Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ತಿಕೋಟಾ: ಗ್ರಾಮೀಣ ಕ್ರೀಡಾಪಟುಗಳಿಗೆ ಪ್ರೋತ್ಸಾಹ ಸಿಗುತ್ತಿರುವುದು ಸಂತಸದ ವಿಷಯ ಎಂದು ಅಂತಾರಾಷ್ಟ್ರೀಯ ಪ್ಯಾರಾ ಅಥ್ಲೀಟ್ ರಕ್ಷಿತಾ ರಾಜು ಹೇಳಿದರು. ತಿಕೋಟಾದಲ್ಲಿರುವ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಎ. ಬಿ. ಜತ್ತಿ ಪಿಯು ಕಾಲೇಜು(ಪ್ರೌಢಶಾಲೆ ವಿಭಾಗ) ನಲ್ಲಿ ಖ್ಯಾತ ವೈದ್ಯ ದಿ. ಡಾ. ಸಿ. ಆರ್. ಬಿದರಿ ಅವರ ಸ್ಮರಣಾರ್ಥ ಎರಡು ದಿನಗಳ ಕಾಲ ಆಯೋಜಿಸಿದ್ದ ಬಿ.ಎಲ್.ಡಿ.ಇ ಸಂಸ್ಥೆಯ 11ನೇ ಅಂತರಶಾಲೆ ಮತ್ತು ಕಾಲೇಜುಗಳ ಅಥ್ಲೇಟಿಕ್ ಕ್ರೀಡಾ ಕೂಟದ ಸಮಾರೋಪ ಸಮಾರಂಭದಲ್ಲಿ ನಾನಾ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು. ಡಾ. ಸಿ. ಆರ್. ಬಿದರಿ ಕುಟುಂಬದವರು ಇಂಥ ಅಥ್ಲೇಟಿಕ್ ಕ್ರೀಡಾಕೂಟ ಆಯೋಜಿಸುತ್ತಿರುವುದು ಗ್ರಾಮೀಣ ಕ್ರೀಡಾಪಟುಗಳ ಪಾಲಿಗೆ ವರದಾನವಾಗಿದೆ. ಯುವತಿಯರು ಕೂಡಾ ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ಉನ್ನತ ಸಾಧನೆ ಮಾಡಬಹುದು. ಆಶಾ ಎಂ. ಪಾಟೀಲ ಅವರು ತಮ್ಮ ತಂದೆಯ ಸ್ಮರಣಾರ್ಥ ಇಂಥ ಕ್ರೀಡಾಕೂಟ ಆಯೋಜಿಸಿರುವುದು ಸಂತಸದ ವಿಷಯ. ಕ್ರೀಡೆಗಳಲ್ಲಿ ಸೋಲು ಗೆಲವು ಸಾಮಾನ್ಯ. ಶ್ರಮ ವಹಿಸಿ ಏಕಾಗ್ರತೆಯಿಂದ ಸಾಧನೆ ಮಾಡಬಹುದು. ಬಿ.ಎಲ್.ಡಿ.ಇ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಆಯುರ್ವೇದ ವೈದ್ಯಕೀಯ ಪದವೀಧರರಾಗಿರುವ ಸಂಬಣ್ಣಿ ವಿದ್ಯಾರ್ಥಿ ದೆಸೆಯಿಂದಲೇ ವಿದ್ಯಾರ್ಥಿ ಆಂದೋಲನ, ಹೋರಾಟದಲ್ಲಿ 1993-94ರಲ್ಲಿ ತೊಡಗಿಸಿಕೊಂಡಿದ್ದರು.ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಗರ ಘಟಕದ ಸಹಕಾರ್ಯದರ್ಶಿಯಾಗಿದ್ದ ಇವರು ನಂತರ ಯುವ ಮುಖಂಡರಾಗಿದ್ದ ಸುನೀಲಗೌಡ.ಬಿ.