Author: editor.udayarashmi@gmail.com

ವಿಜಯಪುರ: ದೇಶಕ್ಕೆ ಮಾರಕವಾದ ವಕ್ಫ್ ಕಾಯ್ದೆ ತಿದ್ದುಪಡಿ ಮಸೂದೆ ಮಂಡನೆಗೆ ಆಕ್ಷೇಪ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ, ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ಅಂಕಿ-ಅಂಶಗಳು ಮತ್ತು ವಿವರಣೆಯೊಂದಿಗೆ ಎಕ್ಸ್ ನಲ್ಲಿ ಟ್ವಿಟ್ ಮೂಲಕ ಟಾಂಗ್ ನೀಡಿದ್ದಾರೆ.ಕಾನೂನು ತಜ್ಞರು ಹಾಗೂ ಸಂವಿಧಾನ ತಜ್ಞರಾದ ಶ್ರೀಯುತ ಸಿದ್ದರಾಮಯ್ಯನವರೇ ನಿಮಗೆ ಗೊತ್ತೇ ?ವಕ್ಫ್ ಬೋರ್ಡ್ ಬಳಿ ಸುಮಾರು 8.66 ಲಕ್ಷ ಆಸ್ತಿಗಳಿವೆ, 8.02 ಲಕ್ಷ ಎಕರೆ ಒಡೆತನದ ಆಸ್ತಿ ವಕ್ಫ್ ಬಳಿ ಇದೆ (ಅಂದರೆ 30 ಚಂಡೀಗಢ ದಷ್ಟು)ವಕ್ಫ್ ಟ್ರಿಬ್ಯೂನಲ್ ನಲ್ಲಿ ನೀಡಿದ ತೀರ್ಪನ್ನು ಸರ್ವೋಚ್ಚ ನ್ಯಾಯಾಲಯದಲ್ಲೂ ಪ್ರಶ್ನಿಸುವಂತಿಲ್ಲ. ಮುಸಲ್ಮಾನ ಬಹುಸಂಖ್ಯಾತ ರಾಷ್ಟ್ರಗಳಲ್ಲೇ ವಕ್ಫ್ ಎಂಬ ಪರಿಕಲ್ಪನೆ ಇಲ್ಲ.ರಕ್ಷಣಾ ಇಲಾಖೆ ಹಾಗೂ ಭಾರತೀಯ ರೈಲ್ವೆ ಬಿಟ್ಟರೆ ಭಾರತದಲ್ಲಿ ಅತಿ ಹೆಚ್ಚು ಭೂಮಿಯ ಒಡೆತನ ಇರುವುದು ವಕ್ಫ್ ನಲ್ಲಿ. ಈ ಕಾಯ್ದೆಯಿಂದ ಅತಿ ಹೆಚ್ಚು ಅನ್ಯಾಯಕ್ಕೆ ಒಳಪಟ್ಟಿರುವುದು ಹಿಂದೂಗಳು.ತಮಿಳುನಾಡಿನ ತಿರುಚಿರಾಪಳ್ಳಿ ಜಿಲ್ಲೆಯ, ತಿರುಚೆಂಥುರೈ ಹಳ್ಳಿಯಲ್ಲಿರುವ 1,500 ವರ್ಷಗಳ ಇತಿಹಾಸವಿರುವ ಸುಂದರೇಶ್ವರ ಸ್ವಾಮಿ ದೇವಸ್ಥಾನದ ಮೇಲೂ ವಕ್ಫ್…

