Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ದೇಹದ ಆರೋಗ್ಯಕ್ಕಿಂತ ಸಮಾಜದ ಆರೋಗ್ಯವೇ ಮುಖ್ಯ ಎಂದರಿತ ಬಂಥನಾಳ ಶ್ರೀಗಳುಶೈಕ್ಷಣಿಕ ಕ್ರಾಂತಿ ಮಾಡಿ, ಮಠಗಳ ಮೂಲಕ ರಾಷ್ಟ್ರಾಭಿಮಾನ ಹೆಚ್ಚಿಸಿದ ಧೀರ ಸನ್ಯಾಸಿಯಾಗಿದ್ದರು ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ಅವರು ನಗರದ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಯುವ ಘಟಕದ ವತಿಯಿಂದ ಪರಿಷತ್ತಿನ ಕಚೇರಿಯಲ್ಲಿ ಹಮ್ಮಿಕೊಂಡ ಬಂಥನಾಳ ಸಂಗನಬಸವ ಶಿವಯೋಗಿಗಳ ಜಯಂತಿ ಆಚರಣೆಯನ್ನು ಉದ್ದೇಶಿಸಿ ಮಾತನಾಡಿದರು.ವಿದ್ಯಾರ್ಥಿಗಳೇ ದೇವರು, ವಿದ್ಯಾಲಯವೇ ದೇವಾಲಯ ಎಂಬ ಮಂತ್ರ ಪಠಣದೊಂದಿಗೆ ಭಕ್ತರು ಕೊಟ್ಟ ಕಾಣಿಕೆಯಲ್ಲೇ ಬಡ ಮಕ್ಕಳ ಅಕ್ಷರ ದಾಹ ನೀಗಿಸಿದ ಸಂತರಿವರು. ನಾಡಿನೆಲ್ಲೆಡೆ ವಿದ್ಯಾಕೇಂದ್ರಗಳನ್ನು ಸ್ಥಾಪಿಸಿ, ಶೈಕ್ಷಣಿಕ ಕ್ರಾಂತಿ ಮಾಡಿದ ಶ್ರೀಗಳು, ಬಡ ವಿದ್ಯಾರ್ಥಿಗಳ ಬಾಳಿಗೆ ಬೆಳಕಾಗಿದ್ದರು ಎಂದು ಹೇಳಿದರು.ಶಿಕ್ಷಕ ಈರಣ್ಣ ಬಿರಾದಾರ ಮಾತನಾಡಿ, ಪ್ರವಚನದ ಮೂಲಕ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕವಾಗಿ ಹಲವು ಕಾರ್ಯಕ್ರಮಗಳ ಮೂಲಕ ಶೈಕ್ಷಣಿಕವಾಗಿ ಬರಡಾಗಿದ್ದ ವಿಜಯಪುರ ಜಿಲ್ಲೆಯನ್ನು ಶಿಕ್ಷಣದ ತವರೂರನ್ನಾಗಿಸಿದ ಕೀರ್ತಿ ಶ್ರೀಗಳಿಗೆ ಸಲ್ಲುತ್ತದೆ ಎಂದು ಹೇಳಿದರು.ಯುವ ಘಟಕದ ಅಧ್ಯಕ್ಷ ಅಮರೇಶ ಸಾಲಕ್ಕಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಕ್ಷರ ದಾಸೋಹಿ ಬಂಥನಾಳದ…
