Author: editor.udayarashmi@gmail.com

ಇಂಡಿ: ನಗರದ ಮೂರು ಕೆರೆಗಳಿಗೆ ನೀರು ತುಂಬಿಸಿ, ರೈತರಿಗೆ ಅನುಕೂಲ ಕಲ್ಪಿಸಬೇಕೆಂದು ಒತ್ತಾಯಿಸಿ ಹಿರೇ ಇಂಡಿ ಸುತ್ತಮುತ್ತಲಿನ ರೈತರು ಗುರುವಾರ ತಹಸೀಲ್ದಾರ ಬಿ.ಎಸ್. ಕಡಕಭಾವಿ ಅವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ರೈತ ಮುಖಂಡ ಕಾಸುಗೌಡ ಬಿರಾದಾರ, ಅಶೋಕ ಅಕಲಾದಿ ದೇವೆಂದ್ರ ಕುಂಬಾರ, ಮಲ್ಲು ಗುಡ್ಲ ಮಾತನಾಡಿ, ಈಗಾಗಲೆ ಗುತ್ತಿ ಬಸವಣ್ಣ ಏತ ನೀರಾವರಿ ಕಾಲುವೆಗೆ ನೀರು ಹರಿಬಿಟ್ಟಿದ್ದು, ಅದೇ ಕಾಲುವೆ ಮುಖಾಂತರವೇ ಹಿರೇ ಇಂಡಿ ಕೆರೆ ತುಂಬಿಸಬೇಕು. ಅಲ್ಲದೆ ಬಡಿಗೇರ ಕೆರೆ, ಮೋನಪ್ಪ ತಾಂಡಾ ಕೆರೆಗಳನ್ನು ಭುಯ್ಯಾರ ಲಿಫ್ಟ ಇರಿಗೇಶನ್ ಮೂಲಕ ತುಂಬಿಸಬೇಕೆಂದು ಆಗ್ರಹಿಸಿದರು.ಸಂತೋಶ ಲಾಳಸಂಗಿ, ಬಸು ಕುಂಟೋಜಿ ಮಾತನಾಡಿ ಮಳೆಗಾಲವಿದ್ದರೂ ನಮ್ಮ ಭಾಗದಲ್ಲಿ ಸಮರ್ಪಕ ಮಳೆಯಾಗುತ್ತಿಲ್ಲ. ಕಾಲುವೆ, ನದಿಗಳ ಮೂಲಕ ಕೆರೆಗಳನ್ನಾದರೂ ತುಂಬಿದರೆ ಅಂತರ್ಜಲಮಟ್ಟ ಹೆಚ್ಚಾಗಿ ಭಾವಿ, ಕೊಳವೆ ಭಾವಿಗಳಿಗೆ ನೀರಾಗುತ್ತದೆ. ಇದರಿಂದ ರೈತರಿಗೆ ಬೆಳೆ ಬೆಳೆಯಲು ಸಹಕಾರಿಯಾಗುತ್ತದೆ. ನೀರಾವರಿ ಇಲಖೆಯ ಅಧಿಕಾರಿಗಳು ಹಾಗೂ ಶಾಸಕರು, ಸಚಿವರು ನೀರು ತುಂಬಲು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು.ಅಶೋಕ ಅಕಲಾದಿ, ದೇವೆಂದ್ರ ಕುಂಬಾರ,…

