Author: editor.udayarashmi@gmail.com

ಇಂಡಿ: ಈ ಜನ್ಮವೇ ರೈತರಿಗಾಗಿ, ಕಾರ್ಮಿಕರಗಾಗಿ ಎಂದು ಅವಿರತವಾಗಿ ಹೋರಾಡಿದ ಭೀಮಶಿ ಕಲಾದಗಿ ಇಹಲೋಕ ತ್ಯಜಿಸಿದ್ದು ಮಂಗಳವಾರ ಸ್ವಗ್ರಾಮದಲ್ಲಿ ಕಂದಾಯ ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ ಹಾಗೂ ಸಿಪಿಐ ಎಮ್ ಎಮ್ ಡಪ್ಪಿನ ಅವರ ನೇತೃತ್ವದಲ್ಲಿ ಸರ್ಕಾರಿ ಗೌರವಗಳೊಂದಿಗೆ ಅಂತಿಮ ಸಂಸ್ಕಾರ ನಡೆಯಿತು.ನಿರಂತರವಾಗಿ 50 ವರ್ಷಗಳ ಕಾಲ ಹೋರಾಟವೆ ಬದುಕು ಎಂದು, ಬದುಕಿದ ಕಲಾದಗಿ ಮುತ್ಯಾ ಬರಿಗಾಲ ಭೀಮಶಿ ಎಂದು ಪ್ರಸಿದ್ಧಿ ಹೊಂದಿದ್ದ ಜಿಲ್ಲೆಯ ದಿಮಂತ ಹೋರಾಟಗಾರ ಎಂದು ಜನರಾಡುವ ಮಾತು. ತಾಲ್ಲೂಕಿನ ಹಂಜಗಿ ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಯಿತು.ಅವರ ಸಾವಿಗೆ ಅಪಾರ ಬಂಧು ಬಳಗ, ರಾಜಕೀಯ ಮುಖಂಡರು, ಗಣ್ಯರು, ಅವರು ಪ್ರೀತಿಸುವ ಕಾರ್ಮಿಕ ಬಳಗ ಕಂಬನಿ ಮಿಡಿದಿದ್ದಾರೆ.ಈ ಸಂದರ್ಭದಲ್ಲಿ ಸಚಿವ ಶಿವಾನಂದ ಪಾಟೀಲ, ಶಾಸಕ ಅಶೋಕ ಮನಗೂಳಿ, ಮಾಜಿ ಶಾಸಕ ದೇವಾನಂದ ಚೌವ್ಹಾಣ್, ಅಪ್ಪು ಪಟ್ಟಣಶೆಟ್ಟಿ, ಮಲ್ಲಿಕಾರ್ಜುನ ಮಂಡಿಗೇರಿ, ಕಂ.ಕೆ.ನೀಲಾ, ಅಣ್ಣಾರಾಯ ಏಳಗೇರಿ, ಬಿ ಡಿ ಪಾಟೀಲ, ರೀಯಾಜ ಪಾರೋಕಿ, ಸಿದ್ದು ಡಂಗಾ, ರಮೇಶ ರಾಠೋಡ, ಶಿವಾನಂದ…

