Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ:ನಗರದ ಯತ್ನಾಳ ರಸ್ತೆಯಲ್ಲಿರುವ ಮಹೇಂದ್ರಗಿರಿ ಕ್ಷೇತ್ರದಲ್ಲಿ ಭಗವಾನ ಶ್ರೀ ೧೦೦೮ ಪಾರ್ಶ್ವನಾಥ ಸ್ವಾಮಿಯ ನಿರ್ವಾಣ ಮಹೋತ್ಸವವನ್ನು ಪರಮ ಪೂಜ್ಯ ಶ್ರೀಮಧ ಅಭಿನವ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಶ್ರವಣಬೆಳಗೋಳ ಇವರ ಪಾವನ ಮಾರ್ಗದರ್ಶನ ಹಾಗೂ ನೇತೃತ್ವದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು.ಬೆಳಿಗ್ಗೆ ೫.೩೦ ರಿಂದ ಮಂಗಲ ವಾದ್ಯ ಘೋಷದೊಂದಿಗೆ ಪ್ರಾರಂಭವಾದ ಕಾರ್ಯಕ್ರಮ ಪಲ್ಲಕ್ಕಿ ಉತ್ಸವ, ರಥಯಾತ್ರೆ, ಜನಕಲ್ಯಾಣ ಯೋಜನೆಗಳ ಉದ್ಘಾಟನೆ ಭಗವಂತರಿಗೆ ಮಹಾ ಮಸ್ತಾಭಿಷೇಕ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅನ್ನಪ್ರಸಾದ ನೆರವೇರಿತು. ಕೊನೆಯಲ್ಲಿ ನಡೆದ ಧರ್ಮಸಭೆಯಲ್ಲಿ ನಿವೃತ್ತ ನ್ಯಾಯಾಧೀಶರಾದ ಸುಭಾಸ ಹೊಸಕಲ್ಲೆ ಹಾಗೂ ನಿವೃತ್ತರಾದ ಬಾಬು ಕೆ ಅನಾಜೆ, ಶಾಂತಿನಾಥ ಎಸ್ ಶಿವಣ್ಣವರ ಅವರನ್ನು ಸನ್ಮಾನಿಸಲಾಯಿತು.ಧರ್ಮಸಭೆಯಲ್ಲಿ ಮಾನ್ಯ ನ್ಯಾಯಾಧೀಶರಾದ ಸೌ.ಸ್ಮೀತಾ ಮಾಲಗುಂದಿ, ಲೋಕೇಶ ಹವಲೆ, ರಮೇಶ ಮಹಾಜನ ಹಾಗೂ ಕೆ.ಜೆ.ಎ. ಸದಸ್ಯರಾದ ಪ್ರವೀಣ ಕಾಸಾರ, ಟ್ರಸ್ಟಿಗಳಾದ ಪ್ರಕಾಶ ಚಂಕೇಶ್ವರ, ಸಮಾಜದ ಗಣ್ಯರಾದ ಮಿಲಿಂದ ಪಾಟೀಲ, ಭರಮಣ್ಣ ಶೆಟ್ಟಿ, ಶೀತಲ ಪಾಟೀಲ, ಬಾಹುಬಲಿ ಕಡಕೋಳ, ಅಶೋಕ ಬೋಗಾರ, ಚೇತನ ಸಗರೆ,ರವಿ ನಾಗಾವಿ ಸೇರಿದಂತೆ ಸಾವಿರಾರು ಭಕ್ತರು ಭಾಗವಹಿಸಿದ್ದರು.ಕಾರ್ಯಕ್ರಮದಲ್ಲಿ…
