Author: editor.udayarashmi@gmail.com

ಚಡಚಣ: ಸಮೀಪದ ರೇವತಗಾಂವ ಗ್ರಾಮದಲ್ಲಿ ಶುಕ್ರವಾರದಂದು ವರಮಹಾಲಕ್ಷ್ಮೀ ವ್ರತವನ್ನು ಎಲ್ಲಾ ಮುತ್ತೈದೆಯರು ಭಕ್ತಿ ಶ್ರದ್ಧೆಯಿಂದ ಆಚರಿಸಿದರು.ಶುಕ್ರವಾರದಂದು ಮುಂಜಾನೆ ಮನೆಯನ್ನು ಶುಚಿಗೊಳಿಸಿ, ರಂಗೋಲಿ, ತಳಿರು ತೋರಣಗಳಿಂದ ಅಲಂಕರಿಸಿ, ಸ್ನಾನ ಮಾಡಿ ಶುಭ್ರವಾದ ಬಟ್ಟೆಯನ್ನು ತೊಟ್ಟು ಮಡಿಯಲ್ಲಿ ನೈವೇದ್ಯವನ್ನು ತಯಾರಿಸಿ, ಸಣ್ಣ ಉಕ್ಕಿನ ಬಿಂದಿಗೆ ಅಥವಾ ಬೆಳ್ಳಿಯ ಚೆಂಬನ್ನು ಕಲಶದ ರೂಪದಲ್ಲಿ ಇಟ್ಟು ಅದರಲ್ಲಿ ನೀರನ್ನು ತುಂಬಿಸಿ ಅದಕ್ಕೆ ಸ್ವಲ್ಪ ಖರ್ಜೂರ ಹಾಗೂ ದ್ರಾಕ್ಷಿಯನ್ನು ಹಾಕಿದರು. ಒಂದು ತಟ್ಟೆಯಲ್ಲಿ ಅಕ್ಕಿಯನ್ನು ಹರಡಿ ಅದರಲ್ಲಿ ಕಲಶವನ್ನು ಇಟ್ಟು, ಮಾವಿನ ಎಲೆ ಹಾಗೂ ವೀಳೈದೆಲೆಯನ್ನು ಕಲಶದ ಸುತ್ತ ಜೋಡಿಸಿ ಅದರ ಮೇಲೆ ಅರಿಶಿಣ ಹಚ್ಚಿದ ತೆಂಗಿನಕಾಯಿಯನ್ನು ಇಟ್ಟು ಅದಕ್ಕೆ ಶ್ವೇತವರ್ಣದ ಕೆಂಪು ಅಂಚಿನ ಸೀರೆಯನ್ನು ಉಡಿಸಿ ಅಲಂಕರಿಸಿ. ಜೊತೆ ಒಡವೆಗಳನ್ನು ಹಾಕಿ ಗ್ರಾಮದ ಅಶ್ವೀನಿ ಅಪ್ಪಾಸಾಬ ಅಡಕೆಯವರ ಮನೆಯಲ್ಲಿ ಸಿಂಗಾರಗೊಳಿಸಿದ್ದರು.ಲಕ್ಷ್ಮೀಯ ಮುಂದೆ ಕಮಲದ ಹೂವು ಹಾಗೂ ಬಿಲ್ವಪತ್ರೆಯನ್ನು ಇಟ್ಟು ಪೂಜೆ ಮಾಡಿದರು. ಅಲ್ಲದೇ ಲಕ್ಷ್ಮೀಯ ಮುಂದೆ ಹಣ, ಚಿನ್ನ, ಬಳೆ, ಹಣ್ಣು, ಸ್ವೀಟ್, ಅರಿಶಿಣ, ಕುಂಕುಮ ಎಲ್ಲವನ್ನೂ…

