Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಬಸವನಬಾಗೇವಾಡಿ: ನಂದಿಹಾಳ ಗ್ರಾಮದ ಸರ್ಕಾರಿ ಶಾಲೆಗೆ ಎರಡು ಎಕರೆ ಜಮೀನು ಇರುವದರಿಂದ ಈ ಜಾಗೆಯಲ್ಲಿ ಮುಂಬರುವ ದಿನಗಳಲ್ಲಿ ಗ್ರಾಮದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಪ್ರೌಢಶಾಲೆಯನ್ನು ಮಂಜೂರ ಮಾಡಿಸಲಾಗುವುದು ಎಂದು ಸಕ್ಕರೆ ಮತ್ತು ಕಬ್ಬು ಅಭಿವೃದ್ಧಿ, ಕೃಷಿ ಮಾರುಕಟ್ಟೆ ಮತ್ತು ಜವಳಿ ಸಚಿವ ಶಿವಾನಂದ ಪಾಟೀಲ ಭರವಸೆ ನೀಡಿದರು.ತಾಲೂಕಿನ ನಂದಿಹಾಳ ಪಿಯು ಗ್ರಾಮದಲ್ಲಿ ೨೦೨೨-೨೩ ನೇ ಸಾಲಿನ ರಾಜ್ಯ ಮುಂದುವರಿದ ವಿವೇಕ ಯೋಜನೆಯಡಿಯಲ್ಲಿ ರೂ. ೨೭.೮೦ ಲಕ್ಷ ಅನುದಾನದಲ್ಲಿ ಸರ್ಕಾರಿ ಕನ್ನಡ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯ ಎರಡು ಕೊಠಡಿಯ ನಿರ್ಮಾಣ ಕಾಮಗಾರಿಗೆ ಮಂಗಳವಾರ ಭೂಮಿಪೂಜೆ ನೆರವೇರಿಸಿದ ನಂತರ ಮಾತನಾಡಿದ ಅವರು, ಈ ಶಾಲೆಗೆ ಎರಡು ಸುಸಜ್ಜಿತ ಕೊಠಡಿಗಳನ್ನು ನಿರ್ಮಾಣ ಮಾಡಿಕೊಡಲಾಗುವುದು. ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿಯಾಗುವಂತೆ ಗಮನ ಹರಿಸಬೇಕು. ಈ ಗ್ರಾಮದಲ್ಲಿರುವ ಸಿದ್ದೇಶ್ವರ ಸ್ವಾಮೀಜಿಯವರು ಜನಿಸಿದ ಮನೆಯನ್ನು ಮಾದರಿ ಗ್ರಂಥಾಲಯವನ್ನಾಗಿ ಮಾಡಬೇಕಾದರೆ ಕಡಿಮೆ ಜಾಗೆಯನ್ನು ಹೊಂದಿದೆ. ಇದರ ಸುತ್ತಮುತ್ತವಿರುವ ನಿವಾಸಿಗಳು ಸಹಕಾರ ನೀಡಿದರೆ ಮುಂಬರುವ ದಿನಗಳಲ್ಲಿ ಈ ಜಾಗೆಯಲ್ಲಿ ಜಿಲ್ಲೆಯಲ್ಲಿಯೇ ಮಾದರಿ…