Read More

ಇಂಡಿ: ತಾಲ್ಲೂಕಿನ ಲಚ್ಯಾಣ ಗ್ರಾಮದಲ್ಲಿನ ಶ್ರೀ ಬೀರಲಿಂಗೇಶ್ವರ ಜಾತ್ರೋತ್ಸವ ಅಂಗವಾಗಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆ.೧೧ ರಂದು ಆಯೋಜಿಸಲಾಗಿದೆ.ಅಂದು ಬೆಳಿಗ್ಗೆ ೬ ಗಂಟೆಗೆ ಶ್ರೀ ಬೀರಲಿಂಗೇಶ್ವರ ಕತೃ ಗದ್ದುಗೆಗೆ ಅಭಿಷೇಕ ವಿಶೇಷ ಪೂಜೆ ನಡೆಯಲಿದೆ. ಬಳಿಕ ೧೧ ಗಂಟೆಗೆ ಸ್ಥಳೀಯ ಶ್ರೀ ಸಿದ್ಧಲಿಂಗ ಮಹಾರಾಜರ ಕಮರಿಮಠದಿಂದ ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ವರೆಗೆ ಕುಂಭ ಮೇಳದೊಂದಿಗೆ ಶ್ರೀ ಬೀರಲಿಂಗೇಶ್ವರ ದೇವರ ಪಾಲಕಿ ಮೆರವಣಿಗೆ ನಡೆಯಲಿದೆ.ಮಧ್ಯಾಹ್ನ ೧ ಗಂಟೆಗೆ ಡೊಳ್ಳಿನ ವಾಲಗ ಹಾಗೂ ಲಾಗಾ ಹೊಡೆಯುವ ಕಾರ್ಯಕ್ರಮ ನಡೆಯಲಿದೆ. ರಾತ್ರಿ ೮ ಗಂಟೆಗೆ ಎಸ್.ಎಸ್.ಎಲ್.ಸಿ, ಹಾಗೂ ದ್ವಿತೀಯ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಜರುಗಲಿದೆ.ರಾತ್ರಿ ೧೦ ಗಂಟೆಗೆ ಜತ್ತ ತಾಲೂಕಿನ ಉಟಗಿ ಗ್ರಾಮದ ಬ್ರಹ್ಮದೇವರ ಡೊಳ್ಳಿನ ಗಾಯನ ಸಂಘ ಹಾಗೂ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುಗಳಿಹಾಳದ ಮಾಳಿಂಗರಾಯ ಡೊಳ್ಳಿನ ಪದ ಕಲಾವಿದರಿಂದ ಡೊಳ್ಳಿನ ಪದ ಕಲೆಗಳ ಪ್ರದರ್ಶನ ನಡೆಯಲಿದೆ ಎಂದು ಜಾತ್ರಾ ಸಮಿತಿಯ ಪ್ರಕಟಣೆ…

Read More

ವಿಜಯಪುರ: ಆ.೧೨ರಂದು ಬೆಂಗಳೂರಿನಲ್ಲಿ ನಡೆಯುವ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನ್ಯಾಯಯುತ ಬೇಡಿಕೆಗಾಗಿ ಹೋರಾಟದಲ್ಲಿ ಪಾಲ್ಗೊಳ್ಳಲು ಜಿಲ್ಲೆಯಿಂದ ಶಿಕ್ಷಕ ಸಮುದಾಯ ತೆರಳಲಿದೆ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ತಿಳಿಸಿದೆ.ಹಲವಾರು ವರ್ಷಗಳಿಂದ ಪದವಿ ಮುಗಿಸಿದ ಸೇವಾನಿರತ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಅನ್ಯಾಯವಾಗುತ್ತಿದ್ದರೂ ಸರಕಾರ ಕಿಂಚತ್ತು ಯೋಚಿಸುತ್ತಿಲ್ಲ. ಸೇವಾಜೇಷ್ಠತೆ, ಬಡ್ತಿ, ಇಲ್ಲದೆ ಕೊರಗುವಂತಾಗಿದೆ. ಪದವಿ ಮುಗಿಸಿ ೨೦-೨೫ ವರ್ಷಗಳಾದೂ ಒಂದು ಬಡ್ತಿ ಇಲ್ಲದೆ ಪರದಾಡುವಂತಾಗಿದೆ. ಹಲವಾರು ಬಾರಿ ಹೋರಾಟ, ಪ್ರತಿಭಟನೆ, ಧರಣಿ ನಡೆಸಿದರೂ ಪ್ರಯೋಜನವಾಗಿಲ್ಲ ಅದಕ್ಕಾಗಿ ಈ ಸಲ ಮಾಡು ಇಲ್ಲವೇ ಮಡಿ ಎಂಬ ತತ್ವದ ಮೂಲಕ ಧರಣಿ ನಡೆಸಲು ಬೆಂಗಳೂರಿಗೆ ತೆರಳಲಾಗುತ್ತಿದೆ. ಜಿಲ್ಲೆಯ ೧೨ ತಾಲೂಕುಗಳಿಂದ ಸಾವಿರಾರು ಸಂಖ್ಯೆಯಲ್ಲಿ ಶಿಕ್ಷಕರು ಭಾಗವಹಿಸುತ್ತಿದ್ದು, ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ರಾಜ್ಯ ಅಧ್ಯಕ್ಷ ನಾಗೇಶ ಹಾಗೂ ಪ್ರಧಾನಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ನೇತೃತ್ವದಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಶಿಕ್ಷಕರ ಸಂಘದ ಪದಾಧಿಕಾರಿಗಳು, ಜಿಲ್ಲೆಯ ಸೇವಾನಿರತ ಪದವಿಧರ ಪ್ರಾಥಮಿಕ ಶಾಲಾ ಶಿಕ್ಷಕರು, ಹೆಚ್ಚಿನ ಸಂಖ್ಯೆಯಲ್ಲಿ ಹೋರಾಟಕ್ಕೆ…

