Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಜಿಲ್ಲಾ ಪಂಚಾಯತಿಯ ರಸ್ತೆಯಲ್ಲಿರುವ ಗಾಂಧಿ ಭವನದಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯೋತ್ಸವದ ಶುಭಾಶಯ ಕೋರಿದರು.ಈ ಸಂದರ್ಭದಲ್ಲಿ ವಾರ್ತಾಧಿಕಾರಿ ಅಮರೇಶ ದೊಡಮನಿ, ವಾರ್ತಾ ಇಲಾಖೆಯ ಸುರೇಶ ಅಂಬಿಗೇರ ಶ್ರೀಮತಿ ಮಂಜುಳಾ, ಜೆ.ಬಿ ತಾಟೆ, ಗಾಂಧಿ ಭವನದ ನಿರ್ವಹಣಾ ಸಮಿತಿ ಸದಸ್ಯರಾದ ಪೀಟರ್ ಅಲೆಕ್ಸಾಂಡರ್, ನೇತಾಜಿ ಗಾಂಧಿ, ಬಾಪುಗೌಡ ಪಾಟೀಲ ಶೇಗುಣಸಿ ಸೇರಿದಂತೆ ವಿದ್ಯಾರ್ಥಿಗಳು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ದೇವರಹಿಪ್ಪರಗಿ: ಯೋಧರ ಹಾಗೂ ಶೈಕ್ಷಣಿಕ ರಂಗದ ಸಾಧಕರ ಸನ್ಮಾನ ಮಕ್ಕಳ ಸ್ಪೂರ್ತಿಗೆ ಕಾರಣವಾಗಬಲ್ಲದು ಎಂದು ಶಾಸಕ ರಾಜುಗೌಡ ಪಾಟೀಲ(ಕುದರಿ ಸಾಲವಾಡಗಿ) ಹೇಳಿದರು.ಪಟ್ಟಣದ ಶಾಸಕರ ಮಾದರಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಜರುಗಿದ ಸ್ವಾತಂತ್ರೋತ್ಸವ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.ಸ್ವಾತಂತ್ರ್ಯ ದಿನಾಚರಣೆ ನಮ್ಮೆಲ್ಲರ ರಾಷ್ಟ್ರೀಯ ಹಬ್ಬ ಇದರಲ್ಲಿ ಪ್ರತಿಯೊಬ್ಬರು ಪಾಲ್ಗೊಳ್ಳುವುದು ಅಗತ್ಯ. ನಮ್ಮ ದೇಶದ ಗಡಿಕಾಯುವ ಯೋಧರು ಹಾಗೂ ಶಿಕ್ಷಣದಲ್ಲಿ ಸಾಧನೆ ಮಾಡಿದ ಪ್ರತಿಯೊಬ್ಬರು ನಮಗೆ ಹಾಗೂ ಮುಂದಿನ ಪೀಳಿಗೆಗೆ ಆದರ್ಶವಾಗಬಲ್ಲರು ಎಂದರು.ತಹಶೀಲ್ದಾರ ಪ್ರಕಾಶ ಸಿಂದಗಿ ಪ್ರಸ್ತಾವಿಕವಾಗಿ ಮಾತನಾಡಿ, ಸ್ವಾತಂತ್ರ್ಯ ದಿನಾಚರಣೆಯ ಈ ಶುಭ ಸಂದರ್ಭದಲ್ಲಿ ತ್ಯಾಗ ಬಲಿದಾನಗೈದ ಸ್ವಾತಂತ್ರ್ಯವೀರರನ್ನು ನೆನೆಯೋಣ ಎಂದರು.ಇದೇ ಸಂದರ್ಭದಲ್ಲಿ ತಾಲ್ಲೂಕಿನ ವಿವಿಧ ಗ್ರಾಮಗಳ ನಿವೃತ್ತ ಯೋಧರು ಹಾಗೂ ತಾಲ್ಲೂಕಿನಲ್ಲಿ ಎಸ್.ಎಸ್.ಎಲ್.ಸಿ, ಪಿಯುಸಿ, ಪದವಿ ಪರೀಕ್ಷೆಗಳಲ್ಲಿ ಹೆಚ್ಚು ಅಂಕಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ನಂತರ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.