Author: editor.udayarashmi@gmail.com

ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಹಾಗೂ ಉಪ ಲೋಕಾಯುಕ್ತ ನ್ಯಾ.ಕೆ.ಎನ್ ಫಣೀಂದ್ರ ಜಿಲ್ಲಾ ಪ್ರವಾಸ ವಿಜಯಪುರ: ಕರ್ನಾಟಕ ಲೋಕಾಯುಕ್ತರಾದ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಹಾಗೂ ಉಪ ಲೋಕಾಯುಕ್ತರಾದ ನ್ಯಾ.ಕೆ.ಎನ್ ಫಣೀಂದ್ರ ಅವರು ಆಗಸ್ಟ ಮಾಹೆಯಲ್ಲಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ವಿವಿಧೆಡೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದು, ಅಧಿಕಾರಿಗಳು ಸಮಗ್ರ ಮಾಹಿತಿಯೊಂದಿಗೆ ಸನ್ನದ್ದರಾಗಲು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು ಜಿಲ್ಲೆಯಲ್ಲಿ ಲೋಕಾಯುಕ್ತ ನ್ಯಾಯಮೂರ್ತಿಗಳು ದಿನಾಂಕ ೯ ರಿಂದ ೧೩ರವರೆಗೆ ಪ್ರವಾಸ ಕೈಗೊಂಡು ವಿವಿಧ ಅಧಿಕಾರಿಗಳೊಂದಿಗೆ ಸಭೆ, ವಿವಿಧ ಕಚೇರಿ, ಆಸ್ಪತ್ರೆ, ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಲಿದ್ದಾರೆ. ವಕೀಲರೊಂದಿಗೆ ಸಂವಾದ, ಸಾರ್ವಜನಿಕರ ಕುಂದು ಕೊರೆತ ಅಹವಾಲುಗಳ ಮಾಹಿತಿ, ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಮತ್ತು ಬಾಕಿ ಇರುವ ಕಡತಗಳ ಕುರಿತು ಸಭೆ ನಡೆಸಲಿದ್ದು, ಲೋಕಾಯುಕ್ತರ ಸಭೆಗೆ ಅಧಿಕಾರಿಗಳು ತಮ್ಮ ಕಚೇರಿ ಕಡತ ವಿಲೇವಾರಿ ಹಾಗೂ ಬಾಕಿ ಇರುವ ಪ್ರಕರಣಗಳು ಸಮಗ್ರ…

Read More

ಕೆಂಭಾವಿ: ಪಟ್ಟಣ ಸಮೀಪದ ನಗನೂರ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಆಯ್ಕೆಯಾಗುವ ಮೂಲಕ ಪಕ್ಷವು ಮತ್ತೋಮ್ಮೆ ಅಧಿಕಾರದ ಚುಕ್ಕಾಣಿ ಹಿಡಿದ 12 ಕ್ಕೂ 12 ಸ್ಥಾನ ಗೆದ್ದು ಬೀಗಿದೆ. ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಸೋಲು ಅನುಭವಿಸಿದ್ದಾರೆ.ಇತ್ತೀಚೆಗೆ ನಡೆದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ 12 ಅಭ್ಯರ್ಥಿಗಳು ಜಯ ಸಾಧಿಸಿದ್ದು ಅವರ ಗೆಲುವಿಗೆ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಬೆಂಬಲಿಸಿದ ಮತದಾರರಿಗೆ ಬಿಜೆಪಿ ಮುಖಂಡ ರಾಜಶೇಖರ ಗೂಗಲ್ ಅಭಿನಂದನೆ ಸಲ್ಲಿಸಿದರು.ಜಯಶಾಲಿಗಳಾದ ಅಭ್ಯರ್ಥಿಗಳು: ಶರಣಪ್ಪ ದೇಸಾಯಿ, ನಾಗಪ್ಪಗೌಡ ಹೊಸಗೌಡ್ರ, ಬಸವರಾಜ ನೂಲಿ, ಭೀಮರೆಡ್ಡಿ ದೇಶಪಾಂಡೆ, ಬಸಣ್ಣ ವಣಿಕ್ಯಾಳ, ಶರಣಪ್ಪ ಹುಲಿಕಂಠಿ, ಹಣಮಂತ್ರಾಯ ರಂಗಾ, ಹೊನ್ನಪ್ಪ ಚೆನ್ನೂರ, ಸಾಯಿಬಣ್ಣ ಚಿಂಚೋಳಿ, ಬಸವರಾಜ ವಣಿಕ್ಯಾಳ, ಶರಣಮ್ಮ ಗೂಗಲ್, ಶರಣಮ್ಮ ದೇಸಾಯಿ ಆಯ್ಕೆಯಾಗಿದ್ದಾರೆ