Read More

ದೇವರಹಿಪ್ಪರಗಿ: ಪಟ್ಟಣದ ಶಾಲಾ, ಕಾಲೇಜು, ಸರ್ಕಾರಿ ಕಚೇರಿ, ಬ್ಯಾಂಕ್, ಸಹಕಾರಿ ಸಂಘಗಳು ಸೇರಿದಂತೆ ತಾಲ್ಲೂಕಿನ ವಿವಿಧೆಡೆಯಲ್ಲಿ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯ ದಿನಾಚರಣೆ ಯನ್ನು ಆಚರಿಸಲಾಯಿತು.ಸಮೃದ್ಧಿ ಸಹಕಾರ ಸಂಘ: ಧ್ವಜಾರೋಹಣವನ್ನು ಅಧ್ಯಕ್ಷೆ ಸಂಗೀತಾ ನಾಯಿಕ್ ಹಾಗೂ ಉಪಾಧ್ಯಕ್ಷ ರಿಯಾಜ್ ತಾಂಬೋಳಿ ನೆರವೇರಿಸಿದರು. ಗಣ್ಯರಾದ ಡಾ.ಆರ್.ಆರ್.ನಾಯಿಕ್, ನಿರ್ದೇಶಕರಾದ ಪಿ.ಜಿ.ಹಿರೇಮಠ, ಬಿ.ಎನ್.ಬಬಲೇಶ್ವರ, ವೆಂಕಟೇಶ ಕುಲಕರ್ಣಿ, ಎ.ಕೆ.ಹಿರೇಮಠ, ಕೆ.ಎಸ್.ಕೋರಿ, ಗುರು ಕರಭಂಟನಾಳ, ಮಂಜುನಾಥ ಒಂಟೆತ್ತಿನ, ಉಮೇಶ ಹಳಪಾಣಿ, ಸುಭಾಸ್ ಜಾಧವ, ಸಿಇಓ ಗುರುಬಸಯ್ಯ ಹಿರೇಮಟ್ಟ, ಸಿಬ್ಬಂದಿ ಇದ್ದರು.ಅಂಚೆ ಕಚೇರಿ: ಅಂಚೆಪಾಲಕ ಕೆ.ಕೆ.ಪೂಜಾರಿ ಧ್ವಜಾರೋಹಣ ನೆರವೇರಿಸಿದರು. ವೆಂಕಟೇಶ ಕುಲಕರ್ಣಿ, ರಾಮನಗೌಡ ಬಿರಾದಾರ, ಸಂಗಣ್ಣ ತಳವಾರ, ಸತ್ಯನಾರಾಯಣ ಜೋಷಿ, ಪ್ರವೀಣ ಮಾಳೆಗಾರ, ನಬಿಲಾಲ್ ನದಾಫ್, ರಂಜಿತ ತಳಕೇರಿ, ನಯನ ಯಡಹಳ್ಳಿ, ಬಸಯ್ಯ ಹಿರೇಮಠ, ಪಾರ್ವತಿ ಹಿರೇಮಠ, ಬಿ.ಟಿ.ಮಾದರ, ಭಾಗ್ಯ ಪುರವಂತರಮಠ ಇದ್ದರು.ಯಾಳವಾರ ಶ್ರೀಸೋಮೇಶ್ವರ ಸಂಯುಕ್ತ ಪದವಿಪೂರ್ವ ಕಾಲೇಜ: ಸಂಸ್ಥೆಯ ಅಧ್ಯಕ್ಷ ರಾಜುಗೌಡ ನಾಡಗೌಡ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಚನ್ನುಗೌಡ ನ್ಯಾಮಣ್ಣವರ, ಸಂಸ್ಥೆಯ ಬಿ.ಆರ್.ಪಾಟೀಲ, ಆರ್.ಎಸ್.ಪಾಟೀಲ, ಎ.ಡಿ.ನಾಗರಾಳ,…

