Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಇಂಡಿ: ಶ್ರೀ ಶಾಂತೇಶ್ವರ ಜಾತ್ರೆ ನಿಮಿತ್ಯ ಇಂದು ಬೆಳಗಿನ ಜಾವ ೫ ಗಂಟೆಗೆ ಕಳ್ಳಿಮಠದಿಂದ ನಂದಿಕೋಲುಗಳ ಭವ್ಯ ಮೆರವಣೆಗೆ ನಡೆಯಿತು.ಮೆರವಣೆಗೆಯಲ್ಲಿ ಬಾಜಾ ಬೆಂಜೋ. ಕರಡಿ ಕುಣಿತ, ನವೀಲು ಕುಣಿತ, ಪುರವಂತರ ಕುಣಿತ ಸೇರಿದಂತೆ ಆಕರ್ಷಕ ಮೆರವಣೆಗೆ ನಡೆಯಿತು.ಮೆರವಣೆಗೆ ಕಳ್ಳಿಮಠದಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಹಾಯ್ದು ಗುಡಿಗೆ ತಲುಪಿತು.ಬಾರಾ ಬಲೂತಿ ಚಾಜದವರು, ಪಟ್ಟಣದ ಗೌಡರು,ನಾಡಗೌಡರು, ದೇಶಪಾಂಡೆಯವರು, ಬಗಲಿಯವರು, ದೇವಾಲಯದ ಅರ್ಚಕರು, ಪುರವಂತರು, ಕಂಬಾರರು, ಅಕ್ಕಸಾಲಿಗರು, ಬಡಿಗರು, ಕಂಬಾರರು, ಅಗಸರು, ಮೇತ್ರಿಯವರು ಹೀಗೆ ಹನ್ನೆರಡು ಚಾಜದವರು ಕೂಡಿಕೊಂಡು ಅಪಾರ ಭಕ್ತ ಸಮೂಹದೊಂದಿಗೆ ಮೆರವಣೆಗೆಯಲ್ಲಿ ಪಾಲ್ಗೊಂಡಿದ್ದರು.ಪುರವಂತರಾದ ವಿಠ್ಠಲ ಅಹಿರಸಂಗ, ಬಸವರಾಜ ಬಳೂರಗಿ, ವೀರಣ್ಣಾ ಬಡಿಗೇರ, ಮಲ್ಲಿಕಾರ್ಜುನ ಬಡಿಗೇರ, ಸಂಗಣ್ಣ ಶಾಬಾದಿ, ಸಿದ್ರಾಮ ಪತ್ತಾರ, ಶರಣಪ್ಪ ಮಲಘಾಣ, ನಿಂಗಣ್ಣ ಬಡಿಗೇರ, ಚೆನ್ನವೀರಯ್ಯ ಹಿರೇಮಠ ಪುರವಂತರ ಕುಣಿತದಲ್ಲಿ ಶಸ್ತç ಪವಾಡ ಮಾಡಿದರು. ಗಲ್ಲಕ್ಕೆ ಒಂದು ತುದಿಯಿಂದ ಶಸ್ತç ಹಚ್ಚಿ ಇನ್ನೊಂದು ತುದಿಗೆ ಶಸ್ತç ತೆಗೆಯುವದು ದೃಶ್ಯ ಜನಸಾಮಾನ್ಯರನ್ನು ಆಕರ್ಷಿಸಿತು.ವಾದ್ಯ ವೈಭವಗಳೊಂದಿಗೆ ಪ್ರಮುಖ ಬೀದಿಗಳಲ್ಲಿ ಮೆರವಣೆಗೆ ಮುಖಾಂತರ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಅತೀ ಹೆಚ್ಚು ಮೆಕ್ಕೆಜೋಳ ಬೆಳೆದಿದ್ದಾರೆ, ಮಾರುಕಟ್ಟೆಯಲ್ಲಿ ಮೆಕ್ಕೆಜೋಳ ಬಂದು 2 ತಿಂಗಳ ಗತಿಸಿದರೂ ಇಲ್ಲಿಯವರೆಗೆ ಖರೀದಿ ಕೇಂದ್ರವನ್ನು ಆರಂಭ ಮಾಡಿಲ್ಲ. ಕೂಡಲೇ ಜಿಲ್ಲೆ ಹಾಗೂ ತಾಲೂಕು ಕೇಂದ್ರಗಳಲ್ಲಿ ಖರೀದಿ ಕೇಂದ್ರ ಆರಂಭಿಸಬೇಕು ಎಂದು ರೈತ ಮುಖಂಡರು ಆಗ್ರಹಿಸಿದ್ದಾರೆ.