ವಿಜಯಪುರ: ಅಂಚೆ ಇಲಾಖೆಯಿಂದ ೬ರಿಂದ ೯ನೇ ತರಗತಿ ವಿದ್ಯಾರ್ಥಿಗಳಿಗೆ ಅಂಚೆ ಚೀಟಿಗಳ ಸಂಗ್ರಹ ಉತ್ತೇಜಿಸಲು ದೀನ್ ದಯಾಳ ಸ್ಪರ್ಷ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.ಈ ಯೋಜನೆಯಡಿ ಅಂಚೆ ಚೀಟಿಗಳ ಮೌಲ್ಯ ಮತ್ತು ಸಂಶೋಧನೆಯ ಕುರಿತಾದ ಹವ್ಯಾಸವನ್ನು ಬೆಳೆಸಲು ವಿದ್ಯಾರ್ಥಿವೇತನ ನೀಡಲಾಗುವುದು. ಚಿಕ್ಕ ವಯಸ್ಸಿನಲ್ಲಿ ಮಕ್ಕಳಲ್ಲಿ ಅಂಚೆ ಚೀಟಿಗಳ ಸಂಗ್ರಹ ಉತ್ತೇಜನೆ ವಿದ್ಯಾರ್ಥಿವೇತನದ ಉದ್ದೇಶವಾಗಿದೆ. ಈ ಯೋಜನೆಯಡಿ ಅರ್ಜಿ ಸಲ್ಲಿಸುವ ೬ ರಿಂದ ೯ನೇ ತರಗತಿ ವಿದ್ಯಾರ್ಥಿಗಳು ೨೦೨೩-೨೪ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಶೆ.೬೦ ರಷ್ಟು ಅಂಕ ಪಡೆದಿರಬೇಕು ಮತ್ತು ಅಂಚೆ ಚೀಟಿಗಳ ಠೇವಣಿ ಖಾತೆಯನ್ನು ಅಥವಾ ಅಂಚೆ ಚೀಟಿಗಳ ಕ್ಲಬ್ನಲ್ಲಿ ಸದಸ್ಯರಾಗಿರಬೇಕು.ಅಂಚೆ ಚೀಟಿಗಳ ಸಂಗ್ರಹದ ರಸಪ್ರಶ್ನೆ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿದ್ದು, ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ೬ ಸಾವಿರ ರೂ. ವಿದ್ಯಾರ್ಥಿವೇತನ ನೀಡಲಾಗುತ್ತದೆ.ಅರ್ಜಿ ಸಲ್ಲಿಸಲು ದಿನಾಂಕ : ೦೩-೦೯-೨೦೨೪ ಕೊನೆಯ ದಿನಾಂಕವಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಂತರ್ಜಾಲಗಳಾದ www.indiapost.govin and www.karnatakapost.gov.inಮತ್ತು ದೂ: ೦೮೩೫೨-೨೫೦೨೬೫, ೨೫೩೦೦೦, ಮೊ: ೯೯೪೫೪೫೭೯೭೬,…
ಇಂಡಿ:ನಾಟಕ ಪ್ರದರ್ಶನ ಮಾಡುವುದರಿಂದ ಮಕ್ಕಳಿಗೆ ಜ್ಞಾನ ವೃದ್ಧಿಯಾಗುವುದರ ಜೊತೆಗೆ ಕಲಿಕೆಯು ಕರಗತ ಮಾಡಿಕೊಳ್ಳುವ ಪೂರಕ ವಾತಾವರಣ ಒದಗಿಸಿ ಕೊಟ್ಟಂತೆ ಆಗುತ್ತದೆ ಎಂದು ಉಪನ್ಯಾಸಕ ಸದಾನಂದ ಈರನಕೇರಿ ಹೇಳಿದರು.