Author: editor.udayarashmi@gmail.com

ಸಿಂದಗಿ: ಶಾಲಾ ಸಂಸತ್ತು, ಪಠ್ಯಪೂರಕ ಪಠ್ಯೇತರ ಚಟುವಟಿಕೆಗಳು ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಕಾರಣವಾಗುವುದರ ಜೊತೆಗೆ ಮಕ್ಕಳಲ್ಲಿ ಆಸಕ್ತಿ ಇಮ್ಮಡಿಗೊಳಿಸುತ್ತದೆ ಎಂದು ಸಂಸ್ಥೆಯ ಅಧ್ಯಕ್ಷ ಆರ್.ಡಿ.ಕುಲಕರ್ಣಿ ಎಂದು ಹೇಳಿದರು.ಪಟ್ಟಣದ ಸಮರ್ಥ ವಿದ್ಯಾವಿಕಾಸ ಸಂಸ್ಥೆಯ ಪ್ರೇರಣಾ ಶಿಶುನಿಕೇತನ, ವಿದ್ಯಾನಿಕೇತನ ಕನ್ನಡ ಪ್ರಾಥಮಿಕ ಮತ್ತು ಪ್ರೇರಣಾ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಪಠ್ಯಪೂರಕ ಮತ್ತು ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ ಮತ್ತು ಶಾಲಾ ಸಂಸತ್ತಿನ ಪ್ರತಿನಿಧಿಗಳ ಪ್ರತಿಜ್ಞಾವಿಧಿ ಸ್ವೀಕಾರ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಂದಿನ ಮಕ್ಕಳೇ ನಾಳಿನ ಪ್ರಜೆಗಳು. ಹಾಗಾಗಿ ಅವರಿಗೆ ಸಂಸತ್ತಿನ ಅರಿವು ಮೂಡಿಸಲು ಶಾಲೆಗಳಲ್ಲಿ ಸಂಸತ್ತಿನ ಪದಾಧಿಕಾರಿಗಳನ್ನಾಗ ಆಯ್ಕೆ ಮಾಡಲಾಗುತ್ತದೆ. ಇದರಿಂದ ವಿದ್ಯಾರ್ಥಿಗಳಿಗೆ ಅನಕೂಲವಾಗಲಿದೆ ಎಂದರು.ಈ ವೇಳೆ ಮಕ್ಕಳ ಸಾಹಿತಿ ಶಿಕ್ಷಕ ಎಸ್.ಎಸ್.ಸಾತಿಹಾಳ ಮಾತನಾಡಿ, ಮಕ್ಕಳು ಶಾಲಾ ಸಂಸತ್ತು ರಚನೆಯಿಂದ ಜಾತ್ಯಾತೀತ ಸಾಮಾಜಿಕ ನಾಯಕತ್ವ ಮತ್ತು ಪಕ್ಷಾತೀತ ಭಾವನೆ ಮಕ್ಕಳಲ್ಲಿ ಬೆಳೆಯುತ್ತದೆ. ಗುರು ಹಿರಿಯರ, ಶಿಕ್ಷಕರ ಮಾರ್ಗದರ್ಶನದಲ್ಲಿ ಮಕ್ಕಳು ಸಾಗಿದಾಗ ಭವ್ಯ ಭಾರತದ ಕನಸು ನನಸಾಗುತ್ತದೆ ಎಂದರು.ಪ್ರಸಕ್ತ ಸಾಲಿನಲ್ಲಿ ವಿವಿಧ ವಿಭಾಗದ…

