Author: editor.udayarashmi@gmail.com

ಸಿಂದಗಿ:ಎಲ್ಲೆಡೆ ೭೮ನೇ ಸ್ವಾತಂತ್ರ‍್ಯೋತ್ಸವವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗಿದೆ. ಆದರೆ ಕೆಲವೊಂದು ಕಡೆ ಒಂದಲ್ಲ ಒಂದು ಯಡವಟ್ಟುಗಳು ಆಗುತ್ತವೆ. ಆದರೂ ಅದಕ್ಕೆ ಸಂಬಂಧಿಸಿದವರು ಕೂಡಲೇ ಎಚ್ಚೆತ್ತುಕೊಳ್ಳದೆ ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡುತ್ತಾರೆ. ಅಂತಹದ್ದೆ ಒಂದು ಘಟನೆ ಪಟ್ಟಣದಲ್ಲಿರುವ ಪುರಸಭೆ ಕಚೇರಿ ಮೇಲೆ ನೆರವೇರಿಸಿದ ಧ್ವಜಾರೋಹಣದ ವೇಳೆ ನಡೆದಿದೆ. ಆದರೂ ಅದನ್ನು ಸರಿಪಡಿಸುವ ಕೆಲಸ ಮಾಡದೆ ಹೋಗಿದ್ದು, ಸಾರ್ವಜನಿಕರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ರಾಷ್ಟ್ರಧ್ವಜವನ್ನು ಉಲ್ಟಾ ಹಾರಿಸಿದ ಘಟನೆ ಸಿಂದಗಿ ಪುರಸಭೆಯಲ್ಲಿ ನಡೆದಿದೆ. ೭೮ನೇ ಸ್ವಾತಂತ್ರ‍್ಯ ದಿನಾಚರಣೆ ಹಿನ್ನೆಲೆಯಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಬಾವುಟ ಉಲ್ಟಾ ಹಾರಿಸಲಾಗಿದೆ. ಇದನ್ನು ಅಲ್ಲಿನ ಅಧಿಕಾರಿಗಳು, ಸಿಬ್ಬಂದಿ ಗಮನಿಸದೆ ಹೋಗಿರುವುದು ನಿಜಕ್ಕೂ ವಿಷಾದನೀಯ.ಈ ಬಗ್ಗೆ ಸ್ಪಷ್ಟನೆ ಕೇಳಲು ಪುರಸಭೆ ಮುಖ್ಯಾಧಿಕಾರಿ ಸುರೇಶ ನಾಯಕ ಅವರಿಗೆ ಫೋನ್ ಮಾಡಿ ಮಾತನಾಡಿದಾಗ ಅವರು ಹೇಳಿದ್ದು, ನನಗೆ ಆಲಮೇಲದ ಚಾರ್ಜ್ ಸಹ ಇದೆ. ಇಲ್ಲಿ ಮುಂಜಾನೆ ಧ್ವಜಾರೋಹಣ ಮಾಡುವಾಗ ಸರಿಯಾಗಿಯೇ ಇದೆ. ಈ ಬಗ್ಗೆ ನಮ್ಮಲ್ಲಿ ವಿಡಿಯೋ ಸಹ ಇದೆ. ಆದರೆ,…