Read More

ಕೊಲ್ಹಾರ: ಚುನಾಯಿತ ಪ್ರತಿನಿಧಿಗಳಾಗಿ ಎರಡೂವರೆ ವರ್ಷದ ನಂತರ ಬಹುನಿರೀಕ್ಷಿತ ಕೊಲ್ಹಾರ ಪಟ್ಟಣ ಪಂಚಾಯತಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ, ಚುನಾವಣೆ ಆಯೋಗ ಮೀಸಲಾತಿಯನ್ನು ಪ್ರಕಟಿಸಿ ಚುನಾವಣೆ ನಡೆಸುವ ಸಿದ್ಧತೆಯಲ್ಲಿ ತೊಡಗಿದೆ.ಪಟ್ಟಣ ಪಂಚಾಯತಿಯಲ್ಲಿ ಒಟ್ಟು ೧೭ ಸ್ಥಾನಗಳಿದ್ದು ೧೧ಜನ ಸದಸ್ಯರು ಕಾಂಗ್ರೆಸ್ ಪಕ್ಷದ ಬಿ-ಫಾರ್ಮ್ ಪಡೆದ ಚುನಾಯಿತ ಸದಸ್ಯರಿದ್ದು, ಇಬ್ಬರು ಎಐಎಮ್‌ಐಎಮ್ ಸದಸ್ಯರು, ಒಬ್ಬ ಪಕ್ಷೇತರ ಅಭ್ಯರ್ಥಿ ಆಯ್ಕೆಯಾಗಿರುತ್ತಾರೆ. ಇವರೆಲ್ಲರೂ ಈಗಾಗಲೇ ಸಚಿವ, ಕ್ಷೇತ್ರದ ಶಾಸಕ ಶಿವಾನಂದ ಪಾಟೀಲರಿಗೆ ಬೆಂಬಲ ಸೂಚಿಸಿರುವುದನ್ನು ನೋಡಿದರೆ ಕಾಂಗ್ರೆಸ್ ಪಕ್ಷವು ಅಧಿಕಾರ ಚುಕ್ಕಾಣಿ ಹಿಡಿಯುವುದರಲ್ಲಿ ಯಾವುದೇ ಅನುಮಾನವಿಲ್ಲ, ಮೂವರು ಸದಸ್ಯರನ್ನು ಹೊಂದಿದ ಬಿಜೆಪಿ ಪಕ್ಷವು ಅದರ ನಾಯಕರು ಮನಸ್ಸು ಮಾಡಿದರೆ ಏನು ಬೇಕಾದರೂ ಆಗುವ ಸಾಧ್ಯತೆ ಅಧಿಕವಾಗಿದೆ.ಮೀಸಲಾತಿ ಪಟ್ಟಿ ಪ್ರಕಟಗೊಳ್ಳಲು ಅಪಾರ ಸಮಯ ಕಳೆದು ಹೋಗಿರುವುದರಿಂದ ಅಧಿಕಾರದ ಅವಧಿ ಎಷ್ಟು ವರ್ಷದಾಗಿರುವದು ಎನ್ನುವದು ಚುನಾಯಿತ ಸದಸ್ಯರಲ್ಲಿ ಆತಂಕ ಮೂಡಿಸಿದರೆ, ಕಾನೂನು ಯಾವ ರೀತಿ ಹೇಳುತ್ತದೆ ಎನ್ನುವುದು ಕಾನೂನು ಅನುಭವದ ಪರಿಪಾಲಕರನ್ನು ವಿಚಾರಿಸಿದಾಗ ತಿಳಿಯುತ್ತದೆ.ಕ್ಷೇತ್ರದ ಶಾಸಕರು ಸಚಿವರು ಆಗಿರುವ…