Read More

ಸಿಂದಗಿಯಲ್ಲಿ ತಾಲೂಕು ಮಟ್ಟದ ಪಪೂ ಕಾಲೇಜುಗಳ ಅಥ್ಲೆಟಿಕ್ಸ್ ಕ್ರೀಡಾಕೂಟ ಸಿಂದಗಿ: ವಿದ್ಯಾರ್ಥಿಗಳು ಕ್ರಿಯಾಶೀಲರಾಗಬೇಕಾದರೆ ಕ್ರೀಡಾ ಚಟುವಟಿಕೆಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಕ್ರೀಡೆಗಳಲ್ಲಿ ಸೋಲು-ಗೆಲುವು ಸಾಮಾನ್ಯ. ಆದರೆ ವಿದ್ಯಾರ್ಥಿಗಳು ಕ್ರೀಡಾಸ್ಫೂರ್ತಿಯೊಂದಿಗೆ ಭಾಗವಹಿಸಬೇಕು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಪಟ್ಟಣದ ಆರ್.ಬಿ.ಬೂದಿಹಾಳ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ (ಪದವಿಪೂರ್ವ) ಇಲಾಖೆ ವಿಜಯಪುರ, ಶ್ರೀ ಪದ್ಮರಾಜ ಮಹಿಳಾ ಸ್ವತಂತ್ರ ಪಪೂ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ೨೦೨೪-೨೫ನೆಯ ಸಾಲಿನ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಅಥ್ಲೆಟಿಕ್ಸ್ ಕ್ರೀಡಾಕೂಟದ ಓಲಂಪಿಕ್ ಧ್ವಜಾರೋಹಣವನ್ನು ನೇರವೇರಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಬದುಕನ್ನು ಕೂಡಾ ಕ್ರೀಡಾ ಮನೋಭಾವದಿಂದ ಸ್ವೀಕರಿಸಬೇಕು. ಯಾವುದೇ ಕಾರ್ಯನಿರ್ವಹಿಸಬೇಕಾದರೆ ವಿದ್ಯಾರ್ಥಿಗಳಲ್ಲಿ ಶ್ರದ್ಧೆ ಬಹಳ ಮುಖ್ಯ. ಮಕ್ಕಳು ಜೀವನದಲ್ಲಿ ಸಾಧನೆ ಮಾಡಬೇಕು ಎಂದು ಗುರಿ ಹೊಂದಿ ಇತರರಿಗೆ ಮಾದರಿಯಾಗಬೇಕು ಎಂದರು.ಈ ವೇಳೆ ಆರ್.ಡಿ.ಪಾಟೀಲ ಕಾಲೇಜನ ನಿವೃತ್ತ ಶಿಕ್ಷಕ ಕೆ.ಹೆಚ್.ಸೋಮಾಪೂರ ಕ್ರೀಡಾ ಜ್ಯೋತಿ ಸ್ವೀಕರಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಜೀವನದಲ್ಲಿ ವೈದ್ಯ, ಇಂಜನಿಯರ್, ವಕೀಲರಾಗಬೇಕು ಎಂದು ಆಸೆ ಇಟ್ಟುಕೊಳ್ಳುವಂತೆ ಆಸೆ ಪಡುವಂತೆ ಉತ್ತಮ…

Read More

ಸಿಂದಗಿ: ದಂಡಾಧಿಕಾರಿಗಳ ಕಾರ್ಯಾಲಯ ಸಭಾಂಗಣದಲ್ಲಿ ಮಂಗಳವಾರ ನಡೆದ ಸ್ವಾತಂತ್ರೋತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠಮಾತನಾಡಿದರು.ಆ.೧೫ರಂದು ಆಚರಿಸಲ್ಪಡುವ ಸ್ವಾತಂತ್ರೋತ್ಸವ ದಿನಾಚರಣೆಗೆ ಅಗತ್ಯ ಸಿದ್ಧತೆಯಲ್ಲಿ ಎಲ್ಲರೂ ಭಾಗಿಯಾಗಬೇಕು. ಅಂದು ಬೆಳಗ್ಗೆ ೭.೪೫ರ ಒಳಗೆ ಎಲ್ಲ ಸರ್ಕಾರಿ, ಅರೇ ಸರ್ಕಾರಿ ಕಚೇರಿ ಮತ್ತು ಶಾಲಾ-ಕಾಲೇಜುಗಳಲ್ಲಿ ಧ್ವಜಾ ರೋಹಣ ನಡೆಸಬೇಕು. ನಂತರ ೮.೦೦ಕ್ಕೆ ತಹಶೀಲ್ದಾರ್ ಆವರಣಕ್ಕೆ ಆಗಮಿಸಬೇಕು, ತಾಲೂಕು ಕ್ರೀಡಾಂಗಣದಲ್ಲಿ ಬೆಳಗ್ಗೆ ಸರಿಯಾಗಿ ೯ ಗಂಟೆಗೆ ಆರಂಭವಾಗುವ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು ಎಂದು ಎಲ್ಲ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸೂಚನೆ ನೀಡಿದರು. ಆಯಾ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯ ಹಂಚಿಕೆಯಂತೆ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಬೇಕು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಕಾರ್ಯಕ್ರಮಕ್ಕೆ ತಾಲೂಕಾಡಳಿತದಿಂದ ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.ಸಭೆಯಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳು ಮತ್ತ ಅವರ ಪ್ರತಿನಿಧಿಗಳು ಖರ್ಚು ನೀಡುವುದಾಗಿ ಸಭೆಯಲ್ಲಿ ಹೇಳಿ ಹೋಗುತ್ತಾರೆ ಆದರೆ ತಾಲೂಕಿನ ಕೆಲವು ಇಲಾಖೆಯಿಂದ ಸರಿಯಾದ ಸ್ಪಂದನೆ ಮತ್ತು ಆರ್ಥಿಕ ನೆರವು ದೊರೆಯುವುದಿಲ್ಲ.…

