Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ದೃಢ ಮನಸ್ಸು, ಕಠಿಣ ಪರಿಶ್ರಮ ಮತ್ತು ಶಿಸ್ತಿನಿಂದ ಮಾತ್ರ ಏನನ್ನಾದರೂ ಸಾಧಿಸಬಹುದು. ಶಿಸ್ತಿನ ಜೀವನಕ್ಕೆ ಒಳಪಡಿಸಿಕೊಂಡರೆ ಮಾತ್ರ ಜ್ಞಾನ ಸಂಪಾದನೆಯಾಗುತ್ತದೆ ಎಂದು ನಗರದ ಜ್ಞಾನ ಯೋಗಾಶ್ರಮದ ಬ್ರಹ್ಮಾನಂದ ಶ್ರೀಗಳು ಹೇಳಿದರು.ಸೋಮವಾರದಂದು ಜಿಲ್ಲಾ ಬಂಜಾರಾ ವಿದ್ಯಾವರ್ಧಕ ಸಂಘದ ದಿ.ಪ್ರಭಾಕರ ಮೆಮೋರಿಯಲ್ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಶಾಲಾ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ, ವಿದ್ಯಾರ್ಥಿಗಳ ಸ್ವಾಗತ ಹಾಗೂ ಶಾಲಾ ಸಂಸತ್ತಿನ ಚುನಾಯಿತ ಪ್ರತಿನಿಧಿಗಳಿಗೆ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ವಿದ್ಯಾರ್ಥಿ ಜೀವನದಲ್ಲಿ ಜ್ಞಾನ ಸಂಪಾದನೆಗೆ ವಿಪುಲ ಅವಕಾಶವಿರುತ್ತದೆ. ಅದನ್ನು ಸಂಗ್ರಹಿಸಿಕೊಂಡಲ್ಲಿ ಮುಂದೆ ಅದು ಬದುಕಿನ ಉಪಯೋಗಕ್ಕೆ ಬರುತ್ತದೆ ಎಂದರು.ಇಸಿಓ ಎಲ್.ಎಸ್.ಬಿರಾದಾರರವರು ಶಾಲಾ ಸಂಸತ್ತಿನ ಚುನಾಯಿತ ಪ್ರತಿನಿಧಿಗಳಿಗೆ ಪ್ರಮಾಣ ವಚನ ಭೋಧಿಸಿ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ದಿನದಲ್ಲಿ ಉತ್ತಮ ಅಧ್ಯಯನ ಉತ್ತಮ ಹವ್ಯಾಸ ರೂಢಿಸಿಕೊಂಡು, ಪರಿಪೂರ್ಣ ವ್ಯಕ್ತಿತ್ವ ಪಡೆಯಬೇಕು. ಕಠಿಣ ಪರಿಶ್ರಮ ಮತ್ತು ನಿಗದಿತ ದಿನಚರಿ ವ್ಯವಸ್ಥಿತವಾಗಿ ನಿರ್ವಹಿಸಿ…
ಇಂಡಿ:ಇಂಡಿಯ ನಿಂಬೆ ದೆಹಲಿಯಲ್ಲಿ ಮೂರು ದಿನಗಳ ಕಾಲ ಬಯೋಟೆಕ್ ಇಂಡಿಯಾ ಪ್ರದರ್ಶನ ಮೇಳದಲ್ಲಿ ಪ್ರದರ್ಶನ ಗೊಂಡಿದೆ.ಭಾರತದ ಪ್ರಮುಖ ವ್ಯಾಪಾರ ಮೇಳವು ನ್ಯಾಚುರಲ್ ಎಕ್ಷಪೋ ಇಂಡಿಯಾ ಸಾವಯವ ಮತ್ತು ನೈಸರ್ಗಿಕ ಉತ್ಪನ್ನಗಳ ಪ್ರದರ್ಶನದಲ್ಲಿ ಇಂಡಿ ನಿಂಬೆಯನ್ನು ತಡವಲಗಾ ಗ್ರಾಮದ ರೈತ ಭೀಮರಾಯ ಹಿರಾಪುರ ಸಾವಯುವ ನಿಂಬೆ ಬೆಳೆದು ಪ್ರದರ್ಶಿಸಿದ್ದಾರೆ.ಇಂಡಿಯ ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕ ಎಚ್.ಎಸ್.ಪಾಟೀಲ ಮತ್ತು ರೈತ ಭೀಮರಾಯ ಹಿರಾಪುರ ಕರ್ನಾಟಕ ಪ್ರತಿನಿಧಿಯಾಗಿ ಪಾಲ್ಗೊಂಡಿದ್ದರು.ರೈತರು,ಎಫ್ಪಿಒಗಳು, ಉತ್ಪಾದಕರು,ತಯಾರಕರು, ಖರೀದಿದಾರರು,ಆಮದುದಾರರು,ರಫ್ತುದಾರರು ಈ ಪ್ರದರ್ಶನದಲ್ಲಿ ಪಾಲ್ಗೊಂಡಿದ್ದರು.