Read More

ಚಿಮ್ಮಡ: ದೇಶಕ್ಕೆ ಸ್ವಾತಂತ್ರ್ಯವನ್ನು ಬ್ರಿಟಿಷರು ದಾನವಾಗಿ ನೀಡಿಲ್ಲ ವಿವಿಧ ಹೋರಾಟಗಳ ಮೂಲಕ ಅವರಿಂದ ನಾವು ಕಿತ್ತುಕೊಂಡಿದ್ದೆವೆ ಎಂದು ತೇರದಾಳ ಶಾಸಕ ಸಿದ್ದು ಸವದಿ ಹೇಳಿದರು,ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಆಯೋಜಿಸಲಾಗಿದ್ದ ವೀರ ಯೋಧ ಬಸವರಾಜ ಸಿದ್ದಪ್ಪ ನಾವಿಯವರ ಕಂಚಿನ ಪ್ರತಿಮೆ ಅನಾವರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಸ್ವಾತಂತ್ರ್ಯ ಪಡೆಯಲು ಹಲವಾರು ದೇಶಭಕ್ತರು ತಮ್ಮ ಬಲಿದಾನಗೈದಿದ್ದಾರೆ, ಹಲವು ಮಹಾತ್ಮರು ಕಠಿಣ ಜೈಲುವಾಸದೊಂದಿಗೆ ಚಿತ್ರಹಿಂಸೆ ಅನುಭವಿಸಿದ್ದಾರೆ. ಅಲ್ಲದೇ ಸಾವಿರಾರು ಜನ ಹೋರಾಟಗಾರರು ತಮ್ಮ ಆಸ್ತಿ-ಪಾಸ್ತಿ ಕಳೆದುಕೊಂಡಿದ್ದಾರೆ ಎಂದರು.ಕಾಂಗ್ರೆಸ್ ಧುರೀಣ ಸಿದ್ದು ಕೊಣ್ಣೂರ ಮಾತನಾಡಿ, ನಾವಿಲ್ಲಿ ಸುಖವಾಗಿ ನಿದ್ರೆ ಮಾಡಲು ಕಾರಣ ಯೋಧರು ನಿದ್ದೆಗೆಟ್ಟು ನಮಗಾಗಿ ಗಡಿ ಕಾಯುತ್ತಾರೆ, ದೇಶಸೇವೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ವೀರ ಸೇನಾನಿಗಳ ಕುಟುಂಬವನ್ನು ಕಾಯುವುದು ಪ್ರತಿಯೊಬ್ಬ ಪ್ರಜೆಯ ಜವಾಬ್ದಾರಿಯಾಗಿದೆ ಎಂದರು.ಉಪನ್ಯಾಸಕರಾಗಿ ಪತ್ರಕರ್ತ ಶಿವಲಿಂಗ ಸಿದ್ನಾಳ ಮಾತನಾಡಿ, ಶಿಸ್ತು,ಗತ್ತು,ನಿಯತ್ತು, ತಾಕತ್ತು, ಹಾಗೂ ಸಂಪತ್ತು ಇವೆಲ್ಲವೂ ಸಿಗುವುದು ಸೈನಿಕ ಹುದ್ದೆಯಲ್ಲಿ ಮಾತ್ರ ಎಂದ ಅವರು ಸೈನಿಕರ ಪರ ಹಲವಾರು ನುಡಿಮುತ್ತುಗಳ…

