Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಕಬ್ಬು ತುಂಬಿ ನಿಂತಿದ್ದ ಟ್ರ್ಯಾಕ್ಟರ್ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ನಾಲ್ವರು ಯುವಕರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಿದ್ದಾಪುರ ಬಳಿ ಮಂಗಳವಾರ ತಡರಾತ್ರಿ ಸಂಭವಿಸಿದೆ.ಮೃತಪಟ್ಟ ಯುವಕರನ್ನು ವಿಶ್ವನಾಥ್ (17), ಪ್ರವೀಣ್ (22), ಗಣೇಶ (20) ಹಾಗೂ ಪ್ರಜ್ವಲ್ (17) ಎಂದು ಗುರುತಿಸಲಾಗಿದೆ. ಇವರೆಲ್ಲರೂ ಸಿದ್ದಾಪುರ ಗ್ರಾಮದ ನಿವಾಸಿಗಳೆಂದು ತಿಳಿದುಬಂದಿದೆ.ಸಿದ್ದಾಪುರ ಬಳಿರುವ ಸಕ್ಕರೆ ಕಾರ್ಖಾನೆಗೆ ಕಬ್ಬು ಪೂರೈಸುವ ಟ್ರ್ಯಾಕ್ಟರನ್ನು ಬಿಜಾಪುರ-ಬೆಳಗಾವಿ ರಾಜ್ಯ ಹೆದ್ದಾರಿಯ ಪಕ್ಕದಲ್ಲಿ ನಿಲ್ಲಿಸಲಾಗಿತ್ತು. ಈ ವೇಳೆ ಅತಿವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಟ್ರ್ಯಾಕ್ಟರ್ ಕೆಳಗಡೆ ಕಾರು ಸಿಲುಕಿದ್ದು, ಅದರಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಕೊನೆಯುಸಿರೆಳೆದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಜಮಖಂಡಿ ಗ್ರಾಮೀಣ ಠಾಣೆ ಪೊಲೀಸರು, ಟ್ರ್ಯಾಕ್ಟರ್ ಕೆಳಗಡೆ ಸಿಲುಕಿಕೊಂಡಿದ್ದ ಕಾರಿನಲ್ಲಿದ್ದ ಮೃತದೇಹಗಳನ್ನು ಸ್ಥಳೀಯರ ಸಹಾಯದಿಂದ ಹೊರತೆಗೆದಿದ್ದಾರೆ. ಜಮಖಂಡಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವೃಕ್ಷಥಾನ್ ಹೆರಿಟೇಜ್ ರನ್ ಅಂಗವಾಗಿ ಆಯೋಜಿಸಲಾಗಿದ್ದ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳ ಹೆಸರುಗಳನ್ನು ಸ್ಪರ್ಧೆಗಳ ಸಂಘಟನಾ ಸಮಿತಿ ಪ್ರಕಟಿಸಿದೆ.ಪ್ರಾಥಮಿಕ, ಪ್ರೌಢ ಮತ್ತು ಪಿ.ಯು ಕಾಲೇಜು ಹೀಗೆ ಮೂರು ವಿಭಾಗಗಳಲ್ಲಿ ಬಾಲಕರು ಹಾಗೂ ಬಾಲಕಿಯರಿಗಾಗಿ ಸ್ಪರ್ಧೆಯನ್ನು ಆಯೋಜಿಲಾಗಿತ್ತು. ಚಿತ್ರಕಲಾ ಸ್ಪರ್ಧೆಯಲ್ಲಿ ಸುಮಾರು 400 ಮತ್ತು ನಿಬಂಧ ಸ್ಪರ್ಧೆಯಲ್ಲಿ ಸುಮಾರು 370 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಪ್ರಥಮ ಸ್ಥಾನ ರೂ.10 ಸಾವಿರ, ದ್ವಿತೀಯ ಸ್ಥಾನ ರೂ.7500, ತೃತೀಯ ಸ್ಥಾನ ರೂ.5 ಸಾವಿರ ಹಾಗೂ ಇಬ್ಬರಿಗೆ ಸಮಾಧಾನಕರ ಬಹುಮಾನವಾಗಿ ತಲಾ ರೂ.2500 ನೀಡಲಾಗುತ್ತಿದೆ.