Read More

ಮುದ್ದೇಬಿಹಾಳ: ನಿಗಧಿತ ಬಾಡಿಗೆಗಿಂತ ಹೆಚ್ಚಿನ ಹಣ ಪಡೆದುಕೊಳ್ಳುವದು, ಅತೀ ವೇಗದ ಚಲಾವಣೆ, ಮಧ್ಯದ ಅಮಲಿನಲ್ಲಿ ಅಟೋ ರಿಕ್ಷಾ ಚಲಾಯಿಸಿದರೆ ಅಂಥವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವದಾಗಿ ಪಿಎಸ್‌ಐ ಸಂಜೀವ ತಿಪರೆಡ್ಡಿ ಎಚ್ಚರಿಸಿದರು.ಪಟ್ಟಣದ ಪೊಲೀಸ್ ಠಾಣೆಯಲ್ಲಿ ಅಟೋರಿಕ್ಷಾ ಚಾಲಕರು ಮತ್ತು ಮಾಲೀಕರಿಗೆ ಸಂಚಾರಿ ನಿಯಮಗಳ ಬಗ್ಗೆ ಅರಿವು ಮೂಡಿಸುವ ಕುರಿತು ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಕಡ್ಡಾಯವಾಗಿ ಪ್ರತಿಯೊಬ್ಬ ಆಟೊರಿಕ್ಷಾ ಚಾಲಕರು ಚಾಲನಾ ಪರವಾನಿಗೆ, ವಾಹನ ವಿಮೆ, ಆರ್‌ಸಿ ಪುಸ್ತಕ ಹೊಂದಿರಬೇಕು. ಪ್ರಯಾಣಿಕರು ಕೇಳಿದ ಸ್ಥಳಗಳಿಗೆ ಕರೆದುಕೊಂಡು ಹೋಗಲು ನಿರಾಕರಿಸುವಂತಿಲ್ಲ, ಯಾವೊಬ್ಬ ಚಾಲಕರು ಸಮವಸ್ತ್ರ ಧರಿಸದೇ ಆಟೋ ಚಲಾವಣೆ ಮಾಡುವಂತಿಲ್ಲ, ಆಟೋರಿಕ್ಷಾದಲ್ಲಿ ಮೀಟರ ಅಳವಡಿಸಿಕೊಳ್ಳಬೇಕು, ಮಹಿಳಾ ಪ್ರಯಾಣಿಕರ ಜೊತೆ ದುರ್ನಡತೆ ತೋರಬಾರದು, ಪಟ್ಟಣದಲ್ಲಿ ಸಾರ್ವಜನಿಕರಿಗೆ, ವ್ಯಾಪಾರಸ್ಥರಿಗೆ ತೊಂದರೆ ಆಗದಂತೆ ಪಾರ್ಕಿಂಗ್ ಮಾಡಬೇಕು, ಚಾಲರು ತಮ್ಮ ಆಟೋರಿಕ್ಷಾದಲ್ಲಿ ಮೀತಿಗಿಂತ ಹೆಚ್ಚಿನ ಪ್ರಯಾಣಿಕರು ಹಾಗೂ ಶಾಲಾ ಮಕ್ಕಳನ್ನು ಹಾಕುವುದು, ಅತೀಯಾದ ವೇಗ, ಹಿಂದೆ ಬರುವ ವಾಹನಗಳಿಗೆ ರಸ್ತೆ ನೀಡದಿರುವದು, ಗುಟಕಾ ತಿನ್ನುತ್ತ ಚಲಾವಣೆ ಮಾಡುವದು, ಉಗಿಯಲು ಹೊರಕ್ಕೆ…

