Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ‘ಐತಿಹಾಸಿಕ ಪರಂಪರೆ ಉಳಿಸಿ’ ಅಭಿಯಾನದಡಿಅಖಿಲ ಭಾರತೀಯ ಸಾಹಿತ್ಯ ಪರಿಷದ್(ನೋಂ). ವಿಜಯಪುರ ಜಿಲ್ಲಾ ಸಮಿತಿಯು ಆಲಮೇಲ ತಾಲ್ಲೂಕಿನ ಕಡ್ಲೇವಾಡ ಗ್ರಾಮದ ಕಲ್ಯಾಣ ಚಾಳುಕ್ಯರ ಕಾಲದ ಪುರಾತನ ಸೋಮೇಶ್ವರ ದೇವಾಲಯಕ್ಕೆ ಭೇಟಿ ನೀಡಿತು.ಶಾಸನ ತಜ್ಞರಾದ ಡಾ. ದೇವರಕೊಂಡಾರೆಡ್ಡಿ, ಅಭಾಸಾಪ ಪದಾಧಿಕಾರಿಗಳಾದ ವಿವೇಕ ಕುಲಕರ್ಣಿ, ಸುಕಾಂತ ಕುಲಕರ್ಣಿ, ಶ್ರೀರಂಗ ಪುರಾಣಿಕ, ಆನಂದ ಗೋಡಸೆ , ಮಹಾಂತೇಶ , ಶ್ರೀರಂಗ ಕುಲಕರ್ಣಿ, ಪ್ರದೀಪ ಹೂಗಾರ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಸಾಲೋಟಗಿಯ ಶ್ರೀ ಶಿವಯೋಗೀಶ್ವರ ಜಾತ್ರಾ ಮಹೋತ್ಸವದ ಪ್ರಸಿದ್ದ ನೀರಾಟ ಏ.೬ ರಂದು ನಡೆಯಲಿದೆ ಎಂದು ಜಾತ್ರಾ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಏ ೩ ರಿಂದ ೫ ನೇ ತಾರಿಖಿನ ರವಿವಾರದ ವರೆಗೆ ದಿನ ನಿತ್ಯ ಊರ ಒಳಗಿನ ದೇವಾಲಯದಲ್ಲಿ ಬೆಳಗ್ಗೆ ರುದ್ರಾಭಿಷೇಕ ಪೂಜೆ ನಡೆಯುವದು.ಸೋಮವಾರ ೬ರಂದು ಶ್ರೀ ಶಿವಯೋಗೀಶ್ವರರು ರಾತ್ರಿ ೯ ಗಂಟೆಗೆ ಊರ ಒಳಗಿನ ದೇವಸ್ಥಾನದಿಂದ ವಿಶೇಷ ತರಹದ ಮದ್ದು ಸುಡುತ್ತ ಉತ್ಸವದಿಂದ ಹೊರಟು ಹೊರಗಿನ ದೇವಸ್ಥಾನದಲ್ಲಿ ವಾಸ್ತವ್ಯ, ಹಾಗೂ ರಾತ್ರಿ ಒಂದು ಗಂಟೆಯಿಂದ ಬೆಳಗ್ಗೆ ೬ ಗಂಟೆಯ ವರೆಗೆ ನೀರಾಟ ಉತ್ಸವ ಜರಗುವದು.ಏ ೭ ರಿಂದ ಏ ೧೩ ರ ವರೆಗೆ ಹೊರಗಿನ ದೇವಸ್ಥಾನದಲ್ಲಿ ಮುಂಜಾನೆ ೫ ಗಂಟೆಯಿAದ ಬೆಳಗ್ಗೆ ೭ ಗಂಟೆಯ ವರೆಗೆ ಹಾಗೂ ಸಂಜೆ ೪ ಗಂಟೆಯಿಂದ ೬ ಗಂಟೆಯ ವರೆಗೆ ನಿತ್ಯ ಶಿವ ಪೂಜೆ ಜರಗುವದು.