ವಿಜಯಪುರ:ಇಂದಿನ ಪೀಳಿಗೆಯು ಶಿಸ್ತು ಸಂಯಮದಿಂದ ಇದ್ದರೆ ಏನಾದರೂ ಸಾಧನೆ ಮಾಡಲು ಸಾಧ್ಯ ಎಂದು ಧರ್ಮಗುರುಗಳಾದ ಮೌಲಾನಾ ಉಸಿಉಲ್ಲಾ ನುಡಿದರು.ವಿಜಯಪುರದ ಮೊಹಮ್ಮದಿಯ ನಾಥ್ ಕಮೀಟಿ ಶಾಖೆ ತಿಕೋಟಾ ಇವರ ವತಿಯಿಂದ ನಡೆದ ಜಿಲ್ಲಾ ಮಟ್ಟದ ನಾಥ್ ಹಾಗೂ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.ಇಂದಿನ ಯುವಕರು ದುಶ್ಚಟಗಳಿಗೆ ಬಲಿಯಾಗದೆ, ದೇಶ ಕಟ್ಟುವ ಕೆಲಸದಲ್ಲಿ ಪ್ರತಿಯೊಬ್ಬರು ತೊಡಗಬೇಕಿದೆ. ಆದ್ದರಿಂದ ಯುವಕರು ಜನರಲ್ಲಿ ಜಾಗೃತಿ ಮೂಡಿಸುವುದು ಅತಿ ಅವಶ್ಯಕವಾಗಿದೆ ಎಂದರು. ಇಂತಹ ಕಾರ್ಯಕ್ರಮಗಳನ್ನು ಮೇಲಿಂದಮೇಲೆ ಹಮ್ಮಿಕೊಳ್ಳುವುದರಿಂದ ಮಕ್ಕಳಲ್ಲಿ ಶೈಕ್ಷಣಿಕವಾಗಿ ವ್ಯಕ್ತಿತ್ವ ವಿಕಸನಗೊಳಿಸುವಲ್ಲಿ ಸಹಕಾರಿಯಾಗುತ್ತದೆ ಎಂದರು.ಈ ಸಂದರ್ಭದಲ್ಲಿ ನಾತ್ ಕಮಿಟಿ ಅಧ್ಯಕ್ಷರಾದ ಸೈಯ್ಯದ ಗಯ್ಯಾಸ ಪಾಷ್ಯಾ, ವಕ್ಫ ಮಂಡಳಿ ಅಧ್ಯಕ್ಷರಾದ ಡಾ.ಕೌಸರ ಅತ್ತಾರ, ಹಿರಿಯರಾದ ಹಾಜಿಲಾಲ್ ಕೊಟ್ಟಲಗಿ, ಯಾಕೂಬ ಜತ್ತಿ, ಪೀರಪಟೇಲ, ಜಹಾಂಗೀರ ಹಿಪ್ಪರಗಿ, ಜಾಕೀರ ಸುರ್ಕಿ, ಫಯಾಜ ಕಲಾದಗಿ, ಅಲ್ತಾಫ್ ಬಾಗವಾನ, ಇರ್ಫಾನ ಬಾಗವಾನ, ಮುಬಾರಕ ಜಮಖಂಡಿ, ಅಬ್ದುಲನಬಿ ಜಮಾದಾರ, ಸಾಧಿಕ ಜಾನ್ವೇಕರ, ಎ.ಜಿ. ಕೋಲಾರ, ಇಕ್ಬಾಲ್ ಖಾಜಿ, ಹಾಸೀಂ ಕಲಾದಗಿ, ಮುಜಮ್ಮಿಲ್ಲ…
ಚಡಚಣ: ದುಶ್ಚಟಗಳು ವ್ಯಕ್ತಿಯ ಬದುಕು, ಕುಟುಂಬ ಮಾತ್ರವಲ್ಲದೆ ಸಮಾಜದ ಮೇಲೂ ನೇರ ಪರಿಣಾಮ ಬೀರುತ್ತದೆ. ಮಾದಕ ವಸ್ತು ಸೇವನೆ ವ್ಯಕ್ತಿಯ ಮೆದುಳು, ದೈಹಿಕ, ಮಾನಸಿಕ ಆರೋಗ್ಯ ಹಾಗೂ ಸಾಮಾಜಿಕ ಬದುಕಿಗೂ ಮಾರಕವಾಗಿದೆ ಎಂದು ರೇವತಗಾಂವ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಮುಖ್ಯ ಗುರುಮಾತೆ ಎಂ.