ಪಟ್ಟಣ ಪಂಚಾಯಿತಿ ಧ್ವಜಾರೋಹಣ ಹಾಗೂ ತಾಲ್ಲೂಕಾಡಳಿತದ ಕಾರ್ಯಕ್ರಮದ ವೇದಿಕೆಯಲ್ಲಿ ಪಟ್ಟಣ ಪಂಚಾಯಿತಿಗೆ ಆಯ್ಕೆಯಾದ ಒಬ್ಬ ಮಹಿಳಾ ಅಭ್ಯರ್ಥಿಯ ಹೊರತಾಗಿ ಯಾವ…
ವಿಜಯಪುರದಲ್ಲಿ ನೇತಾಜಿ ಪುತ್ಥಳಿ ಅನಾವರಣಗೊಳಿಸಿದ ಶಾಸಕ ಯತ್ನಾಳ ಭರವಸೆ ವಿಜಯಪುರ: ನಗರದ ಮನಗೂಳಿ ಅಗಸಿ ಬಳಿ ದಲಿತ ಸಮುದಾಯವರು ನೂರಾರು ವರ್ಷಗಳಿಂದ ವಾಸಿಸುತ್ತಿರುವ ಮನೆಗಳ ಹತ್ತಿರದ ಕಂದಾಯ ಇಲಾಖೆಯ ಏಳು ಎಕರೆ ಆಸ್ತಿಯನ್ನು ವಕ್ಫ್ ಆಸ್ತಿಯಾಗಿ ಮಾಡಿಕೊಂಡಿರುವುದನ್ನು, ಕರ್ನಾಟಕ ಸ್ಲಂ ಬೋರ್ಡ ಅಂತ ಉತಾರೆ ಮಾಡಿಕೊಡಿ, ಅಲ್ಲಿ ದಲಿತರಿಗಾಗಿ ೨೦೦ ಆಶ್ರಯ ಮನೆಗಳನ್ನು ನಿರ್ಮಿಸುವುದಾಗಿ ಜಿಲ್ಲಾಧಿಕಾರಿಗಳಿಗೆ ತಿಳಿಸಿರುವೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.ನಗರದ ವಾರ್ಡ ನಂ.೩೫ ರಲ್ಲಿ ಬರುವ ನೇತಾಜಿ ಸುಭಾಷ್ ಚಂದ್ರ ಬೋಸ್ ಮಾರ್ಗದಲ್ಲಿ ನೂತನವಾಗಿ ನಿರ್ಮಿಸಲಾದ ನೇತಾಜಿ ಸುಭಾಷ್ ಚಂದ್ರ ಬೋಸ್ ವೃತ್ತದಲ್ಲಿ ನೇತಾಜಿ ಪುತ್ಥಳಿ ಅನಾವರಣಗೊಳಿಸುವ ಮೂಲಕ ವೃತ್ತ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಜಗತ್ತಿನ ಯಾವ ಶಕ್ತಿ ಅಡ್ಡ ಬಂದರೂ ಮನಗೂಳಿ ಅಗಸಿ, ಬಳಿ ದಲಿತರಿಗಾಗಿ ಮನೆಗಳನ್ನು ಕಟ್ಟುವೆ. ಅದಕ್ಕೆ ಡಾ.ಅಂಬೇಡ್ಕರ್ ನಗರ ಅಂತ ಹೆಸರನ್ನೇ ಇಡುವೆ ಎಂದು ಭರವಸೆ ನೀಡಿದರು.ಭಾರತೀಯ ಸೇನೆ, ರೈಲ್ವೆ ಬಿಟ್ಟರೇ ಅತೀ ಹೆಚ್ಚು ಆಸ್ತಿ ಇರುವುದು ವಕ್ಫ್ದು.…
ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಕರೆ ವಿಜಯಪುರ: ಬಾಲ ಮಂದಿರದಲ್ಲಿರುವ ಪ್ರತಿಭಾವಂತ ಮಕ್ಕಳನ್ನು ಸಮಾಜದ ಮುಖ್ಯ ವಾಹಿನಿಗೆ ತರುವುದು ನಾಗರಿಕ ಸಮಾಜದ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು ಕರ್ನಾಟಕ ಬಾಲ ವಿಕಾಸ ಅಕಾಡೆಮಿಯು ನಾಡಿನ ಮಕ್ಕಳ ಶ್ರೇಯೋಭಿವೃದ್ಧಿಯ ಜೊತೆಗೆ ಬಾಲ ಮಂದಿರ ಮಕ್ಕಳಿಗಾಗಿ ವಿಶೇಷ ಯೋಜನೆಗಳನ್ನು ಕೈಗೊಳ್ಳಲಿದೆ. ಆ ಮೂಲಕ ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬುವ ಕೆಲಸವನ್ನು ಮಾಡಲಿದ್ದೇನೆ ಎಂದು ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.ಗುರುವಾರ ಅವರು ನಗರದ ಬಾಲಕರ ಬಾಲ ಮಂದಿರದಲ್ಲಿ 78ನೆಯ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.”ನಾನು ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ಕೇಂದ್ರ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸದೆ ಅಲ್ಲಿಯ ಅಧಿಕಾರಿಗಳಿಗೆ ಕೇಂದ್ರ ಕಚೇರಿಯ ದ್ವಜಾರೋಹಣ ನೆರವೇರಿಸುವಂತೆ ತಿಳಿಸಿ, ಬಾಲ ಮಂದಿರದ ಮಕ್ಕಳೊಂದಿಗೆ ಸ್ವಾತಂತ್ರ್ಯೋತ್ಸವ ಆಚರಿಸಲು ನಿರ್ಧರಿಸಿದ್ದೆ. ಈ ಮಕ್ಕಳಲ್ಲಿರುವ ಶಿಸ್ತು ಅವರ ಕಣ್ಣುಗಳಲ್ಲಿರುವ ಹೊಳಪನ್ನು ನೋಡಿದಾಗ ತುಂಬಾ ಸಂತೋಷವಾಗಿದೆ. ಬಾಲ ಮಂದಿರದ ಮಕ್ಕಳಿಗೆ ಆತ್ಮ ವಿಶ್ವಾಸವನ್ನು ತುಂಬಿ, ಪ್ರೀತಿ-ಕಕ್ಕುಲತೆ ಕಾಳಜಿಯನ್ನು ತೋರಿದರೆ…
ಸ್ವಾತಂತ್ರ್ಯ ಹಬ್ಬಕ್ಕೆ ಮೇಘ ಸಿಂಚನ | ಮಳೆಯಲ್ಲೂ ತಿರಂಗಾ ಕಳೆ ಸಂಭ್ರಮ ಚಿಕ್ಕಪಡಸಲಗಿ: ಅಗಸ್ಟ್ 15 ದೇಶವಾಸಿಗಳಿಗೆ ಮಹತ್ವದ ದಿನ. ಬ್ರಿಟಿಷ್ ರ ಕಪಿಮುಷ್ಟಿಯಿಂದ ಮುಕ್ತವಾದ ಈ ವಿಶೇಷ ದಿನದಂದು ಭಾರತಕ್ಕೆ ಸ್ವಾತಂತ್ರ್ಯ ಲಭಿಸಿದ ಸುಕ್ಷಣ.ಆ ಹಿನ್ನೆಲೆಯಲ್ಲಿ ದೇಶದಾದ್ಯಂತ ಸ್ವಾತಂತ್ರ್ಯ ದಿನಾಚರಣೆ ಸಡಗರ, ಸಂಭ್ರಮ ! ಅಂತೆಯೇ ಈ ಸವಿದಿನ ಅರ್ಥವೆತ್ತಾಗಿ ಆಚರಿಸುವುದಕ್ಕಾಗಿ ಭಾಗಶಃ ಕಾರ್ಯಕ್ರಮದ ಪೂರ್ವ ತಯಾರಿಗಳೆಲ್ಲ 14 ರಂದೇ ಇಲ್ಲಿನ ಶಾಲಾ,ಕಾಲೇಜುಗಳ ಮುಖ್ಯಸ್ಥರು ಮಾಡಿಕೊಂಡು ಸನ್ನದ್ಧ ಸ್ಥಿತಿಯಲ್ಲಿದ್ದರು. ಆದರೆ 15 ರ ತಡರಾತ್ರಿ ವರುಣದೇವ ಧರೆಗಾಗಮಿಸಿ ಅಸ್ತವ್ಯಸ್ತತೆಗೆ ಕಾರಣವಾಗುವಂತೆ ಆತಂಕ ಸೃಷ್ಟಿಸಿದ.