Read More

ಚಿಮ್ಮಡ: ಸರಕಾರಿ ಶಾಲೆಗಳ ಅಭೀವೃದ್ದಿಗೆ ಸಾರ್ವಜನಿಕರ ಸಹಕಾರ ಅವಶ್ಯವಾಗಿದ್ದು ಗ್ರಾಮೀಣ ಭಾಗಗಳಲ್ಲಿ ಸ್ಪಂದನೆ ದೊರೆಯುತ್ತಿರುವುದು ಸಂತಸದ ಸಂಗತಿ ಎಂದು ಶಿಕ್ಷಣ ಸಂಯೋಜಕ ಬಿ.ಎಂ ಹಳಮನಿ ಹೇಳಿದರು.ಗ್ರಾಮದ ಸರಕಾರಿ ಹೆಣ್ಣು ಮಕ್ಕಳ ಹಿರಿಯ ಮಾದರಿ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಎಸ್ಡಿಎಂಸಿ ಸದಸ್ಯರಿಂದ ನೀಡಲಾದ ವಿಶೇಷ ಸಮವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಆಗಮಿಸಿ ಮಾತನಾಡಿದ ಅವರು ಸರಕಾರ ಹಲವಾರು ಸೌಲಭ್ಯಗಳನ್ನು ನೀಡುತಿದ್ದರೂ ವಿಶೇಷ ಸೌಲಭ್ಯಗಳನ್ನು ಸರಕಾರಿ ಶಾಲೆಗಳಿಗೆ ನೀಡುವ ಮೂಲಕ ಖಾಸಗೀ ಶಾಲೆಗಳೊಂದಿಗೆ ಪೈಪೋಟಿ ನೀಡುತ್ತಿವೆ, ಇದಕ್ಕೆ ಸಹಾಯ ಸಹಕಾರ ನೀಡುತ್ತಿರುವ ಶಾಲಾ ಸುಧಾರಣಾ ಸಮೀತಿ ಹಾಗೂ ಗ್ರಾಮದ ಶಿಕ್ಷಣ ಪ್ರೇಮಿಗಳಕಾರ್ಯ ಶ್ಲಾಘನೀಯವೆಂದರು.ಕಾರ್ಯಕ್ರಮವನ್ನು ವಿದ್ಯಾರ್ಥಿಗಳಿಗೆ ವಿಶೇಷ ಸಮವಸ್ತ್ರ ವಿತರಿಸುವ ಮೂಲಕ ಉದ್ಘಾಟಿಸಲಾಯಿತು.ಸಿಆರ್‌ಪಿ ಶ್ರೀಮತಿ ದ್ರಾಕ್ಷಾಯಿಣಿ ಮಂಡಿ, ಗ್ರಾ.ಪಂ. ಸದಸ್ಯ ಮಹಾಲಿಂಗ ಮಾಯಣ್ಣವರ, ಶಿವಾನಂದ ಬೆಳಗಲಿ, ಪ್ರಭಾರಿ ಮುಖ್ಯಗುರು ಎಸ್.ಎ. ಬಿರಾದರ ಮಾತನಾಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ಡಿಎಂಸಿ ಅಧ್ಯಕ್ಷ ಮೋನೇಶ ಬಡಿಗೇರ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉಪಾಧ್ಯಕ್ಷೆ ಶ್ರೀಮತಿ ಅಣ್ಣಪೂರ್ಣ ಅಥಣಿ, ಇಮಾಮ ಯಾದವಾಡ, ಪರಪ್ಪಾ ದೇವಗೋಳ…

