Author: editor.udayarashmi@gmail.com

ಇಂಡಿ: ತಾಲೂಕಿನ ಭೀಮಾನದಿ ಪಾತ್ರದ ಗ್ರಾಮಗಳಿಗೆ ಶಾಸಕ ಯಶವಂತ್ರಾಯಗೌಡ ಪಾಟೀಲ ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಿ ಪರಿಶೀಲಿಸಿ, ಅಗತ್ಯ ಕ್ರಮ ಕೈಗೊಳ್ಳುವ ಕುರಿತು ಅಧಿಕಾರಿಗಳಿಗೆ ಸೂಚಿಸಿದರು.ಈ ಸಂದರ್ಭದಲ್ಲಿ ಅಲ್ಲಿನ ಹಲವು ರೈತರು ಮಹಾರಾಷ್ಟ್ರದಿಂದ ನೀರು ಹರಿಬಿಟ್ಟ ಕಾರಣ ನದಿ ಪಾತ್ರದ ಜಮೀನಿನಲ್ಲಿ ನೀರು ನುಗ್ಗಿದ್ದು ಬೆಳೆ ನೀರಿನಲ್ಲಿ ಮುಳುಗಿ ಹಾನಿಯಾಗಿದೆ ಎಂದು ಶಾಸಕರ ಗಮನಕ್ಕೆ ತರುತ್ತಿದ್ದಂತೆ ಸ್ಥಳದಲ್ಲೇ ಇದ್ದ ಕಂದಾಯ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ್ ಹಾಗೂ ತಹಸೀಲ್ದಾರ ಬಿ ಎಸ್ ಕಡಕಭಾವಿ ಅವರಿಗೆ ಈ ಕುರಿತು ಕೂಡಲೇ ತೋಟಗಾರಿಕೆ, ಕೃಷಿ ಇಲಾಖೆಯ ಸಹಯೋಗದಲ್ಲಿ ಸರ್ವೇ ನಡೆಸಿ ಯಾವ ರೈತರ ಎಷ್ಟು ಮೌಲ್ಯದ ಬೆಳೆ ಹಾನಿಯಾಗಿದೆ ಎಂಬುದರ ಕುರಿತು ಪರಿಶೀಲಿಸಿ ವರದಿ ನೀಡುವಂತೆ ತಿಳಿಸಿದರು.ಪ್ರವಾಹ ಬಂದರೆ ಜನರಿಗೆ ತೊಂದರೆಯಾಗದಂತೆ ಏನು ಕ್ರಮ ಕೈಗೊಂಡಿದ್ದೀರಿ.ಜನರಿಗೆ ಈ ಕುರಿತು ಎಚ್ಚರಿಕೆಯಿಂದ ಇರಲು ತಿಳಿಸಿದ್ದೀರಿಯೇ ಎಂದು ಪ್ರಶ್ನಿಸಲಾಗಿ, ಇದಕ್ಕೆ ಉತ್ತರಿಸಿದ ಅಧಿಕಾರಿಗಳು ನದಿ ಪಾತ್ರದ ಗ್ರಾಮಗಳಿಗೆ ಎಚ್ಚರದಿಂದಿರಲು ಡಂಗುರ ಸಾರಲಾಗಿದೆ. ಗ್ರಾಮಲೆಕ್ಕಾಧಿಕಾರಿಗಳು, ಪಿಡಿಓ ಗಳು ಸೇರಿದಂತೆ ವಿವಿಧ…