Read More

ಮೋರಟಗಿ:ದೇಶದ ಸ್ವಾತಂತ್ರ್ಯಕ್ಕಾಗಿ, ಈ ನಾಡಿನ ಮಣ್ಣಿಗಾಗಿ, ಅನೇಕ ದೇಶಪ್ರೇಮಿಗಳು ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ.ಅವರ ಆದರ್ಶ ಜೀವನದ ಬದುಕು ನಮ್ಮೆಲ್ಲರಿಗೆ ದಾರಿ ದೀಪ, ಯುವ ಪೀಳಿಗೆ ಇತಿಹಾಸ ಓದುವ ಮೂಲಕ ಮಹಾನ್ ವ್ಯಕ್ತಿಗಳ ದೇಶಪ್ರೇಮ ಮೈಗೂಡಿಸಿಕೊಳ್ಳಬೇಕು ಎಂದು ಅಂಜುಮನ್ ಸಮೀತಿ ಅಧ್ಯಕ್ಷ ಮೈಬೂಬಸಾಬ ಕಣ್ಣಿ ಹೇಳಿದರು.ಗ್ರಾಮದ ಹೊರ ಪೊಲೀಸ್ ಠಾಣೆಯಲ್ಲಿ ಹಮ್ಮಿಕೊಂಡ ೭೮ನೇ ಸ್ವಾತಂತ್ರ‍್ಯ ದಿನಾಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಹಿರಿಯರ ತ್ಯಾಗ ಬಲಿದಾನದ ಮೂಲಕ ಸಂಪಾದಿಸಿರುವ ಸ್ವಾತಂತ್ರ‍್ಯ ಎಂದಿಗೂ ಮರೆಯಲಾಗದು, ನಮ್ಮೆಲ್ಲರಲ್ಲಿ ಆಗಸ್ಟ್ ೧೫ ಕ್ಕೆ ಮಾತ್ರ ದೇಶಾಭಿಮಾನ ಸೀಮಿತವಾಗಬಾರದು.ಪಾಲಕರು ಮಕ್ಕಳಿಗೆ ಬಾಲ್ಯದಲೇ ದೇಶಾಭಿಮಾನದ ಕಿಚ್ಚು ಹೆಚ್ಚಿಸಬೇಕು ಎಂದರು.ಗ್ರಾಮ ಪಂಚಾಯತಿ ಕಾರ್ಯಾಲಯ, ಕಲ್ಪವೃಕ್ಷ ಶಾಲೆ, ಸಿದ್ದರಾಮೇಶ್ವರ ಶಾಲೆ, ಸದ್ಭಾವನಾ ಶಾಲೆ, ಜ್ಞಾನಜ್ಯೋತಿ ಶಾಲೆ, ಐ ಡಿ ಎಲ್ ಆಂಗ್ಲ ಮಾಧ್ಯಮ ಶಾಲೆ ಸೇರಿದಂತೆ ವಿವಿಧ ಖಾಸಗಿ ಸರ್ಕಾರಿ ಇಲಾಖೆಗಳಲ್ಲಿ ಅಚ್ಚುಕಟ್ಟಾಗಿ ಧ್ವಜಾರೋಹಣ ನೆರವೇರಿತು ಪಂಚಾಯತಿ ಆವರಣದಲ್ಲಿ ಪ್ರಾಥಮಿಕ ಶಾಲೆಯ ಮಕ್ಕಳಿಂದ ವಿವಿಧ ರೀತಿಯ ಸ್ವತಂತ್ರ ಹೋರಾಟಗಾರರ ಕುರಿತು ರಸಮಂಜರಿ ಕಾರ್ಯಕ್ರಮ ವಿಶೇಷವಾಗಿತ್ತು.ಗ್ತಾಮ…

Read More

ಸಿಂದಗಿ: ಪಟ್ಟಣದ ಬಸವ ನಗರದ ಜ್ಞಾನ ಭಾರತಿ ವಿದ್ಯಾಮಂದಿರ ಶಾಲೆಯಲ್ಲಿ ಬಿಜೆಪಿ ಮುಖಂಡ ಶ್ರೀಶೈಲಗೌಡ ಬಿರಾದಾರ (ಮಾಗಣಗೇರಾ) ಅವರು ಗುರುವಾರ 78ನೇಯ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ನೆರವೇರಿಸಿದರು.ಈ ವೇಳೆ ಮಾತನಾಡಿದ ಅವರು, ಲಕ್ಷಾಂತರ ಚಳುವಳಿಕಾರರ ತ್ಯಾಗ ಬಲಿದಾನಗಳಿಂದಾಗಿ ಬ್ರಿಟಿಷರ ದಾಸ್ಯದಿಂದ ಭಾರತ ಮುಕ್ತಗೊಂಡಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡ ಮಹಾನ್ ಚೇತನಗಳನ್ನು ಸ್ಮರಿಸಿ, ಭವ್ಯ ಮತ್ತು ಬಲಿಷ್ಠ ಭಾರತದ ನಿರ್ಮಾಣಕ್ಕಾಗಿ ನಾವೆಲ್ಲರೂ ಶ್ರಮಿಸೋಣ ಎಂದು ಯುವಜನತೆಗೆ ಕರೆ ನೀಡಿದರು.ಶಾಲೆಯ ಗುರು ವೃಂದ, ಸಿಬ್ಬಂದಿ, ಪಾಲಕರು ಹಾಗೂ ವಿದ್ಯಾರ್ಥಿಗಳಿದ್ದರು.

