Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಲೇಖನ- ಸುಧಾ ಪಾಟೀಲ (ಬೆಳಗಾವಿ)ವಿಶ್ವಸ್ಥರುಬಸವ ತಿಳುವಳಿಕೆ ಮತ್ತು ಸಂಶೋಧನ ಕೇಂದ್ರಪುಣೆ ಉದಯರಶ್ಮಿ ದಿನಪತ್ರಿಕೆ ಸಂಘರ್ಷ ಹೋರಾಟ ಒಬ್ಬ ವ್ಯಕ್ತಿಯನ್ನು ಎಷ್ಟು ಎತ್ತರಕ್ಕೆ ಕರೆದೊಯ್ಯಬಲ್ಲದು ಎಂದು ಕಾಲ ಮಾತ್ರ ನಿರ್ಧರಿಸುತ್ತದೆ.ಇದಕ್ಕೆ ಪೂರಕವಾಗಿ ಜ್ಞಾನ, ಕ್ರಿಯೆ, ಸೃಜನಶೀಲತೆ, ಮಾನವೀಯ ಮೌಲ್ಯಗಳನ್ನು ರೂಢಿಸಿಕೊಂಡು ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಎಲ್ಲವನ್ನೂ ಬಿಟ್ಟು ಬಂದು ಪತ್ರಿಕೋದ್ಯಮ ವೃತ್ತಿಯನ್ನು ಆಯ್ಕೆ ಮಾಡಿಕೊಂಡು ಇವತ್ತು ವಿಜಯಪುರ ಜಿಲ್ಲೆಯ ಪ್ರತಿಷ್ಠಿತ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಆಗಿ ಅವಿರೋಧವಾಗಿ ಆಯ್ಕೆ ಆದದ್ದು ಶ್ರೀ ಇಂದುಶೇಖರ ಮಣೂರ ಅವರ ಕಾರ್ಯತತ್ಪರತೆಯನ್ನು ತೋರಿಸುತ್ತದೆ.ಅಪ್ಪಟ ಬಸವ ಭಕ್ತರು. ಇಂತಹ ಪ್ರಾಮಾಣಿಕ ಪತ್ರಕರ್ತರ ಪರಿಚಯವನ್ನು ನಾವು – ನಮ್ಮವರು ಎನ್ನುವ ಅಂಕಣದಲ್ಲಿ ಮಾಡಲು ನನಗೆ ಅತೀವ ಸಂತಸ ತಂದಿದೆ. ನನ್ನ ಬರವಣಿಗೆಯ ಶೈಲಿಗೆ, ಪ್ರವೃತ್ತಿಗೆ ಅವರ ಸಂಪಾದಕ್ತ್ವದ ’ಉದಯರಶ್ಮಿ’ ಪತ್ರಿಕೆ ಮಾರ್ಗದರ್ಶಿ ಎಂದರೆ ತಪ್ಪಾಗಲಾರದು. ನನ್ನ ಎರಡು ಮೂರು ಕೃತಿಗಳು ಅವರ ’ಉದಯರಶ್ಮಿ’ ಪತ್ರಿಕೆಯಲ್ಲಿ ಅಂಕಣವಾಗಿ ಮೂಡಿ ಬಂದಿವೆ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತೇನೆ.ನಾಡಿನೆಲ್ಲೆಡೆ ತಮ್ಮ ಅಪಾರ ಶಿಷ್ಯಬಳಗವನ್ನು…
ಹಿಂದುಳಿದವರ, ದಲಿತರ & ಮಹಿಳೆಯರ ಮೀಸಲಾತಿ ವಿರೋಧಿಸಿದ್ದು ಬಿಜೆಪಿ | ಸಿಎಂ ಸಿದ್ದರಾಮಯ್ಯ ಹೇಳಿಕೆ ಬೆಂಗಳೂರು: ಹಿಂದುಳಿದವರ, ದಲಿತರ ಹಾಗೂ ಮಹಿಳೆಯರ ಮೀಸಲಾತಿಯನ್ನು ವಿರೋಧಿಸಿದ್ದು ಬಿಜೆಪಿ, ಜಾರಿ ಮಾಡಿದ್ದು ನಮ್ಮ ಕಾಂಗ್ರೆಸ್ ಪಕ್ಷ. ಈಗಿರುವ ಶೇ.50 ರಷ್ಟು ಮಹಿಳಾ ಮೀಸಲಾತಿ ರಾಜೀವ್ ಗಾಂಧಿ ಮತ್ತು ಕಾಂಗ್ರೆಸ್ಸಿನ ಕೊಡುಗೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ 2023-24ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಹಾಗೂ ಇ-ಸ್ವತ್ತು 2.0 ತಂತ್ರಾಂಶದ ಚಾಲನೆ ಸಮಾರಂಭದಲ್ಲಿ ಮಾತನಾಡಿದ ಅವರು, ಮಹಿಳಾ ಮೀಸಲಾತಿ ವಿರೋಧ ಮಾಡಿದ್ದು ಬಿಜೆಪಿಯ ಉಪಾಧ್ಯಕ್ಷರಾಗಿದ್ದ ರಾಜ್ಯ ಸಭಾ ಸದಸ್ಯ ರಾಮಾಜೋಯಿಸ್. ಇದನ್ನು ಅರ್ಥ ಮಾಡಿಕೊಳ್ಳಬೇಕು. ಸುಮ್ಮನೆ ಬಿಜೆಪಿಗೆ ಚಪ್ಪಾಳೆ ತಟ್ಟಬಾರದು ಎಂದರು.ಗ್ರಾಮದಿಂದ ರಾಜಧಾನಿಗೆ ಹೀಗೆ ಅಧಿಕಾರ ವಿಕೇಂದ್ರೀಕರಣ ಆಗಬೇಕು ಎನ್ನುವುದು ಗಾಂಧಿ, ನೆಹರೂ, ಲೋಹಿಯಾ ಅವರ ಕನಸಾಗಿತ್ತು. ನಮ್ಮದು ಹಳ್ಳಿಗಳ ದೇಶ. ಗ್ರಾಮ ಭಾರತ ಅಭಿವೃದ್ಧಿ ಆಗದೆ ದೇಶ ಅಭಿವೃದ್ಧಿ ಸಾಧ್ಯವಿಲ್ಲ. ಹಳ್ಳಿಗಳ ಅಭಿವೃದ್ಧಿಯಲ್ಲಿ ಗ್ರಾಮಸ್ಥರ ಪಾಲ್ಗೊಳ್ಳುವಿಕೆ ಬಹಳ ಮುಖ್ಯ.…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಂಚೆ ವಿಭಾಗದ ೨೦೨೫ನೇ ಸಾಲಿನ ೩ನೇ ತ್ರೈಮಾಸಿಕ ಅಂಚೆ ಅದಾಲತ್ ಕಾರ್ಯಕ್ರಮ ಡಿ.೧೫ ರಂದು ಮಧ್ಯಾಹ್ನ ೩ ಗಂಟೆಗೆ ವಿಜಯಪುರ ವಿಭಾಗದ ಅಂಚೆ ಅಧೀಕ್ಷಕರ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ.ಜಿಲ್ಲೆಯ ಬಬಲೇಶ್ವರ, ಬಸವನಬಾಗೇವಾಡಿ, ಚಡಚಣ, ದೇವರಹಿಪ್ಪರಗಿ, ಇಂಡಿ, ಕೊಲ್ಹಾರ, ಮುದ್ದೇಬಿಹಾಳ, ನಿಡಗುಂದಿ, ಸಿಂದಗಿ, ತಾಳಿಕೋಟೆ, ತಿಕೋಟಾ, ಆಲಮೇಲ ಹಾಗೂ ವಿಜಯಪುರ ತಾಲೂಕುಗಳ ವ್ಯಾಪ್ತಿಯ ಅಂಚೆ ಸೇವೆಗಳಿಗೆ ಸಲಹೆ-ಸೂಚನೆ ಹಾಗೂ ದೂರುಗಳನ್ನು ಅಂಚೆ ಅದಾಲತ್ನಲ್ಲಿ ವಿಚಾರಣೆಗೆ ಎಂದು ಮೇಲ್ಬರಹ ಬರೆದು ದಿನಾಂಕ : ೧೦-೧೨-೨೦೨೫ರೊಳಗೆ ಯಾವುದೇ ಅಂಚೆ ಕಚೇರಿಯಲ್ಲಿ ಸಲ್ಲಿಸಬಹುದಾಗಿದೆ. ಇಂತಹ ದೂರು ಮತ್ತು ಸಲಹೆಯ ಲಕೋಟೆಗೆ ಯಾವುದೇ ಅಂಚೆ ವೆಚ್ಚ ಭರಿಸುವ ಅಗತ್ಯವಿರುವುದಿಲ್ಲ.