Read More

ತಿಕೋಟಾ: ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ, ತಮ್ಮ ಪ್ರತಿಭೆಯನ್ನು ಪ್ರಚುರಪಡಿಸಬೇಕೆಂದು ಉಪನ್ಯಾಸಕ ಹಾಗೂ ಸಾಹಿತಿ ಎಸ್.ಬಿ.ಸಾವಳಸಂಗ ಹೇಳಿದರು.ಅವರು ಗುರುವಾರ ಎ.ಬಿ.ಜತ್ತಿ. ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ೨೦೨೪-೨೫ ನೇ ಸಾಲಿನ ಸಾಂಸ್ಕೃತಿಕ, ಕ್ರೀಡಾ, ಪ್ರತಿಭಾ ಪುರಸ್ಕಾರ, ಶಾಲಾ ಸಂಸತ್ತಿನ ರಚನೆ ಹಾಗೂ ಪ್ರಮಾಣ ವಚನ ಬೋಧನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳಲ್ಲಿ ಒಗ್ಗಟ್ಟು, ಸ್ಪರ್ದಾತ್ಮಕ ಮನೋಭಾವನೆ, ನಾಯಕತ್ವ ಗುಣ, ಸಮಯಪ್ರಜ್ಞೆ , ಧೈರ್ಯ, ಸಾಹಸ ಗುಣ ಹಾಗೂ ಶಿಸ್ತು ಮೂಡುತ್ತದೆಂದು ಹೇಳಿದರು.ಕಾರ್ಯಕ್ರಮದಲ್ಲಿ ಉಪ ಪ್ರಾಚಾರ್ಯ ಡಿ. ಪಿ. ಬೆಳ್ಳಗಿ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕಿ ಮಹೇಶ್ವರಿ ಮಸಳಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಪಾರ್ವತಿ ಹಾದಿಮನಿ ವಂದನಾರ್ಪಣೆ ಮಾಡಿದರು.ದೈಹಿಕ ಶಿಕ್ಷಕ ಎಸ್.ಐ.ಕಲ್ಯಾಣಿ ಶಿಸ್ತನ್ನು ಕಾಪಾಡಿದರು. ಶಾಲೆಯ ಸಿಬ್ಬಂದಿಗಳಾದ ಜಗದೀಶಗೌಡ ಪಾಟೀಲ, ಡಿ.ಬಿ. ಪಾಟೀಲ, ಬಿ.ಸಿ. ನಾವಿ, ಸುನಿತಾ ಮಾಳಿ, ಚೆನ್ನಯ್ಯ ಸಾಲಿಮಠ ಹಾಗೂ ಉಳಿದ ಎಲ್ಲ ಸಿಬ್ಬಂದಿವರ್ಗ ಮತ್ತು ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಿ…

