Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ ಜಿಲ್ಲಾ ಮಟ್ಟದ ವಿವಿಧ ಇಲಾಖಾ ಅಧಿಕಾರಿಗಳ ಸಭೆಯಲ್ಲಿ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಮಾಹಿತಿ ವಿಜಯಪುರ: ಮಕ್ಕಳ ಹಿತರಕ್ಷಣೆಗಾಗಿ ಅಧಿಕಾರಿಗಳು ಕಾರ್ಯನಿರ್ವಹಿಸಿದಾಗ ಸರ್ಕಾರದ ಆಶಯಗಳು ಸಾಕಾರಗೊಳ್ಳುತ್ತವೆ ಎಂದು ಧಾರವಾಡದ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಅಪ್ಪಾಸಿ ಬಬಲೇಶ್ವರ ಹೇಳಿದರು.ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ವಿವಿಧ ಇಲಾಖಾ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಮಕ್ಕಳ ಹಿತ ದೃಷ್ಟಿಯಿಂದ ಸಮರ್ಪಕವಾಗಿ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.ಯುನಿಸೆಫ್ ನೆರವಿನಿಂದ ಬಾಲವಿಕಾಸ ಅಕಾಡೆಮಿಯು ಹದಿಹರೆಯದ ಬಾಲಕರ ಸಶಕ್ತೀಕರಣ ಕಾರ್ಯಕ್ರಮ ಹಮ್ಮಿಕೊಂಡಿದ್ದು, ರಾಜ್ಯದಲ್ಲಿ ವಿನೂತನವಾದ ಹೊಸ ಪರಿಕಲ್ಪನೆ ಇದಾಗಿದೆ. ಮಕ್ಕಳ ಸ್ನೇಹಿಯಾಗಿ ಅವರ ವಿಕಾಸ ಹಾಗೂ ಬೆಳವಣಿಗೆಗೆ ಪೂರಕವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ವಿಜಯಪುರ ಜಿಲ್ಲೆಯೂ ಸೇರಿದಂತೆ ಆರು ಜಿಲ್ಲೆಗಳಲ್ಲಿ ಈ ಕಾರ್ಯಕ್ರಮ ಪ್ರಾಯೋಗಿಕವಾಗಿ ಅನುಷ್ಠಾನಗೊಳ್ಳಲಿದ್ದು, ಸಂಬಂಧಿಸಿದ ಇಲಾಖೆಗಳ ಸಹಯೋಗ ಅತ್ಯಗತ್ಯವಾಗಿದೆ. ಜಿಲ್ಲೆಯ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಆದ್ಯತೆ ನೀಡಿ ಕಾರ್ಯನಿರ್ವಹಿಸಿ ಜಿಲ್ಲೆಯನ್ನು ಮುಂಚೂಣಿಗೆ ತರಲು ಶ್ರಮಿಸೋಣ ಎಂದು ಅಧಿಕಾರಿಗಳಿಗೆ…
ವಿಜಯಪುರ: ಮಡಿವಾಳ ಮಾಚಿದೇವ ಹಾಗೂ ಬಸವಾದಿ ಶರಣರು ನುಡಿದಂತೆ ನಡೆದವರು, ನಡೆದದನ್ನೇ ನುಡಿದವರು. ಅವರ ನಂಬಿಕೆ ಮತ್ತು ಆಚರಣೆಯಲ್ಲಿ ಯಾವುದೇ ಅಂತರವಿರಲಿಲ್ಲ. ಬಸವಾದಿ ಶರಣರು ಸತ್ಯ ಶುದ್ಧ ಕಾಯಕಕ್ಕೆ ಎಷ್ಟು ಮಹತ್ವವನ್ನು ನೀಡಿದರೋ ಅಷ್ಟೇ ಮಹತ್ವವನ್ನು ದಾಸೋಹಕ್ಕೆ ನೀಡಿದರು ಎಂದು ಹಿರಿಯ ಜಾನಪದ ಸಾಹಿತಿ ಡಾ.