ಎಸ್.ಪಾಟೀಲ ಹೇಳಿದರು.ಸೋಮವಾರದಂದು ರೇವತಗಾಂವ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡಿದ್ದ ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು. ಮಾದಕ ದ್ರವ್ಯಗಳನ್ನು ವಿತರಿಸುವ ಜಾಲವನ್ನೂ ಮಟ್ಟಹಾಕಲು ಕಾನೂನಿನೊಂದಿಗೆ ಸಹಕರಿಸುವುದು, ಮಾದಕ ವಸ್ತುಗಳನ್ನು ಬಳಸುತ್ತಿರುವವರಿಗೆ ಅವುಗಳ ಮಾರಕ ಪರಿಣಾಮದ ಕುರಿತು ತಿಳುವಳಿಕೆ ನೀಡಿ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಮುಂದಾಗಬೇಕು ಎಂದರು.ಈ ವೇಳೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿ ಗ್ರಾಮೀಣ ಪುರ್ನವಸತಿ ಕಾರ್ಯಕರ್ತ ಎಸ್.ಎಂ.ಮಾಳಿ ಮಾತನಾಡುತ್ತ. ಅಮಲು ಸೇವನೆ ಒಂದು ರೀತಿಯಲ್ಲಿ ಫ್ಯಾಷನ್ ಎಂಬುದಾಗಿ ತಿಳಿದ ಯುವಕರು ಮಾದಕ ವಸ್ತುಗಳತ್ತ ಆಕರ್ಷಿತರಾಗಿ ನಿರಂತರ ಉಪಯೋಗಕ್ಕೆ ತೊಡಗುತ್ತಾರೆ. ತಿಳುವಳಿಕಾ ತರಗತಿ ಆಯೋಜನೆಯಿಂದ ಜಾಗೃತಿ ಮೂಡಿಸಲು…
ಸಿಂದಗಿ: ಸಂಸಾರ ನೌಕೆಯ ನಾವಿಕನಾಗಿ, ಕುಟುಂಬದ ರಕ್ಷಕನಾಗಿ, ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕನಾಗಿ, ಕುಟುಂಬಕ್ಕಾಗಿ ತಮ್ಮವರಿಗಾಗಿ ಹಗಲು ರಾತ್ರಿ ದುಡಿಯುವ ಏಕೈಕ ಜೀವ ಎಂದರೆ ಅಪ್ಪ ಎಂದು ನಾದಬ್ರಹ್ಮ ಖ್ಯಾತಿಯ ಸುವರ್ಣ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ.ಹಂಸಲೇಖ ಹೇಳಿದರು.ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬೋರಗಿಯ ನಬಿರೋಶನ್ ಪ್ರಕಾಶನ ವತಿಯಿಂದ ದಿ.ಖತಾಲಸಾಬ ಆಲಗೂರ ಇವರ ೨ನೇ ವರ್ಷದ ಪುಣ್ಯ ಸ್ಮರಣೆಯ ನಿಮಿತ್ಯವಾಗಿ ಬೆಂಗಳೂರಿನ ಕೋರಮಂಗಲದ ಕೆ.ಎಸ್.ಆರ್.ಪಿ ೪ನೇ ಬೆಟಾಲಿಯನ್ನಲ್ಲಿ ಹಮ್ಮಿಕೊಂಡ ಅಪ್ಪ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ತಂದೆಯ ಹೆಸರಿನಲ್ಲಿ ಅವರ ಪುಣ್ಯ ಸ್ಮರಣೆ ದಿನದಂದು ಅಪ್ಪ ಪ್ರಶಸ್ತಿ ಪ್ರದಾನ ಮಾಡುತ್ತಿರುವುದು ಶ್ಲಾಘನೀಯ ಎಂದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕೆ.ಎಸ್.ಆರ್.ಪಿಯ ಕಮಾಂಡೆಂಟ್ ಹಮಜಾಹುಸೇನ್ ಮಾತನಾಡಿ, ಇಂದಿನ ಮಕ್ಕಳಿಗೆ ಪಾಲಕರ ಮೇಲೆ ಗೌರವ, ಭಯ, ಭಕ್ತಿ ಇಲ್ಲದಾಗಿದೆ. ಜನ್ಮ ಕೊಟ್ಟ ತಂದೆ-ತಾಯಿಗಳನ್ನು ಕೊನೆಯ ದಿವಸಗಳಲ್ಲಿ ವೃದ್ರಾಶ್ರಮಗಳಲ್ಲಿ ದಿನ ಕಳೆಯುವಂತೆ ಮಾಡುತ್ತಿರುವುದು ನಿಜಕ್ಕೂ ದುರಂತವೇ ಸರಿ ಎಂದು ವಿಷಾದ ವ್ಯಕ್ತಪಡಿಸಿದರು.ಕಾರ್ಯಕ್ರಮದ ಆಯೋಜಕ ಹೆಡ್ಕಾನ್ಸ್ಟೇಬಲ್ ಮೌಲಾಲಿ…
ತಾಳಿಕೋಟಿ: ತಾಲೂಕಿನ ಪಡೇಕನೂರ ಗ್ರಾಮದ ಚೆನ್ನಪ್ಪಗೌಡ ಪಾಟೀಲ ಅವರ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ತಗಡಿನ ಶೆಡ್ಡಿನ ಮೇಲೆ ಮುಖ್ಯ ವಿದ್ಯುತ್ ತಂತಿ ಕತ್ತರಿಸಿ ಬಿದ್ದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದ ಭಾರತಿ ಮಾದರ ಹಾಗೂ ಮಗಳು ಭಾಗ್ಯಶ್ರೀ ಅವಳ ಕುಟುಂಬದವರಿಗೆ ಹೆಸ್ಕಾ ಇಲಾಖೆಯಿಂದ ಕೊಡಮಾಡಲಾದ ತಲಾ 5 ಲಕ್ಷ ರೂ. ಚೆಕ್ನ್ನು ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅವರು ಶನಿವಾರರಂದು ವಿತರಿಸಿದರು.5 ಲಕ್ಷ ರೂ.