Author: editor.udayarashmi@gmail.com

ಕೆಂಭಾವಿ: ಯಾದಗಿರಿ ನಗರ ಠಾಣಾ ಪಿಎಸ್ಐ ಪರಶುರಾಮ ಸಾವಿನ ತನಿಖೆಯನ್ನು ಸಿಬಿಐಗೆ ವಹಿಸಬೇಕು, ಮೃತ ಪರಶುರಾಮ ಪತ್ನಿಗೆ ಸರ್ಕಾರಿ ನೌಕರಿ ನೀಡುವುದು, ಅವರ ಕುಟುಂಬಕ್ಕೆ ಐದು ಕೋಟಿ ರೂಪಾಯಿ ಪರಿಹಾರ ನೀಡಬೇಕು, ಮುಂದೆ ಹುಟ್ಟುವ ಮಗುವಿನ ವಿದ್ಯಾಭ್ಯಾಸದ ಖರ್ಚನ್ನು ಸರ್ಕಾರ ಬರಿಸಬೇಕೆಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಹೋಬಳಿ ಘಟಕ ಒತ್ತಾಯಿಸಿದೆ.ಪಿಎಸ್ಐ ಪರಶುರಾಮ ಅವರ ನಿಗೂಢ ಸಾವಿಗೆ ಸ್ಥಳೀಯ ಶಾಸಕ ಚೆನ್ನಾರೆಡ್ಡಿ ಪಾಟೀಲ ತುನ್ನೂರು ಹಾಗೂ ಅವರ ಮಗ ಸನ್ನಿಗೌಡ ಪಾಟೀಲ ಮೇಲೆ ಎಫ್ಐಆರ್ ದಾಖಲಾಗಿದ್ದರು ಅವರನ್ನು ಬಂಧಿಸಿದೆ ಸರ್ಕಾರ ರಕ್ಷಣೆ ಮಾಡುತ್ತಿದೆ ಎಂಬ ಅನುಮಾನಗಳು ಕಾಡುತ್ತಿವೆ. ಶೀಘ್ರವೇ ಆರೋಪಿಗಳನ್ನು ಬಂಧಿಸಿಬೇಕು ಮತ್ತು ಮೃತ ಪಿಎಸ್ಐ ಪರಶುರಾಮ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಗೃಹ ಸಚಿವ ಡಾ ಜಿ ಪರಮೇಶ್ವರ ಇವರಿಗೆ ಬರೆದು ಮನವಿ ಪತ್ರವನ್ನು ಉಪತಹಸೀಲ್ದಾರ್ ಮೂಲಕ ಕರ್ನಾಟಕ ಸರ್ಕಾರಕ್ಕೆ ಸಲ್ಲಿಸಿದರು.ಇದೇ ವೇಳೆ ಶಿವಶರಣಪ್ಪ ವಾಡಿ, ಶರಣಬಸಪ್ಪ ಹೂವಿನಳ್ಳಿ, ಸಿದ್ದಣ್ಣ ಕರಡಕಲ್, ಶರಣಪ್ಪ ಗಾಯಕವಾಡ, ಬಸವಣ್ಣೆಪ್ಪ ಮಾಳಳ್ಳಿಕರ್,…