ಎಂ.ಎಂ.ಪಡಶೆಟ್ಟಿ ಹೇಳಿದರು.ಸಿಂದಗಿ ತಾಲೂಕಿನ ಚಿಕ್ಕಸಿಂದಗಿ ಗ್ರಾಮದ ಹೊರವಲಯದ ಶರಣೆ ಶ್ರೀಮತಿ ಗುರುಬಾಯಿ ಡಾ. ಶ್ರೀ ರಾಮಲಿಂಗಪ್ಪ ಮಡಿವಾಳರ ತೋಟದ ಮನೆಯಲ್ಲಿ ತಾಲೂಕು ವಚನೋತ್ಸವ ಸಮಿತಿ 248 ನೇ ವಚನೋತ್ಸವದಲ್ಲಿ ಅವರು ಮಾತನಾಡಿ, ೧೨ ನೆಯ ಶತಮಾನದಲ್ಲಿ ದುರ್ಬಲರ ಶೋಷಣೆ, ಜಾತೀಯತೆ, ಮೇಲು -ಕೀಳು ತಾರತಮ್ಯ , ಅಸ್ಪ್ರುಶ್ಯತೆ , ಮೂಢ ನಂಬಿಕೆಗಳ ಸೃಷ್ಟಿ , ಶಿಕ್ಷಣದಲ್ಲಿ ಅವಕಾಶ ವಂಚನೆ ಹೀಗೆ ಅನೇಕ ಸಾಮಾಜಿಕ ಅಸಮಾನತೆಯಿಂದ ಜನರು ತುಳಿತಕ್ಕೆ ಒಳಗಾಗಿದ್ದರು. ಇವುಗಳೆಲ್ಲವುಗಳಿಂದ ಬಡವರು, ದೀನ ದಲಿತರು ನಿರಾಶೆ-ಹತಾಶೆಗೊಂಡು ಅಸಹನೀಯ ಬದುಕಿಗೆ ತುತ್ತಾಗಿದ್ದರು. ಸರ್ವರಿಗೂ ಸಮಪಾಲು -ಸಮಬಾಳು ಒದಗಿಸಲು ಬಸವ- ಮಡಿವಾಳ ಮಾಚಿದೇವ ಶರಣರು ಸಾಮಾಜಿಕ ಕ್ರಾಂತಿಯನ್ನೇ ಕೈಗೊಂಡರು.…
ವಿಜಯಪುರ: ಸಾವಿರಾರು ವರ್ಷಗಳ ಇತಿಹಾಸ ಇರುವ ಕನ್ನಡ ಸಾಹಿತ್ಯ ಪ್ರತಿ ಮನೆ ಮನಗಳಿಗೆ ಮುಟ್ಟಿಸುವ ಕೆಲಸ ಶ್ರೀ ಸಾಮಾನ್ಯರದು. ಕಬ್ಬಿಣದ ಕಡಲೆಯಂತಿರುವ ಕನ್ನಡ ಸಾಹಿತ್ಯವನ್ನು ಸರಳಿಕರಣಗೊಳಿಸಿ ಸಾಮನ್ಯರು ಅಪ್ಪಿಕೊಳ್ಳುವಂತ ಸಾಹಿತ್ಯವನ್ನು ರಚಿಸಿದವರು ವಚನಕಾರರು. ಇಂತಹ ವಚನಗಳನ್ನು ಉಳಿಸುವ ಕೆಲಸ ಶತಮಾನಗಳಿಂದಲೂ ಕನ್ನಡ ಸಾಹಿತ್ಯ ಪರಿಷತ್ತು ಮಾಡುತ್ತ ಬಂದಿದೆ. ಎಂದು ಮಸಬಿನಾಳ ದಾಸೋಹ ವಿರಕ್ತಮಠದ ಸಿದ್ಧರಾಮ ಸ್ವಾಮೀಜಿ ಅಭಿಪ್ರಾಯ ಪಟ್ಟರು.ರವಿವಾರ ಕನ್ನಡ ಸಾಹಿತ್ಯ ಪರಿಷತ್ತು ಸಭಾಬವನದಲ್ಲಿ ಜಿಲ್ಲಾ ನಗರ ತಾಲೂಕ ಘಟಕಗಳ ಆಶ್ರಯದಲ್ಲಿ ದಿ ಎಸ್ ಜಿ ಬಗಲಿ, ಲಿಂ ಮುದಕಯ್ಯ ಮತ್ತು ಶಂಕರೆಮ್ಮೆ ಇವರ ಸ್ಮರಣಾರ್ಥ ಹಮ್ಮಿಕೊಂಡ ಎರಡು ದತ್ತಿ ನಿಧಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತ ನಾಡುನುಡು ನೆಲ ಜಲ ಭಾಷೆ ಸಂಸ್ಕೃತಿ ಉಳಿಸಿ ಬೆಳಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಪರಿಷತ್ತಿನ ಕಾರ್ಯ ಅನನ್ಯ ಎಂದರು.ಅಧ್ಯಕ್ಷತೆ ವಹಿಸಿದ ಚನ್ನಬಸವ ಸಾಹಿತ್ಯ ವೇದಿಕೆ ಅಧ್ಯಕ್ಷ ವಿವೇಕಾನಂದ ಕಲ್ಯಾಣಶೆಟ್ಟಿ ಮಾತನಾಡಿ ಕನ್ನಡ ಕಟ್ಟುವ ಕೆಲಸವನ್ನು ಎಲ್ಲರೂ ಮಾಡಬೇಕಿದೆ ಪ್ರಕಟವಾಗದ ಅನೇಕ ಸಾಹಿಗಳ ಸಾಹಿತ್ಯ ಪ್ರಕಟಿಸುವ…
