Author: editor.udayarashmi@gmail.com

ವಿಜಯಪುರ: ಭಾರತೀಯ ಜನತಾ ಪಾರ್ಟಿ ವಿಜಯಪುರ ಜಿಲ್ಲಾ ಕಾರ್ಯಾಲಯ ಆಯೋಜಿಸಿದ್ದ 78 ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸುವ ಮೂಲಕ ಆಚರಿಸಲಾಯಿತು.ಜಿಲ್ಲಾ ಅಧ್ಯಕ್ಷ ಆರ್ ಎಸ್ ಪಾಟೀಲ್ ಕುಚಬಾಳ, ಸಂಸದ ರಮೇಶ್ ಜಿಗಜಿಣಿಗಿ, ಮಾಜಿ ವಿಧಾನ ಪರಿಷತ್ತಿನ ಸದಸ್ಯ ಅರುಣ ಶಹಾಪುರ, ಬಿಜೆಪಿ ಮುಖಂಡರಾದ ಚಂದ್ರಶೇಖರ್ ಕವಟಿಗಿ, ಪ್ರಕಾಶ ಅಕ್ಕಲಕೋಟ, ವಿಜುಗೌಡ ಪಾಟೀಲ್, ಜಿಲ್ಲೆಯ ಪ್ರಧಾನ ಕಾರ್ಯದರ್ಶಿಗಳಾದ ಮಲಗೌಡ ಪಾಟೀಲ್ ಈರಣ್ಣ ರಾವೂರ, ಉಮೇಶ್ ಕೊಳಕರ, ಸಂಜಯ ಪಾಟೀಲ್ ಕನಮಡಿ, ಚಿದಾನಂದ ಚಲವಾದಿ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Read More

ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಕರೆ ವಿಜಯಪುರ: ಬಾಲ ಮಂದಿರದಲ್ಲಿರುವ ಪ್ರತಿಭಾವಂತ ಮಕ್ಕಳನ್ನು ಸಮಾಜದ ಮುಖ್ಯ ವಾಹಿನಿಗೆ ತರುವುದು ನಾಗರಿಕ ಸಮಾಜದ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು ಕರ್ನಾಟಕ ಬಾಲ ವಿಕಾಸ ಅಕಾಡೆಮಿಯು ನಾಡಿನ ಮಕ್ಕಳ ಶ್ರೇಯೋಭಿವೃದ್ಧಿಯ ಜೊತೆಗೆ ಬಾಲ ಮಂದಿರ ಮಕ್ಕಳಿಗಾಗಿ ವಿಶೇಷ ಯೋಜನೆಗಳನ್ನು ಕೈಗೊಳ್ಳಲಿದೆ. ಆ ಮೂಲಕ ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬುವ ಕೆಲಸವನ್ನು ಮಾಡಲಿದ್ದೇನೆ ಎಂದು ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.ಗುರುವಾರ ಅವರು ನಗರದ ಬಾಲಕರ ಬಾಲ ಮಂದಿರದಲ್ಲಿ 78ನೆಯ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.”ನಾನು ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ಕೇಂದ್ರ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸದೆ ಅಲ್ಲಿಯ ಅಧಿಕಾರಿಗಳಿಗೆ ಕೇಂದ್ರ ಕಚೇರಿಯ ದ್ವಜಾರೋಹಣ ನೆರವೇರಿಸುವಂತೆ ತಿಳಿಸಿ, ಬಾಲ ಮಂದಿರದ ಮಕ್ಕಳೊಂದಿಗೆ ಸ್ವಾತಂತ್ರ್ಯೋತ್ಸವ ಆಚರಿಸಲು ನಿರ್ಧರಿಸಿದ್ದೆ. ಈ ಮಕ್ಕಳಲ್ಲಿರುವ ಶಿಸ್ತು ಅವರ ಕಣ್ಣುಗಳಲ್ಲಿರುವ ಹೊಳಪನ್ನು ನೋಡಿದಾಗ ತುಂಬಾ ಸಂತೋಷವಾಗಿದೆ. ಬಾಲ ಮಂದಿರದ ಮಕ್ಕಳಿಗೆ ಆತ್ಮ ವಿಶ್ವಾಸವನ್ನು ತುಂಬಿ, ಪ್ರೀತಿ-ಕಕ್ಕುಲತೆ ಕಾಳಜಿಯನ್ನು ತೋರಿದರೆ…