Read More

ಸಿಂದಗಿ:ರಾಜ್ಯದಲ್ಲಿ ನಮ್ಮ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಐದು ಗ್ಯಾರಂಟಿಗಳನ್ನು ಜಾರಿಗೆ ತಂದಿದೆ. ಇದರಿಂದ ಅನೇಕರ ಜೀವನದಲ್ಲಿ ಬೆಳಕು ಚೆಲ್ಲುವಲ್ಲಿ ಈ ಯೋಜನೆಗಳು ಸಹಕಾರಿಯಾಗಿವೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಂಡ ೭೮ನೇ ಸ್ವತಂತ್ರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಭಾರತ ದೇಶ ಸ್ವತಂತ್ರ ಬಂದ ನಂತರ ಭಾರತವನ್ನು ಅತ್ಯಂತ ಪ್ರಗತಿಯತ್ತ ಕೊಂಡ್ಯೊಯಬೇಕು. ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಮತ್ತು ಧಾರ್ಮಿಕವಾಗಿ ಜಗತ್ತಿನಲ್ಲಿಯೇ ಮುನ್ನಡೆಯ ರಾಷ್ಟ್ರವನ್ನಾಗಿ ಮಾಡಬೇಕು ಎನ್ನುವ ನಿಟ್ಟಿನಲ್ಲಿ ನಮ್ಮ ಹಿರಿಯ ನಾಯಕರ ಪ್ರಯತ್ನದ ಫಲವಾಗಿ ಇಂದು ೭೮ನೆಯ ಸ್ವಾತಂತ್ರೋತ್ಸವವನ್ನು ಬಹಳ ಅಭಿಮಾನದಿಂದ ಆಚರಣೆ ಮಾಡುತ್ತಿದ್ದೇವೆ. ಜಾತಿ, ಧರ್ಮ, ಮತಗಳಿಗಿಂತ ದೇಶ ಪ್ರೇಮ ದೊಡ್ಡದು. ಸಂವಿಧಾನದಿಂದ ಭಾರತ ಬದಲಾಗಿದೆ. ಭಾರತವು ಇಂದು ಸಧೃಡವಾಗಿ, ಆರ್ಥಿಕವಾಗಿ ಸಬಲವಾಗಿದೆ ಎಂದರೆ ಅದಕ್ಕೆ ಕಾರಣ ಡಾ.ಬಿ.ಆರ್.ಅಂಬೇಡ್ಕರ್‌ರವರು ಬರೆದಿರುವ ಸಂವಿಧಾನ. ಇಂದು ನಾವೆಲ್ಲರೂ ದೇಶಕ್ಕಾಗಿ ಹೋರಾಡಿದ ಹೋರಾಟಗಾರರನ್ನು ಸ್ಮರಿಸಿಕೊಳ್ಳಬೇಕು. ಈ ಭಾಗದ ಶಾಸಕನಾಗಿ ಆಯ್ಕೆಯಾದ ಬಳಿಕ ಸಿಂದಗಿ ಮತಕ್ಷೇತ್ರವನ್ನು ಅಭಿವೃದ್ಧಿ…

Read More

ಚಡಚಣ: ಪೂರ್ವಜರಲ್ಲಿದ್ದ ಸ್ವದೇಶಾಭಿಮಾನದ ಕಿಚ್ಚು ಹಾಗೂ ಶ್ರದ್ಧೆಯ ಹೋರಾಟದ ಫಲವಾಗಿ ನಮಗೆ ಸ್ವಾತಂತ್ರ್ಯ ದೊರಕಿದ್ದು ಅದನ್ನು ಮುಂದಿನ ಪೀಳಿಗೆಗೂ ತಿಳಿಸಿ ಕೊಡುವ ಪ್ರಯತ್ನ ನಮ್ಮಿಂದ ನಡೆಯಬೇಕಿದೆ ಎಂದು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳಾದ ಆರ್.ಎನ್.ಹತ್ತಳ್ಳಿ ಹೇಳಿದರು.ರೇವತಗಾಂವ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ೭೮ನೇ ಸ್ವಾತಂತ್ರೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿ ಕೊಡುವಲ್ಲಿ ಹೋರಾಡಿದ ಮಹನೀಯರನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ದೇಶದ ಪ್ರಗತಿ ಮತ್ತು ಉನ್ನತಿಗೆ ನಾವೆಲ್ಲರೂ ನಮ್ಮಿಂದ ಸಾಧ್ಯವಾಗುವಷ್ಟು ರೀತಿಯಲ್ಲಿ ಸಹಕರಿಸುವಂತಾಗಬೇಕು ಎಂದರು.ಸರ್ಕಾರಿ ಪ್ರೌಢ ಶಾಲೆಯ ಮುಖ್ಯ ಗುರುಮಾತೆ ಎಂ.ಎಸ್.ಪಾಟೀಲ ಮಾತನಾಡುತ್ತ,ಭಾರತ ಸ್ವಾತಂತ್ರ್ಯ ಕ್ಕಾಗಿ ಲಕ್ಷಾಂತರ ಮಂದಿ ದೇಶ ಭಕ್ತರು, ಹೋರಾಟಗಾರರು ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ. ೨೦೦ ವರ್ಷಗಳ ಬ್ರಿಟಿಷ್ ಆಳ್ವಿಕೆಯಿಂದ ಮುಕ್ತವಾದ ಭಾರತ ಪ್ರಜಾಸತ್ತಾತ್ಮಕ ಸಾರ್ವಭೌಮ ರಾಷ್ಟ್ರವಾಯಿತು ಎಂದರು.ಈ ವೇಳೆ ವಿದ್ಯಾರ್ಥಿಗಳು ಭಾರತ ಮಾತೆ ಸೇರಿದಂತೆ ಸ್ವಾತಂತ್ರ್ಯ ಹೋರಾಟಗಾರರ ವೇಷಭೂಷಣಗಳನ್ನು ಧರಿಸಿಕೊಂಡು,ದೇಶಭಕ್ತಿ ಹಾಡು, ನೃತ್ಯ ಹಾಗೂ…