ಡಿಸೆಂಬರ್ 6 ಶನಿವಾರ ನಗರದ ಡಾ.ಬಿ. ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಬೆ.10.30 ರಿಂದ ಆಯೋಜಿಸಲಾಗಿರುವ ಆಯಾ ವಿಷಯಾಧಾರಿತ ವಿಚಾರಗೋಷ್ಠಿಗಳ ಬಳಿಕ ಬಹುಮಾನ ವಿತರಣೆ ಮಾಡಲಾಗುವುದು ಎಂದು ಸ್ಪರ್ಧೆಗಳ ಸಂಘಟನಾ ಸಮಿತಿಯ ಅಮಿತ ಬಿರಾದಾರ, ಶಿವು ಕುಂಬಾರ ಹಾಗೂ ರಮೇಶ ಬಿರಾದಾರ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಸ್ಪರ್ಧೆಗಳ ವಿಭಾಗ ಮತ್ತು ವಿಜೇತರ ಹೆಸರುಗಳು ಇಂತಿವೆ. ನಿಬಂಧ ಸ್ಪರ್ಧೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇಂಚಗೇರಿ ಆ ತತ್ವಧ್ಯಾತ್ಮ ಸಂಪ್ರದಾಯದ ಶಾಖಾಮಠವಾದ ವಿಜಯಪುರ ನಗರದ ಇಬ್ರಾಹಿಂಪುರದ ಶ್ರೀ ಜಯರಾಮೇಶ್ವರ ಮಠದ ಶ್ರೀ ಜಯರಾಮೇಶ್ವರ ಮಹಾರಾಜರ ಪುಣ್ಯಸ್ಮರಣೆ (ಜಾತ್ರಾಮಹೋತ್ಸವ)ಯನ್ನು ಬುಧವಾರ ಶ್ರದ್ಧಾ-ಭಕ್ತಿಯಿಂದ ಆಚರಿಸಲಾಯಿತು.ಪುಣ್ಯಸ್ಮರಣೆಯ ಅಂಗವಾಗಿ ಬೆಳಿಗ್ಗೆ ಶ್ರೀ ಜಯರಾಮೇಶ್ವರ ಮಹಾರಾಜರ ಗದ್ದುಗೆಗೆ ಪುಷ್ಪಾಲಂಕಾರ ಮಾಡಿ ವಿಶೇಷ ಪೂಜೆ ನೆರವೇರಿಸಲಾಯಿತು.ಮಕ್ಕಳು ಮಹಿಳೆಯರೂ ಸೇರಿದಂತೆ ಬಹುಸಂಖ್ಯೆಯಲ್ಲಿ ಭಕ್ತರು ಮಠಕ್ಕೆ ಆಗಮಿಸಿ ಶ್ರೀ ಜಯರಾಮೇಶ್ವರರ ಗದ್ದುಗೆ ದರ್ಶನ ಪಡೆದರು. ಮಧ್ಯಾಹ್ನ ಪುಷ್ಪವೃಷ್ಟಿಯೊಂದಿಗೆ ಕಾರ್ಯಕ್ರಮ ಮಂಗಲಗೊಂಡಿತು. ನಂತರ ಅನ್ನಸಂತರ್ಪಣೆ ನಡೆಯಿತು.ಶ್ರೀ ಜಯರಾಮೇಶ್ವರ ಮಹಾರಾಜರ ಮಠದ ಸೇವಾ ಸಮಿತಿ ಅಧ್ಯಕ್ಷ ನಂದಬಸು ಶಿವಣಗಿ, ಉಪಾಧ್ಯಕ್ಷ ಜಯರಾಮ ಡಂಬಳ, ಪ್ರಧಾನ ಕಾರ್ಯದರ್ಶಿ ಶಿವಪ್ಪ ಸರಗೆನ್ನವರ, ಕಾರ್ಯದರ್ಶಿ ಮಲ್ಲಪ್ಪ ಶಿರೋಳ, ಖಜಾಂಚಿ ಉದಯ ಶಿರೋಳ, ಸದಸ್ಯರಾದ ರಾಮಣ್ಣ ಗರಸಂಗಿ, ಕಿರಣ್ ಕೌಜಲಗಿ, ಶಂಕರ ಸುನಗ, ರಾಹುಲ ಕೊಲ್ಹಾರ, ಸುರೇಶ ಪೂಜಾರಿ, ವಿಠ್ಠಲ ಕೋರಿ, ಬೀರಪ್ಪ ಶಿವಣಗಿ, ರೇವಣಸಿದ್ದ ವಠಾರ, ಮಾಧು ದ್ಯಾಮಣ್ಣವರ, ಸೇರಿದಂತೆ ಹಲವಾರು ಯುವಕರು ಜಾತ್ರೆಯ ಯಶಸ್ವಿಗೆ ಶ್ರಮಿಸಿದರು. ಹಿರಿಯರಾದ ಕಾಳಪ್ಪ ಮನೋಚಾರಿ,…
