Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಬಬಲೇಶ್ವರದಲ್ಲಿ ವಿದ್ಯುತ್ ಪರಿವರ್ತಕಗಳ ದುರಸ್ಥಿ & ಪರೀಕ್ಷಣಾ ಕೇಂದ್ರ ಉದ್ಘಾಟಿಸಿದ ಸಚಿವ ಎಂ.ಬಿ.ಪಾಟೀಲ ಮಾಹಿತಿ ವಿಜಯಪುರ: ರೈತರಿಗೆ ಗುಣಮಟ್ಟದ ವಿದ್ಯುತ್ ಪೂರೈಸಲು ಮತ್ತು ಟ್ರಾನ್ಸಫಾರ್ಮರ್ ಸಮಸ್ಯೆಗೆ ಪರಿಹಾರ ಒದಗಿಸಲು ಹಲವಾರು ಸುಧಾರಣೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಮಂಗಳವಾರ ಬಬಲೇಶ್ವರ ಪಟ್ಟಣದಲ್ಲಿ ಹೆಸ್ಕಾಂ ಪರೀಕ್ಷಾ ಕೇಂದ್ರದ ಆವರಣದಲ್ಲಿ ರೂ. 27 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ವಿದ್ಯುತ್ ಪರಿವರ್ತಕಗಳ ದುರಸ್ಥಿ ಮತ್ತು ಪರೀಕ್ಷಣಾ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಒಂದು ಕಾಲದಲ್ಲಿ ರೈತರು ಟಿಸಿ ದುರಸ್ಥಿಗಾಗಿ ಸಾವಿರಾರು ರೂಪಾಯಿ ಖರ್ಚುಮಾಡಿ ಅಲೆದಾಡಬೇಕಿತ್ತು. ಅಲ್ಲದೇ, ಹಣ ನೀಡಿದರೂ ಟಿಸಿ ದುರಸ್ಥಿಗೆ ತಿಂಗಳುಗಟ್ಟಲೆ ಕಾಯಬೇಕಿತ್ತು. ಇದಕ್ಕೆ ಪರಿಹಾರ ಒದಗಿಸಲು ಈಗ ಬಬಲೇಶ್ವರದಲ್ಲಿ ವಿದ್ಯುತ್ ಪರಿವರ್ತಕಗಳ ದುರಸ್ಥಿ ಮತ್ತು ಪರೀಕ್ಷಣಾ ಕೇಂದ್ರ ಉದ್ಘಾಟಿಸಲಾಗಿದೆ. ಇದರಿಂದ ಪ್ರತಿ ತಿಂಗಳು ಗರಿಷ್ಠ 120 ಟಿಸಿಗಳ ನಿರ್ವಹಣೆ ದುರಸ್ಥಿ ಮತ್ತು ಪರೀಕ್ಷೆ ಸಾಧ್ಯವಾಗಲಿದೆ. ಅಷ್ಟೇ ಅಲ್ಲ,…
ಆಲಮಟ್ಟಿ: ಸುಕ್ಷೇತ್ರ ಯಲಗೂರು ಹನುಮಾನ ದೇವಸ್ಥಾನಕ್ಕೆ ಮಂಗಳವಾರ ಬೆಳಿಗ್ಗೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ ದಂಪತಿ ಸಮೇತ ಭೇಟಿ ನೀಡಿ ದೇವರ ಆಶೀರ್ವಾದ ಪಡೆದರು.ಲೋಕಾಯುಕ್ತರನ್ನು ಯಲಗೂರೇಶ್ವರ ದೇವಸ್ಥಾನ ಟ್ರಸ್ಟ್ ಸಮಿತಿ ಹಾಗೂ ಯಲಗೂರೇಶ್ವರ ಅನ್ನದಾಸೋಹ ಟ್ರಸ್ಟ್ ವತಿಯಿಂದ ಸನ್ಮಾನಿಸಲಾಯಿತು.