Author: editor.udayarashmi@gmail.com

ವಿಜಯಪುರ: ಜಿಲ್ಲೆಯ ತಿಕೋಟಾ ತಾಲೂಕಿನಲ್ಲಿ ಬಬಲೇಶ್ವರ ಮಂಡಲದ ಕಾರ್ಯಕಾರಿಣಿ ಸಭೆ ಜರುಗಿತು.ಈ ಸಂಧರ್ಭದಲ್ಲಿ ಮಂಡಲದ ಅಧ್ಯಕ್ಷ ಸಂತೋಷ ಕುರದಡ್ಡಿ, ಮತಕ್ಷೇತ್ರದ ಜನನಾಯಕ ವಿಜುಗೌಡ ಎಸ್.ಪಾಟೀಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಾಬು ಮಾಶ್ಯಳ, ಈರಣ್ಣ ರಾವುರ, ಜಿಲ್ಲಾ ಉಪಾಧ್ಯಕ್ಷರಾದ ಉಮೇಶ ಕೊಳಕೂರ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾದ ಗುರಲಿಂಗಪ್ಪ ಅಂಗಡಿ, ನಿಕಟಪೂರ್ವ ಅಧ್ಯಕ್ಷರಾದ ವಿಠ್ಠಲ ಕಿರಸುರ, ನಿಕಟಪೂರ್ವ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ಬಿರಾದಾರ, ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಈರಣ್ಣ ಶಿರಮಗೊಂಡ, ವಿನಾಯಕ ಮಮದಾಪುರ, ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷರಾದ ಶರಣವ್ವ ಉಪ್ಪಾರ, ತಿಕೋಟ ಪಟ್ಟಣದ ಸಮಸ್ತ ಹಿರಿಯರು, ಮಂಡಲದ ಸಮಸ್ತ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Read More

ಢವಳಗಿ: ವಿಜಯಪುರದ ಪೋಲೀಸ್ ಸಮುದಾಯ ಭವನದಲ್ಲಿ ಜು.28 ರಂದು ನಡೆದ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಂಡ ಪತ್ರಿಕಾ ದಿನಾಚರಣೆ, ಸಾಧಕರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮುದ್ದೇಬಿಹಾಳ ತಾಲ್ಲೂಕಿನ ಢವಳಗಿ ಗ್ರಾಮದ ವರದಿಗಾರ ಜಿ.ಎನ್. ಬೀರಗೊಂಡ(ಮುತ್ತು), ಹಾಗೂ ಡೈಲಿ ಸಾಲಾರ್ ಪತ್ರಿಕೆಯ ತಾಲ್ಲೂಕು ವರದಿಗಾರ ಲಾಡ್ಲೆಮಶ್ಯಾಕ ನದಾಪ್ ಅವರನ್ನು ಸೇರಿದಂತೆ ಒಟ್ಟು 31 ಜನ ಪತ್ರಕರ್ತರನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ, ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಕಾನಿಪ ಸಂಘದ ರಾಜ್ಯಾಧ್ಯಕ್ಷ ಶಿವನಂದ ತಗಡೂರ, ಹಾಗೂ ಮಾಧ್ಯಮ ಸಲಹೆಗಾರ ಕೆ ವಿ ಪ್ರಭಾಕರ್, ಜಿಲ್ಲಾಧಿಕಾರಿ ಟಿ ಭೂಬಲಾನ್, ಎಸ್ಪಿ ಋಷಿಕೇಶ ಸೋನಾವಣೆ, ಕಾನಿಪ ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಚೂರಿ, ಜಿಲ್ಲಾ ಉಪಾಧ್ಯಕ್ಷ ಇಂದುಶೇಖರ ಮಣೂರ ಸೇರಿದಂತೆ ಹಲವು ಗಣ್ಯರು ಸೇರಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.