ವಿಜಯಪುರ: ಚಂದ್ರಯಾನ-೩ ರ ಚಂದ್ರನ ದಕ್ಷಿಣ ಧ್ರುವದ ಅನ್ವೇಷಣೆಯು ಭಾರತದ ಬಾಹ್ಯಾಕಾಶ ಪ್ರಯತ್ನಗಳಲ್ಲಿ ಹೊಸ ಯುಗವನ್ನು ಸೂಚಿಸುತ್ತದೆ. ಚಂದ್ರನ ದಕ್ಷಿಣ ಧ್ರುವದ ಬಳಿ ಭಾರತದ ಯಶಸ್ವಿ ಸಾಪ್ಟ್ ಲ್ಯಾಂಡಿಂಗ್ ರಾಷ್ಟ್ರೀಯ ಹೆಮ್ಮೆಯ ಕ್ಷಣವಾಗಿದೆ. ಇದರಿಂದ ಬಾಹ್ಯಾಕಾಶ ನಾಯಕತ್ವಕ್ಕಾಗಿ ಭಾರತದ ದಿಟ್ಟ ಹೆಜ್ಜೆಯಾಗಿದೆ ಎಂದು ಬಂಜಾರಾ ಪ್ರೌಢ ಶಾಲೆಯ ವಿಜ್ಞಾನ ಶಿಕ್ಷಕರಾದ ಆರ್.ಎನ್.ಬಕಾಟೆಯವರು ಹೇಳಿದರು.ಮಂಗಳವಾರದಂದು ಬಂಜಾರಾ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡಿದ್ದ “ಚಂದ್ರಯಾನ ಮಿಷನ್-೩”ರ ವಿದ್ಯಾರ್ಥಿಗಳ ಭಾಷಣ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಧೇಶಿಸಿ ಮಾತನಾಡಿದ ಅವರು. ಚಂದ್ರನ ದಕ್ಷಿಣ ಧ್ರುವದ ಮೇಲ್ಮೆಯಲ್ಲಿ ಲ್ಯಾಂಡಿಂಗ್ ಮಾಡಿದ ನೌಕೆಯನ್ನು ಇಳಿಸುವ ಈ ಗಮನಾರ್ಹ ಸಾಧನೆಯನ್ನು ಸಾಧಿಸಿದ ಮೊದಲ ದೇಶವಾಗಿದೆ. ಚಂದ್ರನ ದಕ್ಷಿಣ ಧ್ರುವಕ್ಕೆ ಅಂತಹ ಸಾಮೀಪ್ಯ. ಈ ಸಾಧನೆಯು ಭಾರತಕ್ಕೆ ಮಾನವೀಯತೆ ಮತ್ತು ಬಾಹ್ಯಾಕಾಶದ ನಡುವಿನ ಸಂಬಂಧವನ್ನು ಪರಿವರ್ತಿಸುವಲ್ಲಿ ಮನ್ನಡೆಸಲು ಅವಕಾಶವನ್ನು ಒದಗಿಸುತ್ತದೆ ಎಂದರು.ಈ ವೇಳೆಯಲ್ಲಿ ಶಾಲೆಯ ಮುಖ್ಯ ಗುರುಗಳಾದ ಇ.ಡಿ.ಲಮಾಣಿ ಮಾತನಾಡುತ್ತ. ಬಾಹ್ಯಾಕಾಶ ಪರಿಶೋಧನೆಯ ಪ್ರಯೋಜನಗಳ ಬಗ್ಗೆ ಸಾರ್ವಜನಿಕ ಜಾಗೃತಿಯನ್ನು ಹೆಚ್ಚಿಸುವುದು ಮತ್ತು ವಿದ್ಯಾರ್ಥಿಗಳಲ್ಲಿ ಬಾಹ್ಯಾಕಾಶ ವಿಜ್ಞಾನದಲ್ಲಿ…
