Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಇಂಡಿ: ಇಲಾಖೆಗೆ ಚ್ಯುತಿ ತರುವ ಕೆಲಸ ಯಾರೂ ಮಾಡದೆ, ಗೌರವ ತರುವ ಕೆಲಸ ಮಾಡಬೇಕು. ಸಮಾಜದಲ್ಲಿರುವ ಕಟ್ಟಕಡೆಯ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಲಿ ಎಂಬ ಸದುದ್ದೇಶದಿಂದ ಸರ್ಕಾರ ವಸತಿ ನಿಲಯಗಳನ್ನು ಆರಂಭಿಸಿ ಮಕ್ಕಳಿಗೆ ವಸತಿ,ಊಟ,ಇತರೆ ಸೌಲಭ್ಯಗಳನ್ನು ಕಲ್ಪಿಸಿದೆ. ವಸತಿ ನಿಲಯದ ಎಲ್ಲ ನಿಲಯ ಪಾಲಕರು ವಸತಿ ನಿಲಯದಲ್ಲಿ ಪ್ರವೇಶ ಪಡೆದ ಮಕ್ಕಳಿಗೆ ಗುಣಮಟ್ಟದ ಊಟ ಹಾಗೂ ಸರ್ಕಾರದ ಇತರೆ ಸೌಲಭ್ಯಗಳು ನೀಡಬೇಕು ಎಂದು ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ ಲಮಾಣಿ ಹೇಳಿದರು.ಅವರು ತಾಲೂಕು ಸಮಾಜ ಕಲ್ಯಾಣ ಇಲಾಖೆಗೆ ಸಹಾಯಕ ನಿರ್ದೇಶಕರಾಗಿ ಆಗಮಿಸಿದ ಪ್ರಯುಕ್ತ ವಸತಿ ನಿಲಯದ ನಿಲಯ ಪಾಲಕರು ಹಾಗೂ ಸಿಬ್ಬಂದಿಯವರು ಹಮ್ಮಿಕೊಂಡ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವಿಕರಿಸಿ ಮಾತನಾಡಿದರು.ಸರ್ಕಾರಿ ನೌಕರಿ ಎಂದ ಮೇಲೆ ವರ್ಗಾವಣೆ ಹೊಂದುವುದು ಸಹಜ. ವರ್ಗಾವಣೆ ಹೊಂದಿದ ಸ್ಥಳದಲ್ಲಿ ಕರ್ತವ್ಯಕ್ಕೆ ಚ್ಯುತಿ ಬಾರದಂತೆ ಕರ್ತವ್ಯ ನಿರ್ವಹಿಸುವುದು ಮುಖ್ಯ. ಹೀಗಾಗಿ ವಸತಿ ನಿಲಯದ ನಿಲಯ ಪಾಲಕರು ಆಡಳಿತದಲ್ಲಿ ಸಹಕಾರ ನೀಡಿ ವಸತಿ ನಿಲಯಗಳ ಸುಧಾರಣೆಗೆ…
ವಿಜಯಪುರ: ಪುಸ್ತಕದ ಮೌಲ್ಯ ಅರಿಯಲು ಗ್ರಂಥಾಲಯ ಅವಶ್ಯ.ಪುಸ್ತಕ ನಮ್ಮ ಜೀವನಕ್ಕೆ ಬೆಳಕು ಕೊಡುವಂತಹದು. ಹೆಚ್ಚೆಚ್ಚು ಸದಸ್ಯರನ್ನು ಮಾಡಿ ಗ್ರಂಥಾಲಯದ ಮಹತ್ವದ ಬಗ್ಗೆ ಅರಿವು ಮೂಡಿಸಬೇಕು ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ಅವರು ತಾಲೂಕಿನ ನಾಗಠಾಣ ಗ್ರಾಮದ ಅರಿವು ಕೇಂದ್ರ ಗ್ರಂಥಾಲಯದಲ್ಲಿ ಹಮ್ಮಿಕೊಂಡ ಗ್ರಂಥಪಾಲಕರ ದಿನಾಚರಣೆಯ ನಿಮಿತ್ತ ‘ಸುಶಿಕ್ಷಿತ ಸಮಾಜ ನಿರ್ಮಾಣದಲ್ಲಿಗ್ರಂಥಾಲಯದ ಪಾತ್ರ’ಕುರಿತು ಮಾತನಾಡಿದರು.