೧೩ ರಂದು ಸೋಮವಾರ ಮಹಾ ಪ್ರಸಾದ, ರಾತ್ರಿ ೧೦ ಗಂಟೆಯಿಂದ ಗೀ ಗೀ ಪದಗಳು, ೧೪…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಮಠ ಮಾನ್ಯಗಳಿಂದಲೇ ತಾಲೂಕು ಪ್ರಸಿದ್ದಿ ಪಡೆದಿದೆ. ಹಲವಾರು ಮಠಗಳು ಅನ್ನ ಪ್ರಸಾದ, ಉಚಿತ ಶಿಕ್ಷಣ ಹುಣ್ಣಿಮೆ ಕಾರ್ಯಕ್ರಮದಂತಹ ಸಂಸ್ಕಾರ ನೀಡುತ್ತಿವೆ. ಸತ್ಸಂಗದಿಂದ ಜೀವನದ ಬಹುತೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಶಿರಶ್ಯಾಡದ ಅಭಿನವ ಮುರಗೇಂದ್ರ ಶ್ರೀಗಳು ಹೇಳಿದರು.ನಗರದ ಶಿರಶ್ಯಾಡದ ಅಭಿನವ ಮುರಗೇಂದ್ರ ಶ್ರೀಗಳ ಶಾಖಾ ಮಠದಲ್ಲಿ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ ೬೦ ವರ್ಷ ದಾಟಿದ ಹಿರಿಯರಿಗೆ ಆದರ್ಶ ದಂಪತಿಗಳಿಗೆ ಸನ್ಮಾನಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.ಇತಿಹಾಸ ಸಾಂಸ್ಕೃತಿಕ ಧಾರ್ಮಿಕ ಭಜನೆ ಪುರಾಣ ಹಾಗೂ ಪ್ರವಚನ ಮಾಡುತ್ತಿರುವ ಮಠಗಳ ಕಾರ್ಯ ಶ್ಲಾಘನೀಯ ಎಂದರು.ಶ್ರೀ ಶಾಂತೇಶ್ವರ ದೇವಸ್ಥಾನ ಸಮಿತಿ ಅಧ್ಯಕ್ಷ ಕಾಸುಗೌಡ ಬಿರಾದಾರ ಮಾತನಾಡಿ, ಧಾರ್ಮಿಕತೆಯನ್ನು ಬೆಳೆಸಿಕೊಂಡು ಹೋಗಲು ಇಂದಿನ ಯುವ ಪೀಳಿಗೆ ಮುಂದಾಗಬೇಕಿದೆ. ಯಾವದೇ ಕೆಲಸ ವಿರಲಿ ಕೀಳಾಗಿ ನೋಡದೆ ಕಾರ್ಯಗಳನ್ನು ಮಾಡಿದಾಗ ನೆಮ್ಮದಿ ಬದುಕು ಸಾಗಿಸಲು ಸಾದ್ಯ ಎಂದರು.ರಾಘವೇಂದ್ರ ಕುಲಕರ್ಣಿ, ರಾಜೇಶ್ವರಿ ಕ್ಷತ್ರಿ, ಅನೀಲ ಪ್ರಸಾದ ಏಳಗಿ ಮಾತನಾಡಿದರು.ವೇದಿಕೆಯ ಮೇಲೆ ನೀಲಕಂಠಗೌಡ ಪಾಟೀಲ, ಅರವಿಂದ ಕುಲಕರ್ಣಿ ವೇದಿಕೆಯ ಮೇಲೆ ಇದ್ದರು.ಶ್ರೀಮತಿ…

Read More

SSLC ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ ಉದಯರಶ್ಮಿ ದಿನಪತ್ರಿಕೆ ಹೆಚ್ ಡಿ ಕೋಟೆ: ಪಟ್ಟಣದಲ್ಲಿರುವ ಶ್ರೀ ವಿಶ್ವಭಾರತಿ ಪದವಿ ಪೂರ್ವ ಕಾಲೇಜು ಆಡಳಿತ ಮಂಡಳಿಯು, ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದಿರುವ ಹೆಚ್ ಡಿ ಕೋಟೆ ಹಾಗೂ ಸರಗೂರು ತಾಲೂಕಿನ ವಿದ್ಯಾರ್ಥಿಗಳಿಗೆ ಒಂದು ಸುವರ್ಣಾವಕಾಶ ಕಲ್ಪಿಸಿಕೊಟ್ಟಿದೆ. 