ದೇವಸ್ಥಾನದ ಪ್ರಾಂಗಣದಲ್ಲಿ ಬದಲಾವಣೆಯಾಗಿದ್ದು, ಸಾಕಷ್ಟು ಅಭಿವೃದ್ಧಿ ಕಾಮಗಾರಿ ನಡೆದಿದ್ದನ್ನು ನೋಡಿ ಸಂತಸ ವ್ಯಕ್ತಪಡಿಸಿದರು. ದೇವಸ್ಥಾನದಲ್ಲಿ ಇನ್ನಷ್ಟು ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಟ್ರಸ್ಟ್ ಸಮಿತಿಗೆ ಲೋಕಾಯುಕ್ತರು ಸೂಚಿಸಿದರು.ಅನ್ನದಾಸೋಹ ಟ್ರಸ್ಟ್ ಸಮಿತಿಯ ಅಧ್ಯಕ್ಷ ಶ್ಯಾಮ ಪಾತರದ ನೇತೃತ್ವದಲ್ಲಿ ಹಲವರು ಸನ್ಮಾನಿಸಿದರು.ಈ ಸಂದರ್ಭದಲ್ಲಿ ಭೀಮಣ್ಣ ಪೂಜಾರಿ, ಯಲಗೂರದಪ್ಪ ಪೂಜಾರಿ, ಗುಂಡಪ್ಪ ತಳವಾರ, ದೇವಸ್ಥಾನ ಟ್ರಸ್ಟ್ ಸಮಿತಿಯ ಕಾರ್ಯದರ್ಶಿ ಸಂತೋಷ ಪೂಜಾರ, ಭೀಮಣ್ಣ ಅವಟಗೇರ, ಶ್ರೀಶೈಲ ಹೂಗಾರ, ಜಂಗಪ್ಪ ಬೇವೂರ, ನರಸಿಂಹಾಚಾರ್ಯ ಆಲೂರ, ಗೋಪಾಲ ಹಿಪ್ಪರಗಿ, ಬದರಿನಾರಾಯಾಣ ಚಿಮ್ಮಲಗಿ ಮತ್ತೀತರರು ಇದ್ದರು.
ವಿಜಯಪುರ: ಹರ ಘರ ತಿರಂಗಾ ಅಭಿಯಾನದ ಅಂಗವಾಗಿ ನಗರದ ಚಿದರಂಬರ ನಗರದಲ್ಲಿರುವ ಚಿದಂಬರ ಜೋಶಿ ರೊಳ್ಳಿ ಅವರ ಮನೆಯ ಮೇಲೆ ಧ್ವಜ ಹಾರಿಸುವ ಮೂಲಕ ಹರ ಘರ ತಿರಂಗಾ ಅಬಿಯಾನಕ್ಕೆ ಸಂಸದ ರಮೇಶ ಜಿಗಜಿಣಗಿ ಚಾಲನೆ ನೀಡಿ ಮಾತನಾಡಿದರು.ದೇಶಕ್ಕೆ ಸ್ವಾತಂತ್ರ್ಯ ಬಂದು ೭೫ ವರ್ಷ ತುಂಬಿರುವ ಸಂದರ್ಭದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮವನ್ನು (ಆಜಾದಿ ಕಾ ಅಮೃತ ಮಹೋತ್ಸವ) ಸಂಭ್ರಮದಿಂದ ದೊಡ್ಡ ಪ್ರಮಾಣದಲ್ಲಿ ಆಚರಿಸಲು ನಮ್ಮ ದೇಶದ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಅವರು ಕರೆ ಕೊಟ್ಟಿದ್ದಾರೆ. ಈ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯದ ಪ್ರತಿ ಮನೆಯ ಮೇಲೂ ತ್ರಿವರ್ಣ ಧ್ವಜ ಹಾರಿಸಬೇಕು. ಮನೆ ಮನೆಯಲ್ಲೂ ತ್ರಿವರ್ಣ ಧ್ವಜದ (ಹರ್ ಘರ ತಿರಂಗ) ಮೂಲಕ ದೇಶಭಕ್ತಿಯ ಜ್ವಾಲೆ ಮೂಡಿಸುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ವಿನಂತಿಸಿಕೊಂಡರು.ಈ ಸಂದರ್ಭದಲ್ಲಿ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ವಿಧಾನ ಪರಿಷತ್ ಮಾಜಿ ಶಾಸಕರಾದ ಅರುಣ ಶಹಾಪೂರ, ರಾಜ್ಯ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಉಮೇಶ ಕಾರಜೋಳ, ಜಿಲ್ಲೆಯ ಪ್ರಧಾನ ಕಾರ್ಯದರ್ಶಿಗಳಾದ…
ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಲು ಡ್ರೋನ್ ದೀದಿ ಜಕ್ಕಮ್ಮ ಗೆ ದೆಹಲಿಗೆ ಆಹ್ವಾನ – ಡಾ.ಸಂತೋಷ ನವಲಗುಂದಯಡ್ರಾಮಿ: ಗ್ರಾಮೀಣ ಭಾಗದ ಮಹಿಳೆಯರ ಸ್ವಾವಲಂಬಿ ಬದುಕಿಗಾಗಿ ಸರ್ಕಾರಗಳು ಜಾರಿಗೆ ತಂದಿರುವ ಅನೇಕ ಮಹತ್ವಾಕಾಂಕ್ಷಿ ಯೋಜನೆಗಳು ಜಾರಿಯಲ್ಲಿವೆ. ಮಹಿಳೆ ಅಬಲೆಯಲ್ಲ; ಅವಳು ಸಬಲೆ ಅನ್ನುವ ಮಾತು ಪ್ರಸ್ತುತ ಸಮಸ್ತ ಮಹಿಳಾ ಲೋಕದ ಸಾಧನೆಗೆ ಹಿಡಿದ ಕೈಗನ್ನಡಿಯಾಗಿದೆ.ಮಹಿಳೆ ಕೇವಲ ಅಡುಗೆ ಮನೆಗೆ ಸೀಮಿತ ಅನ್ನುವ ದಿನಗಳು ಮುಗಿದು ಹೋಗಿವೆ. ಪುರುಷನಷ್ಟೇ ಸಮಾನಳು ಎನ್ನುವುದನ್ನು ಈಗಾಗಲೇ ಮಹಿಳೆ ಎಲ್ಲ ರಂಗಗಳಲ್ಲಿಯೂ ಪ್ರಗತಿ ಸಾಧಿಸುತ್ತಿರುವುದು ಕಾಣುತ್ತಿದ್ದೇವೆ. ಈ ದಿಶೆಯಲ್ಲಿ ಕೃಷಿ ಕ್ಷೆತ್ರದಲ್ಲೂ ಮಹಿಳೆ ಹಿಂದೇನಿಲ್ಲ.ಹೌದು! ಗ್ರಾಮೀಣ ಯುವ ಮಹಿಳೆ ನಮೋ ಡ್ರೋನ್ ದೀದಿ ಆಗುವ ಮೂಲಕ ಗ್ರಾಮೀಣ ರೈತರ ಕೃಷಿ ಚಟುವಟಿಕೆಗಳಿಗೆ ನೆರವಾಗಲು ಸಜ್ಜುಗೊಂಡಿರುವುದು ಗ್ರಾಮೀಣ ರೈತರಲ್ಲಿ ಸಂತಸ ತಂದಿದೆ. ಇಂತಹ ಕೃಷಿ ಸಾಧಕಿಯೇ ಯಡ್ರಾಮಿ ತಾಲೂಕಿನ ಮಳ್ಳಿ ಗ್ರಾಮದ ಜಕ್ಕಮ್ಮ ಬಸವರಾಜ ಕೋಟ್ಯಾಳ.ನಾಳೆ ದೆಹಲಿಯಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಮಂತ್ರಣ ಬಂದಿರುವುದು ರೈತರಲ್ಲಿ ಹರ್ಷ ತಂದಿದೆ.ಕೇಂದ್ರ ಸರ್ಕಾರದ…
ವಿಜಯಪುರ: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾದ ತಿರಂಗಾ ಅಭಿಯಾನದ ಪ್ರಯುಕ್ತ ಬಿಜೆಪಿ ನಗರ ಮಂಡಲ ವತಿಯಿಂದ ಮಂಗಳವಾರ ನಗರದಲ್ಲಿರುವ ಮಹಾನ್ ನಾಯಕರ ಪುತ್ಥಳಿ ಹಾಗೂ ವೃತ್ತಗಳನ್ನು ಸ್ವಚ್ಛಗೊಳಿಸಲಾಯಿತು.