Read More

ಚಡಚಣ: ಉಮರಜ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಗುರು ಮುಕುಂದ ಅಡಕೆಯವರಿಗೆ ‘ಕನಕ ಅಧ್ಯಯನ ಪೀಠ, ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಹಾಗೂ ಚೇತನ ಫೌಡೇಶನ್ ಇವರುಗಳ ಸಂಯುಕ್ತಾಶ್ರಯದಲ್ಲಿ ಕೊಡಮಾಡಿಲ್ಪಡುವ “ಶಿಕ್ಷಕರತ್ನ ರಾಜ್ಯ ಪ್ರಶಸ್ತಿ” ನೀಡಿ ಗೌರವಿಸಲಾಗಿದೆ.ಸಾವಿರಾರು ವಿದ್ಯಾರ್ಥಿಗಳ ಬಾಳಿಗೆ ಬೆಳಕಾಗಿರುವ ಇವರ ಶಿಕ್ಷಣ ಕ್ಷೇತ್ರದ ಸೇವೆಯನ್ನು ಪರಿಗಣಿಸಿ, ಶಿಕ್ಷಕರತ್ನ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಪ್ರಶಸ್ತಿ ಪಡೆದ ಇವರಿಗೆ ಉಮರಜ ಹಾಗೂ ರೇವತಗಾಂವದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಮುಖ್ಯ ಗುರುಗಳು, ಸಹ ಶಿಕ್ಷಕ ಸಿಬ್ಬಂದಿ ವರ್ಗ, ಎಸ್‌ಡಿಎಂಸಿ ಅಧ್ಯಕ್ಷರು ಮತ್ತು ಸರ್ವ ಸದಸ್ಯರು, ಗ್ರಾಮಸ್ಥರು ಸೇರಿದಂತೆ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

Read More

ಚಿಮ್ಮಡ: ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿ ತಮ್ಮದೇ ಆದ ಸಾಮರ್ಥ್ಯವಿರುತ್ತದೆ. ಬೇರೆ ವಿದ್ಯಾರ್ಥಿಗಳಿಗಿಂತ ತಾನು ಕಡಿಮೆ ಎಂಬ ಕೀಳರಿಮೆಯನ್ನು ಕಿತ್ತೆಸೆದು ಮುನ್ನುಗ್ಗಬೇಕೆಂದು ಕೊಣ್ಣೂರ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಪ್ರೋ. ಬಸವರಾಜ ಕೊಣ್ಣೂರ ಹೇಳಿದರು.ಗ್ರಾಮದ ಸರಕಾರಿ ಪದವಿಪೂರ್ವ ವಿದ್ಯಾಲಯದಲ್ಲಿ ಶನಿವಾರದಂದು ಹಮ್ಮಿಕೊಂಡಿದ್ದ ಪ್ರಥಮ ಪಿಯೂ ವಿದ್ಯಾರ್ಥಿಗಳ ಸ್ವಾಗತ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅಥಿತಿಗಳಾಗಿ ಆಗಮಿಸಿ ಮಾತನಾಡಿದ ಅವರು ಓದುವ ಸಮಯದಲ್ಲಿ ತಮ್ಮ ಗಮನವನ್ನು ಬೇರೆಡೆ ತಿರುಗಿಸದೆ ನೇರ ಗುರಿಯೊಂದಿಗೆ ಸತತ ಅಧ್ಯಯನ ಮಾಡಿದಲ್ಲಿ ಜೀವನದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಸಾಧನೆ ಮಾಡಬಹುದು, ಉತ್ತಮ ಮನೋಭಾವ, ಒಳ್ಳೆಯ ನಡುವಳಿಕೆಯಿಂದ ತಂದೆ ತಾಯಿಯರಿಗೆ ವಿಧೇಯರಾಗಿ ಅದ್ಯಯನ ಮಾಡಿದಲ್ಲಿ ಬುದ್ದಿಮತ್ತೆ ವೃದ್ದಿಸುತ್ತದೆ ಎಂದ ಅವರು, ಪ್ರತಿಯೊಂದು ಕಾರ್ಯವನ್ನು ಅಚ್ಚುಕಟ್ಟುತನದಿಂದ ಮಾಡಿದಲ್ಲಿ ಒಳ್ಳೆ ಫಲ ದೊರೆಯಲಿದೆ ಎಂದರು.ವಿದ್ಯಾಲಯದ ಪ್ರಾಚಾರ್ಯ ಶರತ್ಚಂದ್ರ ಜಂಬಗಿ ಮಾತನಾಡಿ, ಗ್ರಾಮಸ್ಥರ, ಕಾಲೇಜು ಅಭಿವೃದ್ದಿ ಸಮೀತಿಯ ಸಹಕಾರದಿಂದ ಹಲವಾರು ಕೊರತೆಗಳ ನಡುವೆಯೂ ವಿದ್ಯಾಲಯ ಪ್ರಸಕ್ತ ಸಾಲಿನ ಫಲಿತಾಂಶ ಶೇ. ೧೦೦ ಸಾಧನೆ ಮಾಡಿದ್ದು ಗ್ರಾಮಕ್ಕೆ ಹೆಮ್ಮಯ…