Read More

ಇಂಡಿ: ಸದ್ಯದ ಪರಿಸ್ಥಿತಿಯಲ್ಲಿ ದೇಶದಲ್ಲಿ ಯುವಕರ ಸಂಖ್ಯೆ ಹೆಚ್ಚಿದ್ದು ಎಲ್ಲರೂ ಸಂಪನ್ಮೂಲ ವ್ಯಕ್ತಿಗಳಾದರೆ ಭಾರತ ಶಕ್ತಿಶಾಲಿ ಮತ್ತು ಸರ್ವಶಕ್ತ ಶ್ರೇಷ್ಠ ಭಾರತವಾಗುತ್ತದೆ.ಇದು ಅಂಬೇಡ್ಕರ್ ಮತ್ತು ಗಾಂಧೀಜಿಯವರ ಕನಸಾಗಿದ್ದು ಅದನ್ನು ನನಸಾಗಿಸಲು ಎಲ್ಲರ ಪ್ರಯತ್ನ ಅಗತ್ಯ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.ಅವರು ತಾಲೂಕಾ ಆಡಳಿತ ವತಿಯಿಂದ ತಾಲೂಕಾ ಕ್ರೀಡಾಂಗಣದಲ್ಲಿ ನಡೆದ ೭೮ನೆಯ ಸ್ವಾತಂತ್ರೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.ಭಾರತವು ೭೮ ನೇ ಸ್ವಾತಂತ್ರೋತ್ಸವ ಆಚರಿಸುತ್ತಿರುವಾಗ ಅಲ್ಲಿಂದ ಇಲ್ಲಿಯವರೆಗೆ ನಡೆದು ಬಂದ ದಾರಿಯನ್ನು ಮತ್ತು ಇಂದಿನ ಅಭಿವೃದ್ದಿ ಹೊಂದಿದ ದೇಶದ ಕಲ್ಪನೆಯನ್ನು ಅವಲೋಕಿಸಿದಾಗ ಹೆಮ್ಮೆ ಎನಿಸುತ್ತದೆ.ಸ್ವಾವಲಂಬಿ ಅರ್ಥಿಕತೆಯನ್ನು ನಿರ್ಮಿಸುವತ್ತ ಪ್ರಾಥಮಿಕ ಗಮನ ಹರಿಸಿದ್ದ ಭಾರತ ತಂತ್ರಜ್ಞಾನ ಮತ್ತು ಎಲ್ಲ ಕ್ಷೇತ್ರಗಳಲ್ಲಿ ಜಾಗತಿಕ ನಾಯಕನಾಗಿ ಮಾರ್ಪಟ್ಟಿದೆ ಎಂದರು.ಕಂದಾಯ ಉಪವಿಬಾಗಾಧಿಕಾರಿ ಅಬೀದ ಗದ್ಯಾಳ,ತಹಶೀಲ್ದಾರ್ ಬಿ ಎಸ್ ಕಡಕಬಾವಿ,ಶಿಕ್ಷಕ ಬಸವರಾಜ ಗೋರನಾಳ ಮಾತನಾಡಿದರು.ವೇದಿಕೆಯ ಮೇಲೆ ಡಿ.ವಾಯ್.ಎಸ್.ಪಿ ಜಗದೀಶ ಎಚ್.ಎಸ್,ಇಒ ಗುರುಶಾಂತ ಬಳುಂಡಗಿ, ಪುರಸಭೆ ಮುಖ್ಯಾಧಿಕಾರಿ ಮಹಾಂತೇಶ ಹಂಗರಗಿ, ಕ್ಷೇತ್ರಶಿಕ್ಷಣಾಧಿಕಾರಿ ಟಿ.ಎಸ್.ಅಲಗೂರ ಮತ್ತಿತರಿದ್ದರು.ಲಚ್ಯಾಣದಲ್ಲಿ ಕೊಳವೆ ಬಾವಿಯಲ್ಲಿ ಬಿದ್ದ ಬಾಲಕನನ್ನು ರಕ್ಷಿಸುವಲ್ಲಿ…