ಬೆಳಿಗ್ಗೆ ಮಹಾನ್ ನಾಯಕರಾದ ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್, ವಿಶ್ವಗುರು ಬಸವಣ್ಣ, ಲಾಲ್ ಬಹಾದ್ದೂರ ಶಾಸ್ತ್ರಿ, ನೇತಾಜಿ ಸುಭಾಸ ಚಂದ್ರ ಬೋಸ್, ವೀರ ಸಾವರ್ಕರ್, ಸಂತ ಕನಕದಾಸ, ಸಂತ ಸೇವಾಲಾಲ್, ಛತ್ರಪತಿ ಶಿವಾಜಿ ಮಹಾರಾಜ್, ಮಹಾತ್ಮ ಗಾಂಧೀಜಿ, ಅಹಿಲ್ಯಾಬಾಯಿ ಹೋಳ್ಕರ್, ಅಟಲ್ ಬಿಹಾರಿ ವಾಜಪೇಯಿ, ಬಾಬು ಜಗಜೀವನ್ ರಾವ್ ವೃತ್ತಗಳಿಗೆ ತೆರಳಿದ ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು ಪುತ್ಥಳಿ ಮತ್ತು ವೃತ್ತವನ್ನು ಸ್ವಚ್ಛಗೊಳಿಸಿ, ಗಮನಸೆಳೆದರು.ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ನಗರ ಮಂಡಲ ಅಧ್ಯಕ್ಷ ಶಂಕರ ಹೂಗಾರ, ಸ್ವಾತಂತ್ರ್ಯೋತ್ಸವ ಅಂಗವಾಗಿ ಹಮ್ಮಿಕೊಂಡಿರುವ ತಿರಂಗಾ ಅಭಿಯಾನದ ಪ್ರಯುಕ್ತ ಮಹಾನ್ ನಾಯಕರ ಸ್ಮರಣೆ ಜೊತೆಗೆ ವೃತ್ತಗಳಲ್ಲಿ ಸ್ವಚ್ಚತಾ ಅಭಿಯಾನ ಹಮ್ಮಿಕೊಂಡು ಗೌರವ ಸಲ್ಲಿಸುವ ಪ್ರಧಾನಿ ನರೇಂದ್ರ ಮೋದಿಯವರ ಕರೆಗೆ ಸ್ಪಂದಿಸಿ, ಸ್ವಚ್ಛತಾ ಅಭಿಯಾನ ನಡೆಸಲಾಗುತ್ತಿದೆ ಎಂದರು.ಈ ಸ್ವಚ್ಛತಾ ಅಭಿಯಾನದಲ್ಲಿ…
ಢವಳಗಿ:ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅವರ ಸಹಯೋಗದಲ್ಲಿ ಅಗಸ್ಟ 17,18,19 ರಂದು ಬೆಂಗಳೂರಿನ ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ನಡೆಯುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜಯಪುರ ಜಿಲ್ಲೆಯಿಂದ ವೈಯಕ್ತಿಕ ಆಟದ ಪುರುಷರ ವಿಭಾಗದಲ್ಲಿ ಗುಂಡು ಎಸೆತ,ಚಕ್ರ ಎಸೆತ,ಉದ್ದ ಜಿಗಿತದಲ್ಲಿ ಮತ್ತು ಕಬಡ್ಡಿ ಆಟದಲ್ಲೂ ವಿಜಯಪುರ ಕಬಡ್ಡಿ ತಂಡದ ನಾಯಕರಾಗಿ ಮುದ್ದೇಬಿಹಾಳ ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವೀತಿಯ ದರ್ಜೆ ಲೆಕ್ಕ ಸಹಾಯಕರಾದ ಎಮ್ ಕೆ ಗುಡಿಮನಿ ಅವರು ಆಯ್ಕೆಯಾಗಿದ್ದಾರೆ ಎಂದು ಸಹಾಯಕ ನಿರ್ದೇಶಕರು,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವಿಜಯಪುರ ಅವರು ಆದೇಶ ಹೋರಡಿಸಿದ್ದಾರೆ.