Read More

ಸಿಂದಗಿ: ಇಂದಿನ ಆಧುನಿಕ ಜಗತ್ತಿನಲ್ಲಿ ನಮ್ಮ ಉತ್ತಮ ಆರೋಗ್ಯಕ್ಕೆ ಯೋಗ ಮತ್ತು ಧ್ಯಾನ ಅತ್ಯಂತ ಮುಖ್ಯವಾಗಿವೆ. ಎಲ್ಲ ಸಂಪತ್ತಿಗಿಂತ ಆರೋಗ್ಯ ಸಂಪತ್ತು ಬಹಳ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಸಿಂದಗಿಯ ಯೋಗೋತ್ಸವ ಸಮಿತಿ ಪಟ್ಟಣದ ಎಚ್.ಜಿ.ಪ್ರೌಢಶಾಲಾ ಆವರಣದಲ್ಲಿ ಆ.೧೬ ರಿಂದ ಸ.೫ರ ವರೆಗೆ ಸುಮಾರು ೨೧ ದಿನಗಳ ಕಾಲ ಉಚಿತ ಯೋಗ ಮತ್ತು ಆಧ್ಯಾತ್ಮಿಕ ಪ್ರವಚನವನ್ನು ಏರ್ಪಡಿಸಿದ್ದಾರೆ. ಸಿಂದಗಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಜನತೆ ಅದರಲ್ಲಿ ಪ್ರಮುಖವಾಗಿ ಇಂದಿನ ಯುವ ಜನಾಂಗ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಯೋಗೋತ್ಸವ ಸಮಿತಿ ಸದಸ್ಯ ಅಶೋಕ ಅಲ್ಲಾಪೂರ ಹೇಳಿದರು.ಪಟ್ಟಣದ ಸಿ.ಎಂ.ಮನಗೂಳಿ ಮಹಾವಿದ್ಯಾಲಯದಲ್ಲಿ ಸೋಮವಾರ ಹಮ್ಮಿಕೊಂಡ ಪತ್ರಿಕಾ ಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.ಹಿಮಾಲಯದಲ್ಲಿ ಸುಮಾರು ೬ ವರ್ಷಗಳ ಕಾಲ ಯೋಗಭ್ಯಾಸ ಮಾಡಿದ ನಿರಂಜನಶ್ರೀಗಳಿಂದ ಈ ಕಾರ್ಯಕ್ರಮ ಜರುಗುವುದು. ಪ್ರತಿ ದಿನ ಬೆಳಗ್ಗೆ ೫.೩೦ ಗಂಟೆಯಿಂದ ೬.೩೦ಗಂಟೆಯ ವರೆಗೆ ಯೋಗ ಶಿಬಿರ ಮತ್ತು ಪ್ರತಿ ದಿನ ಸಂಜೆ ೭.೦೦ ಗಂಟೆಯಿಂದ ೮.೦೦ರ ವರೆಗೆ ಆಧ್ಯಾತ್ಮಿಕ ಪ್ರವಚನ, ಭಜನೆ ನಡೆಯುವದು.…

Read More

ಮುದ್ದೇಬಿಹಾಳ: ಮನೆಯ ಮಹಡಿಯ ಮೇಲೆ ಸಿಕ್ಕಿಹಾಕಿಕೊಂಡಿದ್ದ ಸಾಕು ನಾಯಿಯೊಂದನ್ನು ರಕ್ಷಿಸುವಲ್ಲಿ ಇಲ್ಲಿನ ಅಗ್ನಿಶಾಮಕ ಸಿಬ್ಬಂದಿಗಳು ಸಫಲರಾಗಿದ್ದಾರೆ.ಪಟ್ಟಣದ ಮಹಾಂತೇಶ ನಗರದ ನಿವಾಸಿ ಮುರುಗೇಶ ಪಾಟೀಲರು ತಮ್ಮ ಜರ್ಮನ್ ಶಫರ್ಡ ಸಾಕು ನಾಯಿಯನ್ನು ಮನೆಯ ಮೇಲೆ ಕಟ್ಟಿದ್ದರು. ಕಟ್ಟಿದ ಹಗ್ಗವನ್ನು ಬಿಚ್ಚಿಕೊಂಡು ಬೇರೆ ಮನೆಯ ಮಾಳಿಗೆ ಹತ್ತಿ ಸಿಂಟೆಕ್ಸ್ ನಲ್ಲಿ ಬಿದ್ದು ಮೇಲೆ ಬರಲು ಸಾಧ್ಯವಾಗದೇ ಸಿಲುಕಿ ಒದ್ದಾಡುತ್ತಿತ್ತು. ಅದರ ಚೀರಾಟ ಜಾಸ್ತಿಯಾಗುತ್ತಿದ್ದಂತೆ ಗಮನಿಸಿದ ನಿವಾಸಿಗಳು ತಕ್ಷಣ ಅಗ್ನಿಶಾಮಕ ಇಲಾಖೆಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಸಿಂಟೆಕ್ಸ್ ನಲ್ಲಿನ ನೀರನ್ನು ಖಾಲಿ ಮಾಡಿ ಸಾಕು ನಾಯಿಯನ್ನು ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ. ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಸಿಬ್ಬಂದಿಗಳಾದ ನಾಗೇಂದ್ರ ರಾಠೋಡ, ಬಿ.ಬಿ.ನಾಟಿಕಾರ, ವಿ.ಎಲ್.ಪೂಜಾರಿ, ಕೆ.ಎಸ್.ಅಜಮನಿ, ಎನ್.ಬಿ.ಬಿರಾದಾರ, ಎಸ್.ಎಚ್.ಅವಟಿ, ಚಂದ್ರಶೇಖರ ಮಾದರ, ಜಾವೇದ ಜಮಖಂಡಿ, ವಾಯ್ ಎಸ್ ಗೌಡರ ಇದ್ದರು.