ಪಾಟೀಲರ ಗೆಳೆಯರಾಗಿ 1999ರಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು. ಕಳೆದ 27 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಕಟ್ಟಾಳಾಗಿ ಸೇವೆ ಸಲ್ಲಿಸಿದ್ದ ಇವರು ಯುವ ಕಾಂಗ್ರೆಸ್ ಸಮಿತಿ ಜಿಲ್ಲಾ ಕಾಂಗ್ರೆಸ್ ಸೇವಾದಳದಲ್ಲಿ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಸದ್ಯ ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರಾಗಿರುವ ಇವರನ್ನು ಪಕ್ಷದ ಸೇವೆಯನ್ನು ಗುರುತಿಸಿ ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸ್ಥಾನಕ್ಕೆ ನೇಮಕಗೊಳಿಸುವಂತೆ ಕಳೆದ ವಾರ ಬೆಂಗಳೂರಿನಲ್ಲಿ ಮುಖಂಡರಾದ ವಿಜಯಪುರ ವಿಧಾನಸಭೆ ಅಭ್ಯರ್ಥಿ ಅಬ್ದುಲಹಮೀದ ಮುಶ್ರಿಫ್, ಲೋಕಸಭಾ ಅಭ್ಯರ್ಥಿ ರಾಜು ಆಲಗೂರ, ಶಾಸಕ ವಿಠ್ಠಲ ಕಟಕದೊಂಡ ಮತ್ತು ವಿಧಾನಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಸಚಿವ ಎಂ.ಬಿ.ಪಾಟೀಲರವರ ನೇತೃತ್ವತದಲ್ಲಿ ಭೇಟಿ ಮಾಡಿ ವಿನಂತಿಸಿದ್ದರು.ಡಾ.ಗಂಗಾಧರ ಸಂಬಣ್ಣಿ ಅವರ ನೇಮಕಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಹರ್ಷವ್ಯಕ್ತಪಡಿಸಿದ್ದಾರೆ.
ರಾಷ್ಟ್ರೀಯ ಮೀನುಗಾರರ ಸಂಘದ ರಾಷ್ಟ್ರೀಯ ಉಪಾಧ್ಯಕ್ಷ ಡಾ.ಗೌತಮ್ ಚೌಧರಿ ಶ್ಲಾಘನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೇಂದ್ರ ಸರ್ಕಾರ ಈ ಬಾರಿಯ ಬಜೆಟ್ನಲ್ಲಿ ಮೀನುಗಾರಿಕಾ ವಲಯಕ್ಕೆ ಬರೋಬ್ಬರಿ ₹2,761.80 ಕೋಟಿ ಮೀಸಲಿಟ್ಟಿರುವುದು ನಿಜಕ್ಕೂ ಸ್ವಾಗತಾರ್ಹ ನಿರ್ಧಾರ ಎಂದು ರಾಷ್ಟ್ರೀಯ ಮೀನುಗಾರರ ಸಂಘದ ರಾಷ್ಟ್ರೀಯ ಉಪಾಧ್ಯಕ್ಷ ಡಾ.ಗೌತಮ್ ಚೌಧರಿ ಶ್ಲಾಘಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ ಅವರು, ವಿಶೇಷವಾಗಿ ಅಂತಾರಾಷ್ಟ್ರೀಯ ಜಲಪ್ರದೇಶದಲ್ಲಿ ಮೀನುಗಾರಿಕೆಗೆ ತೆರಿಗೆ ವಿನಾಯಿತಿ ನೀಡಿರುವುದು ಮತ್ತು ಅಲ್ಲಿ ಹಿಡಿದ ಮೀನಿಗೆ ರಫ್ತು ಸ್ಥಾನಮಾನ ನೀಡಿರುವುದು ನಮ್ಮ ಮೀನುಗಾರರಿಗೆ ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸಲು ಧೈರ್ಯ ನೀಡಿದೆ. ಸೀಗಡಿ ಕೃಷಿಗೆ ಅಗತ್ಯವಿರುವ ಇನ್ಪುಟ್ಗಳ ಮೇಲಿನ ಆಮದು ಸುಂಕ ತಗ್ಗಿಸಿರುವುದು ಮತ್ತು 500 ಕೆರೆಗಳ ಅಭಿವೃದ್ಧಿಗೆ ಒತ್ತು ನೀಡಿರುವುದು ಒಳನಾಡು ಮೀನುಗಾರರಿಗೂ ನೆರವಾಗಲಿದೆ ಎಂದಿದ್ದಾರೆ.