ಮೋರಟಗಿ:ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಣ ಎಂಬುದು ಉಡುಗೊರೆಯಾಗಿ ದೊರೆತು ಯಶಸ್ಸಿನ ಜೀವನಕ್ಕೆ ಆಸರೆಯಾಗುತ್ತದೆ ಎಂದು ಜೇವರ್ಗಿ ಸರಕಾರಿ ಪ್ರಥಮದರ್ಜೆ ಕಾಲೇಜು ಪ್ರಾಧ್ಯಾಪಕ ಪ್ರೋ.ಗಿರೀಶ ಹೇಳಿದರು.ಅವರು ಮೋರಟಗಿಯ ಕಲ್ಪವೃಕ್ಷ ಪದವಿ ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಶುಭಕೋರುವ ಸಮಾರಂಭದಲ್ಲಿ ಜ್ಯೋತಿ ಬೆಳಗಿಸಿ ಮಾತನಾಡಿದರು.ವಿದ್ಯಾರ್ಥಿಗಳು ನಿರಂತರ ಪರಿಶ್ರಮ ಪಟ್ಟರೆ ಮಾತ್ರ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯವಾಗುತ್ತದೆ.ಸಾಧನೆಗೆ ಮುಂದಾದಾಗ ಸಾವಿರ ಸಮಸ್ಯೆಗಳು ಅಡ್ಡಗಾಲು ಹಾಕುತ್ತವೆ. ಅವುಗಳನ್ನೆಲ್ಲ ಮೆಟ್ಟಿ ನಿಂತು ನಿಮ್ಮ ಪಾಲಕರು ಕಂಡ ಕನಸು ನನಸು ಮಾಡಿದಾಗ ಮಾತ್ರ ನಿಮ್ಮ ತಾಯಿ ತಂದೆಗೆ ಮರು ಜನ್ಮ ಕೊಟ್ಟಂತೆ ಎಂದರು.ಅಧ್ಯಕ್ಷತೆ ವಹಿಸಿದ ಸಂಸ್ಥಾಪಕ ಶಿವಶರಣಗೌಡ ಬಿರಾದಾರ ಮಾತನಾಡಿ,ವಿದ್ಯಾರ್ಥಿ ಜೀವನದಲ್ಲಿ ಮನಸ್ಸು ಕೇಂದ್ರಿಕೃತವಾದಾಗ ಮಾತ್ರ ಬಹುದೊಡ್ಡ ಸಾಧನೆಯ ಹಾದಿ ಸುಗಮವಾಗುತ್ತದೆ. ಮಕ್ಕಳ ಭವಿಷ್ಯ ಉಜ್ವಲವಾಗಲಿ,ನನ್ನ ಮಗು ಉನ್ನತ ಹುದ್ದೆಗೆರಲಿ ಎಂದು ತಮ್ಮ ಪಾಲಕರು ಹಗಲಿರುಳು ದುಡಿದು ಹಗಲು ಕನಸು ಕಾಣುತ್ತಾ ಹತ್ತಾರು ದೇವರಿಗೆ ಹರಕೆ ಹೊತ್ತು ಕಷ್ಟ ಪಡುತ್ತಾರೆ.ಪಾಲಕರ ಕನಸು ನನಸಾಗಿಸುವ ಕರ್ತವ್ಯ ತಮ್ಮದಾಗಿದೆ.ದುಶ್ಚಟಗಳಿಗೆ ಅಂಟಿಕೊಳ್ಳದೆ ಬೋಧಕರು ಹಾಕಿ ಕೊಟ್ಟ…