Read More

ಮುದ್ದೇಬಿಹಾಳ: ಪಟ್ಟಣದ ಹೆಸ್ಕಾಂ ಉಪವಿಭಾಗದ ವಿವಿಧ ಶಾಖೆಗಳಲ್ಲಿ ಸಹಾಯಕ ಅಭಿಯಂತರರಾಗಿ ಸುಮಾರು ೨೨ ವರ್ಷಗಳ ಕಾಲ ಸೇವೆ ಸಲ್ಲಿಸಿ ವಿಜಯಪುರದ ಬೃಹತ್ ಕಾಮಗಾರಿ ಘಟಕಕ್ಕೆ ವರ್ಗಾವಣೆಗೊಂಡಿರುವ ಎಸ್ ಎಸ್ ಪಾಟೀಲ ಅವರನ್ನು ಇಲಾಖೆಯ ಸಿಬ್ಬಂದಿ, ವಿದ್ಯುತ್ ಗುತ್ತಿಗೆದಾರರ ಸಂಘ, ಹೊರಗುತ್ತಿಗೆ ನೌಕರರು ಇಲ್ಲಿನ ಹೆಸ್ಕಾಂ ಕಚೇರಿಯಲ್ಲಿ ಸನ್ಮಾನಿಸಿ ಗೌರವಿಸಿ ಬೀಳ್ಕೊಟ್ಟರು.ಈ ವೇಳೆ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ ಆರ್ ಎನ್ ಹಾದಿಮನಿ,ಲೆಕ್ಕಾಧಿಕಾರಿ ಬಿ.ಎ.ಮಡಿವಾಳರ, ಶಾಖಾಧಿಕಾರಿಗಳಾದ ಎಂ.ಎಸ್.ತೆಗ್ಗಿನಮಠ, ಆರ್.ಬಿ.ಹಿರೇಮಠ ಮತ್ತು ಸಂತೋಷ ನಡಿಗೇರಿ, ಮೇಲ್ವಿಚಾರಕರಾದ ಎಸ್.ಎಂ.ಹಾಲ್ಯಾಳ ಮತ್ತು ಚಂದ್ರಶೇಖರ ಬೇಲಿಹಾಳ, ಆರ್.ಎನ್.ನಾಯಕಮಕ್ಕಳ, ಸೋಮು ಗಸ್ತಿಗಾರ, ರಾಹುಲ ಪಾದಗಟ್ಟಿ, ಬಿ.ಸಿ.ಹಿರೇಮಠ, ಸಿ.ಬಿ.ನಾಗರಬೆಟ್ಟ, ಗುತ್ತಿಗೆದಾರರ ಸಂಘದ ವೀರೇಶ ಗುರುಮಠ, ಮಲ್ಲಣ್ಣ ಮಡಿಕೇಶ್ವರ, ಸಂತೋಷ ಶಿವಯೋಗಿಮಠ ಹೊರಗುತ್ತಿಗೆ ನೌಕರರಾದ ಅಣ್ಣಯ್ಯ ಸರಗಣಾಚಾರಿ, ಮಂಜುನಾಥ ಜಾಲವಾದಿ, ಲೋಕೇಶ ಚಲವಾದಿ, ಸುಶೀಲ ಪಾದಗಟ್ಟಿ, ಪ್ರಶಾಂತ ಹಿರೇಮಠ, ಬಸವರಾಜ ದಳವಾಯಿ ಸೇರಿದಂತೆ ಮತ್ತೀತರರು ಇದ್ದರು.