Read More

ತಿಕೋಟಾ: ಸೈನಿಕ ಎಂದರೆ ದೀಪ ಇದ್ದಂತೆ, ದೀಪ ತನ್ನನ್ನು ತಾನು ಸುಟ್ಟಿಕೊಂಡು ಬೆಳಕು ಪಸರಿಸುವ ಹಾಗೆ ಸೈನಿಕರು ಕೂಡಾ ತಮ್ಮ ಜೀವವನ್ನು ಲೆಕ್ಕಿಸದೇ ದೇಶ ರಕ್ಷಣೆಗಾಗಿ ಸದಾ ಸನ್ನದ್ದರಾಗಿರುತ್ತಾರೆ ಎಂದು ಹೊನವಾಡ ಗ್ರಾಮದ ಮಾಜಿ ಸೈನಿಕ ಎನ್.ಬಿ‌.ನಾಟಿಕಾರ ಹೇಳಿದರು.ಪಟ್ಟಣದ ಬಿ.ಎಲ್.ಡಿ.ಇ ಸಂಸ್ಥೆಯ ನೂತನ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಸಭಾ ಭವನದಲ್ಲಿ ಶುಕ್ರವಾರ 25 ನೇ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮಕ್ಕೆ ಸಸಿ ನೀರುನಿಸಿ ಚಾಲನೆ ನೀಡಿ ಅವರು ಮಾತನಾಡಿದರು.ಸೇನೆಗೆ ಸೇರುವ ವ್ಯಕ್ತಿಗಳು ರೈತರ ಮಕ್ಕಳು, ಕೂಲಿನಾಲಿ ಮಾಡುವ ಮಕ್ಕಳು, ಕಡು ಬಡತನ ಕುಟುಂಬದ ಮಕ್ಕಳು, ಸೈನ್ಯಕ್ಕೆ ಸೇರುತ್ತಾರೆ. ಸೈನದಲ್ಲಿ ಸೈನಿಕರಿಗೆ ಪಾಠ, ತರಬೇತಿ, ಎಲ್ಲ ಭಾಷೆ, ರಾಷ್ಟ್ರಭಕ್ತಿ, ಭಾವೈಕ್ಯತೆಯನ್ನು ಜಾಗೃತ ಗೊಳಿಸುವ ಕಾರ್ಯ ನಿರಂತರವಾಗಿ ಕಲಿಸುತ್ತಾರೆ ಎಂದರು.ಪ್ರಾಧ್ಯಾಪಕ ಬಸವರಾಜ ಸಾಲವಾಡಗಿ ಮಾತನಾಡಿ, ಕಾರ್ಗಿಲ್ ವಿಜಯ ದಿವಸ್ ಇಂದು ಭಾರತೀಯ ಸೇನೆಯ ಶೌರ್ಯ, ಸಾಹಸಗಾಥೆ ಎಂದೆಂದಿಗೂ ಪ್ರೇರಣೆ ಯಾಗಿದ್ದು ಭಾರತದ ವೀರಯೋಧರ ತ್ಯಾಗ ಮತ್ತು ಬಲಿದಾನವನ್ನು ನಾವೇಲ್ಲರೂ ಇಂತಹ ಕಾರ್ಯಕ್ರಮದ ಮೂಲಕವಾದರು ಸ್ಮರಿಸಬೇಕಾಗಿದೆ…

Read More

ತಿಕೋಟಾ: ದಾಕ್ಷಿ ಬೆಳೆ ವಿಮಾ ತುಂಬುವ ದಿನಾಂಕವನ್ನು ವಿಸ್ತರಿಸುವ ಹಾಗೂ ರೈತರ ಪಹಣಿ ಉತಾರೆಯಲ್ಲಿ ದ್ರಾಕ್ಷಿ ಬೆಳೆ ದಾಖಲೆ ಮಾಡುವಂತೆ ಆಗ್ರಹಿಸಿ ತಾಲ್ಲೂಕ ದ್ರಾಕ್ಷಿ ಬೆಳೆಗಾರರ ಸಂಘದ ಪದಾಧಿಕಾರಿಗಳು ಗ್ರೇಡ್ 2 ತಹಶಿಲ್ದಾರ ಸೋಮನಿಂಗ ಅರಕೇರಿ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.ವಿಮಾ ತುಂಬುವ ಅವಧಿಯು ಜಿಲ್ಲೆಯಲ್ಲಿ ಜುಲೈ15 ಕ್ಕೆ ಮುಕ್ತಾಯವಾಗಿರುತ್ತದೆ. ಅದನ್ನು ಅಗಷ್ಟ 15 ವರೆಗೆ ಅವಧಿಯನ್ನು ವಿಸ್ತರಿಸಬೇಕು. ಕೆಲವು ರೈತರ ಪಹಣಿ ಉತಾರೆಯಲ್ಲಿ ಬೆಳೆ ಕಾಲಂ ದಲ್ಲಿ ಬೆಳೆ ನಮೂದಾಗಿರುವುದಿಲ್ಲ. ಆದ ಕಾರಣ ವಿಮಾ ತುಂಬಲು ತೊಂದರೆಯಾಗಿರುತ್ತದೆ. ಸಮೀಕ್ಷೆ ಮಾಡಿಸಿ ರೈತರಿಗೆ ಅನೂಕೂಲ ಮಾಡಿಕೊಡಬೇಕು.2023-24ನೇ ಅವಧಿಯಲ್ಲಿ ರಾಜ್ಯದ ಎಲ್ಲ ದ್ರಾಕ್ಷಿ ಬೆಳಗಾರರು ದ್ರಾಕ್ಷಿ ವಿಮಾ ತುಂಬಿರುತ್ತಾರೆ. ಸರ್ಕಾರವು ಈ ಅವಧಿಯಲ್ಲಿ ಬರಗಾಲ ಪೀಡಿತ ಎಂದು ಘೋಷಿರುತ್ತಾರೆ. ಆದರೆ ವಿಮಾ ಕಂಪನಿಯವರು ಅದನ್ನು ಗಣನೆಗೆ ತೆಗೆದುಕೊಳ್ಳುತ್ತಿಲ್ಲ ಇದರಿಂದಾಗಿ ರೈತರಿಗೆ ನಷ್ಟವಾಗುತ್ತಿದೆ. ಅತಿ ವೃಷ್ಠಿ ಹಾಗೂ ಅನಾವೃಷ್ಠಿಯ ಸಲುವಾಗಿ ವಿಮಾ ಕಂತು ತುಂಬಿರುತ್ತೇವೆ. ಅದಕ್ಕೆ ವಿಮಾ ಕಂಪನಿಯ ಜೋತೆ ಚರ್ಚಿಸಿ ತ್ವರಿತವಾಗಿ ಹಣ…