ಬಸವನಬಾಗೇವಾಡಿ: ಮತಕ್ಷೇತ್ರದ ಶಾಸಕ, ಸಚಿವ ಶಿವಾನಂದ ಪಾಟೀಲರು ಪಟ್ಟಣದಲ್ಲಿ ಪುರಸಭೆಯಿಂದ ಕೈಗೊಂಡಿರುವ ಮೆಗಾಮಾರುಕಟ್ಟೆ, ಬಸವ ಭವನ, ಪುರಸಭೆ ನೂತನ ಕಟ್ಟಡ, ಜಿ ಪ್ಲಸ್ ಒನ್ ಮನೆಗಳು ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಇತರೆಡೆ ಮಾದರಿಯಾಗುವಂತೆ ಕೈಗೊಳ್ಳಲಾಗಿದೆ ಎಂದು ಕಾಮಗಾರಿಗಳ ಬಗ್ಗೆ ಪೌರಾಡಳಿತ ಸಚಿವ ಮತ್ತು ಹಜ್ ಮುಖ್ಯಸ್ಥ ರಹೀಂ ಖಾನ್ ಮೆಚ್ಚುಗೆ ವ್ಯಕ್ತಪಡಿಸಿದರು.ಬಸವ ಜನ್ಮಸ್ಥಳ ಬಸವನಬಾಗೇವಾಡಿಗೆ ಪ್ರಥಮ ಬಾರಿಗೆ ಪೌರಾಡಳಿತ ಸಚಿವ ಮತ್ತು ಹಜ್ ಮುಖ್ಯಸ್ಥ ರಹೀಂ ಖಾನ್ ಅವರು ಮಂಗಳವಾರ ಸಂಜೆ ಆಗಮಿಸಿ ಮತಕ್ಷೇತ್ರದ ಶಾಸಕ, ಸಕ್ಕರೆ ಮತ್ತು ಕಬ್ಬು ನಿರ್ದೇಶನಾಲಯ, ಕೃಷಿ ಮಾರುಕಟ್ಟೆ ಹಾಗೂ ಜವಳಿ ಸಚಿವ ಶಿವಾನಂದ ಪಾಟೀಲ ಅವರು ಪುರಸಭೆಯಿಂದ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ಸಚಿವ ಶಿವಾನಂದ ಪಾಟೀಲರೊಂದಿಗೆ ವೀಕ್ಷಿಸಿದ ನಂತರ ಪುರಸಭೆಯ ಸಭಾಂಗಣದಲ್ಲಿ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುರಸಭೆಯಿಂದ ಈ ರೀತಿಯ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು ಶ್ಲಾಘನೀಯ. ಇದರ ಬಗ್ಗೆ ಸಿಎಂ ಸಿದ್ದರಾಮಯ್ಯನವರ ಗಮನಕ್ಕೆ ತಂದು ಅವರಿಂದ ಈ ಕಾಮಗಾರಿಗಳನ್ನು…
ಸಿಂದಗಿ: 78ನೇ ಸ್ವಾತಂತ್ರ್ಯೋತ್ಸವದ ಹಿನ್ನಲೆಯಲ್ಲಿ ಹರ್ ಘರ್ ತಿರಂಗಾ ನಡೆಸಲು ಪ್ರಧಾನಿ ಮೋದಿ ಕರೆ ನೀಡಿದ್ದಾರೆ. ಅದರಂತೆ ಪ್ರತಿ ಮನೆ ಮೇಲೂ ರಾಷ್ಟ್ರಧ್ವಜ ಹಾರಿಸಲಾಗುತ್ತಿದೆ. ಬುಧವಾರ ಪಟ್ಟಣದ ತಾಲೂಕು ಆಡಳಿತ ಸೌಧದ ವತಿಯಿಂದ ಸೈಕಲ್ ಜಾಥಾ ನಡೆಸಲಾಯಿತು.ಈ ಜಾಥಾವು ಪಟ್ಟಣದ ಬಸವೇಶ್ವರ ವೃತ್ತದಿಂದ ಪ್ರಾರಂಭಗೊಂಡು ವಿವೇಕಾನಂದ ವೃತ್ತ, ಟಿಪ್ಪು ಸುಲ್ತಾನ್ ವೃತ್ತ, ಅಂಬೇಡ್ಕರ್ ವೃತ್ತ, ಅಂಬಿಗೇರ ಚೌಡಯ್ಯ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತದಿಂದ ಮಾರ್ಗವಾಗಿ ಸಂಚರಿಸಿ ಮತ್ತೇ ಬಸವೇಶ್ವರ ವೃತ್ತಕ್ಕೆ ಬಂದು ತಲುಪಿ ಮುಕ್ತಾಯಗೊಂಡಿತು.