Read More

ಆಹೇರಿ ಗ್ರಾಮದಲ್ಲಿ ರೈತ ಸಂಘ ಹಾಗೂ ಹಸಿರು ಸೇನೆಯ ಗ್ರಾಮ ಘಟಕ ಉದ್ಘಾಟನೆ ವಿಜಯಪುರ: ಮತ್ತೊಬ್ಬರನ್ನು ನೋಡಿ ಆಡಂಬರದ ಬದುಕು ಸಾಗಿಸುವುದಕ್ಕಿಂತ ಹಾಸಿಗೆ ಇದಷ್ಟು ಕಾಲು ಚಾಚಲು ಕಲಿಯಬೇಕು, ಸಾಲ ಇಲ್ಲದ ಬಾನ ಉಣ್ಣುವಂತಾಗಬೇಕು. ಆಧುನಿಕ ಜಗತ್ತಿನ ಈ ನಾಗಾಲೋಟದಲ್ಲಿ ದಿನೆ ದಿನೇ ಖರ್ಚುಗಳು ಹೆಚ್ಚಾಗುತ್ತಿವೆ ಈ ನಿಟ್ಟಿನಲ್ಲಿ ಕೇವಲ ಕೃಷಿ ಮಾತ್ರ ಮಾಡಿದರೆ ಸಾಲದು, ಕಡಿಮೆ ಖರ್ಚಿನಲ್ಲಿ ಸಾವಯವ ಕೃಷಿ ಮಾಡುತ್ತಾ ಅದರೊಂದಿಗೆ ಉಪಕಸುಬುಗಳಾದ ಹೈನುಗಾರಿಕೆ, ಮೀನಾಗಾರಿಕೆ, ಜೇನುಸಾಕಾಣಿಕೆ, ಆಡು, ಕುರಿ, ಕೋಳಿ ಸಾಕಾಣಿಕೆ ಮಾಡುತ್ತಾ ದಿನನಿತ್ಯ ಲಾಭ ಪಡೆಯುವಂತಾಗಬೇಕು ಅಂದಾಗ ಮಾತ್ರ ರೈತ ಆತ್ಮಹತ್ಯೆಯಂತಹ ಕೆಟ್ಟು ಪಿಡುಗುಗಳನ್ನು ಈ ಸಾಮಾಜದಲ್ಲಿ ತಡೆಯಬಹುದಾಗಿದೆ ಎಂದು ಜಿಲ್ಲಾಧ್ಯಕ್ಷರಾದ ಸಂಗಮೇಶ ಸಗರ ಅವರು ಹೇಳಿದರು.ವಿಜಯಪುರ ತಾಲೂಕಿನ ಆಹೇರಿ(ಜಂಬಗಿ) ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಗ್ರಾಮ ಘಟಕದ ಉದ್ಗಾಟನಾ ಸಮಾರಂಭದಲ್ಲಿ ಸ್ವಾಮಿಜಿಗಳು ಹಾಗೂ ಅತಿಥಿಗಳೊಂದಿಗೆ ದೀಪ ಬೆಳಗಿಸುವದರೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ರೈತ ಗೀತೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡುತ್ತಾ ಮಾತನಾಡಿದರು.ರೈತ…

Read More

ರೇವತಗಾಂವದಲ್ಲಿ ನಾಗದೇವತೆಗೆ ವಿಶೇಷ ಪೂಜೆ | ಸಂಭ್ರಮಾಚರಣೆ ಚಡಚಣ: ಶ್ರಾವಣ ಮಾಸದ ಶುಕ್ಲಪಕ್ಷದ ಪಂಚಮಿಯ ಐದನೇ ದಿನದಂದು ಆಚರಿಸುವ ನಾಗರ ಪಂಚಮೀ ಹಬ್ಬವನ್ನು ರೇವತಗಾಂವ ಗ್ರಾಮದಲ್ಲಿ ಶುಕ್ರವಾರದಂದು ಸಂಭ್ರಮದಿಂದ ಆಚರಿಸಲಾಯಿತು.ಇಲ್ಲಿನ ನಾಗ ದೇವತೆ ಹುತ್ತಕ್ಕೆ ಮಹಿಳೆಯರು ವಿಶೇಷವಾಗಿ ಪೂಜೆ ಸಲ್ಲಿಸಿದರಲ್ಲದೆ, ನಾಗದೇವತೆಗೆ ಆರತಿ ಬೆಳಗಿ, ಹಾಲೆರೆದು, ಐದೆಳೆ ದಾರದ ನೂಲ ಸುತ್ತಿ, ಆ ದಾರವನ್ನು ತಮ್ಮ ಕೊರಳಲ್ಲಿಯೂ ಧರಿಸಿದರು.ಇನ್ನೂ ಕೆಲವರು ತಮ್ಮ ಮನೆಯ ಜಗುಲಿ ಮೇಲೆ ನಾಗ ದೇವತೆ ಪ್ರತಿಷ್ಠಾಪಿಸಿ ಹಾಲೆರೆದು ಪೂಜೆ ಸಲ್ಲಸಿ ನೈವೇದ್ಯ ಅರ್ಪಿಸಿದರು. ನಂತರ ಮಹಿಳೆಯರು, ಕಿರಿಯರು ಹಾಗೂ ವಯೋವೃದ್ಧರೂ ಜೋಕಾಲಿ ಹಾಗೂ ಪೂಗಾಡಿ ಆಟವಾಡಿ ಸಂಭ್ರಮಿಸಿದರು. ಶ್ರೀ ಮಲಕಾರಿಸಿದ್ದನ ದೇವಾಸ್ಥಾನದಲ್ಲಿ ಗ್ರಾಮದ ಕಲಾ ತಂಡಗಳಿಂದ ಡೊಳ್ಳಿನ ಪದಗಳು ನಡೆದವು.ಗ್ರಾಮದ ಯುವಕರು ನಿಂಬೆ ಹಣ್ಣು ಎಸೆಯುವ, ಕಣ್ಮುಚ್ಚು, ಕಬಡಿ, ಚಕ್ರಗಾಣ ಹಾಗೂ ಸೂರ್‌ಮನೆ ಆಟಗಳನ್ನು ಆಡಿ ಸಂಭ್ರಮಿಸಿದರು.ಗ್ರಾಪಂ ಸದಸ್ಯೆ ಲಕ್ಷ್ಮೀಬಾಯಿ ಮಾಳಿಯವರು ಮಾತನಾಡುತ್ತ. ಜನಪದ ಕಥೆಯ ಪ್ರಕಾರ ನಗರ ಪಂಚಮಿ ಬರುವುದು ಮುಂಗಾರಿನ ರಭಸದ ದಿನಗಳ ಮದ್ಯ…

