Author: editor.udayarashmi@gmail.com

ವಿಜಯಪುರ: ಜಮಖಂಡಿ ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿಯವರ ಸುಪುತ್ರ ಭರತ ಎಸ್. ಕುಲಕರ್ಣಿ ಅವರನ್ನು ಭಾರತೀಯ ಜನತಾ ಪಾರ್ಟಿ ವಿಜಯಪುರ ವಾಣಿಜ್ಯ ಮತ್ತು ವ್ಯಾಪಾರಿಗಳ ಪ್ರಕೋಷ್ಠ ಜಿಲ್ಲಾ ಸಂಚಾಲಕರನ್ನಾಗಿ ನೇಮಕ ಮಾಡಿ ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ ಅವರು ನಿಯುಕ್ತಿ ಹೊರಡಿಸಿದ್ದಾರೆ.ಈ ಹೊಣೆಗಾರಿಕೆಯನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸುತಾ, ಪಕ್ಷದ ಸಂಘಟನೆಯನ್ನು ತಳಮಟ್ಟದಲ್ಲಿ ಸದೃಢಗೊಳಿಸುತ್ತಾ, ಮುಂಬರುವ ಎಲ್ಲ ರೀತಿಯ ಸವಾಲುಗಳನ್ನು ಎದುರಿಸಲು ಶಕ್ತಿ ತುಂಬುತ್ತಾ ಪಕ್ಷದ ವರ್ಚಸ್ಸನ್ನು ಹೆಚ್ಚಿಸುವಲ್ಲಿ ಸತತ ಶ್ರಮಿಸಲು ತಿಳಿಸಿದ್ದಾರೆ.

Read More

ವಿಜಯಪುರ: ನಗರದ ಬಿಡಿಇ ಸೂಸೈಟಿಯ ಸಭಾಭವನದಲ್ಲಿ ರವಿವಾರ ಆ.೧೧ ರ ಬೆಳಿಗ್ಗೆ ೧೦.೩೦ ಕ್ಕೆ “ಕುಮಾರವ್ಯಾಸ ಭಾರತ” ಗಮಕ ಕಾರ್ಯಕ್ರಮ ಜರುಗಲಿದೆ.ಗುರುಪೂರ್ಣಿಮಾ ಅಂಗವಾಗಿ “ಅಖಿಲ ಭಾರತೀಯ ಸಾಹಿತ್ಯ ಪರಿಷದ್(ರಿ) ವಿಜಯಪುರ ” ಈ ಕಾರ್ಯಕ್ರಮವನ್ನು ಆಯೋಜಿಸಿದ್ದು , ೯೩ ವರ್ಷ ಹಿರಿಯ ಸುಗಮಸಂಗೀತಗಾರರು ಹಾಗೂ ಗಮಕಿಗಳಾದ ಶ್ರೀಮತಿ ಶಾಂತಾಬಾಯಿ ಕೌತಾಳ ಮತ್ತು ವಿಜಯಪುರ ಗಮಕ ಪರಿಷತ್ತಿನ ಉಪಾಧ್ಯಕ್ಷರಾದ ಕಲ್ಯಾಣರಾವ್ ದೇಶಪಾಂಡೆ ಕುಮಾರವ್ಯಾಸ ಭಾರತ ಗಮಕ ಕಾರ್ಯಕ್ರವನ್ನು ನಡೆಸಿಕೊಡಲಿದ್ದಾರೆ. ಶರಣ ಸಾಹಿತ್ಯ ಪರಿಷತ್ ಯುವವೇದಿಕೆಯ ಅಧ್ಯಕ್ಷ ಅಮರೇಶ ಸಾಲಕ್ಕಿ ಉಪಸ್ಥಿತಿ ಇರಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಖಿಲ್ ಭಾರತೀಯ ಸಾಹಿತ್ಯ ಪರಿಷದ್ (ರಿ) ವಿಜಯಪುರ ಜಿಲ್ಲಾಧ್ಯಕ್ಷರಾದ ನಾರಾಯಣ ಬಾಬಾನಗರ ವಹಿಸಿಕೊಳ್ಳಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ – ೯೬೬೩೮೭೨೦೩೭ , ೯೭೩೯೦೬೧೩೩೯ ಕೋರಲಾಗಿದೆ.

