Author: editor.udayarashmi@gmail.com

ಸಾರ್ವಜನಿಕರ ಸದುಪಯೋಗ ಪಡೆರಲು ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಕರೆ ವಿಜಯಪುರ: ಕರ್ನಾಟಕದ ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಆ.೨೨ರಂದು ಬೆಳಿಗ್ಗೆ ೧೦ ರಿಂದ ೧-೩೦ರವರೆಗೆ ಹಾಗೂ ಮಧ್ಯಾಹ್ನ ೨-೩೦ ರಿಂದ ೫ ಗಂಟೆಯವರೆಗೆ ನಗರದ ಸ್ಟೇಶನ್ ರಸ್ತೆಯ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ ವಿಚಾರಣೆ ನಡೆಸಲಿದ್ದು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ತಮ್ಮ ಸಮಸ್ಯೆ-ಅಹವಾಲುಗಳಿಗೆ ಪರಿಹಾರ ಪಡೆದುಕೊಳ್ಳುವಂತೆ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಕೋರಿದ್ದಾರೆ.ಸರ್ಕಾರಿ ಅಧಿಕಾರಿ-ನೌಕರರು ಕಾನೂನು ರಿತ್ಯ ಕಾರ್ಯ ಮಾಡಲು ವಿಳಂಬವಾಗುತ್ತಿದ್ದಲ್ಲಿ, ಅಥವಾ ಅಧಿಕಾರಿ-ನೌಕರರು ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ವೃಥಾ ತೊಂದರೆ ಕೊಡುವುದು ಅಥವಾ ಇನ್ನಾವುದೇ ತರಹದ ದುರಾಡಳಿತದಲ್ಲಿ ತೊಡಗಿದ್ದಲ್ಲಿ ತೊಂದರೆಗೊಳಗಾದ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಲಿಖಿತ ರೂಪದಲ್ಲಿ ದಾಖಲೆ, ಸಾಕ್ಷಾಧಾರಗಳೊಂದಿಗೆ ಸಲ್ಲಿಸಿ ಬಗೆಹರಿಸಿಕೊಳ್ಳಬಹುದಾಗಿದೆ.ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ ತನಿಖೆ-ವಿಚಾರಣೆಗೆ ಬಾಕಿ ಇರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ಕಾನೂನು ರಿತ್ಯ ಆ.೨೩ರಂದು ಬೆಳಿಗ್ಗೆ ೧೦ ರಿಂದ ಮಧ್ಯಾಹ್ನ ೧-೩೦ರವರೆಗೆ ಮತ್ತು ಮಧ್ಯಾಹ್ನ…

Read More

ವಿಜಯಪುರ: ಅನರ್ಹ ಕುಟುಂಬಗಳು ಸರ್ಕಾರಕ್ಕೆ ತಪ್ಪು ಮಾಹಿತಿ ನೀಡಿ ಬಿಪಿಎಲ್ ಪಡಿತರ ಚೀಟಿಗಳನ್ನು ಪಡೆದಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದ್ದು, ಸರ್ಕಾರದ ಮಾನದಂಡಗಳ ಪ್ರಕಾರ ಅರ್ನಹರು ಹೊಂದಿರುವ ಬಿಪಿಎಲ್ ಪಡಿತರ ಚೀಟಿಗಳನ್ನು ಆ.೩೧ರೊಳಗೆ ಸ್ವಯಂ ಪ್ರೇರಣೆಯಿಂದ ಆಯಾ ತಹಶೀಲ್ದಾರ ಕಚೇರಿಗೆ ಒಪ್ಪಿಸಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜ ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕ ವಿನಯಕುಮಾರ ಪಾಟೀಲ ಅವರು ತಿಳಿಸಿದ್ದಾರೆ.ಸರ್ಕಾರದ ಆದೇಶದಂತೆ ಜಿಲ್ಲೆಯ ಅನರ್ಹ ಪಡಿತರ ಚೀಟಿ ಪತ್ತೆ ಹಚ್ಚುವ ಅಭಿಯಾನ ಆರಂಭಿಸಲಾಗಿದ್ದು, ಈಗಾಗಲೇ ಆದಾಯ ತೆರಿಗೆ ಪಾವತಿ ಮಾಡುತ್ತಿರುವ ೨೦೮೬ ಕುಟುಂಬಗಳು, ಸರ್ಕಾರಿ ನೌಕರರು ಹೊಂದಿರುವ ೩೯೧, ಹಾಗೂ ೧.೨೦ಲಕ್ಷಕ್ಕಿಂತ ಹೆಚ್ಚಿನ ಕುಟುಂಬ ಆದಾಯ ಹೊಂದಿರುವ ೨೯೬೧೫ ಸೇರಿದಂತೆ ೩೨೦೯೨ ಬಿಪಿಎಲ್ ಪಡಿತರ ಚೀಟಿಗಳನ್ನು ತಂತ್ರಾಂಶದ ಮೂಲಕ ಪತ್ತೆ ಹಚ್ಚಿ ಪರಿಶೀಲನೆ ನಡೆಸಲಾಗುತ್ತಿದೆ.ಜಿಲ್ಲೆಯಲ್ಲಿ ಏಕವ್ಯಕ್ತಿ ಕುಟುಂಬದ ೪೦೯೭೫ ಹಾಗೂ ದ್ವಿವ್ಯಕ್ತಿ ೧೦೫೧೨೫ ಪಡಿತರ ಚೀಟಿಗಳಿದ್ದು, ಇದರಲ್ಲಿನ ಹೆಚ್ಚಿನ ಕುಟುಂಬಗಳು ಒಂದೇ ಮನೆಯಲ್ಲಿ ಕೂಡಿ ವಾಸವಿದ್ದು, ಕೃತಕವಾಗಿ ಪ್ರತ್ಯೇಕವಾಗಿರುವುದಾಗಿ ಪಡಿತರ ಚೀಟಿ…

