Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ೧೧೦ ಕೆವಿ ಝಳಕಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕಂಟ್ರೋಲ್ ರೂಂ ವಿಸ್ತರಣೆ ಮಾಡುವ ಜಾಗದಲ್ಲಿ ಕಂಟ್ರೋಲ್ ಕೇಬಲ್ ಇದ್ದಿದ್ದರಿಂದ ಕಂಟ್ರೋಲ್ ಕೇಬಲ್ ಸ್ಥಳಾಂತರಿಸುವ ಕಾಮಗಾರಿ ಕೈಗೊಂಡಿರುವದರಿಂದ ಜುಲೈ ೨೭ ರಂದು ಮಧ್ಯಾಹ್ನ ೧೨ ಗಂಟೆಯಿಂದ ಸಂಜೆ ೬ ರವರಿಗೆ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಎಲ್ಲ ೧೧ ಕೆವಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಸದರಿ ಮಾರ್ಗಗಳ ಮೇಲೆ ಬರುವ ಗ್ರಾಹಕರು ಸಾರ್ವಜನಿಕರು ಸಹಕರಿಸಬೇಕು ಎಂದು ಇಂಡಿ ಹೆಸ್ಕಾಂ ಕಾರ್ಯ ಮತ್ತು ಪಾಲನಾ ವಿಭಾಗದ ಕಾರ್ಯ ನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ವಿಜಯಪುರ ನಗರಕ್ಕೆ ಕೋಲ್ಹಾರ ಪಟ್ಟಣದ ಹತ್ತಿರ ಇರುವ ಕೃಷ್ಣಾ ನದಿಯಿಂದ ಸಗಟು ಕುಡಿಯುವ ನೀರು ಸರಬರಾಜು ಮಾಡುವ ವ್ಯವಸ್ಥೆ ಕಲ್ಪಿಸಲಾಗಿದೆ. ಕೋಲ್ಹಾರ ಮೂಲ ಸ್ಥಾವರದÀಲ್ಲಿ ನೀರು ಶುದ್ಧೀಕರಣ ಘಟಕಇದ್ದು, ಘಟಕದಲ್ಲಿ ಪಿ.ಎ.ಸಿ ಪೌಡರ ಮತ್ತು ಬ್ಲಿಚಿಂಗ್ ರಾಸಾಯನಿಕಗಳನ್ನು ಅಗತ್ಯಗನುಗುಣವಾಗಿ ನೀರಿನಲ್ಲಿ ಸೇರಿಸಿ ಶುದ್ಧೀಕರಿಸಿ, ಶುದ್ಧೀಕರಿಸಿದ ನೀರಿಗೆ ಲಿಕ್ವಿಡ್ ಕ್ಲೋರಿನ್ ಗ್ಯಾಸ ಅಗತ್ಯಗನುಗುಣವಾಗಿ ಸೇರಿಸಿ ಜೈವಿಕತ್ವಗಳನ್ನು ನಾಶಪಡಿಸಿ ವಿಜಯಪುರ ನಗರದ ಸಾರ್ವಜನಿಕರಿಗೆ ಕುಡಿಯಲು ಸರಬರಾಜು ಮಾಡಲಾಗುತ್ತಿದೆ.ಪ್ರಸ್ತುತ, ವಿಜಯಪುರ ನಗರಕ್ಕೆ ನೀರು ಸರಬರಾಜು ಮಾಡುವ ಆಲಮಟ್ಟಿ ಹಿನ್ನೀರಿಗೆ ಜಲಾಶಯದ ಜಲಾನಯನ ಪ್ರದೇಶದಲ್ಲಿ ಮಳೆಯಾಗಿದ್ದು, ಹೊಸ ನೀರು ಸೇರ್ಪಡೆಗೊಂಡಿರುವ ಕಾರಣ ವಿಜಯಪುರ ನಗರದ ಸಾರ್ವಜನಿಕರು ನೀರನ್ನು ಕಾಯಿಸಿ ಕುಡಿಯಬೇಕು ಎಂದು ಕರ್ನಾಟಕ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರ ಪ್ರಕಟಣೆ ತಿಳಿಸಿದೆ.