Read More

ಢವಳಗಿ:ಗ್ರಾಮದಲ್ಲಿ ಅಗಸ್ಟ15 ಗುರುವಾರದಂದು ಗ್ರಾಮದ ಬಸವ ಬಾಲ ಭಾರತಿ ಶಾಲೆಯಲ್ಲಿ ಸಂಸ್ಥೆಯ ಅಧ್ಯಕ್ಷ ಸಿದ್ದನಗೌಡ ಬಿರಾದಾರ, ಕಸ್ತೂರಬಾ ಗಾಂಧಿ ವಸತಿ ಶಾಲೆಯಲ್ಲಿ ಎಮ್ ಜಿ ಬಿರಾದಾರ, ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷೆ ದ್ರಾಕ್ಷಾಯಿಣಿ ಮೇಲಿನಮನಿ, ಮ ಬ ಪಾಟೀಲ ಪ್ರೌಢಶಾಲೆಯಲ್ಲಿ ಎಸ್ ಎಸ್ ಪಾಟೀಲ,ಮಡಿವಾಳೇಶ್ವರ ಉಚಿತ ಪ್ರಸಾದನಿಲಯದಲ್ಲಿ ಜಿ ಎಸ್ ಕೋರಿ, ಪ್ರಾಥಮಿಕ ಸಹಕಾರಿ ಸಂಘದ ಕಛೇರಿಯಲ್ಲಿ ಅಧ್ಯಕ್ಷ ರುದ್ರಗೌಡ ಪಾಟೀಲ ಹಾಗೂ ಹುತಾತ್ಮ ಯೋಧ ಮಡಿವಾಳಪ್ಪ ನಾಯನೇಗಲಿ ಅವರ ಪ್ರತಿಮೆಯ ಮುಂದೆ ರಾಜುಗೌಡ ಗೌಡರ, ನಾಡ ಕಛೇರಿ ಆವರಣದಲ್ಲಿ ಉಪ ತಹಶೀಲ್ದಾರ್ ಎಸ್ ಬಾವಿಕಟ್ಟಿ ಅವರು ಧ್ವಜಾರೋಹಣವನ್ನು ನೆರವೇರಿಸಿದರು.ಗ್ರಾಪಂ ಸಭಾ ಭವನದಲ್ಲಿ ಗ್ರಾಮದ ಎಲ್ಲಾ ಶಾಲೆಯ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಸರಕಾರಿ ನೌಕರ ಸಂಘದಿಂದ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಆಯ್ಕೆಯಾದ ಢವಳಗಿ ಗ್ರಾಮ ಪಂಚಾಯತಿ ದ್ವೀತಿಯ ದರ್ಜೆ ಲೆಕ್ಕ ಸಹಾಯಕ ಎಮ್ ಕೆ ಗುಡಿಮನಿ ಅವರಿಗೆ ಮತ್ತು ಕಾರ್ಯನಿರತ ಪತ್ರಕರ್ತರ ಸಂಘದಿಂದ…