Read More

ಯಡ್ರಾಮಿ-ಜೇವರ್ಗಿ ತಾಲೂಕು ಗಾಣಿಗ ಸಮಾಜದಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಯಡ್ರಾಮಿ: ಸಮಾಜದಲ್ಲಿನ ಯುವಕರಿಗೆ ಶಿಕ್ಷಣ ಹಾಗೂ ಉದ್ಯೋಗ ದೊರಕಿಸುವ ನಿಟ್ಟಿನಲ್ಲಿ ಸಂಘಟನೆಯ ಬೆಳವಣಿಗೆಗೆ ಮುಂದಾಗಬೇಕು. ಆದರೆ ಸಂಘಟನೆ ಇನ್ನುಳಿದ ಜಾತಿ ಅಥವಾ ಸಮಾಜದ ವಿರುದ್ದವಾಗಿರದೆ ಕಷ್ಟಕ್ಕೆ ಸ್ಪಂದಿಸುವಂತಾಗಬೇಕು ಎಂದು ಗಾಣಿಗ ಗುರು ಪೀಠ, ವಿಜಯಪುರದ ವನಶ್ರೀ ಸಂಸ್ಥಾನ ಮಠದ ಶ್ರೀ ಗುರುಬಸವಕುಮಾರ ಮಹಾಸ್ವಾಮಿಗಳು ಹೇಳಿದರು.ಯಡ್ರಾಮಿಯಲ್ಲಿ ರವಿವಾರ ಯಡ್ರಾಮಿ-ಜೇವರ್ಗಿ ತಾಲೂಕು ಗಾಣಿಗ ಸಮಾಜ ಯುವ ಘಟಕದಿಂದ ಯಡ್ರಾಮಿ ಯುವ ಘಟಕ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಆಯಸ್ಸು ಮುಗಿದ ಮೇಲೆ ಎಲ್ಲವೂ ಶೂನ್ಯ. ಇರುವಾಗಲೇ ಒಳ್ಳೆಯ ಕಾರ್ಯ ಮಾಡುವ ನಿಜ ಬದುಕು ನಿಮ್ಮದಾಗಿರಲಿ. ದ್ವೇಷ, ಅಸೂಯೆ ಬಿಟ್ಟು ಸಮಾಜದ ಬೆಳವಣಿಗೆಗೆ ಮುಂದಾಗಬೇಕು. ಹಿರಿಯರ ಮಾರ್ಗದರ್ಶನ ಹಾಗೂ ಕಿರಿಯರ ಸಲಹೆಯೊಂದಿಗೆ ಸಮಾಜದ ಅಭಿವೃದ್ಧಿಗೆ ಪ್ರತಿಯೊಬ್ಬರು ಶ್ರಮಿಸಬೇಕು ಎಂದರು.ಇದಕ್ಕೂ ಪೂರ್ವದಲ್ಲಿ ಹಿರಿಯ ಮುಖಂಡ ಮಲ್ಲಿನಾಥಗೌಡ ಪಾಟೀಲ ಯಲಗೋಡ ಮಾತನಾಡಿ, ಇಂದಿನ ರಾಜಕೀಯ ಮೊದಲಿನಂತಿಲ್ಲ. ಆದ್ದರಿಂದ ಯುವಕರು ರಾಜಕೀಯದ ಸಹವಾಸಕ್ಕೆ ಹೋಗದೆ…