Read More

ವಿಜಯಪುರ: ಆಗಸ್ಟ್‌ 15, 1947, ಅದೆಷ್ಟೋ ಕೆಚ್ಚೆದೆಯ ವೀರರು, ರಾಷ್ಟ್ರ ಪ್ರೇಮಿಗಳು, ಹೋರಾಟಗಾರರು ಕಂಡ ಕನಸು ನನಸಾದ ದಿನ. ಈ ದಿನಕ್ಕಾಗಿ ಅದೆಷ್ಟೋ ಮಂದಿ ಜೀವ ಕಳೆದುಕೊಂಡಿದ್ದಾರೆ. ಇವರೆಲ್ಲಾ ತಮ್ಮ ಬದುಕನ್ನೇ ತೇಯ್ದು ಸ್ವಾತಂತ್ರ್ಯದ ಕನಸನ್ನು ಕಂಡಿದ್ದರು. ಈ ಕನಸು ನನಸಾದ ಕ್ಷಣಕ್ಕೆ ಈಗ 78ನೇ ವರ್ಷ. ಇದು ಸ್ವಾತಂತ್ರ್ಯ ವೀರರನ್ನು ಗೌರವಿಸುವ, ಹೋರಾಟಗಾರರ ತ್ಯಾಗವನ್ನು ಸ್ಮರಿಸುವ, ದೇಶ ರಕ್ಷಣೆಗೆ ಕಟಿಬದ್ಧರಾಗಿರುವ ಪ್ರತಿಜ್ಞೆ ತೊಡುವ ಕ್ಷಣ. ಈ 78 ನೇ ಸ್ವಾತಂತ್ರೋತ್ಸವ ದಿನದ ನಿಮಿತ್ತ ತಾಲೂಕಿನ ನಾಗಠಾಣ ಗ್ರಾಮದ ಕರ್ನಾಟಕ ಪಬ್ಲಿಕ್ ಪ್ರಾಥಮಿಕ ಶಾಲೆಯಲ್ಲಿ ಜರುಗಿದ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಯುಕೆಜಿ ವಿದ್ಯಾರ್ಥಿನಿ ಶ್ರೀನಿಧಿ ಬಂಡೆ ಭಾಷಣ ಮಾಡುತ್ತಿರುವದು. ವೇದಿಕೆಯಲ್ಲಿ ಅನೇಕ ಅತಿಥಿಗಳು ಉಪಸ್ಥಿತರಿದ್ದರು.

