Author: editor.udayarashmi@gmail.com

ಬಂಜಾರಾ ಪ್ರೌಢ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಸುಧಾರಣೆ ಕುರಿತು ಮುಖ್ಯ ಗುರುಗಳ ಸಭೆ ವಿಜಯಪುರ: ಪರೀಕ್ಷೆ ಶಾಲಾ ಶಿಕ್ಷಣ ಬದುಕಿನ ಅವಿಭಾಜ್ಯ ಅಂಗ. ಸದ್ಯ ಶಾಲಾ ಶಿಕ್ಷಣದಲ್ಲಿ ಪರೀಕ್ಷೆ ಒಂದು ಪ್ರಧಾನ ಭಾಗವೇ ಆಗಿ ಬಿಟ್ಟಿದೆ. ಅದರಲ್ಲಿ ಬೇರೆ ಬೇರೆ ತರಗತಿಗಳಲ್ಲಿ ವಿವಿಧ ಹಂತದ ಪರೀಕ್ಷೆಗಳಿರುವುದು ಗೊತ್ತಿರುವ ವಿಷಯವೇ. ಪರೀಕ್ಷೆಯ ಮೂಲಕ ವಿದ್ಯಾರ್ಥಿಗಳ ಕಲಿಕಾ ಮಟ್ಟವನ್ನು ಗುರುತಿಸಿ ಆ ಮೂಲಕ ವಿದ್ಯಾರ್ಥಿಯ ಮುಂದಿನ ಕಲಿಕಾ ಕಾರ್ಯತಂತ್ರಗಳನ್ನು ರೂಪಿ, ವಿದ್ಯಾರ್ಥಿಗಳ ಉತ್ತೀರ್ಣತೆಗೆ ಕ್ರಮ ಕೈಗೊಳ್ಳಲಾಗುತ್ತದೆ. ಜತೆಗೆ ಪಾಸು ಅಥವಾ ಫೈಲು ಎಂಬುನ್ನು ನಿರ್ಧರಿಸುವುದಕ್ಕೆ ಪರೀಕ್ಷೆ ಪ್ರಧಾನ ಸಲಕರಣೆಯೂ ಆಗಿದೆ ಎಂದು ಶಿಕ್ಷಣ ಸಂಯೋಜಕರಾದ ಎಲ್.ಎಸ್.ಬಿರಾದಾರರವರು ಹೇಳಿದರು.ಜಿಲ್ಲಾ ಬಂಜಾರಾ ವಿದ್ಯಾವರ್ಧಕ ಸಂಘದ ಬಂಜಾರಾ ಆಂಗ್ಲ ಮಾದ್ಯಮ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಸುಧಾರಣೆ ಕುರಿತು ಶಾಲಾ ಮುಖ್ಯ ಗುರುಗಳ ಸಭೆಯನ್ನು ಉದ್ಧೇಶಿಸಿ ಮಾತನಾಡಿದ ಅವರು. ಶಾಲೆಯ ಶಿಕ್ಷಕರು ಬೆಳಗಿನ ಜಾವ ಎದ್ದು ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಮೊಬೈಲ್ ಪೋನ್ ಮೂಲಕ ಕರೆ ಮಾಡಿ ಬೆಳಗಿನ…

