Author: editor.udayarashmi@gmail.com

ವಿಜಯಪುರ: ಸನ್ ೨೦೨೩-೨೪ ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಶೇ.೮೦ ರಷ್ಟು ಅಂಕಗಳನ್ನು ಪಡೆದಿರುವ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಸನ್ಮಾನ, ನಿವೃತ್ತ ಗೊಂಡ ಉಪ್ಪಾರ ಸಮಾಜದ ನೌಕರರು ಹಾಗೂ ಸಮಾಜದ ಸಾಧಕರಿಗೆ ಸನ್ಮಾನ ಕಾರ್ಯಕ್ರಮದ ಕುರಿತು ಚರ್ಚಿಸಲು ಪೂರ್ವಭಾವಿ ಸಭೆಯನ್ನು ದಿ : ೨೮-೦೭-೨೦೨೪ ರಂದು ರವಿವಾರ ಬೆಳಿಗ್ಗೆ ೧೧.೦೦ ಗಂಟೆಗೆ ನಗರದ ಶ್ರೀ ಹನುಮಾನ ಪ್ರೌಢಶಾಲೆ, ಶಿಕಾರಖಾನೆ, ವಿಜಯಪುರ ಇಲ್ಲಿ ಜಿಲ್ಲಾ ಉಪ್ಪಾರ ಸೇವಾ ಸಂಘ ಹಾಗೂ ಜಿಲ್ಲಾ ಉಪ್ಪಾರ ನೌಕರರ ಸಂಘ ಇವುಗಳ ಅಡಿಯಲ್ಲಿ ವಿಷಯಗಳನ್ನು ಚರ್ಚಿಸಲಾಗುವದು. ಕಾರಣ ಸಂಘದ ಸಮಸ್ತ ಉಪ್ಪಾರ ಸಮಾಜ ಸಂಘದ ಪದಾಧಿಕಾರಿಗಳು ಹಾಗೂ ನೌಕರರ ಸಂಘದ ಪದಾಧಿಕಾರಿಗಳು ಭಾಗವಹಿಸಿ ತಮ್ಮ ಸಲಹೆ ಸೂಚನೆ ನೀಡಬೇಕೆಂದು ಜಿಲ್ಲಾ ಉಪ್ಪಾರ ಸಮಾಜದ ಅಧ್ಯಕ್ಷರಾದ ಜಕ್ಕಪ್ಪ ಎಡವೆ ಹಾಗೂ ಕಾರ್ಯದರ್ಶಿ ಸಿದ್ದು ಗೇರಡೆ ರವರು ಪ್ರಕಟಣೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.