Read More

ಕೊಲ್ಹಾರ: ಅವಳಿ ಜಿಲ್ಲೆಯ ಜನರ ಋಣ ವಿಶೇಷವಾಗಿ ಕೊಲ್ಹಾರ ಜನತೆಯ ಪ್ರೀತಿ, ವಿಶ್ವಾಸ ನನ್ನ ಮೇಲೆ ಅಪಾರವಾಗಿದ್ದು ನನ್ನ ಜೀವಿತ ಅವಧಿಯ ಕೊನೆಯವರೆಗೂ ತೀರಿಸಲಾರದಷ್ಟು ಹೊರೆ ಎನಿಸುತ್ತಿದೆ ಎಂದು ಮಾಜಿ ಸಚಿವ ಎಸ್ ಆರ್ ಪಾಟೀಲ ಹೇಳಿದರು.ಪಟ್ಟಣದ ಡಾ, ಎಪಿಜೆ ಅಬ್ದುಲ್ ಕಲಾಂ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಉಸ್ಮಾನಸಾಬ್ ಪಟೇಲ್ ಏರ್ಪಡಿಸಿದ ಸನ್ಮಾನವನ್ನು ಸ್ವೀಕರಿಸಿ ಮಾತನಾಡುತ್ತಿದ್ದರು. ಬಾಡಗಂಡಿಯಲ್ಲಿ ಪ್ರಾರಂಭಿಸಿರುವ ಎಸ್.ಆರ್.ಪಾಟೀಲ್ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ, ಹಾಗೂ ಸಂಶೋಧನ ಕೇಂದ್ರವು ಜನೆತೆಗೆ ಉತ್ತಮ ಆರೋಗ್ಯವನ್ನು ಒದಗಿಸುವ, ಪ್ರಾಣವನ್ನು ಕಾಪಾಡುವ ಸೇವಾ ಕೇಂದ್ರವಾಗಲಿ ಎನ್ನುವ ಸದುದ್ದೇಶದಿಂದ ಅವಳಿ ಜಿಲ್ಲೆಯ ಮದ್ಯವರ್ತಿ ಸ್ಥಳವಾದ ನನ್ನ ಹುಟ್ಟೂರು ಬಾಡಗಂಡಿಯಲ್ಲಿ ಪ್ರಾರಂಭಿಸಲಾಗಿದ್ದು, ಇದರ ಸದುಪಯೋಗವನ್ನು ನಾಡಿನ ಜನತೆ ಪಡೆದುಕೊಳ್ಳಬೇಕೆಂದು ಹೇಳಿದರು.ಹೃದಯ ಸಂಬಂದಿ, ರಕ್ತ ಸುದ್ದಿಕರಣ (ಡಯಲಿಸಿಸ್), ಮೆದುಳು ರೋಗ ನಿಯಂತ್ರಣ ಮತ್ತು ಕ್ಯಾನ್ಸರ್ ತರಹದ ನೂರಾರು ಮಾರಕ ರೋಗಗಳನ್ನು ನಿಯಂತ್ರಿಸುವ ಅನುಭವಿ ವೈದ್ಯರನ್ನು ನೇಮಕ ಮಾಡಿ, ಕೇಂದ್ರಗಳನ್ನು ಪ್ರಾರಂಭಿಸಬೇಕೆನ್ನುವ ಮಹತ್ವಕಾಂಕ್ಷೆ ಹೊಂದಿದ್ದೇನೆ. ಮಣಿಪಾಲ ಆಸ್ಪತ್ರೆಯ ಮಾದರಿಯ ಉತ್ತಮ ಆರೋಗ್ಯ…