ವಿಜಯಪುರ: ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ಜುಲೈ ೩೦ ರಂದು ತಾಳಿಕೋಟೆ ಹಾಗೂ ವಿಜಯಪುರ ತಾಲೂಕಿನ ರೈತರಿಗೆ ‘ವಿವಿಧ ಬೆಳೆಗಳಲ್ಲಿ ಸೂಕ್ಷ್ಮ ನೀರಾವರಿ ಘಟಕದ ಉಪಯೋಗಗಳು ಅಳವಡಿಕೆ ಹಾಗೂ ನಿರ್ವಹಣೆ’ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಆಸಕ್ತ ರೈತರು ಭಾಗವಹಿಸಿ ತರಬೇತಿಯ ಸಂಪೂರ್ಣ ಮಾಹಿತಿ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ವಿಜಯಪುರ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಕೃಷಿ ಅಧಿಕಾರಿಗಳಾದ ಗೀತಾ ಭಜಂತ್ರಿ (ಮೋ: ೮೨೭೭೯೩೦೬೧೯) ಅವರನ್ನು ಸಮರ್ಕಿಸಬೇಕು ಎಂದು ವಿಜಯಪುರ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಉಪ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ಜುಲೈ ೩೦ ರಂದು ತಾಳಿಕೋಟೆ ಹಾಗೂ ವಿಜಯಪುರ ತಾಲೂಕಿನ ರೈತರಿಗೆ ‘ವಿವಿಧ ಬೆಳೆಗಳಲ್ಲಿ ಸೂಕ್ಷ್ಮ ನೀರಾವರಿ ಘಟಕದ ಉಪಯೋಗಗಳು ಅಳವಡಿಕೆ ಹಾಗೂ ನಿರ್ವಹಣೆ’ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಆಸಕ್ತ ರೈತರು ಭಾಗವಹಿಸಿ ತರಬೇತಿಯ ಸಂಪೂರ್ಣ ಮಾಹಿತಿ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ವಿಜಯಪುರ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಕೃಷಿ ಅಧಿಕಾರಿಗಳಾದ ಗೀತಾ ಭಜಂತ್ರಿ (ಮೋ: ೮೨೭೭೯೩೦೬೧೯) ಅವರನ್ನು ಸಮರ್ಕಿಸಬೇಕು ಎಂದು ವಿಜಯಪುರ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಉಪ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರರು (ಸಂಪುಟ ದರ್ಜೆ) ಜು.೨೮ ರಂದು ಸಂಜೆ ೪ ಗಂಟೆಗೆ ವಿಜಯಪುರಕ್ಕೆ ಆಗಮಿಸಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಸಹಯೋಗದಲ್ಲಿ ನಗರದ ಪೊಲೀಸ್ ಸಮುದಾಯ ಭವನದಲ್ಲಿ ಹಮ್ಮಿಕೊಂಡ ಪತ್ರಿಕಾ ದಿನಾಚರಣೆ, ಪ್ರತಿಭಾ ಪುರಸ್ಕಾರ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಸಂಜೆ ೬ ಗಂಟೆಗೆ ಕಲ್ಬುರ್ಗಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ವಿಜಯಪುರ: ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆ ಸರ್ಕಾರದ ಕಾರ್ಯದರ್ಶಿಗಳಾದ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಜ್ವಲ್ಕುಮಾರ್ ಘೋಷ ಅವರು ಜು.