ದಂತೆ 10 ಲಕ್ಷ ರೂ. ಚೆಕ್ನ್ನು ಹಸ್ತಾಂತರಿಸಿದ ಲೋಕಾಯುಕ್ತ ನ್ಯಾಯಮೂರ್ತಿಗಳು ನಿನಗೆ ಇನ್ನೂ ಎರಡು ಗಂಡು ಮಕ್ಕಳಿವೆ ಅವರಿಗೆ ಉತ್ತಮ ಶಿಕ್ಷಣದ ಅವಶ್ಯಕತೆ ಇದೆ ಮತ್ತು ಅವರ ಭವಿಷ್ಯ ರೂಪಿಸುವ ಜವಾಬ್ದಾರಿಯು ನಿನ್ನ ಮೇಲೆ ಇದೆ.ಈ ಹಣವನ್ನು ಕೈಯಲ್ಲಿದ್ದರೆ ಖರ್ಚು ಆಗುತ್ತದೆ ಆ ಹಣವನ್ನು ಇಬ್ಬರ ಮಕ್ಕಳ ಹೆಸರಿನಲ್ಲಿ ಬ್ಯಾಂಕಿನಲ್ಲಿ ಡಿಫಾಸಿಟ್ ಮಾಡು ಮುಂದೆ ಮಕ್ಕಳು ದೊಡ್ಡವರಾದ ಮೇಲೆ ಅವರ ಭವಿಷ್ಯದ ಸಂದರ್ಭದಲ್ಲಿ ಅವಶ್ಯಕತೆ ಬಿದ್ದಾಗ ಬಳಕೆಗೆ ಬರುತ್ತದೆ ಎಂದು ತಿಳಿ ಹೇಳಿದ ಅವರು ಈ ವಿದ್ಯುತ್ಅವಘಡದಿಂದ…
ಸಿಂದಗಿ: ಕೃಷಿ ಇಲಾಖೆಯ ವತಿಯಿಂದ ಆ.೧೩ರಂದು ಬೆಳಿಗ್ಗೆ ೧೦ಗಂಟೆಗೆ ತಾಲೂಕಿನ ರಾಂಪುರ ಪಿಎ ಗ್ರಾಮದ ಶ್ರೀ ಆರೂಡಸಂಗನ ಬಸವೇಶ್ವರ ಮಠದಲ್ಲಿ ಕೃಷಿ ವಿಜ್ಞಾನಿಗಳಿಂದ ಕಬ್ಬು, ಹತ್ತಿ, ಹಾಗೂ ತೊಗರಿ ಬೆಳೆಗಳ ಬಗ್ಗೆ ನೂತನ ತಾಂತ್ರಿಕತೆಗಳ ಕುರಿತು ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮದ ಸಾನಿಧ್ಯವನ್ನು ಆರೂಢಮಠದ ನಿತ್ಯಾನಂದ ಮಹಾರಾಜರು ವಹಿಸಿಕೊಂಡು ಉದ್ಘಾಟನೆ ಮಾಡಲಿದ್ದಾರೆ. ಶಾಸಕ ಅಶೋಕ ಮನಗೂಳಿ ಅಧ್ಯಕ್ಷತೆ ವಹಿಸಿಕೊಳ್ಳುವರು. ವಿಜಯಪುರ ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ರಾಜಶೇಖರ ವಿಲಿಯಂ, ವಿಜ್ಞಾನಿಗಳಾದ ಸಂಜಯ ಪಾಟೀಲ, ವಿಜಯಪುರದ ಆರ್.ಬಿ.ಬೆಳ್ಳಿ, ಬಿ.ಟಿ.ನಾಡಗೌಡ, ಇಂಡಿಯ ಶಿವಶಂಕರಮೂರ್ತಿ, ಮಹಾಲಿಂಗಪುರದ ಎಂ.ವೈ.ಕಟ್ಟಿ ಉಪನ್ಯಾಸ ನೀಡಲಿದ್ದಾರೆ ಎಂದು ಸಹಾಯಕ ಕೃಷಿ ನಿರ್ದೇಶಕ ಎಚ್.ವಾಯ್.ಸಿಂಗೆಗೋಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಿಂದಗಿ: ಆರ್.ಡಿ.ಪಾಟೀಲ ಕಾಲೇಜಿನ ನಿವೃತ್ತ ದೈಹಿಕ ಶಿಕ್ಷಕ ಕೆ.ಎಚ್.