲಿ ಸಹಕಾರಿ ಸಂಘಗಳ ಪಾತ್ರ ಹಿರಿದಾಗಿದೆ.…