ಇಂದು (ಡಿಸೆಂಬರ್ ೦೪) ಗಾಣಗಾಪುರ ದತ್ತ ಜಯಂತಿ ಪ್ರಯುಕ್ತ ಈ ವಿಶೇಷ ಲೇಖನ ಲೇಖನ- ಪ್ರಶಾಂತ ಕುಲಕರ್ಣಿಉಪನ್ಯಾಸಕರುಶ್ರೀ ಪದ್ಮರಾಜ ಶಿಕ್ಷಣ ಮಹಾವಿದ್ಯಾಲಯಸಿಂದಗಿವಿಜಯಪುರ ಜಿಲ್ಲೆPh:9845442237 ಉದಯರಶ್ಮಿ ದಿನಪತ್ರಿಕೆ ದತ್ತಾತ್ರೇಯರು ಭಾರತೀಯ ಸಂಪ್ರದಾಯದಲ್ಲಿ “ಆದಿಗುರು” ಮತ್ತು “ಅವಧೂತ ಚಿಂತನೆಯ ಪರಮಮೂರ್ತಿ” ಎಂದು ಪೂಜಿಸಲ್ಪಡುವ ಮಹಾಯೋಗಿಗಳು. ದತ್ತಸ್ವರೂಪವು ಕೇವಲ ದೈವಿಕ ರೂಪವಲ್ಲ; ಅದು ಪ್ರಕೃತಿಗತವಾಗಿ ಪರಮಸತ್ಯದಲ್ಲಿ ಲೀನವಾಗಿರುವ ಅವಧೂತ ಸ್ಥಿತಿಯ ಜೀವಂತ ಉದಾಹರಣೆ. ಅವಧೂತ ಎಂದರೆ ದೇಶ–ಕಾಲ–ಸಂಸ್ಕೃತಿ–ಕರ್ಮ– ಬಯಕೆ ಎಂಬ ಎಲ್ಲಾ ಬಂಧನಗಳನ್ನು ತೊರೆದು, ಮನುಷ್ಯನು ತನ್ನೊಳಗಿನ ಪರಬ್ರಹ್ಮದ ಜ್ಞಾನದಲ್ಲಿ ನಿರಂತರವಾಗಿ ನೆಲೆಸಿರುವ ಸ್ಥಿತಿ. ಈ ಕಾರಣಕ್ಕಾಗಿ ದತ್ತ ಆಚಾರ್ಯರನ್ನು “ಅವಧೂತ ಚಿಂತನೆಯ ಮಹಾಶಕ್ತಿ” ಹಾಗೂ “ಆದಿಗುರು” ಎಂದೂ ಭಕ್ತರು ಗೌರವಿಸುತ್ತಾರೆ. ದತ್ತನ ತತ್ತ್ವ ಭಾರತದಲ್ಲಿನ ಅನೇಕ ಸಂಪ್ರದಾಯಗಳಿಗೆ ಮೂಲಶಕ್ತಿ. ವಿಶೇಷವಾಗಿ ನಾಥಪಂಥದಲ್ಲಿ ದತ್ತಾತ್ರಯರು ಮೂಲ ಪ್ರೇರಕತ್ವ ವಹಿಸಿರುವುದಾಗಿ ಪರಂಪರೆ ಹೇಳುತ್ತದೆ. ದತ್ತನ ಆದೇಶದಿಂದಲೇ ರೂಪುಗೊಂಡ ನಾಥಸಂಪ್ರದಾಯದಲ್ಲಿ ಹಠಯೋಗ, ಧ್ಯಾನ, ಗುರು ಶಿಷ್ಯ ಭಕ್ತಿ ಮತ್ತು ಅವಧೂತ ತತ್ತ್ವಗಳಿಗೆ ಅತ್ಯಂತ ಪ್ರಾಮುಖ್ಯತೆ ನೀಡಲಾಗಿದೆ. ನಾಥಪಂಥದ ಶ್ರೇಷ್ಠ…
ವಿಜಯಪುರದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಸ್ಥಾಪನೆಯ ೫೦ನೇ ವರ್ಷದ ಪರಿಪೂರ್ಣತೆಯ ಅಂಗವಾಗಿ ಈ ಕಾರ್ಯಕ್ರಮ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಪ್ರಸಿದ್ಧ ದಿವಟಗೇರಿ ಓಣಿಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಸ್ಥಾಪನೆಯ ೫೦ನೇ ವರ್ಷದ ಪರಿಪೂರ್ಣತೆಯ ಅಂಗವಾಗಿ ಸುವರ್ಣ ಮಹೋತ್ಸವ ಕಾರ್ಯಕ್ರಮ ಡಿ.