ಇಂಡಿ: ಜಿಲ್ಲೆಯಲ್ಲಿ ಶೈಕ್ಷಣಕ ಕ್ರಾಂತಿ ಮಾಡಿದ ಬಂಥನಾಳದ ಸಂಗನಬಸವ ಶ್ರೀಗಳು, ಶಿಕ್ಷಣದ ಜತೆ ಸಂಸ್ಕಾರ ನೀಡುವ ಮೂಲಕ ಜನರನ್ನು ಸುಜ್ಞಾನಿಗಳಾಗಿ ಮಾಡಿದ ಕೀರ್ತಿ ಬಂಥನಾಳ ಶ್ರೀಗಳಿಗೆ ಸಲ್ಲುತ್ತದೆ ಎಂದು ಶ್ರೀ ಸಂಗನಬಸವ ಸೌಹಾದ ಪತ್ತಿನ ಸಹಕಾರಿ ಸಂಸ್ಥೆಯ ನಿರ್ದೇಶಕ ಸಿದ್ದು ಹತ್ತಳ್ಳಿ ಹೇಳಿದರು.ಅವರು ಶನಿವಾರ ತಾಲೂಕಿನ ತಾಂಬಾ ಗ್ರಾಮದ ಸಂಗನಬಸವ ಸೌಹಾರ್ದ ಪತ್ತಿನ ಸಹಕಾರಿ ಸಂಘದ ವತಿಯಿಂದ ಸಂಗನಬಸವೇಶ್ವರ ಶ್ರೀಗಳ ೧೨೪ನೇ ಜಯಂತ್ಸೊವ ನಿಮಿತ್ಯ ಮಾತನಾಡಿ, ಜಂಗಮರ ಉದರದಲ್ಲಿ ಜನಿಸಿ ಸರಸ್ವತಿ ರೂಪ ತಾಳಿದ ಸಂಗನಬಸವ ಶಿವಯೋಗಿಗಳು ಪುರಾಣ ಪ್ರವಚನ ಕೇಳಿ ಭಕ್ತರು ನೀಡಿದ ದೇಣ ಗೆಯಲ್ಲಿ ವಿದ್ಯಾರ್ಥಿಗಳೆ ದೇವರು, ವಿದ್ಯಾಲಯಗಳೇ ದೇವಾಲಯ ಎಂದು ಶಾಲೆ ಕಾಲೇಜ್ ಕಟ್ಟುವ ಮೂಲಕ ಈ ನಾಡಿನಲ್ಲಿ ಶೈಕ್ಷಣ ಕ ಕ್ರಾಂತಿಗೈದ ಬಂಥನಾಳದ ಸಂಗನಬಸವ ಶಿವಯೋಗಿಗಳು ಎಂದು ಶ್ರೀಗಳನ್ನು ಶ್ಲಾಘಿಸಿದರು.ಕಾರ್ಯಕ್ರಮದಲ್ಲಿ ಅಡಿವಪ್ಪ ರೊಟ್ಟಿ, ಶಾಂತಪ್ಪ ಹಂಚನಾಳ, ಗೋಪಾಲ ಅವರಾದಿ, ಶಿವಪ್ಪ ಹಿಪ್ಪರಗಿ, ನಾಗರಾಜ ಚಾಳಿಕಾರ, ಶಾಖಾ ವ್ಯವಸ್ಥಾಪಕ ನಾಗೇಶ ನಿಂಬಾಳ, ಮಲ್ಲಯ್ಯ ವಿರಕ್ತಮಠ, ಶಾಂತಮಾಲ್ಲ ಖಟ್ಟೆ,…
ಸಿಂದಗಿ: ಭಾರತ ಹಲವಾರು ಯುದ್ಧಗಳನ್ನು ಗೆದ್ದಿದೆ. ಆದರೆ ಕಾರ್ಗಿಲ್ ಯುದ್ಧ ಐದಾರು ಸಾವಿರ ಅಡಿ ಎತ್ತರದ ಮೊನಚಾದ ಬೆಟ್ಟ ಗುಡ್ಡಗಳ ಕಠಿಣ ಶೀತ ಪ್ರದೇಶದಲ್ಲಿ ನಡೆದಿದೆ. ಆದ್ದರಿಂದ ಕಾರ್ಗಿಲ್ ವಿಜಯೋತ್ಸವ ಭಾರತೀಯರ ಹೆಮ್ಮೆಯ ಪ್ರತೀಕವಾಗಿದೆ ಎಂದು ಬಿಜೆಪಿ ಮಂಡಲ ಕೋಶಾಧ್ಯಕ್ಷ ಶ್ರೀಶೈಲಗೌಡ ಬಿರಾದಾರ ಮಾಗಣಗೇರಿ ಹೇಳಿದರು.