ದೇವರಹಿಪ್ಪರಗಿ: ಆಲಮಟ್ಟಿ ಆಣೆಕಟ್ಟಿನಲ್ಲಿ ಸಾಕಷ್ಟು ನೀರು ಸಂಗ್ರಹವಾಗಿದ್ದು ತಕ್ಷಣವೇ ಚಿಮ್ಮಲಗಿ ಮುಖ್ಯ ಕಾಲುವೆಯ ನಾಗಠಾಣ ಉಪಕಾಲುವೆಗೆ ನೀರು ಹರಿಸಬೇಕೆಂದು ಆಗ್ರಹಿಸಿ ಹಿಟ್ಟಿನಹಳ್ಳಿ ಗ್ರಾಮದ ತಾಂಡಾ, ಸಂಜಯನಗರ, ಕಡಕಿತಾಂಡಾದ ಜನತೆ ಗ್ರೇಡ್-೨ ತಹಶೀಲ್ದಾರ್ ಎಸ್ ಎಚ್ ರಾಠೋಡ ಅವರಿಗೆ ಮನವಿ ಸಲ್ಲಿಸಿದರು.ಪಟ್ಟಣದ ತಹಶೀಲ್ದಾರ್ ಕಚೇರಿಗೆ ಸೋಮವಾರ ಆಗಮಿಸಿದ ಹಿಟ್ಟಿನಹಳ್ಳಿ ಸಹಿತ ವಿವಿಧ ತಾಂಡಾದ ಜನತೆ ಕಾಲುವೆಗೆ ನೀರು ಹರಿಸಲು ಆಗ್ರಹಿಸಿ, ತಾಲ್ಲೂಕು ಸೇರಿದಂತೆ ಮತಕ್ಷೇತ್ರದಲ್ಲಿ ವಾಡಿಕೆಯಂತೆ ಮುಂಗಾರಿನ ಬಹುತೇಕ ಮಳೆಗಳು ರೈತ ಸಮುದಾಯದ ನಿರೀಕ್ಷೆಯಂತೆ ಆಗದೇ ಇದ್ದು, ಇದೇ ಸಂದರ್ಭದಲ್ಲಿ ಕಾಲುವೆಗಳಿಗೆ ನೀರು ಪೂರೈಸುವ ಆಲಮಟ್ಟಿ ಆಣೆಕಟ್ಟಿನಲ್ಲಿ ದಿನದಿಂದ ದಿನಕ್ಕೆ ನೀರು ಸಂಗ್ರಹವಾಗುತ್ತಿದೆ. ಜೊತೆಗೆ ಈಗ ಮಹಾರಾಷ್ಟ್ರ ಸೇರಿದಂತೆ ಕೃಷ್ಣಾ ನದಿ ತೀರದ ಪ್ರದೇಶಗಳಲ್ಲಿ ಉತ್ತಮ ಮಳೆಯಾಗಿದ್ದು, ಆಲಮಟ್ಟಿ ಆಣೆಕಟ್ಟಿನಲ್ಲಿ ಹೆಚ್ಚಿನ ನೀರು ಸಂಗ್ರಹವಾಗಿದೆ. ಈ ನೀರನ್ನು ಕಾಲುವೆಗಳಿಗೆ ಹರಿಸಲು ಯಾವುದೇ ತೊಂದರೆಯಿಲ್ಲ. ಅದಕ್ಕಾಗಿ ತಕ್ಷಣವೇ ಕಾಲುವೆಗಳ ಮುಖಾಂತರ ನಿರಂತರ ನೀರು ಹರಿಸಿ ತಾಂಡಾಗಳಿಗೆ ಅನುಕೂಲ ಮಾಡಿಕೊಡಬೇಕು.ದೇವರಹಿಪ್ಪರಗಿ ಭಾಗದ ಚಿಮ್ಮಲಗಿ ಮುಖ್ಯ ಕಾಲುವೆ…