ಅಂಚೆ ಅದಾಲತ್ನಲ್ಲಿ ಅಂಚೆ ಇಲಾಖೆಯಿಂದ ಒದಗಿಸಲಾಗುತ್ತಿರುವ ಸೇವೆಗಳಲ್ಲಿ ಇರುವ ಕೊರತೆಗಳನ್ನು ಮತ್ತು ಸುಧಾರಿಸುವ ಸಲಹೆ ಸೂಚನೆಗಳ ಕುರಿತು ಚರ್ಚಿಸಲಾಗುವುದು ಎಂದು ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿಗಳಾದ ಪ್ರಕಾಶ ವಡ್ಡರ ಅವರು ಸೋಮವಾರ ತಿಕೋಟಾ ತಾಲೂಕಿನ ಹೊನವಾಡ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.ಅವರು,ಹೊನವಾಡ ಗ್ರಾಮ ಪಂಚಾಯಿತಿ ಕಾರ್ಯಾಲಯಕ್ಕೆ ಭೇಟಿ ನೀಡಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವಿವಿಧ ಯೋಜನೆಗಳಾದ ತೆರಿಗೆ ವಸೂಲಾತಿ, ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಅನುಷ್ಠಾನಗೊಳ್ಳುತ್ತಿರುವ ವೈಯಕ್ತಿಕ ಶೌಚಾಲಯಗಳ ಪ್ರಗತಿ, ದ್ರವ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಪ್ರಗತಿ, ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಇ-ಕೆವೈಸಿ ಪ್ರಗತಿ ಸೇರಿದಂತೆ, ಹಲ ವಿಷಯಗಳ ಪರಿಶೀಲನೆ ನಡೆಸಿದರು.ಗ್ರಾಮದಲ್ಲಿನ ಪುರಾತನ ಬಾವಿಯನ್ನು ವೀಕ್ಷಣೆ ಮಾಡಿ, ಬಾವಿ ಸಂಪೂರ್ಣವಾಗಿ ತ್ಯಾಜ್ಯದಿಂದ ಭರ್ತಿಯಾಗಿದ್ದು, ಸಂಬಂಧಪಟ್ಟ ಇಲಾಖೆಯೊಂದಿಗೆ ಚರ್ಚಿಸಿ, ನಿಯಮಾನುಸಾರ ಅಭಿವೃದ್ಧಿ ಪಡಿಸಲು ಕ್ರಮ ಕೈಗೊಳ್ಳಲು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಅನುಷ್ಠಾನಗೊಂಡ ಸ್ಮಶಾನ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದ ಅವರು, ಆಸ್ತಿ ಸಂರಕ್ಷಣೆ ಗ್ರಾಮಸ್ಥರಯ ಮಾಡಿಕೊಳ್ಳಬೇಕು ಎಂದರು.ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿಯ ಸಹಾಯಕ…
ವಿಶ್ವ ಏಡ್ಸ್ ದಿನಾಚರಣೆಯಲ್ಲಿ ಹಿರಿಯ ಸಿವ್ಹಿಲ್ ನ್ಯಾಯಾಧೀಶ ಅರವಿಂದ ಹಾಗರಗಿ ಕರೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಏಡ್ಸ್ ರೋಗದ ಬಗ್ಗೆ ಭಯ ಬೇಡ ಜಾಗೃತಿ ಅಗತ್ಯ ಜಿಲ್ಲೆಯಲ್ಲಿ ಏಡ್ಸ್ ರೋಗವನ್ನು ಶೂನ್ಯಕ್ಕೆ ತರುವಲ್ಲಿ ಅಗತ್ಯ ಜಾಗೃತಿ ಮೂಡಿಸೋಣ ಎಂದು ಹಿರಿಯ ಸಿವ್ಹಿಲ್ ನ್ಯಾಯಾಧೀಶರಾದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಅರವಿಂದ ಹಾಗರಗಿ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಮರ್ಚಂಟ್ ಅಸೋಸಿಯೇರ್ಶನ ಎಪಿಎಂಸಿ ಯಾರ್ಡ ಇವರ ಸಹಯೋಗದಲ್ಲಿ ನಗರದ ಇಂಡಿ ರಸ್ತೆಯ ನೀಲಕಂಠೇಶ್ವರ ಮಂಗಲ ಕಾರ್ಯಾಲಯದಲ್ಲಿ ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ಎಚ್ಐವಿ ಏಡ್ಸ್ ಹರಡುವಿಕೆಯನ್ನು ನಿಯಂತ್ರಿಸಲು ಇರುವ ಅಡೆ-ತಡೆಗಳನ್ನು ಕೊನೆಗಾಣಿಸೋಣ ಎಂಬ ಘೋಷವಾಕ್ಯದೊಂದಿಗೆ ಹಮ್ಮಿಕೊಂಡ ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಏಡ್ಸ್ ರೋಗ ಯಾವುದೇ ಶಾಪವಲ್ಲ, ಈ ರೋಗ ನಿಯಂತ್ರಣಕ್ಕೆ ಜಾಗೃತಿ-ಅರಿವು ಹೊಂದುವುದು ಅತ್ಯವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಗ್ರಾಮ,…
ಉದಯರಶ್ಮಿ ದಿನಪತ್ರಿಕೆ ಇಂಡಿ: ಸಾಮೂಹಿಕ ವಿವಾಹಗಳು ಅರ್ಥಿಕ ಹೊರೆಯನ್ನು ಕಡಿಮೆ ಮಾಡುವುದರ ಜತೆಗೆ ಬಡ ಕುಟುಂಬಗಳನ್ನು ಸಂಕಷ್ಟದಿಂದ ಪಾರು ಮಾಡುತ್ತವೆ. ನಾಡಿನ ಸಂತ ಶರಣ ಸ್ವಾಮೀಜಿಗಳ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟವರು ಪುಣ್ಯವಂತರು ಎಂದು ಶ್ರೀಶೈಲ ಪೀಠದ ಜಗದ್ಗುರು ಡಾ. ಚನ್ನಸಿದ್ದರಾಜ ಪಂಡಿತಾಚಾರ್ಯ ಹೇಳಿದರು.ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಆವರಣದಲ್ಲಿ ಶ್ರೀ ಶಾಂತೇಶ್ವರ ಜಾತ್ರೆಯ ನಿಮಿತ್ಯ ನಡೆದ ಸಾಮೂಹಿಕ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.ಸಾಮೂಹಿಕ ವಿವಾಹ ಕೈಯಿಂದ ಆಗದವರ ಮದುವೆ, ಬಡವರ ಮದುವೆ ಎಂಬುದು ಶುದ್ಧ ತಪ್ಪು. ಮಧ್ಯಪ್ರದೇಶದ ಮುಖ್ಯಮಂತ್ರಿಯವರು ತಮ್ಮ ಮಗನ ಮದುವೆಯನ್ನು ಉಜ್ಜಯಿನಿಯಲ್ಲಿ ಕೇವಲ ವಾರಹಿಂದೆ ಅಷ್ಟೇ ನಡೆದ ಸಾಮೂಹಿಕ ವಿವಾಹದಲ್ಲಿ ಮಾಡಿ ಆದರ್ಶ ರಾಗಿದ್ದಾರೆ. . ದುಂದುವೆಚ್ಚಕ್ಕೆ ಕಡಿವಾಣ ಹಾಕಿದ್ದಾರೆ ಎಂದರು.