Read More

ಸಿಂದಗಿ: ಗ್ರಾಮಸ್ಥರಿಗೆ ಯಾವುದೇ ತೊಂದರೆಯಾಗದೇ ಹಾಗೂ ಸ್ಥಳೀಯವಾಗಿ ಈ ಸೌಲಭ್ಯ ಸಿಗುವುದರಿಂದ ಸಮಯ ವ್ಯರ್ಥವಾಗುವುದಿಲ್ಲ. ಮತ್ತು ಅಲೆದಾಟ ತಪ್ಪುತ್ತದೆ. ಹಾಗಾಗಿ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಾಪಂ ಇಒ ರಾಮು ಅಗ್ನಿ ಸಲಹೆ ನೀಡಿದರು.ಶುಕ್ರವಾರ ಸಾಯಂಕಾಲ ತಾಲೂಕಿನ ಕೊಕಟನೂರ ಗ್ರಾಂಪಂ ಗೆ ಭೇಟಿ ನೀಡಿ ಸಿಬ್ಬಂದಿಗಳ ಹಾಜರಾತಿ, ಸಿಬ್ಬಂದಿಗಳ ವೇತನ, ಇ-ಸ್ವತ್ತು, ಪರಿಶೀಲಿಸಿದರು.ಬಳಿಕ ಪತ್ರಿಕಾ ಹೇಳಿಕೆ ನೀಡಿರುವ ಅವರು, ಸರಕಾರದ ಆದೇಶದಂತೆ ಗ್ರಾಮ ಪಂಚಾಯತನಲ್ಲಿ ಜನನ, ಮರಣ, ಪ್ರಮಾಣ ಪತ್ರ ನೀಡುವ ವ್ಯವಸ್ಥೆ ಇರಲಿಲ್ಲ. ಇದಕ್ಕೆ ಜನರು ತಾಲೂಕು ಕೇಂದ್ರಕ್ಕೆ ಹೋಗಿ ಪಡೆಯುತ್ತಿದ್ದರು. ಆದರೆ ಒಂದೇ ದಿನಕ್ಕೆ ಕೆಲಸವಾಗದೇ ಇರುವುದರಿಂದ ಅನೇಕ ಬಾರಿ ಹೋಗಿ ಹಣ ಜೊತೆಗೆ ಸಮಯ ವ್ಯರ್ಥವಾಗುತ್ತಿತ್ತು. ಪ್ರಸ್ತುತ ದಿನಮಾನಗಳಲ್ಲಿ ಈ ಅವಕಾಶ ಗ್ರಾಮೀಣ ಪ್ರದೇಶದಲ್ಲಿ ಇರುವದರಿಂದ ಕಡಿಮೆ ಅವಧಿ ಮತ್ತು ಯಾವುದೇ ಹಣ ಖರ್ಚು ಆಗದಂತೆ ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆಯಲು ಜನರಿಗೆ ಅನುಕೂಲವಾಗಲಿದೆ ಎಂದರು.ಈ ವೇಳೆ ಗ್ರಾಮದ ನಿವಾಸಿಯ ಹುಸೇನ್ ಸಾಬ್…

Read More

ವಿಜಯಪುರ: ಭೀಮಸೇನಾ ಕರ್ನಾಟಕ ರಾಜ್ಯ ಸರಕಾರಿ ನೌಕರರ ಕ್ಷೇಮಾಭಿವೃದ್ದಿ ಸಂಘ ಜಿಲ್ಲಾ ಘಟಕ ವಿಜಯಪುರ ಇದರ ವತಿಯಿಂದ ಸನ್ ೨೦೨೩-೨೪ ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಶೇ. ೮೦ ಕ್ಕಿಂತ ಹೆಚ್ಚು ಅಂಕ ಪಡೆದ ಚಲವಾದಿ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಹಾಗೂ ೦೧-೦೭-೨೦೨೩ ರಿಂದ ೩೦-೦೬-೨೦೨೪ರ ಅವಧಿಯಲ್ಲಿ ನಿವೃತ್ತ ಗೊಂಡ ನೌಕರರಿಗೆ ಸನ್ಮಾನಿಸುವ ಕಾರ್ಯಕ್ರಮವನ್ನು ನಗರದ ಸಾರಿಪುತ್ರ ಬುದ್ದವಿಹಾರ, ಜಲನಗರ, ವಿಜಯಪುರ ಇಲ್ಲಿ ದಿನಾಂಕ : ೨೮-೦೭-೨೦೨೪ ರಂದು ರವಿವಾರ ಬೆಳಿಗ್ಗೆ ೧೦.೦೦ ಗಂಟೆಗೆ ಹಮ್ಮಿಕೊಳ್ಳಲಾಗಿದೆ ಕಾರಣ ಸಂಘದ ಎಲ್ಲ ಪದಾಧಿಕಾರಿಗಳು ಹಾಗೂ ಚಲವಾದಿ ಸಮಾಜದ ಬಂಧುಗಳು, ಹಿರಿಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಸಂಘದ ಅಧ್ಯಕ್ಷರಾದ ರಾವುಸಾಹೇಬ್ ಗವಾರಿ ಹಾಗೂ ಕಾರ್ಯದರ್ಶಿಗಳಾದ ವಿಜಯಾನಂದ ಮುದ್ದೇಬಿಹಾಳ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ಸನ್ ೨೦೨೩-೨೪ ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಶೇ.೮೦ ರಷ್ಟು ಅಂಕಗಳನ್ನು ಪಡೆದಿರುವ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಸನ್ಮಾನ, ನಿವೃತ್ತ ಗೊಂಡ ಉಪ್ಪಾರ ಸಮಾಜದ ನೌಕರರು ಹಾಗೂ ಸಮಾಜದ ಸಾಧಕರಿಗೆ ಸನ್ಮಾನ ಕಾರ್ಯಕ್ರಮದ ಕುರಿತು ಚರ್ಚಿಸಲು ಪೂರ್ವಭಾವಿ ಸಭೆಯನ್ನು ದಿ : ೨೮-೦೭-೨೦೨೪ ರಂದು ರವಿವಾರ ಬೆಳಿಗ್ಗೆ ೧೧.೦೦ ಗಂಟೆಗೆ ನಗರದ ಶ್ರೀ ಹನುಮಾನ ಪ್ರೌಢಶಾಲೆ, ಶಿಕಾರಖಾನೆ, ವಿಜಯಪುರ ಇಲ್ಲಿ ಜಿಲ್ಲಾ ಉಪ್ಪಾರ ಸೇವಾ ಸಂಘ ಹಾಗೂ ಜಿಲ್ಲಾ ಉಪ್ಪಾರ ನೌಕರರ ಸಂಘ ಇವುಗಳ ಅಡಿಯಲ್ಲಿ ವಿಷಯಗಳನ್ನು ಚರ್ಚಿಸಲಾಗುವದು. ಕಾರಣ ಸಂಘದ ಸಮಸ್ತ ಉಪ್ಪಾರ ಸಮಾಜ ಸಂಘದ ಪದಾಧಿಕಾರಿಗಳು ಹಾಗೂ ನೌಕರರ ಸಂಘದ ಪದಾಧಿಕಾರಿಗಳು ಭಾಗವಹಿಸಿ ತಮ್ಮ ಸಲಹೆ ಸೂಚನೆ ನೀಡಬೇಕೆಂದು ಜಿಲ್ಲಾ ಉಪ್ಪಾರ ಸಮಾಜದ ಅಧ್ಯಕ್ಷರಾದ ಜಕ್ಕಪ್ಪ ಎಡವೆ ಹಾಗೂ ಕಾರ್ಯದರ್ಶಿ ಸಿದ್ದು ಗೇರಡೆ ರವರು ಪ್ರಕಟಣೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.