Read More

ವಿಜಯಪುರ: ೭೮ ನೇ ವರ್ಷದ ಸ್ವಾತಂತ್ರ‍್ಯೋತ್ಸವದ ದಿನಾಚರಣೆಯನ್ನು ನಗರದ ಮುದ್ರಣ ಕಾರ್ಮಿಕರ ಸಂಘದಿಂದ ಸಂಭ್ರಮ – ಸಡಗರದಿಂದ ಆಚರಿಸಲಾಯಿತು.ಗುರುವಾರ ನಗರದ ಮುದ್ರಣ ಕಾರ್ಮಿಕರ ಸಂಘದ ಕಛೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಿದಾನಂದ ವಾಲಿ ಮಾತನಾಡಿ, ಸ್ವಾತಂತ್ರ‍್ಯ ಸಿಕ್ಕು ಇಂದಿಗೆ ೭೭ ಗತಿಸಿ ೭೮ನೇ ಸಂಭ್ರಮದಲ್ಲಿ ನಾವೆಲ್ಲರೂ ಇದ್ದೇವೆ. ಆದರೆ ಇಂದಿನ ಯುವ ಪೀಳಿಗೆ ಸ್ವಾತಂತ್ರ‍್ಯದ ಮಹತ್ವ, ಸ್ವಾತಂತ್ರ‍್ಯಕ್ಕಾಗಿ ಜೀವತ್ಯಾಗ ಮಾಡಿದ ಮಹನೀಯರ ನೆನಪು ಸ್ಮರಣೆ ಮಾಡುತ್ತಿಲ್ಲ. ಯುವಕರು ಮೋಬೈಲಗೆ ಅಂಟಿಕೊಂಡು ತಮ್ಮತನವನ್ನು ಕಳೆದುಕೊಳ್ಳುತ್ತಿದ್ದಾರೆ. ತಮ್ಮ ಜವಾಬ್ದಾರಿ ಮರೆಯುತ್ತಿದ್ದಾರೆ ಎಂದು ವಿಷಾದಿಸಿದ ಅವರು, ಯುವಕರಿಗೆ ಸ್ವಾತಂತ್ರ‍್ಯದ ಮಹತ್ವ ತಿಳಿ ಹೇಳಬೇಕಾಗಿದೆ ಎಂದರು.ಈ ಸಂದರ್ಭದಲ್ಲಿ ಸಂಘದ ಖಜಾಂಚಿ ಹನೀಪ್ ಮುಲ್ಲಾ, ನಿರ್ದೇಶಕರಾದ ನಾಗರಾಜ ಬಿಸನಾಳ, ಮೃತ್ಯಂಜಯ ಶಾಸ್ತ್ರಿ, ಜಗದೀಶ ಶಹಾಪೂರ, ಮಂಜು ರೂಗಿ, ವೆಂಕಟೇಶ ಕಪಾಲಿ, ನಬಿ ಮಕಾಂದಾರ, ಉಮೇಶ ಶಿವಶರಣ, ದೀಪಕ ಜಾಧವ, ಶ್ರೀಮಂತ ಬೂದಿಹಾಳ, ಸಿದ್ದಲಿಂಗ ಸಿಂಪಗೇರಿ, ಭೀಮಾಶಂಕರ ಕುಮಟಗಿ, ರಾಜು ರೇಶ್ಮಿ, ಕುಮಾರ ಉಪ್ಪರಗಿ, ಆದರ್ಶ ವಾಲಿ ಮುಂತಾದವರು ಇದ್ದರು.