Read More

ಕೆಂಭಾವಿ: ಯಾದಗಿರಿ ನಗರ ಠಾಣಾ ಪಿಎಸ್ಐ ಪರಶುರಾಮ ಸಾವಿನ ತನಿಖೆಯನ್ನು ಸಿಬಿಐಗೆ ವಹಿಸಬೇಕು, ಮೃತ ಪರಶುರಾಮ ಪತ್ನಿಗೆ ಸರ್ಕಾರಿ ನೌಕರಿ ನೀಡುವುದು, ಅವರ ಕುಟುಂಬಕ್ಕೆ ಐದು ಕೋಟಿ ರೂಪಾಯಿ ಪರಿಹಾರ ನೀಡಬೇಕು, ಮುಂದೆ ಹುಟ್ಟುವ ಮಗುವಿನ ವಿದ್ಯಾಭ್ಯಾಸದ ಖರ್ಚನ್ನು ಸರ್ಕಾರ ಬರಿಸಬೇಕೆಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಹೋಬಳಿ ಘಟಕ ಒತ್ತಾಯಿಸಿದೆ.ಪಿಎಸ್ಐ ಪರಶುರಾಮ ಅವರ ನಿಗೂಢ ಸಾವಿಗೆ ಸ್ಥಳೀಯ ಶಾಸಕ ಚೆನ್ನಾರೆಡ್ಡಿ ಪಾಟೀಲ ತುನ್ನೂರು ಹಾಗೂ ಅವರ ಮಗ ಸನ್ನಿಗೌಡ ಪಾಟೀಲ ಮೇಲೆ ಎಫ್ಐಆರ್ ದಾಖಲಾಗಿದ್ದರು ಅವರನ್ನು ಬಂಧಿಸಿದೆ ಸರ್ಕಾರ ರಕ್ಷಣೆ ಮಾಡುತ್ತಿದೆ ಎಂಬ ಅನುಮಾನಗಳು ಕಾಡುತ್ತಿವೆ. ಶೀಘ್ರವೇ ಆರೋಪಿಗಳನ್ನು ಬಂಧಿಸಿಬೇಕು ಮತ್ತು ಮೃತ ಪಿಎಸ್ಐ ಪರಶುರಾಮ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಗೃಹ ಸಚಿವ ಡಾ ಜಿ ಪರಮೇಶ್ವರ ಇವರಿಗೆ ಬರೆದು ಮನವಿ ಪತ್ರವನ್ನು ಉಪತಹಸೀಲ್ದಾರ್ ಮೂಲಕ ಕರ್ನಾಟಕ ಸರ್ಕಾರಕ್ಕೆ ಸಲ್ಲಿಸಿದರು.ಇದೇ ವೇಳೆ ಶಿವಶರಣಪ್ಪ ವಾಡಿ, ಶರಣಬಸಪ್ಪ ಹೂವಿನಳ್ಳಿ, ಸಿದ್ದಣ್ಣ ಕರಡಕಲ್, ಶರಣಪ್ಪ ಗಾಯಕವಾಡ, ಬಸವಣ್ಣೆಪ್ಪ ಮಾಳಳ್ಳಿಕರ್,…

Read More

ವಿಜಯಪುರ: ಪ್ರಸಕ್ತ ೨೦೨೪-೨೫ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಗೆ ದ್ರಾಕ್ಷಿ ಬೆಳೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ನೊಂದಾಯಿಸುವ ಅವಧಿಯನ್ನು ದಿನಾಂಕ : ೧೬-೦೮-೨೦೨೪ ರವರೆಗೆ ವಿಸ್ತರಿಸಲಾಗಿದ್ದು, ಬೆಳೆ ಸಾಲ ಪಡೆದ ರೈತರು ಹಾಗೂ ಬೆಳೆ ಸಾಲ ಪಡೆಯದೆ ಇರುವ ರೈತರು ತಮ್ಮ ಆಧಾರ ಕಾರ್ಡ ಝರಾಕ್ಸ, ಪಹಣಿ ಪತ್ರಿಕೆ ಹಾಗೂ ಬ್ಯಾಂಕ್ ಪಾಸ್ ಬುಕ್ ಪ್ರತಿಯೊಂದಿಗೆ ಹತ್ತಿರದ ಬ್ಯಾಂಕುಗಳಲ್ಲಿ, ಗ್ರಾಮ ಒನ್ ಕೇಂದ್ರ ಅಥವಾ ಸಿಎಸ್‌ಸಿ ಸೆಂಟರ್‌ಗಳಲ್ಲಿ ವಿಮಾ ಯೋಜನೆಯಡಿ ನೋಂದಾಯಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದ್ದಾರೆ. ೨೦೨೪-೨೫ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಈಗಾಗಲೇ ದ್ರಾಕ್ಷಿ ಬೆಳೆಗೆ ವಿಮೆ ನೊಂದಾಯಿಸಿಕೊಳ್ಳದ ರೈತರಿಗೆ ಅವಧಿಯನ್ನು ವಿಸ್ತರಿಸಲಾಗಿದ್ದು, ರೈತರು ಪಾವತಿಸಬೇಕಾದ ವಿಮಾ ಕಂತಿನ ಮೊತ್ತ (೫%) ರೂ. ೧೪೦೦೦/- ಪ್ರತಿ ಹೆಕ್ಟರ್‌ಗಳಾಗಿರುತ್ತದೆ.ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಕುಮಾರಿ ಪವಿತ್ರಾ ಅಗ್ರಿಕಲ್ಚರ್ ಇನ್ಸುರೆನ್ಸ್ ಕಂಪನಿ ವಿಮಾ ಸಂಸ್ಥೆಯ ಪ್ರತಿನಿಧಿ ಮೊಬೈಲ್ ನಂ: ೮೮೯೯೮೮೭೮೭೩, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ವಿಜಯಪುರ – ಮೊ:…