ಗ್ರಂಥಾಲಯವು ಜ್ಞಾನದ ಕಣಜವಾಗಿದ್ದು, ಓದುಗನಿಗೆ ಜ್ಞಾನವನ್ನು ಉಣಬಡಿಸುವ ಗ್ರಂಥಪಾಲಕರ ಶ್ರಮ ಬಹಳವಿದೆ. ಭಾರತದಲ್ಲಿ ಸಾರ್ವಜನಿಕ ಗ್ರಂಥಾಲಯಗಳು ಬೆಳೆಯುವುದಕ್ಕೆ ಡಾ. ಎಸ್ ಆರ್ ರಂಗನಾಥನ್ ಪ್ರಮುಖ ಕಾರಣ. ಅವರು ನೀಡಿದ ಗ್ರಂಥಾಲಯದ ಪಂಚ ಸೂತ್ರಗಳು ಜಗನ್ಮಾನ್ಯತೆ ಗಳಿಸಿವೆ ಎಂದು ಹೇಳಿದರು.ಡಿಸಿಸಿ ಬ್ಯಾಂಕ್ ಮ್ಯಾನೇಜರ್ ಸಾಯಬಣ್ಣ ಗೌಡೆನ್ನವರ ಮಾತನಾಡಿ, ದೇಹಕ್ಕೆ ಅನ್ನ, ನೀರು, ಗಾಳಿ, ಎಷ್ಟು ಮುಖ್ಯವೋ ಹಾಗೆಯೇ ಮಾನವನ ಮತ್ತು ಸಮಾಜದ ವಿಕಾಸಕ್ಕೆ ಪುಸ್ತಕಗಳು ಬಹು ಮುಖ್ಯ. ಪುಸ್ತಕಗಳು ಸದಾ ಒಳ್ಳೆಯ ಆಲೋಚನೆಗೆ ದಾರಿ ಮಾಡಿಕೊಟ್ಟು, ಸುಶಿಕ್ಷಿತ ಸಮಾಜ ನಿರ್ಮಿಸುವಲ್ಲಿ ನಿರ್ಣಾಯಕವಾಗಿವೆ ಎಂದು ಹೇಳಿದರು.ಗ್ರಂಥಪಾಲಕ ಮಂಜುನಾಥ ಗಂಗನಳ್ಳಿ ಅಧ್ಯಕ್ಷತೆ ವಹಿಸಿ…
ಸರ್ಕಾರಿ ಪ್ರೌಢ ಶಾಲೆಯ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ ನೀಡಿದ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ವಿಜಯಪುರ: ನಾವು ಜೀವನದಲ್ಲಿ ಯಶಸ್ವಿಯಾಗಬೇಕಾದರೆ ನಿರಂತರ ಓದು ಮತ್ತು ಕಠಿಣ ಪರಿಶ್ರಮ ಅತ್ಯವಶ್ಯಕವಾಗಿದ್ದು ವಿದ್ಯಾರ್ಥಿಗಳು ಅತ್ಯುತ್ತಮ ಪುಸ್ತಕಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು ಆಗ ಮಾತ್ರ ನಾವು ಜೀವನದಲ್ಲಿ ಯಶಸ್ಸನ್ನು ಕಾಣಲು ಸಾಧ್ಯವಾಗುತ್ತದೆ ಎಂದು ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.