Read More

ಚಡಚಣ: ತಾಲೂಕಿನ ಬಸವ ಸಮಿತಿ ಮತ್ತು ಮಾನವ ಬಂಧುತ್ವ ವೇದಿಕೆ ಅಡಿಯಲ್ಲಿ ೮೨೯ ಬಸವ ಪಂಚಮಿಯನ್ನು ಪಟ್ಟಣದ ಎಂಇಎಸ್ ಶಿಕ್ಷಣ ವಿದ್ಯಾಲಯದಲ್ಲಿ ನೂರಾರು ಮಕ್ಕಳಿಗೆ ಬದಾಮಿ ಹಾಲು ಕುಡಿಸುವ ಮೂಲಕ ಆಚರಣೆ ಮಾಡಲಾಯಿತು.ಈ ಕಾರ್ಯಕ್ರಮದ ಸಾನಿಧ್ಯವನ್ನು ವಹಿಸಿದ್ದ ಬಸವಕಲ್ಯಾಣದ ಡಾ. ಬಸವಪ್ರಭು ಮಹಾಸ್ವಾಮಿಗಳು ಮಾತನಾಡಿ. ಭಾರತದಲ್ಲಿ ಆಚರಿಸುವ ಪ್ರತಿವೊಂದು ಹಬ್ಬಗಳ ಹಿಂದೆ ನಮ್ಮ ಹಿರಿಯರ ವೈಜ್ಞಾನಿಕ ಮತ್ತು ವೈಚಾರಿಕ ಚಿಂತನೆ ಅಡಗಿರುತ್ತದೆ. ನಾಗರ ಪಂಚಮಿಯಂದು ಕಲ್ಲು ನಾಗರಕ್ಕೆ ಹಾಲನ್ನು ಎರೆಯುವ ಮೂಲಕ ಅಮೂಲ್ಯವಾದ ಹಾಲನ್ನು ವ್ಯರ್ಥಮಾಡುವ ಮಾನವನ ಮೂರ್ಖತನವನ್ನು ನಿವಾರಿಸಿ ಪಂಚಮಿ ಹಬ್ಬವನ್ನು ವೈಜ್ಞಾನಿಕ ಹಾಗೂ ವೈಚಾರಿಕ ಹಿನ್ನಲೆಯಲ್ಲಿ ಬಸವ ಪಂಚಮಿ ಎಂದು ಆಚರಿಸುವ ಅಭಿಯಾನ ಪ್ರತಿವರ್ಷ ಮಾಡುತ್ತಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಪಟ್ಟಣದ ಬಸವ ಸಮಿತಿಯ ಮುರಗೇಶ ಸಿಂಪಿ, ಶಾಲೆಯ ಅಧ್ಯಕ್ಷರಾದ ಮೋಹನ ಚೋಳಕೆ, ಶಿಕ್ಷಕ ಸಿಬ್ಬಂದಿ ವರ್ಗ, ಸುರೇಶ ಭಂಡರಕವಟೆ, ಶ್ರೀಶೈಲ ಕೋಳಿ, ಸೈದು ಕೂಡವನ, ವಿಜಯ ವಾಘಮೋರೆ, ಜಕರಾಯ ಭಾಮನೆ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Read More