Read More

ಕಲಕೇರಿ: ಆದರ್ಶ ಶಿಕ್ಷಣ ಸಂಸ್ಥೆ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಕಲಕೇರಿಯ ಸಂಯುಕ್ತ ಆಶ್ರಯದಲ್ಲಿ ಹದಿಹರೆಯದ ಆರೋಗ್ಯ ಶಿಕ್ಷಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಈ ಕಾರ್ಯಕ್ರಮದಲ್ಲಿ ಘನ ಅಧ್ಯಕ್ಷತೆಯನ್ನು ಎಸ್ ಎಂ ಸಜ್ಜನ ಪ್ರಾಚಾರ್ಯರು ಪದವಿ ಮಹಾವಿದ್ಯಾಲಯ ಇವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಎಂಡಿ ಮೋತಿಬಾಯಿ ಡಾ. ಸಂತೋಷ ಟೆಂಗಳಿ, ಅಪ್ಪಸಾಬ ಮಾಂಗ, ಫಾರೂಕ್ ವಲ್ಲಿಬಾಯಿ, ಶ್ರೀಮತಿ ರೇಷ್ಮಾ ಮುಜಾವರ, ಹೆಚ್.ಎ. ಮೊಮೀನ ವಹಿಸಿದ್ದರು.ಈ ಸಂದರ್ಭದಲ್ಲಿ ಸಸಿಗೆ ನೀರು ಉಣಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು.ಈ ಸಂದರ್ಭದಲ್ಲಿ ಐ. ಸಿ. ಟಿ. ಸಿ ಆಪ್ತಸಮಾಲೋಚಕ ಡಾ. ಸಂತೋಷ ಟೆಂಗಳಿ ಮಾತನಾಡಿ, ಮಹಾಮಾರಿ ರೋಗದ ಕುರಿತು ಅದು ಹರಡುವ ವಿಧಾನ ಸರ್ಕಾರದಿಂದ ಸಿಗುವ ಸೌಲಭ್ಯಗಳು ಹಾಗೂ ಯುವ ಜನತೆ ಅದರಿಂದ ಯಾವ ರೀತಿ ದೂರ ಇರಬೇಕು ಎಂಬುದರ ಬಗ್ಗೆ ಹಾಗೂ ಲೈಂಗಿಕ ರೋಗದ ಸೋಂಕುಗಳ ಬಗ್ಗೆ ವಿವರಿಸಿದರು.ಆರ್ ಕೆ ಎಸ್ ಕೆ ಆಪ್ತ ಸಮಾಲೋಚಕ ಅಪ್ಪಾಸಾಬ ಮಾಂಗ ಮಾತನಾಡಿ, ಹದಿಹರೆಯದಲ್ಲಿ ಆಗುವ ದೈಹಿಕ ಮಾನಸಿಕ ಬದಲಾವಣೆಗಳು ಹಾಗೂ…

Read More

ಮುದ್ದೇಬಿಹಾಳ: ರಾಯಲ್ಟಿ ಇಲ್ಲದೇ ಅಕ್ರಮವಾಗಿ ಮರಳು ತುಂಬಿಕೊಂಡು ಹೊರಡಿದ್ದ ಟಿಪ್ಪರವೊಂದನ್ನು ಇಲ್ಲಿನ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.ಹುನಗುಂದ ದಿಂದ ಮುದ್ದೇಬಿಹಾಳ ಮಾರ್ಗವಾಗಿ ಹೊರಟಿದ್ದ ಟಿಪ್ಪರನ್ನು ವಿಚಾರಿಸಲಾಗಿ ಯಾವುದೇ ರಾಯಲ್ಟಿ ಇಲ್ಲದಿರುವದು ಖಚಿತವಾಗಿದ್ದು ಟಿಪ್ಪರಿನ ಮಾಲೀಕ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ರೇವಡಿಹಾಳ ಗ್ರಾಮದ ವಿಜುಗೌಡ ಗೌಡರ ಮತ್ತು ಚಾಲಕ ಹುನಗುಂದ ತಾಲೂಕಿನ ಬೇಕಮಲದಿನ್ನಿ ಗ್ರಾಮದ ಶರಣಪ್ಪ ಗುದಗಿ ಇವರ ಮೇಲೆ ಇಲ್ಲಿನ ಪಿಎಸ್‌ಐ ಸಂಜಯ ತಿಪರೆಡ್ಡಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ.