ಈ ವೇಳೆ ಮಾತನಾಡಿದ ಮುಖಂಡರು, ಯಾವುದೇ ಶರತ್ತುಗಳನ್ನು ನೀಡದೆ ರೈತರು ಬೆಳೆದಿರುವಂತಹ ಎಲ್ಲಾ ಮೆಕ್ಕೆಜೋಳವನ್ನು ಖರೀದಿ ಮಾಡಬೇಕು ಹಾಗೂ ಇಲ್ಲಿ ಇರುವಂತಹ ಗೊಂದಲಗಳನ್ನ ನಿವಾರಿಸಿ ಧಾರವಾಡಕ್ಕೆ ಸಾಂಪಲ್ ಕಳಿಸೊದ್ದು ಆಗಂಗಿಲ್ಲ ಕೂಡಲೇ ಇಲ್ಲೇ ವಿಜಯಪುರ ಜಿಲ್ಲೆಯಲ್ಲಿ ಹಾಗೂ ಎಲ್ಲ ತಾಲೂಕು ಕೇಂದ್ರಗಳಲ್ಲಿ ಖರೀದಿ ಕೇಂದ್ರ ಪ್ರಾರಂಭ ಮಾಡುವಂತೆ ಆಗ್ರಹಿಸಿ ಮನವಿ ಸಲ್ಲಿಸಲಾಯಿತು.ಒಬ್ಬ ರೈತರ ಖಾತೆಗೆ 2000 ಕೆ. ಜೀ ಅಂತಾ ನಿಗದಿ ಮಾಡಿದರೆ, ಉಳಿದ ಮೆಕ್ಕೆಜೋಳ ಏನು ಮಾಡಬೇಕು, ಸರಕಾರ ಕೇವಲ ನೆಪ ಮಾತ್ರಕ್ಕೆ ರೈತ ಪರ ಮುಖವಾಡ ಹಾಕಿದರೆ ಏನು ಪ್ರಯೋಜನವಾಗುವುದಿಲ್ಲ, ಎಲ್ಲಾ ಬೆಳೆಗಾರರನ್ನು ಗಮನದಲ್ಲಿಟ್ಟುಕೊಂಡು ಯೋಜನೆ ರೂಪಿಸಬೇಕು, ಕೇವಲ ಗೊಂದಲ ಸೃಷ್ಟಿಸಿದರೆ ಹೇಗೆ ಎಂಬುದು ತಿಳಿಯದಾಗಿದೆ…

Read More

ವಿಜಯಪುರದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ | ಜಿಲ್ಲಾಧಿಕಾರಿ ಡಾ. ಆನಂದ.ಕೆ ಭರವಸೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸರ್ಕಾರಿ ಕಚೇರಿಗಳು ಸಾರ್ವಜನಿಕ ಕಟ್ಟಡಗಳಲ್ಲಿ ವಿಶೇಷಚೇತನರಿಗೆ ಪ್ರಥಮಾದ್ಯತೆ ಮೇರೆಗೆ ಮೂಲಭೂತ ಸೌಕರ್ಯಗಳು ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಬುಧವಾರ ಕಂದಗಲ್ ಶ್ರೀ ಹನುಮಂತರಾಯ ರಂಗ ಮಂದಿರದಲ್ಲಿ ಆಯೋಜಿಸಿದ ವಿಶ್ವ ವಿಕಲಚೇತನರ ದಿನಾಚರಣೆಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ವಿಕಲಚೇತನರ ಅಭಿವೃದ್ಧಿಗಾಗಿ ವಿಕಲಚೇತನರ ಹಕ್ಕುಗಳ ಕಾಯ್ದೆ ೨೦೧೬ ರನ್ವಯ ವಿಕಲಚೇತನರಿಗೆ ಅನುಕಂಪದ ತೊರದೇ ಅವರಿಗೆ ಅವಕಾಶಗಳನ್ನು ನೀಡಿ ಮುಖ್ಯವಾಹಿನಿಗೆ ತರುವ ಮೂಲಕ ಕಾಯ್ದೆ ಸಮರ್ಪಕ ಅನುಷ್ಠಾನಗೊಳಿಸಲು ಜಿಲ್ಲಾ…

