Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಕ್ಷೇತ್ರಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ದಿಂದ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆಯವರ ಧರ್ಮಪತ್ನಿ ಹೇಮಾವತಿ ಹೆಗ್ಗಡೆ ಅಮ್ಮನವರ ಹುಟ್ಟುಹಬ್ಬದಂಗವಾಗಿ ಗುರುವಾರ ಸಂಸ್ಥೆಯ ಫಲಾನುಭವಿಗಳಿಗೆ ಹಣ್ಣು-ಹಂಪಲ ವಿತರಿಸಲಾಯಿತು.ಈ ಸಂದರ್ಭದಲ್ಲಿ ಸಂಸ್ಥೆಯ ತಾಲೂಕು ಯೋಜನಾಧಿಕಾರಿ ಪ್ರಸನ್ನ ಆರ್. ಅವರು, ಆಶಾಕಿರಣವಾಗಿರುವ ಹೇಮಾವತಿ ಹೆಗ್ಗಡೆ ಅಮ್ಮನವರು ಅನೇಕ ಮಹಿಳೆಯರ ಬದುಕಿಗೆ ಜ್ಞಾನ ವಿಕಾಸ ಕಾರ್ಯಕ್ರಮದ ಮೂಲಕ ತಾಲೂಕಿನದ್ಯಂತ ವಾತ್ಸಲ್ಯ ಕಾರ್ಯಕ್ರಮದ ಅಡಿಯಲ್ಲಿ ಪ್ರತಿ ತಿಂಗಳು ಸಂಸ್ಥೆಯು ಅಸಹಾಯಕ ಹಾಗೂ ಆಶಕ್ತರಿಗೆ ತಾಲೂಕಿನಲ್ಲಿ 54 ಜನರಿಗೆ ತಲಾ ರೂ 1000/-ಹಾಗೂ ಸಿರಿ ಧಾನ್ಯದಿಂದ ತಯಾರಿಸಿರುವ ಪುಷ್ಟಿಯನ್ನು ವಿತರಣೆ ಮಾಡಲಾಗುತ್ತಿದೆ. ಈ ಮಾಶಾಸನ ಫಲಾನುಭವಿಗಳಿಗೆ ಹೇಮಾವತಿ ಅಮ್ಮನವರ ಹುಟ್ಟು ಹಬ್ಬದಂಗವಾಗಿ ಸಂಸ್ಥೆಯು ಹಣ್ಣು ಹಂಪಲಗಳನ್ನು ಅವರ ಮನೆ ಬಾಗಿಲಿಗೆ ಹೋಗಿ ತಲುಪಿಸುವ ಮೂಲಕ ಅಮ್ಮನವರ ಹುಟ್ಟುಹಬ್ಬವನ್ನು ಆಚರಿಸುವ ಜೊತೆಗೆ ಫಲಾನುಭವಿಗಳ ಆರೋಗ್ಯದ ಬಗ್ಗೆ ಹಾಗೂ ಅವರ ದೈನಂದಿನ ಚಟುವಟಿಕೆಗಳ ಬಗ್ಗೆ ವಿಚಾರಿಸಲಾಗುತ್ತಿದೆ ಎಂದರು.ಮಾಶಾಸನ ಸದಸ್ಯರು ಅಮ್ಮನವರ ಹುಟ್ಟು ಹಬ್ಬಕ್ಕೆ ಶುಭಾಶಯಗಳು ಹಾಗೂ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ವಿವೇಕ ಬ್ರಿಗೇಡ್ ಸಂಘಟನೆಯು ಜ್ಞಾನದಾಸೋಹಿ ಬಂಥನಾಳ ಸಂಗನಬಸವ ಶಿವಯೋಗಿಗಳ ಸ್ಮಾರಕವನ್ನು ವಿಜಯಪುರದಲ್ಲಿ ಸರ್ಕಾರ ನಿರ್ಮಾಣ ಮಾಡಬೇಕೆಂದು ಆಗ್ರಹಿಸಿ ತಹಸೀಲ್ದಾರ ಅವರಿಗೆ ಗುರುವಾರ ಮನವಿ ಸಲ್ಲಿಸಿತು.