2026-27ನೇ ಸಾಲಿನ ಪಿಯು ಪ್ರವೇಶ ಪಡೆಯಲು ಇದೇ ಎಪ್ರಿಲ್ 6 ರಂದು ಪ್ರವೇಶಾತಿ ಪರೀಕ್ಷೆ ನಡೆಸಲಿದ್ದು, ಅದರಲ್ಲಿ ಅತಿ ಹೆಚ್ಚು ಅಂಕ ಪಡೆದ ಐವರು ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ ನೀಡಲಾಗುವುದು ಎಂದು ಶ್ರೀ ವಿಶ್ವಭಾರತಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ಮುಖ್ಯಸ್ಥ ಭರತ್ ಚಾಮರಾಜಣ್ಣ ಹೇಳಿದರು.ಪಟ್ಟಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಭರತ್ ಚಾಮರಾಜಣ್ಣ ಅವರು, ಸೋಮವಾರ ಬೆಳಗ್ಗೆ 9:30ಕ್ಕೆ ಪ್ರವೇಶಾತಿ ಪರೀಕ್ಷೆ ಆರಂಭವಾಗಲಿದೆ. ಒಟ್ಟು 50 ಅಂಕಗಳಿಗೆ ಪರೀಕ್ಷೆ ಇರಲಿದ್ದು, ಎಸ್ ಎಸ್ ಎಲ್ ಸಿ ಯಲ್ಲಿರುವ ವಿಜ್ಞಾನ ಹಾಗೂ ಗಣಿತ ಸಂಬಂಧಿತ ಪ್ರಶ್ನೆಗಳು ಇರಲಿದೆ. ಕಳೆದ ಮೂರು ವರ್ಷಗಳಿಂದಲೂ ಪ್ರವೇಶಾತಿ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಮಹಾಶಿವಶರಣೆ ಅಕ್ಕಮಹಾದೇವಿಯು ಪ್ರಥಮ ಕನ್ನಡ ಕವಯತ್ರಿ ಹಾಗೂ ಅಪ್ರತಿಮ ವಚನಗಾರ್ತಿಯಾಗಿದ್ದಳು. ೩೫೪ ಅವರ ವಚನಗಳು ದೊರಕಿದ್ದು, ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ಅವರದ್ದಾಗಿದೆ ಎಂದು ಶರಣ ಚಿಂತಕಿ ಜಗದೇವಿ ಬಿರಾದಾರ ಹೇಳಿದರು.ಸಿಂದಗಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಜರುಗಿದ ಮಹಾಶಿವಶರಣೆ ಅಕ್ಕಮಹಾದೇವಿ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಕ್ಕಮಹಾದೇವಿ ಅವರು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಬಸವಾದಿ ಶರಣರೊಂದಿಗೆ ಅನುಭವ ಮಂಟಪದಲ್ಲಿ ಚರ್ಚೆ, ಅನುಭಾವ ಹಂಚಿಕೆಯ ಸಂವಾದ ಮಾಡಿ ಶೈ ಎನೆಸಿಕೊಂಡವಳು. ಬಸವಣ್ಣ ಹಾಗೂ ಅಲ್ಲಮಪ್ರಭುದೇವರು ಅವರ ಆಗಾದವಾದ ಜ್ಞಾನವನ್ನು ಗಮನಿಸಿ ಮಹಾದೇವಿಗೆ ಅಕ್ಕ ಎಂದು ಕರೆದರು ಎಂದರು.