ಪಟ್ಟಣದ ಅಮರ ಫಂಕ್ಷನ್ ಹಾಲನಲ್ಲಿ ವಿಜಯಪುರ ರಂಗಸಿರಿ ಪ್ರತಿಷ್ಠಾನ ಹಾಗೂ ವಿವಿಧ ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ ಜರುಗಿದ ನಾಟಕ ಪ್ರದರ್ಶನ ವೀಕ್ಷಿಸಿ ಮಾತನಾಡುತ್ತಾ, ಮೌಲ್ಯಯುತ ಸಂದೇಶಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಂಡಾಗ ಮಾತ್ರ ಸಮಾಜ ಬದಲಾವಣೆ ಸಾಧ್ಯ ಎಂದರು.ಪೂರ್ಣಚಂದ್ರ ತೇಜಸ್ವಿ ರಚಿಸಿರುವ ಪಿಯುಸಿ ದ್ವಿತೀಯ ವರ್ಷದ ದೀರ್ಘ ಗದ್ಯ ಕೃಷ್ಣೇಗೌಡನ ಆನೆ, ಡಾಕ್ಟರ್ ಚಂದ್ರಶೇಖರ ಕಂಬಾರ ಬರೆದಿರುವ ಬೋಳೇಶಂಕರ ನಾಟಕಗಳು ಪ್ರದರ್ಶನಗೊಂಡವು. ವಿವಿಧ ಕಾಲೇಜು ವಿದ್ಯಾರ್ಥಿಗಳು, ನಾಟಕ ವೀಕ್ಷಿಸಿ ಮೆಚ್ಚುಗೆ ವ್ಯಕ್ತ ಪಡಿಸಿದರು.ವೇದಿಕೆಯ ಮೇಲೆ ಅಂಜುಮನ್ ಕಾಲೇಜು ಪ್ರಾಚಾರ್ಯ ಜೆ.ಡಿ. ಪೂಜಾರಿ, ದೂಮಗೊಂಡ, ಶಕೀನಾ ಪಟೇಲ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿವಿಧ ಕಾಲೇಜುಗಳ ಹಿರಿಯ ಉಪನ್ಯಾಸಕರು ಹಾಜರಿದ್ದರು.
ವಿಜಯಪುರ:ಸ್ವಾತಂತ್ರ್ಯ ಎಂದರೆ ಕತ್ತಲೆಯಿಂದ ಬೆಳಕಿನಡೆಗೆ ಬರುವುದು. ಆದಿ ಕಾಲದಿಂದಲೂ ಬ್ರಿಟಿಷರಿಂದ ತುಳಿತಕ್ಕೊಳಗಾಗಿ ನಮ್ಮ ಹಕ್ಕನ್ನು ಕಳೆದುಕೊಂಡು ಜೀವಂತ ಶವದಂತಾಗಿರುವ ಜೀವನವೂ ಸ್ವಾತಂತ್ರ್ಯಕ್ಕಾಗಿ ಪ್ರತಿಯೊಬ್ಬರು ತಮ್ಮ ಹಕ್ಕಿನಂತೆ ಬದುಕುವುದಕ್ಕಾಗಿ ನಾನಾರೀತಿಯ ಹೋರಾಟಗಾರರು ತಮ್ಮ ಜೀವನವನ್ನೇ ಸ್ವಾತಂತ್ರ್ಯಕ್ಕಾಗಿ ಮುಡಿಪಾಗಿಟ್ಟಿರುವುದು ಶ್ಲಾಘನೀಯ ಎಂದು ಪ್ರಕಾಶ ಆರ್ ಕೆ ಹೇಳಿದರು.ಅವರು ನಗರದ ಹೊರವಲಯದ ಭೂತನಾಳ ಕ್ರಾಸ್, ಸೋಲಾಪೂರ ಬೈಪಾಸ್ ರಸ್ತೆಗೆ ಅಂಟಿಕೊಂಡಿರುವ ಅಂಡರ್ಗ್ರೌಂಡ್ ಮೇಲೆ ಬ್ರಿಟಿಷರ ವಿರುದ್ಧ ಹೋರಾಡಿ ಜೀವತೆತ್ತ ಕೆಚ್ಚದೆಯ ಹೋರಾಟಗಾರ ಕಿತ್ತೂರ ಸಾಮ್ರಾಜ್ಯದ ಅಪ್ರತಿಮ ವೀರ, ಭಾರತ ಮಾತೆಯ ಹೆಮ್ಮೆಯ ಪುತ್ರ ಕ್ರಾಂತಿವೀರ ಸಂಗೋಳ್ಳಿರಾಯಣ್ಣನ ಭಾವಚಿತ್ರವು ಗಾನಯೋಗಿ ಸಂಘದ ವತಿಯಿಂದ ಬಿಡಿಸುವುದರ ಮೂಲಕ ನಮ್ಮ ಯುವ ಪೀಳಿಗೆಗೆ ಸಂದೇಶ ನೀಡವಲ್ಲಿ ಮುಂದಾಗಿದೆ ಎಂದರು.