Read More

ವಿಜಯಪುರ: ಶರಣರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ.ಶುಕ್ರವಾರ ಬಬಲೇಶ್ವರ ತಾಲೂಕಿನ ಕೊಡಬಾಗಿ ಗ್ರಾಮದಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ನಿರ್ಮಿಸಲಾಗಿರುವ ಅಕ್ಕಮಹಾದೇವಿ ಗುಡಿ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.ಅಕ್ಕಮಹಾದೇವಿ ನಮಗೆಲ್ಲರಿಗೂ ತಮ್ಮ ಆಚಾರ, ವಿಚಾರ, ವಚನಗಳ ಮೂಲಕ ಮಾದರಿಯಾಗಿದ್ದಾರೆ. ಶರಣ, ಶರಣೆಯರ ದೇವಸ್ಥಾನ ನಿರ್ಮಿಸುವುದರ ಜೊತೆಗೆ ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಬಾಳು ಹಸನಾಗುತ್ತದೆ. ಶ್ರಾವಣ ಮಾಸ ಪ್ರಾರಂಭವಾದಾಗ ಕೆಲವರು ತಮ್ಮ ಆಚಾರ, ವಿಚಾರಗಳನ್ನು ಬದಲಾಯಿಸಿಕೊಳ್ಳುತ್ತಾರೆ. ಈ ನಡವಳಿಕೆ ಕೇವಲ ಶ್ರಾವಣ ಮಾಸಕ್ಕೆ ಸೀಮಿತವಾಗದೇ, ಜೀವನದುದ್ದಕ್ಕೂ ಪಾಲಿಸುವ ಮೂಲಕ ಶರಣರ ಆಶಯದಂತೆ ಜೀವನ ಸಾಗಿಸಬೇಕು ಎಂದು ಅವರು ಹೇಳಿದರು.ಇದಕ್ಕೂ ಮೊದಲು ಮದಗುಣಕಿ ಗ್ರಾಮದಲ್ಲಿ ಕೆ.ಆರ್.ಐ.ಡಿ.ಎಲ್ ವತಿಯಿಂದ ಕೈಗೊಳ್ಳಲಾಗಿರುವ ರೂ. 25 ಲಕ್ಷ ವೆಚ್ಚದ ಸಿಸಿ ರಸ್ತೆಗೆ ಭೂಮಿಪೂಜೆ, ಪಿ.ಆರ್.ಇಡಿ ವತಿಯಿಂದ ರೂ. 20 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಅಂಗನವಾಡಿ ಕಟ್ಟಡ ಉದ್ಘಾಟಿಸಿದ ಅವರು, ಅವರು, ಅಂಗನವಾಡಿ ಸಿಬ್ಬಂದಿ ಮತ್ತು ಅಧಿಕಾರಿಗಳು ಮಕ್ಕಳ ಶಿಕ್ಷಣದ…