Read More

ಆಲಮೇಲ: ಪಟ್ಟಣದ ಐ.ಕೆರಾಯಲ್ ಪ್ರಾಥಮಿಕ ಶಾಲೆಯಲ್ಲಿ ೭೮ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ದ್ವಜಾರೋಹಣವನ್ನು ಸಂಸ್ಥೆಯ ಉಪಾಧ್ಯಕ್ಷ ಶೌಕತಲಿ ಸುಂಬಡ ನೆರವೇರಿಸಿದರು.ಮುಖ್ಯಅತಿಥಿಗಳಾಗಿ ಡಾ.ರಮೇಶ ಕತ್ತಿ ಮಾತನಾಡಿ, ‘ಐಕ್ಯತೆ ಮತ್ತು ಸರ್ವಧರ್ಮಿಯರ ಸಮಾನತೆಯ ಬದುಕನ್ನು ಕಟ್ಟಿಕೊಳ್ಳಲು ಜಗತ್ತಿನ ಮುಂಚೂಣಿ ರಾಷ್ಟ್ರಗಳಲ್ಲಿ ಭಾರತವು ಮುಂದಿದೆ ಎಂದರು.ಅತಿಥಿಗಳಾಗಿ ಪತ್ರಕರ್ತ ಅಬ್ದುಲಗನಿ ದೇವರಮನಿ, ಪಾಲಕ ಪ್ರತಿನಿಧಿ ಶಂಕರಗೌಡ ಪಾಟೀಲ, ಕಾಸೀರಾಯ ಬಿರಾದಾರ ಮೊದಲಾದವರು ವೇದಿಕೆಯಲ್ಲಿದ್ದರು.ಮುಖ್ಯಗುರುಗಳಾದ ಸಂತೋಷ ಚೆಂಗಟ್ಟಿ ಅಧ್ಯಕ್ಷತೆ ವಹಿಸಿಕೊಂಡಿದ್ದರು. ಶಿಕ್ಷಕಿ ಸಂಜನಾ ಬೇನೂರ, ಮೇಧಾರಾಣಿ, ರಕ್ಷಿತಾ ಅಂಬೂರೆ, ಚೆನ್ನಬಸಮ್ಮ ಮೊದಲಾದವರು ಉಪಸ್ಥಿತರಿದ್ದರು.ಕು.ವಿದ್ಯಾ ಬಿರಾದಾರ ನಿರೂಪಿಸಿದರು. ಕು.ಸುಷ್ಮಿತಾ ಕರಂಡೆ ಸ್ವಾಗತಿಸಿದರು.ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Read More

ವಿಜಯಪುರ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜನ್ಮದಿನ ಆಚರಣೆಯನ್ನು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಆಚರಿಸಲಾಯಿತು.ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜನ್ಮದಿನ ಆಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಗೌರವ ಸಲ್ಲಿಸಿದರು.ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ,ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬದ್ರೂದ್ಧಿನ ಸೌದಾಗರ್, ಆಹಾರ ಇಲಾಖೆಯ ಉಪ ನಿರ್ದೇಶಕ ವಿನಯಕುಮಾರ ಪಾಟೀಲ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ ಸೇರಿದಂತೆ ಜಿಲ್ಲಾಧಿಕಾರಿಗಳ ಕಚೇರಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಇದ್ದರು.