Read More

ಚಿಮ್ಮಡ: ಗ್ರಾಮದಲ್ಲಿ ೭೮ನೇ ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ವಿವಿಧ ಕಾರ್ಯಕ್ರಮಗಳನ್ನು ಸಡಗರ ಸಂಭ್ರಮದೊಂದಿಗೆ ಹಮ್ಮಿಕೊಳ್ಳಲಾಗಿದೆ.ಗ್ರಾಮದ ಶಾಲಾ ವಿದ್ಯಾರ್ಥಿಗಳಿಂದ ಕವಾಯತು, ಪ್ರಭಾತ್ ಫೇರಿ, ಸೈನಿಕರು ಹಾಗೂ ಸಾಧಕರ ಸನ್ಮಾನ ಹಾಗೂ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಿತು.ಸ್ಥಳೀಯ ಗ್ರಾಮ ಪಂಚಾಯತಿ ಆವರಣದಲ್ಲಿ ನಡೆದ ಧ್ವಜಾರೊಹಣವನ್ನು ಗ್ರಾಮ ಪಂಚಾಯತಿ ಅಧ್ಯಕ್ಷೆ ಮಾಲಾ ಮೋಟಗಿ ನೆರೆವೇರಿಸಿದರು. ಉಪಾಧ್ಯಕ್ಷೆ ಪ್ರೇಮಾ ಗೋವಿಂದಗೋಳ,ಮಾಜಿ ಅಧ್ಯಕ್ಷ ಆನಂದ ಕವಟಗೋಪ್ಪ, ಗುರಲಿಂಗಪ್ಪಾ ಪೂಜಾರಿ, ಪ್ರಭು ನೇಸೂರ, ಪ್ರಕಾಶ ಪಾಟೀಲ, ತಾ.ಪಂ. ಮಾಜಿ ಉಪಾಧ್ಯಕ್ಷ ಪ್ರಭು ಮುಧೋಳ, ಮಹಾಲಿಂಗ ಮಾಯಣ್ಣವರ, ಮನೋಜ ಹಟ್ಟಿ ಸೇರಿದಂತೆ ಗ್ರಾ.ಪಂ. ಸದಸ್ಯರು ಹಲವಾರು ಜನ ಪ್ರಮುಖರು ಆಗಮಿಸಿದ್ದರು.ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಬ್ಯಾಂಕ್‌ನ ಆವರಣದಲ್ಲಿ ನಡೆದ ಧ್ವಜಾರೋಹಣವನ್ನು ಸಂಸ್ಥೆಯ ಅಧ್ಯಕ್ಷ ಹಣಮಂತ ನೇಸೂರ ನೆರವೇರಿಸಿದರು. ಮಾಜಿ ಅಧ್ಯಕ್ಷ ಶಂಕರ ಬಟಕುರ್ಕಿ, ನಿರ್ದೆಶಕರಾದ ನಿಂಗಣ್ಣ ಪೂಜಾರಿ, ರಾಮಪ್ಪ ಜಗದಾಳ, ಚನ್ನಪ್ಪ ಬಿಳ್ಳೂರ, ಸೇರಿದಂತೆ ಅನೇಕ ರೈತಪ್ರಮುಖರು ಆಗಮಿಸಿದ್ದರು.ಸರಕಾರಿ ಪ್ರೌಢಶಾಲೆಯಲ್ಲಿ ನಡೆದ ಧ್ವಜಾರೋಹಣವನ್ನು ಮುಖ್ಯ ಶಿಕ್ಷಕ ಎಂ ಎಸ್ ಜಿಟ್ಟಿ…