Read More

ಆಲಮಟ್ಟಿ: ಇಲ್ಲಿನ ಮಂಜಪ್ಪ ಹಡೇ೯ಕರ ಹಾಗೂ ವಚನ ಪಿತಾಮಹ ಡಾ.ಫ.ಗು.ಹಳಕಟ್ಟಿ ಪ್ರೌಢಶಾಲೆಯ ಅವರಣದಿಂದ ಅತಿ ಸನಿಹದಲ್ಲೇ ಎದುರಿಗಿರುವ ನಿಡಗುಂದಿ-ಆಲಮಟ್ಟಿ ರಸ್ತೆವರೆಗೆ ಸಿ.ಸಿ.ರಸ್ತೆಯೊಂದನ್ನು ನಿಮಿ೯ಸಿ ಕೊಡಬೇಕೆಂದು ಕನಾ೯ಟಕ ಪ್ರದೇಶ ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಶ್ರೀಮತಿ ಸಂಯುಕ್ತಾ ಪಾಟೀಲ ಅವರಿಗೆ ಸಂಸ್ಥೆಯ ಮುಖ್ಯಸ್ಥರು ಮನವಿ ಪತ್ರ ಸಲ್ಲಿಸಿದರು.ಇಲ್ಲಿ ಕಾಲೇಜು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಸಂಯುಕ್ತಾ ಪಾಟೀಲ ಅವರಿಗೆ ಸಿಸಿ ರಸ್ತೆ ಬೇಡಿಕೆಯುಳ್ಳ ಮನವಿ ಪತ್ರವೊಂದನ್ನು ಎಸ್.ವ್ಹಿ. ವ್ಹಿ. ಸಂಸ್ಥೆಯ ಕಾರ್ಯದರ್ಶಿ ಪ್ರೊ,ಶಿವಾನಂದ ಪಟ್ಟಣಶೆಟ್ಟರ ಸಲ್ಲಿಸಿದರು.ಕನಾ೯ಟಕ ಗಾಂಧಿ ಹಡೇ೯ಕರ ಮಂಜಪ್ಪ ಹಾಗೂ ವಚನ ಪಿತಾಮಹ ಡಾ.ಫ.ಗು.ಹಳಕಟ್ಟಿ ಮಹಾನ ಶರಣರ ಹೆಸರಿನಿಂದ ನಡೆಯಲ್ಪಡುತ್ತಿರುವ ವಿದ್ಯಾಲಯದ ಮುಂದಿನ ರಸ್ತೆಯನ್ನು ಸಿ.ಸಿ.ರಸ್ತೆಯನ್ನಾಗಿ ಮಾಡಿಕೊಡಬೇಕೆಂದು ಸಂಯುಕ್ತಾ ಪಾಟೀಲ ಅವರಲ್ಲಿ ಬೇಡಿಕೆಯುಳ್ಳ ಮನವಿ ಪತ್ರ ಅಪಿ೯ಸಲಾಯಿತು.ಮಹಾನುಭಾವರ ಹೆಸರಿನಿಂದ ಇವೆರಡು ವಿದ್ಯಾಲಯಗಳನ್ನು ಆಡಳಿತ ಮಂಡಳಿಯವರು ನಿಮಿ೯ಸಿರುವ ಒಂದೇ ಕಟ್ಟಡದ ಸೂರಿನಡಿ ನಡೆಯುತ್ತಿದೆ. ಈ ಎರಡು ವಿದ್ಯಾಲಯದಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ ಮತ್ತು ಪದವಿ ಸುಮಾರು ಒಂದು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಇಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಮುಖ್ಯ…

Read More

ಮುನ್ನೆಚ್ಚರಿಕೆಯಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ವಿಜಯಪುರ: ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಮಂಗಳವಾರ ಭೀಮಾನದಿಗೆ ನಿರ್ಮಿಸಲಾಗಿರುವ ಸೊನ್ನ ಬ್ಯಾರೇಜ್‌ಗೆ ಕಲ್ಬುರ್ಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ ಅವರೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಮಹಾರಾಷ್ಟ್ರದ ಉಜನಿ ಹಾಗೂ ವೀರ ಜಲಾಶಯದಿಂದ ನೀರು ಹರಿಬಿಟ್ಟಿರುವ ಹಿನ್ನಲೆಯಲ್ಲಿ ಭೀಮಾ ನದಿ ಪಾತ್ರದ ಪ್ರವಾಹ ಪರಿಸ್ಥಿತಿ ಬಗ್ಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಭೇಟಿ ನೀಡಿದ ಅವರು, ಈಗಾಗಲೇ ಮಹಾರಾಷ್ಟ್ರದಲ್ಲಿ ಅಲ್ಪ ಪ್ರಮಾಣದಲ್ಲಿ ಮಳೆ ನಿಂತಿದ್ದು ಉಜನಿ ಹಾಗೂ ವೀರ ಜಲಾಶಯದಿಂದ ನೀರು ಹರಿಸಲಾಗುತ್ತಿರುವುದರಿಂದ ಭೀಮಾ ನದಿ ಪಾತ್ರದ ಜನರು ಮುನ್ನೆಚ್ಚರಿಕೆ ವಹಿಸಬೇಕು ಮತ್ತು ಸಂಬಂಧಿಸಿದ ಅಧಿಕಾರಿಗಳು ನೀಡುವ ಮುನ್ನೆಚ್ಚರಿಕೆ, ಸೂಚನೆಗಳನ್ನು ಪಾಲಿಸಬೇಕು ಎಂದು ತಿಳಿಸಿದ ಅವರು, ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು. ನದಿ ಪಾತ್ರಕ್ಕೆ ಬಟ್ಟೆ ತೊಳೆಯಲು, ದನ, ಕರುಗಳಿಗೆ ನದಿ ಹತ್ತಿರಕ್ಕೆ ಹೋಗದಂತೆ ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದರು.ಈ ಸಂದರ್ಭದಲ್ಲಿ ಬ್ಯಾರೇಜನ ಎಲ್ಲ ಕ್ರಸ್ಟ್ ಗೆಟ್ ಗಳನ್ನು ಪರಿಶೀಲನೆ ನಡೆಸಿದ…