ಮುದ್ದೇಬಿಹಾಳ: ತಾಲೂಕಿನ ಗಡಿ ಭಾಗ ನಾಲತವಾಡ-ನಾರಾಯಣಪುರ ರಸ್ತೆಯಲ್ಲಿರುವ ನಾರಾಯಣಪುರ ಎಡದಂಡೆ ಕಾಲುವೆಯಲ್ಲಿ ಯುವಕನೋರ್ವ ಕೊಚ್ಚಿ ಹೋಗಿರುವ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ರಾಯಚೂರು ಜಿಲ್ಲೆ ಲಿಂಗಸೂರಿನ ಯುವಕ ತೇಜಸ್ ಅಲ್ಕಾವಟಗಿ ಕಾಣೆಯಾದ ಯುವಕ. ಕಾಲುವೆ ಬಳಿಯ ಚೆಕ್ ಪೋಸ್ಟ್ ಹತ್ತಿರ ತನ್ನ ಬಟ್ಟೆಯನ್ನು ಬಿಚ್ಚಿ ಬೈಕ್ ಮೇಲಿಟ್ಟು ನೀರಿಗೆ ಇಳಿದಿದ್ದು ನೀರಿನ ರಬಸಕ್ಕೆ ಕೊಚ್ಚಿ ಹೋಗಿರಬಹುದು, ಇಲ್ಲವೋ ಈಜಿಕೊಂಡು ಹೋಗಿ ಮುಂದೆ ಎಲ್ಲಿಯೋ ಹೋಗಿ ಕಾಣೆಯಾಗಿರಬಹುದು ಎಂದು ಯುವಕನ ತಂದೆ ರಾಚನಗೌಡ ಅಲ್ಕಾವಟಿಗಿ ದೂರು ನೀಡಿದ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ.

Read More

ತಿಕೋಟಾ: ಕರ್ನಾಟಕ ಹೈಕೊರ್ಟಿನ ರೀಟ್ ಆದೇಶದನ್ವಯ ಅನುದಾನಿತ ಪ್ರೌಢ ಶಾಲೆಗಳಲ್ಲಿರುವ ಮೂಲಭೂತ ಸೌಕರ್ಯಗಳ ಪರಿಶೀಲನೆ ಮಾಡಲು ವಿಜಯಪುರ ಜಿಲ್ಲಾ ಕಾನೂನು ಸೇವೆಗಳ ಉಪಪ್ರಧಾನ ಕಾನೂನು ಅಭಿರಕ್ಷಕ ರೂಪಚಂದ ಧನವಂತ ಅವರ ತಂಡ ಅನುದಾನಿತ ಪ್ರೌಢ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಿ ವರದಿ ಪಡೆದುಕೊಂಡಿತು.ತಾಲ್ಲೂಕಿನ ಹೊನವಾಡ, ತಾಜಪುರ(ಎಚ್) ಗ್ರಾಮದ ಹಾಗೂ ತಿಕೋಟಾ ಪಟ್ಟಣದಲ್ಲಿರುವ ಎ.ಬಿ.ಜತ್ತಿ ಹಾಗೂ ಮಲ್ಲಿಕಸಂದಲ್ ಅನುದಾನಿತ ಪ್ರೌಢ ಶಾಲೆಗಳಿಗೆ ಭೇಟಿ ನೀಡಿ ಮಾತನಾಡಿದ ಅವರು ಶಾಲಾ ವಿದ್ಯಾರ್ಥಿಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಹೆಚ್ಚಿಸುವುದು ಭೇಟಿಯ ಮಹತ್ವವಾಗಿದೆ. ಏಕೆಂದರೆ ಅವರು ನಮ್ಮ ರಾಷ್ಟ್ರದ ಭವಿಷ್ಯವನ್ನು ರೂಪಿಸುವವರಾಗಿದ್ದಾರೆ. ಮುಖ್ಯವಾಗಿ ಸ್ವಚ್ಛತೆಗೆ ವಿದ್ಯಾರ್ಥಿಗಳ ತೊಡಗಿಸಿಕೊಳ್ಳುವಿಕೆ ಮತ್ತು ಮೋಜಿನ ಕಲಿಕೆಯ ಮೇಲೆ ಕೇಂದ್ರೀಕರಿಸಿದೆ ಎಂದು ಹೇಳಿ ಶಾಲೆಗಳ ಮೂಲಭೂತ ಸೌಕರ್ಯಗಳನ್ನು ಸಂಪೂರ್ಣವಾಗಿ ವೀಕ್ಷಣೆ ಮಾಡಿ ಇರುವ ಸ್ಥಿತಿಗತಿ ಅವಲೋಕನ ಮಾಡಿ ವರದಿ ಪಡೆದುಕೊಂಡರು.ಈ ಸಂದರ್ಭದಲ್ಲಿ ಜಾಲಗೇರಿ ಸಿಆರ್ಪಿ ಶರಣಬಸಪ್ಪ ರೆಡ್ಡಿ ತಿಕೋಟಾ ವಲಯ ಬಿಆರ್ಪಿ ಪಿ. ಡಿ. ಕಾಂಬಳೆ, ಶಿಕ್ಷಣ ಸಂಯೋಜಕ ಜಿ.ಟಿ. ಕಾಗವಾಡ, ಎಂ. ಎ.ಹಿರೇಮಠ,…

