Author: editor.udayarashmi@gmail.com

ವಿಜಯಪುರ: ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಅಥವಾ ಪದವಿ ಪಡೆದಿರುವ ಮಹಿಳಾ ವಿದ್ಯಾರ್ಥಿಗಳಿಗೆ ಪತ್ರಿಕಾಲಯದಲ್ಲಿ ತರಬೇತಿ ಪಡೆಯಲು ಅರ್ಜಿ ಆಹ್ವಾನಿಸಿದೆ.ಪ್ರಸಕ್ತ ಸಾಲಿನಲ್ಲಿ ೫ ಮಂದಿ ಮಹಿಳಾ ವಿದ್ಯಾರ್ಥಿಗಳಿಗೆ ಪ್ರಮುಖ ದಿನಪತ್ರಿಕೆಗಳ ಕಾರ್ಯಾಲಯಗಳಲ್ಲಿ ೨ ತಿಂಗಳ ಕಾಲ ತರಬೇತಿ ಪಡೆಯಲು, ಮಾಸಿಕ ತಲಾ ೨೦,೦೦೦/- ರೂ ಗಳನ್ನು ಶಿಶ್ಯವೇತನ ನೀಡಲಾಗುವುದು.ಕರ್ನಾಟಕದ ಯಾವುದೇ ವಿಶ್ವವಿದ್ಯಾಲಯಗಳಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ/ಪದವಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗಿದೆ. ಮಹಿಳಾ ವಿದ್ಯಾರ್ಥಿಗಳು ಆಗಸ್ಟ್ ೨೬ ರೊಳಗೆ ತಮ್ಮ ಸ್ವವಿವರ, ದೂರವಾಣಿ ಸಂಖ್ಯೆ, ಇ-ಮೇಲ್ ವಿಳಾಸ, ಆರ್ಥಿಕ ಸ್ಥಿತಿ, ಅಂಕಪಟ್ಟಿಗಳ ಫೋಟೋ ಪ್ರತಿಯನ್ನು ಸ್ಕ್ಯಾನ್ ಮಾಡಿ karnatakamediaacademy @gmail.com ಗೆ ಇಮೇಲ್ ಮೂಲಕ ಕಳುಹಿಸಬಹುದು.೨೮ ವರ್ಷದೊಳಗಿನ ಮಹಿಳಾ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅಕಾಡೆಮಿಯು ಅರ್ಹತಾ ಪರೀಕ್ಷೆ ನಡೆಸಲಿದೆ. ಈ ಪರೀಕ್ಷೆಯ ದಿನಾಂಕ, ಸ್ಥಳ ಮತ್ತು ಸಮಯವನ್ನು ಸಂದರ್ಶನದ ವೇಳೆ ತಿಳಿಸಲಾಗುವುದು ಎಂದು ಕರ್ನಾಟಕ ಮಾಧ್ಯಮ…

Read More

ವಿಜಯಪುರ: ಜವಳಿ, ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್.ಪಾಟೀಲ ಅವರು ಆ.೧೦ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಆ.೯ರಂದು ಮೈಸೂರಿನಿಂದ ಹೊರಟು ಆ.೧೦ರ ಬೆಳಿಗ್ಗೆ ೯ ಗಂಟೆಗೆ ವಿಜಯಪುರಕ್ಕೆ ಆಗಮಿಸಲಿದ್ದಾರೆ. ಬೆಳಿಗ್ಗೆ ೧೧ ಗಂಟೆಗೆ ಹೊನ್ನುಟಗಿಯಲ್ಲಿ ವಿವಿದ್ದೊದ್ಧೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘ ನಿಯಮಿತ ಹೊನ್ನುಟಗಿ ಇದರ ನೂತನ ಗೋದಾಮಿನ ಮತ್ತು ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ ೧೨ ಗಂಟೆಗೆ ಹೊನ್ನುಟಗಿಯಿಂದ ಹೊರಟು ೧೨-೩೦ಕ್ಕೆ ವಿಜಯಪುರಕ್ಕೆ ಆಗಮಿಸಲಿದ್ದಾರೆ. ಮಧ್ಯಾಹ್ನ ೧ ಗಂಟೆಯಿಂದ ಸಂಜೆ ೬ ಗಂಟೆಯವರೆಗೆ ಬಸವನಬಾಗೇವಾಡಿ ಮತಕ್ಷೇತ್ರದಲ್ಲಿ ಸಾರ್ವಜನಿಕರ ಕುಂದು-ಕೊರತೆಗಳ ವಿಚಾರಣೆ ಹಾಗೂ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ವಿಜಯಪುರದಲ್ಲಿ ವಾಸ್ತವ್ಯ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Read More