ಸೋಮಾಪೂರ ಅವರನ್ನು ಅಂತರಾಷ್ಟ್ರೀಯ ಲಾಯಿನ್ಸ್ ಕ್ಲಬ್ ಗೋವಾ ಮತ್ತು ಕರ್ನಾಟಕ ೩೧೭ಬಿಯ ರೀಜನ್ ೬ರ ಜೋನ್ ಎರಡರ ವಿಭಾಗೀಯ ಚೇರ್ಮನ್ರಾಗಿ ಆಯ್ಕೆಯಾಗಿದ್ದಾರೆ.ಅವರಿಗೆ ಸಿಂದಗಿಯ ಲಾಯಿನ್ಸ್ ಕ್ಲಬ್ನ ಅಧ್ಯಕ್ಷ ಮಾಧು ಲೋಣಿ, ಖಜಾಂಚಿ ನಿವೃತ್ತ ಪ್ರಾಚಾರ್ಯ ಬಿ.ಪಿ.ಕರ್ಜಗಿ, ಕಾರ್ಯದರ್ಶಿ ಆಯ್.ಬಿ.ಬಿರಾದಾರ, ಪದವಿ ಕಾಲೇಜಿನ ಪ್ರಾಚಾರ್ಯ ಜಿ.ಎಸ್.ಕಡಣಿ, ಪಪೂ ಪ್ರಾಚಾರ್ಯ ಆರ್.ಬಿ.ಗೋಡಕರ, ಆರ್.ಡಿ.ಪಾಟೀಲ ಕಾಲೇಜಿನ ಪ್ರಾಚಾರ್ಯ ಬಿ.ಎಸ್.ಸಿಂಗನಳ್ಳಿ, ಡಾ.ಅಂಬರೀಷ್ ಬಿರಾದಾರ, ಪಿ.ಎಮ್.ಮಡಿವಾಳರ, ಎಸ್.ವಾಯ್.ಬೀಳಗಿ, ಎಂ.ಸಿ.ಹೊಸಮನಿ, ಜಿ.ಎಸ್. ಮಿರಗಿ ಹಾಗೂ ಕೆ.ಪಿ.ಬಿರಾದಾರ ಅಭಿನಂದಿಸಿ ಹರ್ಷವ್ಯಕ್ತಪಡಿಸಿದ್ದಾರೆ.
ಮುದ್ದೇಬಿಹಾಳ: ಸೆ.೧ ರಂದು ಪಟ್ಟಣದ ಹೇಮರಡ್ಡಿ ಮಲ್ಲಮ್ಮ ಮಂಗಲ ಕಾರ್ಯಾಲಯದಲ್ಲಿ ತಾಲೂಕ ರಡ್ಡಿ ನೌಕರ ಸಂಘದ ವತಿಯಿಂದ ೨೦೨೨-೨೩ ಮತ್ತು ೨೦೨೩-೨೪ ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.೯೫ ಕ್ಕಿಂತ ಹೆಚ್ಚಿನ ಅಂಕ ಗಳಿಸಿದ ಮುದ್ದೇಬಿಹಾಳ ತಾಲೂಕು ವ್ಯಾಪ್ತಿಯ ರಡ್ಡಿ ಸಮಾಜದ ವಿದ್ಯಾರ್ಥಿಗಳು ಮತ್ತು ೨೦೨೨-೨೩ನೇ ಸಾಲಿನಿಂದ ಅ.೩೧ ರವರೆಗೆ ನಿವೃತ್ತಿ ಹೊಂದಿದ ಮತ್ತು ಹೊಂದಲಿರುವ ತಾಲೂಕು ವ್ಯಾಪ್ತಿಯ ರಡ್ಡಿ ಸಮಾಜದ ಸರಕಾರಿ ನೌಕರರಿಗೆ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಂಡಿದ್ದು ಆಸಕ್ತ ವಿದ್ಯಾರ್ಥಿಗಳು ಮತ್ತು ನಿವೃತ್ತ ನೌಕರರು ಅ.೨೨ ರ ಒಳಗಾಗಿ ಈ ನಂಬರ್ ಗಳನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ. ೯೩೭೯೫೯೪೦೮೦, ೭೨೫೯೨೭೦೫೦೪, ೯೭೪೧೦೩೬೦೮೬, ೯೯೦೨೬೧೪೭೬೪.