Read More

ವಿಜಯಪುರ: ಮಹಾನಗರ ಪಾಲಿಕೆಯ ೨೧ನೇ ಅವಧಿಯ ವಿವಿಧ ನಾಲ್ಕು ಸ್ಥಾಯಿ ಸಮಿತಿಗಳಿಗೆ ಸದಸ್ಯರ ಆಯ್ಕೆಗಾಗಿ ಆಗಸ್ಟ್ ೧೯ರಂದು ಚುನಾವಣೆ ನಡೆಸಲು ವಿಜಯಪುರ ಮಹಾನಗರ ಪಾಲಿಕೆ ಅಧ್ಯಕ್ಷಾಧಿಕಾರಿಗಳೂ ಆದ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರು ದಿನಾಂಕ ನಿಗದಿಗೊಳಿಸಿದ್ದಾರೆ.ಚುನಾವಣಾ ವೇಳಾಪಟ್ಟಿಯಂತೆ ವಿಜಯಪುರ ಮಹಾನಗರ ಪಾಲಿಕೆಯ ಸಭಾ ಭವನದಲ್ಲಿ ಆಗಸ್ಟ್ ೧೯ರಂದು ಮಧ್ಯಾಹ್ನ ೩ ಗಂಟೆಗೆ ಸಮಯ ನಿಗದಿಪಡಿಸಿದ್ದು, ಅಂದು ಬೆಳಿಗ್ಗೆ ೧೦ ರಿಂದ ಮಧ್ಯಾಹ್ನ ೧೨ ಗಂಟೆಯವರೆಗೆ ವಿವಿಧ ನಾಲ್ಕು ಸ್ಥಾಯಿ ಸಮಿತಿಗಳಿಗೆ ನಾಮಪತ್ರಗಳ ಸ್ವೀಕಾರ, ಮಧ್ಯಾಹ್ನ ೩ ಗಂಟೆಗೆ ಚುನಾವಣಾ ಪ್ರಕ್ರಿಯೆ ಆರಂಭವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ವಿಜಯಪುರ: ಸಿಬ್ಬಂದಿ ನೇಮಕಾತಿ ಆಯೋಗದ ವತಿಯಿಂದ ಸ್ಟೆನೋಗ್ರಾಫರ್ (ಗ್ರೇಡ್-ಸಿ ಮತ್ತು ಡಿ) ಪರೀಕ್ಷೆ ೨೦೨೪ರ ಹುದ್ದೆಗಳ ನೇಮಕಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿಗಾಗಿ ಕಂಪ್ಯೂಟರ್ ಆಧಾರಿತ ಸ್ಪರ್ಧಾತ್ಮಕ ಪರೀಕ್ಷೆಯನ್ನು ದೇಶದಾದ್ಯಂತೆ ನಡೆಸಲಾಗುತ್ತಿದೆ. ಜಿಲ್ಲೆಯ ಆಸಕ್ತ ೧೨ನೇ ತರಗತಿ ಮತ್ತು ಶೀಘ್ರಲಿಪಿ ಹಾಗೂ ಬೆರಳಚ್ಚು ಪಾಸಾದ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಮಹಿಳೆಯರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಮಾಜಿ ಸೈನಿಕರಿಗೆ ಅರ್ಜಿ ಶುಲ್ಕದಲ್ಲಿ ವಿನಾಯಿತಿ ನೀಡಲಾಗಿದೆ.ಅರ್ಜಿ ಸಲ್ಲಿಸಲು ದಿನಾಂಕ : ೧೭-೦೮-೨೦೨೪ ಕೊನೆಯ ದಿನವಾಗಿದ್ದು, ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗಾಗಿ ಸಿಬ್ಬಂದಿ ನೇಮಕಾತಿ ಆಯೋಗದ ವೆಬ್‌ಸೈಟ್ www.ssckkr.kar.nic.in & https:ssc.gov.inನ್ನು ಅಥವಾ ದೂ: ೦೮೦-೨೫೫೦೨೫೨೦/೧೮೦೦೩೦೯೩೦೬೩ ಸಂಖ್ಯೆಗೆ ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ಪೌರಾಡಳಿತ ಮತ್ತು ಹಜ್ ಖಾತೆ ಸಚಿವ ರಹೀಂ ಖಾನ್ ಅವರು ಆ.೧೩ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಅಂದು ಬೆಳಿಗ್ಗೆ ೯-೪೦ಕ್ಕೆ ಕಲ್ಬುರ್ಗಿಯಿಂದ ಹೊರಟು, ಮಧ್ಯಾಹ್ನ ೧೨-೪೦ಕ್ಕೆ ವಿಜಯಪುರಕ್ಕೆ ಆಗಮಿಸಲಿದ್ದಾರೆ. ಮಧ್ಯಾಹ್ನ ೧ರಿಂದ ೧-೩೦ರವರೆಗೆ ಜಿಲ್ಲೆಯ ಘನತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ ೧-೩೦ಕ್ಕೆ ಇಂದಿರಾ ಕ್ಯಾಂಟೀನ್‌ಗೆ ಭೇಟಿ ನೀಡಲಿದ್ದಾರೆ. ೨-೩೦ ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಿಗೆ ಸಮಬಂಧಿಸಿದ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಅಂದು ವಿಜಯಪುರದಲ್ಲಿ ವಾಸ್ತವ್ಯ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Read More