Read More

ವಿಜಯಪುರ: ವಿದ್ಯಾರ್ಥಿಗಳು ಯಾವುದನ್ನು ಸುಲಭವಾಗಿ ಒಪ್ಪದೇ ವಿವೇಚನಾ ಶಕ್ತಿಯನ್ನು ಬಳಸಿಕೊಂಡು ವಿಷಯವನ್ನು ಅರ್ಥಮಾಡಿಕೊಳ್ಳುವ ಆತ್ಮವಿಶ್ವಾಸ ಇದ್ದರೆ ಗುರಿ ತಲುಪಲು ಸಾಧ್ಯವಾಗುತ್ತದೆ ಎಂದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ವಿಶ್ರಾಂತ ಉಪನಿರ್ದೇಶಕ ಎಸ್. ವಾಯ್ ಹಳಿಂಗಳಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು.ಇತ್ತಿಚಿಗೆ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಡೆದ ಜಿಲ್ಲಾ ತಳವಾರ ಸಮಾಜ ಹಾಗೂ ಜ್ಞಾನ ಗಂಗಾ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ನಡೆದ ೬ನೇ ವರ್ಷದ ಪ್ರತಿಭಾ ಪುರಸ್ಕಾರ ನಿಮಿತ್ತ ಎಸ್.ಎಸ್.ಎಲ್.ಸಿ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸೇವಾ ನಿವೃತ್ತ ನೌಕರರ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಮನಸ್ಸಿದ್ದರೇ ಮಾರ್ಗ ಎಂಬಂತೆ ಯಾವುದೆ ಗುರಿ ಸಾಧಿಸುವ ಛಲ ಹೊಂದಿರಬೇಕು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಎಂತಹದೇ ಕಠಿಣ ಸವಾಲು ಎದುರಾದರೆ ಅದನ್ನು ಬಗೆಹರಿಸುವ ಮನೋಭಾವ ತಿಂಬಿರಬೇಕು. ಪಾಲಕರು ತಮ್ಮ ಮಕ್ಕಳಿಗೆ ಉತ್ತಮ ಸಂಸ್ಕಾರ, ಶಿಕ್ಷಣ, ಹಿರಿಯರಿಗೆ ಗೌರವಿಸುವುದನ್ನು ಪ್ರಾಥಮಿಕ ಹಂತದಿಂದಲೇ ಕಲಿಸುವುದು ಸೂಕ್ತ ಎಂದರು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಜ್ಞಾನ…