Read More

ಸಿಂದಗಿ: ಗ್ರಾಮಸ್ಥರಿಗೆ ಯಾವುದೇ ತೊಂದರೆಯಾಗದೇ ಹಾಗೂ ಸ್ಥಳೀಯವಾಗಿ ಈ ಸೌಲಭ್ಯ ಸಿಗುವುದರಿಂದ ಸಮಯ ವ್ಯರ್ಥವಾಗುವುದಿಲ್ಲ. ಮತ್ತು ಅಲೆದಾಟ ತಪ್ಪುತ್ತದೆ. ಹಾಗಾಗಿ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಾಪಂ ಇಒ ರಾಮು ಅಗ್ನಿ ಸಲಹೆ ನೀಡಿದರು.ಶುಕ್ರವಾರ ಸಾಯಂಕಾಲ ತಾಲೂಕಿನ ಕೊಕಟನೂರ ಗ್ರಾಂಪಂ ಗೆ ಭೇಟಿ ನೀಡಿ ಸಿಬ್ಬಂದಿಗಳ ಹಾಜರಾತಿ, ಸಿಬ್ಬಂದಿಗಳ ವೇತನ, ಇ-ಸ್ವತ್ತು, ಪರಿಶೀಲಿಸಿದರು.ಬಳಿಕ ಪತ್ರಿಕಾ ಹೇಳಿಕೆ ನೀಡಿರುವ ಅವರು, ಸರಕಾರದ ಆದೇಶದಂತೆ ಗ್ರಾಮ ಪಂಚಾಯತನಲ್ಲಿ ಜನನ, ಮರಣ, ಪ್ರಮಾಣ ಪತ್ರ ನೀಡುವ ವ್ಯವಸ್ಥೆ ಇರಲಿಲ್ಲ. ಇದಕ್ಕೆ ಜನರು ತಾಲೂಕು ಕೇಂದ್ರಕ್ಕೆ ಹೋಗಿ ಪಡೆಯುತ್ತಿದ್ದರು. ಆದರೆ ಒಂದೇ ದಿನಕ್ಕೆ ಕೆಲಸವಾಗದೇ ಇರುವುದರಿಂದ ಅನೇಕ ಬಾರಿ ಹೋಗಿ ಹಣ ಜೊತೆಗೆ ಸಮಯ ವ್ಯರ್ಥವಾಗುತ್ತಿತ್ತು. ಪ್ರಸ್ತುತ ದಿನಮಾನಗಳಲ್ಲಿ ಈ ಅವಕಾಶ ಗ್ರಾಮೀಣ ಪ್ರದೇಶದಲ್ಲಿ ಇರುವದರಿಂದ ಕಡಿಮೆ ಅವಧಿ ಮತ್ತು ಯಾವುದೇ ಹಣ ಖರ್ಚು ಆಗದಂತೆ ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆಯಲು ಜನರಿಗೆ ಅನುಕೂಲವಾಗಲಿದೆ ಎಂದರು.ಈ ವೇಳೆ ಗ್ರಾಮದ ನಿವಾಸಿಯ ಹುಸೇನ್ ಸಾಬ್…