ಇಲ್ಲಿನ ಶಿವಶರಣ ಹರಳಯ್ಯ ಸ್ಮಾರಕ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ಮುನ್ನಾದಿನ ಬುಧವಾರ ಶಾಲಾಂಗಳ ಶುಚಿಗೊಳಿಸಿ ಸುಣ್ಣದ ಮಾಕಿ೯ಂಗ್ ಲೇನ್ ಔಟ್ ಹಾಕಲಾಗಿತ್ತು. ಭಾರತ ನಕ್ಷೆ ಚಿತ್ರಕ್ಕೆ ತ್ರಿವರ್ಣ ಬಣ್ಣದ ಹಾಗೂ ಶಾಲಾವರಣದ ರಸ್ತೆ ಅಕ್ಕಪಕ್ಕದಲ್ಲಿ ರಂಗೋಲಿ ಚಿತ್ತಾರ ಮೂಡಿದ್ದವು ಆದರೆ 15 ರ ಮಧ್ಯರಾತ್ರಿ ವ್ಯಾಪಕ ಮಳೆ ಸುರಿದ ಪರಿಣಾಮ ಅವೆಲ್ಲವೂ ನೀರಿಗೆ ಹೋಮವಾದವು. ಬೆಳಿಗ್ಗೆ ಶಾಲಾ…
ಸಿಂದಗಿ: ಎಲ್ಲೆಡೆ ೭೮ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗಿದೆ. ಆದರೆ ಕೆಲವೊಂದು ಕಡೆ ಒಂದಲ್ಲ ಒಂದು ಯಡವಟ್ಟುಗಳು ಆಗುತ್ತವೆ. ಆದರೂ ಅದಕ್ಕೆ ಸಂಬಂಧಿಸಿದವರು ಕೂಡಲೇ ಎಚ್ಚೆತ್ತುಕೊಳ್ಳದೆ ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡುತ್ತಾರೆ. ಅಂತಹದ್ದೆ ಒಂದು ಘಟನೆ ಪಟ್ಟಣದಲ್ಲಿರುವ ಪುರಸಭೆ ಕಚೇರಿ ಮೇಲೆ ನೆರವೇರಿಸಿದ ಧ್ವಜಾರೋಹಣದ ವೇಳೆ ನಡೆದಿದೆ.ಆದರೂ ಅಧಿಕಾರಿಗಳು ಅದನ್ನು ಸರಿಪಡಿಸುವ ಕೆಲಸ ಮಾಡದೆ ಹೋಗಿದ್ದು, ಸಾರ್ವಜನಿಕರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ರಾಷ್ಟ್ರಧ್ವಜವನ್ನು ಉಲ್ಟಾ ಹಾರಿಸಿದ ಘಟನೆ ಸಿಂದಗಿ ಪುರಸಭೆಯಲ್ಲಿ ನಡೆದಿದೆ.೭೮ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಬಾವುಟ ಉಲ್ಟಾ ಹಾರಿಸಲಾಗಿದೆ. ಇದನ್ನು ಅಲ್ಲಿನ ಅಧಿಕಾರಿಗಳು, ಸಿಬ್ಬಂದಿ ಗಮನಿಸದೆ ಹೋಗಿರುವುದು ನಿಜಕ್ಕೂ ವಿಷಾದನೀಯ. “ನನಗೆ ಆಲಮೇಲದ ಚಾರ್ಜ್ ಸಹ ಇದ್ದು, ಇಲ್ಲಿ ಮುಂಜಾನೆ ಧ್ವಜಾರೋಹಣ ಮಾಡುವಾಗ ಸರಿಯಾಗಿಯೇ ಇದೆ. ಈ ಬಗ್ಗೆ ನಮ್ಮಲ್ಲಿ ವಿಡಿಯೋ ಸಹ ಇದೆ. ಆದರೆ, ನಮ್ಮ ಕಚೇರಿ ಸುತ್ತಮುತ್ತ ಅಂಗಡಿಗಳಿದ್ದು, ಮೇಲೆ ಹತ್ತಲು ಅವಕಾಶವಿದೆ. ಯಾರಾದರೂ ಕಿಡಿಗೇಡಿಗಳು ನನಗೆ ಮಸಿ ಬಳಿಯುವ ಸಲುವಾಗಿ…