೨೮ ಹಾಗೂ ೨೯ರಂದು ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಜು.೨೮ರಂದು ವಿಜಯಪುರಕ್ಕೆ ಆಗಮಿಸಿ ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ಇಲಾಖೆಗಳ ವಸತಿ ನಿಲಯ, ರೈತ ಸಂಪರ್ಕ ಕೇಂದ್ರ, ಪಿ.ಎಚ್.ಸಿ., ಸಿ.ಹೆಚ್.ಸಿ, ಆಸ್ಪತ್ರೆಗಳ ಕ್ಷೇತ್ರ ವೀಕ್ಷಣೆ ಹಾಗೂ ಪರಿಶೀಲನೆ ನಡೆಸಿ ನಂತರ ಮುಂಗಾರು ಋತುವಿನ ವಿಪತ್ತು ನಿರ್ವಹಣೆಯ ಯೋಜನೆಯ ಪರಿಶೀಲನೆ ಹಾಗೂ ಇತರೆ ವಿಷಯಗಳ ಕುರಿತು ಚರ್ಚೆ ನಡೆಸಲಿದ್ದಾರೆ.ಜು.೨೯ರಂದು ಬೆಳಿಗ್ಗೆ ೧೦-೩೦ರಿಂದ ೧-೩೦ರವರೆಗೆ ಸಭೆ ನಡೆಸಿ, ೧-೩೦ರಿಂದ ಕ್ಷೇತ್ರ ವೀಕ್ಷಣೆ ನಡೆಸಿ, ವಿಜಯಪುರದಿಂದ ಕಲ್ಬುರ್ಗಿ ಮೂಲಕ ಬೆಂಗಳೂರಿಗೆ ಮರು ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ವಿಜಯಪುರ: ಕಾರ್ಗಿಲ್ ಯುದ್ಧದದಲ್ಲಿ ದೇಶಕ್ಕಾಗಿ ಹುತಾತ್ಮರಾದ ಯೋಧರನ್ನು ನೆನೆಯುವುದು ಎಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್ ಶಾಲೆಯ ಹಿರಿಯ ಕಾರ್ಯ ಸಂಯೋಜಕಿ ದೀಪಾ ಜಂಬೂರೆ ಹೇಳಿದ್ದಾರೆ.ಶುಕ್ರವಾರ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್ ಶಾಲೆಯಲ್ಲಿ ನಡೆದ ಕಾರ್ಗಿಲ್ ವಿಜಯ ದಿವಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.24 ವರ್ಷಗಳ ಹಿಂದೆ ನಡೆದ ಕಾರ್ಗಿಲ್ ಯುದ್ಧದಲ್ಲಿ ನಮ್ಮ ಗಡಿಯನ್ನು ಅತೀಕ್ರಮಿಸಿದ್ದ ಪಾಕಿಸ್ತಾನಿ ಸೈನಿಕರನ್ನು ಭಾರತೀಯ ಯೋಧರು ಸದೆಬಡಿದು ಗೆಲುವು ಸಾಧಿಸಿದರು. ಈ ಯುದ್ಧದಲ್ಲಿ ಹಲವಾರು ಸೈನಿಕರು ಪ್ರಾಣ ತ್ಯಾಗ ಮಾಡಿದರು. ಅಲ್ಲದೇ, ಅನೇಕ ಯೋಧರು ಗಾಯಗೊಂಡಿದ್ದರು. ಈ ಯುದ್ಧದಲ್ಲಿ ಪಾಲ್ಗೊಂಡ ಪ್ರತಿಯೊಬ್ಬ ಸೈನಿಕರನ್ನು ನೆನೆದು ಗೌರವಿಸುವುದು ಎಲ್ಲರ ಕರ್ತವ್ಯವಾಗಿದೆ ಎಂದು ಅವರು ಹೇಳಿದರು.ವಿದ್ಯಾರ್ಥಿಗಳಾದ ಅನುಪ್ರಿಯಾ ಕುಲಕರ್ಣಿ ಮತ್ತು ಪೃಥ್ವಿ ಕೆ. ಕಾರ್ಗಿಲ್ ಯುದ್ಧದ ಸಂದರ್ಭದಲ್ಲಿ ಯೋಧರು ಪ್ರತಿಹೆಜ್ಜೆಗೂ ಎದುರಾದ ಪ್ರಾಣಾಪಾಯ ಲೆಕ್ಕಿಸದೇ ನಡೆಸಿದ ಹೋರಾಟದ ಕುರಿತು ಮಾಹಿತಿ ನೀಡಿದರು.ಈ ಸಂದರ್ಭದಲ್ಲಿ 9ನೇ ತರಗತಿಯ ಎಲ್ಲ ವಿದ್ಯಾರ್ಥಿಗಳು ಯೋಧರ…