ಸೈಕಲ್ ಹಾಗೂ ಬೈಕ್ ಎರಡಕ್ಕೂ ಅವಕಾಶ ಇದ್ದಿದ್ದರಿಂದ ಎಲ್ಲರೂ ತಮ್ಮ ವಾಹನಗಳಿಗೆ ತ್ರಿವರ್ಣ ಧ್ವಜ ಕಟ್ಟಿಕೊಂಡು ದೇಶದ ಪರ ಘೋಷಣೆ ಕೂಗುತ್ತಾ ಸಾಗಿದರು. ಜಾಥಾದಲ್ಲಿ ಭಾಗವಹಿಸಲೂ ಎಲ್ಲರಿಗೂ ಮುಕ್ತ ಆಹ್ವಾನ ನೀಡಲಾಗಿತ್ತು. ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದರು.ಈ ವೇಳೆ ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿ, ಸಾರ್ವಜನಿಕರು ಸೇರಿದಂತೆ ಅನೇಕರು ಭಾಗವಸಿದ್ದರು. ” ಪ್ರತಿಯೊಬ್ಬರಲ್ಲೂ ದೇಶಭಕ್ತಿ, ದೇಶಾಭಿಮಾನವನ್ನು ಮೂಡಿಸಲು ಹರ್ ಘರ್ ತಿರಂಗಾ ಅಭಿಯಾನವನ್ನು ನಡೆಸಲಾಗುತ್ತಿದೆ. ಎಲ್ಲರೂ…
ಸಿಂದಗಿ: ಹಿಂದಿನ ಸರಕಾರದಲ್ಲಿ ಕಾಮಗಾರಿಗಳು ಕುಂಠಿತಗೊಂಡಿರುವುದು ಪ್ರಸ್ತುತ ಸಿಂದಗಿ ಶಾಸಕ ಅಶೋಕ ಮನಗೂಳಿ ಅವರ ನೇತೃತ್ವದಲ್ಲಿ ಕಾಮಗಾರಿಗಳು ನಡೆಯುತ್ತಿವೆ. ಪಟ್ಟಣಕ್ಕೆ ಸಂಬಂಧಿಸಿದ ವಿಶೇಷ ಅನುದಾನವನ್ನು ಪೌರಾಡಳಿತ ವತಿಯಿಂದ ನೀಡುವೆ ಎಂದು ಸಚಿವ ರಹೀಂ ಖಾನ್ ಹೇಳಿದರು.ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಬಳಿ ನೂತನವಾಗಿ ನಡೆಯುತ್ತಿರುವ ಇಂದಿರಾ ಕ್ಯಾಂಟಿನ್ ಕಾಮಗಾರಿ ವಿಕ್ಷೀಸಿ ಮಾದ್ಯಮದವರೊಡನೆ ಮಾತನಾಡಿದ ಅವರು, ರಾಜ್ಯದಲ್ಲಿ ಐದು ರೂಪಾಯಿಗೆ ಉಪಹಾರ ಹತ್ತು ರೂಪಾಯಿಗೆ ಊಟ ಸಿಗುವ ಯೋಜನೆ ನಮ್ಮ ಕಾಂಗ್ರೇಸ್ ಸರಕಾರದ ಸಿದ್ದರಾಮಯ್ಯ ಅವರು ನೀಡಿದ್ದು, ಬಡವರ ಹೊಟ್ಟೆ ತುಂಬಿಸುತ್ತಿರುವುದು ಬಡ ವರ್ಗಕ್ಕೆ ಸಂತಸ ತಂದಿದೆ. ಹಲವಾರು ವರ್ಷಗಳಿಂದ ಜಿಲ್ಲೆಯಲ್ಲಿಯೇ ಹಿಂದುಳಿದ ಅಭಿವೃದ್ಧಿ ಕಾಣದ ಕ್ಷೇತ್ರವಾಗಿ ಸಿಂದಗಿ ನಗರ ಬಿಂಬಿತವಾಗುತ್ತಿದೆ ಎಂಬ ವರದಿಗಾರರ ಪ್ರಶ್ನೇಗೆ ಉತ್ತರಿಸಿದ ಅವರು ಹಿಂದಿನ ಸರಕಾರ ವೈಫಲ್ಯದಿಂದ ಕ್ಷೇತ್ರ ಅಭಿವೃದ್ದಿಯಲ್ಲಿ ಕುಂಠಿತಗೊಂಡಿದೆ. ಪ್ರಸ್ತುತ ಕೆಲವು ಯೋಜನೆಗಳಲ್ಲಿ ಕಾಮಗಾರಿ ನಡೆಯುತ್ತಿವೆ ಪೌರಾಡಳಿತ ಇಲಾಖೆಯಿಂದ ವಿಶೇಷ ಅನುದಾನ ನೀಡುವೆ ಎಂದು ಭರವಸೆ ನೀಡಿದರು.ಬಳಿಕ ಶಾಸಕ ಅಶೋಕ ಮನಗೂಳಿ ಸಚಿವರನ್ನು ಸ್ವಾಗತಿಸಿ ಮಾತನಾಡಿದ…
ಸಿಂದಗಿ: ಇಂದಿನ ದಿನಗಳಲ್ಲಿ ಒಂದು ರಾಷ್ಟ್ರ ಅಭಿವೃದ್ಧಿ ಹೊಂದಬೇಕಾದರೆ ಯುವ ಸಮುದಾಯ ತಂಬಾಕಿನಂತಹ ಹಾನಿಕಾರಕ ವಸ್ತುಗಳ ಸೇವನೆಯಿಂದ ಕ್ಯಾನ್ಸರ್ನಂತಹ ಖಾಯಿಲೆಗಳಿಗೆ ತುತ್ತಾಗಿ ಆರ್ಥಿಕವಾಗಿ ರಾಷ್ಟ್ರ ನಿರ್ಮಾಣದಲ್ಲಿ ತೊಂದರೆಯಾಗುತ್ತಿದ್ದು ಇಂತಹ ದುಶ್ಚಟಗಳಿಂದ ದೂರವಿರಬೇಕು ಎಂದು ತಾಪಂ ಇಒ ರಾಮು ಅಗ್ನಿ ಹೇಳಿದರು.ಪಟ್ಟಣದ ತಾಪಂ ಸಬಾಭವನದಲ್ಲಿ ನಶಾ ಮುಕ್ತ ಭಾರತ ಅಭಿಯಾನದಡಿಯಲ್ಲಿ ತಾಲೂಕಿನ ವಿಆರ್ಡಬ್ಲೂ ಮತ್ತು ಎಂಆರ್ಡಬ್ಲೂ ಅವರಿಂದ ಜರುಗಿದ ವ್ಯಸನ ಮುಕ್ತ ಸಮಾಜ ಪ್ರತಿಜ್ಞಾವಿಧಿ ಕಾರ್ಯಕ್ರಮದಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿ ಮಾತನಾಡಿದ ಅವರು, ನಮ್ಮ ಕುಟುಂಬದ ಸದಸ್ಯರಿಗೂ, ಸ್ನೇಹಿತರಿಗೂ ಇಂತಹ ದುಷ್ಚಟಗಳಿಂದ ಮುಕ್ತಾರಾಗುವಂತೆ ತಿಳುವಳಿಕೆ ನೀಡಬೇಕು ಎಂದು ಸಲಹೆ ನೀಡಿದರು.ಇದೇ ಸಂದರ್ಭದಲ್ಲಿ ನರೇಗಾ ಸಹಾಯಕ ನಿರ್ದೇಶಕರು ನಿತ್ಯಾನಂದ ಯಲಗೋಡ, ಎ.ಎ.ದುರ್ಗದ, ಎಸಿಡಿಪಿಒ ಸಿದ್ದಲಿಂಗಪ್ಪ ಕೊರವಾರ, ನರೇಗಾ ಸಂಯೋಜಕ ಭೀಮರಾಯ ಚೌಧರಿ, ಎಂಆರ್ಡಬ್ಲೂ ಮುತ್ತು ಸಾತಿಹಾಳ, ಭುವನೇಶ್ವರಿ ಕೋಟಿ, ಜಕ್ಕು ಪೂಜಾರಿ ಸೇರಿದಂತೆ ಸಿಬ್ಬಂದಿಗಳು ಇದ್ದರು.