– ಸಂಪದಾ ಹಿರೇಮಠಆಲಮಟ್ಟಿ :ಪವಿತ್ರ ಶ್ರಾವಣ ಮಾಸದಲ್ಲಿ ಬರುವ ವೈವಿಧ್ಯ ಹಬ್ಬಗಳು ಮಹಿಳಾ ಲೋಕದ ಅಚ್ಚುಮೆಚ್ಚಿನ ಹಬ್ಬಗಳಾಗಿವೆ. ಅದರಲ್ಲೂ ಪ್ರಿಯವಾದ ಹಬ್ಬ ನಾಗರ ಪಂಚಮಿ. ಈ ಹಬ್ಬದ ಸಂಭ್ರಮ ಕೃಷ್ಣೆಯ ತಟದಲ್ಲಿ ಶುಕ್ರವಾರ ಕಳೆಗಟ್ಟಿತ್ತು. ಆಲಮಟ್ಟಿಯಲ್ಲಿಂದು ನಾಗರ ಪಂಚಮಿ ಹಬ್ಬವನ್ನು ಮಹಿಳೆಯರು ಸಡಗರ,ಸಂಭ್ರಮದಿಂದ ಆಚರಿಸಿ ಭಕ್ತಿ,ಭಾವದ ಧನ್ಯತೆ ಮೆರೆದರು. ವಿವಿಧೆಡೆ ವಿಶೇಷವಾಗಿ ಮಹಿಳೆಯರು ಕುಟುಂಬದ ಸದಸ್ಯರೊಂದಿಗೆ ಪುಟ್ಟ ಮಕ್ಕಳು ಹಾಗೂ ನೆರೆಹೊರೆಯವರ ಆತ್ಮೀಯ ಒಡನಾಡಿಗಳ ಜೊತೆಗೂಡಿ ದೇಗುಲಗಳಿಗೆ ತೆರಳಿ ಪೂಜೆ, ಪುರಸ್ಕಾರ ಸಲ್ಲಿಸಿದರು. ಖುಷಿಭಾವದಲ್ಲಿ ಭಕ್ತಿ ನಮನ ಸಲಿಸಿದರು. ಶುಚಿಯಾಗಿ,ನಯವಾಗಿ ನಾಗದೇವನಿಗೆ ಶ್ರದ್ಧೆ ಭಕ್ತಿಯಿಂದ ಹಾಲೆರೆದು ನಮಿಸಿದರು. ನಾಗರ ಪ್ರತಿಮೆಗಳಿಗೆ, ಹುತ್ತುಗಳಿಗೆ ಹಾಲು ಎರೆದು ನೈವೇದ್ಯ ಸಲ್ಲಿಸಿ ಪೂಜಿಸುತ್ತಿರುವ ದೃಶ್ಯ ಕಂಡುಬಂತು. ಡ್ಯಾಂ ಸೈಟ್ ಸರ್ಕಲ್ ನಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಎದುರಿನ ರಸ್ತೆ ಪಕ್ಕದಲ್ಲಿರುವ ಗಿಡವೊಂದರ ಬಳಿ ಹುಲುಸಾಗಿದ್ದ ನಾಗದೇವನ ಹುತ್ತಕ್ಕೆ ಪಲ್ಲವಿ ಜಮಾದಾರ, ಪೂಜಾ ಪಂಗರಗಾ ಸೇರಿದಂತೆ ಗ್ರಾಮದ ಅನೇಕ ಮಹಿಳೆಯರು ಹಾಲೆದು ಪೂಜೆ…