ವಿಜಯಪುರ: ಹಿಂದುಸ್ತಾನ ಕೋಕಾ ಕೋಲಾ ಬೆವೆರಜಿಸ್ ಕಂಪನಿ ವತಿಯಿಂದ ಸಿಎಸ್ಆರ್ ಅನುದಾನದಲ್ಲಿ ಐತಿಹಾಸಿಕ ಮಮದಾಪುರ ಕೆರೆಯ ಪುನರುಜ್ಜೀವನ ಕಾಮಗಾರಿಗೆ ದಿ.28 ರವಿವಾರ ಬೆ.10.30ಗಂ. ಮಮದಾಪುರ ಕೆರೆ ಆವರಣದಲ್ಲಿ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಭೂಮಿ ಪೂಜೆ ಸಲ್ಲಿಸಲಿದ್ದಾರೆ.ಈ ಯೋಜನೆಯಲ್ಲಿ ಬಾಂದಾರ ನಿರ್ಮಾಣ ಹಾಗೂ 800 ಮೀಟರ್ ಟ್ಯಾಂಕ್ ಬಾಂದಾರಗಳನ್ನು ಅಭಿವೃದ್ಧಿ ಪಡಿಸಲಾಗುವುದು. ಫೆನ್ಸಿಂಗ್ ಮತ್ತು ಹ್ಯಾಂಡ್ರೈಲ್ಗಳನ್ನು ಸ್ಥಾಪಿಸುವುದು, ಫುಟ್ಪಾತ್ಗಳನ್ನು ರಚಿಸುವುದು ಮತ್ತು ಮಕ್ಕಳ ಆಟದ ಪ್ರದೇಶವನ್ನು ಸ್ಥಾಪಿಸುವ ಉದ್ದೇಶ ಹೊಂದಿದೆ. ಅಲ್ಲದೇ, ಸಿದ್ದೇಶ್ವರ ಸ್ವಾಮೀಜಿ ಅವರ ಸ್ಮರಣಾರ್ಥ ಅರಣ್ಯೀಕರಣದ ಉಪಕ್ರಮವು ಕೆರೆಯ ಸುತ್ತಲಿನ 1,654 ಎಕರೆಗಳನ್ನು ಒಳಗೊಂಡಿದೆ. ಯೋಜನೆ ಪೂರ್ಣಗೊಂಡರೆ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣವಾಗಿ ಪರಿವರ್ತನೆಯಾಗಲಿದೆ.ಇದೇ ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರದ 25 ಸರಕಾರಿ ಪ್ರೌಢ ಶಾಲೆಗಳಿಗೆ ಏಕಸ್ ಕಂಪನಿ ವತಿಯಿಂದ ಸಿಎಸ್ಆರ್ ಅನುದಾನದಿಂದ ನೀಡಿದ ಸ್ಮಾರ್ಟ್ ಕ್ಲಾಸ್ ಬೋರ್ಡ್ಗಳನ್ನು ನೀಡಿದ್ದು, ಬೆ.11ಗಂ. ಮಮದಾಪುರ ಕೆಪಿಎಸ್ ಪ್ರೌಢಶಾಲೆಯಲ್ಲಿ ಉದ್ಘಾಟಿಸಲಾಗುವುದು.ಈ ಸಂದರ್ಭದಲ್ಲಿ ಮಮದಾಪುರ ವಿರಕ್ತಮಠದ ಪರಮ ಪೂಜ್ಯ ಅಭಿನವ ಮುರುಘೇಂದ್ರ…
ವಿಜಯಪುರ: ಭಾರತದಲ್ಲಿ ಶಾಲಾ ಶಿಕ್ಷಣ ವ್ಯವಸ್ಥೆಯು ವಿಶಾಲವಾಗಿದೆ. ಸಾಂಪ್ರದಾಯಿಕ ಶಿಕ್ಷಣವು ವಿದ್ಯಾರ್ಥಿಗಳಲ್ಲಿ ನೈತಿಕತೆಯನ್ನು ತುಂಬುವುದರ ಮೇಲೆ ಕೇಂದ್ರೀಕರಿಸಿ, ಮಕ್ಕಳ ಜ್ಞಾನವನ್ನು ವಿಸ್ತರಿಸಿ, ವ್ಯಕ್ತಿತ್ವದ ಬೆಳವಣಿಗೆಗೆ ಸಹಕರಿಸಬೇಕು ಎಂದು ಡೈಟ್ ಕಾಲೇಜಿನ ಪ್ರಾಚಾರ್ಯ ಉಮಾದೇವಿ ಸೊನ್ನದ ಹೇಳಿದರು.