ಶುಕ್ರವಾರ ಸಾಯಂಕಾಲ ಬಿಜೆಪಿ ಮಂಡಲದ ವತಿಯಿಂದ ಹಮ್ಮಿಕೊಂಡ ಕಾರ್ಗಿಲ್ ರ್ಯಾಲಿಗೆ ಸಂಗಮೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಚಾಲನೆ ನೀಡಿದರು. ಅಲ್ಲಿಂದ ಸ್ವಾಮಿ ವಿವೇಕಾನಂದ ವೃತ್ತದಲ್ಲಿ ಪೂರ್ಣಗೊಂಡಿತು. ಕಾರ್ಗಿಲ್ ಯುದ್ಧದಲ್ಲಿ ಪಾಲ್ಗೊಂಡ ಯೋಧರ ತ್ಯಾಗ, ಶೌರ್ಯ ಸ್ಮರಿಸಲಾಯಿತು. ಹುತಾತ್ಮ ಯೋಧರಿಗೆ ಸ್ವಾಮಿ ವಿವೇಕಾನಂದ ವೃತ್ತದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.ಇದೇ ಸಂದರ್ಭದಲ್ಲಿ ಬಿಜೆಪಿ ಮಂಡಲ ಕೋಶಾಧ್ಯಕ್ಷ ಶ್ರೀಶೈಲಗೌಡ ಬಿರಾದಾರ ಮಾಗಣಗೇರಿ ಕಾರ್ಗಿಲ್ ವಿಜಯೋತ್ಸವ ಸಂಭ್ರಮಾಚರಣೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾಕಿಸ್ತಾನ ಸೈನಿಕರ ಹುಟ್ಟಡಗಿಸಿ ಭಾರತೀಯ ಸೈನ್ಯ ವಿಜಯ ಪತಾಕೆ ಹಾರಿಸಿದ ದಿನ. ಆ ರೋಚಕ ಕ್ಷಣದ ನೆನಪಿಗಾಗಿ ಕಾರ್ಗಿಲ್ ವಿಜಯ ದಿವಸ ಆಚರಿಸಲಾಗುವುದು ಎಂದರು.ಈ ವೇಳೆ ಮಂಡಲ ತಾಲೂಕಾಧ್ಯಕ್ಷ ಸಂತೋಷ ಪಾಟೀಲ…
ಬಂಜಾರಾ ಪ್ರೌಢ ಶಾಲೆಯಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಪಾಲಕರ ಸಭೆ ವಿಜಯಪುರ: ಶಿಕ್ಷಣ ಮತ್ತು ಭೌತಿಕ ಸಂಪತ್ತುಗಳನ್ನು ಪಡೆಯುವುದರ ಜತೆಯಲ್ಲಿ ಸಂಸ್ಕಾರ, ಸಂಸ್ಕೃತಿಗಳ ಮೌಲ್ಯಗಳನ್ನು ಅರಿತು ಜೀವನದಲ್ಲಿ ರೂಢಿಸಲು ಪ್ರಯತ್ನಿಸಿದಲ್ಲಿ ಜೀವನ ಪರಮ ಪಾವನವಾಗುತ್ತದೆ ಎಂದು ಜಿಲ್ಲಾ ಬಂಜಾರಾ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಿ.ಎಲ್.ಚವ್ಹಾಣ್ರವರು ಹೇಳಿದರು.ಶನಿವಾರದಂದು ಬಂಜಾರಾ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ‘ಪಾಲಕರ ಸಭೆ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು. ಪೋಷಕರು ತಮ್ಮ ಮಕ್ಕಳ ಅಂಕ, ರ್ಯಾಂಕ್, ಸ್ಥಾನಮಾನ, ಬಿರುದು ಸನ್ಮಾನಗಳ ಕಡೆಗೆ ತಮ್ಮ ಶ್ರದ್ಧೆಯನ್ನು ಕೇಂದ್ರೀಕರಿಸಿ ಒತ್ತಡದ ಬದುಕಿಗೆ ಅವರನ್ನು ತಳ್ಳಿ ಬಿಡುತ್ತಾರೆ. ಶಿಕ್ಷಣ ಸ್ಥಾನಮಾನಗಳ ಜತೆಯಲ್ಲೇ ಮೌಲ್ಯಯುತ ಸಂಸ್ಕಾರಗಳನ್ನು ರೂಢಿಸಲು ಕಲಿಸಿದಲ್ಲಿ ಮಕ್ಕಳಲ್ಲಿ ವ್ಯಕ್ತಿತ್ವದ ಹೊಳಪು ಕಾಣಬಹುದು ಎಂದು ಹೇಳಿದರು.