Read More

ಇಂಡಿ: ಕ್ರೀಡೆಗಳು ಮನುಷ್ಯನಿಗೆ ದೈಹಿಕ ಹಾಗೂ ಮಾನಸಿಕ ಬೆಳವಣಗೆಗೆ ಸಹಕಾರಿಯಾಗಿದ್ದು, ಕ್ರೀಡೆಗಳು ನಾಯಕತ್ವದ ಗುಣ ಬೆಳೆಸುವುದಲ್ಲದೇ ಆರೋಗ್ಯವಂತ ಶರೀರವನ್ನುಂಟು ಮಾಡುತ್ತದೆ ಎಂದು ಗ್ರಾಮ ಪಂಚಾಯತ್ ಸದಸ್ಯ ಅಪ್ಪಣ್ಣ ಕಲ್ಲೂರ ಹೇಳಿದರು.ತಾಲ್ಲೂಕಿನ ತಾಂಬಾ ಗ್ರಾಮದ ಅಂಜುಮನ್ ಇಸ್ಲಾಂ ಕಮೀಟಿ ವತಿಯಿಂದ ಹಾಪ್ ಪಿಚ್ ಟೆನಿಸ್‌ಬಾಲ್ ಕ್ರಿಕೇಟ್ ಪಂದ್ಯಾವಳಿಯಲ್ಲಿ ಬಹುಮಾನ ವಿತರಣೆ ಮಾಡಿ ಅವರು ಮಾತನಾಡಿ ಕ್ರಿಕೆಟ, ಕಬಡ್ಡಿ, ಖೋ ಖೋ, ಇಂತಹದ ಆಟಗಳಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಜೊತೆ ಬಲಗೊಳ್ಳುತ್ತೆ. ಆದ್ದರಿಂದ ಆಸ್ಪತ್ರೆ ಹೋಗುವ ಪ್ರಮೇಯ ಬರುವುದಿಲ್ಲೆಂದು ಹೇಳಿದರು.ಶ್ರೀ ಸಂಗನಬಸವ ಸೌಹಾದ ಪತ್ತಿನ ಸಹಕಾರಿ ಸಂಸ್ಥೆಯ ನಿರ್ದೇಶಕ ಸಿದ್ದು ಹತ್ತಳ್ಳಿ ಮಾತನಾಡಿ, ಕ್ರೀಡಾ ಕೂಟಗಳು ಸ್ಪರ್ಧಾ ಮನೋಭಾವ ಬೆಳೆಸುತ್ತವಲ್ಲದೆ, ಸಹೋದರ ಭಾವವನ್ನು ಮೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಯುವಕರು ಶಿಕ್ಷಣದ ಜೊತೆಗೆ ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ಸದೃಢ ಶರೀರವನ್ನು ಹೊಂದಿ ಆರೋಗ್ಯ ಕಾಪಾಡಿಕೊಳ್ಳಬೇಕು. ನಮ್ಮ ಹಿಂದಿನ ಪೂರ್ವಜರು ಕುಸ್ತಿಗಳನ್ನು ಆಡುವ ಮೂಲಕ ಅವರು ಆಯಸ್ಸು ಹೆಚ್ಚಾಗಿರುವುದನ್ನು ಸ್ಮರಿಸಿದರು. ಅವರು ಸೇವಿಸಿಸುವ ಆಹಾರ…