ಈ ಸಂದರ್ಭದಲ್ಲಿ ವಿವೇಕ ಬ್ರಿಗೇಡ್ ಸಂಘಟನೆಯ ಮುಖ್ಯಸ್ಥ ವಿನುತ ಕಲ್ಲೂರ ಮಾತನಾಡಿ, ಶೈಕ್ಷಣಿಕ ಕ್ರಾಂತಿಯ ಹರಿಕಾರ, ಅಕ್ಷರ ದಾಸೋಹಿ ಬಂಥನಾಳದ ಲಿಂಗೈಕ್ಯ ಸಂಗನಬಸವ ಶಿವಯೋಗಿಗಳು ವಿಜಯಪುರ ಜಿಲ್ಲೆಯಾದ್ಯಂತ ಶಿಕ್ಷಣ ಕ್ರಾಂತಿ ಮಾಡಿದ್ದಾರೆ. ಅಂತಹ ಮಹಾ ಪುರುಷರ ಜೀವನ ಆದರ್ಶಗಳು ನಮ್ಮ ಯುವ ಪೀಳಿಗೆಗೆ ತಿಳಿಸಲು ಹಾಗೂ ಅವರ ಸಂದೇಶ ಶಾಶ್ವತವಾಗಿ ಉಳಿಯಲು ಜಿಲ್ಲೆಯಲ್ಲಿ ಸಂಗನಬಸವ ಶಿವಯೋಗಿಗಳ ಭವ್ಯ ಸ್ಮಾರಕವಾಗಬೇಕು. ಈ ನಿಟ್ಟಿನಲ್ಲಿ ಸರಕಾರ ಚಿಂತನೆ ನಡೆಸಬೇಕು ಎಂದು ಆಗ್ರಹಿಸಿದರು. ಮನವಿ ಪತ್ರವನ್ನು ಗ್ರೇಡ್-2 ತಹಸೀಲ್ದಾರ ಎಚ್.ಎಸ್.ಅರಕೇರಿ ಸ್ವೀಕರಿಸಿದರು.ಈ ಸಂದರ್ಭದಲ್ಲಿ ಶಿವರುದ್ರಯ್ಯ ಹಿರೇಮಠ, ಮಣಿಕಂಠ ಕಲ್ಲೂರ, ರವಿಗೌಡ ಚಿಕ್ಕೊಂಡ, ಉಮೇಶ ಅವಟಿ, ಮಲ್ಲು ಬನಾಶಿ, ಶಿವಾನಂದ ಮ್ಯಾಗೇರಿ, ಸಂಗನಗೌಡ ಪಾಟೀಲ, ಸಚೀನ ಕಲ್ಲೂರ, ಭೀಮು ಬಸ್ತಾಳ,ಶಿವಾನಂದ ಭಟ್ಟಲ, ಶ್ರೀಶೈಲ ಕೋಲಕಾರ ಇತರರು ಇದ್ದರು.
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಹೃದಯ ಭಾಗದ ಬಸವೇಶ್ವರ ವೃತ್ತದ ಹತ್ತಿರ ಜೀಣೋದ್ಧಾರವಾಗುತ್ತಿರುವ ಹನುಮಾನ ದೇವಸ್ಥಾನದ ಮುಂಭಾಗ ಯೂಟ್ಯೂಬ್ ಯಶೋಧರ ತಂಡದ ಮುಖ್ಯಕಲಾವಿದ ಶಿವಪುತ್ರ ಹಾಗೂ ಅವರ ತಂಡದಿಂದ ಹನುಮ ಜಯಂತಿಯಂಗವಾಗಿ ದೇವಸ್ಥಾನಕ್ಕೆ ಆಗಮಿಸಿದ ಜನರಿಗೆ ಪ್ರಸಾದ, ಪಾನಕ ವಿತರಿಸಲಾಯಿತು.ಈ ಸಂದರ್ಭದಲ್ಲಿ ಯೂಟ್ಯೂಬ್ ಕಲಾವಿದ ಶಿವಪುತ್ರ ಮಾತನಾಡಿ, ಭಕ್ತರಿಗೆ ಬೇಡಿದ ವರವನ್ನು ನೀಡುವ ಆಂಜನೇಯ ಸ್ವಾಮಿಯ ಜಯಂತಿ ಪ್ರಯುಕ್ತ ಪ್ರಸಾದ ಸೇವೆ ಸಲ್ಲಿಸಲಾಗುತ್ತಿದೆ. ಆಂಜನೇಯ ಸ್ವಾಮಿ ಎಲ್ಲರಿಗೂ ಒಳ್ಳೆಯದನ್ನು ಮಾಡಲಿ ಎಂದರು.