ಆಧುನಿಕ ಯುಗದಲ್ಲಿ ಯುವಜನತೆ ಮೊಬೈಲ್ ಬಂಧನಗೊಂಡು ನಮ್ಮ ಭಾರತೀಯ ಸಂಸ್ಕೃತಿ, ನಮ್ಮ ದೇಶದ ಪ್ರಗತಿಯ ಚಿಂತನಗಳು ಮರೀಚಿಕೆಯಾದಂತಿವೆ. ಆದ ಕಾರಣ ಯುವ ಜನತೆ ಮೊಬೈಲ್ ಗೀಳಿನಿಂದ ಹೊರಬಂದು ನಮ್ಮ ದೇಶಕ್ಕಾಗಿ ಜೀವ ತ್ಯಾಗಗೈದ ಮಹನೀಯರ ಕುರಿತು ಸ್ಮರಿಸಬೇಕು. ಹಾಗೂ ದುಶ್ಚಟದಿಂದ ಹೊರಬಂದು…
ವಿಜಯಪುರದಲ್ಲಿ ಕನೆಕ್ಟ್-೨೦೨೪ ಕ್ಕೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ.ಪಾಟೀಲ ಅಭಿಮತ ವಿಜಯಪುರ: ಐತಿಹಾಸಿಕ ವಿಜಯಪುರ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶಗಳಿದ್ದು, ಐತಿಹಾಸಿಕ ಪ್ರವಾಸಿ ಸ್ಥಳಗಳ ಅಭಿವೃದ್ಧಿಯಿಂದ ಪ್ರವಾಸೋಧ್ಯಮಕ್ಕೆ ಉತ್ತೇಜನ ದೊರೆತು ಆದಾಯ ವೃದ್ದಿಯೊಂದಿಗೆ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಸಹಕಾರಿಯಾಗಲಿದೆ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಖಾತೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಬಿ.ಪಾಟೀಲ ಅವರು ಹೇಳಿದರು.ನಗರದ ಖಾಸಗಿ ಹೊಟೇಲ್ನಲ್ಲಿ ನಡೆದ ಪ್ರವಾಸೋದ್ಯಮ ಇಲಾಖೆ ಹಾಗೂ ಕರ್ನಾಟಕ ಟೂರಿಸಂ ಸೊಸೈಟಿ ಇವರ ಸಹಯೋಗದಲ್ಲಿ ಬುಧವಾರ ನಡೆದ ಕನೆಕ್ಟ್-೨೦೨೪ರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಜಿಲ್ಲೆಯಲ್ಲಿನ ಗೊಲಗುಮ್ಮಟ, ಇಬ್ರಾಹಿಂ ರೋಜಾ, ಬಾರಾಕಮಾನ, ತಾಜಬಾವಡಿ ಬಾಗಲಕೋಟೆ ಜಿಲ್ಲೆಯ ಬದಾಮಿ-ಐಹೊಳೆಯ ಗುಹಾಂತರ ದೇವಾಲಯ, ಪಟ್ಟದಕಲ್ಲು, ಕೂಡಲ ಸಂಗಮ, ಜಮಖಂಡಿಯ ಅರಮನೆ, ಸೇರಿದಂತೆ ಅನೇಕ ಸ್ಮಾರಕಗಳು, ಐತಿಹಾಸಿಕ ವಾಸ್ತುಶಿಲ್ಪಗಳು, ಪ್ರವಾಸಿ ತಾಣಗಳಲ್ಲಿ ಹೊರ ರಾಜ್ಯ ಮತ್ತು ವಿದೇಶಿ ಪ್ರವಾಸಿಗರನ್ನು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿ ಸ್ಥಳಗಳಿಗೆ…