ಈ ವೇಳೆ ನ್ಯಾಯವಾದಿ ವಿ.ಜಿ.ಮಾನವಿ ಮಾತನಾಡಿ, ಅಲ್ಲಮಪ್ರಭುದೇವರು, ಬಸವಣ್ಣ, ಚನ್ನಬಸವ, ಮಾದಾರ ಚನ್ನಯ್ಯ, ಅಂಬಿಗೇರ ಚೌಡಯ್ಯ ಸೇರಿದಂತೆ ಮುಂತಾದವರೊAದಿಗೆ ಚರ್ಚಿಸಿದ ನಂತರ ಅಕ್ಕಮಹಾದೇವಿ ಅವರ ಜ್ಞಾನದ ಅರಿವು ಎಲ್ಲರಿಗಾಯಿತು. ವೈರಾಗ್ಯ ನಿಧಿ ಅಕ್ಕಮಹಾದೇವಿ ಆಧ್ಯಾತ್ಮಿಕ ಜೀವನಕ್ಕೆ ಹೊಸ ಭಾಷ್ಯ ಬರೆದರು. ಶಿವನೇ…

Read More

‘ಮುಸ್ಲಿಮರನ್ನು ದೇಶಬಿಟ್ಟು ಓಡಿಸೋಕೆ ಆಗುತ್ತಾ? | ವಿಪಕ್ಷ ನಾಯಕರ ಹೇಳಿಕೆಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ಷೇಪ ಬಾಗಲಕೋಟೆ: ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಪ್ರಚಾರ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಪಕ್ಷ ನಾಯಕರ ಹೇಳಿಕೆಗಳ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಸಭ್ಯ ಪದ ಬಳಸಿದ ಬಿಜೆಪಿ ನಾಯಕ ಪ್ರತಾಪ್ ಸಿಂಹಗೆ ಟಾಂಗ್ ಕೊಟ್ಟಿದ್ದಾರೆ.ಯುಗಾದಿ, ದೀಪಾವಳಿ, ಶಿವರಾತ್ರಿಯಂತಹ ಹಬ್ಬದ ಸಮಯದಲ್ಲಿ ನಾನು ಮಾಂಸ ತಿನ್ನುವುದು ನಿಜ, ಆಹಾರ ಸೇವನೆ ನನ್ನ ಹಕ್ಕು, ನಾನು ಯಾಕೆ ತಿನ್ನಬಾರದು, ಅದರಲ್ಲೇನು ತಪ್ಪು ಎಂದು ಕೇಳಿದರು.ಬಿಜೆಪಿ ಪರ ಪ್ರಚಾರದ ವೇಳೆ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೀಡಿದ್ದ ಹೇಳಿಕೆಗಳನ್ನೂ ಖಂಡಿಸಿದರು. ಕಾಂಗ್ರೆಸ್ ಸರ್ಕಾರ ನೀಡಿರುವ ಐದು ಗ್ಯಾರಂಟಿಗಳು ಮತ್ತು ಸಾಮಾಜಿಕ ಬದ್ಧತೆಯ ಕಾರ್ಯಕ್ರಮಗಳ ಬಗ್ಗೆ ಜನರಿಗೆ ಮನವರಿಕೆ ಮಾಡಿ ಮತ ಕೇಳುವುದಾಗಿ ಹೇಳಿದರು.