Read More

ವಿಜಯಪುರ: ಲಾಲ್ ಬಹದ್ದೂರ ಶಾಸ್ತ್ರೀ ಜಲಾಶಯ ವ್ಯಾಪ್ತಿಯ ಜಿಲ್ಲೆಗಳ ರೈತರ ಬದುಕು ಹಸನಾಗಲು ವಳಿ ಜಲಾಶಯಗಳ ನೀರು ಮರು ಹಂಚಿಕೆ ಮಾಡುವಂತೆ ವಿಜಯಪುರ- ಬಾಗಲಕೋಟ ಜಿಲ್ಲೆಯ ಎಲ್ಲಾ ರೈತರು ಜಾತ್ಯಾತೀತವಾಗಿ, ಪಕ್ಷಾತೀತವಾಗಿ ಇಂದು ನಗರದ ಕನ್ನಡ ಸಾಹಿತ್ಯ ಪರಿಷತ್ ಸಭಾ ಭವನದಲ್ಲಿ ಪೂರ್ವಭಾವಿ ಸಭೆ ಮಾಡಿ ನಂತರ ಅಪರ್ ಜಿಲ್ಲಾಧಿಕಾರಿಗಳಾದ ಸೋಮನಿಂಗ ಗೆಣ್ಣೂರ ಅವರ ಮೂಲಕ ಕರ್ನಾಟಕ ಸರ್ಕಾರಕ್ಕೆ ಒತ್ತಡ ಹೆರುವಂತೆ ಅಖಂಡ ಕರ್ನಾಟಕ ರೈತ ಸಂಘ ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಮನವಿ ಸಲ್ಲಿಸಲಾಯಿತು.ಮುಖಂಡರಾದ ಅರವಿಂದ ಕುಲಕರ್ಣಿ ಮಾತನಾಡುತ್ತಾ, ಆಲಿಮಟ್ಟಿ ಹಾಗೂ ಬಸವ ಸಾಗರ ಜಲಾಶಯಕ್ಕೆ ಅಂದಾಜು ೨೦೧ ಗ್ರಾಮಗಳು ಭಾದಿತಗೊಂಡು, ೧೩೬ ಗ್ರಾಮಗಳು ಸಂಪೂರ್ಣ ಮುಳುಗಡೆ ಹೊಂದಿದ್ದರು ಕೂಡಾ ಜಿಲ್ಲೆಯ ಕೊನೆಯ ಹಳ್ಳಿಗಳಲ್ಲಿ ಜಲಾಶಯದ ನೀರು ತಲುಪುತಿಲ್ಲ, ಅಧಿಕಾರಿಗಳಿಗೆ ಕೇಳಿದರೆ ಇದು ಮೊದಲೇ ನೀರು ಹಂಚಿಕೆ ಮಾಡಲಾಗಿದೆ ನಾವೇನು ಮಾಡಲಾಗುವುದಿಲ್ಲ ಎನ್ನುತ್ತಿದ್ದಾರೆ, ಆದ್ದರಿಂದ ಜಲಾಶಯದ ನೀರು ಮರು ಹಂಚಿಕೆ ಮಾಡಿ ಎರಡು…

Read More

ಭೀಮಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು | ತಹಸೀಲ್ದಾರ್ ಚಾವಲರ ಸೂಚನೆ ಮೋರಟಗಿ: ಉಜನಿ ಜಲಾಶಯದಿಂದ ಭೀಮಾ ನದಿಗೆ ೧.೩೦ ಕ್ಯೂಸೆಕ್ ನೀರು ಬಿಡಲಾಗಿದ್ದು, ನದಿ ತೀರದ ಗ್ರಾಮಸ್ಥರು ಜಾಗೃತರಾಗಿರಬೇಕು ಎಂದು ಆಲಮೇಲ ತಹಸೀಲ್ದಾರ್ ಸುರೇಶ ಚಾವಲರ ಹೇಳಿದರು.ಸಮೀಪದ ಬಗಲೂರ ಹಾಗೂ ಘತ್ತರಗಿ ಮಧ್ಯೆ ಭೀಮಾ ನದಿಗೆ ಬುಧವಾರ ಭೇಟಿ ನೀಡಿ ಅವರು ಮಾತನಾಡಿದರು.ಭೀಮಾ ನದಿ ಪಾತ್ರದಲ್ಲಿ ಅಪಾರ ಪ್ರಮಾಣದಲ್ಲಿ ನೀರು ಹರಿಯುತ್ತಿದೆ. ರೈತರು ಕಟ್ಟೆಚ್ಚರ ವಹಿಸಬೇಕು. ಮಕ್ಕಳು, ಜಾನುವಾರುಗಳ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಘತ್ತರಗಿ ಬ್ಯಾರೇಜ್ ಬಳಿ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಯುತ್ತಿದೆ. ಮೀನುಗಾರರು ಕೂಡ ಎಚ್ಚರಿಕೆಯಿಂದ ಇರಬೇಕು ಎಂದು ಸೂಚಿಸಿದರು.ನದಿ ತೀರದ ಬಗಲೂರ, ಹಾವಳಗಿ, ಶಿರಸಗಿ ಮತ್ತಿತರ ಗ್ರಾಮಗಳ ಬಳಿ ಭೀಮೆ ತುಂಬಿ ಹರಿಯುತ್ತಿದೆ. ನದಿ ಪಾತ್ರದಲ್ಲಿರುವ ಗ್ರಾಮಸ್ಥರು ಯಾವುದೆ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕು. ಅಗತ್ಯವಿದ್ದವರು ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದರು.ಇದೇ ಸಂರ್ಭದಲ್ಲಿ ಕಂದಾಯ ನಿರೀಕ್ಷಿಕ ಆರ್ ಐ ಅತ್ತಾರ, ಗಾಮ ಆಡಳಿತ…