ಕುಟುಂಬದಲ್ಲಿ ಮದುವೆಗಳು ಒಪ್ಪಂದದ ಪ್ರಕಾರ ನಡೆದರೆ ಎಲ್ಲರಿಗೂ ಒಳ್ಳೆಯದಾಗುತ್ತದೆ. ಶಾಸ್ವತ ಪರಿಹಾರ ಕಂಡುಕೊಳ್ಳಬಹುದು. ಮದುವೆಯಾಗುವವರು ಎಲ್ಲರಿಗೂ ಗೌರವಿಸುವ ಸಂಸ್ಕೃತಿ ಬೆಳೆಸಿಕೊಳ್ಳಬೇಕಾಗಿದೆ. ಹಿಂದು ಧರ್ಮದವರು ಆರತಿಗೆ ಒಂದು ಕಿರ್ತಿಗೆ ಒಂದು ಎನ್ನುವ ಬದಲಾಗಿ ಹೆಚ್ಚು ಮಕ್ಕಳು ಹೆತ್ತು ಧರ್ಮದ ಬಲ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಬಿ.ಎಲ್.ಡಿ.ಇ ಸಂಸ್ಥೆಯ ಬಸವೇಶ್ವರ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತು ಸಹಯೋಗದಲ್ಲಿ ಯರನಾಳ-ಉಕ್ಕಲಿ ವಿರಕ್ತಮಠದ ಗುರುಸಂಗನಬಸವ ಸ್ವಾಮೀಜಿ, ದಿ. ಸಿದ್ದಪ್ಪ ಮಲ್ಲಪ್ಪ ಗುಂದಗಿ ಸ್ಮರಣಾರ್ಥ, ದಿ. ಬಸವರಾಜ ಓಂಕಾರಪ್ಪ ಕುಂಟೋಜಿ ಸ್ಮರಣಾರ್ಥ ಡಿ. 2 ರಂದು ಬೆಳಗ್ಗೆ 10.30 ಗಂಟೆಗೆ ಶರಣ ಸಾಹಿತ್ಯ ಕುರಿತು ದತ್ತಿ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಂಡಿದೆ. ಕಾರ್ಯಕ್ರಮವನ್ನು ಸ್ಥಳೀಯ ವಿರಕ್ತಮಠದ ಸಿದ್ಧಲಿಂಗ ಸ್ವಾಮೀಜಿ ಉದ್ಘಾಟಿಸುವರು. ಅಧ್ಯಕ್ಷತೆ ಮಹಾವಿದ್ಯಾವಯದ ಪ್ರಾಚಾರ್ಯ ಡಾ.ಎ.ವ್ಹಿ.ಸೂರ್ಯವಂಶಿ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಕಸಾಪ ಅಧ್ಯಕ್ಷ ಹಾಸಿಂಪೀರ ವಾಲಿಕಾರ, ತಾಲೂಕು ಕಸಾಪ ಅಧ್ಯಕ್ಷ ಶಿವಾನಂದ ಡೋಣೂರ, ದತ್ತಿ ದಾನಿ ಗಂಗಾಧರ ಕುಂಟೋಜಿ, ಶಾಂತಾ ಬಿರಾದಾರ, ದತ್ತಿ ಸಂಚಾಲಕ ಬಿ.ವ್ಹಿ.ಚಕ್ರಮನಿ ಆಗಮಿಸುವರು. ಶಿಕ್ಷಣ ಸಂಯೋಜಕ ಷಣ್ಮುಖಪ್ಪ ಅಂಬಲಿ ಉಪನ್ಯಾಸ ನೀಡುವರು ಎಂದು ತಾಲೂಕು ಕಸಾಪ ಗೌರವ ಕಾರ್ಯದರ್ಶಿ ಶಿವು ಮಡಿಕೇಶ್ವರ ತಿಳಿಸಿದ್ದಾರೆ.
ವಿಜಯಪುರದಲ್ಲಿ ನಡೆದ ಜಿಲ್ಲಾ ಮಟ್ಟದ ವಿಕಲಚೇತನರ ಕ್ರೀಡಾಕೂಟದಲ್ಲಿ ಜಿಪಂ ಸಿಇಓ ರಿಷಿ ಆನಂದ ಕರೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬದುಕಿನ ಪ್ರತಿ ಹಂತದಲ್ಲೂ ಆತ್ಮವಿಶ್ವಾಸ ಹಾಗೂ ದೃಢಸಂಕಲ್ಪದೊಂದಿಗೆ ಮುನ್ನಡೆದು ಸಾಧನೆ ಮಾಡುವ ಮೂಲಕ ಯಶಸ್ವಿಯಾಗಿ ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ರಿಷಿ ಆನಂದ ಅವರು ಹೇಳಿದರು.