ಶಾಲೆಯ ಮುಖ್ಯ ಗುರು ಇ.ಡಿ.ಲಮಾಣಿಯವರು ಮಾತನಾಡುತ್ತ, ಮಕ್ಕಳ ಸರ್ವತೋಮುಖ ವಿಕಾಸದಲ್ಲಿ ಶಾಲೆ ಮತ್ತು ಶಿಕ್ಷಕರಷ್ಟೇ ಪಾತ್ರ ಕುಟುಂಬ ಹಾಗೂ ಪಾಲಕರದ್ದು ಎಂಬುದು ಮರೆಯಬಾರದು. ಮಕ್ಕಳ ಶೈಕ್ಷಣಿಕತೆಗೆ ಸಂಬಂಧಿಸಿದ ಅವರ ಸಂದೇಹಗಳನ್ನು ಪರಿಹರಿಸಿಕೊಳ್ಳಬೇಕು. ತಿಂಗಳಿಗೊಮ್ಮೆ ಪೋಷಕರ ಸಭೆಯನ್ನು…
ವಿಜಯಪುರ: ನೀರು ಅತ್ಯಮೂಲ್ಯ ಸಂಪತ್ತು. ಅದರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ. ನದಿ, ಕೆರೆ, ಬಾವಿಯ ನೀರನ್ನು ಸಂರಕ್ಷಿಸುವ ಜತೆಗೆ ಮಳೆ ನೀರು ಕೊಯ್ಲು ಮೂಲಕ ಮಳೆ ನೀರನ್ನು ಸಂಗ್ರಹಿಸುವ ಪ್ರಯತ್ನ ಮಾಡಬೇಕು ಎಂದು ಬಂಜಾರಾ ಪ್ರೌಢ ಶಾಲೆಯ ಮುಖ್ಯ ಗುರುಗಳಾದ ಇ.ಡಿ.ಲಮಾಣಿಯವರು ಹೇಳಿದರು.ಶನಿವಾರದಂದು ಬಂಜಾರಾ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ‘ಜಲಧೂತ ಜಾಗೃತಿ ಅಭಿಯಾನ’ದ ಜಾಥಾಕ್ಕೆ ಜಾಲನೆ ನೀಡಿ ಮಾತನಾಡಿದ ಅವರು, ಜಲ ಮರುಪೂರಣ ವ್ಯವಸ್ಥೆ, ಬಾವಿ, ಕೆರೆ, ಕಟ್ಟೆಗಳ ಹೂಳೆತ್ತುವುದು, ಬಾಂದಾರಾ, ಇಂಗು ಗುಂಡಿಗಳ ನಿರ್ಮಾಣದಂತಹ ಕ್ರಮಗಳಿಂದ ಅಮೂಲ್ಯ ಸಂಪತ್ತಾದ ನೀರನ್ನು ಸಂರಕ್ಷಿಸಬೇಕು ಮತ್ತು ಅದರ ಸದ್ಬಳಕೆ ಹೊಣೆ ನಮ್ಮೆಲ್ಲರ ಮೇಲಿದೆ ಎಂದು ಹೇಳಿದರು.ಪ್ರಾಥಮಿಕ ಶಾಲೆಯ ಮುಖ್ಯ ಗುರು ಎಂ.ಬಿ.ಪೂಜಾರಿಯವರು ಮಾತನಾಡುತ್ತ. ನೀರಿನ ನಾಳೆಯ ಅಭಾವ ತಪ್ಪಿಸಲು ಅತ್ಯಮೂಲ್ಯವಾದ ನೀರನ್ನು ಅಗತ್ಯಕ್ಕೆ ತಕ್ಕಂತೆ ಮಿತವಾಗಿ ಬಳಸಿ, ಮುಂಬರುವ ಪೀಳಿಗೆಗೆ ಉಳಿಸುವ ನಿಟ್ಟಿನಲ್ಲಿ ನಾವೆಲ್ಲರೂ ಕಾರ್ಯತತ್ಪರರಾಗಬೇಕಿದೆ. ಮಾನವ ವೈಜ್ಞಾನಿಕವಾಗಿ ಬೆಳೆದರೂ ಸಹಿತ ನೀರನ್ನು ಸೃಷ್ಟಿಸುವ ತಂತ್ರಜ್ಞಾನದ ಅವಿಷ್ಕಾರ ಮಾಡಿಲ್ಲ.…