Read More

ವಿಜಯಪುರ: ಆ.೫ ರಿಂದ ಜಾರಿಯಾಗುವಂತೆ ರಾಜ್ಯಾಧ್ಯಕ್ಷ ಟಿ ಎ ನಾರಾಯಣಗೌಡರ ಆದೇಶದಂತೆ ರಾಜ್ಯ ಉಪಾಧ್ಯಕ್ಷ ಎಂ ಸಿ ಮುಲ್ಲಾರವರ ನಿರ್ದೇಶನದಂತೆ ವಿಜಯಪುರ ಜಿಲ್ಲಾ ಘಟಕದ ಪದಾಧಿಕಾರಿಗಳು, ಎಲ್ಲ ತಾಲೂಕಾ ಅಧ್ಯಕ್ಷರುಗಳು, ನಗರ ಘಟಕದ ಅಧ್ಯಕ್ಷರುಗಳು ಹಾಗೂ ವಿವಿಧ ಜಿಲ್ಲಾ ಘಟಕಗಳ ಅಧ್ಯಕ್ಷರುಗಳನ್ನು ತುರ್ತಾಗಿ ಇಂದೆ ವಿಸರ್ಜನೆ ಮಾಡಿ ಆದೇಶ ಹೊರಡಿಸಿದೆ ಎಂದು ಕರವೇ ವಿಜಯಪುರ ಜಿಲ್ಲಾಧ್ಯಕ್ಷ ಶ್ರೀಶೈಲ ಮುಳಜಿ ತಿಳಿಸಿದ್ದಾರೆ.ಮಂಗಳವಾರ ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ಎಲ್ಲ ಸಮಿತಿಗಳ ವಿಸರ್ಜನೆಯ ನಂತರ ರಾಜ್ಯ ಸಮಿತಿಯು ಶೀಘ್ರವಾಗಿ ಜಿಲ್ಲಾ ಸಮಿತಿಯನ್ನು ಪುನರಚನೆ ಮಾಡಲಾಗುವದೆಂದು ರಾಜ್ಯಾಧ್ಯಕ್ಷರು ಆದೇಶ ಮಾಡಿದ್ದಾರೆ. ಸಮಿತಿಯ ವಿಸರ್ಜನೆಯ ನಂತರ ಯಾವುದೇ ಹುದ್ದೆಗಳನ್ನು ಉಪಯೋಗಿಸಬಾರದೆಂದು ಕೋರಿದೆ ಮುಂದಿನ ಆದೇಶದವರಗೆ ಎಲ್ಲರೂ ಸಹಕರಿಸಬೇಕೆಂದು ಮುಳಜಿ ಪ್ರಕಟಣೆಯ ಮೂಲಕ ವಿನಂತಿಸಿದ್ದಾರೆ.