ಇಂಡಿ: ಸತ್ತ ಮೇಲೆ ಏನನ್ನು ಕೊಂಡೊಯ್ಯಲು ಸಾಧ್ಯವಿಲ್ಲ. ಇರುವುದರೊಳಗೆ ಸಮಾಜದಲ್ಲಿ ಉತ್ತಮ ಕಾರ್ಯಗಳು ಮಾಡಬೇಕು. ಉತ್ತಮ ನೆಮ್ಮದಿ ಬದುಕಿಗಾಗಿ ಜೀವನದಲ್ಲಿ ಶ್ರದ್ಧೆ, ಭಕ್ತಿಯಿಂದ ದೇವರ ಸ್ಮರಣೆ ಮಾಡಬೇಕು ಎಂದು ಸಾನಿಧ್ಯ ವಹಿಸಿದ್ದ ತಡವಲಗ ಹಿರೇಮಠ ಸ್ವಾಮೀಜಿ ರಾಚೋಟೇಶ್ವರ ಶಿವಾಚಾರ್ಯರು ಹೇಳಿದರು.ತಾಲ್ಲೂಕಿನ ಬೊಳೆಗಾಂವ ಗ್ರಾಮದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಶ್ರಾವಣ ಮಾಸದಲ್ಲಿ ನಂದಿ ಬಸವೇಶ್ವರ ಜಾತ್ರೆಯ ಪ್ರಯುಕ್ತ ಅಡ್ಡ ಪಲ್ಲಕ್ಕಿ ಹಾಗೂ ಕಳಸಾರೋಹಣ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಅತ್ಯಂತ ವಿಜೃಂಭಣೆಯಿಂದ ಜರುಗಿದವು.ಜಾತ್ರೆಯಲ್ಲಿ ಚಿತ್ರ ವಿಚಿತ್ರ ಮದ್ದುಗಳ ಸುಡುತ್ತಾ ಪಲ್ಲಕ್ಕಿ ಮೆರವಣಿಗೆ ಹಾಗೂ ಚಡಚಣ ತಾಲೂಕಿನ ಧೂಳಖೇಡ ಗ್ರಾಮದ ಚಂದ್ರಶೇಖರ ಹಿರೇಮಠ ಅವರ ಶ್ರವಣ ದೋಷವುಳ್ಳ ಮಕ್ಕಳ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಂದ ನೃತ್ಯ ರಸಮಂಜರಿ, ನಾಟಕ ಕಾರ್ಯಕ್ರಮವು ಅತಿ ವಿಜ್ರಂಭಣೆಯಿಂದ ಜರುಗಿತು.ಬಸವಣ್ಣನವರ ಕುರಿತು ಪ್ರಭು ಸಾರವಾಡ ಉಪನ್ಯಾಸ ನೀಡಿದರು.ಡಿ.ಬಿ. ಚಾಂದಕವಟೆ ಉದ್ಘಾಟಿಸಿದರು.ಡಾ ಜಿ ಕೆ ಮಿರಗಿ ಅಧ್ಯಕ್ಷತೆ ವಹಿಸಿದ್ದರು. ಹಣಮಂತ ಗುಂಜುಟಗಿ,ಕಾಶೀನಾಥ, ಬಸಲಿಂಗಯ್ಯ ಹಿರೇಮಠ, ಶಿವಶಂಕರ ಕಪ್ಪೆನವರ, ನಿವೃತ್ತ ಯೋಧ ಸೋಮಶೇಖರ…