Read More

ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗದಿಂದ ಪ್ರಯಾಣಿಕರ ಅನುಕೂಲಕ್ಕಾಗಿರುವ ಸುಸಜ್ಜಿತವಾದ ಬಸ್ ನಿಲ್ದಾಣಗಳಲ್ಲಿ ಸಾರ್ವಜನಿಕರು-ಪ್ರಯಾಣಿಕರು ಎಲ್ಲೆಂದರಲ್ಲಿ ಕಸ ಒಗೆಯುವುದು, ಮೂತ್ರ ವಿಸರ್ಜನೆ, ಉಗುಳುವುದು ಮಾಡದೇ ನಿಲ್ದಾಣಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.ಸಾರ್ವಜನಿಕರು, ಪ್ರಯಾಣಿಕರು ಬಸ್ ನಿಲ್ದಾಣಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಒಂದು ವೇಳೆ ಬಸ್ ನಿಲ್ದಾಣಗಳಲ್ಲಿ ಎಲ್ಲೆಂದರಲ್ಲಿ ಉಗುಳುವುದು, ಮೂತ್ರ ವಿಸರ್ಜನೆ, ಕಸ ಚೆಲ್ಲುವುದು ಕಂಡು ಬಂದಲ್ಲಿ ಅಂತಹ ಪ್ರಯಾಣಿಕರ ಮೇಲೆ ದಂಡ ವಿಧಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ಕರ್ನಾಟಕದ ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಆ.೨೨ರಂದು ಬೆಳಿಗ್ಗೆ ೧೦ ರಿಮದ ೧-೩೦ರವರೆಗೆ ಹಾಗೂ ಮಧ್ಯಾಹ್ನ ೨-೩೦ರಿಂದ ೫ ಗಂಟೆಯವರೆಗೆ ನಗರದ ಸ್ಟೇಶನ್ ರಸ್ತೆಯ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ ವಿಚಾರಣೆ ನಡೆಸಲಿದ್ದು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ತಮ್ಮ ಸಮಸ್ಯೆ-ಅಹವಾಲುಗಳಿಗೆ ಪರಿಹಾರ ಪಡೆದುಕೊಳ್ಳುವಂತೆ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಕೋರಿದ್ದಾರೆ.ಸರ್ಕಾರಿ ಅಧಿಕಾರಿ-ನೌಕರರು ಕಾನೂನು ರಿತ್ಯ ಕಾರ್ಯ ಮಾಡಲು ವಿಳಂಬವಾಗುತ್ತಿದ್ದಲ್ಲಿ, ಅಥವಾ ಅಧಿಕಾರಿ-ನೌಕರರು ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ವೃಥಾ ತೊಂದರೆ ಕೊಡುವುದು ಅಥವಾ ಇನ್ನಾವುದೇ ತರಹದ ದುರಾಡಳಿತದಲ್ಲಿ ತೊಡಗಿದ್ದಲ್ಲಿ ತೊಂದರೆಗೊಳಗಾದ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಲಿಖಿತ ರೂಪದಲ್ಲಿ ದಾಖಲೆ, ಸಾಕ್ಷಾಧಾರಗಳೊಂದಿಗೆ ಸಲ್ಲಿಸಿ ಬಗೆಹರಿಸಿಕೊಳ್ಳಬಹುದಾಗಿದೆ.ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ ತನಿಖೆ-ವಿಚಾರಣೆಗೆ ಬಾಕಿ ಇರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ಕಾನೂನು ರಿತ್ಯ ಆ.೨೩ರಂದು ಬೆಳಿಗ್ಗೆ ೧೦ ರಿಂದ ಮಧ್ಯಾಹ್ನ ೧-೩೦ರವರೆಗೆ ಮತ್ತು ಮಧ್ಯಾಹ್ನ ೨-೩೦ರಿಂದ ೫ ಗಂಟೆಯವರೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿಚಾರಣೆ ನಡೆಸಲಿದ್ದಾರೆ.…