Read More

“ವೀಣಾಂತರಂಗ”- ವೀಣಾ ಹೇಮಂತ್ ಗೌಡ ಪಾಟೀಲ್, ಮುಂಡರಗಿ – ಗದಗ ಪಾಂಡವರಲ್ಲಿ ಒಬ್ಬರಾದ ಅರ್ಜುನನ ಮಗ ಅಭಿಮನ್ಯು ವಿನ ಪುತ್ರ ಪರೀಕ್ಷಿತ ಮಹಾರಾಜ. ಈ ಪರೀಕ್ಷಿತ ಮಹಾರಾಜನಿಗೆ ಜ್ಯೋತಿಷಿಗಳು ತಿಳಿಸಿದಂತೆ ರಕ್ಷಕ ಎಂಬ ಸರ್ಪವು ಕಚ್ಚಿ ಆತನ ಸಾವಾಯಿತು. ಇದರಿಂದ ದುಃಖಕ್ಕೀ ಡಾದ ಪರೀಕ್ಷಿತ ಮಹಾರಾಜನ ಪುತ್ರಜನಮೇಜಯ ಮಹಾರಾಜನು ಹಾವುಗಳನ್ನೇ ಸರ್ವ ನಾಶ ಮಾಡುವೆನೆಂದು ಪಣತೊಟ್ಟನು.ಹಾವುಗಳನ್ನು ಸಂಪೂರ್ಣವಾಗಿ ನಾಶ ಮಾಡಲು ಆತನು ಸರ್ಪ ಯಜ್ಞ ಆರಂಭಿಸಿದನು. ಯಜ್ಞವನ್ನು ನೆರವೇರಿಸುತ್ತಿದ್ದ ಮುನಿಗಳು ನಾಗಗಳ ಹೆಸರನ್ನು ತೆಗೆದುಕೊಳ್ಳುತ್ತಿದ್ದಂತೆಯೇ ಎಲ್ಲಾ ಕಡೆಯಿಂದಲೂ ಸರ್ಪಗಳು ತಾನೇ ತಾನಾಗಿ ಆತನ ಯಜ್ಞ ಕುಂಡಕ್ಕೆ ಬಂದು ಆಹುತಿಯಾಗತೊಡಗಿದವು..ತಪೋನಿರತನಾಗಿದ್ದ ಆಸ್ತಿಕ ಎಂಬ ಮುನಿವರನಿಗೆ ಆತನ ಶಿಷ್ಯರು ಈ ವಿಷಯವನ್ನು ಅರುಹಿದರು. ಹಾವುಗಳು ಮನುಷ್ಯನಿಗೆ ಶತ್ರುಗಳಲ್ಲ ನಿರುಪದ್ರವ ಜೀವಿಗಳು.. ಅವುಗಳ ಕುಲ ವಿನಾಶ ಮಾಡುವುದರಿಂದ ಸಾಕಷ್ಟು ಅನಾಹುತಗಳಾಗುತ್ತವೆ ಎಂಬುದನ್ನು ಮನಗಂಡ ಆಸ್ತಿಕ ಮುನಿಯ ಯಜ್ಞ ನಡೆಯುತ್ತಿರುವ ಸ್ಥಳಕ್ಕೆ ಧಾವಿಸಿ ಬಂದನು. ಮುನಿಗಳ ಮೇಲೆ ಅಪಾರ ಭಯ ಭಕ್ತಿಯನ್ನು ಹೊಂದಿದ್ದ ಜನಮೇಜಯ ಮಹಾರಾಜನು ಮುನಿಗಳಿಗೆ…

Read More

ವಿಜಯಪುರ: ಪುಸ್ತಕಗಳಿಲ್ಲದ ಕೊಠಡಿಯು ಆತ್ಮವಿಲ್ಲದ ಶರೀರಕ್ಕೆ ಸಮಾನ. ಪುಸ್ತಕಗಳು ನಮ್ಮ ಉತ್ತಮ ಸ್ನೇಹಿತರು.ಅವುಗಳಿಂದ ಪಡೆದ ಜ್ಞಾನ ನಮ್ಮ ಬದುಕಿಗೆ ಶಕ್ತಿ ಸಂಜೀವಿನಿ.’ಪುಸ್ತಕಂ ಹಸ್ತ ಭೂಷಣಂ’ ಎಂಬಂತೆ ಯುವಕರು ಪುಸ್ತಕ ಓದುವ ಅಭ್ಯಾಸವನ್ನು ರೂಢಿಸಿಕೊಳ್ಳಬೇಕು ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ಅವರು ತಾಲೂಕಿನ ನಾಗಠಾಣ ಗ್ರಾಮದ ಗ್ರಂಥಾಲಯದಲ್ಲಿ ಶುಕ್ರವಾರದಂದು ಹಮ್ಮಿಕೊಂಡ ‘ರಾಷ್ಟ್ರೀಯ ಪುಸ್ತಕ ಪ್ರೇಮಿಗಳ ದಿನ’ವನ್ನು ಉದ್ದೇಶಿಸಿ ಮಾತನಾಡಿದರು.ಕಲಿಕೆ ಮತ್ತು ಜ್ಞಾನವನ್ನು ಹುಡುಕುವ ಉದ್ದೇಶಕ್ಕಾಗಿ ಪುಸ್ತಕಗಳನ್ನು ಓದುವ ಮತ್ತು ಆನಂದಿಸುವ ಅಭ್ಯಾಸವನ್ನು ಇಂದಿನ ಮಕ್ಕಳು-ಯುವಕರಲ್ಲಿ ಮರಳಿ ತರಲು ಪುಸ್ತಕ ಪ್ರೇಮಿಗಳು ಪ್ರಯತ್ನಿಸಬೇಕು ಎಂದು ಹೇಳಿದರು.ಓದು ಕಲಿಕೆಯ ಹೆಬ್ಬಾಗಿಲು. ಅದು ಅನಿವಾರ್ಯ ಕೌಶಲ. ವಿಶೇಷವಾಗಿ ಯುವಪೀಳಿಗೆಯನ್ನು ಬಾಧಿಸುವ ನಾನಾ ವ್ಯಸನ, ದುಶ್ಚಟ, ದುರಭ್ಯಾಸಗಳಿಗೆ ಓದುವ ಹವ್ಯಾಸವೇ ಸಂಜೀವಿನಿಯಾಗಿದೆ ಎಂದು ಹೇಳಿದರು.ಗ್ರಂಥಪಾಲಕ ಮಂಜುನಾಥ ಗಂಗನಳ್ಳಿ ಮಾತನಾಡಿ, ಬಾಲ್ಯದಿಂದಲೇ ಓದುವ ಪ್ರವೃತ್ತಿಯು ಸ್ವಕಲಿಕೆಗೆ ಅನುಕೂಲಕರ ವೇದಿಕೆ ನಿರ್ಮಿಸಿಕೊಡುತ್ತದೆ. ಪುಸ್ತಕವು ಸರ್ವರ ಪಾಲಿಗೂ ಅಧಿಕಾರಯುತ ಜ್ಞಾನ ನೀಡುತ್ತದೆ.ಓದುವಿಕೆಯು ವಿಮರ್ಶಾತ್ಮಕ ಚಿಂತನೆ, ಕಲ್ಪನೆ ಮತ್ತು ಸಾಕ್ಷರತೆಯ ಕೌಶಲ್ಯಗಳನ್ನು ಹೆಚ್ಚಿಸುತ್ತದೆ. ಮನುಷ್ಯನು…

Read More

ವಿಜಯಪುರ: ಶರಣರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ.ಶುಕ್ರವಾರ ಬಬಲೇಶ್ವರ ತಾಲೂಕಿನ ಕೊಡಬಾಗಿ ಗ್ರಾಮದಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ನಿರ್ಮಿಸಲಾಗಿರುವ ಅಕ್ಕಮಹಾದೇವಿ ಗುಡಿ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.ಅಕ್ಕಮಹಾದೇವಿ ನಮಗೆಲ್ಲರಿಗೂ ತಮ್ಮ ಆಚಾರ, ವಿಚಾರ, ವಚನಗಳ ಮೂಲಕ ಮಾದರಿಯಾಗಿದ್ದಾರೆ. ಶರಣ, ಶರಣೆಯರ ದೇವಸ್ಥಾನ ನಿರ್ಮಿಸುವುದರ ಜೊತೆಗೆ ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಬಾಳು ಹಸನಾಗುತ್ತದೆ. ಶ್ರಾವಣ ಮಾಸ ಪ್ರಾರಂಭವಾದಾಗ ಕೆಲವರು ತಮ್ಮ ಆಚಾರ, ವಿಚಾರಗಳನ್ನು ಬದಲಾಯಿಸಿಕೊಳ್ಳುತ್ತಾರೆ. ಈ ನಡವಳಿಕೆ ಕೇವಲ ಶ್ರಾವಣ ಮಾಸಕ್ಕೆ ಸೀಮಿತವಾಗದೇ, ಜೀವನದುದ್ದಕ್ಕೂ ಪಾಲಿಸುವ ಮೂಲಕ ಶರಣರ ಆಶಯದಂತೆ ಜೀವನ ಸಾಗಿಸಬೇಕು ಎಂದು ಅವರು ಹೇಳಿದರು.ಇದಕ್ಕೂ ಮೊದಲು ಮದಗುಣಕಿ ಗ್ರಾಮದಲ್ಲಿ ಕೆ.ಆರ್.ಐ.ಡಿ.ಎಲ್ ವತಿಯಿಂದ ಕೈಗೊಳ್ಳಲಾಗಿರುವ ರೂ. 25 ಲಕ್ಷ ವೆಚ್ಚದ ಸಿಸಿ ರಸ್ತೆಗೆ ಭೂಮಿಪೂಜೆ, ಪಿ.ಆರ್.ಇಡಿ ವತಿಯಿಂದ ರೂ. 20 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಅಂಗನವಾಡಿ ಕಟ್ಟಡ ಉದ್ಘಾಟಿಸಿದ ಅವರು, ಅವರು, ಅಂಗನವಾಡಿ ಸಿಬ್ಬಂದಿ ಮತ್ತು ಅಧಿಕಾರಿಗಳು ಮಕ್ಕಳ ಶಿಕ್ಷಣದ…