Read More

ಆಲಮಟ್ಟಿ: ಮಹಾರಾಷ್ಟದ ಕೃಷ್ಣಾ ತೀರದಲ್ಲಿ ಮಹಾಪುರ ಸೃಷ್ಟಿಯಾಗುತ್ತಿದ್ದು, ಆಲಮಟ್ಟಿ ಜಲಾಶಯದಿಂದ ಈ ವರ್ಷದ ಅತ್ಯಧಿಕ ೩ ಲಕ್ಷ ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದೆ.ಜಲಾಶಯದ ಒಳಹರಿವು ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ.ಒಳಹರಿವು ಮತ್ತಷ್ಟು ಹೆಚ್ಚುವ ಸಾಧ್ಯತೆಯಿದ್ದು, ಒಳಹರಿವು ಹೆಚ್ಚಿದರೇ ಹೊರಹರಿವನ್ನು ೩.೨೫ ಲಕ್ಷ ಕ್ಯುಸೆಕ್ ಗೆ ಹೆಚ್ಚುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಜಲಾಶಯದ ಎಲ್ಲಾ ೨೬ ಗೇಟ್ ಗಳ ಮೂಲಕ ನೀರು ಬಿಡಲಾಗುತ್ತಿದೆ. ಸಂಜೆ ೬ ಕ್ಕೆ ಜಲಾಶಯಕ್ಕೆ ೨,೦೯,೮೧೭ ಕ್ಯುಸೆಕ್ ಒಳಹರಿವು ಇದೆ. ಜಲಾಶಯದ ಮಟ್ಟ ೫೧೬.೬೮ಮೀ ಗೆ ಕಡಿಮೆಯಾಗಿದೆ. ಜಲಾಶಯದಲ್ಲಿ ೮೦ ಟಿಎಂಸಿ ನೀರು ಸಂಗ್ರಹವಾಗಿದೆ. ಇಷ್ಟೇ ಪ್ರಮಾಣದ ನೀರನ್ನು ನಾರಾಯಣಪುರ ಜಲಾಶಯದಿಂದಲೂ ಬಿಡಲಾಗುತ್ತಿದೆ,ಭಾರಿ ಮಳೆ;ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದೆ.ಅನೇಕ ಕಡೆ ನಿತ್ಯ ೨೦ ಸೆಂ.ಮೀಗೂ ಅಧಿಕ ಮಳೆ ಸುರಿಯುತ್ತಿದೆ. ಮಹಾಬಲೇಶ್ವರದಲ್ಲಿ ಸೆಂ.ಮೀ ಸೋಮವಾರ ಆಗಿದೆ.ಕರ್ನಾಟಕಕ್ಕೆ ಬಂದು ಸೇರುವ ಕಳ್ಳೋಳ ಬ್ಯಾರೇಜ್ ಬಳಿ ಕೃಷ್ಣೆಯ ಹರಿವು ೨.೧೦ ಲಕ್ಷ ಕ್ಯುಸೆಕ್ ಗೂ ಅಧಿಕ ವಿದೆ. ಆಲಮಟ್ಟಿ ಜಲಾಶಯದ ಹಿನ್ನೀರಿನ ಘಟಪ್ರಭಾ…