Read More

ಕೆಂಭಾವಿ: ಪಟ್ಟಣದ ವಿವಿಧೆಡೆಗಳಲ್ಲಿ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಭಾರತರತ್ನ ಸಂವಿಧಾನ ಶಿಲ್ಪಿ ಡಾ ಬಾಬಾಸಾಹೇಬ್ ಅಂಬೇಡ್ಕರ್ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ, ಮಾಲಾರ್ಪಣೆ ಮಾಡಿ, ಪುಷ್ಪಾರ್ಚನೆಯೊಂದಿಗೆ ದೇಶದ 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.ಪುರಸಭೆ ಕಾರ್ಯಾಲಯದಲ್ಲಿ, ಮುಖ್ಯಾಧಿಕಾರಿ ಮಹ್ಮದ್ ಯುಸೂಫ್. ನಾಡ ಕಛೇರಿಯಲ್ಲಿ ಉಪತಹಸೀಲ್ದಾರ್ ಪ್ರವೀಣಕುಮಾರ ಸಜ್ಜನ್. ಪೋಲೀಸ್ ಠಾಣೆಯಲ್ಲಿ ಪಿಎಸ್ಐ ಅಮೋಜ್ ಕಾಂಬಳೆ. ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿ ಡಾ ಗಿರೀಶ್ ಕುಲ್ಕರ್ಣಿ. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಂಶುಪಾಲ ಪ್ರೊ ನಾಗಪ್ಪ ಚಾವಲ್ಕರ್. ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಿನ್ಸಿಪಾಲ್ ವೀರೇಂದ್ರ ಧರಿ. ಸರ್ಕಾರಿ ಬಾಲಕರ ಪ್ರೌಢಶಾಲೆಯಲ್ಲಿ, ಕೆ ಆರ್ ಪಾಟೀಲ್. ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ವಿಠ್ಠಲ ಚೌವ್ಹಾಣ್. ವಿವಿಎಸ್ ಬ್ಯಾಂಕ್ನಲ್ಲಿ, ಅಧ್ಯಕ್ಷ ರಾಮನಗೌಡ ವಂದಗನೂರು ಯಾಳಗಿ. ವಿಪ್ರಾಗ್ರಾಕೃ ಸಹಕಾರಿಯಲಿ ಅಧ್ಯಕ್ಷ ಮುದಿಗೌಡ ಪಾಟೀಲ್. ಕೆಂಭಾವಿ-2 ಸಹಕಾರಿ ಸಂಘದಲ್ಲಿ ಅಧ್ಯಕ್ಷ ಮಡಿವಾಳಪ್ಪಗೌಡ ಪಾಟೀಲ್. ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಸೌಹಾರ್ದ ಸಹಕಾರಿಯಲಿ, ನಿರ್ದೇಶಕ ಎಸ್ ವೈ…

Read More

ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯ ವಿಜಯಪುರ: ಜೀವನದಲ್ಲಿ ಸಾಧಿಸಬೇಕಾದರೆ ಓದು ಅವಶ್ಯಕತೆ ಇದೆ ಅದಕ್ಕೆ ಗ್ರಂಥಾಲಯದ ಪೂರಕ ವಿದ್ಯಾರ್ಥಿಗಳು ನಿರಂತರವಾಗಿ ಅಧ್ಯಯನಶೀಲರಾಗಬೇಕು ಎಂದು ಸಹಾಯಕ ಪ್ರಾಧ್ಯಾಪಕರಾದ ಡಾ.ಶ್ರೀನಿವಾಸ ದೊಡ್ಡಮನಿ ಹೇಳಿದರು.ನಗರದ ಎಸ್ ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ ಸಂಯೋಜನೆಯಡಿ ಏರ್ಪಡಿಸಿದ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆಯಲ್ಲಿ ಮಾತನಾಡಿದ ಅವರು, ಗ್ರಂಥಾಲಯ ಪಿತಾಮಹರಾದ ಡಾ.ಎಸ್.ಆರ್.ರಂಗನಾಥ ಅವರನ್ನು ಸ್ಮರಿಸಬೇಕು. ಅದರಂತೆ ವಿದ್ಯಾರ್ಥಿಗಳ ಬದುಕಿಗೆ ಗ್ರಂಥಾಲಯ ಬಹಳಷ್ಟು ಅವಶ್ಯಕತೆ ಇದೆ. ಇಂದಿನ ವಿದ್ಯಾರ್ಥಿಗಳು ಓದುವುದುನ್ನು ಬಿಟ್ಟು ಅನ್ಯ ಚಟುವಟಿಕೆಗಳಲ್ಲಿ ತೊಡಗುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.ಇಂದಿನ ವಿದ್ಯಾರ್ಥಿಗಳು ಜೀವನದಲ್ಲಿ ಸಾಧಿಸಬೇಕಾದರೆ ಓದಿನಿಂದ ಮಾತ್ರ ಸಾಧ್ಯ ಆದ್ದರಿಂದ ಗ್ರಂಥಾಲಯದಲ್ಲಿ ನಿರಂತರವಾಗಿ ಅಧ್ಯಯನಶೀಲರಾಗಬೇಕು. ನಮ್ಮ ಬದುಕಿನಲ್ಲಿ ನಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಇಂತಹ ಗ್ರಂಥಾಲಯಗಳು ಸಹಾಯಕವಾಗಿವೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಓದಿನ ಅವಶ್ಯಕತೆ ಇದ್ದು, ಇಂತಹ ಗ್ರಂಥಾಲಯವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.ಈ ವೇಳೆ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ಆರ್.ಎಂ.ಮಿರ್ದೆ ಮಾತನಾಡಿ, ಕಲಿಕೆಗೆ…