Read More

ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ರಾಜುಗೌಡ ಪಾಟೀಲ ಕೃಷಿ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಮತಕ್ಷೇತ್ರದ ಗ್ರಾಮಗಳಲ್ಲಿ ಕೆಲವು ರೈತರಿಗೆ ವಾರಸಾ ವಿಷಯದಲ್ಲಿ ಬೆಳೆ ಪರಿಹಾರ ಜಮೆ ಆಗದೇ ಇದ್ದು, ಕೂಡಲೇ ಕೃಷಿ ಇಲಾಖೆಯ ಅಧಿಕಾರಿಗಳು ಈ ಕುರಿತು ಕ್ರಮವಹಿಸಬೇಕು ಎಂದು ಶಾಸಕ ರಾಜುಗೌಡ ಪಾಟೀಲ(ಕುದರಿ ಸಾಲವಾಡಗಿ) ಹೇಳಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ಜರುಗಿದ ೨೦೨೫-೨೬ನೇ ಸಾಲಿನ ಒಂದನೇ ತ್ರೈಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಶು ಸಂಗೋಪನಾ ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆ, ಶಾಲೆಯ ಕೋಣೆಗಳ ಲಭ್ಯತೆ, ಕಟ್ಟಡಗಳ ಸ್ಥಿತಿಗತಿಗಳ ಕುರಿತು ಮಾಹಿತಿ ನೀಡಬೇಕು ಇದನ್ನು ಸರ್ಕಾರದ ಗಮನಕ್ಕೆ ತರಲಾಗುವುದು. ಮತಕ್ಷೇತ್ರದ ಎಲ್ಲ ಶಾಲೆಗಳ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗೆ ಕೈಗೊಳ್ಳಬೇಕಾದ ಕ್ರಮಗಳು, ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದ ಉದ್ಘಾಟನೆಗೆ ಕ್ರಮವಹಿಸುವುದು ಹಾಗೂ ಜಾಲವಾದ ಗ್ರಾಮದ ಹೆಸ್ಕಾಂ ವಿತರಣಾ ಕೇಂದ್ರಕ್ಕಾಗಿ ಭೂಮಿ ನೀಡಿದ ರೈತರಿಗೆ ಪರಿಹಾರ ನೀಡುವ ಬಗ್ಗೆ ಅಧಿಕಾರಿಗಳಿಗೆ ಸೂಚಿಸಿದರು.ಸಭೆಯಲ್ಲಿ ಅಧಿಕಾರಿಗಳು ಬೀದಿನಾಯಿಗಳ…

Read More

ಟಿಇಟಿ ಪರೀಕ್ಷೆಯ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಆನಂದ ಕೆ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಒಟ್ಟು ೬೪ ಪರೀಕ್ಷಾ ಕೇಂದ್ರಗಳಲ್ಲಿ ಡಿಸೆಂಬರ್ ೭ರಂದು ಟಿಇಟಿ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕಾರ್ಯಗಳಲ್ಲಿ ಯಾವುದೇ ಲೋಪವಾಗದಂತೆ ಹಾಗೂ ಸುಸೂತ್ರವಾಗಿ ಪರೀಕ್ಷೆ ನಡೆಸುವಂತೆ ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಆನಂದ ಕೆ ಅವರು ಸೂಚನೆ ನೀಡಿದರು.