Read More

ಮುದ್ದೇಬಿಹಾಳ: ತಾಲೂಕಿನ ನಾಲತವಾಡದಲ್ಲಿ ಓಸಿ ಮಡಗಾ ಜೂಜಾಟವಾಡುತ್ತಿದ್ದ ಆರೋಪದ ಮೇಲೆ ಇಲ್ಲಿನ ಪಿಎಸ್‌ಐ ಸಂಜೀವ ತಿಪರೆಡ್ಡಿ ಪ್ರಕರಣ ದಾಖಲಿಸಿದ್ದಾರೆ.ನಾಲತವಾಡ ಪಟ್ಟಣದ ಮಲ್ಲಿಕಾರ್ಜುನ ಗುಬ್ಬಿ ಮೇಲೆ ಪ್ರಕರಣ ದಾಖಲಾಗಿದ್ದು ೧ರೂಪಾಯಿಗೆ ೮೦ ರೂಪಾಯಿ ಕೊಡುವ ಕರಾರಿನ ಮೇಲೆ ಜೂಜಾಟದಲ್ಲಿ ತೊಡಗಿದ್ದ ಎನ್ನಲಾಗಿದೆ. ಈತನಿಂದ ಓಸಿ ಚೀಟಿ, ಬಾಲ್ ಪೆನ್ನು ಮತ್ತು ಕೆಲ ಹಣವನ್ನು ವಶಕ್ಕೆ ಪಡೆಯಲಾಗಿದೆ.

Read More

ಮುದ್ದೇಬಿಹಾಳ: ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ಹೇಮರೆಡ್ಡಿ ಮಲ್ಲಮ್ಮ ಮಂಗಲ ಕಾರ್ಯಾಲಯದಲ್ಲಿ ಅ೧೦ ರಂದು ಮದ್ಯಾಹ್ನ ೨:೩೦ ಕ್ಕೆ ಶ್ರಾವಣ ಕಾವ್ಯ ಸಂಭ್ರಮ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ತಾಲೂಕ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಅಲ್ಪಸಂಖ್ಯಾತರ ಮುರಾರ್ಜಿ ದೇಸಾಯಿ ವಸತಿ ಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಕುಂಟೋಜಿ ಸಂಸ್ಥಾನ ಹಿರೇಮಠದ ಡಾ.ಚನ್ನವೀರ ಶಿವಾಚಾರ್ಯರು ವಹಿಸಲಿದ್ದು, ಪ್ರೊ ಬಿ.ಎಮ್.ಹಿರೇಮಠರು ಉದ್ಘಾಟಿಸಲಿದ್ದಾರೆ. ವಸತಿ ಶಾಲೆಯ ಪ್ರಾಂಶುಪಾಲ ಖೇಮು ರಾಠೋಡ ಅಧ್ಯಕ್ಷತೆವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕಸಾಪ ನಿಕಟಪೂರ್ವ ಅಧ್ಯಕ್ಷರುಗಳಾದ ಎಂ.ಬಿ ನಾವದಗಿ ಮತ್ತು ಎಂ.ಎಚ್.ಹಾಲಣ್ಣವರ. ರಾಜೇಸಾಬ ಶಿವನಗುತ್ತಿ, ಸುರೇಶಗೌಡ ಪಾಟೀಲ, ಜಯಶ್ರೀ ಹಿರೇಮಠ, ಚೈತನ್ಯ ಮುದ್ದೆಬಿಹಾಳ, ಬುರಾನ ರುದ್ರವಾಡಿ, ವಾಯ್.ಎಚ್.ವಿಜಯಕರ ಆಗಮಿಸಲಿದ್ದಾರೆ. ಕವಿಗಳಾದ ಸುಮಲತಾ ಗಡಿಯಪ್ಪನವರ, ಶಾಂತಲಾ ಪಾಟೀಲ, ಅಂಬಿಕಾ ಕರಕಪ್ಪಗೋಳ, ಮಡಿವಾಳಮ್ಮ ನಾಡಗೌಡ, ಸಿದ್ದನಗೌಡ ಕಾಶಿನಕುಂಟೆ, ಶಿವಪುತ್ರ ಅಜಮನಿ, ವಿಶ್ವನಾಥ ಕುಲಕರ್ಣಿ, ಸಾವಿತ್ರಿ ತಳವಾರ, ಶೈಲಾ ಗೊಂಗಡಿ, ಬಸಮ್ಮ ಗದ್ದಿ, ಶಿವಲೀಲಾ ಬಿರಾದಾರ, ಬಸವರಾಜ ಹಾವೇರಿ, ಕಸ್ತೂರಿ ಗದ್ದೇಪ್ಪನವರ, ಹೇಮಾ ಬಿರಾದಾರ,…