Read More

-ಡಾ.ಯಂಕನಗೌಡ ಎಸ್ ಪಾಟೀಲ, ಮಾಲಹಳ್ಳಿ ಉಪನ್ಯಾಸಕರು , ಮೊ:9008370650. ಸ್ವಾತಂತ್ರ್ಯ ಎಂಬ ಪದವು ಮೂಲ ಲ್ಯಾಟಿನ್ ಭಾಷೆಯ “ಲಿಬರ್” ಎಂಬ ಪದದಿಂದ ಬಂದಿದೆ ಲಿಬರ್ ಎಂದರೆ “ಪ್ರೀ” ಬಂಧನದಿಂದ ಮುಕ್ತಿ ಎಂದರ್ಥ ಆಂಗ್ಲ ಭಾಷೆಯ “ಲಿಬರ್ಟಿ” ಕನ್ನಡ ಅನುವಾದವೇ “ಸ್ವಾತಂತ್ರ್ಯ” ಎಂದು ಕರೆಯುತ್ತಾರೆ. ಈ ಪದವನ್ನು ಎರಡು ರೀತಿಯಲ್ಲಿ ಅರ್ಥೈಸಬಹುದು. ಒಂದು ರಾಷ್ಟ್ರದ ಸ್ವಾತಂತ್ರ್ಯ ಇನ್ನೂಂದು ನಾಗರಿಕ ಸ್ವಾತಂತ್ರ್ಯ, ಒಂದು ರಾಷ್ಟ್ರವು ಪ್ರಪಂಚದ ಇತರ ರಾಷ್ಟ್ರಗಳ ಅಧೀನದಲ್ಲಿರದೆ ಸಂಪೂರ್ಣ ಸ್ವಾಯತ್ತತೆ ಹೊಂದಿರುವುದೇ ರಾಷ್ಟ್ರದ ಸ್ವಾತಂತ್ರ್ಯ ಎನ್ನುತ್ತೇವೆ. ನನ್ನಂತೆಯೇ ಎಲ್ಲರೂ ಎನ್ನುವುದೇ ನಾಗರಿಕ ಸ್ವಾತಂತ್ರ್ಯ ಎಂದು ಕರೆಯಲಾಗುತ್ತದೆ.ಸ್ವಾತಂತ್ರ್ಯ ಎಂದರೆ ಜವಾಬ್ದಾರಿ, ಸ್ವಾತಂತ್ರ್ಯ ಎಂದರೆ ಪ್ರಗತಿಯ, ಸಂವರ್ಧನೆ, ಸ್ವಾತಂತ್ರ್ಯ ಎಂದರೆ ಧನಾತ್ಮಕ ಚಿಹ್ನೆ, ಅದೊಂದು ತಿಳಿ ಬೆಳಕು, ಚಿಂತನಾ ಲಹರಿ, ಕಾರ್ಯಕ್ಷಮತೆಯ ಪರಿಧಿ, ಸ್ವಾತಂತ್ರ್ಯ ಎಂದರೆ ಸ್ವೇಚ್ಛೆ ಅಲ್ಲ ಅದೊಂದು ನಾಗರಿಕತೆಯ ಕುರುಹು, ಸಭ್ಯತೆಯ ಸಾರ್ವಕಾಲಿಕ ಸತ್ಯ, ಇತಿಮಿತಿಯ ಸಮಾಜದ ದ್ಯೋತಕ, ವ್ಯವಹಾರ ಕೌಶಲವೂ ಹೌದು. ಪರರಿಗೆ ನೋವುಣಿಸದೆ ಸಹಕಾರ ನೀಡುವ ತತ್ವವು ಹೌದು,…