Read More

ಮುದ್ದೇಬಿಹಾಳ: ತಾಲೂಕಿನ ಹುಲ್ಲೂರ(ಜಟ್ಟಗಿ) ಉಪಕೇಂದ್ರದಲ್ಲಿ ಹೊಸದಾಗಿ ನಿರ್ಮಿಸುತ್ತಿರುವ ೧೧೦ಕೆವಿ ಬ.ಬಾಗೇವಾಡಿ-ಮುದ್ದೇಬಿಹಾಳ ಮಾರ್ಗದ ಗೋಪುರದಲ್ಲಿ ಜಂಪ ಅಳವಡಿಸುವ ಸಲುವಾಗಿ ಜು.೨೯ ರಂದು ಬೆಳಿಗ್ಗೆ ೭ರಿಂದ ೯:೩೦ ರವರೆಗೆ ೧೧೦ಕೆವಿ ಮತ್ತು ೧೧೦ಕೆವಿ ಸೋಲಾರ ಮುದ್ದೇಬಿಹಾಳ, ೧೧೦ಕೆವಿ ಹಿರೇಮುರಾಳ, ೧೧೦ಕೆವಿ ಕೊಳೂರ, ೧೧೦ಕೆವಿ ಬಾಲಾಜಿ ಶುಗರ್ಸ್, ೩೩ಕೆವಿ ನಾಲತವಾಡ, ೩೩ಕೆವಿ ತಂಗಡಗಿ ಮತ್ತು ೩೩ಕೆವಿ ಢವಳಗಿ ವಿದ್ಯುತ್ ವಿತರಣಾ ಕೇಂದ್ರಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿರುವದಾಗಿ ಪ್ರಕಟಣೆ ತಿಳಿಸಿದೆ.

Read More

ಮುದ್ದೇಬಿಹಾಳ: ಪಟ್ಟಣದ ವಿದ್ಯಾನಗರದ ನಿವಾಸಿ ಸೋಮೇಶ ನಂದಿ ಇವರಿಗೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ವತಿಯಿಂದ ಹಮ್ಮಿಕೊಂಡ ಘಟಿಕೋತ್ಸವದಲ್ಲಿ ಪಿಎಚ್‌ಡಿ ಪ್ರಧಾನ ಮಾಡಲಾಗಿದೆ.