ಅವರು ಇಟ್ಟಂಗಿಹಾಳ ರಸ್ತೆಯಲ್ಲಿರುವ ಏಕ್ಸಲೆಂಟ್ ಶಾಲೆಯಲ್ಲಿ ಶುಕ್ರವಾರದಂದು ಭಾರತೀಯ ಶಿಕ್ಷಣ ಮಂಡಲ ಕರ್ನಾಟಕ ಉತ್ತರ ಪ್ರಾಂತ ಹಾಗೂ ಏಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ಜರುಗಿದ ವಿದ್ಯಾಲಯ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಗತಿವಿಧಿ, ಪ್ರಾಂತ ಮಟ್ಟದ ಶಿಕ್ಷಕ ಸ್ವಾಧ್ಯಾಯ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.ಉತ್ತಮ ಗುಣಮಟ್ಟದ, ಸಾರ್ವತ್ರಿಕ, ಸಮಗ್ರ ಶಿಕ್ಷಣದ ಮೂಲಕ ಸಮಾನ ಜ್ಞಾನಾಧಾರಿತ ಸಮಾಜ ಸ್ಥಾಪಿಸುವಲ್ಲಿ ಎಲ್ಲರೂ ಶ್ರಮಿಸಬೇಕಾಗಿದೆ ಎಂದು ಹೇಳಿದರು. ಭಾರತೀಯ ಶಿಕ್ಷಣ ಮಂಡಲದ ಅಖಿಲ ಭಾರತೀಯ ಸಹ ಕಾರ್ಯದರ್ಶಿ ಡಾ.ಮೀನಾ ಚಂದಾವರ್ಕರ್ ಮಾತನಾಡಿ, ಶಿಕ್ಷಣ ಕ್ಷೇತ್ರದಲ್ಲಿ ರಾಷ್ಟ್ರೀಯ ಪುನರುತ್ಥಾನದ ಉದ್ದೇಶದಿಂದ ಈ ಸಂಸ್ಥೆಯು ಸಮಗ್ರ ಭಾರತೀಯ ದೃಷ್ಟಿಕೋನದ ಆಧಾರದ ಮೇಲೆ ರಾಷ್ಟ್ರೀಯ ಶಿಕ್ಷಣ ನೀತಿ, ಪಠ್ಯಕ್ರಮ, ವ್ಯವಸ್ಥೆ ಮತ್ತು ವಿಧಾನಗಳನ್ನು ವಿಕಸಿಸುವ ಗುರಿಯನ್ನು…
ವಿಜಯಪುರ: ಜು.೨೬ “ಕಾರ್ಗಿಲ್ ವಿಜಯ ದಿವಸ್” ನಮ್ಮ ದೇಶದ ಗಡಿಯನ್ನು ಅತಿಕ್ರಮಿಸುವ ಮೂಲಕ ಯುದ್ಧಕ್ಕೆ ಬಂದ ಶತ್ರು ದೇಶ ಪಾಕಿಸ್ತಾನದ ಸೈನಿಕರನ್ನು, ನಮ್ಮ ದೇಶದ ಹೆಮ್ಮಯ ಸೈನಿಕರು ಹೊಡೆದೋಡಿಸುವ ಮೂಲಕ ನಮ್ಮ ಸಾಮರ್ಥ್ಯವನ್ನು ಇಡೀ ಜಗತ್ತಿಗೆ ತೋರಿಸಿದ ದಿನ.ನಮ್ಮ ತಾಯಿ ಭಾರತಾಂಬೆಯ ರಕ್ಷಣೆಗಾಗಿ ಕಾರ್ಗಿಲ್ ಯುದ್ಧದಲ್ಲಿ ಪ್ರಾಣತ್ಯಾಗ ಮಾಡಿದ ಹಾಗೂ ಗಾಯಗೊಂಡ ಸಾವಿರಾರು ವೀರ ಯೋಧರನ್ನು ಸ್ಮರಿಸುತ್ತಾ ಭಕ್ತಿಪೂರ್ವಕ ನಮನಗಳನ್ನು ಸಲ್ಲಿಸುವ ಈ ಸುಸಂದರ್ಭದಲ್ಲಿ ಶುಕ್ರವಾರ ತಾಲೂಕು ಪಂಚಾಯತ ವಿಜಯಪುರ ಸಭಾಭವನದಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಹೊಂಗಯ್ಯ ಹಾಗೂ ಸಹಾಯಕ ನಿರ್ದೇಶಕ (ಗ್ರಾ.ಉ) ಮಸಳಿ ಅವರ ಸಮ್ಮುಖದಲ್ಲಿ ಎಲ್ಲ ಅಧಿಕಾರಿ ಸಿಬ್ಬಂದಿ ವರ್ಗದವರೆಲ್ಲರ ಉಪಸ್ಥಿತಿಯಲ್ಲಿ ತಾಯ್ನಾಡಿಗಾಗಿ ತಮ್ಮ ಅಮೂಲ್ಯ ಸೇವೆ ಸಲ್ಲಿಸಿದ ಮಾಜಿ ಸೈನಿಕರಾದ ಎಸ್ ಆರ್ ಕಟ್ಟಿ ಮತ್ತು ಬಿ ಆರ್ ರಾಥೋಡ ಸರ್ ಅವರಿಗೆ ಹೃದಯ ಸ್ಪರ್ಶಿ ನಮನಗಳನ್ನು ತಿಳಿಸಿ ಈರ್ವರಿಗೂ ಸತ್ಕರಿಸಲಾಯಿತು.