೫ ರಿಂದ ಮೂರು ದಿನಗಳ ಕಾಲ ಶ್ರದ್ಧಾ-ಭಕ್ತಿಯಿಂದ ನಡೆಯಲಿದ್ದು, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಘಟಿಸಲಾಗುತ್ತಿದೆ ಎಂದು ಶ್ರೀ ರಾಘವೇಂದ್ರ ಮಠದ ಆಡಳಿತ ಮಂಡಳಿ ಅಧ್ಯಕ್ಷ, ವಿಡಿಎ ಮಾಜಿ ಅಧ್ಯಕ್ಷ ಶ್ರೀಹರಿ ಗೊಳಸಂಗಿ ಹೇಳಿದರು.ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರಣೆ ನೀಡಿದ ಅವರು, ಸುವರ್ಣ ಮಹೋತ್ಸವದಂಗವಾಗಿ ದರಬಾರ ಶಾಲೆಯ ಒಳಾಂಗಣ ಕ್ರೀಡಾಂಗಣದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಲಿವೆ ಎಂದರು.ಡಿ. ೫ ರಂದು ಸಂಜೆ ೬ ಕ್ಕೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಸಂಜೆ ೭ ಕ್ಕೆ ಮೈಸೂರಿನ ರಾಮಚಂದ್ರಾಚಾರ್ಯ ಅವರಿಂದ ದಾಸವಾಣಿ, ರಾತ್ರಿ ೮.೩೦ ಕ್ಕೆ ಪಂ. ಮಧ್ವಾಚಾರ್ಯ ಮೊಕಾಶಿ ಅವರಿಂದ ಆಶೀರ್ವಚನ ನಡೆಯಲಿದೆ. ಡಿ.೬ ರಂದು ಸಂಜೆ ೬…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಅಂಗವಿಕಲರು ಸಮಾಜದಲ್ಲಿ ಎಲ್ಲರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾಗಿ ಆತ್ಮವಿಶ್ವಾಸದಿಂದ ಜೀವನ ನಡೆಸುವಂತೆ ಅವಕಾಶ ಕಲ್ಪಿಸುವುದು ಸಮಾಜ ಹಾಗೂ ಸರ್ಕಾರದ ಜವಾಬ್ದಾರಿ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಗಮನಹರಿಸಬೇಕೆಂದು ಕ್ಷೇತ್ರ ಸಮನ್ವಯಾಧಿಕಾರಿ ಸುನೀಲ ನಾಯಕ ಹೇಳಿದರು.ತಾಲೂಕಿನ ಇವಣಗಿ ಗ್ರಾಮದ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕ್ಷೇತ್ರಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರಸಮನ್ವಯಾಧಿಕಾರಿಗಳ ಕಾರ್ಯಾಲಯದ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ವಿಶ್ವ ವಿಕಲಚೇತನ ಮಕ್ಕಳ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿಕಲಚೇತನರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಒದಗಿಸಿಕೊಡುವ ಮೂಲಕ ಅವರು ಎಲ್ಲರಂತೆ ಸ್ವಾವಲಂಬಿ ಜೀವನ ಸಾಗಿಸಲು ನೆರವಾಗಬೇಕು. ವಿಕಲಚೇತನ ಮಕ್ಕಳಿಗೆ ವಿಶೇಷವಾಗಿ ಗಮನ ಹರಿಸಿ ಅವರಿಗೆ ಶಿಕ್ಷಣ ನೀಡಿದರೆ ಖಂಡಿತ ಅವರು ಎಲ್ಲ ಮಕ್ಕಳಂತೆ ಸಾಧನೆ ಮಾಡುವುದರಲ್ಲಿ ಸಂದೇಹವಿಲ್ಲ ಎಂದರು.ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಎಮ್. ವ್ಹಿ. ಗಬ್ಬೂರ ಮಾತನಾಡಿ, ಅಂಗವಿಕಲ ಮಕ್ಕಳ ಸಬಲೀಕರಣಕ್ಕಾಗಿ ಅನೇಕ ಶಾಲಾ- ಕಾಲೇಜು ಹಾಗೂ ಸಂಘ-ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ಪ್ರಸ್ತುತ ಕಾಲದಲ್ಲಿ ವಿಕಲಚೇತನರಿಗೆ ವಿದ್ಯಾಭ್ಯಾಸದ ಅವಕಾಶಗಳ ಜೊತೆಗೆ ಕೌಶಲಾಭಿವೃದ್ಧಿಗಳ ಕಲಿಕೆಯು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಶಿಕ್ಷಣ, ಆರೋಗ್ಯ, ಸಮಾಜ ಸೇವೆಯ ಮೂಲಕ ಮನೆಮಾತಾಗಿರುವ ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆ ಇದೀಗ ಮಾಧ್ಯಮ ಕ್ಷೇತ್ರಕ್ಕೂ ಮುಂದಡಿ ಇಟ್ಟಿದೆ. ಜಿಲ್ಲೆಯ ಜನರಿಗೆ ಎಫ್. ಎಂ. ರೇಡಿಯೂ ಮೂಲಕ ಮತ್ತಷ್ಟು ಹತ್ತಿರವಾಗಲು ಸಂಸ್ಥೆ ಈಗ ಬಿ.ಎಲ್.ಡಿ.ಇ ಧ್ವನಿ 98.6 ಎಫ್.ಎಂ ಸಮುದಾಯ ರೇಡಿಯೋ ಕೇಂದ್ರ ಪ್ರಾರಂಭಿಸಿದೆ.ರೈತರು, ಮಹಿಳೆಯರು, ಯುವಕರು ಹಾಗೂ ಸಮಾಜದ ನಾನಾ ಸ್ತರದ ಜನರನ್ನು ಕೇಂದ್ರೀಕರಿಸಿ ಅನೇಕ ಕಾರ್ಯಕ್ರಮಗಳನ್ನೂ ಈ ಬಾನುಲಿ ಕೇಂದ್ರ ಸಿದ್ಧಪಡಿಸಿದ್ದು, ಇದೇ ಡಿಸೆಂಬರ್ 7 ರಂದು ಲೋಕಾರ್ಪಣೆಯಾಗಲು ಸಿದ್ಧವಾಗಿದ್ದು, ಡಿಸೆಂಬರ್ 7 ರಂದು ರವಿವಾರ ಬೆಳಿಗ್ಗೆ 10.30ಕ್ಕೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಮತ್ತು ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಎಂ. ಬಿ. ಪಾಟೀಲ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ ಗುಂಡೂರಾವ, ಅರಣ್ಯ ಮತ್ತು ಪರಿಸರ ವಿಜ್ಞಾನ ಸಚಿವ ಈಶ್ವರ ಖಂಡ್ರೆ ಸಮುದಾಯ ಬಾನುಲಿ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ.ಸಮುದಾಯಗಳ ಸಮಸ್ಯೆಗಳು ಮತ್ತು ಮತ್ತು ಆ ಸಮಸ್ಯೆಗಳಿಗೆ ಪರಿಹಾರ ಒದಗಿಸಲು…