Read More

ವಿಜಯಪುರ: ನಗರದ ಸರಕಾರಿ ನೌಕರರ ಸಹಕಾರಿ ಬ್ಯಾಂಕಿನ ಆವರಣದಲ್ಲಿ ೭೮ನೇ ಸ್ವಾತಂತ್ರ್ಯ ದಿನಾಚರಣೆಯ ರಾಷ್ಟ್ರ ಧ್ವಜಾರೋಹಣವನ್ನು ಅಧ್ಯಕ್ಷ ಅರ್ಜುನ ಲಮಾಣಿ ನೆರವೇರಿಸಿ,ಮಾತನಾಡುತ್ತಾ, ದೇಶದ ಸ್ವಾತಂತ್ರ್ಯ ಪಡೆಯುವಲ್ಲಿ ವೀರ ನಾಯಕರ ಪಾತ್ರ ಹಿರಿದಾಗಿದೆ. ಇಡೀ ಜಗತ್ತಿಗೆ ಭಾರತ ಸಂಸ್ಕೃತಿ, ಸಂಸ್ಕಾರದಲ್ಲಿ ಶ್ರೇಷ್ಠತೆಯನ್ನು ಹೊಂದಿದೆ. ಹಿರಿಯರು ದೊರಕಿಸಿಕೊಟ್ಟ ಭವ್ಯ ಭಾರತವನ್ನು ಉಳಿಸಿ ಬೆಳೆಸೋಣ ಎಂದರು.ಜಿಓಸಿಸಿ ಬ್ಯಾಂಕಿನ ನಿರ್ದೇಶಕರಾದ ಸುರೇಶ ಶೇಡಶಾಳ, ಹಣಮಂತ ಕೊಣದಿ, ಚಂದ್ರಶೇಖರ ಜಿತ್ತಿ, ಪ್ರಧಾನ ವ್ಯವಸ್ಥಾಪಕರಾದ ಎಮ್ ವ್ಹಿ ಪರ್ವತಿ, ವ್ಯವಸ್ಥಾಪಕರಾದ ಎಮ್ ಕೆ ಜೋಶಿ ಸೇರಿದಂತೆ ಬ್ಯಾಂಕಿನ ನಿರ್ದೇಶಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.ಪ್ರತಿಭಾ ಪುರಸ್ಕಾರ:ವಿಜಯಪುರ-ಬಾಗಲಕೋಟ ಅವಳಿ ಜಿಲ್ಲೆಯ ಸರಕಾರಿ ನೌಕರರ ಸದಸ್ಯರು ಹಾಗೂ ಸಿಬ್ಬಂದಿಯವರ ಮಕ್ಕಳಿಗಾಗಿ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ.೨೦೨೩-೨೪ ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ೮೦% ಅಂಕಗಳು ಹಾಗೂ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಅರ್ಹತೆ ಆಧಾರದ ಮೇಲೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಪ್ರಧಾನ ಶಾಖೆ ಅಥವಾ ಶಾಖಾ ಕಚೇರಿಗಳನ್ನು ಸಂಪರ್ಕಿಸಲು ಕೋರಲಾಗಿದೆ. ಆ. ೧೬ರಿಂದ…