ಬಸನಗೌಡ ಪಾಟೀಲ್ ಯತ್ನಾಳ್ ನೀಡಿದ್ದ, ತಾವು ಮುಖ್ಯಮಂತ್ರಿಯಾದರೆ ಮಹಿಳೆಯರಿಗೆ 3000 ರೂಪಾಯಿ. ನೀಡುವುದಾಗಿ ಮತ್ತು ಕಲ್ಲು ತೂರಾಟ ನಡೆಸಿದರೆ ಅಂತಹ ಮತ್ತು…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ಸ್ಥಳೀಯ ಶ್ರೀ ಸಮಗಾರ ಹರಳಯ್ಯ ಸಮಾಜದ ಕಾರ್ಯಾಲಯದಲ್ಲಿ ಹರಳಯ್ಯ ಸಮಾಜದ ವತಿಯಿಂದ ಸಮಾಜಕ್ಕೆ ಮಾದರಿಯಾದ ಇಬ್ಬರು ಯುವಕರಿಗೆ ಸನ್ಮಾನ ಸಮಾರಂಭ ಮಾಡಲಾಯಿತು.ಈ ಸಂದರ್ಭದಲ್ಲಿ ಉಚಿತವಾಗಿ ಶ್ರೀಶೈಲ ಯಾತ್ರೆಯನ್ನು ಆಯೋಜಿಸಿದ ಸಮಾಜದ ಯುವ ಮುಖಂಡರಾದ ಶ್ರೀ ಹಣಮಂತ ರಾವುತಪ್ಪ. ಹೊನ್ನಾಕಟ್ಟಿ ಅವರನ್ನು ಸನ್ಮಾನಿಸಲಾಯಿತು.ಕಳೆದ ಮೂರು ವರ್ಷಗಳಿಂದ ಶ್ರೀಶೈಲ, ಮಂತ್ರಾಲಯ, ಮಹಾನಂದಿ, ದೇವರ ಹಿಪ್ಪರಗಿಯ ರಾವುತರಾಯ ಸೇರಿದಂತೆ ಹಲವು ಪವಿತ್ರ ಕ್ಷೇತ್ರಗಳಿಗೆ ಸರ್ವ ಸಮಾಜದ 62 ಜನರಿಗೆ ಉಚಿತ ದರ್ಶನ ಮಾಡಿಸಿರುವ ಸೇವೆಯನ್ನು ಶ್ಲಾಘಿಸಲಾಯಿತು.ಇದೇ ವೇಳೆ ಬಡತನ ಮೆಟ್ಟಿ ನಿಂತು ಎಲ್.ಎಲ್.ಬಿ ಪದವಿ ಓದುತ್ತಿರುವ ಸಮಾಜದ ಯುವಕ ಗೋವಿಂದ ಚಂದ್ರಾಮ. ಹರಳೆ ಅವರು ಮೊದಲ ಸೆಮಿಸ್ಟರ್ ಪರೀಕ್ಷೆಯನ್ನು ಇಂಗ್ಲೀಷ್ ಮಾಧ್ಯಮದಲ್ಲಿ ಮೊದಲ ಪ್ರಯತ್ನದಲ್ಲೇ ಉತ್ತೀರ್ಣರಾಗಿರುವ ಹಿನ್ನೆಲೆಯಲ್ಲಿ ಅವರನ್ನು ಗೌರವಿಸಲಾಯಿತು.ಕಾರ್ಯಕ್ರಮದಲ್ಲಿ ಮಾತನಾಡಿದ ಸಂಘದ ಅಧ್ಯಕ್ಷರಾದ ಅಮೋಘಸಿದ್ಧ ಮ. ಬಗಲಿ ಅವರು, “ಸಮಾಜದಲ್ಲಿ ಕಾನೂನು ಶಿಕ್ಷಣ ಪಡೆಯುವವರ ಸಂಖ್ಯೆ ಕಡಿಮೆ ಇರುವುದರಿಂದ ಗೋವಿಂದ ಹರಳೆ ಅವರು ಯುವಕರಿಗೆ ಮಾದರಿಯಾಗಬೇಕು. ಹೆಚ್ಚಿನವರು ಕಾನೂನು ವಿದ್ಯಾಭ್ಯಾಸದ…

Read More