“ಜಯ್ ನುಡಿ” (ವ್ಯಕ್ತಿತ್ವ ವಿಕಸನ ಮಾಲಿಕೆ)- ಜಯಶ್ರೀ.ಜೆ. ಅಬ್ಬಿಗೇರಿ,ಇಂಗ್ಲೀಷ್ ಉಪನ್ಯಾಸಕರು, ಬೆಳಗಾವಿ, ಮೊ:೯೪೪೯೨೩೪೧೪೨ ಪ್ರಯತ್ನ ಮಾತ್ರ ನಮ್ಮದು ಹಿಂದಿಗಿಂತ ಇಂದು ಬದುಕು ತರಹೇವಾರಿಯಾಗಿ ತೆರೆದುಕೊಳ್ಳುತ್ತಿದೆ. ಇಂದಿನ ಜನ ಜೀವನ ಕಂಡಾಗ ಸೌಕರ್ಯ ಹೆಚ್ಚಿದ್ದರೂ ನೋವು ಕಡಿಮೆಯಾಗಿಲ್ಲ. ನಲಿವು ಎಲ್ಲೋ ಅವಿತುಕೊಂಡು ಕುಳಿತಿದೆ. ಎಂದೆನಿಸುತ್ತದೆ. ಯಾವಾಗಲೋ ಒಮ್ಮೆ ಸಂತೋಷವು ಕಿಟಕಿಯಲ್ಲಿ ಇಣುಕಿ ನೋಡಿ ಜಾಗ ಖಾಲಿ ಮಾಡುತ್ತಿದೆ. ಹೀಗಾಗಿ ನೆಮ್ಮದಿ ಗಗನ ಕುಸುಮವೆನಿಸುತ್ತಿದೆ. ಇದಕ್ಕೆ ಕಾರಣ ವಿಧಿಯಾಟ ಹಣೆಬರಹ ಎಂದು ಹೆಸರಿಟ್ಟು ಕಣ್ಣೊರೆಸಿಕೊಳ್ಳುತ್ತ ಕೈ ಚೆಲ್ಲಿ ಕುಳಿತಿರುವುದೇ ಆಗಿದೆ. ಜಗದ ಪ್ರತಿಯೊಂದು ಆಗು ಹೋಗುಗಳನ್ನು ನಮ್ಮಿಂದ ಬದಲಿಸಲು ಸಾಧ್ಯವಿಲ್ಲ ಬದುಕು ಜಟಕಾ ಬಂಡಿಯ ಚಕ್ರದಂತೆ ಉರುಳುತ್ತಲೇ ಇರುತ್ತವೆ. ಏರಿಳಿತವೇ ಬದುಕಿನ ಉಸಿರಾಟ. ಬಡವನಿರಲಿ ಬಲ್ಲಿದನಿರಲಿ ಒಳ್ಳೆಯವನಿರಲಿ ಕೆಟ್ಟವನಿರಲಿ ಕಷ್ಟ ಸುಖಗಳು ಬಾಳಿನ ಹಾದಿಯಲ್ಲಿ ಸದಾ ಸಾಗುತ್ತಲೇ ಇರುತ್ತವೆ. ಒಮ್ಮೊಮ್ಮೆ ಬಿರುಸಾದ ಬಿರುಗಾಳಿ ಹೊಡೆತಕ್ಕೆ ಜೀವನದ ದೋಣಿ ತಲೆ ಕೆಳಗಾಗಿ ನಿಂತು ಬಿಡುತ್ತದೆ. ಇನ್ನೊಮ್ಮೆ ಎಲ್ಲಿಂದಲೋ ತಂಪಾದ ತಂಗಾಳಿ ತಲೆ ನೇವರಿಸಿ ಮೈ ಮನಸ್ಸಿಗೆ…
“ವೀಣಾಂತರಂಗ”- ಶ್ರೀಮತಿ, ವೀಣಾ ಹೇಮಂತಗೌಡ ಪಾಟೀಲ್, ಮುಂಡರಗಿ – ಗದಗ ಸ್ವಾತಂತ್ರ್ಯೋತ್ಸವದ ಹೊಸ್ತಿಲಿನಲ್ಲಿ.. ಒಂದು ವಿಶ್ಲೇಷಣೆ “ಹೋರಾಟದ ಸಾಗರಕ್ಕೆ ಸಾವಿರಾರು ನದಿಗಳು” ಎಂಬುದು ಖ್ಯಾತ ಕವಿ ಸಿದ್ಧಲಿಂಗಯ್ಯನವರ ಕವನದ ಸಾಲು ಖಂಡಿತವಾಗಿಯೂ ವಾಸ್ತವವನ್ನು ಪ್ರತಿನಿಧಿಸುವ ಕವನ. ಸ್ವಾತಂತ್ರ್ಯ ಹೋರಾಟದ ಅಮೃತ ಮಹೋತ್ಸವ ಪೂರೈಸಿರುವ ನಮಗೆಲ್ಲಾ ಈ ಸ್ವಾತಂತ್ರ್ಯದ ಹಿಂದಿರುವ ಹೋರಾಟ, ತ್ಯಾಗ, ಬಲಿದಾನಗಳ ಅರಿವು ಖಂಡಿತ ಬೇಕು. ಶತಮಾನಗಳ ಹಿಂದೆ ವ್ಯಾಪಾರದ ನೆವದಿಂದ ಭಾರತವನ್ನು ಹೊಕ್ಕು, ಭಾರತವನ್ನೇ ಆಳಿದ ಡಚ್ಚರು, ಪೋರ್ಚುಗೀಸರು,ಫ್ರೆಂಚರು ಮತ್ತು ಬ್ರಿಟಿಷರು ನಮ್ಮನ್ನು ಕೇವಲ ಆಳಲಿಲ್ಲ, ನಮ್ಮ ಸಂಸ್ಕೃತಿಯ ಆಳದಲ್ಲಿ ಬೇರುಬಿಟ್ಟ ಹಲವಾರು ಸಂಗತಿಗಳ ಮೇಲೆ ರಾಜ್ಯಭಾರ ಮಾಡಿದರು.’ವಸುದೈವ ಕುಟುಂಬಕಂ’ ವ್ಯಾಖ್ಯಾನದ ಮೂಲಕ ಇಡೀ ಜಗತ್ತನ್ನು ಒಂದೇ ಕುಟುಂಬ ಎಂದು ಕರೆದ ಭಾರತ ದೇಶವನ್ನು ಒಡೆದು ಆಳಿದರು. ಹಲವಾರು ಜಾತಿ, ಮತ, ಧರ್ಮಗಳ ತವರೂರಾದ ಭಾರತ ದೇಶದ ಭಾವೈಕ್ಯತೆಯ ಮೂಲ ಬೇರನ್ನು ಅಲುಗಾಡಿಸಿದರು. ಆದರೆ ಭಾರತ ದೇಶ ಅಜೇಯ, ಅಗಮ್ಯ. ನೂರಾರು ಬಾರಿ ಮುರಿಯಲ್ಪಟ್ಟರೂ, ಹಲವಾರು ಬಾರಿ ತುಳಿಯಲ್ಪಟ್ಟರೂ…
ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬೆಂಗಳೂರು: ಹಿಂದೂಸ್ತಾನ್ ಮೆಷಿನ್ ಟೂಲ್ಸ್ನಿಂದ 281 ಎಕರೆ ಭೂಮಿ ವಶಪಡಿಸಿಕೊಳ್ಳಲು ರಾಜ್ಯ ಅರಣ್ಯ ಇಲಾಖೆಗೆ ‘ಸ್ಪಷ್ಟ ಸೂಚನೆ’ ನೀಡಿರುವ ಆಡಳಿತಾತ್ಮಕ ಟಿಪ್ಪಣಿಗೆ ಸಂಬಂಧಿಸಿದಂತೆ ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವ ಎಚ್ಡಿ ಕುಮಾರಸ್ವಾಮಿ ಅವರು ಮಂಗಳವಾರ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು.ಬೆಂಗಳೂರಿನ ಎಚ್ಎಂಟಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಕುಮಾರಸ್ವಾಮಿ, HMT ಭೂಮಿ ವಾಪಸ್ ನೀಡುವ ಪ್ರಶ್ನೆಯೇ ಇಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.ಒಂದು ಕಾಲದಲ್ಲಿ ಶೇ. 