ಸಿಂದಗಿ: ಕೃಷಿ ಅಧಿಕಾರಿಗಳು ಪ್ರತಿ ಹೋಬಳಿ ಮಟ್ಟದಲ್ಲಿ ವರ್ಷಕ್ಕೆ ಎರಡು ಮೂರು ಬಾರಿ ವಿವಿಧ ಬೆಳೆಗಳು ಹಾಗೂ ಅವುಗಳ ಸಂವರ್ಧನೆ ಕುರಿತು ಕೃಷಿ ವಿಚಾರ ಸಂಕೀರ್ಣಗಳನ್ನು ಏರ್ಪಡಿಸುವುದು ಹಾಗೂ ಪ್ರಾತ್ಯಕ್ಷಿಕೆಗಳನ್ನು ಆಯೋಜಿಸುವ ಮೂಲಕ ರೈತರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡಬೇಕೆಂದು ಶಾಸಕ ಅಶೋಕ ಮನಗೂಳಿ ಹೇಳಿದರು.ತಾಲೂಕಿನ ರಾಂಪುರ ಆರೂಢ ಮಠದಲ್ಲಿ ವಿಜಯಪುರ ಜಿಲ್ಲಾ ಪಂಚಾಯತ್ ಹಾಗೂ ಸಿಂದಗಿ ಕೃಷಿ ಇಲಾಖೆ ವತಿಯಿಂದ ಕಬ್ಬು, ತೊಗರಿ ಹಾಗೂ ಹತ್ತಿ ಬೆಳೆಗಳಲ್ಲಿ ನೂತನ ತಾಂತ್ರಿಕತೆಗಳ ಬಗ್ಗೆ ಹಮ್ಮಿಕೊಂಡ ವಿಚಾರ ಸಂಕೀರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಭಾರತ ದೇಶ ಕೃಷಿ ಪ್ರಧಾನ ದೇಶ. ರೈತ ದೇಶದ ಜೀವನಾಡಿ. ಅನ್ನ ನೀಡುವ ರೈತ ಸಮೃದ್ಧವಾಗಿ ಫಸಲು ಪಡೆದರೆ ಮಾತ್ರ ನಾವು ನೀವೆಲ್ಲರೂ ನೆಮ್ಮದಿಯಿಂದ ಬದುಕಲು ಸಾಧ್ಯ. ದೇಶದ ನಸೀಬನ್ನು ಬದಲಾಯಿಸುವ ಶಕ್ತಿ ಕೃಷಿಕನಿಗೆ ಮಾತ್ರ ಇದೆ ಆದ್ದರಿಂದ ಕೃಷಿ ತಾಂತ್ರಿಕರು ಆತನಿಗೆ ಕಡಿಮೆ ಖರ್ಚಿನಲ್ಲಿ ಭೂಮಿಯ ಆರೋಗ್ಯವನ್ನು ಕಾಪಾಡಿಕೊಂಡು ಅತಿ ಹೆಚ್ಚು ಇಳುವರಿ ಪಡೆಯುವ ತಾಂತ್ರಿಕತೆಯನ್ನು ತಿಳಿಸಿಕೊಟ್ಟು…
ವಿಜಯಪುರ: ಕರ್ನಾಟಕದ ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಆ.೨೨ರಂದು ಬೆಳಿಗ್ಗೆ ೧೦ ರಿಂದ ೧-೩೦ರವರೆಗೆ ಹಾಗೂ ಮಧ್ಯಾಹ್ನ ೨-೩೦ರಿಂದ ೫ ಗಂಟೆಯವರೆಗೆ ನಗರದ ಸ್ಟೇಶನ್ ರಸ್ತೆಯ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ ವಿಚಾರಣೆ ನಡೆಸಲಿದ್ದು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ತಮ್ಮ ಸಮಸ್ಯೆ-ಅಹವಾಲುಗಳಿಗೆ ಪರಿಹಾರ ಪಡೆದುಕೊಳ್ಳುವಂತೆ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಕೋರಿದ್ದಾರೆ.ಸರ್ಕಾರಿ ಅಧಿಕಾರಿ-ನೌಕರರು ಕಾನೂನು ರಿತ್ಯ ಕಾರ್ಯ ಮಾಡಲು ವಿಳಂಬವಾಗುತ್ತಿದ್ದಲ್ಲಿ, ಅಥವಾ ಅಧಿಕಾರಿ-ನೌಕರರು ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ವೃಥಾ ತೊಂದರೆ ಕೊಡುವುದು ಅಥವಾ ಇನ್ನಾವುದೇ ತರಹದ ದುರಾಡಳಿತದಲ್ಲಿ ತೊಡಗಿದ್ದಲ್ಲಿ ತೊಂದರೆಗೊಳಗಾದ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಲಿಖಿತ ರೂಪದಲ್ಲಿ ದಾಖಲೆ, ಸಾಕ್ಷಾಧಾರಗಳೊಂದಿಗೆ ಸಲ್ಲಿಸಿ ಬಗೆಹರಿಸಿಕೊಳ್ಳಬಹುದಾಗಿದೆ.ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ ತನಿಖೆ-ವಿಚಾರಣೆಗೆ ಬಾಕಿ ಇರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ಕಾನೂನು ರಿತ್ಯ ಆ.೨೩ರಂದು ಬೆಳಿಗ್ಗೆ ೧೦ ರಿಂದ ಮಧ್ಯಾಹ್ನ ೧-೩೦ರವರೆಗೆ ಮತ್ತು ಮಧ್ಯಾಹ್ನ ೨-೩೦ರಿಂದ ೫ ಗಂಟೆಯವರೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿಚಾರಣೆ ನಡೆಸಲಿದ್ದಾರೆ.…
ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪು ವಿಭಾಗದಿಂದ ಶಿಶುಕ್ಷ ತರಬೇತಿಗಾಗಿ ಆಯ್ಕೆ ಮಾಡಿಕೊಳ್ಳಲು ಐಟಿಐ ವಿದ್ಯಾರ್ಹತೆಯನ್ನು ಹೊಂದಿದ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಆ.೨೩ ರಂದು ಬೆಳಿಗ್ಗೆ ೧೦ ರಿಂದ ಮಧ್ಯಾಹ್ನ ೩ ಗಂಟೆಯವರೆಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ಕಚೇರಿ, ಅಥಣಿ ರಸ್ತೆ ವಿಜಯಪುರದಲ್ಲಿ ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ.ಐಟಿಐನಲ್ಲಿ ಎಲೆಕ್ಟ್ರಿಷಿಯನ್, ಮ್ಯೆಕ್ಯಾನಿಕ್, ಡಿಸೆಲ್ ಮೆಕ್ಯಾನಿಕ್, ಮೋಟಾರ ವೆಹಿಕಲ್, ಫಿಟರ್, ಪೇಂಟರ್ ಹಾಗೂ ವೆಲ್ಡರ್ ವೃತ್ತಿಯಲ್ಲಿ ಉತ್ತೀರ್ಣರಾದ ೬೦ ಅಭ್ಯರ್ಥಿಗಳನ್ನು ತರಬೇತಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು www.apprenticeshipindia.gov.inಪೋರ್ಟಲ್ನಲ್ಲಿ ಕ್ಯಾಂಡಿಡೇಟ್ ರಜಿಸ್ಟ್ರೇಶನ್ ನಲ್ಲಿ ವಿವರವಾದ ಮಾಹಿತಿಯನ್ನು ಆನ್ಲೈನ್ನಲ್ಲಿ ನೊಂದಣಿಯೊಂದಿಗೆ ಅರ್ಜಿ ಸಲ್ಲಿಸಿ, ಸಲ್ಲಿಸಿದ ಅರ್ಜಿ ಹಾಗೂ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಮೊ: ೭೭೬೦೯೯೨೨೫೬, ೯೬೦೬೯೦೮೮೬೨ ಸಂಖ್ಯೆಗೆ ಸಂಪರ್ಕಿಸುವಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಿಕೋಟಾ ಉಪನೊಂದಣಾಧಿಕಾರಿ ಕಚೇರಿ ಕಾರ್ಯಾರಂಭ | ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರಕ್ಕೆ ಚಾಲನೆ ವಿಜಯಪುರ: ವಿವಿಧ ಸಭೆ-ಸಮಾರಂಭಗಳಲ್ಲಿ ಅನಗತ್ಯ ಹಾರ್-ತುರಾಯಿ ಖರ್ಚು ಮಾಡದೇ ಬದಲಿಗೆ ಬಡ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲು ನೋಟ್ಬುಕ್ ವಿತರಣೆ ಮಾಡುವ ಪದ್ಧತಿ ರೂಢಿಸಿಕೊಳ್ಳಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅಭಿಪ್ರಾಯಿಸಿದರು.