ಉದಯರಶ್ಮಿ ದಿನಪತ್ರಿಕೆ ವರದಿ: ಸಿದ್ರಾಮ್ ಎಮ್ ಇಟ್ಟಿಜಮಖಂಡಿ: ಉತ್ತರ ಕರ್ನಾಟಕದ ಜೀವನದಿ ಕೃಷ್ಣೆಯ ಮಡಿಲಲ್ಲಿರುವ ಜಮಖಂಡಿ ತಾಲೂಕಿನ ಸಣ್ಣ ಗ್ರಾಮ ತುಬಚಿ. ಇಲ್ಲಿರುವ ಶ್ರೀ ಶಿವಲಿಂಗೇಶ್ವರ ಮಠವು ಕೇವಲ ಒಂದು ಧಾರ್ಮಿಕ ಕೇಂದ್ರವಲ್ಲ; ಇದು ಹಿಂದೂ ಮತ್ತು ಮುಸ್ಲಿಂ ಬಾಂಧವ್ಯದ ಬೆಸುಗೆಯಾಗಿರುವ ಅಪರೂಪದ ಪುಣ್ಯಕ್ಷೇತ್ರ. ಜಾತಿ-ಮತಗಳ ಬೇಲಿ ಮೀರಿ ನಿಂತಿರುವ ಈ ಮಠದ ಇತಿಹಾಸ ಮತ್ತು ಪರಂಪರೆ ನಾಡಿಗೆ ಮಾದರಿಯಾಗಿದೆ.​ಐತಿಹಾಸಿಕ ಹಿನ್ನೆಲೆ ಮತ್ತು ಪವಾಡ​ಶಿವಲಿಂಗೇಶ್ವರ ಮಹಾಸ್ವಾಮಿಗಳು ನಡೆದಾಡುವ ದೇವರೆಂದೇ ಪ್ರಸಿದ್ಧರು. ಶತಮಾನಗಳ ಹಿಂದೆ ಈ ಭಾಗದಲ್ಲಿ ಸಂಚರಿಸುತ್ತಿದ್ದಾಗ, ಅವರು ತೋರಿದ ಪವಾಡಗಳು ಮತ್ತು ನೀಡಿದ ಸಮಾನತೆಯ ಸಂದೇಶವು ಎಲ್ಲ ವರ್ಗದ ಜನರನ್ನು ಆಕರ್ಷಿಸಿತು.​ಪೀಠಾಧಿಕಾರ ಮತ್ತು ಪರಂಪರೆ​ಡಾ. ಅಲ್ಲಮಪ್ರಭು ಪೂಜಾರರು ಬೆಳಗಾವಿಯ ಐತಿಹಾಸಿಕ ರುದ್ರಾಕ್ಷಿ ಮಠದ ಪೀಠಾಧಿಕಾರವನ್ನು ವಹಿಸಿಕೊಂಡ ನಂತರ, ಮಠದ ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳಿಗೆ ಹೊಸ ಚೈತನ್ಯ ನೀಡಿದ್ದಾರೆ. ಇವರು ಕೇವಲ ಒಂದು ಮಠಕ್ಕೆ ಸೀಮಿತವಾಗದೆ,ತುಬಚಿ ಶ್ರೀ ಶಿವಲಿಂಗೇಶ್ವರ ಮಠದ ಜವಾಬ್ದಾರಿಯನ್ನೂ ಅಷ್ಟೇ ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಎರಡು ಮಠಗಳ ನಡುವೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ ಹಸಿರು ಕ್ರಾಂತಿಯ ಹರಿಕಾರ ಹಾಗೂ ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ ರಾಂ ಅವರ ೧೧೯ನೇ ಜಯಂತಿ ಕಾರ್ಯಕ್ರಮವನ್ನು ಏಪ್ರಿಲ್ ೫ರಂದು ಬೆಳಿಗ್ಗೆ ೧೦ ಗಂಟೆಗೆ ನಗರದ ಕಂದಗಲ್ ಶ್ರೀ ಹನುಂತರಾಯ ರಂಗಮಂದಿರದಲ್ಲಿ ಆಯೋಜಿಸಲಾಗಿದೆ.