Read More

ವಿಜಯಪುರ: ಸರಸ್ವತಿ ವಿದ್ಯಾಧಿದೇವತೆ; ನಮಗೆ ಬೇಕಾದ ಎಲ್ಲ ವಿಧದ ವಿದ್ಯೆಗಳನ್ನೂ ದಯಪಾಲಿಸುವವಳು. ವಿದ್ಯೆ ನಮಗೆ ಯಾವ ರೂಪದಲ್ಲಿಯೂ ಒದಗಬಹುದು. ಬರಿ ವಿದ್ಯೆಯನ್ನಷ್ಟೆ ಗಳಿಸಿದರೆ ಪ್ರಯೋಜನವಿಲ್ಲ; ಅದನ್ನು ಸರಿಯಾಗಿ ಬಳಸಲು ಬುದ್ಧಿಯೂ ಬೇಕು. ಇಂಥ ಬುದ್ಧಿಯನ್ನು ಕೊಡುವವಳೂ ಸರಸ್ವತಿಯೇ, ಸರಸ್ವತಿಯು ಲೌಕಿಕ-ಅಲೌಕಿಕ ಎರಡೂ ವಿದ್ಯೆಗಳಿಗೂ ಒಡತಿ ಎಂದು ಬಂಜಾರಾ ಪ್ರೌಢ ಶಾಲೆಯ ಮುಖ್ಯ ಗುರು ಇ.ಡಿ.ಲಮಾಣಿ ಹೇಳಿದರು.ಗುರುವಾರದಂದು ಜಿಲ್ಲಾ ಬಂಜಾರಾ ವಿದ್ಯಾವರ್ಧಕ ಸಂಘದ ಬಂಜಾರಾ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ‘ಸರಸ್ವತಿ ಪೂಜಾ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು. ನಾವಿಂದು ಲೌಕಿಕದಲ್ಲಿಯೇ ಮುಳುಗಿ, ನಮ್ಮ ಅಲೌಕಿಕ ಸ್ವರೂಪವನ್ನು ಮರೆಯುತ್ತಿದ್ದೇವೆ. ಹೀಗಾಗಿಯೇ ಪರಸ್ಪರ ಭೇಧ, ವೈರ, ಕ್ರೌರ್ಯ. ಸರಸ್ವತಿಯ ಆರಾಧನೆ ಎಂದರೆ ಅಂತರಂಗ-ಬಹಿರಂಗದ ಸಾಮರಸ್ಯ. ಈ ಸಾಮರಸ್ಯದಿಂದಲೇ ಒಳಗೂ ಹೊರಗೂ ಸೌಹಾರ್ದವನ್ನು ಸಾಧಿಸಲಾದೀತು ಎಂದು ಹೇಳಿದರು.ಸರಸ್ವತಿ ಮಾತೆ ಪೂಜೆ ನೆರವೇರಿಸಿ ಮಾತನಾಡಿದ ಬೋರಾವತ್ತರವರು. ಇಂದು ನಾವು ಹಲವು ವಿದ್ಯೆಗಳನ್ನು ಸಂಪಾದಿಸುತ್ತಿದ್ದೇವೆ. ಆದರೆ ನೆಮ್ಮದಿಯನ್ನು ಮಾತ್ರ ಕಾಣುತ್ತಿಲ್ಲ. ಇಡೀ ಜಗತ್ತು ರಾಗ-ದ್ವೇಷಗಳಲ್ಲಿ…