ಸಿಂದಗಿಯಲ್ಲಿ ವಿವಿಧೆಡೆ ಸಂಭ್ರಮದ ೭೮ನೆಯ ಸ್ವಾತಂತ್ರ್ಯ ದಿನಾಚರಣೆ ಸಿಂದಗಿ: ಬದುಕಿನಲ್ಲಿ ವಿದ್ಯಾರ್ಥಿಗಳಿಗೆ ಶಿಸ್ತು ಬಹಳ ಮುಖ್ಯ. ವಿದ್ಯಾರ್ಥಿಗಳು ಇತಿಹಾಸ ಸೃಷ್ಠಿಸುವ ಕಾರ್ಯ ಮಾಡುವ ಮೂಲಕ ದೇಶ ಅಭಿವೃದ್ಧಿಯ ಕನಸು ನನಸು ಮಾಡಬೇಕು ಎಂದು ಮಕ್ಕಳ ಹಿರಿಯ ಸಾಹಿತಿ ಹ.ಮ.ಪೂಜಾರ ಹೇಳಿದರು.ಪಟ್ಟಣದ ಹೊರ ವಲಯದ ರಾಂಪೂರ ರಸ್ತೆಯಲ್ಲಿರುವ ಶ್ರೀ ಸಮರ್ಥ ವಿದ್ಯಾ ವಿಕಾಸ ಹಾಗೂ ವಿವಿದೊದ್ದೇಶಗಳ ಸಂಸ್ಥೆಯ ಪ್ರೇರಣಾ ಪಬ್ಲಿಕ್ ಸ್ಕೂಲ್ನಲ್ಲಿ ಹಮ್ಮಿಕೊಂಡ ೭೮ನೆಯ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮಾತನಾಡಿದರು. ಅವರು, ಮಕ್ಕಳು ಓದಿಗಾಗಿ ಸ್ನೇಹಿತರನ್ನು ಮಾಡಿಕೊಳ್ಳಬೇಕು. ಓದಿನಲ್ಲಿ ತೊಡಗಿಸಿಕೊಂಡು ಪರಸ್ಪರ ಚರ್ಚಿಸಬೇಕು. ವಿದ್ಯಾರ್ಥಿಗಳಲ್ಲಿ ಏನಾದರೂ ಗೊಂದಲಗಳಿದ್ದರೆ ಶಿಕ್ಷಕರ ಮಾರ್ಗದರ್ಶನ ಪಡೆದುಕೊಳ್ಳಿ. ಈ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡುವಲ್ಲಿ ಹೋರಾಟಗಳನ್ನು ಮಾಡಿದ ವೀರರನ್ನು ಸ್ಮರಿಸಿ ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು. ಹತ್ತನೇ ತರಗತಿ ವಿದ್ಯಾರ್ಥಿಗಳ ವಿದ್ಯಾಭ್ಯಾಸದೆಡೆಗೆ ಹೆಚ್ಚಿನ ಗಮನ ಹರಿಸುವಂತೆ ಕಿವಿಮಾತು ಹೇಳಿದರು.ಈ ವೇಳೆ ಸಂಸ್ಥೆಯ ಅಧ್ಯಕ್ಷ ಆರ್.ಡಿ.ಕುಲಕರ್ಣಿ ಶಾಲೆಯ ಮುಖ್ಯ ಗುರುಮಾತೆ ಸಾವಿತ್ರಿ ಅಸ್ಕಿ, ಸಂಸ್ಥೆಯ ಮಾರ್ಗದರ್ಶಕರಾದ ಎಸ್.ಬಿ.ಸಾಲೋಟಗಿ, ಪಾಲಕ ಪ್ರತಿನಿಧಿ ಶಶಿಕಾಂತ…
ಚಿಕ್ಕಪಡಸಲಗಿ: ಇಂದಿನ ಯುವಜನತೆ ಸ್ವಾತಂತ್ರ್ಯದ ಸೂಕ್ಷ್ಮತೆ ಅರಿತು ನಡೆಯಬೇಕು. ಸ್ವಾತಂತ್ರ್ಯವೆಂಬುದು ಅಮೂಲ್ಯ ಸಂಪತ್ತು. ಅದನ್ನು ಸ್ವಚ್ಛಂದಕ್ಕೆ ಎಂದೂ ಬಳಸಿಕೊಳ್ಳಬಾರದು. ಸ್ವಾತಂತ್ರ್ಯದ ಪವಿತ್ರತೆಯಡಿಯಲ್ಲಿ ನೆಮ್ಮದಿ ಕಾಣಬೇಕು ಎಂದು ವಿಶ್ರಾಂತ ದೈಹಿಕ ಶಿಕ್ಷಣ ಶಿಕ್ಷಕ ಬಸವರಾಜ ಅನಂತಪುರ ಹೇಳಿದರು.