ಸಿಂದಗಿ: ಗ್ರಂಥಾಲಯ ಎಂದರೆ ಜ್ಞಾನದ ಸಾಗರ, ಪುರಾಣ, ಇತಿಹಾಸ ಕಾಲದಿಂದಲೂ ಇಂದಿನ ಡಿಜಿಟಲ್ ಯುಗದವರೆಗೂ ಅನೇಕ ಪಂಡಿತರು, ಸಂಶೋಧಕರು, ಅನುಭಾವಿಗಳು ತಮ್ಮ ಶ್ರಮ, ಸಮಯ, ಜ್ಞಾನ ಉಪಯೋಗಿಸಿ ಮುಂದಿನ ಪೀಳಿಗೆಗೆ ಗ್ರಂಥಸ್ಥವಾಗಿ ಬರೆದು ಇಟ್ಟಿದ್ದಾರೆ ಎಂದು ನಿವೃತ್ತ ಗ್ರಂಥಪಾಲಕ ಸಿದ್ದಬಸು ಕುಂಬಾರ ಹೇಳಿದರು.ಸೋಮವಾರದಂದು ಪಟ್ಟಣದ ತಾಲೂಕಾ ಶಿಕ್ಷಣ ಪ್ರಸಾರಕ ಮಂಡಳಿಯ ಸಿ.ಎಂ.ಮನಗೂಳಿ ಕಲಾ ಮಹಾವಿದ್ಯಾಲಯದ ಗ್ರಂಥಾಲಯದಲ್ಲಿ ಸೋಮವಾರ ಹಮ್ಮಿಕೊಂಡ ರಾಷ್ಟ್ರೀಯ ಗ್ರಂಥಪಾಲಕರ ದಿನಾಚಾರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಂತಹ ಜ್ಞಾನ ದೇಗುಲವೇ ಗ್ರಂಥಾಲಯ. ಉತ್ತಮ ಹಾಗೂ ಸುಸಜ್ಜಿತ ಗ್ರಂಥಾಲಯ ಓದಿನ ಕಡೆಗೆ ನಮ್ಮನ್ನು ಸೇಳೆದುಕೊಳ್ಳುತ್ತದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಯುವ ಜನಾಂಗ ಓದಿಗೆ ಹೆಚ್ಚು ಪ್ರಾಮುಖ್ಯತೆ ನೀಡಲೇಬೇಕು. ಓದಿನಿಂದಲೇ ನಮ್ಮ ಬದುಕು ಉಜ್ವಲವಾಗುತ್ತದೆ ಎಂಬ ಪರಿಕಲ್ಪನೆ ಹೊಂದಬೇಕು. ಶಾಲೆ ಕಾಲೇಜುಗಳ ಮತ್ತು ನಗರದ ಅನೇಕ ಗ್ರಂಥಾಲಯದಲ್ಲಿ ವಿದ್ಯಾರ್ಥಿಗಳು ತಮ್ಮ ಬಿಡುವಿನ ಸಮಯವನ್ನು ಓದಿಗಾಗಿ ಉಪಯೋಗ ಮಾಡಿಕೊಳ್ಳಬೇಕು. ಇಂದು ಜಗತ್ತು ಅತ್ಯಂತ ವೇಗವಾಗಿ ಬೆಳವಣಿಗೆಯಾಗುತ್ತಿದೆ. ಜಗತ್ತಿನ ಜ್ಞಾನವನ್ನು ನಾವೇಲ್ಲ ಹೆಚ್ಚು ಹೆಚ್ಚು ಪಡೆದುಕೊಳ್ಳಬೇಕು…