Read More

ದೇವರಹಿಪ್ಪರಗಿ: ಪಟ್ಟಣದ ಎರೆಜಮೀನುಗಳಿಗೆ ಹಾಗೂ ಕನ್ನೋಳ್ಳಿ, ಯರನಾಳ, ಇಂಗಳಗಿ, ಹರನಾಳ ಬಮ್ಮನಳ್ಳಿ, ಮುಳಸಾವಳಗಿ, ಮಾರ್ಕಬ್ಬಿನಹಳ್ಳಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಎತ್ತಿನಗಾಡಿ(ಚಕ್ಕಡಿ) ರಸ್ತೆಗಳನ್ನು ಜಾಲಿಗಿಡಗಂಟಿಗಳಿಂದ ಮುಕ್ತಗೊಳಿಸುವುದು ಹಾಗೂ ಮಳೆಯಿಂದ ಬಿದ್ದ ಕೊರೆಗಳನ್ನು ಸರಿಪಡಿಸಿ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸುವಂತೆ ರೈತರು ಆಗ್ರಹಿಸಿ ಗ್ರೇಡ್-2 ತಹಶೀಲ್ದಾರ ಎಸ್.ಎಚ್. ರಾಠೋಡ ಅವರಿಗೆ ಮನವಿ ಸಲ್ಲಿಸಿದರು.ಪಟ್ಟಣದ ತಹಶೀಲ್ದಾರ ಕಚೇರಿಗೆ ಸೋಮವಾರ ಆಗಮಿಸಿದ ರೈತರು ರಸ್ತೆಯಲ್ಲಿನ ಕೊರೆಗಳು ಹಾಗೂ ಮುಳ್ಳಿನ ಗಿಡಗಂಟಿಗಳ ತೆರವುಗೊಳಿಸಲು ಆಗ್ರಹಿಸಿದರು.ಈ ಸಂದರ್ಭದಲ್ಲಿ ರೈತಪ್ರತಿನಿಧಿ ಅಜೀಜ್ ಯಲಗಾರ ಮಾತನಾಡಿ, ಎರೆ ಜಮೀನುಗಳು ಹಾಗೂ ವಿವಿಧ ಗ್ರಾಮಗಳಿಗೆ ತೆರಳುವ ಎತ್ತಿನಗಾಡಿ (ಚಕ್ಕಡಿ)ರಸ್ತೆ ಉತ್ತಮವಾಗಿದ್ದು, ಆದರೆ ರಸ್ತೆಯ ಎಡ ಬಲಗಳಲ್ಲಿ ಜಾಲಿಗಿಡಗಳು ಬೃಹದಾಕಾರವಾಗಿ ಬೆಳೆದ ರಸ್ತೆಯನ್ನು ಕಿರಿದಾಗಿಸಿವೆ.ರಸ್ತೆಯ ಮೂಲಕ ಚಕ್ಕಡಿ ಹಾಗೂ ಬೈಕ್ಗಳಲ್ಲಿ ತೆರಳಬೇಕೆಂದರು ಪ್ರಯಾಣದಲ್ಲಿ ಮುಳ್ಳು ಚುಚ್ಚಿ ಗಾಯಗಳಾಗುತ್ತಿವೆ. ಇನ್ನೂ ಜಾಲಿಗಿಡಗಳ ಟೊಂಗೆಗಳು ಉದ್ದಾಗಿ ಬೆಳೆದು ರಸ್ತೆಯನ್ನು ಅತೀಕ್ರಮಿಸಿ ಅಪಘಾತಗಳಿಗೆ ಕಾರಣವಾಗುತ್ತಿವೆ. ಜೊತೆಗೆ ಮಳೆಯಿಂದ ರಸ್ತೆಗಳಲ್ಲಿ ಕೊರೆಗಳು ಬಿದ್ದಿದ್ದು ಎತ್ತಿನಗಾಡಿ ಬೀಳುವ ಸಂಭವ ಇರುತ್ತದೆ. ಈ ನಿಟ್ಟಿನಲ್ಲಿ…