ಸಿಂದಗಿ ವಿರಕ್ತ ಮಠದ ಆಸ್ತಿಯ ದಾಖಲೆಗಳಿಂದ ವಕ್ಫ ಬೋರ್ಡ ಹೆಸರು ಕಡಿತ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಸತತ ೫೧ ವರ್ಷಗಳ ಹೋರಾಟಕ್ಕೆ ನ್ಯಾಯ ದೊರಕಿದೆ. ಪರಿಣಾಮ ನಮ್ಮ ಸಿಂದಗಿಯ ಗುರುಬಸವ ವಿರಕ್ತಮಠದ ಆಸ್ತಿಯು ಮರಳಿ ಮಠದ ಹೆಸರಿಗಾಗಿದೆ ಎಂದು ಸಂತೋಷವನ್ನು ಪತ್ರಕರ್ತರೊಂದಿಗೆ ಗುರುಬಸವ ವಿರಕ್ತಮಠದ ಸೇವಾ ಸಮಿತಿಯ ಕಾರ್ಯದರ್ಶಿ ನಿಂಗಪ್ಪ ಗುರುಬಸಪ್ಪ ಪಟ್ಟಣಶೆಟ್ಟಿ ಇವರು ಹಂಚಿಕೊಂಡರು.ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ಸಿಂದಗಿಯ ಗುರುಬಸವ ವಿರಕ್ತಮಠದ ಆಸ್ತಿಯನ್ನು ೧೯೭೪ರಲ್ಲಿ ಅನಧಿಕೃತವಾಗಿ ವಕ್ಫ ಬೋರ್ಡ ತನ್ನ ಹೆಸರಿಗೆ ಮಾಡಿಕೊಂಡಿತ್ತು. ಇದರ ಬಗ್ಗೆ ಸಾಕಷ್ಟು ಹೋರಾಟ ಮಾಡಲಾಗಿ ಕಳೆದ ೨೦೨೪ರಲ್ಲಿ ರಾಜ್ಯಾದ್ಯಾಂತ ವಕ್ಫ್ಬೋರ್ಡ ವಿರುದ್ಧ ಸಾಕಷ್ಟು ಹೋರಾಟಗಳು ನಡೆದವು. ಆ ಸಂದರ್ಭದಲ್ಲಿ ನಮ್ಮ ಮಠದ ೬೦೦ವರ್ಷಗಳ ಇತಿಹಾಸದ ದಾಖಲೆಗಳನ್ನು ಸರ್ಕಾರದ ಮುಂದಿಟ್ಟಾಗ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಜಿಲ್ಲಾಧಿಕಾರಿಗಳು, ಇಂಡಿ ಉಪವಿಭಾಗಾಧಿಕಾರಿಗಳ ಅವರ ನ್ಯಾಯಾಲಯದಲ್ಲಿ ಪ್ರಕರಣದ ಕುರಿತು ವ್ಯಾಜ್ಯ ನಡೆಸಲಾಯಿತು.ಸದರಿ ಪ್ರಕರಣದಲ್ಲಿ ಪಕ್ಷಗಾರರಾಗಿ ಸಿಂದಗಿ ವಿರಕ್ತಮಠ ಸೇವಾ ಸಮಿತಿ ವಿರಕ್ತಮಠ ಸಿಂದಗಿ (ಬಿಳೂರ)…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ೩೦೩ ಪಲಾನುಭವಿಗಳಿಗೆ ಡಿಬಿಟಿ ಮೂಲಕ ಈಗಾಗಲೇ ಹಸುಗಳಿಗಾಗಿ ಅನುದಾನವನ್ನು ರೈತರಿಗೆ ಬಿಡುಗಡೆ ಮಾಡಿಸಲಾಗಿದೆ.ಇದರಿಂದ ತಾಲೂಕಿನಲ್ಲಿ ಹಾಲು ಉತ್ಪಾದಕರ ಸಂಘಗಳ ಹೆಚ್ಚೆಚ್ಚು ನಿರ್ಮಾಣವಾಗಬೇಕು. ಮತ್ತು ರೈತರು ಜೋಡಿ ಕೃಷಿಯೆಡೆಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಸಿಂದಗಿ ಪಟ್ಟಣದ ಕೃಷಿ ಇಲಾಖೆಯ ಆವರಣದಲ್ಲಿ ವಿಜಯಪುರ ಜಿಲ್ಲಾ ಪಂಚಾಯತ್, ಸಿಂದಗಿ ಕೃಷಿ ಇಲಾಖೆ ವತಿಯಿಂದ ೨೦೨೫-೨೬ನೆಯ ಸಾಲಿನ ಜಲಾನಯನ ಅಭಿವೃದ್ಧಿ ಇಲಾಖೆಯ ಆರ್.ಎ.ಡಿ-ಆರ್.ಕೆ.ವಿ.ವಾಯ್-ಆರ್.ಎ.ಎಫ್.ಟಿ.ಎ.ಎ.