ಜಿಲ್ಲೆಯ ತಿಕೋಟಾದಲ್ಲಿ ತಾಲೂಕಾ ಸೌಧದಲ್ಲಿನ ಉಪನೊಂದಣಾದಿಕಾರಿ ಕಚೇರಿ ಕಾರ್ಯಾರಂಭ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರವನ್ನು ಬುಧವಾರ ಉದ್ಘಾಟನೆ ನೆರವೇರಿಸಿ ಮಾತನಾಡಿದರು.ಯಾವುದೇ ಸಭೆ-ಸಮಾರಂಭಗಳಲ್ಲಿ ನೋಟ್ಪುಸ್ತಕ ನೀಡುವ ಪದ್ಧತಿ ರೂಢಿಸಿಕೊಂಡಲ್ಲಿ ಇದರಿಂದ ವಿದ್ಯಾರ್ಥಿಗಳಿಗೆ ಅದರಲ್ಲೂ ಬಡ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿದಂತಾಗುತ್ತದೆ. ಹಾರ ತುರಾಯಿಗಳಿಗೆ ವ್ಯಯಿಸುವ ವೆಚ್ಚವನ್ನು ಶೈಕ್ಷಣಿಕ ಗುಣಮಟ್ಟಕ್ಕೆ ಪ್ರೊತ್ಸಾಹಿಸುವ ನಿಟ್ಟಿನಲ್ಲಿ ನೋಟ್ಪುಸ್ತಕ ಅಥವಾ ಪುಸ್ತಕ ಒದಗಿಸುವ ಮೂಲಕ ಬಡ ಮಕ್ಕಳಿಗೆಗೆ ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.ಶಾಲೆಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಿ ಶಿಕ್ಷಣಕ್ಕೆ ಒತ್ತು ನೀಡಿ ಶೈಕ್ಷಣಿಕ ಪ್ರಗತಿಯಲ್ಲಿ ವಿಜಯಪುರ ಜಿಲ್ಲೆ ಶೈಕ್ಷಣಿಕ…
ವಿಜಯಪುರ: ಬುಧವಾರ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಟೆಕಡೆಗಲ್ಲಿಯಲ್ಲಿರುವ ಸರಕಾರಿ ಉರ್ದು ಶಾಲೆ ನಂ.೫ಗೆ ಭೇಟಿ ನೀಡಿ ಮಕ್ಕಳ ಕಲಿಕಾ ಗುಣಮಟ್ಟವನ್ನು ಪರಿಶೀಲನೆ ನಡೆಸಿ, ಮಕ್ಕಳಿಗೆ ಪಾಠ ಬೋಧನೆ ಮಾಡಿದರು.ಶಾಲೆಯ ಶಿಕ್ಷಕರಿಂದ ಶಾಲೆಯಲ್ಲಿ ಕುರಿತಾಗಿ ಮಾಹಿತಿ ಪಡೆದುಕೊಂಡ ಅವರು, ಮಕ್ಕಳಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಭಾಗವಹಿಸುವಂತೆ ನೋಡಿಕೊಳ್ಳುವ ಮೂಲಕ ಮಕ್ಕಳ ಸರ್ವಾಂಗೀಣ ವ್ಯಕ್ತಿತ್ವದ ಬೆಳವಣಿಗೆಗೆ ಪೂರಕವಾಗಿ ಕಾರ್ಯನಿರ್ವಹಿಸಬೇಕು. ಮಕ್ಕಳಿಗೆ ಶುಚಿತ್ವ, ಶಿಸ್ತು ಮತ್ತು ಅಧ್ಯಯನ ಮಹತ್ವದ ಬಗ್ಗೆ ತಿಳಿಸಿಕೊಡಬೇಕು ಎಂದು ಸೂಚಿಸಿದ ಅವರು ಶಾಲೆಯ ಹಲವು ಕಡತ ಮತ್ತು ವಹಿಗಳನ್ನು ಪರಿಶೀಲಿಸಿದರು.ನಗರದ ಟೆಕಡೆಗಲ್ಲಿಯ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು, ಆಹಾರದ ವೇಳಾಪಟ್ಟಿಯಂತೆ ಗುಣಮಟ್ಟದ ಆಹಾರ ವಿತರಿಸಲು ಕ್ರಮ ವಹಿಸಬೇಕು, ದಾಖಲಾತಿಗಳ ನಿರ್ವಹಣೆ, ಪಾಲಕರ ಸಭೆಯ ಮಾಹಿತಿ, ಆಗಾಗ ಕಡ್ಡಾಯವಾಗಿ ಸಭೆಗಳನ್ನು ಹಮ್ಮಿಕೊಂಡು ಇಲಾಖೆ ಯೋಜನೆಗಳ ಸದುಪಯೋಗದ ಬಗ್ಗೆ ಸಾರ್ವಜನಿಕರಿಗೆ ವಿವರವಾಗಿ ಮಾಹಿತಿಯನ್ನು ನೀಡಬೇಕು. ಮಕ್ಕಳ ಉತ್ತಮ ಬೆಳವಣಿಗೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಬಹುಮುಖ್ಯವಾಗಿದೆ ಈ ದಿಶೆಯಲ್ಲಿ ಕಾರ್ಯನಿರ್ವಹಿಸಬೇಕು ಎಂದು…