Read More

ವಿಜಯಪುರ: ದತ್ತಿ ನಿಧಿ ಗೋಷ್ಠಿಗಳು ಸಮಾಜ ಪರಿವತ೯ನೆಯಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಇಂದಿನ ಯುವ ಪೀಳಿಗೆ ಸಾಹಿತಿಕ ಮತ್ತು ಸಾಂಸ್ಕೃತಿಕಮೌಲ್ಯಗಳನ್ನು ಅಳವಡಿಸಿಕೊಳ್ಳುವದು ಅತ್ಯಗತ್ಯ, ಈ ನಿಟ್ಟಿನಲ್ಲಿ ಷರಿಷತ್ತಿನ ಕಾಯ೯ ಶ್ಲಾಘನೀಯ ಎಂದು ಮಹಿಳಾ ವಿಶ್ವವಿದ್ಯಾಲಯದ ಆಹಾರ ಮತ್ತು ಸಂಸ್ಕರಣ ವಿಭಾಗದ ಮುಖ್ಯಸ್ಥೆ ಡಾ.ರೇಣುಕಾ ಮೇಟಿ ಅಭಿಪ್ರಾಯ ವ್ಯಕ್ತಪಡಿಸಿದರು.ಜಿಲ್ಲಾ,ತಾಲೂಕ ಹಾಗು ನಗರ ಘಟಕ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ದತ್ತಿ ನಿಧಿ ಕಾರ್ಯಕ್ರಮ ದಿ ಮಳಿಸಿದ್ದಪ್ಪ ಶಿವಪ್ಪ ವಾಲಿ ದತ್ತಿ. ದತ್ತಿ ದಾನಿಗಳು ಡಾ.ಸೋಮಶೇಖರ ವಾಲಿ. ಹಾಗು ದಿ ಮಲ್ಲೇಶ್ವರ ಅಶೋಕಕುಮಾರ ಗಂಜಾಳ ದತ್ತಿ. ದತ್ತಿ ದಾನಿಗಳು ಅಶೋಕ ಗಂಜಾಳಇವರ ದತ್ತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಇಂದು ನಾವೆಲ್ಲರೂ ಸಂಘಟಿತರಾಗುವ ಮೂಲಕ ಕನ್ನಡ ಭಾಷೆ,ಸಾಹಿತ್ಯವನ್ನು ನವ ಪೀಳಿಗೆಗೆ ಪರಿಚಯಿಸುವ ಕಾರ್ಯ ಮಾಡೋಣ ಎಂದರು.ದಿ ಮಳಿಸಿದ್ದಪ್ಪ ಶಿವಪ್ಪ ವಾಲಿ ದತ್ತಿ. ವಿಷಯ.ದಿ ಮಳಿಸಿದ್ದಪ್ಪ ಶಿವಪ್ಪ ವಾಲಿ ಹಾಗು ಸಾರವಾಡ ಯೋಧರ ಸ್ಮರಣೆ ಕುರಿತು ಉಪನ್ಯಾಸ ನೀಡಿದ ಸಾಹಿತಿ…