Read More

ವಿಜಯಪುರ: ಜಗತ್ತಿಗೆ ಸಂಸ್ಕೃತಿ ಸಾರಿದ ದೇಶ ಭಾರತ ಅಂತಹ ದೇಶದಲ್ಲಿ ಬದುಕುತ್ತಿರುವ ನಾವುಗಳು ವಿವಿಧತೆಯಲ್ಲಿ ಏಕತೆಯನ್ನು ಸಾರಿದ ದೇಶ ನಮ್ಮದು ನಿಜಕ್ಕೂ ನಾವು ಹಮ್ಮೆ ಪಡುವಂಥದ್ದು ಎಂದು ಚಡಚಣ ಸಂಗಮೇಶ್ವರ ಪದವಿ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ.ರಾಜಶೇಖರ ಮಾವಿನಮರ ಹೇಳಿದರು.ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದ ಐಕ್ಯೂಎಸಿ ಮತ್ತು ಸಮಾಜಶಾಸ್ತ್ರ ವಿಭಾಗದ ಸಹಯೋಗದಲ್ಲಿ ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ನಮ್ಮ ಸಂಸ್ಕ್ರತಿಯು ಅಂತರಂಗದ ಕುಸುಮವಾಗಿದೆ. ನಮ್ಮ‌ಲ್ಲಿ ಉತ್ತಮ ಸಂಸ್ಕೃತಿಯ ಅವಶ್ಯಕತೆ ಯಿದೆ. ಪ್ರಸ್ತುತ ಸಮಾಜದಲ್ಲಿ ಬದುಕುತ್ತಿರುವ ನಾವುಗಳು ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಇಂದಿನ ಯುವಕದ ಪಾತ್ರ ಅವಶ್ಯಕತೆ ಇದೆ. ಆಧುನೀಕರಣದಿಂದಾಗಿ ಇಂದಿನ ಯುವಜನತೆ ದಾರಿ ತಪ್ಪುತ್ತಿದ್ದಾರೆ. ಆಧುನಿಕ ಯುಗದಲ್ಲಿ ಪಾಶ್ಚಿಮಾತ್ಯ ದೇಶಗಳ ಸಂಸ್ಕೃತಿಗೆ ಮಾರುಹೋಗುತ್ತಿದ್ದೇವೆ. ನಮ್ಮ ಸಂಸ್ಕೃತಿ ಉಳಿಸಿ ಬೆಳೆಸಬೇಕಾಗಿರುವುದು ಇಂದಿನ ಯುವಕರ ಆದ್ಯ ಕರ್ತವ್ಯವಾಗಿದೆ. ಉತ್ತಮ ಸನ್ಮಾರ್ಗದಲ್ಲಿ ಬದುಕುವ ಕಲೆಯನ್ನು ರೂಡಿಸಿಕೊಳ್ಳಬೇಕು. ಅದರಂತೆ ನಾವು ಸೇವಿಸುವ ಉತ್ತಮ ಆಹಾರವು ಒಂದು…

Read More

ಬಸವನಬಾಗೇವಾಡಿ: ಕಳೆದ ಐದು ವರ್ಷದಿಂದ ಶಿಕ್ಷಣ ಇಲಾಖೆಯು ದಿನಕ್ಕೊಂದು ಆದೇಶ ಹೊರಡಿಸಿ ಅನುದಾನ ರಹಿತ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಿದ್ಯಾರ್ಥಿಗಳನ್ನು ಮಲತಾಯಿ ಮಕ್ಕಳಂತೆ ನೋಡಿಕೊಳ್ಳುವ ಜೊತೆಗೆ ಖಾಸಗಿ ಶಿಕ್ಷಣ ಸಂಸ್ಥೆಗಳ ಸ್ವತಂತ್ರ ಹರಣ ಮಾಡುವ ಜೊತೆಗೆ ಅವೈeನಿಕ ನಿಯಮಗಳನ್ನು ಜಾರಿಗೆ ತಂದಿರುವದನ್ನು ಖಂಡಿಸಿ ಆಗಷ್ಟ್ ೧೫ ರಂದು ಅನುದಾನ ರಹಿತ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಆಡಳಿತ ಮಂಡಳಿಯ ನೇತೃತ್ವದಲ್ಲಿ ರಾಜ್ಯದ ಎಲ್ಲ ಜಿಲ್ಲೆ, ತಾಲೂಕು ಕೇಂದ್ರಗಳಲ್ಲಿ ಆಡಳಿತ ಮಂಡಳಿಯ ಮುಖ್ಯಸ್ಥರು, ಶಿಕ್ಷಕರು ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಕರಾಳ ದಿನಾಚರಣೆಯನ್ನಾಗಿ ಆಚರಿಸಲಾಗುವುದು ಎಂದು ಜಿಲ್ಲಾ ಅನುದಾನ ರಹಿತ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಆಡಳಿತ ಮಂಡಳಿಗಳ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಪೂಜಾರಿ ತಿಳಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸರ್ಕಾರವು ಸರ್ಕಾರಿ ಶಾಲೆಗಳಲ್ಲಿ ಯಾವ ನಿಯಮಗಳನ್ನು ಪಾಲಿಸದೇ ನ್ಯಾಯಾಲಯದ ತೀರ್ಪುಗಳನ್ನು ಕಡೆಗಣಿಸಿ ಹೊಸ ಶಿಕ್ಷಣ ಸಂಸ್ಥೆಗಳಿಗೆ ರಚಿಸಿದ ನಿಯಮವನ್ನು ಯಥಾವತ್ತಾಗಿ ಹಳೆಯ ಶಿಕ್ಷಣ ಸಂಸ್ಥೆಗಳಿಗೆ ಹೇರುವ ಮೂಲಕ…