ಸುಂದರಂ ಹೋಮ್ ಫೈನಾನ್ಸಿಂದ ಮಕ್ಕಳಿಗೆ ‘ನಿಮ್ಮ ಕನಸಿನ ಮನೆ’ ಚಿತ್ರ ಬಿಡಿಸುವ ಸ್ಪರ್ಧೆ ವಿಜಯಪುರ: ಮಕ್ಕಳ ಕಲಿಕೆಯ ಜೀವಸೆಲೆಯೇ ಚಿತ್ರಕಲೆ. ಮನಸ್ಸನ್ನು ಉಲ್ಲಾಸಗೊಳಿಸುವ ಚಿತ್ರಗಳ ಜತೆ ಮಕ್ಕಳು ಅನುಸಂಧಿಸುತ್ತ ಅಂತರ್ಮುಖಿಯಾಗಿ ಓದು-ಬರಹದತ್ತ ಆಸಕ್ತಿ ಬೆಳೆಸಿಕೊಳ್ಳುತ್ತಾರೆ. ಹೀಗಾಗಿ ಮಕ್ಕಳಲ್ಲಿನ ಕಲೆಯನ್ನು ಪ್ರೋತ್ಸಾಹಿಸುವದು ಬಹುಮುಖ್ಯ ಎಂದು ಕಾನಿಪ ಜಿಲ್ಲಾ ಉಪಾಧ್ಯಕ್ಷ ಇಂದುಶೇಖರ ಮಣೂರ ಹೇಳಿದರು.ಅವರು ರವಿವಾರದಂದು ನಗರದ ಲಿಂಗದ ಗುಡಿ ರಸ್ತೆಯಲ್ಲಿರುವ ಸುಂದರಂ ಹೋಮ್ ಶಾಖಾ ಕಚೇರಿಯಲ್ಲಿ ಸ್ವಾತಂತ್ರೋತ್ಸವದ ನಿಮಿತ್ತ 12 ವರ್ಷದೊಳಗಿನ ಮಕ್ಕಳಿಗೆ ಹಮ್ಮಿಕೊಂಡ ‘ನಿಮ್ಮ ಕನಸಿನ ಮನೆ’-ಸ್ಥಳದಲ್ಲಿಯೇ ಚಿತ್ರ ಬಿಡಿಸುವ ಸ್ಪರ್ಧಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.ಮಕ್ಕಳಲ್ಲಿ ಸುಪ್ತವಾಗಿರುವ ಕಲಾ ಪ್ರತಿಭೆಗೆ ನೀರೆರೆದು ಪ್ರೋತ್ಸಾಹಿಸಿ, ಭವಿಷ್ಯದಲ್ಲಿ ಮಕ್ಕಳನ್ನು ಕಲಾವಿದರನ್ನಾಗಿ ರೂಪಿಸುವ ಕೆಲಸ ಸುಂದರಂ ಹೋಮ್ ಸಂಸ್ಥೆಯಿಂದ ನಡೆಯುತ್ತಿರುವುದು ಹೆಮ್ಮೆ ತಂದಿದೆ ಎಂದು ಹೇಳಿದರು.ಶಿಕ್ಷಕ ಸಾಹಿತಿ ಸಂತೋಷ ಬಂಡೆ ಮಾತನಾಡಿ, ಚಿತ್ರಕಲೆಯು ಮಕ್ಕಳ ರಚನಾ ಸಾಮರ್ಥ್ಯದ ಬೆಳವಣಿಗೆ, ಭಾವಾಭಿವ್ಯಕ್ತಿ, ಕಲ್ಪನಾಶಕ್ತಿ ವರ್ಧಿಸುವುದಕ್ಕೆ ಸಹಕಾರಿ. ಮಗು ಮಾತಿನಲ್ಲಿ ವ್ಯಕ್ತಪಡಿಸಲಾಗದ ತನ್ನ ಸಂವೇದನೆಯನ್ನು ಚಿತ್ರಕಲೆಯಂತಹ ಮೌನ ಭಾಷೆಯ…