ಅವರು ತಮ್ಮ ಸ್ವಗ್ರಾಮ ಬಬಲೇಶ್ವರ ತಾಲೂಕಿನ ಮಮದಾಪುರದ ತಾವು ಹೈಸ್ಕೂಲ ವಿದ್ಯಾಭ್ಯಾಸ ಮಾಡಿದ್ದ ಕರ್ನಾಟಕ ಪಬ್ಲಿಕ್ ಶಾಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ “ಸಾಧಕರೊಂದಿಗೆ ಸಂವಾದ” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಶಿಕ್ಷಣ ಪ್ರೇಮಿ, ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ ಪಾಟೀಲರ ಆಶಯದಂತೆ ಹಾರ ತುರಾಯಿ ಶಾಲು ಸನ್ಮಾನಗಳ ಬದಲಾಗಿ, ಸಂಗಮೇಶ ಬಬಲೇಶ್ವರ ಅವರು ಭೇಟಿ ನೀಡಿರುವ ಸರಕಾರಿ ಕಚೇರಿಗಳು ಹಾಗೂ ಹಾಸ್ಟೆಲ್ ಗಳಲ್ಲಿ, ಸಭೆ ಸಮಾರಂಭಗಳಲ್ಲಿ ತಮಗೆ ಉಡುಗೊರೆಯಾಗಿ ನೀಡಿರುವ ಉತ್ಕೃಷ್ಟ ಪುಸ್ತಕಗಳು ಹಾಗೂ ನೋಟ್ ಪುಸ್ತಕಗಳನ್ನು ತಾವು ಕಲಿತಿರುವ ಮಮದಾಪುರದ…
ಚಡಚಣ: ಪಟ್ಟಣದ ಶ್ರೀ ಸಂಗಮೇಶ್ವರ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ ಮಹಾವಿದ್ಯಾಲಯ ಚಡಚಣ ಗ್ರಂಥಾಲಯ ವಿಭಾಗದ ವತಿಯಿಂದ ಇಂದಿನ ವಿಜ್ಞಾನ ಮತ್ತು ತಂತ್ರಜ್ಞಾನ ಯುಗದಲ್ಲಿ ಎರಡು ಸಾವಿರದ ಮೂವತ್ತರ ಹೊತ್ತಿಗೆ ಗ್ರಂಥಾಲಯದ ಸ್ಥಿತಿ ವಿಷಯದ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ ನಡೆಯಿತುಬೀದರ್ ವಿಶ್ವವಿದ್ಯಾಲಯ ಕುಲಪತಿಬಿ ಎಸ್ ಬಿರಾದಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಒಂದು ಕಾಲೇಜಿನ ಫಲಿತಾಂಶ ನಿರ್ಧಾರವಾಗುವುದು ಆ ಮಹಾವಿದ್ಯಾಲಯದ ಗ್ರಂಥಾಲಯ ಮತ್ತು ಪ್ರಾಧ್ಯಾಪಕ ಮಿತ್ರರನ್ನು ಅವಲಂಬಿಸಿರುತ್ತದೆ. ಇಂದಿನ ಆಧುನಿಕ ಯುಗದಲ್ಲಿ ಹೇಗೆ ಹೆಮ್ಮರವಾಗಿ ಮಾಹಿತಿ ತಂತ್ರಜ್ಞಾನ ಬೆಳೆಯುತ್ತಿದೆ ಹಾಗೆ ಶಿಕ್ಷಣ ವ್ಯವಸ್ಥೆಯ ಊದುಗಾರಿಕೆಯಲ್ಲಿ ಮಾಹಿತಿ ತಂತ್ರಜ್ಞಾನ ಬಳಸಿಕೊಳ್ಳಬೇಕು ಅಂದಾಗ ಮಾತ್ರ ಓದುಗರಿಗೆ ಪ್ರಚಲಿತ ವಿದ್ಯಮಾನಕ್ಕೆ ತಕ್ಕ ಮಾಹಿತಿ ಪಡೆದುಕೊಳ್ಳಲು ಸಾಧ್ಯ ಎಂದು ಹೇಳಿದರು.ಮುಖ್ಯ ಅತಿಥಿಗಳಾಗಿ ಆಗಮಿಸಿದ ಪಿಜಿ ತಡಸದ ಮಾತನಾಡಿ, ಇಂದಿನ ದಿನಮಾನದಲ್ಲಿ ವಿಜ್ಞಾನ ತಂತ್ರಜ್ಞಾನ ಯಥೇಚ್ಛವಾಗಿ ಬೆಳೆಯುತ್ತಿದ್ದು ಹಾಗಾಗಿ ಗ್ರಂಥಾಲಯದಲ್ಲಿ ಕೇವಲ ಮುದ್ರತ ಪುಸ್ತಕಕ್ಕಿಂತ ಇಂದಿನ ದಿನಮಾನಕ್ಕೆ ತಕ್ಕಂತೆ ತಂತ್ರಜ್ಞಾನ ಅಳವಡಿಸಿಕೊಳ್ಳಬೇಕು ಜೊತೆಗೆ ಓದುಗರಲ್ಲಿ ತಾಂತ್ರಿಕ…