Read More

ವಿಜಯಪುರ: ಕ್ಯಾನ್ಸರ್ ಶಸ್ತ್ರಚಿಕಿತ್ಸೆಯ ಕ್ಷೇತ್ರದಲ್ಲಿ ನಿರಂತರ ಅವಿಷ್ಕಾರಗಳಾಗುತ್ತಿದ್ದು, ತಜ್ಞ ವೈದ್ಯರು ಅವುಗಳ ಬಗ್ಗೆ ಜ್ಞಾನ ಹೊಂದುವುದು ಅವಶ್ಯವಾಗಿದೆ ಎಂದು ಬೆಂಗಳೂರಿನ ಆಸ್ಟರ್ ಆಸ್ಪತ್ರೆಯ ಖ್ಯಾತ ಹಿರಿಯ ಕ್ಯಾನ್ಸರ್ ಶಸ್ತ್ರಚಿಕಿತ್ಸಾ ತಜ್ಞ ವೈದ್ಯ ಡಾ. ಜಗನ್ನಾಥ ದೀಕ್ಷಿತ ಹೇಳಿದ್ದಾರೆ.ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರಚಿಕಿತ್ಸೆ ವಿಭಾಗದ ವತಿಯಿಂದ ಕ್ಯಾನ್ಸರ್ ಶಸ್ತ್ರಚಿಕಿತ್ಸೆಯ ತತ್ವಗಳು ಕುರಿತು, ಆಸ್ಪತ್ರೆಯ ವೈದ್ಯಕೀಯ ಶಿಕ್ಷಣ ಸಭಾಂಗಣದಲ್ಲಿ ಬುಧವಾರ ನಡೆದ ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಇಂದು ತೆರೆದ ಶಸ್ತ್ರಚಿಕಿತ್ಸೆಗಳಿಗಿಂತ ಎಂಡೊಸ್ಕೋಪಿಕ್ ಮತ್ತು ರೋಬೊಟಿಕ್ ಶಸ್ತ್ರಚಿಕಿತ್ಸೆಗಳು ಹೆಚ್ಚಾಗಿ ನಡೆಯುತ್ತಿವೆ. ಇದರಿಂದ ರೋಗಿಗಳು ಶೀಘ್ರ ಗುಣಮುಖರಾಗಲು ಸಹಕಾರಿಯಾಗಿದೆ. ಘನವಸ್ತು ಅಂಗಾಂಗದ ಕ್ಯಾನ್ಸರ್ಗೆ ಶಸ್ತ್ರಚಿಕಿತ್ಸೆಯು ಮೂಲ ಚಿಕಿತ್ಸಾ ಪದ್ಧತಿಯಾಗಿದ್ದು, ರೋಬೊಟಿಕ್ ಶಸ್ತ್ರಚಿಕಿತ್ಸೆಯಿಂದ ರೋಗವನ್ನು ಬುಡಮೇಲು ತೆರವು ಮಾಡಬಹುದಾಗಿದೆ. ಜನಸಾಮಾನ್ಯರಿಗೆ ಕ್ಯಾನ್ಸರ್ ರೋಗದ ಬಗ್ಗೆ ಜಾಗೃತಿ ಮೂಡಿಸಿ, ಅದನ್ನು ತಡೆಯುವ ವಿಧಾನಗಳು ಮತ್ತು ಪ್ರಾಥಮಿಕ ಹಂತದಲ್ಲಿಯೇ ಅದನ್ನು ಪತ್ತೆ ಮಾಡಿ ಅವಶ್ಯಕ ಚಿಕಿತ್ಸೆ ನೀಡಿದರೆ ಉತ್ತಮ ಫಲಿತಾಂಶವನ್ನು ಪಡೆಯಬಹುದು…