Read More

ವಿಭಾಗೀಯ ನಿಯಂತ್ರಣಾಧಿಕಾರಿಗಳನ್ನು ಮುಂದುವರೆಸಲು ಕೆಎಸ್ಸಾರ್ಟಿಸಿ ಸ್ಟಾಪ್ & ವರ್ಕರ್ಸ್ ಯೂನಿಯನ್ ಆಗ್ರಹ ವಿಜಯಪುರ: ಇಲ್ಲಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳಾಗಿ ವರ್ಗಾವಣೆಗೊಂಡು ಬಂದಿರುವ ನಾರಾಯಣಪ್ಪ ಕುರಬರ ಅವರ ಮೇಲೆ ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾಮಂಡಳಿ ಪದಾಧಿಕಾರಿಗಳು ಈಚೆಗೆ ಮಾಡಿರುವ ಆರೋಪಗಳಲ್ಲಿ ಯಾವುದೇ ಹುರುಳಿಲ್ಲವೆಂದು ಕೆ.ಎಸ್.ಆರ್.ಟಿ.ಸಿ. ಸ್ಟಾಪ್ & ವರ್ಕರ್ಸ್ ಯೂನಿಯನ್ ಅಧ್ಯಕ್ಷ ಅರುಣಕುಮಾರ ಹಿರೇಮಠ ಹೇಳಿದ್ದಾರೆ.ಬುಧವಾರ ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ಅವರು, ದಕ್ಷ, ಪ್ರಾಮಾಣಿಕ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರಬರ ಅವರ ಬಗ್ಗೆ ಹಲವರು ಇಲ್ಲ ಸಲ್ಲದ ಅನೇಕ ಸುಳ್ಳು ಸಂಗತಿಗಳನ್ನು ನೈಜ ಸಂಗತಿಗಳೆಂದು ಬಿಂಬಿಸಿ ಸಾರಿಗೆ ಸಂಸ್ಥೆಯ ಉನ್ನತ ಅಧಿಕಾರಿಗಳಿಗೆ ಹಾಗೂ ಸಚಿವರಿಗೆ ಸುಳ್ಳು ಆರೋಪವನ್ನು ಮಾಡಿರುತ್ತಾರೆ. ಅವರು ಮಾಡಿದ ಆರೋಪಗಳೆಲ್ಲ ಸತ್ಯಕ್ಕೆ ದೂರವಾಗಿದ್ದು, ವಿಭಾಗೀಯ ನಿಯಂತ್ರಣಾಧಿಕಾರಿಗಳಿಂದ ವೈಯಕ್ತಿಕ ಲಾಭದ ಆಸೆಗಾಗಿ ಇವರೆಲ್ಲ ಅವರ ತೇಜೋವಧೆಗೆ ಪ್ರಯತ್ನಿಸುತ್ತಿರುವುದು ಖಂಡನೀಯ ಎಂದು ಹಿರೇಮಠ ಹೇಳಿದ್ದಾರೆ.ಸಾರಿಗೆ ಸಂಸ್ಥೆ ಹಾಗೂ ಕಾರ್ಮಿಕರ ಹಿತಚಿಂತನೆಯನ್ನು ಗಮನದಲ್ಲಿರಿಸಿಕೊಂಡು ಒಳ್ಳೆಯ ಕಾರ್ಯಗಳನ್ನು ಮಾಡುವಲ್ಲಿ ವಿಭಾಗೀಯ ನಿಯಂತ್ರಣಾಧಿಕಾರಿ…