Read More

ಪ್ರಗತಿ ಪರಿಶೀಲನೆ ಸಭೆಯಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅಧಿಕಾರಿಗಳಿಗೆ ಸೂಚನೆ ವಿಜಯಪುರ: ಮಕ್ಕಳ ಆರೋಗ್ಯ ಕಾಳಜಿ, ಸಮರ್ಪಕ ತ್ಯಾಜ್ಯ ನಿರ್ವಹಣೆ, ಗ್ರಾಮ-ನಗರಗಳ ಸ್ವಚ್ಛತೆ, ಬಯಲು ಬಹಿರ್ದೆಸೆ ಮುಕ್ತ, ಕೆರೆಗಳ ಸಂರಕ್ಷಣೆ, ಸಾರ್ವಜನಿಕರ ಆರೋಗ್ಯ, ಶಾಲಾ ಮಕ್ಕಳ ಶಿಕ್ಷಣ ಗುಣಮಟ್ಟ ಸುಧಾರಣೆ, ಕೊಠಡಿಗಳ ಸುಸ್ಥಿತಿ, ಸಾರ್ವಜನಿಕ ಆಸ್ತಿ ರಕ್ಷಣೆ, ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ, ಹಸರೀಕರಣದ ದೃಷ್ಟಿಯಲ್ಲಿ ಅರಣ್ಯೀಕರಣ ಒಳಗೊಂಡಂತೆ ಸಾರ್ವಜನಿಕರ ಸಮಸ್ಯೆಗಳನ್ನು ಅರಿತು, ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಯೋಜನಾ ಬದ್ಧವಾಗಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಸೂಚನೆ ನೀಡಿದರು.ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಜಿಲ್ಲೆಯ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು, ಸಾರ್ವಜನಿಕ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು. ಅಂಗನವಾಡಿ ಕೇಂದ್ರಗಳಲ್ಲಿರುವ ಚಿಕ್ಕ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಅಂಗನವಾಡಿ ಕೇಂದ್ರದ ಕಟ್ಟಡಗಳ ಕಿಟಕಿಗಳಿಗೆ ಜಾಳಿಗೆ ಅಳವಡಿಸಿ ಸೊಳ್ಳೆಗಳು ಬರದಂತೆ ನೋಡಿಕೊಂಡು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮ ವಹಿಸಬೇಕು. ಜಲಮೂಲಗಳ ಸಂರಕ್ಷಣೆ ನಮ್ಮ ಜವಾಬ್ದಾರಿಯಾಗಿದ್ದು, ಜಿಲ್ಲೆಯಲ್ಲಿರುವ ಕೆರೆ-ಕಟ್ಟೆಗಳ ಸಮೀಕ್ಷೆ…

Read More

ವಿಜಯಪುರ: ಕತ್ತಲೆಯನ್ನು ತೊಲಗಿಸುವ ದೀಪಕ್ಕಿರುವ ಶಕ್ತಿ ಶಿಕ್ಷಕರಿಗೆ ಇದೆ. ಅವರಿವರನ್ನು ದೂರದೆ ವಿಷಯ ಪ್ರಬುದ್ಧತೆ ಹೊಂದಿ ಸರಳ ಮಾದರಿಯಲ್ಲಿ ಆಕರ್ಷಕ ಬೋಧನಾ ಶೈಲಿಯನ್ನು ಅಳವಡಿಸಿಕೊಂಡು ಮಕ್ಕಳಿಗೆ ಮನ ಮುಟ್ಟುವಂತೆ ಬೋಧಿಸಬೇಕು ಎಂದು ಇ.ಸಿ.ಒ. ನವಾಜಖಾನ ಪಠಾಣ ಸಲಹೆ ನೀಡಿದರು.ಜಿಲ್ಲೆಯ ಇಂಡಿ ತಾಲ್ಲೂಕಿನ ಹಿರೇಮಸಳಿ ಗ್ರಾಮದಲ್ಲಿ ನಲಿ ಕಲಿ 2ನೇ ಸಮಾಲೋಚನೆ ಸಭೆಯಲ್ಲಿ ಮಾತನಾಡಿದ ಅವರು, ಶಿಕ್ಷಕರು ನಿತ್ಯ ಅಧ್ಯಯನದಲ್ಲಿ ತೊಡಗಿಸಿಕೊಂಡು ಗುರಿ ತಲುಪಬೇಕು. ಟಿಪ್ಪಣಿ, ಅಗತ್ಯ ಬೋಧನಾ ಸಲಕರಣಿಗಳೊಂದಿಗೆ ತರಗತಿ ಕೋಣೆಗೆ ಹಸನ್ಮುಖಿಯಾಗಿ ಮಕ್ಕಳ ಎದುರಿಗೆ ಕಾಣಿಸಿಕೊಂಡು ಅವರನ್ನು ತಮ್ಮತ್ತ ಸೂಜಿಗಲ್ಲಿನಂತೆ ಸೆಳೆಯಬೇಕು ಎಂದು ಹೇಳಿದರು.ಈ ಸಮಾಲೋಚನಾ ಸಭೆ ವರ್ಷದಲ್ಲಿ 6 ಬಾರಿ ನಡೆಸಲಾಗುತ್ತದೆ. ಇಂದಿನ ಸಭೆಯು ಇಂಡಿ ತಾಲ್ಲೂಕಿನ ನಾಲ್ಕು ಕ್ಲಸ್ಟರ್‌ಗಳ ಉರ್ದು ಸಿ.ಆರ್.ಪಿ ಗಳಾದ ರೂಗಿ ಕ್ಲಸ್ಟರ್‌ ಬಿ.ಡಿ. ಚಪ್ಪರಬಂದ, ಇಂಡಿ ಕ್ಲಸ್ಟರ್‌ ಪರ್ವೇಜ್ ಪಟೇಲ್, ಇಂಗಳಗಿ ಕ್ಲಸ್ಟರ್‌ ಬಾಶಾ ಕುಮಸಗಿ, ಸಾತಲಗಾಂವ್‌ ಕ್ಲಸ್ಟರ್‌ ಐ.ಎ. ಶಿಕ್ಕಲಗಾರ್‌ ಅವರ ನೇತೃತ್ವದಲ್ಲಿ ನಡೆಯಿತು.ಈ ಸಂದರ್ಭದಲ್ಲಿ CRP ದಾದಾ ಶಾಮನವ್ವರ್, ಎಸ್.ಡಿ.ಎಂ.ಸಿ.…