ಮುದ್ದೇಬಿಹಾಳ: ಪಟ್ಟಣದ ಹುಡ್ಕೋ ಬಡಾವಣೆಯ ೧೦ ನೇ ಅಡ್ಡ ರಸ್ತೆಯ ಉದ್ಯಾನವನದ ಬಳಿ ಇರುವ ನೂತನ ವರಮಾರುತೇಶ್ವರ ದೇವಸ್ಥಾನದ ಉದ್ಘಾಟನೆ ಹಾಗೂ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಅದ್ಧೂರಿಯಾಗಿ ಜರುಗಿತು.ಪಟ್ಟಣದ ಕಿಲ್ಲಾ ಗಲ್ಲಿಯಲ್ಲಿರುವ ಲಕ್ಷ್ಮೀ ಭಾವಿಯಲ್ಲಿ ವರಮಾರುತೇಶ್ವರರ ಮೂರ್ತಿಗೆ ಗಂಗಾ ಸ್ನಾನ ನೆರವೇರಿಸಿ, ವಿಶೇಶ ಪೂಜೆ ಸಲ್ಲಿಸಿ ಅಲ್ಲಿಂದ ಸರಾಫ್ ಬಜಾರ, ದ್ಯಾಮವ್ವ ದೇವಿ ದೇವಸ್ಥಾನ, ಬಸವೇಶ್ವರ ವೃತ್ತ, ಕಿತ್ತೂರು ರಾಣಿ ಚನ್ನಮ್ಮ ವೃತ್ತ ಮಾರ್ಗವಾಗಿ ದೇವಸ್ಥಾನದವರೆಗೆ ಅದ್ಧೂರಿ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯ ಉದ್ದಕ್ಕೂ ಕುಂಭ ಹೊತ್ತು ಮಹಿಳೆಯರು ಸಾಗಿದರೆ ಡಿಜೆ ಹಾಡಿಗೆ ಯುವಕರು ಸೇರಿದಂತೆ ಪುರುಷರು ಕುಣಿದು ಕುಪ್ಪಳಿಸುತ್ತ ಸಾಗಿದರು. ಮೆರವಣಿಗೆ ದೇವಸ್ಥಾನಕ್ಕೆ ತಲುಪಿದ ಬಳಿಕ ೨೫೦ ಮುತೈದೆಯರಿಗೆ ಭಾರತಿ ಮಲ್ಲಿಕಾರ್ಜುನ ತೆಗ್ಗಿನಮಠ ಕುಟುಂಬದವರು ಉಡಿ ತುಂಬಿದರು. ನಂತರ ಮೂರ್ತಿಯನ್ನು ಜಲಾಧೀವಾಸ, ಧಾನ್ಯಾಧೀವಾಸ, ಪುಷ್ಪಾಧೀವಾಸ, ಶಯನಾಧೀವಾಸದಲ್ಲಿರಿಸಿಲಾಯಿತು.ಶನಿವಾರ ಬೆಳಿಗ್ಗೆ ಭ್ರಾಹ್ಮೀ ಮಹೂರ್ತದಲ್ಲಿ ಗಣಹೋಮ, ರುದ್ರಹೋಮ, ವಾಸ್ತುಹೋಮ, ರುದ್ರಾಭಿಷೇಕದ ಜೊತೆಗೆ ವಿಶೇಶ ಪೂಜಾ ಕೈಂಕರ್ಯವನ್ನು ಲೊಟಗೇರಿಯ ಗುರುಮೂರ್ತಿ ದೇವರು, ವಿವೇಕಾನಂದ ಶಾಸ್ತಿç ಮತ್ತು…