Read More

ಬಸವನಬಾಗೇವಾಡಿ: ಯುವಜನಾಂಗ ದುಶ್ಚಟಗಳಿಗೆ ದಾಸರಾಗಿ ತಮ್ಮ ಅಮೂಲ್ಯವಾದ ಜೀವನವನ್ನು ಕಳೆದುಕೊಳ್ಳುತ್ತಿರುವದು ಖೇದಕರ ಸಂಗತಿ ಎಂದು ಆಂಗ್ಲ ಉಪನ್ಯಾಸಕಿ ಎ.ಪಿ.ದಂಡಾವತಿ ಹೇಳಿದರು.ಪಟ್ಟಣದ ಬಿಎಲ್ಡಿಇ ಸಂಸ್ಥೆಯ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ಹಮ್ಮಿಕೊಂಡಿದ್ದ ವ್ಯಸನ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯುವಜನಾಂಗ ತಮ್ಮ ಜೀವನದಲ್ಲಿ ದುಶ್ಚಟಗಳಿಂದ ದೂರವಿರುವ ಮೂಲಕ ತಮ್ಮ ಸಾಧನೆಯನ್ನು ಮಾಡುವ ಕಡೆಗೆ ಗಮನ ಹರಿಸಬೇಕು. ಇಂದಿನ ಯುವಜನಾಂಗ ನಾಡಿನ ಭವಿಷ್ಯದ ಪ್ರಜೆಗಳಾಗಿದ್ದಾರೆ. ಯುವಜನಾಂಗ ಅಮೂಲ್ಯ ರತ್ನಗಳಿದ್ದಂತೆ. ದೇಶಕ್ಕೆ ಏನಾದರೂ ಕೊಡುಗೆ ನೀಡಿದಾಗ ಮಾತ್ರ ಯುವ ಸಮುದಾಯಕ್ಕೆ ಒಂದು ಗೌರವ ಬರಲು ಸಾಧ್ಯ ಎಂದರು.ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಆರ್.ಎ.ಪವಾರ ಮಾತನಾಡಿ, ಮನುಷ್ಯ ಜೀವನ ಸಿಕ್ಕಿರುವುದು ಭಾಗ್ಯ. ಇದನ್ನು ನಾವು ಅತ್ಯಂತ ಜಾಗರೂಕತೆಯಿಂದ ದುಶ್ಚಟಗಳಿಂದ ದೂರವಿದ್ದು ಉತ್ತಮ ಜೀವನ ಸಾಗಿಸಬೇಕು. ವಿದ್ಯಾರ್ಥಿಗಳು ಸಾಧನೆಯ ಮಾರ್ಗದಲ್ಲಿ ಸಾಗುವ ಮೂಲಕ ತಂದೆ-ತಾಯಿಯ ಕನಸನ್ನು ನನಸು ಮಾಡುವ ಮೂಲಕ ಸಂತೋಷವನ್ನು ಉಂಟು ಮಾಡಿದಾಗ ಮಾತ್ರ ಬದುಕಿಗೆ ಬೆಲೆ ಬರಲು ಸಾಧ್ಯ ಎಂದರು.ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕರ-ಬೋಧಕೇತರ…

Read More