Read More

ಇಂಡಿ: ಗಾಂಧೀಜಿಯವರ ಹಿರಿಮೆ – ಗರಿಮೆಗಳಿಗೆ ನೈತಿಕತೆಯಿಂದ ಕೂಡಿದ ಅವರ ಪವಿತ್ರಮಯ ಜೀವನವೇ ಕಾರಣ. ದೇಶದ ಸ್ವಾತಂತ್ರ‍್ಯ ಸಂಗ್ರಾಮದಲ್ಲಿ ಅವರ ಪಾತ್ರ ಅದ್ವಿತೀಯವಾದುದು ಎಂದು ವಿಜಯಪುರದ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ಎಂ.ಬಿ. ರಜಪೂತ್ ಹೇಳಿದರು.ತಾಲೂಕಿನ ಚವಡಿಹಾಳ ಗ್ರಾಮದ ಶ್ರೀ ಭಾಗ್ಯವಂತಿ ಪದವಿ ಪೂರ್ವ ಕಾಲೇಜನಲ್ಲಿ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಬೆಂಗಳೂರು, ರಾಷ್ಟ್ರೀಯ ಸೇವಾ ಯೋಜನೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ರಾಜ್ಯ ಸರ್ಕಾರ, ರಾಷ್ಟçಪಿತ ಮಹಾತ್ಮ ಗಾಂಧಿ ಫೌಂಡೇಶನ್ ಬೇನಾಲ್ ಆರ್. ಎಸ್ ಇವರ ಸಹಯೋಗದಲ್ಲಿ ಜರುಗಿದ ರಾಷ್ಟçಪಿತ ಮಹಾತ್ಮ ಗಾಂಧೀಜಿ ಮತ್ತು ಯುವ ಮನಸುಗಳು ‘ವಿಷಯ ಕುರಿತು ರಾಜ್ಯ ಮಟ್ಟದ ವಿಶೇಷ ಉಪನ್ಯಾಸ ಕಾರ್ಯಕ್ರಮ, ರಸಪ್ರಶ್ನೆ ಹಾಗೂ ಸಂವಾದ ಕುರಿತು ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.ವಿಜಯಪುರದ ಇತಿಹಾಸ ಉಪನ್ಯಾಸಕ ಆರ್. ಸಿ. ಹಿರೇಮಠ ಮಾತನಾಡಿ, ಮಹಾತ್ಮ ಗಾಂಧೀಜಿಯವರು ಒಬ್ಬ ವ್ಯಕ್ತಿಯಲ್ಲ ಅವರೊಂದು ಶಕ್ತಿ ತಮ್ಮ ಸದ್ಭಾವನ, ದೂರದೃಷ್ಟಿ,ಮಾನವೀಯತೆಯ ಮಹಾರೂಪವೇ ಮೈದಳೆದ…

Read More

ವಿಜಯಪುರ: ಚಿಕ್ಕಬಳ್ಳಾಪೂರ ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ ವತಿಯಿಂದ ಕೊಡುವ 2024 ರ ರಾಜ್ಯಮಟ್ಟದ ಹಸಿರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿಗೆ ತಿಕೋಟಾ ತಾಲ್ಲೂಕಿನ ಟಕ್ಕಳಕಿ ಕರ್ಫೆವಸ್ತಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಬಬಲೇಶ್ವರ ತಾಲ್ಲೂಕಿನ ಕೆಂಗಲಗುತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆಯ್ಕೆಯಾಗಿದ್ದು,ಚಿಕ್ಕಬಳ್ಳಾಪೂರದ ಸತ್ಯಸಾಯಿ ಗ್ರಾಮ ಮುದ್ದೇನಹಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರು ಪ್ರಶಸ್ತಿ ಸ್ವೀಕರಿಸಿದರು.ಪ್ರಶಸ್ತಿಯು ₹ 10 ಸಾವಿರ ನಗದು ಹಾಗೂ ಆಕರ್ಷಕ ಪಾರಿತೋಷಕ ಒಳಗೊಂಡಿದೆ.ಪ್ರಾಥಮಿಕ ಶಿಕ್ಷಣ ಸಾರ್ವತ್ರಿಕರಣ ಮಾಡಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವಂತಹ ಉತ್ತಮ ಶಾಲೆಯಾಗಿ ರೂಪಗೊಂಡು ಶಾಲಾ ಪರಿಸರವನ್ನು ಹಸರಿಕರಣ ಮಾಡಿ ಗುಣಾತ್ಮಕ ಶಿಕ್ಷಣ ಕೊಡುವ ಜೊತೆಗೆ ಸ್ವಚ್ಛ ಪರಿಸರ ನಿರ್ಮಾಣ ಮಾಡಿದ್ದಾರೆ.ಪ್ರಶಸ್ತಿ ಪಡೆದ ಶಾಲೆಗಳಿಗೆ ಬಿಇಓ ಪ್ರಮೋದಿನಿ ಬಳೋಲಮಟ್ಟಿ, ಸಿಆರ್ಪಿ ಎಂ.ಎಂ.ಜೇವೂರ, ಕೆ.ಕೆ.ಅಸ್ಕಿ, ಎಸ್ಡಿಎಂಸಿ ಅಧ್ಯಕ್ಷರು ಶುಭ ಕೋರಿದ್ದಾರೆ. ಮಾರುತಿ ಲಮಾಣಿ, ಸಿದ್ದಾರಾಮ‌ ಝಲ್ಲಿ, ಹಣಮಂತ ಕಾತರಕಿ ಇದ್ದರು.