ಮುದ್ದೇಬಿಹಾಳ: ಪ್ರಧಾನಿ ನರೇಂದ್ರ ಮೋದಿಯವರ ಆದೇಶದಂತೆ ಹರ್ಘರ್ ತಿರಂಗ ಯಾತ್ರೆಯ ಪೂರ್ವಭಾವಿ ಸಭೆಯನ್ನು ಭಾಜಪಾ ಮಂಡಲದಿಂದ ಹಮ್ಮಿಕೊಳ್ಳಲಾಗಿತ್ತು.ಈ ವೇಳೆ ಪಕ್ಷದ ಮಂಡಲ ಅದ್ಯಕ್ಷ ಜಗದೀಶ್ ಪಂಪಣ್ಣವರ ಪ್ರತಿ ಬೂತ್ ಮಟ್ಟದಲ್ಲಿ ಹರ್ಘರ್ ತಿರಂಗಾ ಹಮ್ಮಿಕೊಳ್ಳಬೇಕು ಎಂದು ಕರೆ ನೀಡಿದರು. ಜೊತೆಗೆ ಪ್ರತಿ ಜಿಲ್ಲಾ ಪಂಚಾಯತ ಮತ್ತು ತಾಲೂಕ ಪಂಚಾಯತ ಸಂಚಾಲಕ ಮತ್ತು ಸಹ ಸಂಚಾಲಕರನ್ನು ನೇಮಿಸಿ ರಾಷ್ಟ್ರ ದ್ವಜವನ್ನು ಎಲ್ಲ ಬೂತಿನ ಕಾರ್ಯಕರ್ತರಿಗೆ ತಲುಪಿಸಿದರು.ಈ ವೇಳೆ ತಾಲೂಕು ಕಾರ್ಯದರ್ಶಿ ಸಂಜು ಬಾಗೇವಾಡಿ, ಮಹಿಳಾ ಮೋರ್ಚಾ ಅದ್ಯಕ್ಷೆ ಸಂಗಮ್ಮ ದೇವರಳ್ಳಿ, ಯುವ ಮೋರ್ಚಾ ಅದ್ಯಕ್ಷರು ಗಿರೀಶಗೌಡ ಪಾಟೀಲ, ಗೌರಮ್ಮ ಹುನಗುಂದ, ನಾಗರಾಜ ಕಮತರ, ಶಿವರಾಜ ರಾಠೋಡ, ಪವನ ಲಮಾಣಿ, ಪ್ರೀತಿ ಕಂಬಾರ, ಗಂಗಮ್ಮ ಚೌದರಿ, ಕಾವೇರಿ ಕಂಬಾರ, ವಿಠ್ಠಲ್ ಖಾನಗೌಡರ, ಬಿಳೆನಸಿದ್ದ ವಡಿಯರ, ಡಾ. ಈರಣ್ಣ ಬಡಿಗೇರ ಸೇರಿದಂತೆ ಮತ್ತಿತರರು ಇದ್ದರು.
ಬಂಜಾರಾ ಸಂಘಟನಾ ಸಮಿತಿ ರಾಜ್ಯಾಧ್ಯಕ್ಷ ಪುಂಡಲೀಕ ಪವಾರ ಅಭಿಮತ ವಿಜಯಪುರ: ಪಂಜಾಬ್ ರಾಜ್ಯ ವಿರುದ್ಧ ದೇವಿಂದರ್ ಸಿಂಗ್ ಪ್ರಕರಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಲ್ಲಿ ಕೆನೆಪದರ (ಕ್ರಮಿಲೆಯರ್) ಜಾರಿಗೆ ತರಬೇಕು ಎಂದು ಹೇಳಿರುವ ಸುಪ್ರೀಂಕೋರ್ಟ್ ತೀರ್ಪು ಸಂವಿಧಾನದ ಸಾಮಾಜಿಕ ನ್ಯಾಯದ ಆಶಯಕ್ಕೆ ವಿರುದ್ಧವಾಗಿದೆ ಎಂದು ಬೆಂಗಳೂರಿನ ಭಾರತೀಯ ಬಂಜಾರಾ ಸಂಘಟನಾ ಸಮಿತಿ (ರಿ) ರಾಜ್ಯಾಧ್ಯಕ್ಷ ಪುಂಡಲೀಕ ಜ. ಪವಾರ ಖಂಡಿಸಿದ್ದಾರೆ.ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಪ್ರೀಂಕೋರ್ಟ್ ತೀರ್ಪಿನಲ್ಲಿರುವ ವಿವಾದಾತ್ಮಕ ಕೆನೆಪದರದ ಬಗೆಗಿನ ಅಂಶ ಸೇರಿದಂತೆ ಇತರ ವಿಷಯಗಳ ಬಗ್ಗೆ ಪರಿಶಿಷ್ಟ ಜಾತಿಯ ನಾಯಕರು ಮತ್ತು ಕಾನೂನು ತಜ್ಞರ ಜೊತೆ ಸಮಾಲೋಚನೆ ನಡೆಸಿ ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.