ಇಂಡಿ: ಕೃಷಿ ಮೇಳ, ಜಾತ್ರೆಗಳು ರೈತರಿಗೆ ಅತ್ಯಂತ ಉಪಯೋಗಕಾರಿ, ಅಂತಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ರೈತರು ಸದುಪಯೋಗ ಮಾಡಿಕೊಳ್ಳಬೇಕು ಎಂದು ಕಂದಾಯ ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ ಹೇಳಿದರು.ಶನಿವಾರ ತಾಲೂಕು ಆಡಳಿತ ಸೌಧದ ಆವರಣದಲ್ಲಿ ತೋಟಗಾರಿಕೆ ಹಾಗೂ ಎಸ್ ಡಬ್ಲ್ಯೂ ಎ ಆರ್ ಡಿ ಎಸ್ ಸಂಸ್ಥೆ ಸಹಯೋಗದೊಂದಿಗೆ “ಪರಂಪರಾಗತ ಕೃಷಿ ವಿಕಾಸ ಯೋಜನೆ ಅಡಿಯಲ್ಲಿ ಲಿಂಬೆ ಬೆಳೆಗಾರರಿಗೆ ಕೃಷಿ ಮೇಳ ಪ್ರವಾಸ ವಾಹನಗಳಿಗೆ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು.ಕೃಷಿಕರು ಸುಸ್ಥಿರ ಮತ್ತು ಸಾವಯವ ಬೇಸಾಯದ ಬಗ್ಗೆ ಮಾಹಿತಿ ಪಡೆಯಬೇಕು. ಕೃಷಿ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ, ಕೃಷಿ ವೈಜ್ಞಾನಿಕ ಪದ್ದತಿಗಳ ಬಗ್ಗೆ ಅರ್ಥಮಾಡಿಕೊಳ್ಳಲು ಅತ್ಯಂತ ಸೂಕ್ತ ವೇದಿಕೆ ಕೃಷಿಮೇಳ ಹಾಗೂ ಕೃಷಿ ಜಾತ್ರೆ ಎಂದು ಹೇಳಿದರು. ಕೃಷಿಯಲ್ಲಿ ವೈಜ್ಞಾನಿಕ ಪದ್ದತಿ ಅಳವಡಿಕೊಂಡಾಗ ಮಾತ್ರ ರೈತರು ಒಳ್ಳೆಯ ಫಸಲು ಪಡೆಯಲು ಸಾಧ್ಯೆ, ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ ಎಂದು ಹೇಳಿದರು.ಇದೆ ಸಂದರ್ಭದಲ್ಲಿ ತೋಟಗಾರಿಕೆ ಹಿರಿಯ ಸಹಾಯಕ ನಿರ್ಧೇಶಕ ಎಚ್ ಎಸ್ ಪಾಟೀಲ…