ಆದರೆ, ನಾಣ್ಯಕ್ಕೆ ಇನ್ನೊಂದು ಮುಖವಿದೆ. ದೇಶದ ಸಾಮಾನ್ಯ ಮೀನುಗಾರನ ಅತಿದೊಡ್ಡ ಸಮಸ್ಯೆಯೇ ಡೀಸೆಲ್ ಬೆಲೆ. ನಾವು ನಿರೀಕ್ಷಿಸಿದಂತೆ ಬಜೆಟ್ನಲ್ಲಿ ಡೀಸೆಲ್ ಸಬ್ಸಿಡಿ ಬಗ್ಗೆ ಯಾವುದೇ ಘೋಷಣೆ ಇಲ್ಲದಿರುವುದು ತೀವ್ರ ನಿರಾಸೆ ತಂದಿದೆ.…
ಉದಯರಶ್ಮಿ ದಿನಪತ್ರಿಕೆ: ವಿಜಯಪುರ: ಇಂದಿನ ತಾಂತ್ರಿಕ ಯುಗದಲ್ಲಿ ಎಲ್ಲ ಕ್ಷೇತ್ರಗಳಲ್ಲಿಯೂ ಆರ್ಟಿಫಿಸಿಯಲ್ ಇಂಟಲಿಜೆನ್ಸ್ (ಎಆಯ್), ರೋಬೋಟ ತಂತ್ರಜ್ಞಾನ, ಗ್ರೀನ್ ಎನರ್ಜಿ ದಾಪುಗಾಲಿಟ್ಟಿದ್ದು, ಈ ಕಾಲಕ್ಕೆ ತಕ್ಕಂತೆ ಹೊಂದಿಕೊಂಡು, ತಂತ್ರಜ್ಞಾನವನ್ನು ಅಳವಡಿಸಿಕೊಂಡು, ಕೌಶಲ್ಯಕ್ಕೆ ತಕ್ಕಂತೆ ಉದ್ಯೋಗ ಪಡೆಯಲು ಇಂದಿನ ಯುವ ಜನಾಂಗ ಮುಂದಾಗಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಹೇಳಿದರು.ಕೌಶಲ್ಯಾಭಿವೃದ್ಧಿ, ಉದ್ಯಮಶಿಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಬೆಂಗಳೂರು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಇವರ ಸಹಯೋಗದಲ್ಲಿ ಸೋಮವಾರ ನಗರದ ದರ್ಬಾರ ಶಾಲಾ ಆವರಣದಲ್ಲಿ ಹಮ್ಮಿಕೊಂಡ ಯುವ ಸಮೃದ್ಧಿ ಸಮ್ಮೇಳನ-ವಿಜಯಪುರ ಉದ್ಯೋಗ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಾಫ್ಡ್ ವೇರ್ ಕ್ಷೇತ್ರದಲ್ಲೂ ಕರ್ನಾಟಕ ಮುಂಚೂಣಿಯಲ್ಲಿದೆ. ಇದು ರಾಜ್ಯದ ಶಕ್ತಿಯಾಗಿದೆ. ಕಾಲ ಬದಲಾವಣೆಗೆ ಅನುಗುಣವಾಗಿ ವಿವಿಧ ಕ್ಷೇತ್ರಗಳಲ್ಲಿ ತಂತ್ರಜ್ಞಾನದ ಅಳವಡಿಕೆ ಹಾಗೂ ಅರಿವು ಹೊಂದುವುದು ಅತ್ಯವಶ್ಯಕವಾಗಿದೆ.ಈ ನಿಟ್ಟಿನಲ್ಲಿ ಎಂಟನೇ ತರಗತಿಯಿಂದಲೇ ಮಕ್ಕಳಲ್ಲಿ ಕೌಶಲ್ಯ ರೂಡಿಸಿಕೊಂಡು ಸಿದ್ಧಗೊಳಿಸಬೇಕಾದ…