ಅವರು ಜಿಲ್ಲಾಡಳಿತ, ಜಿಲ್ಲಾಪಂಚಾಯತ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಇವರ ವತಿಯಿಂದ ಸೋಮವಾರ ನಗರದಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಹಮ್ಮಿಕೊಂಡ ಜಿಲ್ಲಾಮಟ್ಟದ ವಿಕಲಚೇತನರ ಕ್ರೀಡಾಕೂಟಕ್ಕೆ ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.ಜಿಲ್ಲಾ ಮಟ್ಟದಲ್ಲಿ ಆಯೋಜಿಸಲಾಗುವ ವಿವಿಧ ಆಟೋಟಗಳ ಸ್ಪರ್ಧೆಯಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ತಮ್ಮ ಕ್ರೀಡಾ ಪ್ರತಿಭೆಯನ್ನು ಮೆರೆಯಬೇಕು. ಜಿಲ್ಲೆಯ ೫ ತಾಲೂಕುಗಳಲ್ಲಿ ವಿಕಲಚೇತನರ ಕ್ರೀಡಾಕೂಟಗಳನ್ನು ಆಯೋಜಿಸಲಾಗಿದ್ದು ಇದು ಅತ್ಯಂತ ಹೆಮ್ಮೆಯ ವಿಷಯವಾಗಿದೆ. ತಾಲೂಕು ಮಟ್ಟದಲ್ಲಿ ಆಯೋಜಿಸಿದ ವಿವಿಧ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ವಿಜೇತರಾಗಿ ಇದೀಗ ಜಿಲ್ಲಾ ಮಟ್ಟದಲ್ಲಿ ನಡೆಯುವ ಕ್ರೀಡಾಕೂಟಗಳಲ್ಲಿ ಭಾಗಿಯಾಗಿರುವ ತಾವುಗಳು, ವಿಜೇತರಾಗಿ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಘಟಕದಿಂದ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ವಿವಿಧ ವಾರ್ಡುಗಳ ಮನೆಗಳ ಗಣಕೀಕೃತ ಉತಾರೆ ನೀಡಲು ಕ್ರಮವಹಿಸುವಂತೆ ಆಗ್ರಹಿಸಿ ತಹಶೀಲ್ದಾರ ಪ್ರಕಾಶ ಸಿಂದಗಿ ಅವರಿಗೆ ಮನವಿ ಸಲ್ಲಿಸಲಾಯಿತು.ಪಟ್ಟಣದ ತಹಶೀಲ್ದಾರ ಕಾರ್ಯಾಲಯಕ್ಕೆ ಆಗಮಿಸಿದ ಕರವೇ ಕಾರ್ಯಕರ್ತರು ಮನೆಗಳ ಉತಾರೆ ಒದಗಿಸುವಲ್ಲಿ ಆದ ಸಮಸ್ಯೆಗಳ ಕುರಿತು ಗಮನ ಸೆಳೆದರು.ಈ ಸಂದರ್ಭದಲ್ಲಿ ತಾಲ್ಲೂಕು ಘಟಕದ ಅಧ್ಯಕ್ಷ ರಹಿಮಾನ ಕಣಕಾಲ ಮಾತನಾಡಿ, ಪಟ್ಟಣದ ೫,೮,೧೫, ೧೬, ೧೭ ವಾರ್ಡುಗಳ ಮನೆಗಳಿಗೆ ಗಣಕೀಕೃತ ಉತಾರೆ ನೀಡುತ್ತಿಲ್ಲ. ಈ ಬಗ್ಗೆ ಪಟ್ಟಣ ಪಂಚಾಯಿತಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಯಾವ ಕಾರಣದಿಂದ ಉತಾರೆ ನೀಡುತ್ತಿಲ್ಲ ಎಂಬುವುದೇ ಅರ್ಥವಾಗಿಲ್ಲ. ಆದ್ದರಿಂದ ಕೂಡಲೇ ತಹಶೀಲ್ದಾರರು ಉತಾರೆ ನೀಡಲು ಕ್ರಮ ವಹಿಸಬೇಕೆಂದು ಆಗ್ರಹಿಸಿ, ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.