ಮುಖ್ಯಮಂತ್ರಿಗಳು ಈಗಾಗಲೇ ತಿರಸ್ಕಾರಗೊಂಡಿರುವ ನ್ಯಾ. ಎ. ಜೆ. ಸದಾಶಿವ ಆಯೋಗದ ವರದಿಯ ಕುರಿತು ಹೇಳಿಕೆ ನೀಡದೆ,ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹಿಂದುಳಿದಿರುವಿಕೆ, ಪ್ರಾತಿನಿಧ್ಯ ಕುರಿತು ಸರ್ಕಾರದ ಬಳಿ ಪ್ರಾಯೋಗಿಕ ದತ್ತಾಂಶ ಇಲ್ಲದಿರುವುದರಿಂದ ಈ ವಿಚಾರದಲ್ಲಿ…
ವಿಜಯಪುರ: ಲಯನ್ಸ್ ಕ್ಲಬ್ ಆಪ್ ಬಿಜಾಪುರ ಪರಿವಾರದ ೨೦೨೪-೨೫ನೇ ಸಾಲಿನ ನೂತನ ಅಧ್ಯಕ್ಷರಾಗಿ ಶ್ರೀಮತಿ ಶಶಿಕಲಾ ಇಜೇರಿ, ಕಾರ್ಯದರ್ಶಿಯಾಗಿ ಶ್ರೇಯಶ್ ಮಹೇಂದ್ರಕರ ಹಾಗೂ ಖಜಾಂಚಿಯಾಗಿ ಶ್ರೀಮತಿ ಪುಷ್ಪಾ ಮಹಾಂತಮಠ ಆಯ್ಕೆಯಾಗಿದ್ದಾರೆ ಎಂದು ಜೋನ್ ಚೇರ್ಮನರಾದ ಶ್ರೀ ಅಶೋಕಕುಮಾರ ಜಾಧವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತುಂಗಭದ್ರಾ ಅಣೆಕಟ್ಟಿನ ಕ್ರೆಸ್ಟ್ ಗೇಟ್ ಪುನಃಸ್ಥಾಪಿಸಲು ಪ್ರಯತ್ನ | ಆತಂಕ ಬೇಡ | ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ಬೆಂಗಳೂರು: ತುಂಗಭದ್ರಾ ಜಲಾಶಯದ ಕ್ರೆಸ್ಟ್ ಗೇಟ್ಗಳ ಪೈಕಿ ಒಂದು ಕೊಚ್ಚಿಹೋಗಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರವು ರಾಜ್ಯದಲ್ಲಿನ ಎಲ್ಲಾ ಅಣೆಕಟ್ಟುಗಳ ಸ್ಥಿತಿಗತಿಯನ್ನು ಪರಿಶೀಲಿಸಲು ತಜ್ಞರ ಸಮಿತಿಯನ್ನು ರಚಿಸಲಿದೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸೋಮವಾರ ಹೇಳಿದ್ದಾರೆ.ತುಂಗಭದ್ರಾ ಅಣೆಕಟ್ಟಿನ ಕ್ರೆಸ್ಟ್ ಗೇಟ್ ನ್ನು ಪುನಃಸ್ಥಾಪಿಸಲು ಪ್ರಯತ್ನಗಳು ನಡೆಯುತ್ತಿವೆ. ಈ ಬಗ್ಗೆ ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಜಲಸಂಪನ್ಮೂಲ ಸಚಿವರು ಕೂಡ ಆಗಿರುವ ಡಿ ಕೆ ಶಿವಕುಮಾರ್ ಹೇಳಿದರು.