ಆರ್ ಯೋಜನೆಯಡಿ ಹೈನುಗಾರಿಕೆ ಹಾಗೂ ಸಮಗ್ರ ಕೃಷಿ ಉತ್ತೇಜಸಲು ಹಸುಗಳ ವಿತರಣಾ ಕಾರ್ಯಕ್ರಮದಲ್ಲಿ ೩೩ಪಲಾನುಭವಿಗಳಿಗೆ ಹಸು ಮತ್ತು ಸ್ಪಿಂಕಲರ್ಗಳನ್ನು ವಿತರಿಸಿ ಮಾತನಾಡಿದ ಅವರು, ರಾಜ್ಯ ಸರಕಾರ ರೈತರಿಗಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಹಸುಗಳ ಖರೀದಿಗಾಗಿ ಈಗಾಗಲೇ ತಾಲೂಕಿನಲ್ಲಿ ೩೦೩ಪಲಾನುಭವಿಗಳಿಗೆ ಡಿಬಿಟಿ ಮೂಲಕ ಹಣ ಬಿಡುಗಡೆಗೊಳಿಸಲಾಗಿದೆ. ಅದರಲ್ಲಿ ಸೋಮಜಾಳ ಗ್ರಾಮಕ್ಕೆ ೩೦, ಮೋರಟಗಿಗೆ ೫೩, ಬಳಗಾನೂರ ಗ್ರಾಮಕ್ಕೆ ೫೦, ನಾಗರಹಳ್ಳಿ ಗ್ರಾಮಕ್ಕೆ ೧೨, ತೋಂಟಾಪುರ ಗ್ರಾಮಕ್ಕೆ ೦೭, ಗುಡ್ಡಳ್ಳಿ ಗ್ರಾಮಕ್ಕೆ ೦೯, ವಿಭೂತಿಹಳ್ಳಿ ಗ್ರಾಮಕ್ಕೆ ೧೨,…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಸಮಸ್ಯೆಗೆ ಒಳಗಾದ ವ್ಯಕ್ತಿಗಳಿಗೆ ಉಚಿತ ಕಾನೂನು ವ್ಯವಸ್ಥೆ ಕಲ್ಪಿಸುವ ಅವಕಾಶ ನ್ಯಾಯಾಲಯದಲ್ಲಿದೆ. ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ನಾಗೇಶ ಮೊಗೇರ ಹೇಳಿದರು.ಸಿಂದಗಿ ಪಟ್ಟಣದ ತಾಲೂಕು ಆಸ್ಪತ್ರೆಯಲ್ಲಿ ಸಿಂದಗಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ತಾಲೂಕು ಸಾರ್ವಜನಿಕ ಆಸ್ಪತ್ರೆ, ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯ ಇವುಗಳ ಸಹಯೋಗದಲ್ಲಿ ವಿಶ್ವ ಏಡ್ಸ್ ದಿನಾಚರಣೆ ನಿಮಿತ್ತ ಹಮ್ಮಿಕೊಂಡ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಕಾನೂನಿನ ಕಾಯ್ದೆಗಳ ಬಗ್ಗೆ ಮತ್ತು ಎಚ್ಐವಿ ಮತ್ತು ಏಡ್ಸ್ ಬಗ್ಗೆ ಯುವ ಜನತೆ ಜಾಗೃತರಾಗಬೇಕು. ಈ ರೋಗದ ಬಗ್ಗೆ ಇರುವ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಿ, ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ತಾಲೂಕು ಸಾರ್ವಜನಿಕ ಆಸ್ಪತ್ರೆ ಪ್ರಮುಖ ಪಾತ್ರ ವಹಿಸುತ್ತಿದೆ ಎಂದರು.ಈ ವೇಳೆ ವಕೀಲರಾದ ಎಸ್.ಎಸ್.ಹಂಗರಗಿ, ಡಾ.ಎಂ.ಬಿ.ಬಿರಾದಾರ, ಎಸ್.ಬಿ.ಪಾಟೀಲ ಗುಂದಗಿ ಮಾತನಾಡಿ, ಮಾನವನ ಜನನದಿಂದ ಮರಣದವರೆಗೆ ಕಾನೂನು ಬಹಳ ಅತ್ಯವಶ್ಯಕ. ಎಲ್ಲರೂ ಕಾನೂನು ಮತ್ತು…