Read More

ವಿಜಯಪುರ: ಭಾರತದ ಸ್ವಾತಂತ್ರ್ಯಕ್ಕಾಗಿ ಲಕ್ಷಾಂತರ ದೇಶ ಭಕ್ತರು, ಹೋರಾಟಗಾರರು ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ. ಪೂರ್ವಜರಲ್ಲಿದ್ದ ಸ್ವದೇಶಾಭಿಮಾನದ ಕಿಚ್ಚು ಹಾಗೂ ಶ್ರದ್ಧೆಯ ಹೋರಾಟದ ಫಲವಾಗಿ ನಮಗೆ ಸ್ವಾತಂತ್ರ್ಯ ದೊರಕಿದ್ದು ಅದನ್ನು ಮುಂದಿನ ಪೀಳಿಗೆಗೂ ತಿಳಿಸಿ ಕೊಡುವ ಪ್ರಯತ್ನ ನಮ್ಮಿಂದ ನಡೆಯಬೇಕಿದೆ ಎಂದು ಜಿಲ್ಲಾ ಬಂಜಾರಾ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಿ.ಎಲ್.ಚವ್ಹಾಣ ಹೇಳಿದರು.ನಗರದ ಬಂಜಾರ ಶಿಕ್ಷಣ ಸಂಸ್ಥೆಯಲ್ಲಿ ಧ್ವಜಾರೋಹಣ ನೇರವೇರಿಸಿ ಮಾತನಾಡಿದ ಅವರು, ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿ ಕೊಡುವಲ್ಲಿ ಹೋರಾಡಿದ ಮಹನೀಯರನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ. ದೇಶದ ಪ್ರಗತಿ ಮತ್ತು ಉನ್ನತಿಗೆ ನಾವೆಲ್ಲರೂ ನಮ್ಮಿಂದ ಸಾಧ್ಯವಾಗುವಷ್ಟು ರೀತಿಯಲ್ಲಿ ಸಹಕರಿಸುವಂತಾಗಬೇಕು.ಇದು ಸ್ವಾತಂತ್ರೋತ್ಸವಕ್ಕೆ ನೀಡುವ ಕೊಡುಗೆಯಾಗಲಿದೆ ಎಂದರು.ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಎಸ್ ಬಿ ಪವಾರ ಮಾತನಾಡಿ,ಆಗಸ್ಟ್ 15, ಬ್ರಿಟಿಷರ ಕಪಿಮುಷ್ಠಿಯಿಂದ ನಮಗೆ ಸ್ವಾತಂತ್ರ್ಯ ದೊರೆತ ದಿನ.ಹೋರಾಟಗಾರರ ನೆತ್ತರ ಹನಿಗಳಿಂದಾಗಿ ನಾವಿಂದು ನೆಮ್ಮದಿಯಾಗಿ ಉಸಿರಾಡುವಂತಾಗಿದೆ. ೨೦೦ ವರ್ಷಗಳ ಬ್ರಿಟಿಷ್ ಆಳ್ವಿಕೆಯಿಂದ ಮುಕ್ತವಾದ ಭಾರತ ಪ್ರಜಾಸತ್ತಾತ್ಮಕ ಸಾರ್ವಭೌಮ ರಾಷ್ಟ್ರವಾಯಿತು ಎಂದರು.ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.ಬಂಜಾರ ಪ್ರಾಥಮಿಕ ಶಾಲೆಯ…

Read More

ತಿಕೋಟಾ: ತಾಲೂಕಿನ ಹೊನವಾಡ ಗ್ರಾಮದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಅಭಿವೃದ್ಧಿಪಡಿಸಲಾದ ಅಮೃತ ಸರೋವರದಲ್ಲಿ ಹಮ್ಮಿಕೊಂಡ ಸ್ವಾತಂತ್ರ್ಯ ದಿನಾಚರಣೆಯಲ್ಲಿ ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಐನಾಪುರ ಅವರು ಮಾತನಾಡುತ್ತಾ, ನಮ್ಮ ದೇಶ ಸ್ವಾತಂತ್ರ್ಯ ಹೊಂದಲು ಹಲವಾರು ಮಹನೀಯರು ತಮ್ಮ ಜೀವನವನ್ನು ಬಲಿದಾನ ಮಾಡಿದ್ದಾರೆ.ಕೆಲವರು ತಮ್ಮ ಅಮೂಲ್ಯವಾದ ದಿನಗಳನ್ನು ದೇಶಕ್ಕಾಗಿ ಸೆರೆಮನೆಯಲ್ಲಿ ಕಳೆದಿದ್ದಾರೆ. ಅಂತಹ ಮಹಾನ ನಾಯಕರನ್ನು ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಇಂದಿನ ಸಂಪತ್ತನ್ನು ಸಂರಕ್ಷಣೆ ಮಾಡಿ ಮುಂದಿನ ಪೀಳಿಗೆಗೆ ನೀಡುವುದು ಸಹ ನಮ್ಮ ಆದ್ಯ ಕರ್ತವ್ಯವಾಗಬೇಕು. ನಮ್ಮ ದೇಶದ ಜೊತೆಗೆ ಅನೇಕ ದೇಶಗಳು ಸ್ವಾತಂತ್ರ್ಯ ಪಡೆದುಕೊಂಡರೂ ಸಹಿತ ಬೇರೆ ಯಾವ ದೇಶವು ಭಾರತದಷ್ಟು ಅಭಿವೃದ್ಧಿ ಹೊಂದಿರುವುದಿಲ್ಲ. ವಿಶ್ವದ ಅತ್ಯಂತ ಬಲಿಷ್ಠ ಸಂವಿಧಾನ ಹೊಂದಿದ ನಮ್ಮ ಭಾರತ, ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಕೂಡಾ ಸಾಮಾಜಿಕ ನ್ಯಾಯ ದೊರಕಿಸಿಕೊಟ್ಟಿದೆ. ಅವುಗಳನ್ನು ಸದುಪಯೋಗ ಪಡಿಸಿಕೊಂಡು ನಾವೆಲ್ಲರೂ ಸಂವಿಧಾನದ ಆಶಯದಂತೆ ಬದುಕಬೇಕು. ಬಲಿದಾನಗೈದ ಮಹಾನ ನಾಯಕರು ಹಾಕಿ ಕೊಟ್ಟ ಆದರ್ಶ ಮಾರ್ಗದಲ್ಲಿ ನಡೆಯುವ…