90 ರಷ್ಟು ಮಾರುಕಟ್ಟೆ ಷೇರು ಹೊಂದಿದ್ದ ಮತ್ತು ಗಡಿಯಾರ ಮಾರುಕಟ್ಟೆಯನ್ನು ಆಳುತ್ತಿದ್ದ ಎಚ್ ಎಂಟಿ ಈಗ ಮುಚ್ಚುವ ಹಂತಕ್ಕೆ ಬಂದಿದೆ. ಬೆಂಗಳೂರಿನ ಹೆಮ್ಮೆಯಾಗಿರುವ ಎಚ್ ಎಂಟಿಯನ್ನು ಪುನರುಜ್ಜೀವನಗೊಳಿಸಲು ಅರಣ್ಯ ಸಚಿವರು ತಮ್ಮ ಸಣ್ಣತನವನ್ನು ಬಿಟ್ಟು ಸಹಕಾರ ನೀಡಬೇಕು ಎಂದು ಕುಮಾರಸ್ವಾಮಿ ಹೇಳಿದರು.ಒಂದು ಕಾಲದಲ್ಲಿ ಶೇಕಡ 90ರಷ್ಟು ಮಾರುಕಟ್ಟೆಯನ್ನು ವಶಪಡಿಸಿಕೊಂಡಿದ್ದ ಈ…
ತಾಳಿಕೋಟೆಯಲ್ಲಿ ಶರಣ ಸಾಹಿತ್ಯ ಪರಿಷತ್ ದಿಂದ ಉಪನ್ಯಾಸ ಕಾರ್ಯಕ್ರಮ ತಾಳಿಕೋಟಿ: ಬಸವಾದಿ ಶರಣರು ಕೊಟ್ಟುಹೋದ ವಚನಗಳು ಬದುಕಿನ ನೈಜ ಉದ್ದೇಶವನ್ನು ತಿಳಿಸುತ್ತವೆ. ವಚನಗಳು ಸರ್ವಕಾಲಿಕ ಸತ್ಯಗಳಾಗಿದ್ದು ಅವುಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳುವ ಅಗತ್ಯ ಇದೆ ಎಂದು ಶಿಕ್ಷಕ ರುದ್ರೇಶ ಕಿತ್ತೂರ ಹೇಳಿದರು.ಸೋಮವಾರ ಸಂಜೆ ಪಟ್ಟಣದ ಶ್ರೀ ಕಾಳಿಕಾದೇವಿ ಮಂದಿರದಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ತಾಲೂಕ ಘಟಕ ಯುವ ಘಟಕ ಹಾಗೂ ಕದಳಿ ವೇದಿಕೆ ಸಹಯೋಗದಲ್ಲಿ ಶ್ರಾವಣ ಮಾಸದ ನಿಮಿತ್ಯ ಹಮ್ಮಿಕೊಂಡ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಶರಣರ ಅನುಭಾವದಿಂದ ರಚನೆಯಾದ ವಚನಗಳು ಎಲ್ಲ ಕಾಲಕ್ಕೂ ಪ್ರಸ್ತುತವಾಗಿವೆ. 12ನೇ ಶತಮಾನದಲ್ಲಿ ಕಲ್ಯಾಣ ಅನುಭವ ಮಂಟಪದಲ್ಲಿದ್ದ ಬಸವಾದಿ ಶರಣರು ಸಮಾಜದಲ್ಲಿರುವ ಅಸ್ಪೃಶ್ಯತೆ ಅಸಮಾನತೆ ಹಾಗೂ ಆಧ್ಯಾತ್ಮಿಕ ಶೋಷಣೆಯನ್ನು ಹೋಗಲಾಡಿಸಲು ಜೀವದ ಹಂಗು ತ್ವರೆದು ಶ್ರಮಿಸಿದರು. ಅವರು ಸಮಾಜದಲ್ಲಿರುವ ಮೌಢ್ಯಗಳನ್ನು ವಿರೋಧಿಸಿದರು. ಶರಣರ ವಚನಗಳು ವೈಚಾರಿಕತೆಯಿಂದ ಕೂಡಿದ್ದು ಅದರಲ್ಲಿ ಹೃದಯಕ್ಕೆ ತಟ್ಟುವ ವಿಷಯಗಳಿವೆ ಅವುಗಳನ್ನು ಅರ್ಥೈಸಿಕೊಳ್ಳುವ ಅಗತ್ಯ ಇದೆ ಎಂದ ಅವರು ಬಸವಾದಿ ಶರಣರು…