Read More

ವಿಜಯಪುರ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಇಲಾಖೆಯ ೧೩ ಫಲಾನುಭವಿ ಆಧಾರಿತ ಯೋಜನೆಗಳನ್ನು ೨೦೨೪-೨೫ನೇ ಸಾಲಿನಲ್ಲಿ ಸೇವಾಸಿಂಧು, ಗ್ರಾಮ್‌ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಸಿಟಿಜೆನ್ಸ್ ಫೋರ್ಟಲ್ ಆನ್‌ಲೈನ್ ತಂತ್ರಾಂಶದಡಿ ಅಳವಡಿಸಲಾಗಿದ್ದು, ಈ ಯೋಜನೆಯಡಿ ಸೌಲಭ್ಯ ಪಡೆಯಲು (https:sevasindhu. karnataka.gov.in/ sevasindhu/Department) ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಇಲಾಖೆಯ ೧೩ ಫಲಾನುಭವಿ ಆಧಾರಿತ ಆನ್‌ಲೈನ್ ವೇದಿಕೆಯಲ್ಲಿ ಅಳವಡಿಸಲಾಗಿರುವ ಪ್ರತಿಭಾವಂತ ಅಂಗವಿಕಲ ವಿದ್ಯಾರ್ಥಿಗಳಿಗೆ ಪ್ರೊತ್ಸಾಹಧನ ಯೋಜನೆ, ಶಿಶುಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ಆಧಾರ ಯೋಜನೆ, ಮರಣ ಪರಿಹಾರ ನಿಧಿ, ಸಾಧನೆ ಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‌ಟಾಪ್, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆ, ಸಾಧನ ಸಲಕರಣೆಗಳ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ, ದೃಷ್ಟಿದೋಷ ಹೊಂದಿರುವ ವಿಕಲಚೇತನರಿಗೆ ಬ್ರೈಲ್ ಕಿಟ್ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ದಿನಾಂಕ: ೩೧-೦೮-೨೦೨೪ ಕೊನೆಯ ದಿನಾಂಕವಾಗಿದೆ.ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ವಿವಿಧ ತಾಲೂಕಾ…

Read More

ವಿಜಯಪುರ: ಪ್ರತಿ ತಿಂಗಳ ಒಂದನೇ ಸೋಮವಾರದಂದು ವಿಜಯಪುರದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವತಿಯಿಂದ ಸಾರ್ವಜನಿಕರು/ಪ್ರಯಾಣಿಕರಿಂದ ಕುಂದುಕೊರತೆಗಳನ್ನು ಆಲಿಸಿ, ಪರಿಹರಿಸುವ ಸದುದ್ದೇಶದಿಂದ ಪೋನ್ ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಅದರಂತೆ ಈ ತಿಂಗಳ ಮೊದಲನೇ ಸೋಮವಾರ ಆಗಸ್ಟ್ ೫ರ ಸೋಮವಾರದಂದು ಮಧ್ಯಾಹ್ನ ೩-೩೦ರಿಂದ ೫-೩೦ ಗಂಟೆಯವರೆಗೆ ಫೋನ್ ಇನ್ ಕಾರ್ಯಕ್ರಮ ಹಮ್ಮಿಕೊಂಡಿದ್ದು, ವಿಭಾಗೀಯ ನಿಯಂತ್ರಣಾಧಿಕಾರಿ ವಿಜಯಪುರ ದೂ: ೭೭೬೦೯೯೨೨೫೦, ವಿಭಾಗೀಯ ಸಾರಿಗೆ ಅಧಿಕಾರಿ ವಿಜಯಪುರ ದೂ: ೭೭೬೦೯೯೨೨೫೨ ಹಾಗೂ ವಿಭಾಗದ ಸಹಾಯವಾಣಿ ಸಂಖ್ಯೆ : ೬೩೬೬೪೨೩೮೮೭ ಸಂಖ್ಯೆಗೆ ಸಾರ್ವಜನಿಕರು-ಪ್ರಯಾಣಿಕರು ಕರೆ ಮಾಡಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಾರಿಗೆ ಸೌಕರ್ಯ ಸೇರಿದಂತೆ ಇತರೆ ಕುಂದು ಕೊರತೆಗಳನ್ನು ಸಲ್ಲಿಸಬಹುದಾಗಿದೆ ಎಂದು ವಿಜಯಪುರ ಕಕರಸಾ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ಜಿಲ್ಲೆಯ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಯ ಅವಧಿ ಮುಕ್ತಾಯವಾಗಿದ್ದು, ಸದರಿ ಹುದ್ದೆಯನ್ನು ಭರ್ತಿ ಮಾಡಲು ಉದ್ದೇಶಿಸಲಾಗಿರುವುದರಿಂದ, ಕರ್ನಾಟಕ ಕಾನೂನು ಅಧಿಕಾರಿಗಳ ನಿಯಮಗಳು ೧೯೭೭ ರ ನಿಯಮ ೫ ಮತ್ತು ೨೬(೨) ಹಾಗೂ ೧೨ (ಎ) (ಬಿ) ಮತ್ತು (ಸಿ) ರನ್ವಯ ೧೦ ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿದ ಅರ್ಹರು ದಿನಾಂಕ : ೧೪-೦೮-೨೦೨೪ರ ಸಂಜೆ ೫.೩೦ ಒಳಗೆ ಜಿಲ್ಲಾಧಿಕಾರಿ ಕಚೇರಿಗೆ ಅವಶ್ಯಕ ಮಾಹಿತಿಯೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.