ಯಡ್ರಾಮಿ: ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಘಟಕದಿಂದ ಬುಧವಾರದಂದು ಪತ್ರಿಕಾ ದಿನಾಚರಣೆ ಹಾಗೂ ಅಭಿನಂದನೀಯ ವಿಶೇಷ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ತಾಲೂಕ ಅಧ್ಯಕ್ಷ ಸಂತೋಷ ನವಲಗುಂದ ತಿಳಿಸಿದ್ದಾರೆ.ಪಟ್ಟಣದ ಜ್ಞಾನಭಾರತಿ ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ (ಜು.31) ಬೆಳಗ್ಗೆ 9:30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಕಡಕೋಳ ಮಹಾಮಠದ ಶ್ರೀ ಡಾ.ರುದ್ರಮುನಿ ಶಿವಾಚಾರ್ಯರು ದಿವ್ಯ ಸಾನಿಧ್ಯ ವಹಿಸಲಿದ್ದು, ಯಡ್ರಾಮಿ ವಿರಕ್ತಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ಸಾನಿಧ್ಯ ವಹಿಸುವರು. ತಹಶೀಲ್ದಾರ ಶಶಿಕಲಾ ಪಾದಗಟ್ಟಿ ಉದ್ಘಾಟಿಸಲಿದ್ದು, ಸಂಘದ ಜಿಲ್ಲಾಧ್ಯಕ್ಷ ಬಾಬುರಾವ ಯಡ್ರಾಮಿ ದಿಕ್ಸೂಚಿ ನುಡಿ ಹೇಳಲಿದ್ದಾರೆ. ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಗಮನಾಥ ರೇವತಗಾಂವ, ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ.ಶಿವರಂಜನ್ ಸತ್ಯಂಪೇಟೆ ಉಪಸ್ಥಿತಿ ವಹಿಸುವರು.ಇದೆ ವೇಳೆ 2024ರ ವಿ.ಎನ್.ಕಾಗಲಕರ್ ಪ್ರಶಸ್ತಿ ಹಾಗೂ ವಾರ್ಷಿಕ ಪ್ರಶಸ್ತಿ ಪಡೆದ ಪತ್ರಕರ್ತರಿಗೆ ವಿಶೇಷ ಸನ್ಮಾನ ನಡೆಯಲಿದೆ ಎಂದು ತಿಳಿಸಿದರು.
ವಿಜಯಪುರ: ಜಿಲ್ಲೆಯಲ್ಲಿ ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ಅಕ್ರಮವಾಗಿ ಜಮೀನು, ನಿವೇಶನಗಳನ್ನು ಖರೀದಿ ಮತ್ತು ಮಾರಾಟದ ಕುರಿತಂತೆ ಚರ್ಚೆಗೆ ಬೆಂಗಳೂರು ಮಳೆಗಾಲ ಅಧಿವೇಶನದಲ್ಲಿ ಪ್ರಶ್ನಿಸಲಾಗಿತ್ತು. ಆದರೆ. ಸರ್ಕಾರ ಚರ್ಚೆಗೆ ಅವಕಾಶ ಕಲ್ಪಿಸದೆ, ಲಿಖಿತ ಉತ್ತರ ಮಾತ್ರ ನೀಡಿದ್ದು, ಮುಂದಿನ ಬೆಳಗಾವಿ ಅಧಿವೇಶನದಲ್ಲಿ ಈ ಗಂಭೀರ ವಿಷಯದ ಕುರಿತು ಗಮನಸೆಳೆಯಲಾಗುವುದು ಎಂದು ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ತಿಳಿಸಿದ್ದಾರೆ.ನಗರದಲ್ಲಿ ಕೆಲವರು ಪತ್ರಿಕಾಗೋಷ್ಠಿ ನಡೆಸಿ, ನಗರ ಶಾಸಕರು ಸದನದಲ್ಲಿ ಧ್ವನಿ ಎತ್ತಬೇಕೆಂದು ಹೇಳುವ ಮೊದಲೇ, ಅಂದರೆ ಜು.