ಅವರು ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ ಟಿಇಟಿ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಪರೀಕ್ಷೆ ಎರಡು ಅವಧಿಯಲ್ಲಿ ನಡೆಯಲಿದ್ದು, ಬೆಳಿಗ್ಗೆ ೯.೩೦ ರಿಂದ ಮಧ್ಯಾಹ್ನ ೧೨ರವರೆಗೆ ನಡೆಯುವ ಪರೀಕ್ಷೆಗೆ ಒಟ್ಟು ೫೩೨೧ ಅಭ್ಯರ್ಥಿಗಳು ಹಾಗೂ ಮಧ್ಯಾಹ್ನ ೨ಗಂಟೆಯಿಂದ ಸಂಜೆ ೪.೩೦ರವರೆಗೆ ನಡೆಯುವ ಪರೀಕ್ಷೆಗೆ ೧೭೧೦೦ ಅಭ್ಯರ್ಥಿಗಳು ೬೪ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದು, ಅಭ್ಯರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳು ಜಾಗೃತೆಯಿಂದ ಕಾರ್ಯನಿರ್ವಹಿಸಬೇಕು. ಪರೀಕ್ಷೆಯ ದಿನದಂದು ಪಾರದರ್ಶಕ ಹಾಗೂ ಸುವ್ಯವಸ್ಥೆ ಕಾಪಾಡಲು ಮುನ್ನೆಚ್ಚರಿಕೆ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತಲಿನ ೨೦೦ ಮೀ. ಪ್ರದೇಶದಲ್ಲಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಅರಣ್ಯ ಇಲಾಖೆ ಪ್ರವಾಸೋದ್ಯಮ ಇಲಾಖೆ ಹಾಗೂ ವೃಕ್ಷ ಅಭಿಯಾನ ಪ್ರತಿಷ್ಠಾನ ಇವರ ಸಹಯೋಗದಲ್ಲಿ ಡಿ.೦೭ ರಂದು ವೃಕ್ಷಥಾನ್ ಪಾರಂಪರಿಕ ಓಟ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ಬುಧವಾರ ಟೀ ಶರ್ಟ್ ಬಿಡುಗಡೆ ಕಾರ್ಯಕ್ರಮ ನಡೆಯಿತು.ಜಿಲ್ಲಾಧಿಕಾರಿ ಡಾ. ಆನಂದ ಕೆ., ಎಸ್ಪಿ ಲಕ್ಷ್ಮಣ ನಿಂಬರಗಿ, ಜಿ. ಪಂ. ಸಿಇಓ ರಿಷಿ ಆನಂದ, ವಿಜಯಪುರ ನಗರ ಡಿವೈಎಸ್ಪಿ ಡಾ. ಬಸವರಾಜ ಯಲಿಗಾರ, ಪ್ರಾದೇಶಿಕ ಅರಣ್ಯ ಇಲಾಖೆ ವಲಯ ಅರಣ್ಯಾಧಿಕಾರಿ ಮಲ್ಲಿಕಾರ್ಜುನ ಕುಸನಾಳ, ಡಾ. ಮುರಿಗೇಶ ಪಟ್ಟಣಶೆಟ್ಟಿ, ಡಿವೈಎಸ್ಪಿ ಉಪಾಸೆ, ಸಚೀನ ಪಾಟೀಲ, ಸಂದೀಪ ಮಡಗೊಂಡ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪನೆಗೆ ವಿಳಂಬ ನೀತಿ ಅನುಸರಿಸುತ್ತಿರುವುದು ವಿರೋಧಿಸಿ ಜನಪ್ರತಿನಿಧಿಗಳ ಪಿಂಡ ಪ್ರದಾನ ಹಾಗೂ ಪ್ರತಿಕೃತಿ ದಹನ ಮಾಡಲು ಹೋರಾಟಗಾರರು ಅಣಿಯಾಗಲಿದ್ದಾರೆ ಎಂಬ ಸುದ್ದಿ ಹರಿದಾಡಿದ ಹಿನ್ನೆಲೆಯಲ್ಲಿ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಪ್ರತಿಭಟನಾ ಸ್ಥಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸರ್ಪಗಾವಲು ಹಾಕಿದ್ದು ಒಂದೆಡೆಯಾದರೆ, ಇನ್ನೊಂದೆಡೆ ಹೋರಾಟಗಾರರು ಹೋರಾಟವನ್ನು ತೀವ್ರಗೊಳಿಸಿದ್ದು ತಲೆ ಮೇಲೆ ಕಲ್ಲು ಹೊತ್ತು ಪ್ರತಿಭಟನೆ ನಡೆಸಿದರು.ಹೋರಾಟಗಾರರಾದ ಅರವಿಂದ ಕುಲಕರ್ಣಿ, ಮಲ್ಲಿಕಾರ್ಜುನ ಬಟಗಿ, ಅಕ್ರಂ ಮಾಶ್ಯಾಳಕರ ಸೇರಿದಂತೆ ಅನೇಕ ಹೋರಾಟಗಾರರು ಕಲ್ಲು ಹೊತ್ತುಕೊಂಡು ಪ್ರತಿಭಟನೆ ಕುಳಿತರು.ಕಲ್ಲು ಹೊತ್ತಿಕೊಂಡೇ ಅಸಮಾಧಾನ ವ್ಯಕ್ತಪಡಿಸಿದ ರೈತ ಮುಖಂಡ ಅರವಿಂದ ಕುಲಕರ್ಣಿ, ಸರ್ಕಾರಿ ಮೆಡಿಕಲ್ ಕಾಲೇಜ್ ಜಿಲ್ಲೆಯ ಬಡಜನತೆಯ ಹಿತಕ್ಕಾಗಿ ಸ್ಥಾಪನೆಯಾಗಬೇಕು, ಈ ಉದ್ದೇಶಕ್ಕಾಗಿ ನಮ್ಮ ಹೋರಾಟ ನಡೆಯುತ್ತಿದೆ, ಆದರೆ ಈ ಹೋರಾಟವನ್ನು ಹತ್ತಿಕ್ಕುವ ಕೆಲಸ ನಡೆಯುತ್ತಿದೆ ಎಂದರು.ರಾಜ್ಯ ಸರ್ಕಾರವು ಪೊಲೀಸ್ ಬಲವನ್ನೇ ಇಂದು ದುರುಪಯೋಗಪಡಿಸಿಕೊಂಡು ಹೋರಾಟವನ್ನು ದಮನ ಮಾಡುವ ಹುನ್ನಾರ ನಡೆಸುತ್ತಿದೆ, ಹೋರಾಟಗಾರರ ಸುತ್ತಲೂ ಭಾರಿ ಪೊಲೀಸ್ ಪಡೆಯನ್ನು ನಿಯೋಜಿಸಿ ಸರ್ಪಗಾವಲು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ನರ್ಸಿಂಗ್ ಕಾಲೇಜಿನ ಪ್ರಾಚಾರ್ಯ ಡಾ. ಶಾಲ್ಮೋನ್ ಚೋಪಡೆ ಅವರಿಗೆ ರಾಷ್ಟ್ರೀಯ ಫ್ಲಾರೆನ್ಸ್ ನೈಟಿಂಗೇಲ್ ನರ್ಸಸ್ ಅವಾರ್ಡ್-2025 ಲಭಿಸಿದೆ.