Read More

ಕಾರ್ಗಿಲ್ ವಿಜಯ್ ದಿವಸ್ ಆಚರಣೆ | ಕಾರ್ಗಿಲ್ ವೀರ ಯೋಧ ಚನ್ನಬಸಪ್ಪ ಜಿಗಜೇವಣಿ ಸಮಾಧಿಗೆ ಪೂಜೆ ಸಲ್ಲಿಕೆ ಚಡಚಣ: ಪ್ರತಿ ಭಾರತೀಯರು ಸ್ಮರಿಸಬೇಕಾದ ದಿನ. ಶತ್ರು ರಾಷ್ಟçದ ದಾಳಿಯಿಂದ ಸಂಕಷ್ಟದಲ್ಲಿದ್ದ ಭಾರತ ತನ್ನ ಕೆಚ್ಚೆದೆಯ ವೀರರತ್ಯಾಗ, ಬಲಿದಾನದ ಫಲವಾಗಿ ಸುರಕ್ಷಿತವಾಗಿತ್ತು. ಈ ಮಹತ್ವದ ದಿನಕ್ಕೆ ಈ ಸಲ ೨೫ನೇ ವರ್ಷ ತುಂಬುತ್ತದೆ. ನಮ್ಮ ಯೋಧರೇ ನಮ್ಮ ಹೆಮ್ಮೆ, ಆಸ್ತಿ ಎಂದು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಗುರು ಆರ್.ಎನ್.ಹತ್ತಳ್ಳಿಯವರು ಹೇಳಿದರು.ಶುಕ್ರವಾರದಂದು ರೇವತಗಾಂವ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿರುವ ಕಾರ್ಗಿಲ್ ವೀರ ಯೋಧ ಚನ್ನಬಸಪ್ಪ ಜಿಗಜೇವಣಿಯವರ ಸಮಾಧಿಗೆ ಪೂಜೆ ಸಲ್ಲಿಸಿ ಮಾತನಾಡಿದ ಅವರು. ಈ ದಿನವು ಭಾರತದ ಇತಿಹಾಸದಲ್ಲಿ ದೇಶದ ಸೇನೆಯ ಶೌರ್ಯ ಮತ್ತು ಧೈರ್ಯದ ಕಥೆಯನ್ನು ನಮಗೆ ನೆನಪಿಸುತ್ತದೆ. ೧೯೯೯ರಲ್ಲಿ, ಪಾಕಿಸ್ತಾನಿ ಸೇನೆಯು ಭಾರತದ ಭೂಪ್ರದೇಶದೊಳಗೆ ನುಗ್ಗಿತು ಮತ್ತು ಕಾರ್ಗಿಲ್‌ನ ಎತ್ತರದ ಸ್ಥಳಗಳನ್ನು ವಶಪಡಿಸಿಕೊಂಡಿತು. ಈ ಪ್ರದೇಶವನ್ನು ಭಾರತೀಯ ಸೈನಿಕರು ಆಪರೇಷನ್ ವಿಜಯ್ ನಡೆಸುವ…