Read More

ಇಂಡಿ: ವಿಶೇಷ ಸಂಭ್ರಮ, ಸಡಗರ ಹಾಗೂ ಭಕ್ತಿ-ಭಾವದಿಂದ ಆಚರಿಸಲಾಗುವ ಹಬ್ಬವೆಂದರೆ ಅದು ನಾಗರ ಪಂಚಮಿ. ಈ ದಿನ ನಾಗರ ಹಾವುಗಳನ್ನು ಪೂಜಿಸಲಾಗುತ್ತದೆ. ನಾಗನ ಕಲ್ಲುಗಳಿಗೆ ಶಾಸ್ತ್ರೋಕ್ತ ಪೂಜೆ ನಡೆಯುತ್ತದೆ. ನಾಗ ದೇವರ ಆಶೀರ್ವಾದ ಪಡೆಯುವುದು ಮತ್ತು ದುಷ್ಟರಿಂದ ರಕ್ಷಣೆ ಪಡೆದುಕೊಳ್ಳಲು ಜನರು ನಾಗನಿಗೆ ಹಾಲು, ಹೂವು, ಹಣ್ಣು ಅರ್ಪಿಸುತ್ತಾರೆ. ಅದರಂತೆ ಲಿಂಬೆ ನಾಡಿನ ತಾಲ್ಲೂಕಿನಾದ್ಯಾಂತ ನಾಗಮೂರ್ತಿಗಳಿಗೆ ಹಾಲೆರೆಯುವ ಮೂಲಕ‌ ನಾಗರ ಪಂಚಮಿ ಆಚರಿಸಿದರು.ಗುರುವಾರ ತಾಲ್ಲೂಕಿನ ತಾಂಬಾ ಗ್ರಾಮದಲ್ಲಿ ಮಹಿಳೆಯರು ಮಕ್ಕಳು ಸೇರಿಕೊಂಡು ಮನೆಯಲ್ಲಿ ಇರುವ ನಾಗಮೂರ್ತಿಗಳಿಗೆ ಹಾಲೆರೆಯುವ ಮೂಲಕ ನಾಗರಪಂಚಮಿಯನ್ನು ಆಚರಿಸಿದರು.ಶುಕ್ರವಾರ ಸಾರ್ವಜನಿಕವಾಗಿ ವಿವಿಧ ದೇವಸ್ಥಾನದಲ್ಲಿ ಕಲ್ಲು ನಾಗದೇವತೆಗಳಿಗೆ ಹಾಲೆರೆಯುವ ಕಾರ್ಯಕ್ರಮ, ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಲಾದ ನಾಗದೇವತಿಗಳಿಗೆ ಬೆಳಿಗ್ಗೆ 8 ಗಂಟೆಯಿಂದಲೆ ಗ್ರಾಮದ ಮಹಿಳೆಯರು ವಿಶೇಷ ಪೂಜೆಗಳು ನೆರವೇರಿಸಿ ಭಕ್ತಿ ಭಾವ ಮೆರೆದರು. ಪ್ರತಿ ಮನೆಯಲ್ಲಿ ಮಹಿಳೆಯರು ಕಳೆದ ಹಲವು ದಿನಗಳಿಂದ ಎಳ್ಳು, ಕರಚಿಕಾಯಿ, ಉಂಡಿ, ಕರದಂಟು, ಚಕ್ಕಲಿ, ಜಿಲೇಬಿ ವಿವಿಧ ದಿನಸಿ ಪದಾರ್ಥಗಳನ್ನು ತಯಾರಿಸಿ ನಾಗದೇವತಿಗಳಿಗೆ ನೈವೇದ್ಯ ಅರ್ಪಿಸಿದರು. ಅಲ್ಲದೆ ಬಂಧು…

Read More

ವಿಜಯಪುರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ (ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ) ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅರ್ಹ ವಿದ್ಯಾರ್ಥಿಗಳುhttps://shp.karnataka.gov.in/bcwdವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ದಿನಾಂಕ : ೦೪-೦೯-೨೦೨೪ ಕೊನೆಯ ದಿನಾಂಕವಾಗಿದೆ. ತಾಲೂಕಾವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್ https://bcwd.karnataka.gov.inಅಥವಾ ಸಹಾಯವಾಣಿ ಸಂಖ್ಯೆ ೮೦೫೦೭೭೦೦೦೪ ಮತ್ತು ೮೦೫೦೭೭೦೦೦೫ ಸಂಖ್ಯೆಗೆ ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.comಇ-ಮೇಲ್ ಮೂಲಕ ಅಥವಾ ಹಿಂದುಳಿದ ವರ್ಗಗಳ ಇಲಾಖೆಯ ಜಿಲ್ಲಾ-ತಾಲೂಕಾ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More