Read More

ಬಸವನಬಾಗೇವಾಡಿ: ಪಟ್ಟಣದ ಮಿನಿವಿಧಾನಸೌಧದ ಆವರಣದಲ್ಲಿ ಮೆಗಾಮಾರುಕಟ್ಟೆಯ ಕೊಲ್ಹಾರ ಮುಖ್ಯರಸ್ತೆಯಲ್ಲಿದ್ದ ಆವರಣ ಗೋಡೆಗೆ ಹೊಂದಿಕೊಂಡು ವ್ಯಾಪಾರ ಮಾಡುತ್ತಿದ್ದ ಬೀದಿ ಬದಿ ವ್ಯಾಪಾರಸ್ಥರು ಕಳೆದ ಮೂರು ದಿನಗಳಿಂದ ಅಹೋರಾತ್ರಿ ಧರಣಿಯನ್ನು ಭಾನುವಾರ ತಡರಾತ್ರಿ ಅಽಕಾರಿಗಳು ನೀಡಿದ ಭರವಸೆ ಮೇರೆಗೆ ತಮ್ಮ ಅಹೋರಾತ್ರಿ ಧರಣಿಯನ್ನು ಹಿಂಪಡೆದುಕೊಂಡರು.ಧರಣಿ ಸ್ಥಳಕ್ಕೆ ಭಾನುವಾರ ರಾತ್ರಿ ೧೦ ಗಂಟೆ ಸುಮಾರಿಗೆ ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ, ಡಿವೈಎಸ್ಪಿ ಬಲ್ಲಪ್ಪ ನಂದಗಾವಿ, ಪಿಐ ವಿಜಯ ಮುರಗುಂಡಿ, ಪುರಸಭೆ ಮುಖ್ಯಾಧಿಕಾರಿ ಎಚ್.ಎಸ್.ಚಿತ್ತರಗಿ ಭೇಟಿ ನೀಡಿ ಪಟ್ಟಣದ ವಿವಿಧ ಸ್ಥಳಗಳಲ್ಲಿ ತಮಗೆ ವ್ಯಾಪಾರ ಮಾಡಿಕೊಳ್ಳಲು ಸ್ಥಳವಕಾಶ ನೀಡಲಾಗುವುದು ಎಂದು ಭರವಸೆ ನೀಡಿದರು. ಅಧಿಕಾರಿಗಳು ಕೆಲ ವ್ಯಾಪಾರಿಗಳಿಗೆ ರಾತ್ರಿಯೇ ಸ್ಥಳ ಸೂಚಿಸಿದ ಮೇರೆಗೆ ಧರಣಿ ನಿರತರು ತಮ್ಮ ಧರಣಿಯನ್ನು ಹಿಂಪಡೆದುಕೊಂಡರು.ಪಟ್ಟಣದಲ್ಲಿ ಸೋಮವಾರ ಸಂತೆ ದಿನ ಇರುವದರಿಂದ ಮೆಗಾಮಾರುಕಟ್ಟೆಯ ಆವರಣಗೋಡೆ ತೆರವುಗೊಳಿಸಿದ ಜಾಗೆಯಲ್ಲಿ ಕೆಲ ಬೀದಿ ವ್ಯಾಪಾಸ್ಥರು ತಮ್ಮ ವ್ಯಾಪಾರ ಮಾಡುತ್ತಿರುವದು ಕಂಡುಬಂದಿತ್ತು.ಬೀದಿ ವ್ಯಾಪಾರಸ್ಥರ ಪಟ್ಟಣ ಸಮಿತಿ ಸದಸ್ಯ ಜಾಕೀರ ನದಾಫ್ ಅವರು, ಪಟ್ಟಣದ ಮೆಗಾಮಾರುಕಟ್ಟೆಯ ಆವರಣಗೋಡೆಗೆ ಹೊಂದಿಕೊಂಡು ಬಳೆ ಅಂಗಡಿ,…

Read More