ಕೊಪ್ಪಳ ಜಿಲ್ಲಾ ಕೇಂದ್ರ ಪಟ್ಟಣದ ಸಮೀಪವಿರುವ ತುಂಗಭದ್ರಾ ಜಲಾಶಯದ ಕ್ರೆಸ್ಟ್ ಗೇಟ್ಗಳಲ್ಲಿ ಒಂದು (19 ನೇ ಗೇಟ್) ಮೊನ್ನೆ ಶುಕ್ರವಾರ ಮಧ್ಯರಾತ್ರಿ ಅದರ ಸರಪಳಿ ಸಂಪರ್ಕ ಕಡಿತಗೊಂಡ ನಂತರ ಕೊಚ್ಚಿಕೊಂಡು ಹೋಗಿದ್ದು, ಭಾರಿ ಪ್ರಮಾಣದಲ್ಲಿ ನೀರು ಬರುತ್ತಿದ್ದರಿಂದ ಸುತ್ತಲಿನ ತಗ್ಗು ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.ಬೆಂಗಳೂರಿನಲ್ಲಿ ಸೋಮವಾರ ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 70…
ವಿಜಯಪುರ: ರಬಿನಾಳ ಗ್ರಾಮದ ಕೆರೆ ತುಂಬುವ ಯೋಜನೆಯ ಅಡಿಯಲ್ಲಿ ಜಮೀನು ಸ್ವಾಧೀನ ಪಡಿಸಿಕೊಂಡಿದ್ದು ಪರಿಹಾರ ನೀಡಲು ಶೀಘ್ರದಲ್ಲಿ ಅವಾರ್ಡ ಘೋಷಿಸುವಂತೆ ಒತ್ತಾಯಿಸಿ ನ್ಯಾಯಮೂರ್ತಿ ಲೋಕಾಯುಕ್ತರಾದ ಬಿ.ಎಸ್. ಪಾಟೀಲ ಅವರಿಗೆ ರೈತರ ನಿಯೋಗ ಮನವಿ ಸಲ್ಲಿಸಿತು.ಕ.ಸ.ನಂ ೬೭೦೧-೦೫ ಎ.ಗು ಶ್ರೀಮತಿ ಸರಸ್ವತಿ ಶಾಬಾದಿ, ಬಸವರಾಜ ಶ. ಶಾಬಾದಿ ಕ.ಸ.ನಂ. ೫೮ , ಚಂದ್ರಶೇಖರ ಬ. ಕಿರಸಾವಳಗಿ ಕ.ಸ.ನಂ.೫೭, ಜಯಶ್ರೀ ಆ. ಗೂಡೂರ ಕ.ಸ.ನಂ. ೬೦ ಹಾಗೂ ಇನ್ನಿತರರ ಗ್ರಾಮದ ಕೆರೆ ಭರ್ತಿಮಾಡಲು ನಮ್ಮ ಜಮೀನನನ್ನು ಸನ್ ೨೦೧೯ ರಲ್ಲಿ ಸ್ವಾಧಿನಪಡಿಸಿಕೊಂಡಿದ್ದು ಇಲ್ಲಿಯವರೆಗೂ ಅವಾರ್ಡ್ ಆಗಿರುವುದಿಲ್ಲ. ಇರುವ ಅಲ್ಪ ಸ್ವಲ್ಪ ಜಮೀನನ್ನು ಸನ್ ೨೦೧೯ ರಲ್ಲಿ ಸ್ವಾಧೀನ ಪಡಿಸಿಕೊಂಡ ಹಿನ್ನೆಲೆ ನಮ್ಮ ಕುಟುಂಬಗಳು ತೀರ್ವ ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ ಆದ್ದರಿಂದ ಸಂಬಂಧಿಸಿದ ಇಲಾಖೆಯವರಿಗೆ ಸೂಚಿಸಿ ಶೀಘ್ರದಲ್ಲಿ ಅವಾರ್ಡ್ ಮಾಡಿ ಸೂಕ್ತ ಪರಿಹಾರ ನೀಡುವಂತೆ ನಿರ್ದೇಶನ ನೀಡಬೇಕೆಂದು ವಿನಂತಿಸಿಕೊಂಡರು.ಈ ಸಂದರ್ಭದಲ್ಲಿ ರಾಚನಗೌಡ ಶಿ ಪಾಟೀಲ, ಸರಸ್ವತಿ ಶಾಬಾದಿ, ಬಸವರಾಜ ಶ ಶಾಬಾದಿ, ಚಂದ್ರಶೇಖರ ಕಿರಸಾವಳಗಿ, ಜಯಶ್ರೀ…