Read More

ವಿಜಯಪುರ: ಕರ್ನಾಟಕ ಉಪ ಲೋಕಾಯುಕ್ತರಾದ ನ್ಯಾ. ಕೆ.ಎನ್.ಫಣೀಂದ್ರ ಅವರು ಆಗಸ್ಟ್ ೨೨ ರಿಂದ ೨೪ರವರೆಗೆ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಆಗಸ್ಟ್ ೨೨ರ ಬೆಳಿಗ್ಗೆ ೬:೪೫ಕ್ಕೆ ವಿಜಯಪುರಕ್ಕೆ ಆಗಮಿಸುವ ಅವರು, ಅಂದು ಬೆಳಿಗ್ಗೆ ೧೦ ರಿಂದ ಸಂಜೆ ೫ರವರೆಗೆ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಆಲಿಸುವರು.ಸಂಜೆ ೫:೩೦ರಿಂದ ೬:೩೦ರವರೆಗೆ ಕಾನೂನು ಸೇವಾ ಪ್ರಾಧಿಕಾರದೊಂದಿಗೆ ರಂಗಮಂದಿರದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಏರ್ಪಡಿಸಿರುವ ಕರ್ನಾಟಕ ಲೋಕಾಯುಕ್ತ ಕಾಯ್ದೆಗೆ ಸಂಬಂಧಿಸಿದ ಕಾನೂನು ಸಾಕ್ಷರತಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ಅಂದು ವಿಜಯಪುರದಲ್ಲಿ ವಾಸ್ತವ್ಯ ಮಾಡುವರು.ಆಗಸ್ಟ್ ೨೩ರ ಬೆಳಿಗ್ಗೆ ೯:೪೫ ರಿಂದ ೧೦:೪೫ರವರೆಗೆ ಸಾರ್ವಜನಿಕ ಆಡಳಿತ ಮತ್ತು ಆಡಳಿತದ ಸುಧಾರಣೆಯಲ್ಲಿ ವಕೀಲರ ಪಾತ್ರದ ಕುರಿತು ಜಿಲ್ಲಾ ನ್ಯಾಯಾಲಯ ಸಂಕೀರ್ಣದ ವಿಜಯಪುರ ವಕೀಲರ ಸಂಘದ ಸಭಾಂಗಣದಲ್ಲಿ ನಡೆಯುವ ಸಂವಾದದಲ್ಲಿ ಪಾಲ್ಗೊಳ್ಳುವರು.ಅಂದು ಬೆಳಿಗ್ಗೆ ೧೧ ರಿಂದ ೧೧:೩೦ರವರೆಗೆ ಕುಂದು ಕೊರತೆ ಅಹವಾಲುಗಳ ಕುರಿತ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಬೆಳಿಗ್ಗೆ ೧೧:೩೦ ರಿಂದ ೫ರವರೆಗೆ ಜಿಲ್ಲೆಗೆ…