ಈ ಸಂದರ್ಭದಲ್ಲಿ ಯೂಟ್ಯೂಬ್ ಕಲಾವಿದರಾದ ಹನುಮಂತ ಯಶೋದರ, ಆನಂದ ಕಸ್ತೂರಿ, ರಾಜು ಇತರರು ಇದ್ದರು.
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಸುಕ್ಷೇತ್ರ ಶ್ರೀಶೈಲ ಕ್ಷೇತ್ರಕ್ಕೆ ತೆರಳಿದ್ದ ಮಲ್ಲಯ್ಯನ ಕಂಬಿಗಳನ್ನು ಭಕ್ತರು ವಿವಿಧ ವಾಧ್ಯ ಮೇಳಗಳೊಂದಿಗೆ ಸಂಭ್ರಮ, ಸಡಗರದಿಂದ ಗುರುವಾರ ಬರಮಾಡಿಕೊಂಡರು.ಕಳೆದ ತಿಂಗಳು ಹೋಳಿಹುಣ್ಣಿಮೆ ಮರುದಿನ ಇಲ್ಲಿಂದ ಪಾದಯಾತ್ರಾ ಭಕ್ತರೊಂದಿಗೆ ಕಂಬಿಗಳು ಪಾದಯಾತ್ರೆ ಮೂಲಕ ಶ್ರೀಶೈಲ ಕ್ಷೇತ್ರಕ್ಕೆ ತೆರಳಿದ್ದವು. ದ್ವಾದಶ ಲಿಂಗಗಳಲ್ಲಿ ಒಂದಾದ ಸುಕ್ಷೇತ್ರ ಶ್ರೀಶೈಲ ಮಲ್ಲಿಕಾರ್ಜುನ ಕ್ಷೇತ್ರದಲ್ಲಿ ಪ್ರತಿ ವರ್ಷ ಯುಗಾದಿ ಹಬ್ಬದಂದು ನಡೆಯುವ ರಥೋತ್ಸವದಲ್ಲಿ ಈ ಭಾಗದ ಜನರು ಭಾಗವಹಿಸಿ ತಮ್ಮ ತಮ್ಮ ಗ್ರಾಮಗಳಿಗೆ ಆಗಮಿಸುತ್ತಾರೆ. ತದ ನಂತರ ಹುಣ್ಣಿಮೆಗೆ ಆಯಾ ಆಯಾ ಗ್ರಾಮಗಳಿಗೆ ಅಂದು ತೆರಳಿದ್ದ ಮಲ್ಲಯ್ಯನ ಕಂಬಿಗಳು ಆಗಮಿಸುವದು ವಾಡಿಕೆ.ಪಟ್ಟಣದ ಮುದ್ದೇಬಿಹಾಳ ರಸ್ತೆಯಲ್ಲಿರುವ ಕಂಬಿ ಕಟ್ಟೆಗೆ ವಾಡಿಕೆಯಂತೆ ಬುಧವಾರ ರಾತ್ರಿ ಮಲ್ಲಯ್ಯನ ಕಂಬಿಗಳು ಬಂದು ತಲುಪಿದವು. ಗುರುವಾರ ಬೆಳಗ್ಗೆ ಇಲ್ಲಿನ ಭಕ್ತರು ಅಶೋಕ ಕುಂಬಾರರ ಮನೆಗೆ ತೆರಳಿ ಅಲ್ಲಿಂದ ನಗಾರಿ, ದೀವಟಿಗೆ, ಪೂಜಾ ಸಾಮಗ್ರಿಗಳೊಂದಿಗೆ ಕಿರಣ ಕುಲಕರ್ಣಿಯವರ ಮನೆಗೆ, ಗೌಡರ ಮನೆಗೆ ವಿವಿಧ ವಾಧ್ಯ ಮೇಳಗಳೊಂದಿಗೆ ತೆರಳಿ ಅವರನ್ನು ಕರೆದುಕೊಂಡು ಕಂಬಿ ಕಟ್ಟೆಗೆ ಆಗಮಿಸಿದರು.…