Read More

ವಿಜಯಪುರ: ಜಿಲ್ಲಾ ಉದ್ಯೊಗ ವಿನಿಮಯ ಕೇಂದ್ರ ವಿಜಯಪುರ ಹಾಗೂ ಮುದ್ದೇಬಿಹಾಳದ ಎಂಜಿವಿಸಿ ಪದವಿ ಕಾಲೇಜ್ ಮತ್ತು ಧಾರವಾಡದ ಲಾಜಿಕ್ ಕಂಪ್ಯೂಟರ್ ಸೆಂಟರ್ ಇವರ ಸಹಯೋಗದಲ್ಲಿ ಮುದ್ದೇಬಿಹಾಳದ ಎಂಜಿವಿಸಿ ಪದವಿ ಕಾಲೇಜ್ ಆವರಣದಲ್ಲಿ ಇದೇ ಆ.೧೪ರಂದು ಬೆಳಿಗ್ಗೆ ೧೦ ಗಂಟೆಗೆ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ.ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿಗೆ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೋಮಾ, ಬಿಇಡಿ, ಡಿಇಡಿ ಹಾಗೂ ಯಾವುದೇ ಪದವಿ ಪಾಸಾದಂತಹ ೩೫ ವರ್ಷದೊಳಗಿನ ಅರ್ಹ ಆಸಕ್ತರು ತಮ್ಮ ಶಾಲಾ ದಾಖಲಾತಿಗಳು, ಬಯೋಡಾಟಾ, ಆಧಾರ್ ಕಾರ್ಡ ೨ಸೆಟ್ ಝರಾಕ್ಸನೊಂದಿಗೆ ಭಾಗವಹಿಸಿಬಹುದಾಗಿದೆ.ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ದೂರವಾಣಿ : ೭೮೨೯೫೨೯೦೪೩, ೯೭೪೧೪೨೮೨೫೫ ಸಂಖ್ಯೆಗೆ ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ವಿಕಲಚೇತನರ ಮತ್ತು ಹಿರಿಯ ನಾಗರಿಕ ಸಬಲೀಕರಣ ಇಲಾಖೆಯ ವತಿಯಿಂದ ವಿವಿಧ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿರಿಯ ನಾಗರಿಕರು ಹಾಗೂ ಸ್ವಯಂ ಸೇವಾ ಸಂಸ್ಥೆಗಳಿಗೆ ನೀಡುವ ರಾಜ್ಯ ಪ್ರಶಸ್ತಿಗೆ ಅರ್ಹ ನಾಗರಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.ಅಕ್ಟೋಬರ್ ೦೧ ರಂದು ಆಚರಿಸುವ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಪ್ರಯುಕ್ತ ಪ್ರಶಸ್ತಿ ನೀಡಲಾಗುತ್ತದೆ. ಶಿಕ್ಷಣ, ಸಾಹಿತ್ಯ, ಕಲೆ, ಕಾನೂನು, ಪ್ರತಿಭೆ, ಕ್ರೀಡೆ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರು ಹಾಗೂ ಸ್ವಯಂ ಸೇವಾ ಸಂಸ್ಥೆಯವರು ದ್ವಿ-ಪ್ರತಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ ೩೧ ಕೊನೆಯ ದಿನವಾಗಿದೆ.ಈ ಕುರಿತಂತೆ ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಯನ್ನು ವೆಬ್ಸೈಟ್ www.dwdsc.karnataka.gov.in ಅಥವಾ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಚೇರಿ, ಹೊಸ ಜಿಲ್ಲಾ ಪಂಚಾಯತ ಆವರಣ,ಕನಕದಾಸ ಬಡಾವಣೆ ವಿಜಯಪುರ ಹಾಗೂ ದೂರವಾಣಿ ಸಂಖ್ಯೆ ೦೮೩೫೨೭೯೬೦೬೦ ಸಂಪರ್ಕಿಸುವಂತೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ಜಿಲ್ಲೆಯ ೧೪ ಪರೀಕ್ಷಾ ಕೇಂದ್ರಗಳಲ್ಲಿ ಆ.೧೨ ರಿಂದ ೧೭ ರವರೆಗೆ ಅಖಿಲ ಭಾರತ ವೃತ್ತಿ ಪರೀಕ್ಷೆಗಳು ಪ್ರಾಯೋಗಿಕ ಹಾಗೂ ಆ.೨೨ ರಿಂದ ಸೆ.೯ರವರೆಗೆ ಜರುಗುವ ಸಿ.ಬಿ.ಟಿ ವಿಷಯಗಳ ಪರೀಕ್ಷೆಗಳ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರದ ಸುತ್ತಲಿನ ೨೦೦ ಮೀ.ವ್ಯಾಪ್ತಿಯ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ.ಪರೀಕ್ಷೆ ನಡೆಯುವ ದಿನಗಳಂದು ಬೆಳಿಗ್ಗೆ ೮ ಗಂಟೆಯಿಂದ ಪರೀಕ್ಷೆ ಮುಗಿಯುವರೆಗೆ ನಿಷೇಧಿತ ಪ್ರದೇಶವೆಂದು ಘೋಷಿಸಿದ್ದು, ಪರೀಕ್ಷಾ ಕೇಂದ್ರಗಳ ಸಮೀಪದಲ್ಲಿರುವ ಝರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಸೆಂಟರ್‌ಗಳು, ಸೈಬರ್ ಕೆಫೆಗಳು, ಕೋಚಿಂಗ್ ಕೇಂದ್ರಗಳನ್ನು ಪರೀಕ್ಷೆ ನಡೆಯುವ ಅವಧಿಯಲ್ಲಿ ತೆರೆಯದಂತೆ ಆದೇಶಿಸಲಾಗಿದೆ.