ಕರ್ನಾಟಕ ನ್ಯೂಸಪೇಪರ್ಸ್ ಅಸೋಸಿಯೇಶನ್ ಮತ್ತು ನ್ಯಾಷನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಸಂಯುಕ್ತಾಶ್ರಯದಲ್ಲಿ ನೀಡುವ ಪ್ರತಿಷ್ಠಿತ ಪ್ರಶಸ್ತಿ ಇದಾಗಿದ್ದು, ಬೆಂಗಳೂರಿನ ಸರ್ ಪುಟ್ಟಣ್ಣ ಚೆಟ್ಟಿ ಟೌನಹಾಲ್ ನಲ್ಲಿ ನವೆಂಬರ್ 27 ರಂದು ಗುರುವಾರ ನಡೆದ ಕಾರ್ಯಕ್ರಮದಲ್ಲಿ ಗಣ್ಯರಾದ ಡಾ. ಲವಿನಾ ಜನಾರ್ಧನ, ಡಾ. ಚಂದ್ರಶೇಖರ ಶೆಟ್ಟಿ, ಡಾ. ಸಚ್ಚಿದಾನಂದ ಅವರು ಡಾ. ಶಾಲಮೊನ್ ಚೊಪಡೆ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಅಲ್ಲದೇ, ಈ ಪ್ರಶಸ್ತಿಯೊಂದಿಗೆ ಈ ಪ್ರಶಸ್ತಿಯೊಂದಿಗೆ ಟ್ರೋಫಿ, ಗೋಲ್ಡ್ ಪ್ಲೇಟೆಡ್ ಪದಕ ಹಾಗೂ ಗೌರವ ಪತ್ರವನ್ನು ಪ್ರದಾನ ಮಾಡಲಾಯಿತು.ನರ್ಸಿಂಗ್ ವೃತ್ತಿಯಲ್ಲಿ ಸಲ್ಲಿಸಿದ ಅಮೂಲ್ಯ ಸೇವೆ, ಸಮಾಜಮುಖಿ ಚಟುವಟಿಕೆಗಳು ಹಾಗೂ ವೃತ್ತಿ ಉತ್ತೇಜನಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಪ್ರೊ. ಶಾಲ್ಮೋನ್ ಚೋಪಡೆ ಅವರಿಗೆ ಈ ರಾಷ್ಟ್ರಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.ಡಾ.…

Read More

ಲೇಖನ – ಜಯಶ್ರೀ.ಜೆ. ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ನಾನು ಈಗ ಹೇಳ ಹೊರಟಿರುವ ವಿಷಯ ಹೊಸದೇನಲ್ಲ. ನಿಮಗೆಲ್ಲ ಅನುಭವಕ್ಕೆ ಬಂದ ವಿಷಯವೇ ಆಗಿದೆ. ಇತ್ತೀಚಿನ ದಿನಗಳಲ್ಲಿ ಟಿವಿ, ಮೊಬೈಲ್ ಗೀಳಿಗೆ ಅದೆಷ್ಟು ಅಂಟಿಕೊಂಡಿದ್ದೇವೆ ಎಂದರೆ ದಿನದ ಇಪ್ಪತ್ನಾಲ್ಕು ಗಂಟೆಗಳು ಸಾಲುತ್ತಿಲ್ಲ. ಸಮಯ ಹೇಗೆ ಹಾರಿ ಹೋಗುತ್ತಿದೆ ಅಂತ ಎಲ್ಲರೂ ದೂರುತ್ತಿದ್ದೇವೆ. ಮೊನ್ನೆ ಮೊನ್ನೆ ಹೊಸ ವರ್ಷ ಆರಂಭವಾಗಿತ್ತು. ಈಗಾಗಲೇ ಒಂದು ವರ್ಷ ಮುಗಿದು ಹೋಯಿತು. ಅದು ಹೇಗೆ ಒಂದು ವರ್ಷ ಕಳೆದು ಹೋಯಿತೋ ತಿಳಿಯಲೇ ಇಲ್ಲ. ಎನ್ನುವ ಮಾತುಗಳು