Read More

ಮನೆ-ಮನೆಗಳಲ್ಲಿ ರಾಷ್ಟ್ರಧ್ವಜ ಹಾರಿಸಿ :ಡಿಸಿ ಟಿ.ಭೂಬಾಲನ್S***ವಿಜಯಪುರ ಜಿಲ್ಲೆಯಲ್ಲಿ ಹರ್ ಘರ್ ತಿರಂಗಾ ಅಭಿಯಾನ ವಿಜಯಪುರ: ಜಿಲ್ಲೆಯಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡ ಹರ-ಘರ ತಿರಂಗಾ ಕಾರ್ಯಕ್ರಮವನ್ನು ಅಧಿಕಾರಿ-ಸಿಬ್ಬಂದಿಗಳು, ವಿದ್ಯಾರ್ಥಿಗಳು, ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಮನೆ-ಮನೆಗಳಲ್ಲಿ ರಾಷ್ಟ್ರಧ್ವಜ ಹಾರಿಸಿ, ರಾಷ್ಟ್ರ ಪ್ರೇಮವನ್ನು ಅಭಿವ್ಯಕ್ತಗೊಳಿಸುವ ಮೂಲಕ ಅತ್ಯಂತ ಸಂಭ್ರಮದಿಂದ ಹಮ್ಮಿಕೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಕರೆ ನೀಡಿದ್ದಾರೆ.ಜಿಲ್ಲೆಯಲ್ಲಿ ಹರ-ಘರ ತಿರಂಗಾ ಅಭಿಯಾನ ಯಶಸ್ವಿಗೊಳಿಸಲು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿ ಅನುಷ್ಠಾನಗೊಳಿಸಲು ವಿವಿಧ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಆ.೧೩ರಂದು ತಿರಂಗಾ ಕ್ಯಾನ್ವಾಸ್: ಸ್ಥಳೀಯ ಭಾಷೆಗಳಲ್ಲಿ ಹರ್-ಘರ್ ತಿರಂಗಾ, ಜೈಹಿಂದ್, ಘೊಷವಾಕ್ಯಗಳನ್ನು ಬರೆಯುವುದರೊಂದಿಗೆ ಅಭಿಯಾನ ಕೈಗೊಳ್ಳುವುದು, ಅಭಿಯಾನದ ನಂತರ ಅಧಿಕೃತ ಕ್ಯಾನ್ವಾಸ್‌ನ ಹೈ ರೆಸಲ್ಯೂಶನ್ ಛಾಯಾಚಿತರವನ್ನು ಸಂಸ್ಕೃತಿ ಸಚಿವಾಲಯ ವೆಬ್‌ಸೈಟ್‌ನಲ್ಲಿ ಹಂಚಿಕೊಳ್ಳುವುದು. ತಿರಂಗಾ ಯಾತ್ರೆ, ಮ್ಯಾರಾಥಾನ್ ಓಟ ಹಾಗೂ ಬೈಕ್, ಕಾರ್ ಸೈಕಲ್ ಮೂಲಕ ತಿರಂಗಾ ರ‍್ಯಾಲಿ ಆಯೋಜಿಸುವುದು. ಸೆಲ್ಪಿಯೊಂದಿಗೆ ತಿರಂಗಾ ಪ್ರತಿಜ್ಞೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ವಿವಿಧ ಅಧಿಕಾರಿ-ಸಿಬ್ಬಂದಿಗಳು, ಸ್ವಸಹಾಯ ಸಂಘ-ಸಂಸ್ಥೆಗಳು, ಶಾಲಾ…

Read More

ವಿಜಯಪುರ: “ಕುಮಾರವ್ಯಾಸ, ಕುಮಾರವಾಲ್ಮೀಕಿ, ರನ್ನ , ಪಂಪ, ನಾಗಚಂದ್ರ ಮುಂತಾದ ಕವಿಗಳು ಸೇರಿದಂತೆ ಕಾವ್ಯ ಬರೆದವರು ಉತ್ತರ ಕರ್ನಾಟಕ ಭಾಗದವರು. ಆದರೆ, ಅದನ್ನು ವಾಚನ ಮಾಡುತ್ತಿರುವವರು ಬೆಂಗಳೂರು, ಮೈಸೂರಿನವರು ಎಂದು ಕಲ್ಯಾಣರಾವ್ ದೇಶಪಾಂಡೆ ಹೇಳಿದರು.ರವಿವಾರ ನಗರದ ಬಿಡಿಇ ಸೊಸೈಟಿಯಲ್ಲಿ ಅಖಿಲ ಭಾರತೀಯ ‘ಸಾಹಿತ್ಯ ಪರಿಷದ್(ರಿ) ವಿಜಯಪುರ’ ಗುರುಪೂರ್ಣಿಮ ಅಂಗವಾಗಿ ಆಯೋಜಿಸಿದ ‘ಕುಮಾರವ್ಯಾಸ ಭಾರತ ಗಮಕ’ ಕಾರ್ಯಕ್ರಮದಲ್ಲಿ ಹಿರಿಯ ಗಮಕಿ ಶಾಂತಾಬಾಯಿ ಕೌತಳಾ ಕುಮಾರವ್ಯಾಸ ಭಾರತದ ವಿರಾಟ ಪರ್ವದ ಕಾವ್ಯವನ್ನು ಗಾಯನ ಮಾಡಿದರು. ಕಲ್ಯಾಣರಾವ್ ದೇಶಪಾಂಡೆ ಅದನ್ನು ವ್ಯಾಖ್ಯಾನಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ಉತ್ತರ ಕರ್ನಾಟಕದಲ್ಲಿ ವಿಜಯಪುರನಲ್ಲಿ ಮಾತ್ರ ಗಮಕ ಉಳಿದಿದೆಯಂದು’ ಎಂದು ತಿಳಿಸಿದರು.ಶರಣ ಸಾಹಿತ್ಯ ಪರಿಷತ್ತಿನ ಯುವವೇದಿಕೆ ಅಧ್ಯಕ್ಷ ಅಮರೇಶ ಸಾಲಕ್ಕಿ ಮಾತನಾಡಿ’ ಸಾಹಿತ್ಯ ಪ್ರಕಾರದಲ್ಲಿ ಗಮಕ ಅತ್ಯಂತ ಪವಿತ್ರವಾದ ಪ್ರಕಾರವಾಗಿದ್ದು ಇದನ್ನು ಮುಂದಿನ ಪೀಳಿಗೆಗೂ ತಲುಪಿಸುವ ನಿಟ್ಟಿನಲ್ಲಿ ‘ಅಖಿಲ ಭಾರತೀಯ ಸಾಹಿತ್ಯ ಪರಿಷದ್(ರಿ) ವಿಜಯಪುರ’ ಪ್ರಯತ್ನವನ್ನು ಶ್ಲಾಘಿಸಿದರು. ‘ಸಾತ್ವಿಕ ಸಾಹಿತ್ಯ ಮತ್ತು ರಾಷ್ಟ್ರದ ಏಕತೆ ದೃಷ್ಠಿಯಿಂದ ಅಭಾಸಾಪ ಕಾರ್ಯನಿರ್ವಹಿಸುತ್ತಿದೆ” ಎಂದು…