Read More

ವಿಜಯಪುರ ವಿಜಯಪುರ ಜಿಲ್ಲೆಯ ಹುಲ್ಲೂರು ( ಜೆಟ್ಟಗಿ ) ಉಪಕೇಂದ್ರದಲ್ಲಿ ಹೊಸದಾಗಿ ನಿರ್ಮಿಸಲಾಗುತ್ತಿರುವ ೧೧೦ ಕೆ.ವಿ ಬ.ಬಾಗೇವಾಡಿ-ಮುದ್ದೇಬಿಹಾಳ ಮಾರ್ಗದ ಗೋಪುರದಲ್ಲಿ ಜಂಪ ಅಳವಡಿಸುವ ಸಲುವಾಗಿ ದಿನಾಂಕ ೨೯-೦೭-೨೦೨೪ ಬೆಳಿಗ್ಗೆ ೦೭:೦೦ ಘಂಟೆಯಿಂದ ೦೯:೩೦ ಘಂಟೆಯವರೆಗೆ ಮಾರ್ಗ ಮುಕ್ತತೆಯ ಅವಶ್ಯಕತೆ ಇರುವುದರಿಂದ ೧೧೦ ಕೆ.ವಿ ಉಪಕೇಂದ್ರ ಹಿರೇಮುರಾಳ, ೧೧೦ಕೆ.ವಿ ಕೆ.ಎನ್ ಸೋಲಾರ್ ಮುದ್ದೇಬಿಹಾಳ, ೧೧೦ಕೆ.ವಿ ಕೋಳೂರು, ೧೧೦ಕೆ.ವಿ ಬಾಲಾಜಿ ಶರ‍್ಸ ಹಾಗೂ ೧೧೦ ಕೆ.ವಿ ಮುದ್ದೇಬಿಹಾಳ ಉಪಕೇಂದ್ರದಿಂದ ಹೊರಹೋಗುವ ೩೩ ಕೆ.ವಿ ಉಪಕೇಂದ್ರಗಳ (ಢವಳಗಿ, ತಂಗಡಗಿ & ನಾಲತವಾಡ) ಮಾರ್ಗಗಳಲ್ಲಿ ಮತ್ತು ಸದರಿ ಎಲ್ಲಾ ಉಪಕೇಂದ್ರಗಳಿಂದ ಹೊರಹೋಗುವ ಎಲ್ಲ ೧೧ ಕೆ.ವಿ ಮಾರ್ಗಗಳಿಗೆ ನಿರಂತರ ಜ್ಯೋತಿ ಮಾರ್ಗಗಳು, ನೀರು ಸರಬರಾಜು ಮಾರ್ಗಗಳು, ಕೃಷಿ ನೀರಾವರಿ ಮಾರ್ಗಗಳು, ಹಾಗೂ ಗ್ರಾಮಗಳಿಗೆ ವಿದ್ಯುತ್ ಪೂರೈಕೆ ವ್ಯತ್ಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಬಸವನಬಾಗೇವಾಡಿ ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.