Read More

MUDA ಸೈಟ್ ಹಂಚಿಕೆಯಲ್ಲಿ ನನ್ನ ಪಾತ್ರವಿಲ್ಲ | ರಾಜ್ಯಪಾಲರಿಗೆ ಉತ್ತರಿಸಿರುವೆ | ಮೈಸೂರು ಸಮಾವೇಶದಲ್ಲಿ ಹಗರಣ ಬಿಚ್ಚಿಡುವೆ | ಸಿಎಂ ಸಿದ್ದರಾಮಯ್ಯ ಹೇಳಿಕೆ ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(MUDA) ದಲ್ಲಿ ಹಗರಣ ನಡೆದಿದೆ ಎಂಬ ವಿಚಾರ ರಾಜ್ಯ ರಾಜಕೀಯದಲ್ಲಿ ಭಾರೀ ಸದ್ದು ಮಾಡುತ್ತಿದೆ.ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆ ನಡೆಸುತ್ತಿದೆ. ರಾಜ್ಯಪಾಲರು ಸಿಎಂ ಸಿದ್ದರಾಮಯ್ಯನವರಿಗೆ ಶೋಕಾಸ್ ನೊಟೀಸ್ ನೀಡಿದ್ದಾರೆ. ನಿನ್ನೆ ದೆಹಲಿಯಿಂದ ಆಗಮಿಸಿದ ರಾಜ್ಯಪಾಲರು ಟಿ ಜೆ ಅಬ್ರಹಾಂ ಅವರನ್ನು ಕರೆಸಿ ಮಾತುಕತೆ ಕೂಡ ನಡೆಸಿದ್ದಾರೆ.ಇವಕ್ಕೆಲ್ಲಾ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಬುಧವಾರ ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಮುಡಾದಿಂದ ಬದಲಿ ಭೂಮಿ ಕೊಡುವುದು ಬೇಡ ಎಂದು ನಾನು ಹೇಳಿದ್ದೆ. ನನ್ನ ಪತ್ನಿ ಬದಲಿ ನಿವೇಶನಕ್ಕೆ ಅರ್ಜಿ ಕೊಟ್ಟಾಗ ನಾನು ಸಿಎಂ ಆಗಿದ್ದೆ. ಸಿಎಂ ಆಗಿರುವ ತನಕ ಬದಲಿ ಭೂಮಿ ಕೊಡಬೇಡಿ ಎಂದು ನಾನು ಹೇಳಿದ್ದೆ. ಪ್ರಭಾವ ಬಳಸುವುದಿದ್ದರೆ ಅಂದೇ ಬಳಸುತ್ತಿದ್ದೆ ಎಂದು ಹೇಳಿದ್ದಾರೆ.ಸಿಎಂ ಆಗಿ ಕೊಡಲು ಆಗಿತ್ತಿರಲಿಲ್ಲವಾ, ಬದಲಿ ಸೈಟ್​ಗೆ…

Read More

ವಿಜಯಪುರ: ಜಿಲ್ಲಾ ಕಾರ್ಮಿಕ ನೂತನ ಅಧಿಕಾರಿಯಾಗಿ ಆಗಮಿಸಿದ ಶ್ರೀಮತಿ ಉಮಾಶ್ರೀ ಕೋಳಿ ಅವರಿಗೆ ಮಂಗಳವಾರ ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಅಸಂಘಟಿತ ಕಾರ್ಮಿಕರ ಒಕ್ಕೂಟ ಬೆಂಗಳೂರು ಜಿಲ್ಲಾ ಘಟಕ ವಿಜಯಪುರ ಬಾಗಲಕೋಟ ಬೆಳಗಾವಿ ಘಟಕಗಳ ವತಿಯಿಂದ ಉಸ್ತುವಾರಿ ಅಧ್ಯಕ್ಷ ಪ್ರಕಾಶ ರಜಪೂತ ಅವರ ನೇತೃತ್ವದಲ್ಲಿ ಕಾರ್ಯದರ್ಶಿ ಸುಲೇಮಾನ್ ಓತಗೇರಿ (ಯೋಗಾಪುರ) ಕಾನೂನು ಸಲಹೆಗಾರ ದಾನೇಶ ಅವಟಿ, ಮಹಿಳಾ ಘಟಕದ ಉಸ್ತುವಾರಿ ನಿರ್ಮಲಾ.ಡಿ.ಎ ಅವರ ಉಪಸ್ಥಿತಿಯಲ್ಲಿ ಶಾಲು ಹೊದಿಸಿ ಫಲಪುಷ್ಪ ವಿತರಿಸಿ ಸ್ಮರಣಿಕೆ ನೀಡಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಕಾರ್ಮಿಕ ಅಧಿಕಾರಿಗಳು ಜಿಲ್ಲೆಯ ಸಮಸ್ತ ಕಾರ್ಮಿಕರ ಅದರಲ್ಲೂ ಅಸಂಘಟಿತ ಕಾರ್ಮಿಕರ ಸಬಲೀಕರಣಕ್ಕೆ ಸರಕಾರದ ಸೌಲಭ್ಯ ಒದಗಿಸಲು ಸಿಬ್ಬಂದಿ ವರ್ಗದ ವಿವಿಧ ಸಂಘ ಸಂಸ್ಥೆಗಳ ಸಾರ್ವಜನಿಕರ ಸಹಭಾಗಿತ್ವದೊಂದಿಗೆ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ತಿಳಿಸಿದರು.ಕಾರ್ಯದರ್ಶಿ ಸುಲೇಮಾನ್ ಓತಗೇರಿ ಸ್ವಾಗತಿಸಿದರು. ಶ್ರೀಮತಿ ನಿರ್ಮಲಾ ಡಿ.ಎ ನಿರೂಪಿಸಿ, ವಂದಿಸಿದರು