ಕಿವಿಗೆ ಬೀಳುತ್ತವೆ. ಇಂಥ ಮಾತುಗಳು ಕಿವಿಗೆ ಬಿದ್ದಾಗ ಹೌದಲ್ಲ, ಅದೆಷ್ಟು ಅಮೂಲ್ಯ ಸಮಯವನ್ನು ಉಪಯೋಗಕ್ಕೆ ಬಾರದ ವಾಟ್ಸಪ್ ಚಾಟ್‌ಗಾಗಿ ಫೇಸ್ ಬುಕ್ ಲೈಕ್‌ಗಾಗಿ, ಇನ್ಸ್ಟಾಗ್ರಾಮ್ ಇನ್ನಿತರೆ ಸಾಮಾಜಿಕ ಜಾಲತಾಣಗಳಿಗೆ ವ್ಯಯ ಮಾಡುತ್ತಿದ್ದೇವೆ ಎಂಬ ಭಯ ಕಾಡಲು ಶುರುವಾಗುವದಂತೂ ನಿಜ. ಮನೆಯಲ್ಲಿ ಅಪ್ಪ ಅಮ್ಮನಿಗೆ ಮಕ್ಕಳಿಗೆ ಅಗತ್ಯವಾದ ಪ್ರೀತಿ ಕಾಳಜಿ ಸಮಯವನ್ನು ಕೊಡಲು ಆಗುತ್ತಿಲ್ಲ ಎಂದರೆ ಮೊದಲು ನಿಮಗೆ ನೀವೇ…

Read More

ಲೇಖನ- ಸಂತೋಷ್ ರಾವ್ ಪೆರ್ಮುಡಪೆರ್ಮುಡ ಮನೆ, ಪಟ್ರಮೆ ಗ್ರಾಮ ಮತ್ತು ಅಂಚೆಬೆಳ್ತಂಗಡಿ ತಾಲೂಕುದ.ಕ ಜಿಲ್ಲೆ-೫೭೪೧೯೮ದೂ:೯೭೪೨೮೮೪೧೬೦ ಉದಯರಶ್ಮಿ ದಿನಪತ್ರಿಕೆ ನಮ್ಮೂರಿನ ಜಾತ್ರೆಯನ್ನು ಮುಗಿಸಿ ಕಾಡು ಗುಡ್ಡದ ಹಾದಿಯಲ್ಲಿ ರಾತ್ರಿ ಹನ್ನೆರಡರ ವೇಳೆಗೆ ನಾನೂ ನನ್ನ ಸಹೋದರ ಇಬ್ಬರೂ ಟಾರ್ಚ್ ಲೈಟಿನ ಬೆಳಕನ್ನು ಹಾಯಿಸಿಕೊಂಡು ಮನೆಯೆಡೆಗೆ ಹೆಜ್ಜೆ ಹಾಕುತ್ತಿದ್ದೆವು. ರಾತ್ರಿಯ ಪಯಣವೆಂದರೆ ನನಗೆ ಅದೇನೋ ಒಂದು ರೀತಿ ರೋಮಾಂಚನವನ್ನು ನೀಡುತ್ತಿದ್ದರೂ ಒಳಗೊಳಗೇ ಏನೋ ಭಯ. ಆದರೂ ಧೈರ್ಯ ಮಾಡಿ ನೆರೆಮನೆಯವರನ್ನು ಜಾತ್ರೆಯಲ್ಲೇ ಬಿಟ್ಟು ಇಬ್ಬರೇ ಮನೆಯ ಕಡೆಗಿನ ಕಾಡು ಹಾದಿಯನ್ನು ದಾಟಿ ತಲುಪಿದ ಇತಿಹಾಸವನ್ನು ಸೃಷ್ಟಿಸುವ ತವಕ ನಮಗಿಬ್ಬರಿಗೂ. ಹೊರಟು ಸ್ವಲ್ಪ ಹೊತ್ತಾಗಿದೆಯಷ್ಟೇ ಕಾಡಿನ ಪೊದೆಯ ಮರೆಯ ತರಗೆಲೆಗಳ ಮೇಲೆ ಏನೋ ಚಲಿಸುತ್ತಿರುವ ಸದ್ದು. ಯಾವುದೋ ಕಾಡು ಪ್ರಾಣಿ ಇರಬಹುದೆಂಬ ಭಯದಿಂದ ಎದೆಬಡಿತ ಹೆಚ್ಚಾಗತೊಡಗಿತು. ಸ್ವಲ್ಪ ಮುಂದಕ್ಕೆ ಹೋಗುತ್ತಿದ್ದಂತೆ ತರಗೆಲೆಗಳ ಸದ್ದು ಮತ್ತಷ್ಟು ಹೆಚ್ಚಾಯಿತು, ಕುತೂಹಲದಿಂದ ಅತ್ತ ನನ್ನ ಕೈಯಲ್ಲಿದ್ದ ಟಾರ್ಚ್ ಲೈಟಿನ ಬೆಳಕನ್ನು ಬೀರಿದೆ. ಯಾವುದೋ ಒಂದು ಪುಟ್ಟ ಪ್ರಾಣಿ ಏನನ್ನೋ ಕಿತ್ತು…

Read More