Read More

ದೇವರಹಿಪ್ಪರಗಿ: ಪ್ರೌಢಶಾಲಾ ಹಂತದ ಮಕ್ಕಳಿಗೆ ಕೌಶಲ್ಯ ಆಧಾರಿತ ಶಿಕ್ಷಣ ನೀಡುವುದು ಅತ್ಯಂತ ಅಗತ್ಯವಾಗಿದೆ ಎಂದು ಸರ್ಕಾರಿ ಉರ್ದುಶಾಲೆಯ ಸಿಆರ್‌ಪಿ ಎಫ್.ಎನ್.ನದಾಫ್ ಹೇಳಿದರು.ಪಟ್ಟಣದ ಜೆಎಮ್‌ಜೆ ಪ್ರೌಢಶಾಲೆಯಲ್ಲಿ ಗುರುವಾರ ಜರುಗಿದ ವಿಜ್ಞಾನ ಶಿಕ್ಷಕರ ವೃತ್ತಿ ಜೀವನ ಮಾರ್ಗದರ್ಶಿ ತರಬೇತಿಗೆ ಚಾಲನೆ ನೀಡಿ ಮಾತನಾಡಿದರು. ಗ್ರಾಮೀಣ ಭಾಗದ ಮಕ್ಕಳ ಕಲಿಕಾ ಮಟ್ಟವನ್ನು ಹೆಚ್ಚಿಸುವಲ್ಲಿ ಉಜ್ವಲ ಸಂಸ್ಥೆ ಗಮನಾರ್ಹ ಕಾರ್ಯ ಮಾಡುತ್ತಿದೆ. ಅಂಗನವಾಡಿಯಿಂದ ಕಾಲೇಜು ಶಿಕ್ಷಣದವರೆಗೆ ಅಗತ್ಯವಾದ ತರಬೇತಿಯನ್ನು ಶಿಕ್ಷಕರಿಗೆ ನೀಡಿ ಅವರ ಮೂಲಕ ಮಕ್ಕಳಿಗೆ ವಿಶೇಷವಾಗಿ ಪ್ರೌಢಶಾಲಾ ಹಂತದ ಮಕ್ಕಳಿಗೆ ವೃತ್ತಿ ಜೀವನದ ಮಾರ್ಗದರ್ಶಿ ತರಬೇತಿಯನ್ನು ಕೊಟ್ಟು ಪ್ರಮುಖ ಪಾತ್ರ ವಹಿಸುತ್ತಿದೆ. ಅವರ ಈ ಸೇವಾ ಕಾರ್ಯಕ್ಕೆ ನಮ್ಮೇಲ್ಲರ ಸಹಕಾರ ಇರಲಿ ಎಂದರು.ಉಜ್ವಲ ಸಂಸ್ಥೆಯ ನಿರ್ದೇಶಕಿ ಸುನಂದಾ ತೋಳಬಂದಿ ಮಾತನಾಡಿ, ಇಂದಿನ ಮಕ್ಕಳೇ ಇಂದಿನ ಪ್ರಜೆಗಳು. ಇಂದು ಗ್ರಾಮೀಣ ಭಾಗದಲ್ಲಿ ಮಕ್ಕಳು, ಮಹಿಳೆಯರು ಅನುಭವಿಸುತ್ತಿರುವ ಸಮಸ್ಯೆಗಳು ಹಾಗೂ ಅದಕ್ಕಿರುವ ಕಾನೂನಿನ ಸಲಹೆಗಳ ಕುರಿತು ವಿವರಿಸಿ, ಮಕ್ಕಳ ಮತ್ತು ಮಹಿಳೆಯರ ರಕ್ಷಣೆ, ಇದು ನಮ್ಮೆಲ್ಲರ ಹೊಣೆ. ಬಾಲ್ಯವಿವಾಹ,…