Read More

ವಿಜಯಪುರ: ಸರ್ಕಾರಿ ಹಾಗೂ ಅಮಾಯಕರ ಆಸ್ತಿಗಳನ್ನು ಕಬಳಿಸುವ ಸಾಧನವಾಗಿ ಮಾರ್ಪಟ್ಟಿರುವ ವಕ್ಫ್ ಕಾಯ್ದೆಗೆ ತಿದ್ದುಪಡಿ ವಿಧೇಯಕವನ್ನು ಮಂಡಿಸಿರುವ ಕೇಂದ್ರ ಸರ್ಕಾರದ ನಿರ್ಣಯ ಸ್ವಾಗತಾರ್ಹ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದ್ದಾರೆ.ವಕ್ಫ್ ಮಂಡಳಿಗಳು ಮತ್ತು ವಕ್ಫ್ ಆಸ್ತಿಗಳಿಗೆ ಅನಿಯಂತ್ರಿತ ಅಧಿಕಾರಕ್ಕೆ ಮಿತಿಯನ್ನು ತರುವ ನಿಟ್ಟಿನಲ್ಲಿ ವಕ್ಫ್ ಕಾಯ್ದೆ ತಿದ್ದುಪಡಿ ಅತ್ಯವಶ್ಯವಾಗಿತ್ತು. ಈ ಅಸಾಂವಿಧಾನಿಕ ವಕ್ಫ್ ಕಾಯ್ದೆಯನ್ನು ರದ್ದುಗೊಳಿಸುವಂತೆ ಕೋರಿ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಜಿ ಅವರಿಗೆ ೪-೯-೨೦೨೩ ರಂದು ಪತ್ರ ಬರೆದಿದ್ದೆ. ಗುರುವಾರ (೮-೮-೨೦೨೪) ವಕ್ಫ್ ಕಾಯ್ದೆ ತಿದ್ದುಪಡಿ ವಿಧೇಯಕವನ್ನು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವರಾದ ಕಿರಣ್ ರಿಜುಜ್ ಅವರು ಲೋಕಸಭೆಯಲ್ಲಿ ಮಂಡಿಸಿರುವುದು ಸ್ವಾಗತಾರ್ಹ ನಿರ್ಣಯವಾಗಿದೆ.ಈ ಮಸೂದೆ ಅಂಗಿಕಾರಗೊಂಡರೆ, ವಕ್ಫ್ ಮಂಡಳಿ ಮನಸ್ಸಿಗೆ ಬಂದಂತೆ ತಮಗೆ ಬೇಕಾದ ಆಸ್ತಿಗಳನ್ನು ಕಬಳಿಸುವ ಹುನ್ನಾರ ತಪ್ಪಿಸಬಹುದು. ಅಕ್ರಮವಾಗಿ ಆಸ್ತಿಗಳನ್ನು ತಮ್ಮದೆಂದು ಆದೇಶ ಹೊರಡಿಸುವುದನ್ನು ಪ್ರಶ್ನಿಸಲು ಅವಕಾಶ ದೊರೆಯುತ್ತದೆ. ಇದರಿಂದ ಅಮಾಯಕರಿಗೆ ಹಾಗೂ ಸರ್ಕಾರಕ್ಕೆ ಆಗುತ್ತಿರುವ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಅನುಕೂಲವಾಗುತ್ತದೆ ಎಂದು ತಿಳಿಸಿದ್ದಾರೆ.