೬ ರಂದು ಪ್ರಶ್ನೆ ಕೇಳಲಾಗಿದ್ದು, ಜು.೨೨ ರಂದು ಕಂದಾಯ ಇಲಾಖೆ ಸಚಿವರು ಲಿಖಿತ ಉತ್ತರ ನೀಡಿದ್ದಾರೆ.ಕಳೆದ ಮೂರು ವರ್ಷಗಳಲ್ಲಿ ವಿಜಯಪುರ ಜಿಲ್ಲೆಯಲ್ಲಿ ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ಜಮೀನು, ನಿವೇಶನಗಳನ್ನು ಖರೀದಿ ಮತ್ತು ಮಾರಾಟ ಮಾಡಿರುವ ಪ್ರಕರಣಗಳೆಷ್ಟು? ಖೊಟ್ಟಿ ದಾಖಲಾತಿ ಸೃಷ್ಟಿಸಿ ಆಸ್ತಿ ಮಾರಾಟ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಷ್ಟು ಆರೋಪಿಗಳಿಗೆ ಶಿಕ್ಷೆ ನೀಡಲಾಗಿದೆ? ಮೋಸ ಹೋಗಿರುವ ಮಾಲೀಕರಿಗೆ ಆಸ್ತಿಗಳನ್ನು ಮರಳಿಸಲಾಗಿದೆಯೇ? ಇಂತಹ ಪ್ರಕರಣಗಳನ್ನು ತಡೆಗಟ್ಟಲು ಸರ್ಕಾರ…
ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ನ್ಯಾಯಾಧೀಶ ನಾಗೇಶ ಮೊಗೇರ ಕಿವಿಮಾತು ಸಿಂದಗಿ: ಆರ್ಥಿಕ ಲಾಭದ ಜೊತೆಗೆ ಹಲವಾರು ದೃಷ್ಠಿಯನ್ನುಟ್ಟುಕೊಂಡು ಮಾನವ ಸಾಗಾಣಿಕೆ ನಡೆಯುತ್ತದೆ. ವಿಶೇಷವಾಗಿ ಹೆಣ್ಣು ಮಕ್ಕಳು ಜಾಗೃತರಾಗಿರಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ನಾಗೇಶ ಮೊಗೇರ ಹೇಳಿದರು.ಮಂಗಳವಾರದಂದು ಪಟ್ಟಣದ ಶ್ರೀ ಪದ್ಮರಾಜ ಮಹಿಳಾ ಪದವಿ ಮಹಾವಿದ್ಯಾಲಯದ ಸಭಾಭವನದಲ್ಲಿ ಸಿಂದಗಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ ಹಾಗೂ ಶ್ರೀಪದ್ಮರಾಜ ಮಹಿಳಾ ಪದವಿ ಮಹಾವಿದ್ಯಾಲಯದ ಸಹಯೋಗದೊಂದಿಗೆ ಹಮ್ಮಿಕೊಂಡ ಮಾನವ ಕಳ್ಳ ಸಾಗಾಣಿಕೆ ವಿರೋಧಿ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳು ಮತ್ತು ಮಹಿಳೆಯರನ್ನು ಅಪಹರಿಸಿ ಕಾನೂನುಬಾಹಿರ ಮತ್ತು ಅನೈತಿಕ ಚಟುವಟಿಕೆಗಳಲ್ಲಿ ತೊಡಗಿಸುತ್ತಿರುವುದು ಬೇಸರದ ಸಂಗತಿ. ಅಪರಿಚಿತ ವ್ಯಕ್ತಿಗಳು ಕಂಡು ಬಂದರೆ ತಕ್ಷಣದಲ್ಲಿ ಪೊಲೀಸರ್ ಗಮನಕ್ಕೆ ತರಬೇಕು. ನಮ್ಮನ್ನು ನಾವು ರಕ್ಷಿಸಿಕೊಳ್ಳಬೇಕು. ಅನಗತ್ಯ ವಿಚಾರಗಳನ್ನು ಯಾರೂ ಮಾಡಬಾರದು ಎಂದು ಸಲಹೆ ನೀಡಿದರು.ಈ ವೇಳೆ ಎಸಿಡಿಪಿಒ ಎಸ್.ಎನ್.ಕೋರವಾರ ಮಾತನಾಡಿ, ಮಾನವ ಕಳ್ಳ…