ಅಂದು ಬೆಳಿಗ್ಗೆ ೯ ಗಂಟೆಗೆ ನಗರದ ಸೆಟ್‌ಲೈಟ್ ಬಸ್ ನಿಲ್ದಾಣದ ಹತ್ತಿರ ಇರುವ ಡಾ. ಬಾಬು ಜಗಜೀವನರಾಂ ವೃತ್ತದಿಂದ ನಗರದ ಪ್ರಮುಖ ವೃತ್ತಗಳ ಮೂಲಕ ಸಾಗಿ ಕಂದಗಲ್ ಶ್ರೀ ಹನುಂತರಾಯ ರಂಗಮಂದಿರದವರೆಗೆ ಭಾವಚಿತ್ರದ ಮೆರವಣಿಗೆ ಜರುಗಲಿದೆ.ಈ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ.ಪಾಟೀಲ ಅವರು ಉದ್ಘಾಟಿಸುವರು. ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ, ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಮಹಿಳೆ ಪ್ರತಿ ವಿಭಾಗದಲ್ಲಿ ತಮ್ಮ ಪ್ರತಿಭೆ ತೋರುವುದರ ಮೂಲಕ ಪ್ರಬುದ್ಧತೆ ತೋರಿದ್ದಾಳೆ ಎಂದು ಸದಯ್ಯನಮಠ ವೀರಗಂಗಾಧರ ಸ್ವಾಮೀಜಿ ಹೇಳಿದರು.ಪಟ್ಟಣದ ಕಲ್ಮೇಶ್ವರ ಸಭಾವನದಲ್ಲಿ ಬುಧವಾರ ವುಮನ್ ಇಂಡಿಯಾ ಚಾರಿಟೇಬಲ್ ಟ್ರಸ್ಟ್ ಅಡಿ ಜರುಗಿದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು.ಮಹಿಳೆ ಅಬಲೆ ಎನ್ನುವ ಕಾಲ ಮುಗಿಯಿತು. ಏನಿದ್ದರೂ ಈಗ ಮಹಿಳೆ ಸಬಲೆ ಹಾಗೂ ಸರ್ವರಂಗದಲ್ಲೂ ಸಾಧಕಿ ಎಂದರು.ತವರುಮನೆ ಟ್ರಸ್ಟ್ ಅಧ್ಯಕ್ಷೆ ಮಂಜುಳಾ ನಾಯಕ, ಆರೋಗ್ಯ ಇಲಾಖೆಯ ಸುಕನ್ಯಾ ಚಳಗೇರಿ, ಪಿಎಸ್‌ಐ ಪಿ.ಎಂ.ಚೌರ, ಮೀನಾಕ್ಷಿ ಮಸಬಿನಾಳ, ರೇಣುಕಾ ಬಿರಾದಾರ ಮಹಿಳೆಯರ ಸಾಧನೆಗಳ ಕುರಿತು ಮಾತನಾಡಿದರು.ಸರಸ್ವತಿ ಬಿರಾದಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜಯಶ್ರೀ ದೇವಣಗಾಂವ, ಶಬಾನಾ ಯಲಗಾರ, ಪುಷ್ಪಾ ಬಿರಾದಾರ, ಅರ್ಚನಾ ಪಾಟೀಲ, ದಾನಮ್ಮ, ನಂದಿನಿ ಕೋಟ್ಯಾಳ, ಕಮಲಾ ಬಾಗೇವಾಡಿ, ಭಾಗೀರಥಿ ದೇಗಿನಾಳ, ಕೌಶಲ್ಯಾ ಬಾಗೇವಾಡಿ, ಅಂಬಿಕಾ ಕೊಂಡಗೂಳಿ, ರವೀನಾ ಚವ್ಹಾಣ, ನಾಗಮ್ಮಾ ತಳಕೇರಿ, ಶಾಂತಾಬಾಯಿ ಭೈರೋಡಗಿ, ಸುಮಂಗಲಾ ಇಂಡಿ, ಚಾಂದಬಿ ಆಲಮೇಲ, ರೇಣುಕಾ ದಾನಗೊಂಡ, ಭೋರಮ್ಮಾ…

Read More