Read More

ವಿಜಯಪುರ: ಸ್ವಾತಂತ್ರ್ಯ ಹೋರಾಟಗಾರರು ದೇಶದ ಆಸ್ತಿ. ಅವರನ್ನು ಯಾವುದೇ ಜಾತಿ ಮತ್ತು ಸಮುದಾಯಕ್ಕೆ ಸೀಮಿತಗೊಳಿಸಬಾರದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಗುರುವಾರ ಬಬಲೇಶ್ವರ ತಾಲೂಕಿನ ದದಾಮಟ್ಟಿಯಲ್ಲಿ ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಉದ್ಘಾಟಿಸಿ ಅವರು ಮಾತನಾಡಿದರು.ಸಂಗೊಳ್ಳಿ ರಾಯಣ್ಣ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಕಿತ್ತೂರು ಸಂಸ್ಥಾನ ಉಳಿವಿಗಾಗಿ ರಾಣಿ ಚನ್ನಮ್ಮರ ಜೊತೆ ಹೋರಾಟ ಮಾಡಿದ್ದಾರೆ. ದೇಶದ ಸ್ವಾತಂತ್ತಯ ಹೋರಾಟದಲ್ಲಿ ಅವರ ಪಾತ್ರ ಬಹಳಷ್ಟಿದೆ. ಸ್ವಾತಂತ್ರ್ಯ ದಿನಾಚರಣೆ ದಿನದಂದೇ ರಾಯಣ್ಣರ ಜನ್ಮದಿನ ಇರುವುದು ಅರ್ಥಪೂರ್ಣವಾಗಿದೆ. ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಸೇರಿದಂತೆ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ಮಹನೀಯರು ದೇಶ ಆಸ್ತಿಯಾಗಿದ್ದಾರೆ. ಅವರ ಸೇವೆ ಸದಾ ಸ್ಮರಣೀಯವಾಗಿದೆ ಎಂದು ಅವರು ಹೇಳಿದರು.ಜುಮನಾಳ, ತೊನಶ್ಯಾಳ, ಹೊನಗನಹಳ್ಳಿ ಭಾಗಕ್ಕೆ ಶ್ರೀ ರೇವಣಸಿದ್ಧೇಶ್ವರ ಏತ ನೀರಾವರಿ‌ ಯೋಜನೆಯಡಿ ನೀರಾವರಿ ಸೌಲಭ್ಯ ಒದಗಿಸಲಾಗುವುದು. ಈ ಕಾಮಗಾರಿ‌ ಪ್ರಗತಿಯಲ್ಲಿದ್ದು, ಈ ಯೋಜನೆಯಿಂದ ಈ ಭಾಗದಲ್ಲಿ ಮತ್ತಷ್ಟು…

Read More