ಸಿಂದಗಿ: ಪಟ್ಟಣದ ತಾಲೂಕ ಶಿಕ್ಷಣ ಪ್ರಸಾರಕ ಮಂಡಳಿ ಸಂಸ್ಥೆಯನ್ನು ದಿ.ಎಮ್.ಸಿ.ಮನಗೂಳಿ ಅವರ ಜೊತೆಗೆ ಸದಾ ಬೆನ್ನೆಲುಬಾಗಿ ನಿಂತು ಈ ಸಂಸ್ಥೆಯನ್ನು ಉತ್ತರ ಕರ್ನಾಟಕದಲ್ಲಿ ಗುರುತಿಸುವಂತೆ ಮಾಡುವಲ್ಲಿ ಸಂಸ್ಥೆಯ ಹಿರಿಯ ನಿರ್ದೇಶಕ ಶಿವಪ್ಪಗೌಡ ಬಿರಾದಾರ ಅವರ ಪಾತ್ರ ಅತ್ಯಂತ ಪ್ರಮುಖವಾಗಿದೆ. ಆ ನಿಟ್ಟಿನಲ್ಲಿ ಸಂಸ್ಥೆಯಿಂದ ೯೧ವರ್ಷ ಜೀವನ ಪೂರೈಸಿದ ಶಿವಪ್ಪಗೌಡ ಬಿರಾದಾರ ಅವರಿಗೆ ಅಭಿನಂದನಾ ಸಮಾರಂಭ ಏರ್ಪಡಿಸುವಂಥದ್ದು ಅತ್ಯಂತ ಶ್ಲಾಘನೀಯವಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಹಾಗೂ ಶಾಸಕ ಅಶೋಕ ಮನಗೂಳಿ ಹೇಳಿದರು.ಪಟ್ಟಣದ ತಾಲೂಕ ಶಿಕ್ಷಣ ಪ್ರಸಾರಕ ಮಂಡಳಿಯ ಸಿ.ಎಂ. ಮನಗೂಳಿ ಕಲಾ ಮಹಾವಿದ್ಯಾಲಯದ ಸಭಾಭವನದಲ್ಲಿ ಮಂಗಳವಾರ ನಡೆದ ಸಂಸ್ಥೆಯ ಹಿರಿಯ ನಿರ್ದೇಶಕ ಶಿವಪ್ಪಗೌಡ ಬಿರಾದಾರ್ ಅವರ ಅಭಿನಂದನಾ ಸಮಾರಂಭದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಶಿವಪ್ಪಗೌಡ ಬಿರಾದಾರ ಅವರು ಶಿಕ್ಷಣ, ಸಾಮಾಜಿಕ, ಸಹಕಾರಿ ಕ್ಷೇತ್ರದಲ್ಲಿ ಹಲವಾರು ಸಾಧನೆ ಮಾಡಿದಂತವರು. ೯೧ವರ್ಷಗಳ ಜೀವನವನ್ನು ಸಾಗಿಸುತ್ತಿರುವ ಅವರು ಸಂಸ್ಥೆಯ ಬೆಳವಣಿಗೆಗೆ ಸದಾ ಶ್ರಮಿಸಿದಂತವರು. ಮುಂಬರುವ ದಿನಗಳಲ್ಲಿ ಅವರಿಗೊಂದು ಅಭಿನಂದನಾ ಗ್ರಂಥ ರಚಿಸುವ ಮೂಲಕ…
ಸಿಂದಗಿ: ವರಕವಿ ಡಾ.ಬೇಂದ್ರೆಯವರು ಗಾರುಡಿಗರಾಗಿ, ಸಾಹಿತಿಯಾಗಿ, ಚಿಂತಕರಾಗಿ, ದಾರ್ಶನಿಕರಾಗಿ ಜನ ಮಾನಸದಲ್ಲಿ ಅಚ್ಚಳಿಯದೆ ಉಳಿದಿದ್ದಾರೆ. ಎಲ್ಲಾ ಕಾಲಕ್ಕೂ ಬಾಳುವಂತಹ ಕವನಗಳನ್ನು ರಚಿಸಿದ್ದಾರೆ ಎಂದು ಧಾರವಾಡದ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಅಧ್ಯಕ್ಷ ಡಿ.ಎಂ.ಹಿರೇಮಠ ಹೇಳಿದರು.ಪಟ್ಟಣದ ಸಾತವೀರೇಶ್ವರ ಸಭಾಭವನದಲ್ಲಿ ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಅಂಗ ಸಂಸ್ಥೆಯಾದ ಆರ್.