Read More

ದೇವರಹಿಪ್ಪರಗಿ: ತೊಗರಿಬೆಳೆಯ ಹೆಚ್ಚಿನ ಇಳುವರಿಗೆ ಕುಡಿ ಚಿವುಟುವುದು ಅತ್ಯವಶ್ಯಕವಾಗಿದೆ ಎಂದು ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಸೋಮನಗೌಡ ಬಿರಾದಾರ ಹೇಳಿದರು.ಪಟ್ಟಣದ ರೈತ ನಬಿಲಾಲ ಚಾಂದಕವಟಗಿ ಸೇರಿದಂತೆ ಹಲವು ರೈತರ ಜಮೀನುಗಳಿಗೆ ಮಂಗಳವಾರ ಭೇಟಿ ನೀಡಿ ತೊಗರಿಯಲ್ಲಿ ಕುಡಿ ಚೂಟುವ ಪ್ರಾತ್ಯಕ್ಷಿಕೆ ಕೈಗೊಂಡು ಮಾತನಾಡಿದರು. ನಮ್ಮ ತಾಲ್ಲೂಕು ವ್ಯಾಪ್ತಿಯಲ್ಲಿ ಈ ಬಾರಿ ತೊಗರಿ ಬೆಳೆ ಹೆಚ್ಚಿನ ಪ್ರಮಾಣದಲ್ಲಿ ಬಿತ್ತನೆಯಾಗಿದೆ, ಹಾಗೂ ಬಹುತೇಕ ರೈತರು ನೆಟೆ ನಿರೋಧಕ ಹಾಗೂ ದೀರ್ಘಾವಧಿ ತಳಿಗಳನ್ನು ಬಿತ್ತನೆಗೆ ಬಳಸಿದ್ದಾರೆ. ಆದ್ದರಿಂದ ತೊಗರಿ ಬೆಳೆ ೫೦ ರಿಂದ ೬೦ ದಿನವಿದ್ದಾಗ ಕುಡಿ ಚುಟುವ ತಾಂತ್ರಿಕತೆ ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಇದರಿಂದ ಹೆಚ್ಚಿನ ಪ್ರಮಾಣದಲ್ಲಿ ಕವಲೊಡೆಯುತ್ತವೆ. ಹಾಗೂ ಹೆಚ್ಚಿನ ಪ್ರಮಾಣದಲ್ಲಿ ಹೂವು, ಕಾಯಿ ಬಿಡುವಂತಾಗಿ ಇಳುವರಿ ಗಣನೀಯವಾಗಿ ಶೇ ೧೫ ರಿಂದ ೨೦ ರವೆರೆಗೆ ಹೆಚ್ಚಳವಾಗಲು ಸಾಧ್ಯವಾಗುತ್ತದೆ. ಈ ತಾಂತ್ರಿಕತೆಗೆ ಅನುಕೂಲವಾಗುವಂತೆ ಮಾರುಕಟ್ಟೆಯಲ್ಲಿ ಬ್ಯಾಟರಿ ಚಾಲಿತ ಕುಡಿ ಚೂಟುವ ಯಂತ್ರಗಳು ಲಭ್ಯವಿದ್ದು ಇವುಗಳನ್ನು ಬಳಸಿಕೊಂಡು ಕುಡಿ ಚೂಟಬಹುದು ಎಂದು ತಿಳಿಸಿದರು.ಕೃಷಿ ಅಧಿಕಾರಿ…

Read More