Read More

ಆಲಮಟ್ಟಿ: ಆಲಮಟ್ಟಿ ಜಲಾಶಯದ ಗೇಟ್ ಗಳು ಸೇರಿದಂತೆ ಜಲಾಶಯಕ್ಕೆ ಯಾವುದೇ ರೀತಿಯ ತೊಂದರೆಯಿಲ್ಲ, ಎಲ್ಲವೂ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿವೆ ಎಂದುಕೃಷ್ಣಾ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ಮೋಹನರಾಜು ತಿಳಿಸಿದರು.ಆಲಮಟ್ಟಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸ್ವಾತ್ರಂತ್ರೋತ್ಸವದ ಅಂಗವಾಗಿ ಬುಧವಾರ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ನಿಗಮದ ನೌಕರರಿಗಾಗಿ ಏರ್ಪಡಿಸಿದ್ದ ಕ್ರಿಕೆಟ್ ಪಂದ್ಯಾವಳಿ ಉದ್ಘಾಟಿಸಿದ ನಂತರ ಅವರು ಈ ವಿಷಯ ತಿಳಿಸಿದರು.ಈಗಾಗಲೇ ಆಲಮಟ್ಟಿ ಜಲಾಶಯದ ಗೇಟ್ ಗಳ ಮೇಲ್ವಿಚಾರಣೆ ಮುಂಗಾರು ಹಂಗಾಮಿಗೂ ಮೊದಲು ನಡೆಸಲಾಗಿದೆ, ಆದರೆ ಈಗ ಜಲಸಂಪನ್ಮೂಲ ಸಚಿವರು ಹಾಗೂ ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿಗಳು ಮತ್ತೊಮ್ಮೆ ಜಲಾಶಯವನ್ನು ಪರೀಕ್ಷಿಸಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ. ಆ ಪ್ರಕಾರ ಎರಡು ದಿನಗಳಲ್ಲಿ ಮತ್ತೊಮ್ಮೆ ವಿವರವಾಗಿ ಪರಿಶೀಲನೆ ನಡೆಸಿ ವರದಿ ಸಲ್ಲಿಸಲಾಗುವುದು ಎಂದು ಅವರು ತಿಳಿಸಿದರು.ಆಲಮಟ್ಟಿ ಜಲಾಶಯದ ಕಾಲುವೆಗಳಿಗೆ ನೀರು ಹರಿಸಿ ಅದರ ಮೂಲಕ ಜಿಲ್ಲೆಯ 100 ಕ್ಕೂ ಅಧಿಕ ಕೆರೆಗಳ ಭರ್ತಿಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.ಜಲಾಶಯ ಭರ್ತಿಯತ್ತ ಸಾಗಿದ್ದು ಖುಷಿ…