Read More

ಬೆಂಗಳೂರು: ಮುಖ್ಯಮಂತ್ರಿ‌ಗಳ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ ಅವರನ್ನು ಬೆಂಗಳೂರಿನಲ್ಲಿ ಪ್ರಜಾಪ್ರಗತಿ ಪತ್ರಕರ್ತರ ಬಳಗದಿಂದ ಗೌರವಿಸಿ ಸನ್ಮಾನಿಸಲಾಯಿತು.ಬುಧವಾರ ಮುಖ್ಯಮಂತ್ರಿ ಅವರ ಗೃಹ ಕಛೇರಿ ಕೃಷ್ಣಾದಲ್ಲಿ ಮುಖ್ಯ ಮಂತ್ರಿಯವರ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ ಅವರನ್ನು ಅವಳಿ ಜಿಲ್ಲೆಯ ಪ್ರಜಾಪ್ರಗತಿ ಪತ್ರಕರ್ತರು ಬೇಟಿ ನೀಡಿ ಪ್ರಜಾ ಪ್ರಗತಿ ದಿನ ಪತ್ರಿಕೆ ಉತ್ತರ ಕರ್ನಾಟಕದಲ್ಲಿ ಹೊಸ ಸಂಚಲನ ಮೂಡಿಸಿದ್ದರ ಬಗ್ಗೆ ‌ಮಾತನಾಡಿದರು.ಈ ಸಂದರ್ಭದಲ್ಲಿ ಮ್ಯಾನೇಜಿಂಗ್ ಡೈರೆಕ್ಟರ್ ರವಿ ಕುಮಾರ್, ವಿಜಯಪುರ ಜಿಲ್ಲಾ ವರದಿಗಾರ ಗೋಪಾಲ ಕನಿಮಣಿ , ಸಿಂದಗಿ ತಾಲೂಕು ವರದಿಗಾರ ಮಲ್ಲಿಕಾರ್ಜುನ ಅಲ್ಲಾಪೂರ, ಮುದ್ದೇಬಿಹಾಳ ತಾಲೂಕು ವರದಿಗಾರ ಬಸವರಾಜ ಈ ಕುಂಬಾರ, ಇಂಡಿ ತಾಲೂಕು ವರದಿಗಾರ ಶಂಕರಲಿಂಗ ಜಮಾದಾರ, ಬಾಗಲಕೋಟೆಯ ಜಿಲ್ಲಾ ವರದಿಗಾರ ಹುಚ್ಚೇಶ ಜಗಾಪುರ, ಜಮಖಂಡಿ ತಾಲುಕು ವರದಿಗಾರ ಕೇದಾರ ರವಳೋಜಿ ಉಪಸ್ಥಿತರಿದ್ದರು. ” ಇತ್ತೀಚಿಗೆ ಪ್ರಜಾಪ್ರಗತಿ ಬೆಳವಣಿಗೆ ಮತ್ತು ಸುದ್ದಿಗಳ ಬಗ್ಗೆ ಗಮನಿಸುತ್ತಿದ್ದೇನೆ. ಅತ್ಯಂತ ಗಮನಾರ್ಹ ಮತ್ತು ಸಾಮಾಜಿಕ ಕಳಕಳಿಯ ಕಾಳಜಿವುಳ್ಳ ಸುದ್ದಿಗಳು ಬಿತ್ತರಿಸುತ್ತಿರುವುದು ಹೆಮ್ಮೆಯ ವಿಷಯ. ಈ ಪತ್ರಿಕೆ…

Read More