Read More

ಇಂಡಿಯಲ್ಲಿ ರಾಜಕೀಯ ಚದುರಂಗದಾಟ | ಗದ್ದುಗೆ ಏರಲು ಕೈ-ಕಮಲ ಪೈಪೋಟಿ – ಶಂಕರ‌ ಜೆ ಎಮ್, ಇಂಡಿಇಂಡಿ: ಹಲವಾರು ರಾಜಕೀಯ ಮೇಲಾಟ, ಪರಸ್ಪರ ಆರೋಪ, ಪ್ರತ್ಯಾರೋಪ ಜಿದ್ದಾಜಿದ್ದಿನ ಹೋರಾಟ‌ ಹಾಗೂ ರಾಜಕಾರಣದಲ್ಲಿ ಹೊಂದಾಣಿಕೆ ಎಂಬ ಮಾತು ಇತ್ತೀಚಿಗೆ ಸಾಮಾನ್ಯ ಎಂಬಂತಾಗಿದೆ. ಆದರೆ ಅದೆಲ್ಲಕ್ಕೂ ಮೀರಿದ ಭೀಮಾತೀರದ ‌ಖ್ಯಾತಿಯ ಇಂಡಿ ಪುರಸಭೆಯಲ್ಲಿ ಇದೀಗ ರಾಜಕೀಯ ಚದುರಂಗದ ಆಟ ಜೋರಾಗಿದೆ. ಚೆಕ್ ಮೆಟ್ ಹೇಳವರಾರು..? ಎಂಬುದು ಬಾರಿ ಕೂತುಹಲ‌ ಮೂಡಿದೆ.ಹೌದು, ಭವಿಷ್ಯದ ಜಿಲ್ಲಾ ಕೇಂದ್ರದ‌ ಘೋಷಣೆ ಹಾಗೂ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷ ಮೀಸಲಾತಿ ನಿಗದಿ ಬಗ್ಗೆ ಜನರು ಅತಿಯಾದ ನಿರೀಕ್ಷೆಯಲ್ಲಿದ್ದರು. ಅದಕ್ಕೆ ರಾಜ್ಯ ಸರಕಾರ ಹಸಿರು ‌ನಿಶಾನೆ‌ ತೋರಿದೆ. ಆದರೆ ಇಂಡಿ ಪುರಸಭೆ‌‌ ಅಧ್ಯಕ್ಷ ಉಪಾಧ್ಯಕ್ಷ ಇಲ್ಲದಿರುವುದರಿಂದ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದೆ. ಆ.೫ ರಂದು ರಾಜ್ಯ ಸರ್ಕಾರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಮೀಸಲಾತಿ ಪ್ರಕಟಿಸುತ್ತಿದ್ದಂತೆ ಪಟ್ಟಣದ ಪುರಸಭೆ ಚುಕ್ಕಾಣಿ ಹಿಡಿಯುವುದು ಬಿಜೆಪಿ, ಕಾಂಗ್ರೆಸ್ ಪಕ್ಷಕ್ಕೀಗ ಪ್ರತಿ಼ಷ್ಠೆಯಾಗಿ ಪರಿಣಮಿಸಿದೆ.ಪಟ್ಟಣದ ಪುರಸಭೆಯ ಅಧ್ಯಕ್ಷ ಸ್ಥಾನಕ್ಕೆ…

Read More