Read More

ವಿಜಯಪುರ: ಐತಿಹಾಸಿಕ ವಿಜಯಪುರ ನಗರವನ್ನು ಅಂತರರಾಷ್ಟ್ರೀಯ ಮಟ್ಟದ ಪ್ರವಾಸಿ ತಾಣವಾಗಿ ಅಭಿವೃದ್ದಿಪಡಿಸುವ ನಿಟ್ಟಿನಲ್ಲಿ ತಾಜಬಾವಡಿ ಸುತ್ತಲಿನ ಪ್ರದೇಶದ ಅತಿಕ್ರಮಣವನ್ನು ಮಹಾನಗರ ಪಾಲಿಕೆ ವತಿಯಿಂದ ತೆರವುಗೊಳಿಸಲಾಯಿತು.ಐತಿಹಾಸಿಕ ತಾಜಬಾವಡಿ ಹತ್ತಿರದ ಸುತ್ತಮುತ್ತಲಿನ ಸಾರ್ವಜನಿಕ ರಸ್ತೆ, ಸರ್ಕಾರಿ ಜಾಗೆ ಮೆಲೆ ಅನಧಿಕೃತವಾಗಿ ಒತ್ತು ಮಾಡಿ ನಿರ್ಮಿಸಿದ ಕಟ್ಟಡಗಳ ಭಾಗ- ರಚನೆಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಮಹಾನಗರ ಪಾಲಿಕೆ ವತಿಯಿಂದ ಶುಕ್ರವಾರ ಕೈಗೊಳ್ಳಲಾಯಿತು. ಅನಧಿಕೃತವಾಗಿ ಒತ್ತುವರಿ ಮಾಡಿ ನಿರ್ಮಿಸಿದ ಕಟ್ಟಡಗಳ ಭಾಗ-ರಚನೆಗಳನ್ನು ತೆರವುಗೊಳಿಸಿ ಸಾರ್ವಜನಿಕ ಹಿತದೃಷ್ಟಿಯಿಂದ ರಸ್ತೆ ಉನ್ನತೀಕರಿಸುವ ಕಾರ್ಯ ಕೈಗೊಳ್ಳುವುದು ಅವಶ್ಯಕವಿದ್ದ ಕಾರಣ ಈಗಾಗಲೇ ರಸ್ತೆ ಅತಿಕ್ರಮಣ ಮಾಡಿ ಕಟ್ಟಡ ನಿರ್ಮಿಸಿದ ಭಾಗಗಳನ್ನು ತೆರವುಗೊಳಿಸುವಂತೆ ನೋಟಿಸ್ ನೀಡಿ ಸೂಚನೆ ಸಹ ನೀಡಲಾಗಿತ್ತು.ಈ ಸಂದರ್ಭದಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ತೆರವು ಕಾರ್ಯಾಚರಣೆ ಪರಿಶೀಲನೆ ನಡೆಸಿ, ಐತಿಹಾಸಿಕ ತಾಜ್‌ಬಾವಡಿ ಹಾಗೂ ಸುತ್ತಮುತ್ತಲಿನ ಪ್ರದೇಶವನ್ನು ಸಂರಕ್ಷಣೆ ಮಾಡಲು ವರ್ಲ್ಡ ಮಾನುಮೆಂಟ್ ಫಂಡ್ ಇಂಡಿಯಾ ಅಸೋಸಿಯೇಶನ್ ಸಂಸ್ಥೆ ನಿರ್ಧರಿಸಿದ್ದು, ಈ ಕಾರ್ಯಕ್ಕೆ ಟಿಸಿಎಸ್ ಫೌಂಡೇಶನ್ ಸಂಸ್ಥೆ ಸಿ.ಎಸ್.ಆರ್. ನಿಧಿಯಡಿ ಅಭಿವೃದ್ದಿಗೊಳಿಸಲು ಉದ್ದೇಶಿಸಲಾಗಿದೆಮುಂಬರುವ…

Read More

ವಿಜಯಪುರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ-ಕಾಲೇಜ್ ಹಾಗೂ ಮೌಲಾನಾ ಆಝಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕ-ಶಿಕ್ಷಕರ ಹುದ್ದೆಗಳಿಗೆ ಆಸಕ್ತ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ದಿನಾಂಕ : ೩೧-೦೭-೨೦೨೪ ಕೊನೆಯ ದಿನಾಂಕವಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಆಯಾ ಶಾಲೆಗಳ ಪ್ರಾಂಶುಪಾಲರನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ-ಕಾಲೇಜ್ ಹಾಗೂ ಮೌಲಾನಾ ಆಝಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕ-ಶಿಕ್ಷಕರ ಹುದ್ದೆಗಳಿಗೆ ಆಸಕ್ತ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ದಿನಾಂಕ : ೩೧-೦೭-೨೦೨೪ ಕೊನೆಯ ದಿನಾಂಕವಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಆಯಾ ಶಾಲೆಗಳ ಪ್ರಾಂಶುಪಾಲರನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಅವರು ಜು.೨೯ ಹಾಗೂ ೩೦ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಜು.೨೯ರಂದು ಬೆಳಿಗ್ಗೆ ೧೦ ರಿಂದ ಸಂಜೆ ೫ ಗಂಟೆವರೆಗೆ ವಸತಿ ಶಾಲೆ-ನಿಲಯ, ಜಿಲ್ಲಾ ಆಸ್ಪತ್ರೆ, ಅಂಗನವಾಡಿ ಮಕ್ಕಳ ಪಾಲನಾ ಸಂಸ್ಥೆ ಹಾಗೂ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ವಿಜಯಪುರದಲ್ಲಿ ವಾಸ್ತವ್ಯ ಮಾಡಲಿದ್ದಾರೆ.ಜು.೩೦ರಂದು ಬೆಳಿಗ್ಗೆ ೧೦-೩೦ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ ೧೨-೩೦ರಿಂದ ಸಂಜೆ ೫ ಗಂಟೆಯವರೆಗೆ ವಿವಿಧ ವಸತಿ ಶಾಲೆಗಳಿಗೆ, ಅಂಗನವಾಡಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Read More