ಬರಡೋಲದಲ್ಲಿ ಮಡಿವಾಳ ಮಾಚಿದೇವರ ಜಯಂತಿ ಚಡಚಣ: ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಬರಡೋಲ ಗ್ರಾಮದಲ್ಲಿ ಭಕ್ತಿಭಾವದಿಂದ ಶ್ರೀ ಶರಣ ಮಡಿವಾಳ ಮಾಚಿದೇವರ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಬರಡೋಲ ಗ್ರಾಮದ ಪೂಜ್ಯ ದಾನಯ್ಯ ಕಂಠಿಕಾರ್ ಅವರು ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಹಿಸಿದ್ದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಬರಡೋಲ ಗ್ರಾಮದ ವಕೀಲರಾದ ಶ್ರೀ ಜಿ.ಎಸ್. ಪವಾರ್ ಅವರು, 12ನೇ ಶತಮಾನದಲ್ಲಿ ಬಸವಣ್ಣನ ಸಮಕಾಲೀನರಾಗಿದ್ದ ಶರಣ ಮಡಿವಾಳ ಮಾಚಿದೇವರು ವಚನ ಸಾಹಿತ್ಯದಲ್ಲಿ ಅಪಾರ ಜ್ಞಾನ ಹೊಂದಿದ್ದ ಮಹಾನ್ ಚಿಂತಕರಾಗಿದ್ದರು ಎಂದು ಕೊಂಡಾಡಿದರು. ಅವರು ಸರಿಸುಮಾರು ಒಂದು ಕೋಟಿಗೂ ಅಧಿಕ ವಚನಗಳನ್ನು ರಚಿಸಿದ್ದರೆಂದು ಹೇಳಲಾಗುತ್ತದೆ. ಆದರೆ ದುರದೃಷ್ಟವಶಾತ್ ಇಂದು ಕೇವಲ 364 ವಚನಗಳು ಮಾತ್ರ ಲಭ್ಯವಿವೆ ಎಂದು ವಿಷಾದ ವ್ಯಕ್ತಪಡಿಸಿದರು. ಮಡಿವಾಳ ಮಾಚಿದೇವರು ಯಾವುದೇ ಒಂದು ಜಾತಿ ಅಥವಾ ಸಮಾಜಕ್ಕೆ ಸೀಮಿತ ವ್ಯಕ್ತಿಯಲ್ಲ. ಅವರು ಸಂಪೂರ್ಣ ದೇಶದ ಹೆಮ್ಮೆ. ಆದ್ದರಿಂದ ಮಹಾಪುರುಷರ ಜಯಂತಿಗಳನ್ನು ಜಾತಿಗೆ ಸೀಮಿತಗೊಳಿಸದೆ, ಮಾನವಕುಲಕ್ಕೆ ಮಾರ್ಗದರ್ಶನವಾಗುವಂತೆ ಆಚರಿಸಬೇಕು ಎಂದು ಕರೆ ನೀಡಿದರು. ಇದೇ…
ಉದಯರಶ್ಮಿ ದಿನಪತ್ರಿಕೆ ಜಮಖಂಡಿ : ನಗರದ ರಮಾ ನಿವಾಸ (ಐಬಿ) ಹತ್ತಿರ ಟ್ರ್ಯಾಕ್ಟರ್ ಇಂಜಿನ್ ಪಲ್ಟಿಯಾದ ಪರಿಣಾಮ ವ್ಯಕ್ತಿಯೋರ್ವನು ಟ್ರ್ಯಾಕ್ಟರ ಇಂಜಿನ್ ಹಾಗೂ ಕಲ್ಲು ತುಂಬಿದ ಡಬ್ಬಿ ಮಧ್ಯ ಸಿಲುಕಿ ಸಾವು ಬದುಕಿನ ಮಧ್ಯ ಹೋರಾಟ ನಡೆಸಿದ ದಾರುಣ ಘಟನೆ ನಡೆದಿದೆ. ಬೀಳಗಿ ತಾಲೂಕಿನ ನಾಗರಾಳ ತಾಂಡಾದ ಸುನೀಲ ರಾಠೋಡ ಸುಮಾರು (35) ಟ್ರ್ಯಾಕ್ಟರ್ ಇಂಜಿನ್ನಲ್ಲಿ ಸಿಲುಕಿದ ವ್ಯಕ್ತಿ ಎಂದು ತಿಳಿದು ಬಂದಿದೆ. ನಗರದ ದೇಸಾಯಿ ಸರ್ಕಲ ಹತ್ತಿರ ಇರುವ ರಮಾ ನಿವಾಸ ಐ.