Read More

ವಿಜಯಪುರ: ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿಯ ಸಾಂತ್ವನ ಮಹಿಳಾ ಸಹಾಯವಾಣಿ ಕೇಂದ್ರಕ್ಕೆ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು.ಈ ಕೇಂದ್ರದಲ್ಲಿ ಒದಗಿಸುತ್ತಿರುವ ಆಪ್ತ ಸಮಾಲೋಚನೆ ಹಾಗೂ ಸಲಹೆಗಳ ಕುರಿತು ಪರಿಶೀಲಿಸಿ, ದಾಖಲಾಗಿರುವ ಪ್ರಕರಣಗಳ ಪ್ರತ್ಯೇಕ ಕಡತ, ದೂರವಾಣಿ ಕರೆಗಳ ವಹಿ, ಸಂದರ್ಶಕರ ವಹಿ, ಆಪ್ತ ಸಮಾಲೋಚನಾ ದಾಖಲಾತಿ, ಕೇಂದ್ರದ ಮಾಸಿಕ ಪ್ರಗತಿ ವರದಿ, ಪ್ರಕರಣಗಳ ದಾಖಲಾತಿ ಪುಸ್ತಕ, ಸಿಬ್ಬಂದಿಗಳ ಹಾಜರಾತಿ ಪುಸ್ತಕ ಹಲವಾರು ದಾಖಲಾತಿ ಪರಿಶೀಲಿಸಿದರು. ಕೇಂದ್ರದಲ್ಲಿ ಒದಗಿಸಲಾದ ಮೂಲಭೂತ ಸೌಕರ್ಯಗಳ ಕುರಿತು ಪರಿಶೀಲನೆ ನಡೆಸಿದರು. ಸಾಂತ್ವನ ಕೇಂದ್ರಕ್ಕೆ ವರದಿಯಾಗುವ ಪ್ರಕರಣಗಳನ್ನು ಆದ್ಯತೆಯ ಮೇರೆಗೆ ಇತ್ಯರ್ಥಪಡಿಸಿ ಸಕಾಲದಲ್ಲಿ ಪರಿಹಾರ ಒದಗಿಸಬೇಕು ಸಾಂತ್ವನ ಕೇಂದ್ರದ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಮಹಿಳಾ ಸಾಂತ್ವನ ಕೇಂದ್ರದ ಅಧಿಕಾರಿಗಳಿಗೆ ಸೂಚನೆ ನೀಡಿದರುಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಶ್ರೀಮತಿ ಸಾವಿತ್ರಿ ಗುಗ್ಗರಿ,…