ಸ್ಥಳೀಯ ಶಿವಶರಣ ಹರಳಯ್ಯ ಸ್ಮಾರಕ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ 77 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು, ಭವಿಷ್ಯತ್ತಿನ ಯುವ ತಲೆಮಾರುಗಳಲ್ಲಿ ಸ್ವಾತಂತ್ರ್ಯದ ಅರಿವು ಮೂಡಲಿ ಎಂದರು.ದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷ್ ರ ವಿರುದ್ಧ ಭಾರತೀಯರು ತೊಡೆತಟ್ಟಿ ನಿಂತರು. ಕಠಿಣಾತೀತಿ ಶಿಕ್ಷೆ ಅನುಭವಿಸಿ ನರಳಾಡಿದರು.ಇಡೀ ಜೀವನ ಭಾರತದ ಚರಿತ್ರೆಯ ಭವಿಷ್ಯಕ್ಕಾಗಿ ಮುಡಪಾಗಿಟ್ಟು ಜೀವ ತೆತ್ತಿದ್ದಾರೆ. ಅಸಂಖ್ಯಾತ ಮಹನೀಯರ ತ್ಯಾಗ,ಬಲಿದಾನದ ಮೂಲಕ ಗಿಟ್ಟಿಸಿರುವ ಸ್ವಾತಂತ್ರ್ಯದ ಇತಿಹಾಸ ಬಿಕ್ಕಳಿಕೆಗಳನ್ನು ಯುವಕರು ತಿಳಿದುಕೊಳ್ಳಬೇಕು ಎಂದರು.ಧ್ವಜಾರೋಹಣ ನೆರವೇರಿಸಿದ ಶಾಲಾ ಸ್ಥಾನಿಕ ಆಡಳಿತ ಮಂಡಳಿ ಸದಸ್ಯ ರಾಜು ಹಣಮಂತ ತೇರದಾಳ, ಅಸಂಖ್ಯಾತ ಹುತಾತ್ಮ ದೇಶಭಕ್ತ ಧ್ರುವಗಳೇ ನಮಗೆಲ್ಲ ಪ್ರೇರಕರು ಎಂದರು.ಅಧ್ಯಕ್ಷತೆ ವಹಿಸಿದ್ದ ಸ್ಥಾನಿಕ ಶಾಲಾ ಆಡಳಿತ ಮಂಡಳಿ ಸದಸ್ಯ…
ಮುದ್ದೇಬಿಹಾಳ: ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಪ್ರತಿಯೊಂದು ರಾಜ್ಯದಲ್ಲಿ ಭಾಷೆ, ಅಹಾರ, ಉಡುಪು, ಆಚಾರ, ಧರ್ಮ ಎಲ್ಲರದಲ್ಲೂ ವ್ಯತ್ಯಾಸ ವಿದ್ದರೂ ನಾವೆಲ್ಲ ಒಂದಾಗಿ ಬಾಳುತ್ತಿದ್ದೇವೆ ಇದೇ ಭಾರತ ದೇಶದ ಸಂವಿಧಾನದ ವಿಶೇಷತೆ ಎಂದು ಶಾಸಕ, ಸಾಬೂನು ಹಾಗೂ ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ ಅಪ್ಪಾಜಿ ಹೇಳಿದರು.ಪಟ್ಟಣದ ತಾಲೂಕು ಆಡಳಿತದಿಂದ ತಹಶೀಲ್ದಾರ ಕಾರ್ಯಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ 78ನೇ ಸ್ವಾತಂತ್ರೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ನಮ್ಮ ದೇಶ ವಿವಿಧತೆಯಲ್ಲಿ ಏಕತೆ ಕಾಣುವ ದೇಶ. ನನ್ನ ದೇಶ ಮೊದಲು