ಡಿ.ಪಾಟೀಲ, ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ ಪೂರ್ವ ಕಾಲೇಜಿನ ಪಠ್ಯಪೂರಕ ಚಟುವಟಿಕೆ, ರೋವರ್ ಮತ್ತು ರೇಂಜರ್, ಭಾರತ ಸೇವಾದಳ, ಎನ್.ಎಸ್.ಎಸ್. ಘಟಕಗಳ ಉದ್ಘಾಟನೆ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರಿಕ್ಷೇಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಾರಂಗಮಠವು ಸಮಾಜ, ಸಂಸ್ಕೃತಿ, ಸಾಹಿತ್ಯ ಅಪೂರ್ವವಾಗುವ ರೀತಿಯಲ್ಲಿ ಬೆಳೆಸಿಕೊಂಡು ಬಂದಿದ್ದು ಅನನ್ಯ. ಸಿಂದಗಿ ಒಂದು ಪುಣ್ಯ ಭೂಮಿ ಮತ್ತು ಸುಕ್ಷೇತ್ರ ಎಂದು ಹೇಳಲು ನನಗೆ ಅತೀವ ಸಂತೋಷ ಎನಿಸುತ್ತದೆ. ಅಜ್ಞಾನದಿಂದ ಜ್ಞಾನದೆಡೆಗೆ ತೆಗೆದುಕೊಂಡು ಹೋಗಲು ಕಾಯಕಯೋಗಿ ಲಿಂ.ಶ್ರೀಚನ್ನವೀರ ಮಹಾಸ್ವಾಮೀಜಿಗಳ ಕಾರ್ಯ ಅಮೋಘವಾಗಿದೆ. ಇಂದು ಈ ಸಂಸ್ಥೆಯಲ್ಲಿ ೫ ಸಾವಿರಕ್ಕೂ…
ಬಸವನಬಾಗೇವಾಡಿ: ಪಟ್ಟಣದ ಬಿಎಲ್ಡಿಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕ ಹಾಗೂ ವಿಜಯಪುರದ ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ಸಹಯೋಗದಲ್ಲಿ ಮಂಗಳವಾರ ಡೆಂಗ್ಯೂ,ಮಲೇರಿಯಾ ರೋಗದ ಅರಿವು ಮೂಡಿಸುವ ಜಾಗೃತಿ ಜಾಥಾ ಕಾರ್ಯಕ್ರಮ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜರುಗಿತು. ಜಾಥಾದಲ್ಲಿ ಡೆಂಗ್ಯೂ ಹಾಗೂ ಮಲೇರಿಯಾ ರೋಗ ಹರಡುವ ಬಗ್ಗೆ, ಮುನ್ನಚ್ಚರಿಕೆ ಕ್ರಮ ಸೇರಿದಂತೆ ಜನಜಾಗೃತಿ ಮೂಡಿಸಲಾಯಿತು.ಮಹಾವಿದ್ಯಾಲಯದ ಮುಂಭಾಗ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಎ.ವ್ಹಿ.ಸೂರ್ಯವಂಶಿ ಜಾಥಾಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ.ರವೀಂದ್ರಗೌಡ ಪಾಟೀಲ, ಜಯರಾಯ ಡಾವಣಗೇರಿ, ಪ್ರೊ.ಡಿ.ಎಸ್.ಲಗಳಿ, ಪ್ರೊ.ಡಿ.ಎನ್.ಕೊನಂತಲಿ, ಎನ್ಎಸ್ಎಸ್ ಘಟಕದ ಕಾರ್ಯಕ್ರಮಾಧಿಕಾರಿ ಡಾ.ವೈ.ಬಿ.ನಾಯಕ, ಪ್ರೊ.ವ್ಹಿ.ಎನ್.ರಜಪೂತ ಇತರರು ಇದ್ದರು.