ಮನವಿ ಸ್ವೀಕರಿಸಿ ಮಾತನಾಡಿದ ತಹಶೀಲ್ದಾರ, ಪಂಚಾಯಿತಿ ಮುಖ್ಯಾಧಿಕಾರಿಗಳೊಂದಿಗೆ ಮಾತನಾಡಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.ಕರವೇ ಘಟಕದ ಉಪಾಧ್ಯಕ್ಷ ನಾಗೇಶ ಕಮತಗಿ, ಪ್ರಧಾನಕಾರ್ಯದರ್ಶಿ ಅಶೋಕ ಗೊಲ್ಲರ, ಭೀಮನಗೌಡ ನಾಗರಾಳ, ಶೇಖಸಾಬ್ ಹವಾಲ್ದಾರ,…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಹರನಾಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಮಾಜಿ ಅಧ್ಯಕ್ಷ ಮಲ್ಲನಗೌಡ(ಬಾಬುಗೌಡ) ಬಿರಾದಾರ ನೇತೃತ್ವದ ಬಣ ಜಯಗಳಿಸಿದ ಹಿನ್ನೆಲೆಯಲ್ಲಿ ಬೆಂಬಲಿಗರು ವಿಜಯೋತ್ಸವ ಆಚರಿಸಿದರು.ತಾಲ್ಲೂಕಿನ ಹರನಾಳ ಗ್ರಾಮದ ಪಿಕೆಪಿಎಸ್ ಆಡಳಿತ ಮಂಡಳಿಯ ಹನ್ನೊಂದು ಸ್ಥಾನಗಳಿಗೆ ಭಾನುವಾರ ಜರುಗಿದ ಜಿದ್ದಾಜಿದ್ದಿನ ಚುನಾವಣೆಯಲ್ಲಿ ಒಂದೇ ಬಣದ ಹನ್ನೊಂದು ಅಭ್ಯರ್ಥಿಗಳು ಅಧಿಕ ಮತಗಳನ್ನು ಪಡೆಯುವುದರ ಮೂಲಕ ಜಯಗಳಿಸಿದರು. ಒಟ್ಟು ೧೨ ಜನ ಸದಸ್ಯರ ಆಡಳಿತ ಮಂಡಳಿಗೆ ಸಾಲಗಾರ ಹಿಂದುಳಿದ ವರ್ಗ ‘ಬ’ ಸ್ಥಾನದಿಂದ ಗಂಗಾಬಾಯಿ ಜೋಗೂರ(ಇಂಗಳಗಿ) ಅವಿರೋಧವಾಗಿ ಆಯ್ಕೆಯಾಗಿದ್ದರು. ಇನ್ನುಳಿದ ಸಾಲಗಾರ ಸಾಮಾನ್ಯ ಸ್ಥಾನ-೫, ಸಾಲಗಾರ ಮಹಿಳಾ ಮೀಸಲು-೨, ಸಾಲಗಾರ ಹಿಂದುಳಿದ ವರ್ಗ ‘ಅ’ ಸ್ಥಾನ-೦೧, ಸಾಲಗಾರ ಪರಿಶಿಷ್ಟ ಜಾತಿ-೦೧, ಸಾಲಗಾರ ಪರಿಶಿಷ್ಟ ಪಂಗಡ-೦೧, ಬಿನ್ ಸಾಲಗಾರರ ಕ್ಷೇತ್ರ-೦೧ ಹೀಗೆ ಒಟ್ಟು ೧೧ ಸ್ಥಾನಗಳಿಗೆ ಚುನಾವಣೆ ಜರುಗಿತು.ಚುನಾವಣೆಯಲ್ಲಿ ಸಾಮಾನ್ಯ ಸ್ಥಾನಗಳಿಗೆ ವಿಠ್ಠಲ ಮಂಟ್ಲಾಕುಂಟಿ, ಶಾಂತಗೌಡ ಚೌದ್ರಿ, ಸಿದ್ರಾಮರಡ್ಡಿ ಪಾಟೀಲ, ಶರಣಗೌಡ ಗೊಡಿಹಾಳ, ಸಿದ್ದಣ್ಣ ಅಂಗಡಿ ಮಹಿಳಾ ಮೀಸಲು ಸ್ಥಾನಗಳಿಗೆ…