ಬಿ. ರಸ್ತೆಯಲ್ಲಿ ಕಲ್ಲು ತುಂಬಿದ ಟ್ರ್ಯಾಕ್ಟರ್ ಎತ್ತರವಾದ ರಸ್ತೆಯನ್ನು ದಾಟಿಸುವ ವೇಳೆ ಕಲ್ಲು ತುಂಬಿದ ಡಬ್ಬಿ ಮತ್ತು ಟ್ರ್ಯಾಕ್ಟರ್ ಇಂಜಿನ್ ಪಲ್ಟಿಯಾಗಿ ಚಾಲಕ ಇಂಜಿನ ಮಧ್ಯ ಸಿಲುಕಿಕೊಂಡಿದ್ದಾನೆ. ನಂತರ ಜೆಸಿಬಿ ಯಂತ್ರದ ಮೂಲಕ ಸಿಲುಕಿಕೊಂಡ ಟ್ರ್ಯಾಕ್ಟರ್ ಚಾಲಕನನ್ನು ಹೊರ ತೆಗೆದು ಸಾವು ಬದುಕಿನ ಮಧ್ಯ ಹೋರಾಟ ನಡೆಸಿದ ಆತನನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು. ಇನ್ನೂ ನಿಖರವಾದ ಮಾಹಿತಿ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ತಹಶೀಲ್ದಾರ ಅನೀಲ ಬಡಿಗೇರ, ಶಹರ…
ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ:ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಗ್ರಾಹಕರ ನಂಬಿಕಸ್ಥ ಸೇವೆ ಹಾಗೂ ತಾಂತ್ರಿಕ ನಾವಿನ್ಯತೆಯ ಮೂಲಕ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್.ಬಿ.ಐ)ಇಡೀ ದೇಶದಲ್ಲಿಯೇ ನಂ-1 ಸರ್ಕಾರಿ ಸೌಮ್ಯದ ವಿಶ್ವಾಸಾರ್ಹ ಬ್ಯಾಂಕ್ ಆಗಿದೆ ಎಂದು ಡೆಪ್ಯೂಟಿ ಜನರಲ್ ಮ್ಯಾನೇಜರ್ ಜ್ಯೋತಿ ಎನ್ ಮೊಹಾಂತಿ ಹೇಳಿದರು.ಆಲಮಟ್ಟಿಡ್ಯಾಂಸೈಟ್ ನ ರಂಗಮಂದಿರ ಪಕ್ಕದ ಸ್ಥಳಕ್ಕೆ ಸ್ಥಳಾಂತರಗೊಂಡ ಎಸ್.ಬಿ.ಐ ನೂತನ ಕಟ್ಟಡವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.ಆಲಮಟ್ಟಿಯಲ್ಲಿ ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ಡಿಪಾಸಿಟ್ ಯಂತ್ರ, ಆಲಮಟ್ಟಿ ಪೆಟ್ರೋಲ್ ಪಂಪ್ ಬಳಿ ಎಟಿಎಂ ಸದಾ ಚಾಲು ಇರುವ ಸ್ಥಿತಿಯಲ್ಲಿ ಒದಗಿಸಲಾಗುವುದು ಎಂದರು.ನೂತನ ಕಟ್ಟಡ ಅತ್ಯಾಧುನಿಕವಾಗಿದ್ದು, ಗ್ರಾಹಕರಿಗೆ ಎಲ್ಲಾ ರೀತಿಯ ಸೌಲಭ್ಯ, ತ್ವರಿತಗತಿಯಲ್ಲಿ ಒದಗಿಸಲು ಕ್ರಮವಹಿಸಲಾಗುವುದು ಎಂದರು. ಕೃಷ್ಣಾ ಮೇಲ್ದಂಡೆ ಯೋಜನೆಯ ಮುಖ್ಯ ಸ್ಥಳ ಆಲಮಟ್ಟಿ ಇರುವುದರಿಂದ ಇದೇ ಬ್ಯಾಂಕ್ ಮೂಲಕ ಹೆಚ್ಚಿನ ಹಣಕಾಸಿನ ವಹಿವಾಟು ನಡೆಯುತ್ತಿದೆ, ಬ್ಯಾಂಕ್ ನ ಮೂಲಕವೇ ಕೆಬಿಜೆಎನ್ ಎಲ್ ನೌಕರರ ವೇತನವೂ ಪಾವತಿಯಾಗುತ್ತಿದೆ ಎಂದರು.ಪ್ರಾದೇಶಿಕ ಪ್ರಬಂಧಕ ವಿಕಾಸ ಭಾಗೋತ್ರ, ಮೌನಿಶ್ ಎಸ್,…