Read More

ಸ್ವಾತಂತ್ರ‍್ಯ ದಿನಾಚರಣೆಯಲ್ಲಿ ಜಿ.ಪಂ ಸಿಇಓ ರಿಷಿ ಆನಂದ ಸಲಹೆ ವಿಜಯಪುರ: ಸ್ವಾತಂತ್ರ‍್ಯೋತ್ಸವದ ದಿನಾಚರಣೆ ಅಂಗವಾಗಿ ಗುರುವಾರ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಧ್ವಜಾರೋಹಣ ನೆರವೇರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಮ್ಮ ದೇಶದ ಇತಿಹಾಸದಲ್ಲಿ ಆಗಷ್ಟ್ ೧೫ರ ಇಂದಿನ ದಿನ ಮಹತ್ವದ್ದಾಗಿದೆ. ನಮ್ಮ ದೇಶಕ್ಕೆ ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತಂತ್ರ‍್ಯ ಸಿಕ್ಕಿದ ದಿನ ಮತ್ತು ಅಂದಿನ ಸ್ವಾತಂತ್ರ‍್ಯ ಹೋರಾಟದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ನಮ್ಮ ಭಾರತದ ಸಂವಿಧಾನದ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್, ಸುಭಾಷ್ ಚಂದ್ರ ಬೋಸ್, ಲಾಲ್ ಬಹದ್ದೂರ್ ಶಾಸ್ತ್ರಿ, ಭಗತ್ ಸಿಂಗ್ ಸೇರಿದಂತೆ ವಿವಿಧ ಮಹನೀಯರ ತ್ಯಾಗ ಬಲಿದಾನದಿಂದ ಸ್ವಾತಂತ್ರ್ಯ ಲಭಿಸಿದ್ದು, ಭಾರತೀಯರಾದ ನಾವು ಹೆಮ್ಮೆಯಿಂದ ನೆನೆಯಬೇಕಿದೆ ಎಂದು ಅವರು ಹೇಳಿದರು.ಸ್ವಾತಂತ್ರ‍್ಯಕ್ಕಾಗಿ ಹೋರಾಡಿದ, ಪ್ರಾಣತೆತ್ತ, ಬಲಿದಾನವಾದ ಎಲ್ಲ ವೀರರನ್ನು ನೆನೆದು, ಅವರಿಗೆ ನಮನ ಸಲ್ಲಿಸಬೇಕಿದೆ. ಪ್ರತಿ ವರ್ಷ ಆಗಸ್ಟ್ ೧೫ ರಂದು ದೇಶಭಕ್ತಿಯ ಉತ್ಸಾಹ, ಧ್ವಜಾರೋಹಣ, ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಸ್ವಾತಂತ್ರ್ಯ…

Read More

ವಿಜಯಪುರದಲ್ಲಿ ಸ್ವಾತಂತ್ರ‍್ಯ ದಿನಾಚರಣೆ | ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಸಚಿವ ಡಾ. ಎಂ.ಬಿ.ಪಾಟೀಲ ಅಭಿಮತ ವಿಜಯಪುರ: ಸಾಮಾಜಿಕ ನ್ಯಾಯ, ಶೈಕ್ಷಣಿಕ ಅಭಿವೃದ್ಧಿ ಮತ್ತು ಮಹಿಳಾ ಸಬಲೀಕರಣ ಒಳಗೊಂಡಂತೆ ರಾಜ್ಯದ ಸಮಗ್ರ ಅಭಿವೃದ್ಧಿಗೆ ಕಂಕಣಬದ್ಧವಾಗಿರುವ ನಮ್ಮ ಸರ್ಕಾರವು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಜನಪರ ಕಾಳಜಿಯೊಂದಿಗೆ ಕಾರ್ಯನಿರ್ವಹಿಸುತ್ತಿದೆ. ದೇಶದಾದ್ಯಂತ ಸಂಚಲನ ಉಂಟುಮಾಡಿರುವ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ಫಲಾನುಭವಿಗಳ ಬದುಕಿನಲ್ಲಿ ಬೆಳಕು ಮತ್ತು ಭರವಸೆ ತುಂಬುವಲ್ಲಿ ಸಫಲವಾಗಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಹೇಳಿದರು.ಗುರುವಾರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ‍್ಯ ದಿನಾಚರಣೆ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ನಾಡಿನ- ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಜಿಲ್ಲೆ ಸೇರಿದಂತೆ ರಾಷ್ಟ್ರದ ವಿವಿಧ ಮಹನೀಯರನ್ನು ಸ್ಮರಿಸಿ ಸಂದೇಶ ನೀಡಿ, ಮಾತನಾಡಿದ ಅವರು, ವಿಜಯಪುರ ನಗರದಲ್ಲಿ ಜಿಲ್ಲಾ ಕಚೇರಿಗಳ ಸಂಕೀರ್ಣ ಅನುಮೋದನೆಯಾಗಿದ್ದು, ಸರ್ಕಾರದಿಂದ ರೂ.೪೯ ಕೋಟಿ ಅನುದಾನಕ್ಕೆ…

Read More