Read More

ಬೆಳಗಾವಿಯಲ್ಲಿ ನಡೆಸಿರುವುದು ಬಂಡಾಯಗಾರರ ಸಭೆಯಲ್ಲ | ವರಿಷ್ಠರ ಅನುಮತಿಯೊಂದಿಗೆ ಪಾದಯಾತ್ರೆ | ಸಿಂಹ ಸ್ಪಷ್ಟನೆ ಮೈಸೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಹಗರಣವನ್ನು ಖಂಡಿಸಿ ಸೆ.17ರಿಂದ ಪಾದಯಾತ್ರೆಗೆ ನಿರ್ಧರಿಸಿದ್ದೇವೆ. ಪಕ್ಷದ ನೇತಾರ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ ನೇತೃತ್ವದಲ್ಲಿ ನಾವು ಬೆಳಗಾವಿಯಲ್ಲಿ ನಡೆಸಿರುವುದು ಬಿಜೆಪಿ ಅತೃಪ್ತರ ಅಥವಾ ಬಂಡಾಯಗಾರರ ಸಭೆಯಲ್ಲ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.ಮೈಸೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮೈಸೂರು ಚಲೋ ಪಾದಯಾತ್ರೆಯ ಅನುಭವವನ್ನು ನಾನು ಅಲ್ಲಿ ಹಂಚಿಕೊಂಡೆ. ವಾಲ್ಮೀಕಿ ನಿಗಮದ ಹಗರಣದ ವಿರುದ್ದ ಸರಿಯಾದ ಹೋರಾಟ ನಡೆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಖುರ್ಚಿ ಅಲುಗಾಡುತ್ತದೆ. ಯತ್ನಾಳ್ ಅವರಂಥ ದೊಡ್ಡ ನಾಯಕ ಕರೆದ ಕಾರಣ ನಾನು ಸಭೆಗೆ ಹೋಗಿದ್ದೆ ಎಂದಿದ್ದಾರೆ.“ನಮ್ಮ ಪಾದಯಾತ್ರೆಗೆ ಹೈಕಮಾಂಡ್ ಅನುಮತಿ ಕೊಡುತ್ತದೆ. ವರಿಷ್ಠರ ಅನುಮತಿಯೊಂದಿಗೇ ನಾವು ನಡೆಸುತ್ತೇವೆ. ಯಾರನ್ನೋ ಓಲೈಸಲು ಅಥವಾ ಮೆಚ್ಚಿಸಲು ರಾಜಕಾರಣ ಮಾಡುವುದಿಲ್ಲ. ಯಾರ ಮನೆಯ ಬಾಗಿಲನ್ನೂ ತಟ್ಟುವುದಿಲ್ಲ. ನನಗೆ ಟಿಕೆಟ್ ಕೊಟ್ಟಿದ್ದು ಬಿಜೆಪಿ ಅಲ್ಲ;…

Read More

ಮುದ್ದೇಬಿಹಾಳ: ಶರಣರ ವಚನಗಳಲ್ಲಿ ಬದುಕಿನ ಮೌಲ್ಯಗಳು ಅಡಕವಾಗಿವೆ. ವಚನಗಳನ್ನು ನಿತ್ಯ ಪಠಣಮಾಡಿ, ಅವುಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಬದುಕು ಬಂಗಾರವಾಗುತ್ತದೆ ಎಂದು ಹಿರಿಯ ಸಾಹಿತಿ ಅಶೋಕ ಮಣಿ ಅಭಿಪ್ರಾಯ ಪಟ್ಟರು.ಪಟ್ಟಣದ ಮಾರುತಿ ನಗರದ ಸಿದ್ದಣ್ಣ ರೇವಡಿ ಅವರ ಮನೆಯಲ್ಲಿ ಬಸವ ಮಹಾಮನೆ ಸಮೀತಿ ಹಾಗೂ ಶರಣ ಸಾಹಿತ್ಯ ಪರಿಷತ್ತು ಶರಣ ಶ್ರಾವಣದ ಅಂಗವಾಗಿ ಹಮ್ಮಿಕೊಂಡ ಮನೆಯಂಗಳದಿಂದ ಮನದಂಗಳಕ್ಕೆ ಶರಣರ ಸಂದೇಶ ೩ನೇ ದಿನದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.೧೨ ನೇ ಶತಮಾನದಲ್ಲಿ ಬಸವಾದಿ ಪ್ರಮಥರು ರಚಿಸಿರವ ವಚನಗಳು ತ್ರಿಕಾಲ ಸತ್ಯ. ವಚನಗಳಲ್ಲಿಯ ತಿರುಳನ್ನು ಪಚನಮಾಡಿಕೊಂಡಾಗ ಮಾತ್ರ ಬದುಕು ಹಸನಾಗಿ ಮನಸ್ಸಿಗೆ ಶಾಂತಿ ಹಾಗೂ ನೆಮ್ಮದಿ ಸಿಗಲು ಸಾಧ್ಯ. ಪಾಲಕರಾದವರು ಮಕ್ಕಳನ್ನು ಮೊಬೈಲ್ ಗೀಳಿನಿಂದ ಹೊರತಂದು ಶರಣರ ವಚನಗಳ ಪರಿಚಯವನ್ನು ಮಾಡಿಕೊಡುವುದು ಅತ್ಯವಶ್ಯ. ದಾರಿ ತಪ್ಪುವವರನ್ನು ಸರಿದಾರಿಗೆ ತರುವಲ್ಲಿ ವಚನಗಳು ದಾರಿ ದೀಪವಾಗಬಲ್ಲವು ಎಂದರು.ಚಿತ್ತರಗಿ -ಇಲಕಲ್ಲ ಮಠದ ಶ್ರೀ ವಿಜಯಮಹಾಂತ ಮಹಾಸ್ವಾಮಿಗಳ ಜೀವನ ಕುರಿತು ಬಸವ ಮಹಾಮನೆ ಸಮಿತಿಯ ಅಧ್ಯಕ್ಷ…