ಉದಯರಶ್ಮಿ ದಿನಪತ್ರಿಕೆ ವಿಶೇಷ ವರದಿ : ಶ್ರೀಕಂಠ ಈಶ್ವರ್ಹೆಚ್ ಡಿ ಕೋಟೆ : ಕರ್ನಾಟಕ ಕೇರಳ ಸಂಪರ್ಕಿಸುವ ಬಂಡೀಪುರ ಅರಣ್ಯ ಮಾರ್ಗಕ್ಕೆ ಪರ್ಯಾಯವಾಗಿ ಸುರಂಗ ಮಾರ್ಗ ಮಾಡುವ ಕುರಿತು ಕೇಂದ್ರ ಸರ್ಕಾರ ತಜ್ಞರ ಸಮಿತಿ ರಚನೆ ಮಾಡಿರುವ ಬೆನ್ನಲ್ಲೇ ಪ್ರವಾಸೋದ್ಯಮಕ್ಕೆ ಮತ್ತೆ ಪುನಶ್ಚೇತನ ನೀಡುವ ನಿಟ್ಟಿನಲ್ಲಿ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಸಫಾರಿ ಪುನಾರಂಭ ಮಾಡುವ ಸಾಧ್ಯತೆ ದಟ್ಟವಾಗಿದೆ. ಬಂಡೀಪುರ ಅರಣ್ಯ ವ್ಯಾಪ್ತಿಗೆ ಬರುವ ಸರಗೂರು ತಾಲೂಕಿನ ಕಾಡಂಚಿನ ಭಾಗದಲ್ಲಿ ಹುಲಿ ದಾಳಿ ನಡೆಸಿ ಮೂವರ ಪ್ರಾಣ ತೆಗೆದಿತ್ತು. ಒಂದೇ ತಿಂಗಳಲ್ಲಿ ನಾಲ್ವರ ಮೇಲೆ ದಾಳಿ ನಡೆಸಿ, ಮೂವರನ್ನು ಬಲಿ ಪಡೆದ ಬಳಿಕ ಸಫಾರಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಕಾಡುಪ್ರಾಣಿಗಳು ನಾಡಿಗೆ ಬರಲು ಸಫಾರಿಯೇ ಕಾರಣ ಎಂಬ ಆರೋಪ ರೈತರಿಂದ ಕೇಳಿಬಂದ ಹಿನ್ನೆಲೆ ಸಫಾರಿಯನ್ನು ಬಂದ್ ಮಾಡಲಾಗಿದೆ. ಆದರೆ ಬಂದ್ ಮಾಡಿ ಇನ್ನೇನು ಮೂರು ತಿಂಗಳು ಕಳೆಯುತ್ತಾ ಬಂದರೂ ಸಫಾರಿ ಪುನಾರಂಭವಾಗಿಲ್ಲ. ಇದರಿಂದ ಹೋಟೆಲ್ ಉದ್ಯಮಕ್ಕೆ ಭಾರಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಗುಣಮಟ್ಟದ ಅತ್ಯಾಧುನಿಕ ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸೇವೆಗೆ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಹೇಳಿ ಮಾಡಿಸಿದಂತಿದೆ ಎಂದು ಬೆಂಗಳೂರು ನಿಮ್ಹಾನ್ಸ್ ನ ಡಿ-ಎಡಿಕ್ಷನ್ ಸೆಂಟರ್ ಮುಖ್ಯಸ್ಥ ಮತ್ತು ಸೈಕ್ಯಾಟ್ರಿಕ್ ವಿಭಾಗದ ಮಾಜಿ ಮುಖ್ಯಸ್ಥ ಡಾ. ವಿವೇಕ ಬೆನಗಲ್ ಹೇಳಿದರು. ಇಂದು ಸೋಮವಾರ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದಲ್ಲಿ ಆಯೋಜಿಸಲಾದ ದಿ. ಡಾ. ಸಿ. ಆರ್. ಬಿದರಿ ಅವರ ಸ್ಮರಣಾರ್ಥ ರಾಷ್ಟ್ರ ಮಟ್ಟದ ಮುಂದುವರೆದ ವೈದ್ಯಕೀಯ ಶಿಕ್ಷಣ(ಸಿಎಂಇ) ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಪ್ರಶಾಂತ ವಾತಾವರಣ, ಕಲಿಕಗೆ ಅಗತ್ಯವಾಗಿರುವ ಸೌಲಭ್ಯಗಳು ವಿದ್ಯಾರ್ಥಿಗಳ ಮನಸ್ಸಿನ ಮೇಲೆ ಮತ್ತು ಓದಿನ ಮೇಲೆ ಪರಿಣಾಮ ಬೀರುತ್ತವೆ. ಬಿ.