Read More

ಇಂಡಿ: ಸ್ವತಂತ್ರ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಅಧಿಕಾರಿಗಳು ಅಗತ್ಯ ಸಿದ್ದತೆ ಮಾಡಿಕೊಳ್ಳಬೇಕು ಎಂದು ಕಂದಾಯ ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ ಮಂಗಳವಾರ ಹೇಳಿದರು.ಸ್ವತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ಅಗಸ್ಟ್ 6 ರಂದು ತಾಲ್ಲೂಕು ಆಡಳಿತ ಸೌಧದಲ್ಲಿ ಹಮ್ಮಿಕೊಂಡಿರುವ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತಾನಾಡಿದರು.ಸ್ವತಂತ್ರ್ಯೋತ್ಸವ ದಿನಾಚರಣೆ ನಿಮಿತ್ಯ ಅಗಸ್ಟ್ 15 ರಂದು ಬೆಳಿಗ್ಗೆ 8 ಘಂಟೆಗೆ ತಾಲ್ಲೂಕು ಆಡಳಿತ ಸೌಧದ ಹಾಗೂ ವಿವಿಧ ತಾಲ್ಲೂಕು ಕಛೇರಿ ಹಾಗೂ ಇತರೆ ಕಡೆ ಧ್ವಜಾರೋಹಣ ನೆರವೆರಿಲಿದ್ದು ತದನಂತರ 9 ಘಂಟೆಗೆ ತಾಲ್ಲೂಕು ಕ್ರೀಡಾಂಗಣದಲ್ಲಿ ಧ್ವಜಾರೋಹಣ ನಡೆಯಲಿದೆ. ಸ್ವತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ರಚಿಸಲ್ಪಟ್ಟ ಸಮಿತಿಗಳು ವಹಿಸಲಾದ ಕರ್ತವ್ಯಗಳನ್ನು ಚಾಚು ತಪ್ಪದೆ ಪಾಲಿಸಬೇಕು. ಯಾವುದೇ ನಿಯಮ ಉಲ್ಲಂಘನೆ ಯಾಗದಂತೆ ಹಾಗೂ ಸರಕಾರದ ಶಿಷ್ಟಾಚಾರ ಪಾಲನೆಯೊಂದಿಗೆ ಕಾರ್ಯಕ್ರಮವು ವ್ಯವಸ್ಥಿತವಾಗಿ ಆಯೋಜನೆ ಮಾಡಬೇಕು ಎಂದು ಸೂಚಿಸಿದರು.ಅದಲ್ಲದೇ ತಾಲ್ಲೂಕು ಕೇಂದ್ರದ ಪ್ರಮುಖ ರಸ್ತೆಗಳು, ವೃತ್ತಗಳ ಸ್ವಚ್ಚತೆ ಹಾಗೂ ಅಲಂಕಾರಕ್ಕೆ, ಕ್ರೀಡಾಂಗಣದಲ್ಲಿ ಕುಡಿಯುವ ನೀರಿನ ಬಗ್ಗೆ ಹಾಗೂ ಹಿರಿಯ ನಾಗರಿಕರಿಗೆ, ವಿಶೇಷ ವ್ಯಕ್ತಿಗಳಿಗೆ, ಮಹಿಳೆಯರಿಗೆ, ವಿಧ್ಯಾರ್ಥಿಗಳಿಗೆ…