ಲೇಖನ- ವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಪ್ರತಿ ಸಮಸ್ಯೆಗೂ ಒಂದು ಪರಿಹಾರವಿದೆ ಎಂಬ ವಿಶ್ವಾಸ ಮನುಷ್ಯನಲ್ಲಿ ಮೂಡಲು ಕಾರಣ ಆತನ ಜ್ಞಾನದ ಬುನಾದಿ ಮತ್ತು ಆತ ತನ್ನ ಕೆಲಸದಲ್ಲಿ ಇಟ್ಟಿರುವ ನಂಬಿಕೆ.ಮನುಷ್ಯನಿಗೆ ಆತ್ಮವಿಶ್ವಾಸ ಬರುವುದು ಆತ ಸಮಸ್ಯೆ ಗಳನ್ನು ನೋಡುವ ಮತ್ತು ಅವುಗಳನ್ನು ಎದುರಿಸುವ ರೀತಿಯಲ್ಲಿ. ಸಮಸ್ಯೆಯನ್ನು ಕಂಟಕ ಎಂದು ನೋಡಿದಾಗ ಮನುಷ್ಯ ಬೇಸರಕ್ಕೊಳ್ಳಗಾಗುತ್ತಾನೆ ಬದಲಾಗಿ ಸಮಸ್ಯೆಯನ್ನು ಸವಾಲಾಗಿ ಭಾವಿಸಿ ಅದರ ಪರಿಹಾರಗಳನ್ನು ಯೋಚಿಸಿದಾಗ ಸಮಸ್ಯೆಗಳು ಸುಲಭವಾಗಿ ಪರಿಹರಿಸಲ್ಪಡುತ್ತವೆ. ಮತ್ತೆ ಕೆಲ ಜನರು ಪರಿಹಾರದಲ್ಲೂ ಸಮಸ್ಯೆಗಳನ್ನು ಹುಡುಕುವರು.ನಮ್ಮಲ್ಲಿರುವ ಜ್ಞಾನ ಮತ್ತು ನಾವು ವಸ್ತು ವಿಷಯಗಳಲ್ಲಿ ಹೊಂದಿರುವ ವಿಶ್ವಾಸ ಮತ್ತು ಅವುಗಳನ್ನು ಈಡೇರಿಸುವ ನಿಟ್ಟಿನಲ್ಲಿ ನಾವು ಕೈಗೊಳ್ಳುವ ಚಟುವಟಿಕೆಗಳು ನಮಗೆ ಸವಾಲನ್ನು ಪರಿಹರಿಸಲು ಶಕ್ತಿಯನ್ನು ನೀಡುತ್ತವೆ.ಆದರೆ ಸಂತೋಷದ ವಿಷಯವೆಂದರೆ ಇತ್ತೀಚಿನ ದಿನಗಳಲ್ಲಿ ಎಲ್ಲರೂ ಸಮಸ್ಯೆಗಳಿಗೆ ಪರಿಹಾರವನ್ನು ಹುಡುಕುವ ಮತ್ತು ಅವುಗಳನ್ನು ಪರಿಹರಿಸಿಕೊಳ್ಳುವ ನಿಟ್ಟಿನಲ್ಲಿ ಯಶಸ್ವಿಯಾಗುತ್ತಿದ್ದಾರೆ. ಪ್ರತಿಯೊಂದು ಸಮಸ್ಯೆಗೂ ಪರಿಹಾರ ಇದ್ದೇ ಇದೆ ಎಂಬ ನಂಬಿಕೆ ಜನರಲ್ಲಿ ಕ್ರಮೇಣ ಹೆಚ್ಚಾಗುತ್ತಿದೆ.…
ಜನಗಣತಿ ಕಾರ್ಯ ಯಶಸ್ವಿಗೊಳಿಸಲು ಸಾರ್ವಜನಿಕರಿಗೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಮನವಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಾದ್ಯಂತ ಏ. ೧ರಿಂದ ರಾಷ್ಟ್ರೀಯ ಜನಗಣತಿಯ ಮೊದಲ ಹಂತದ ಸ್ವಯಂ ಜನಗಣತಿ ಕಾರ್ಯಾರಂಭವಾಗಿದ್ದು, ಏ. ೧೫ ರೊಳಗಾಗಿ ಪ್ರತಿಯೊಬ್ಬರೂ ತಮ್ಮ ಕುಟುಂಬದವರ ಸ್ವಯಂ ಗಣತಿಗೊಳಪಡಿಸುವ ಮೂಲಕ ಜನಗಣತಿ ಕಾರ್ಯ ಯಶಸ್ವಿಗೆ ಕೈ ಜೋಡಿಸುವಂತೆ ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಸಾರ್ವಜನಿಕರಿಗೆ ಮನವಿ ಮಾಡಿದರು.ರಾಷ್ಟ್ರೀಯ ಜನಗಣತಿ ೨೦೨೭ ರ ಮೊದಲ ಹಂತದ ಸ್ವಯಂ ಗಣತಿ ಕುರಿತು ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಅವರು ಮಾತನಾಡಿದರು.ಸ್ವಯಂ ಗಣತಿ ಅತ್ಯಂತ ಸರಳವಾಗಿದ್ದು, ಕೇವಲ ಐದು ನಿಮಿಷದಲ್ಲಿ ಈ ಪ್ರಕ್ರಿಯೆ ಪೂರ್ಣಗೊಳಿಸಬಹುದಾಗಿದೆ. ಈಗಾಗಲೇ ನಾನು ಆ ಕಾರ್ಯ ಪೂರ್ಣಗೊಳಿಸಿದ್ದಾಗಿ ಜಿಲ್ಲಾಧಿಕಾರಿಗಳು ತಿಳಿಸಿದರು.ದೇಶದ ಮಹತ್ವಾಕಾಂಕ್ಷಿಯ ಜನಗಣತಿ ಪ್ರಕ್ರಿಯೆ ಏ.೧ರಿಂದ ಆರಂಭಗೊಂಡಿದ್ದು, ಜನಗಣತಿ ದೇಶದ ಅಭಿವೃದ್ಧಿಗೆ ಪೂರಕವಾದ ಪ್ರಮುಖ ಕಾರ್ಯವಾಗಿದೆ. ಈ ಪ್ರಕ್ರಿಯೆಯಲ್ಲಿ ಸಾರ್ವಜನಿಕರು ನಿಖರ ಮಾಹಿತಿ ನೀಡುವ ಮೂಲಕ ಸಹಕರಿಸಿಬೇಕು. ಏ.೧೫ರವರೆಗೆ ಸ್ವಯಂ ವಿವರ ದಾಖಲಿಸಲು…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಅನುಮತಿ ಪಡೆಯದೇ ನಿರ್ಮಾಣ ಮಾಡಿದ ವಾಣಿಜ್ಯ ಮಳಿಗೆ, ಮನೆ ನಿರ್ಮಾಣ ಮಾಡುತ್ತಿರುವ ಕೆಲ ವ್ಯಾಪಾರಿಗಳ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಬರೆದ ಮನವಿ ಪತ್ರವನ್ನು ಕರವೇ ಕಾರ್ಯಕರ್ತರು ತಹಸೀಲ್ದಾರ ಮೂಲಕ ಬುಧವಾರ ಸಲ್ಲಿಸಿದರು.ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಅಶೋಕ ಹಾರಿವಾಳ ಮಾತನಾಡಿ, ಪಟ್ಟಣದ ರಾಜ್ಯ ಬಿಜ್ಜಳ ರಾಜ್ಯ ಹೆದ್ದಾರಿಯಲ್ಲಿರುವ ಬಸ್ ನಿಲ್ದಾಣ ಸಮೀಪ ಲೋಕನಾಥ ನೇಮಿಚಂದ ಅಗರವಾಲ ಅವರು ನಿಯಮ ಬಾಹಿರವಾಗಿ ಐದು ಅಂತಸ್ತಿನ ವಾಣಿಜ್ಯ ಕಟ್ಟಡ ನಿರ್ಮಾಣ ಮಾಡಿದ್ದಾರೆ. ಪುರಸಭೆಯಿಂದ ಯಾವುದೇ ಅನುಮತಿ (ಪರವಾನಿಗೆ) ಪಡೆಯದೇ ವಾಣಿಜ್ಯ ಮಳಿಗೆ ಮುಂದೆ ಅವೈಜ್ಞಾನಿಕವಾಗಿ ವಿದ್ಯುತ್ ಪರಿವರ್ತಕ ಅಳವಡಿಸಿದ್ದಾರೆ. ಇದು ಸಾರ್ವಜನಿಕರಿಗೆ ಅಪಾಯವಾಗುವ ಸಂಭವವಿದೆ. ಇವರದೇ ಸಿಟಿಎಸ್ ನಂ. 342 ರಲ್ಲಿ ಸಂಪೂರ್ಣ ಸರ್ಕಾರಿ ಉದ್ಯಾನವನ ಜಾಗೆಯಲ್ಲಿ ಕಟ್ಟಡ ನಿರ್ಮಾಣ ಮಾಡಿಕೊಂಡಿದ್ದಾರೆ. ಇನ್ನೊಬ್ಬರು ವಿಜಯಪುರ ರಸ್ತೆಯಲ್ಲಿರುವ ಸರ್ಕಾರಿ ಜಾಗೆಯನ್ನು ಅಕ್ರಮವಾಗಿ ಕಬಳಿಕೆ ಮಾಡಿಕೊಂಡು ಅಲ್ಲಿದ್ದ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಇಂಗಳೇಶ್ವರ ರಸ್ತೆಯಲ್ಲಿರುವ ನಾಗಾವಿ ಯಲ್ಲಮ್ಮದೇವಿ ಜಾತ್ರಾಮಹೋತ್ಸವ ಬುಧವಾರ ಸಂಭ್ರಮ, ಸಡಗರದಿಂದ ಜರುಗಿತು. ಜಾತ್ರೆಯಂಗವಾಗಿ ಪಲ್ಲಕ್ಕಿ ಉತ್ಸವದ ಮೆರವಣಿಗೆಯು ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿವಿಧೆಡೆಗಳಿಂದ ಆಗಮಿಸಿದ್ದ ತಾಯಿಜೋಗಮ್ಮರ ಕುಣಿತ, ವಿವಿಧ ವಾದ್ಯ ಮೇಳದೊಂದಿಗೆ ಸಂಭ್ರಮದಿಂದ ಜರುಗಿತು.ನಾಗಾವಿ ಯಲ್ಲಮ್ಮ ದೇವಸ್ಥಾನದಿಂದ ಐದು ಕಳಸ ಹಾಗೂ ಪಲ್ಲಕ್ಕಿ ಉತ್ಸವವು ಪಟ್ಟಣದ ಬಸವೇಶ್ವರ ವೃತ್ತ, ಅಗಸಿ, ಮಹಾರಾಜರ ಮಠದ ಮಾರ್ಗ, ಬಸವಜನ್ಮ ಸ್ಮಾರಕ ಮಾರ್ಗ, ವಿಜಯಪುರ ಮಾರ್ಗವಾಗಿ ಪುನಃ ಬಸವೇಶ್ವರ ವೃತ್ತಕ್ಕೆ ಬಂದು ಬಸವೇಶ್ವರ ದೇವಸ್ಥಾನದ ಬಸವತೀರ್ಥ ಭಾವಿಗೆ ಆಗಮಿಸಿದ ನಂತರ ಗಂಗಾಸ್ಥಳ ಮಾಡಿಕೊಂಡ ನಂತರ ಡೊಳ್ಳು, ಚೌಡಕಿ ಸೇರಿದಂತೆ ಸುಮಂಗಲೆಯರ ಆರತಿಯೊಂದಿಗೆ ಬಸವೇಶ್ವರ ವೃತ್ತದ ಮಾರ್ಗವಾಗಿ ಇಂಗಳೇಶ್ವರ ರಸ್ತೆಯಲ್ಲಿರುವ ಯಲ್ಲಮ್ಮದೇವಿ ದೇವಸ್ಥಾನಕ್ಕೆ ಕಳಸಗಳು, ನಾಗಾವಿ ಯಲ್ಲಮ್ಮದೇವಿ ಪಲ್ಲಕ್ಕಿ ಉತ್ಸವ ತಲುಪಿತು. ಕಳಸಗಳಿಗೆ ಪೂಜೆ ನೆರವೇರಿಸಿದ ನಂತರ ದೇವಸ್ಥಾನಕ್ಕೆ ಕಳಸಗಳನ್ನು ಏರಿಸಲಾಯಿತು. ದೇವಸ್ಥಾನದಲ್ಲಿ ವಿಶೇಷ ಪೂಜೆ ಜರುಗಿತು.ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.ಪಲ್ಲಕ್ಕಿ ಉತ್ಸವದ ಮೆರವಣಿಗೆಯಲ್ಲಿ ಜೋಗಮ್ಮರಾದ ಲಕ್ಷ್ಮೀ ಬಾಗೇವಾಡಿ, ಶರಣವ್ವ ಇಂಗಳೇಶ್ವರ,…
ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಸಮೀಪದ ಸುಕ್ಷೇತ್ರ ಯಲಗೂರದ ದೇವಸ್ಥಾನದಲ್ಲಿ ಸಡಗರದಿಂದ ಬುಧವಾರ ಹನುಮ ಜಯಂತಿ ಆಚರಿಸಲಾಯಿತು.ಬೆಳಗ್ಗೆ ಉತ್ಸವ ಮೂರ್ತಿಯನ್ನು ನೂರಾರು ಭಕ್ತರು ಸಕಲ ವಾದ್ಯಗಳೊಂದಿಗೆ ಕೃಷ್ಣಾ ನದಿಗೆ ತೆರಳಿ ಗಂಗಾಪೂಜೆ ಸಲ್ಲಿಸಿ ನಂತರ ದೇವಸ್ಥಾನಕ್ಕೆ ತರಲಾಯಿತು. ಮೂರ್ತಿಯನ್ನು ತೊಟ್ಟಿಲಲ್ಲಿ ಹಾಕಲಾಯಿತು.ಯಲಗೂರೇಶನಿಗೆ ಸಾಮೂಹಿಕ ಪಂಚಾಮೃತ ಅಭಿಷೇಕ ಜರುಗಿತು.ವಿಠ್ಠಲಾಚಾರ್ಯ ಗದ್ದನಕೇರಿ ತೊಟ್ಟಿಲು ಪೂಜೆ ಹಾಗೂ ಪವಮಾನ ಹೋಮ ನೆರವೇರಿಸಿದರು.ದೇವಸ್ಥಾನ ಟ್ರಸ್ಟ್ ಕಮಿಟಿ ಅಧ್ಯಕ್ಷ ಅನಂತ ಓಂಕಾರ, ಅನ್ನದಾಸೋಹ ಸಮಿತಿ ಅಧ್ಯಕ್ಷ ಶ್ಯಾಮ ಪಾತರದ, ಗೋಪಾಲ ಗದ್ದನಕೇರಿ, ಕೃಷ್ಣ ಕಟ್ಟಿ, ಪಾಂಡುರAಗಾಚಾರ್ಯ ಹೊಸೂರ, ಸಂತೋಷ ಪೂಜಾರ, ಯಲಗೂರದಪ್ಪ ಪೂಜಾರ, ಸಂಜೀವ ಪೂಜಾರ, ಆನಂದ ಪೂಜಾರ, ಎಸ್. ಐ.ಡೆಂಗಿ ಮತ್ತೀತರರು ಇದ್ದರು.ಚೆನ್ನಿಗಾವಿ ಬಂಧುಗಳು ಅನ್ನಪ್ರಸಾದದ ವ್ಯವಸ್ಥೆ ಮಾಡಿದ್ದರು.ಹನುಮ ಜಯಂತಿ ಅಂಗವಾಗಿ ೧೦೦೦ ಮಾವಿನ ಹಣ್ಣುಗಳಿಂದ ಹನುಮನಿಗೆ ಅಲಂಕಾರ ಮಾಡಲಾಗಿತ್ತು.