Read More

ಕೊಲ್ಹಾರ: ಜಾನಪದ ಕಲೆಯು, ಜಾತಿ – ಮತಗಳ ಬೇಧ ತೊರೆದು ಸಮನ್ವಯ ಸಾಧಿಸುವ ಮೇರು ಸಂಸ್ಕೃತಿಯಾಗಿದೆ. ಎಲ್ಲ ಜನರನ್ನು ಬಾಂಧವ್ಯದ ಬೆಸುಗೆಯಲ್ಲಿ ಬದುಕುವಂತೆ ಕಲಿಸುವ ಶಕ್ತಿ ಜಾನಪದ ಸಂಪ್ರದಾಯಕ್ಕಿದೆ ಎಂದು ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಡಾ.ಎಸ್ ಬಾಲಾಜಿ ಅಭಿಪ್ರಾಯಪಟ್ಟರು.ಕೊಲ್ಹಾರ ತಾಲೂಕಿನ ಬಳೂತಿ ಗ್ರಾಮದಲ್ಲಿ ಬೀಬೀ ಫಾತೀಮಾಳ ಹತ್ತು ದಿನಗಳ ಜಾರತ ಉತ್ಸವದ ನಿಮಿತ್ಯ, ಕನ್ನಡ ಜಾನಪದ ಪರಿಷತ್ ಜಿಲ್ಲಾ ಘಟಕ ವಿಜಯಪುರ ಮತ್ತು ತಾಲೂಕು ಘಟಕ ಕೊಲ್ಹಾರ ವತಿಯಿಂದ ಬಳೂತಿಯ ಭಾವಿ ಬಸವೇಶ್ವರ ಹೆಜ್ಜೆ ಮೇಳ ಸಂಘದ ಸಹಯೋಗದಲ್ಲಿ ಏರ್ಪಡಿಸಿದ ” ಜಿಲ್ಲಾ ಮಟ್ಟದ ರಿವಾಯತ ಸಂಬ್ರಮ ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ, ಹಿಂದೂ – ಮುಸ್ಲಿಂ ಏಕತೆಯಿಂದ ದೇಶದಲ್ಲಿ ಶಾಂತಿ ನೆಲೆಸುತ್ತದೆ. ರಿವಾಯತ ಕಲೆಯ ಮೂಲಕ ಶಾಂತಿ – ಸಹಬಾಳ್ವೆಗೆ ಕಾರಣವಾದ ಬಳೂತಿ ಗ್ರಾಮ ಭಾವೈಕ್ಯತೆಯ ಕಾಶಿಯಾಗಿದೆ ಎಂದರು.ಸಾನಿಧ್ಯ ವಹಿಸಿ ಮಾತನಾಡಿದ, ನಾಗರದಿನ್ನಿ ಸದ್ಗುರು ಸದಾನಂದ ಮಠದ ತಪೋನಿಧಿ ಪೂಜ್ಯ ಮಲ್ಲಿಕಾರ್ಜುನ ಸ್ವಾಮಿಗಳು, ಧರ್ಮ ಯಾವುದಾದರೇನು ಕರ್ಮ ಮಾತ್ರ…

Read More

ಚಿಮ್ಮಡ: ರಬಕವಿ-ಬನಹಟ್ಟಿ ತಾಲೂಕಿನ ಚಿಮ್ಮಡ ಗ್ರಾಮದ ಪಿಕೆಪಿಎಸ್ ನಿರ್ದೆಶಕರಾದ ನಿಂಗಪ್ಪ ಪುಂಡಲಿಕಪ್ಪಾ ಪೊಜಾರಿ ಅವರು ಪ್ರಗತಿಪರ ರೈತ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಭಾರತೀಯ ಸಕ್ಕರೆ ತಂತ್ರಜ್ಞಾನ ಸಂಸ್ಥೆ ನೀಡುವ ಪ್ರತಿಷ್ಟತ ರಾಷ್ಠಮಟ್ಟದ ಪ್ರಗತಿಪರ ರೈತ ಪ್ರಶಸ್ತಿಯನ್ನು ಜುಲೈ ೩೦ ರಂದು ಜೈಪುರದಲ್ಲಿ ನಡೆಯಲಿರುವ ೮೨ನೇ ವಾರ್ಷಿಕ ಸಮ್ಮೇಳನ ಹಾಗೂ ಅಂತರಾಷ್ಟ್ರೀಯ ಸಕ್ಕರೆ ಎಕ್ಷಪೊ-೨೦೨೪ ಪ್ರತೀಷ್ಠಿತ ಸಮಾರಂಭದಲ್ಲಿ ಈ ಪ್ರಶಸ್ತಿ ನೀಡಿಗೌರವಿಸಲಾಗುವುದೆಂದು ಸಂಸ್ಥೆ ಪ್ರಟಣೆಯಲ್ಲಿ ತಿಳಿಸಿದೆ. ಗ್ರಾಮದ ರೈತರ ಈ ಸಾದನೆಗೆ ಸ್ಥಳಿಯ ವಿರಕ್ತಮಠದ ಶ್ರೀ ಪ್ರಭು ಮಹಾಸ್ವಾಮಿಗಳು, ಗ್ರಾಮ ಪಂಚಾಯತಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಬ್ಯಾಂಕ್ ಆಡಳಿತ ಮಂಡಳಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಹರ್ಷ ವ್ಯಕ್ತಪಡಿಸಿದ್ದಾರೆ.

Read More