ಎಲ್.ಡಿ.ಇ ವೈದ್ಯಕೀಯ ಕಾಲೇಜಿನ ಶೈಕ್ಷಣಿಕ ಪರಿಸರ ವೈದ್ಯಕೀಯ ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆ ಮಾಡಲು ಹೇಳಿ ಮಾಡಿಸಿದಂತಿದೆ. ಇಲ್ಲಿಯ ಕಲಿಕಾ ಸೌಲಭ್ಯಗಳು ಇತರ ಕಾಲೇಜುಗಳಿಗೆ ಮಾದರಿಯಾಗಿದೆ. ನಾನೂ ಕೂಡ ಮತ್ತೋಮ್ಮೆ ಇಲ್ಲಿಯ ಕಾಲೇಜಿನಲ್ಲಿ ಓದಬೇಕು…
ಉದಯರಶ್ಮಿ ದಿನಪತ್ರಿಕೆ ಆಲಮೇಲ: ತಾಲೂಕು ಮಕ್ಕಳ ಸಾಹಿತ್ಯ ಸಂಗಮ ಮತ್ತು ಮಕ್ಕಳ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಗೂ ವಿಶ್ವೇಶ್ವರ ಬಾಲಭಾರತಿ ಶಾಲೆಯ ಮುಖ್ಯ ಶಿಕ್ಷಕ ಲಕ್ಷ್ಮೀಪುತ್ರ ಕಿರನಳ್ಳಿ ಗೆ ಮೈಸೂರಿನ ಅರಮನೆ ಆವರಣದ ಟೌನ್ ಹಾಲ್ ನಲ್ಲಿ ಜರುಗಿದ ಮೈಸೂರು ಉತ್ಸವ ಸಮಾರಂಭದಲ್ಲಿ ರಾಜ್ಯ ಮಟ್ಟದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಸದ್ಭಾವನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಭಾನುವಾರ ಮೈಸೂರಿನ ಅರಮನೆಯ ಆವರಣದಲ್ಲಿ ಜರುಗಿದ ಮೈಸೂರು ಉತ್ಸವ ಹಾಗೂ ಸಾಧಕರಿಗೆ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಆಲಮೇಲನ ಶಿಕ್ಷಕ ಹಾಗೂ ಮಕ್ಕಳ ಸಾಹಿತ್ಯ ಸಂಗಮದ ಅಧ್ಯಕ್ಷ ಲಕ್ಷ್ಮೀಪುತ್ರ ಕಿರನಳ್ಳಿ ವಿಶೇಷ ಆವ್ಹಾನಿತರಾಗಿ ಪಾಲ್ಗೊಂಡು ಉತ್ಸವವನ್ನು ಉದ್ಘಾಟಿಸಿದರು. ಸಮಾರಂಭದಲ್ಲಿ ಅವರ ಸಂಘಟನಾತ್ಮಕ ಚಟುವಟಿಕೆಗಳು, ಶೈಕ್ಷಣಿಕ ಕ್ಷೇತ್ರದಲ್ಲಿನ ಅಭಿವೃದ್ಧಿ ಕಾರ್ಯಗಳನ್ನು ಪರಿಗಣಿಸಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೈಸೂರು ಹಾಗೂ ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟ ವಿಜಯನಗರ ,ಶ್ರೀ ಸುಜ್ಞಾನ ವಿದ್ಯಾಪೀಠ ಮತ್ತು ಸಾಂಸ್ಕೃತಿಕ ರಂಗಕಲಾವಿದರ ವತಿಯಿಂದ ರಾಜ್ಯ ಮಟ್ಟದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್…