Read More

ವಿಜಯಪುರ: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆ.೧೯ ರಂದು ಶ್ರೀ ನುಲಿಯ ಚಂದಯ್ಯ ಜಯಂತಿ, ಆ.೨೦ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಮತ್ತು ಆ.೨೬ ರಂದು ಶ್ರೀ ಕೃಷ್ಣ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಶುಕ್ರವಾರ ಅಪರ ಜಿಲ್ಲಾಧಿಕಾರಿಗಳಾದ ಸೋಮಲಿಂಗ ಗೆಣ್ಣೂರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯಕ್ಕೆ ಕೈಗೊಳ್ಳಲಾಯಿತು.ಆಗಸ್ಟ್ ೧೯ ರಂದು ನುಲಿಯ ಚಂದಯ್ಯ ಜಯಂತಿ ಆಚರಣೆ ಅಂಗವಾಗಿ ಅಂದು ಬೆಳಿಗ್ಗೆ ೯ ಗಂಟೆಗೆ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ಶ್ರೀ ಕಂದಗಲ್ ಹನುಮಂತರಾಯ ರಂಗಮಂದಿರದವರೆಗೆ ಶ್ರೀ ನುಲಿಯ ಚಂದಯ್ಯ ಭಾವಚಿತ್ರ ಮೆರವಣಿಗೆ ಹಾಗೂ ೧೦-೩೦ಕ್ಕೆ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಯಿತು.ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಆ.೨೦ರಂದು ಸಂಜೆ ೪ ಗಂಟೆಗೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಬ್ರಹ್ಮಶ್ರೀ ನಾರಾಯಣಗುರು ಭಾವಚಿತ್ರ ಮೆರವಣಿಗೆ ಹಾಗೂ ಸಂಜೆ ೫ ಗಂಟೆಗೆ ಕಂದಗಲ್ ಶ್ರೀ ಹನುಮಂತರಾಯ ರಂಗ ಮಂದಿರದಲ್ಲಿ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲು…

Read More

ವಿಜಯಪುರ: ಹಿಂದುಳಿದ ವರ್ಗಗಳ ಹರಿಕಾರ, ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ್ ಅರಸು ಅವರ ಜನ್ಮ ದಿನಾಚರಣೆಯನ್ನು ಜಿಲ್ಲಾಡಳಿತದ ವತಿಯಿಂದ ಆಗಸ್ಟ್ ೨೦ರಂದು ಆಚರಿಸಲು ನಿರ್ಧರಿಸಲಾಯಿತು.ಶುಕ್ರವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಡಿ. ದೇವರಾಜ್ ಅರಸು ಅವರ ೧೦೯ನೇ ಜನ್ಮ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.ಡಿ.ದೇವರಾಜ್ ಅರಸು ಅವರ ೧೦೯ನೇ ಜನ್ಮ ದಿನಾಚರಣೆ ಅಂಗವಾಗಿ ಅಂದು ಬೆಳಿಗ್ಗೆ ೯-೩೦ಕ್ಕೆ ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ಡಿ.ದೇವರಾಜ ಅರಸು ಅವರ ಭಾವಚಿತ್ರದ ಮೆರವಣಿಗೆಯನ್ನು ವಿವಿಧ ಕಲಾ ತಂಡಗಳೊಂದಿಗೆ ನಗರದ ವಿವಿಧ ವೃತ್ತಗಳಲ್ಲಿ ಸಂಚರಿಸಿ ಶ್ರೀ ಕಂದಗಲ್ ಹನುಮಂತರಾಯ ರಂಗ ಮಂದಿರಕ್ಕೆ ಆಗಮಿಸಿ, ರಂಗ ಮಂದಿರದಲ್ಲಿ ಜಯಂತಿ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಯಿತು.ಜಯಂತಿ ಕಾರ್ಯಕ್ರಮದಲ್ಲಿ ೨೦೨೩-೨೪ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ, ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಹಿಂದುಳಿದ ವರ್ಗದ ಇಲಾಖೆಯ ವಸತಿ ನಿಲಯಗಳಲ್ಲಿ ವ್ಯಾಸಂಗ ಮಾಡಿರುವ ನಿಲಯಾರ್ಥಿಗಳಿಗೆ ಸನ್ಮಾನಿಸಲು ತೀರ್ಮಾನಿಸಲಾಯಿತು. ಇದರಿಂದ…

Read More