ನಂತರ ನಾನು ನನ್ನ ಕುಟುಂಬ ಎನ್ನುವ ಭಾವನೆ ನಮ್ಮೆಲ್ಲರಲ್ಲಿ ಬರಬೇಕು. ಎಲ್ಲರೂ ಒಂದಾಗಿ ಬಾಳುವದು ಮುಖ್ಯ ಎನ್ನುವದು ಅರಿತುಕೊಳ್ಳಬೇಕು. ದೇಶ ಕಟ್ಟುವ ಕಾರ್ಯದಲ್ಲಿ ಎಲ್ಲರೂ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಡೆದಲ್ಲಿ ಮುಂದೆ ಕರಾಳವಾದ ದಿನಗಳನ್ನು ಎದುರಿಸಬೇಕಾಗಬಹುದು ಎಂದರು.ತಹಶೀಲ್ದಾರ ಬಲರಾಮ ಕಟ್ಟಿಮನಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಭಾರತಕ್ಕೆ ಸ್ವಾತಂತ್ರö್ಯ ಸುಲಭವಾಗಿ ಸಿಕ್ಕಿಲ್ಲ. ಹಲವಾರು ವರ್ಷಗಳ ಕಾಲ ಹೋರಾಟಗಳು ತ್ಯಾಗ ಬಲಿದಾನಗಳು ನಡೆದಿವೆ. ದೇಶದ…
ಆಲಮಟ್ಟಿ: ಈ ಭಾಗದ ವಿದ್ಯಾರ್ಥಿಗಳಿಗೆ ತಂತ್ರಜ್ಞಾನದ ಶಿಕ್ಷಣ ದೊರೆಯಲಿ ಎನ್ನುವ ನಿಟ್ಟಿನಲ್ಲಿ ಇಲ್ಲಿನ ಶಾಲೆಗಳಿಗೆ ಕೃಷ್ಣಾ ಭಾಗ್ಯ ಜಲ ನಿಗಮದ ವತಿಯಿಂದ ಸ್ಮಾರ್ಟ್ ಕ್ಲಾಸ್ ಇದೇ ವರ್ಷದ ಶೈಕ್ಷಣಿಕ ಸಾಲಿನಲ್ಲಿ ಕೊಡಲಾಗುವುದು ಎಂದು ಕೆಬಿಜೆಎನ್ಎಲ್ ಎಂಡಿ ಕೆ.ಪಿ.ಮೋಹನರಾಜ್ ತಿಳಿಸಿದರು.ಆಲಮಟ್ಟಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಕೃಷ್ಣಾ ಭಾಗ್ಯ ಜಲ ನಿಗಮ ಹಾಗೂ ಸರ್ಕಾರಿ ನೌಕರರ ಸಂಘ ಏರ್ಪಡಿಸಿದ್ದ ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.೧೨ ನೇ ಶತಮಾನದಲ್ಲಿ ಬಸವಣ್ಣನವರ ವೈಚಾರಿಕ ಕ್ರಾಂತಿ, ೨೦ ನೇ ಶತಮಾನದಲ್ಲಿ ಆಲಮಟ್ಟಿ ಜಲಾಶಯದಿಂದಾದ ನೀರಾವರಿ ಕ್ರಾಂತಿ ಈ ಭಾಗದ ಜನರ ಸಾಮಾಜಿಕ, ಆರ್ಥಿಕ ಬದಲಾವಣೆಗೆ ಮೂಲ ಕಾರಣವಾಗಿವೆ ಎಂದರು.ಪAಚವಾರ್ಷಿಕ ಯೋಜನೆಯ ಫಲವಾಗಿ ೧೯೬೪ ರಲ್ಲಿ ಅಡಿಗಲ್ಲು ಹಾಕಿ ೨೦೦೨ ರಿಂದ ನೀರಾವರಿಗಾಗಿ ಐದು ಜಿಲ್ಲೆಗಳ ಸುಮಾರು ೬.೫ ಲಕ್ಷ ಹೆಕ್ಟೇರ್ ಜಮೀನಿಗೆ ನೀರುಣಿಸುತ್ತಿರುವ ಆಲಮಟ್ಟಿ ಜಲಾಶಯದ ಭಾಗ ನಾವೆಲ್ಲರೂ ಆಗಿದ್ದೇವೆ ಎಂಬ ಹೆಮ್ಮೆ ಇದೆ ಎಂದರು.ನೌಕರರ ಸಂಘದ ಅಧ್ಯಕ್ಷ ಸದಾಶಿವ ದಳವಾಯಿ ಅಧ್ಯಕ್ಷತೆ…