ದೇವರಹಿಪ್ಪರಗಿ:ಇಲ್ಲಿಯ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ(ಡಿ.ಜಿ.ಸಾಗರ ಬಣ) ತಾಲ್ಲೂಕು ಶಾಖೆಯಡಿ ಜರುಗಿದ ಸಭೆಯಲ್ಲಿ ೨೫ ನೂತನ ಗ್ರಾಮ ಶಾಖೆ ಪದಾಧಿಕಾರಿಗಳನ್ನು ಆಯ್ಕೆ ಮಾಡಿ ಸನ್ಮಾನಿಸಲಾಯಿತು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಭಾನುವಾರ ಜರುಗಿದ ಸಭೆಯಲ್ಲಿ ಜಿಲ್ಲಾ ಸಂಚಾಲಕ ಸಿದ್ದು ರಾಯಣ್ಣವರ ಅಧ್ಯಕ್ಷತೆ ವಹಿಸಿದ್ದರು. ಡಿಎಸ್ಎಫ್ ಜಿಲ್ಲಾ ಸಂಚಾಲಕ ವೈ.ಸಿ.ಮಯೂರ, ಜಿಲ್ಲಾ ಸಂಘಟನಾ ಸಂಚಾಲಕ ರಮೇಶ ಧರಣಾಕರ, ವಕೀಲ ಮಲ್ಲು ಬನಸೋಡೆ, ಮಹಾಂತೇಶ ಸಾಸಾಬಾಳ, ಪ್ರಥಮ ದರ್ಜೆ ಗುತ್ತಿಗೆದಾರ ಯಶವಂತರಾವ, ನಿವೃತ್ತ ಪೊಲೀಸ್ ಅಧಿಕಾರಿ ಪರಶುರಾಮ ಮಲ್ಲಾರಿ, ತಾಲ್ಲೂಕುಗಳ ಸಂಚಾಲಕರಾದ ಶರಣು ಚಲವಾದಿ(ಸಿಂದಗಿ), ರಮೇಶ ನಿಂಬಾಳ್ಕರ್(ಇಂಡಿ) ದೇವೇಂದ್ರ ಭಾವಿಮನಿ(ಬಬಲೇಶ್ವರ), ಜಾನು ಗುಡಿಮನಿ(ದೇ.ಹಿಪ್ಪರಗಿ) ನೇತೃತ್ವದಲ್ಲಿ ತಾಲ್ಲೂಕಿನ ೨೫ ಗ್ರಾಮಗಳ ಸಂಚಾಲಕರು ಹಾಗೂ ಸಂಘಟನಾ ಸಂಚಾಲಕರನ್ನಾಗಿ ನೇಮಕಗೊಳಿಸಲಾಯಿತು.ದೇವರಹಿಪ್ಪರಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಶೀರ್ಅಹ್ಮದ್ ಬೇಪಾರಿ, ಅಲ್ಪಸಂಖ್ಯಾತರ ತಾಲ್ಲೂಕು ಘಟಕದ ಸಂಚಾಲಕ ಜಬ್ಬರ್ ಚೌಧರಿ, ರಾಘವೇಂದ್ರ ಗುಡಿಮನಿ, ಅಬ್ದುಲ್ಲಾ ಚೌಧರಿ, ಕಮಲಸಾಬ ಕಾಟಮನಹಳ್ಳಿ, ಶಿಕ್ಷಕ ಅರುಣ ಕೋರವಾರ, ವಿಲಾಸ ಕೊಟಗಿ, ದೇವೇಂದ್ರ ಬನಸೋಡೆ, ಮಹಾಂತೇಶ ಕೂಟನೂರ,…