Read More

ವಿಜಯಪುರ: ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯ ಸಹೋದರಿಯರು ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರನ್ನು ಭೇಟಿ ಮಾಡಿ ರಕ್ಷಾ ಬಂಧನದ ಅಂಗವಾಗಿ ಶುಭ ಕೋರಿದರು.ನಗರದಲ್ಲಿರುವ ಸಚಿವರ ಗೃಹ ಕಚೇರಿಗೆ ರವಿವಾರ ಬೆಳಿಗ್ಗೆ ಆಗಮಿಸಿದ ದರ್ಗಾ ಬಳಿಯ ಈಶ್ವರಿಯ ವಿಶ್ವವಿದ್ಯಾಲಯ ಜ್ಞಾನಗಂಗಾ ಭವನದ ಸರೋಜಾ ಮತ್ತು ಕವಿತಾ ಸಹೋದರಿಯರು ಸಚಿವರಿಗೆ ಹಣೆಗೆ ತಿಲಕ ಹಚ್ಚಿ, ರಾಖಿ ಕಟ್ಟಿ ಶುಭಾಷಯ ಕೋರಿದರು. ಸಚಿವರೂ ಕೂಡ ಸಹೋದರಿಯರೊಂದಿಗೆ ರಕ್ಷಾ ಬಂಧನ ಶುಭಾಷಯ ವಿನಿಮಯ ಮಾಡಿಕೊಂಡರು.

Read More

ವಿಜಯಪುರ: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆಯ ಪ್ರಯೋಜನಗಳು ಮತ್ತು ಅನಾನುಕೂಲಗಳು ಮತ್ತು ಕೃತಕ ಬುದ್ಧಿಮತ್ತೆ ನಡೆದು ಬಂದ ದಾರಿಯ ಕುರಿತು ಪ್ರೊ. ಡಾ. ಡಿ ಜೈಪ್ರಸಾದ ಹೇಳಿದರು.ಅವರು ಜಿಲ್ಲೆಯ ಇಂಡಿ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಗಣಕಯಂತ್ರ ವಿಭಾಗದ ಅಡಿಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆಯ ಪಾತ್ರ ಎಂಬ ಕಾರ್ಯಕ್ರಮದಲ್ಲಿ ಮಾತನಾಡಿದರು.ಪ್ರಾಸ್ತಾವಿಕವಾಗಿ ಮಾತನಾಡಿದವಿಭಾಗದ ಮುಖ್ಯಸ್ಥ ಪ್ರೊ ಭಾರತಿ ಕನ್ನೊಳ್ಳಿ ಐಕ್ಯೂಎಸಿ ವಿಭಾಗದ ಸಂಯೋಜಕಿ ಡಾ. ಶಿರೀನೂಸುಲ್ತಾನ ಇನಾಂದಾರ, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಪ್ರೊ. ರಾಜಲಕ್ಷ್ಮಿ ಆರ್‌, ಇತಿಹಾಸ ವಿಭಾಗದ ಮುಖ್ಯಸ್ಥ ಪ್ರೊ. ಕಿರಣ ರೇವಣಕರ, ಕನ್ನಡ ವಿಭಾಗದ ಮುಖ್ಯಸ್ಥ ಡಾ. ರಮೇಶ ಕತ್ತಿ, ರಾಜ್ಯಶಾಸ್ತ್ರ ವಿಭಾಗದ ಡಾ.ಸುರೇಖಾ ವಾರದ, ಡಾ.ವಿಜಯಮಹಾಂತೇಶ ದೇವರ, ಮೊದಲಾದವರಿದ್ದರು.ಕಾಲೇಜಿನ ಗಣಕಶಾಸ್ತ್ರ ವಿಭಾಗದಲ್ಲಿ ಓದುತ್ತಿರುವ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ ಆರ್. ಎಚ್.‌ ರಮೇಶ ವಹಿಸಿದ್ದರುತೇಜಸ್ವಿನಿ ಯಾಳಮೇಲಿ ಪ್ರಾರ್ಥಿಸಿದರು. ಕವೀಂದ್ರಕುಮಾರ ಚಾಬುಕಸ್ವಾರ ಸ್ವಾಗತಿಸಿದರು, ಮೇಘಾ ಬೂರ್ಖಾಡೇ ವಂದಿಸಿದರು. ಶೀತಲ್ ಹಿರೇಮಠ…

Read More