Read More

ವಿಜಯಪುರ: ಭಾರತ ಸರ್ಕಾರದ ಪರಮಾಣು ಶಕ್ತಿ ಇಲಾಖೆಯ ಅಧೀನದಲ್ಲಿನ ಹೈದರಾಬಾದ್ ಮೂಲದ ಟಾಟಾ ಮೂಲಭೂತ ಸಂಶೋಧನಾ ಸಂಸ್ಥೆ (ಟಾಟಾ ಇನ್ ಸ್ಟಿಟ್ಯೂಟ್ ಆಫ್ ಫಂಡಮೆಂಟಲ್ ರೀಸರ್ಚ್) ಹವಾಮಾನ ಹಾಗೂ ವಾತಾವರಣ ಅಧ್ಯಯನಕ್ಕಾಗಿ ಉಡಾವಣೆ ಮಾಡಿದ್ದ ಹವಾಮಾನ ಅಧ್ಯಯನಾಶೀಲ ವೈಜ್ಞಾನಿಕ ಉಪಕರಣ ( ಪೇಲೋಡ್ ) ವೊಂದು ಪ್ಯಾರಾಚೂಟ್ ನ ನೆರವಿನಿಂದ ಚಡಚಣ ತಾಲೂಕಿನ ಗ್ರಾಮವೊಂದರ ಜಮೀನಿನಲ್ಲಿ ಬಂದಿಳಿದಿದೆ.ಜಿಲ್ಲಾಡಳಿತವು ಸಂಬಂಧಿತ ಸಂಸ್ಥೆಯನ್ನು ಸಂಪರ್ಕಿಸಿ ಈಗಾಗಲೇ ಮಾಹಿತಿ ಒದಗಿಸಿದೆ. ಸಂಸ್ಥೆಯ ಅಧಿಕಾರಿಗಳ ತಂಡ ಸದ್ಯದಲ್ಲಿಯೇ ವಿಜಯಪುರಕ್ಕೆ ಆಗಮಿಸಲಿದೆ. ಅಲ್ಲದೆ, ಜಮೀನಿನಲ್ಲಿ ಬಿದ್ದಿರುವ ಪ್ಯಾರಾಚ್ಯೂಟ್ ಹಾಗೂ ಪೆಲೋಡ್, ಅದಕ್ಕೆ ಸಂಬಂಧಿಸಿದ ಸಾಧನಾ ಸಲಕರಣೆಗಳನ್ನು ತೆಗೆದುಕೊಂಡು ಹೋಗಲಿದೆ. ಆದಕಾರಣ, ಈ ಬಗ್ಗೆ ಯಾರೂ ಯಾವುದೇ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ವೀರಲೋಕ ಪ್ರಕಾಶನ ಬೆಂಗಳೂರು, ಉತ್ತರ ಪರ್ವ ಎಂಬ ವಿನೂತನ ಕಥಾ ಸುಗ್ಗಿ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ನೂರಕ್ಕೂ ಹೆಚ್ಚು ಕೃತಿಗಳು ಆಯ್ಕೆಗಾಗಿ ಬಂದಿದ್ದವು. ಸಾಹಿತಿಗಳಾದ ರಾ.ಗಂ ಅವರ ಸಂಪಾದಕತ್ವದಲ್ಲಿ ಮೂರು ಹಂತದ ಆಯ್ಕೆಯಲ್ಲಿ ಹತ್ತು ವಿಭಿನ್ನ ಕೃತಿಗಳನ್ನು ಆಯ್ಕೆ ಮಾಡಲಾಯಿತು.ಶೇಕ್ಷಾವಲಿ ಮಣಿಗಾರ – ಆ ವದನಮರ್ತುಜಾಬೇಗಂ ಕೊಡಗಲಿ – ಪರಸ್ಪರ ಮತ್ತಿತರ ಕೃತಿಗಳುಡಾ.ಸದಾಶಿವ ದೊಡಮನಿ – ಇರುಳ ಬಾಗಿಲಿಗೆ ಕಣ್ಣ ದೀಪರವೀಂದ್ರ ಮುದ್ದಿ – ವರದಾ ತೀರದ ಕಥೆಗಳುಸಿ.ವಿ.ವೀರುಪಾಕ್ಷ – ಖದೀಜಾಶ್ರೀಧರ ಗಸ್ತಿ – ಚಂದ್ರಾ ಲೇಔಟ್ಪ್ರಕಾಶ ಗಿರಿಮಲ್ಲನವರ – ಜನನಾಯಕಬಿಜೆ ಪಾರ್ವತಿ ವಿ. ಸೋನಾರೆ – ಓಡಿ ಹೋದಾಕಿಕವಿತಾ ಹೆಗಡೆ ಅಭಯಂ – ಇತ್ತ ಹಾಯಲಿ ಚಿತ್ತನವ್ಯ ಆರ್ ಕತ್ತಿ – ಮಾಯಾ ಗುಹೆಆಯ್ಕೆಯಾದ ಈ ಎಲ್ಲ ಲೇಖಕರ ಕೃತಿಗಳು ಭಾನುವಾರ ಬೆಂಗಳೂರಿನ ಚಾಮರಾಜಪೇಟೆಯ ಸಾಹಿತ್ಯ ಪರಿಷತ್ತು ಸಭಾಭವನದಲ್ಲಿ ಲೋಕಾರ್ಪಣೆ ಆಗಲಿವೆ. ಕೃತಿಕಾರರಿಗೆ ರಾಯಧನ ಮತ್ತು ಪುಸ್ತಕಗಳನ್ನು ನೀಡಿ ಗೌರವಿಸಲಾಗುವುದು. ಅತಿಥಿಗಳಾಗಿ ಖ್ಯಾತ ಚಲನ ಚಿತ್ರ ನಿರ್ದೇಶಕ ಬಿ.ಸುರೇಶ, ರಾ.ಗಂ,…