ಪುಲಿಯನ್ ಸಾಮ್ರಾಜ್ಯ ಪಾಕ್ಷಿಕ ಪತ್ರಿಕೆ ದಶಮಾನೋತ್ಸವ ಕಾರ್ಯಕ್ರಮ ಆಲಮೇಲ: ನಮ್ಮ ಪುಲಿಯನ್ ಸಾಮ್ರಾಜ್ಯ ಪಾಕ್ಷಿಕ ಪತ್ರಿಕೆ ೨೦೧೩ ರಲ್ಲಿ ಪ್ರಾರಂಭಗೊಂಡು ೨೦೨೩-೨೪ ಕ್ಕೆ ೧೦ ವರ್ಷ ಪೂರೈಸುತ್ತಿದೆ. ಕಾರಣ ಆಲಮೇಲದಲ್ಲಿ ದಶಮಾನೋತ್ಸವ ಕಾರ್ಯಕ್ರಮ ಆಯೋಜಿಸಲು ಉದ್ದೇಶಿಸಲಾಗಿದೆ ಎಂದು ಸಂಪಾದಕ ಪ್ರಕಾಶ ಮಾಡ್ಯಾಳ ತಿಳಿಸಿದ್ದಾರೆ.ಮುಖ್ಯ ವೇದಿಕೆಯಲ್ಲಿ ೫೦೦ ಜನ ಸಾಧಕರಿಗೆ ಸನ್ಮಾನ, ಕವಿಗೋಷ್ಠಿ, ಉಪನ್ಯಾಸ, ೧೦೦೦ ಪುಟಗಳ ಸ್ಮರಣ ಸಂಚಿಕೆ, ಪದಗ್ರಹಣಮುಂತಾದ ಕಾರ್ಯಕ್ರಮ ಇದ್ದು,ಪ್ರಶಸ್ತಿ-ಸನ್ಮಾನಕ್ಕಾಗಿ, ಕವಿಗೋಷ್ಠಿ, ಲೇಖನಗಳಿಗೆ ಅರ್ಜಿಅಹ್ವಾನಿಸಲಾಗಿದೆ.ಸಹಕಾರ ರತ್ನ ಪುರಸ್ಕಾರ, ಆದರ್ಶ ಶಿಕ್ಷಕ ಪುರಸ್ಕಾರ, ಆದರ್ಶ ಶಿಕ್ಷಕಿ ಪುರಸ್ಕಾರ, ಆದರ್ಶ ಶಾಲಾ ಪುರಸ್ಕಾರ, ಕಾಯಕ ರತ್ನ ಪುರಸ್ಕಾರ, ಯುವ ರತ್ನ ಪುರಸ್ಕಾರ, ಉದ್ಯಮ ರತ್ನ ಪುರಸ್ಕಾರ, ದಕ್ಷ ಆರಕ್ಷಕ ಪುರಸ್ಕಾರ, ಸೇವಾ ರತ್ನಪುರಸ್ಕಾರ, ರಾಜನೀತಿಜ್ಞ ಪುರಸ್ಕಾರ, ಪತ್ರಿಕಾ ದಿಗ್ಗಜ ಪುರಸ್ಕಾರ, ಆದರ್ಶ ದಂಪತಿ ಪುರಸ್ಕಾರ, ಶಾಂತಿ ರತ್ನ ಪುರಸ್ಕಾರ, ಬುದ್ಧ ರತ್ನ ಪುರಸ್ಕಾರ, ಜೈಬೀಮ ರತ್ನ ಪುರಸ್ಕಾರ, ಬಸವ ಚೇತನ ಪುರಸ್ಕಾರ, ಅಭಿನಂದನಾ ಪುರಸ್ಕಾರ, ಧರ್ಮ ತೇಜಪುರಸ್ಕಾರ, ಧರ್ಮವೀರಚಕ್ರ ಪುರಸ್ಕಾರ, ಕಲಾ…
ನನ್ನ ರಾಜಕೀಯ ಜೀವನ ತೆರೆದ ಪುಸ್ತಕ | ಪ್ರತಿ ಪುಟಗಳು ಪಾರದರ್ಶಕ ಮತ್ತು ಪ್ರಾಮಾಣಿಕ | ಸಿಎಂ ಸಿದ್ದರಾಮಯ್ಯ ಸ್ಪಷ್ಠನೆ ಬೆಂಗಳೂರು: ಅಧಿವೇಶನದಲ್ಲಿ ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಆಡಳಿತ ಪಕ್ಷದವರು ಬೆಳಕು ಚೆಲ್ಲಿ ಚರ್ಚಿಸಿದರು. ಆದರೆ, ವಿರೋಧ ಪಕ್ಷದವರು ನೆಪಕ್ಕೂ ರಾಜ್ಯದ ಜನರ ಸಂಕಷ್ಟಗಳ ಬಗ್ಗೆ ಚಕಾರವನ್ನೇ ಎತ್ತಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ನನ್ನ ರಾಜಕೀಯ ಜೀವನ ತೆರೆದ ಪುಸ್ತಕ. ಪ್ರತಿ ಪುಟಗಳು ಪಾರದರ್ಶಕ ಮತ್ತು ಪ್ರಾಮಾಣಿಕ. ಸಣ್ಣದೊಂದು ಕಪ್ಪು ಚುಕ್ಕೆ ಇಲ್ಲದಂತೆ ರಾಜಕೀಯದ ಪಾವಿತ್ರ್ಯತೆ ಕಾಪಾಡಿಕೊಂಡಿದ್ದೇನೆ. ನನ್ನ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಪ್ರಯತ್ನದಂತೆ ಪ್ರತಿಪಕ್ಷಗಳು ನಡೆದುಕೊಂಡವು” ಎಂದು ಆರೋಪಿಸಿದರು.“ಬಿಜೆಪಿ, ಜೆಡಿಎಸ್ ಹತಾಶರಾಗಿದ್ದಾರೆ. ನಾವು 135 ಸ್ಥಾನ ಗೆದ್ದ ಬಳಿಕ ರಾಜಕೀಯ ಪ್ರೇರಿತವಾದ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ನಾನು ಎರಡನೇ ಬಾರಿ ಸಿಎಂ ಆಗಿರುವುದು ಅವರಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ” ಎಂದರು.“ಎರಡು ವಾರವೂ ವಾಲ್ಮೀಕಿ ನಿಗಮದ ಒಂದೇ ವಿಚಾರ ಪ್ರಸ್ತಾಪ ಆಗಿದೆ.…
ವಿಜಯಪುರ: ವಿಜಯಪುರ ನಗರದ ಮನಗೂಳಿ ಅಗಸಿ ಬಡಾವಣೆಯ ಡಾ. ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದ ಜಾಗಕ್ಕೆ ಸಂಬಂಧಿಸಿದ ಸಮಸ್ಯೆಯ ಕುರಿತು ಸುದೀರ್ಘವಾದ ಹೋರಾಟ ಕೈಗೊಂಡರು ಕೂಡ ಜಾಗದ ಸಮಸ್ಯೆಯನ್ನು ಬಗೆ ಹರಿಸಲು ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ಸಂಪೂರ್ಣವಾಗಿ ವಿಫಲವಾಗಿದೆ ಎಂದು ದಲಿತ ಮುಖಂಡ ಪ್ರತಾಪ ಚಿಕ್ಕಲಕಿ ಆಕ್ರೋಶ ವ್ಯಕ್ತಪಡಿಸಿದರು.ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಛೇರಿಯಲ್ಲಿ ಹಮ್ಮಿಕೊಂಡಿದ್ದ ವಿಜಯಪುರ ಜಿಲ್ಲಾ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಕುಂದುಕೊರತೆ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಮನಗೂಳಿ ಅಗಸಿ ಬಡಾವಣೆಯ ಅಂಬೇಡ್ಕರ್ ಭವನದ ಜಾಗಕ್ಕೆ ಖಾಸಗಿ ವ್ಯಕ್ತಿಗಳು ತಕರಾರು ತಗೆಯುತ್ತಿರುವ ಬಗ್ಗೆ ತಿಂಗಳಗಳ ಹಿಂದೆಯೆ ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿಗಳು ಗಮನಕ್ಕೆ ತಂದರೆ ಯಾವುದೇ ಪ್ರಯೊಜನೆಯಾಗಿರುವುದಿಲ್ಲ. ಇದರ ಹಿಂದೆ ಕಾಣದ ಕೈಗಳು ಕೆಲಸ ಮಾಡುತ್ತಿವೆ ಎಂಬ ಅನುಮಾನ ಕಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು ಕೂಡಲೇ ಅಂಬೇಡ್ಕರ್ ಭವನದ ಜಾಗಕ್ಕೆ ಹೋಗಲು ಖಾಸಗಿ ವ್ಯಕ್ತಿಗಳು ನಿರ್ಮಿಸಿದ ತಡೆಗೊಡೆಯನ್ನು ತೆರವುಗೊಳಿಸಿ ಅನುಕೂಲ ಮಾಡಿಕೊಡಬೇಕೆಂದು…
ವಿಜಯಪುರ: ಭೀಮಸೇನಾ ಕರ್ನಾಟಕ ರಾಜ್ಯ ಸರಕಾರಿ ನೌಕರರ ಕ್ಷೇಮಾಭಿವೃದ್ದಿ ಸಂಘ ಜಿಲ್ಲಾ ಘಟಕ ವಿಜಯಪುರ ಇದರ ವತಿಯಿಂದ ಸನ್ ೨೦೨೩-೨೪ ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಶೇ. ೮೦ ಕ್ಕಿಂತ ಹೆಚ್ಚು ಅಂಕ ಪಡೆದ ಚಲವಾದಿ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಹಾಗೂ ೦೧-೦೭-೨೦೨೩ ರಿಂದ ೩೦-೦೬-೨೦೨೪ರ ಅವಧಿಯಲ್ಲಿ ನಿವೃತ್ತ ಗೊಂಡ ನೌಕರರಿಗೆ ಸನ್ಮಾನಿಸುವ ಕಾರ್ಯಕ್ರಮವನ್ನು ನಗರದ ಸಾರಿಪುತ್ರ ಬುದ್ದವಿಹಾರ, ಜಲನಗರ, ವಿಜಯಪುರ ಇಲ್ಲಿ ದಿನಾಂಕ : ೨೮-೦೭-೨೦೨೪ ರಂದು ರವಿವಾರ ಬೆಳಿಗ್ಗೆ ೧೦.೦೦ ಗಂಟೆಗೆ ಹಮ್ಮಿಕೊಳ್ಳಲಾಗಿದೆ ಕಾರಣ ಸಂಘದ ಎಲ್ಲ ಪದಾಧಿಕಾರಿಗಳು ಹಾಗೂ ಚಲವಾದಿ ಸಮಾಜದ ಬಂಧುಗಳು, ಹಿರಿಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಸಂಘದ ಅಧ್ಯಕ್ಷರಾದ ರಾವುಸಾಹೇಬ್ ಗವಾರಿ ಹಾಗೂ ಕಾರ್ಯದರ್ಶಿಗಳಾದ ವಿಜಯಾನಂದ ಮುದ್ದೇಬಿಹಾಳ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