Read More

ಇಂಡಿ: ನಗರದಲ್ಲಿ ವಿಶೇಷವಾಗಿ ಮಲೆನಾಡಿನ ಶೈಲಿಯ ಹಂಚಿನ ಮೇಲ್ಚಾವಣಿಯನ್ನು ಹೂಂದಿದ, ಪ್ರತ್ಯೇಕವಾಗಿ ನಾಗದೇವರ ದೇವಾಲಯ ನಿರ್ಮಾಣಗೋಂಡಿದ್ದು, ಇದು ಮೂರನೇ ವರ್ಷದ ಜಾತ್ರಾ ಮಹೋತ್ಸವ‌ ಆ.9 ರಂದು ನಡೆಯುತ್ತದೆ ಎಂದು ಜಾತ್ರಾ ಆಡಳಿತ ಮಂಡಳಿ ಪತ್ರಿಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಸಿಂದಗಿ ರಸ್ತೆಯ ಪದವಿ ಕಾಲೇಜು ಪಕ್ಕದ ಹಳೆಯ ಸಾಲೋಟಗಿ ರಸ್ತೆಯ ವಾರ್ಡ್ ನಂಬರ್ 12ರಲ್ಲಿ, ಪ್ರತಿವರ್ಷದಂತೆ ಈ ವರ್ಷವೂ ನಾಗರಪಂಚಮಿಯ ದಿನದಂದು ಮುಂಜಾನೆ ಬ್ರಾಹ್ಮಿ ಮುಹೂರ್ತದಲ್ಲಿ ಶ್ರೀ ಆದಿಶೇಷನಿಗೆ ಮಹಾ ಅಭಿಷೇಕ, ಹೋಮ್ ಹವನ ಕಾರ್ಯಕ್ರಮ ನಡೆಯುತ್ತದೆ. ಬೆಳಗ್ಗೆ 7 ಘಂಟೆಯಿಂದಲೆ ಸುಮಂಗಲಿಯರಿಂದ ನಾಗ ದೇವರಿಗೆ ಹಾಲೇರಿಯುವ ಕಾರ್ಯಕ್ರಮ ನಡೆಯುತ್ತದೆ. ಆಗಮಿಸಿದ ಭಕ್ತರಿಗೆ ಅನ್ನಪ್ರಸಾದ ವಿತರಣೆ, ಸಾಯಂಕಾಲ ಭಜನಾ ಮಂಡಳಿಯಿಂದ ಗಾನಸುಧೆ ನಡೆಯುವುದು‌.ನಗರದ ಸದ್ಬಕರು ಈ ಪೂಣ್ಯಕಾರ್ಯಕ್ರಮದಲ್ಲಿ ಭಾಗವಹಿಸಿ ಪುನೀತರಾಗಬೇಕಾಗಿ, ಶ್ರೀ ಆದಿಶೇಷ ದೇವಸ್ಥಾನ ಜಾತ್ರಾ ಮಹೋತ್ಸವದ ಕಮೀಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Read More

ಆಲಮೇಲ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಜಲ ಜೀವನ ಮಷೀನ್ ( ಜೆ,ಜೆ,ಎಮ್) ಯೋಜನೆಯ ಅಡಿಯಲ್ಲಿ ವಿಜಯಪುರ ಜಿಲ್ಲೆಯ ಸಿಂದಗಿ ಮತ್ತು ಆಲಮೇಲ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಜಲ ಜೀವನ ಮಷೀನ್ ಕಾಮಗಾರಿಗಳು ನಡೆಯುತ್ತಿದ್ದು ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಈ ಯೋಜನೆಗೆ ಸಂಬಂಧಿಸಿದ ಎಲ್ಲಾ ಮಾರ್ಗ ಸೂಚಿಗಳನ್ನು ಗಾಳಿಗೆ ತೂರಿ ಗುತ್ತಿಗೆದಾರರಿಗೆ ಅನಕೂಲು ಮಾಡಿ ಕೊಡುವ ನಿಟ್ಟಿನಲ್ಲಿ ಸಹಕಾರ ನೀಡಿದ್ದಾರೆ ಎಂದು ಸಮಾಜ ಸೇವಕ ಚಿದಾನಂದ ದೇಸಾಯಿ ಆರೋಪಿಸಿದ್ದಾರೆ.ಈ ಕುರಿತು ದಿನಾಂಕ ೦೧-೦೩-೨೦೨೪ ರಂದು ಜಿಲ್ಲೆಯ ಉನ್ನತ ಅಧಿಕಾರಿಗಳಿಗೆ ದಾಖಲೆ ಸಮೇತ ಮತ್ತು ಬರವಣಿಗೆಯ ಮೂಲಕ ಮನವಿ ಕೊಟ್ಟಿದ್ದೇನೆ ಮನವಿ ಕೊಟ್ಟು ಆರು ತಿಂಗಳ ಗತಿಸಿವೆ ಇಲ್ಲಿಯ ವರೆಗೆ ಭ್ರಷ್ಟ ಅಧಿಕಾರಿಗಳ ಹಾಗೂ ಗುತ್ತಿಗೆದಾರರಿಗೆ ಯಾವುದೇ ಕ್ರಮ ಕೈಗೊಂಡಿಲ್ಲ ಮತ್ತು ತಂಡ ರಚನೆ ಮಾಡಿ ಸ್ಥಾನಿಕ ಚೌಕಸ್ಸಿ ಕೂಡಾ ಮಾಡಿಲ್ಲ ಹೀಗಾಗಿ ಸರಕಾರದ ದುಡ್ಡು ಪೋಲಾಗಿ ಕಾಮಗಾರಿಗಳು ಹಳ್ಳ ಹಿಡಿದಿವೆ ಇದಕ್ಕೆ ಸಂಬದ ಪಟ್ಟ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿ ಹಾಗೂ…

Read More