Read More

ಹೆಸರು ನಾಗಣ್ಣ. ಚಿತ್ರದುರ್ಗದ ವಾಸಿ. ವಯಸ್ಸು ಅರವತ್ತು ದಾಟಿದೆಯಾದರೂ, ಎತ್ತರವಿಲ್ಲದ ದೈಹಿಕತೆ ಮತ್ತು ಲವಲವಿಕೆ ಅದನ್ನು ಮರೆಮಾಚಿದೆ. ವೃತ್ತಿಯಿಂದ ಬೀದಿ ವ್ಯಾಪಾರಿ. ಜೊತೆಗೆ ಪೋಟೋ ಪ್ರೇಂ ಕಟ್ಟೊದು ಬರುತ್ತೆ. ಸ್ವಭಾತಃ ಸ್ವಾಭಿಮಾನಿ. ಹಾಸ್ಯಪ್ರಜ್ಞೆಯ ಪಂಚಿಂಗ್ ಮಾತುಗಳಿಂದ ನಗಿಸುವುದು ಗೊತ್ತು. ದಿನದ ದುಡುಮೆಯೇ ಜೀವನಕ್ಕೆ ಆಧಾರ. ನಾಗಣ್ಣಗೆ ಗಂಡು ಮಕ್ಕಳಿಲ್ಲ. ಒಬ್ಬ ಮಗಳು ಇದ್ದಾಳೆ. ಆಕೆಗೆ ಒಂದು ಗಂಡು ಒಂದು ಹೆಣ್ಣು ಮಕ್ಕಳಿದ್ದಾರೆ. ಬೆಂಗಳೂರಿನಲ್ಲಿ ಗಂಡನ ಜೊತೆಗೆ ಸಂಸಾರ ಮಾಡುತ್ತಿದ್ದಳೆಂದು ಕೇಳಿದ್ದೇವು. ಹೀಗಿರುವಾಗ ದಿನ ಕಾಣುವ ನಾಗಣ್ಣ, ವಾರದ ಕಾಲ ಕಾಣಿಸಲಿಲ್ಲ. ಆತ ಮೊಬೈಲ್ ಬಳಕೆದಾರನೂ ಅಲ್ಲ.‌ ನಂತರ ಕಂಡು “ಎಲ್ಲಿ ಹೋಗಿದ್ರಿ” ಎಂದಾಗ, “ಬೆಂಗಳೂರಿಗೆ ಹೋಗಿದ್ದೆ ನನ್ನ ಮಗಳ ಗಂಡ ನನ್ನ ಅಳಿಯ ತೀರಿಕೊಂಡಿದ್ದ. ಆ ಕಾರ್ಯವೆಲ್ಲ ಮುಗಿಸಿ ಬಂದೆ” ಎಂದು ಮುಗ್ಧನಂತೆ ನಾಗಣ್ಣ ಹೇಳುವಾಗ ಸ್ವಲ್ಪವೂ ವಿಚಲತೆ ಇರಲಿಲ್ಲ. ಅಯ್ಯೊ ದೇವ್ರೆ ಗಾಯದ ಮೇಲೆ ಬರೆಯೇ? ಎನಿಸಿ, “ಇನ್ಮುಂದೆ ಮಗಳು ಮೊಮ್ಮಕ್ಕಳ ಗತಿಯೇನು” ಎಂದರೆ ನಮ್ಮ ಮಗಳು ಎಂಟಿಆರ್ ಫ್ಯಾಕ್ಟರಿ…

Read More