ತಾಳಿಕೋಟೆ: ರಾಷ್ಟ್ರಧ್ವಜ ನೀತಿಸಂಹಿತೆ, ನಿಯಮಗಳ ಬಗ್ಗೆ ಪ್ರತಿಯೊಬ್ಬರಲ್ಲೂ ಅರಿವಿರಬೇಕು. ರಾಷ್ಟ್ರೀಯ ಕಾಯ೯ಕ್ರಮಗಳಲ್ಲಿ ರಾಷ್ಟ್ರಧ್ವಜಾರೋಹಣ ಸಮಯದಲ್ಲಿ ಸಾಕಷ್ಟು ತಪ್ಪುಗಳು ನಡೆಯುತ್ತವೆ, ಆ ನಿಟ್ಟಿನಲ್ಲಿ ಎಲ್ಲರೂ ಜಾಗೃತರಾಗಬೇಕು. ಎಲ್ಲರೂ ರಾಷ್ಟ್ರಧ್ವಜದ ಗೌರವವನ್ನು ಕಾಪಾಡಬೇಕು ಎಂದು ಭಾರತ ಸೇವಾದಳದ ವಲಯ ಸಂಘಟಕ ನಾಗೇಶ ಡೋಣೂರ ಹೇಳಿದರು.ಭಾರತ ಸೇವಾದಳ ಜಿಲ್ಲಾ ಸಮಿತಿ ವಿಜಯಪುರ, ತಾಲೂಕ ಸಮಿತಿ ಮುದ್ದೇಬಿಹಾಳ, ಶಾಲಾ ಶಿಕ್ಷಣ ಇಲಾಖೆ ವಿಜಯಪುರ ಹಾಗೂ ಶ್ರೀ ಖಾಸ್ಗತೇಶ್ವರ ಶಿಕ್ಷಣ ಮಹಾ ವಿದ್ಯಾಲಯ ತಾಳಿಕೋಟೆ ಇವರ ಸಹಯೋಗದಲ್ಲಿ ಎನ್. ಎಸ್ ಎಸ್ ಘಟಕದ ಅಡಿಯಲ್ಲಿ ಆಯೋಜಿಸಿರುವ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಶ್ರೀ ಖಾಸ್ಗತೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಆಯೋಜಿಸಲಾದ ರಾಷ್ಟ್ರೀಯ ಭಾವೈಕ್ಯತೆ, ರಾಷ್ಟ್ರಧ್ವಜ, ರಾಷ್ಟ್ರಗೀತೆ ಕುರಿತಾದ ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.ಧ್ವಜ ನೀತಿಸಂಹಿತೆ ಪ್ರಕಾರ ಧ್ವಜಾರೋಹಣವನ್ನು ಎಷ್ಟು ಶಿಸ್ತು ಬದ್ಧವಾಗಿ ಮಾಡುತ್ತೇವೆ ಅಷ್ಟೇ ಶಿಸ್ತು ಬದ್ದವಾಗಿ ಧ್ವಜ ಅವರೋಹಣವನ್ನು ಮಾಡಬೇಕು, ಹಾಗೇ ಧ್ವಜಾರೋಹಣದ ಸಮಯ ಬೆಳಿಗ್ಗೆ 7-05 ನಿಮಿಷದಿಂದ 9-00 ಗಂಟೆವರೆಗೂ ಮಾಡಬಹುದು, ಹರಿದುಹೋದ, ಮಾಸಿಹೋದ ಧ್ವಜಗಳನ್ನು ಬಳಸಬಾರದು…