Read More

ಬಸವನಬಾಗೇವಾಡಿ: ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಿ ಉತ್ತಮ ಜ್ಞಾನ ಪಡೆದುಕೊಂಡು ಸಮಾಜದ ಪ್ರಬುದ್ಧ ನಾಗರಿಕರಾಗಿ ಹೊರಹೊಮ್ಮುವಂತಾಗಬೇಕೆಂದು ಸ್ಥಳೀಯ ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ ಹೇಳಿದರು.ಪಟ್ಟಣದ ಬಿಎಲ್ಡಿಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ೨೦೨೩-೨೪ ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಒಕ್ಕೂಟ, ಎನ್ಎನ್ಎಸ್, ಸ್ಕೌಟ್ಸ್-ಗೈಡ್ಸ್, ರೆಡ್ಕ್ರಾಸ್ ಹಾಗೂ ಕ್ರೀಡಾ ಚಟುವಟಿಕೆಗಳ ಮುಕ್ತಾಯ ಸಮಾರಂಭ ಹಾಗೂ ಬಿಎ.ಬಿಕಾಂ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಮೊಬೈಲ್ ಹೆಚ್ಚು ಬಳಕೆ ಮಾಡುವವರನ್ನು ಸೋಮಾರಿಯನ್ನಾಗಿಸುತ್ತದೆ. ಮೊಬೈಲ್ ಬಳಕೆಯಿಂದ ನರದೌರ್ಬಲ್ಯವು ಉಂಟಾಗುತ್ತದೆ. ಇದರಿಂದ ವಿದ್ಯಾರ್ಥಿಗಳು ಆದಷ್ಟು ದೂರವಿದ್ದು ಪಠ್ಯ-ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡರೆ ಉತ್ತಮ ವ್ಯಕ್ತಿತ್ವ ತಮ್ಮದಾಗಿಸಿಕೊಳ್ಳಬಹುದು. ಬಸವ ನೆಲದಲ್ಲಿರುವ ಈ ಮಹಾವಿದ್ಯಾಲಯದಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಶರಣರ ಸನ್ಮಾರ್ಗದಲ್ಲಿ ನಡೆಯುವಂತಾಗಬೇಕೆಂದರು.ಬಿಎಲ್ಡಿಇ ಸಂಸ್ಥೆಯ ಜಮಖಂಡಿಯ ಆಡಳಿತಾಧಿಕಾರಿ ಪ್ರೊ.ಎಸ್.ಎಚ್.ಲಗಳಿ ಮಾತನಾಡಿ, ಬಹುತೇತ ಪ್ರತಿಭಾನ್ವಿತರು ಗ್ರಾಮೀಣ ಪ್ರದೇಶದಿಂದ ಬಂದವರೇ ಆಗಿರುವುದನ್ನು ಕಾಣುತ್ತೇವೆ. ಸ್ಪರ್ಧಾತ್ಮಕ ಜ್ಞಾನ, ಸಂವಹನ ಕೌಶಲ್ಯ, ನಿರಂತರ ಅಧ್ಯಯನದಲ್ಲಿ ವಿದ್ಯಾರ್ಥಿಗಳು ತೊಡಗಿಕೊಂಡರೆ…

Read More