Read More

ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಕಾಲೇಜ್ ಪ್ರಾಣಿ ಶಾಸ್ತ್ರ ವಿಭಾಗದಿಂದ ಬೂತನಾಳ ಕೆರೆ ಆವರಣದಲ್ಲಿ ತರಬೇತಿ & ಉಪನ್ಯಾಸ ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದ ಪ್ರಾಣಿಶಾಸ್ತ್ರ ವಿಭಾಗ ಮತ್ತು ಮೀನುಗಾರಿಕೆ ಸಂಶೋಧನೆ ಮತ್ತು ಮಾಹಿತಿ ಕೇಂದ್ರ ಭೂತನಾಳ ಸಂಯೋಜನ ಅಡಿಯಲ್ಲಿ ಬೂತನಾಳ ಕೆರೆ ಆವರಣದಲ್ಲಿ ಹಮ್ಮಿಕೊಂಡಿದ್ದ ಒಂದು ದಿನದ ತರಬೇತಿ ಮತ್ತು ಉಪನ್ಯಾಸವನ್ನು ಕಾರ್ಯಕ್ರಮದಲ್ಲಿ ವೈಜ್ಞಾನಿಕ ಮೀನು ಸಾಕಾಣಿಕೆ ಕುರಿತು ಮಾತನಾಡಿದ ಅವರು, ವಿದ್ಯಾರ್ಥಿಗಳು ಮೀನುಗಾರಿಕೆ, ಮತ್ತು ಮೀನುಗಳ ಪೌಷ್ಟಿಕಾಂಶದ ಮೌಲ್ಯಗಳು, ಜಲಚರ ಸಾಕಣೆ, ಅಲಂಕಾರಿಕ ಮೀನುಗಳು, ವಿವಿಧ ಜಾತಿಯ ಮೀನುಗಳನ್ನು ಗುರುತಿಸುವುದು ಹೇಗೆ, ಸಂರಕ್ಷಣೆ ತಂತ್ರಗಳು, ಉದ್ಯಮಶೀಲತೆಗೆ ಸಂಬಂಧಿಸಿದ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಪ್ರಾಯೋಗಿಕವಾಗಿ ಫಿಶ್ ಗೇರ್ ಮತ್ತು ಬಲೆಗಳನ್ನು ಉಪಯೋಗಿಸಿ ಮೀನನ್ನು ಹಿಡಿಯುವ ವಿಧಾನಗಳನ್ನು ವೀಕ್ಷಿಸಿದರು.ಈ ಸಂದರ್ಭದಲ್ಲಿ ಉದ್ಘಾಟಕರಾಗಿ ವಿಜಯಪುರದ ಭೂತನಾಳ ಕೆರೆ ಮೀನುಗಾರಿಕೆ ಸಂಶೋಧನೆ ಮತ್ತು ಮಾಹಿತಿ ಕೇಂದ್ರ ಮುಖ್ಯಸ್ಥ ಡಾ.ವಿಜಯ್ ಎಸ್ ಅಥನೂರ್,…

Read More

ಚಡಚಣ: ತಾಲೂಕಿನ ಜಿಗಜೇವಣಿ ಗ್ರಾಮದ ಗದ್ಯಾಳ ವಸ್ತಿಯಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಮಲ್ಲಪ್ಪ ಶಿವಪ್ಪ ವಾಘಮೋರೆ ಅವರಿಗೆ ‘ಕವಿ ಚಕ್ರವರ್ತಿ ರನ್ನ ಪ್ರಶಸ್ತಿ’ ಪ್ರಧಾನ ಮಾಡಲಾಯಿತು.ಪ್ರಶಸ್ತಿ ಪುರಸ್ಕೃತ ಮುಖ್ಯ ಶಿಕ್ಷಕ ಮಲ್ಲಪ್ಪ ಅವರು ಶಿಕ್ಷಕರಾಗಿ ಕಳೆದ 24 ವರ್ಷಗಳಿಂದ ಅಕ್ಷರದ ಜ್ಞಾನಾರ್ಜನೆಯನ್ನು ಮಕ್ಕಳಿಗೆ ನೀಡುತ್ತಾ ಬಂದಿರುವುದನ್ನು ಗುರುತಿಸಿ, ಮುಧೋಳದ ಮೇಘ ಮೇತ್ರಿ ಕನ್ನಡ ಸಾಹಿತ್ಯ ಸಂಘವು ಮುಧೋಳ ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ಹಮ್ಮಿಕೊಂಡ ರನ್ನ ಸಾಹಿತ್ಯ ಸಂಭ್ರಮ-2024 ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ನೀಡಿ, ಗೌರವಿಸಿದರು.ಇವರ ಸಾಧನೆಗೆ ಶಾಲೆಯ ಎಸ್.ಡಿ.ಎಂ.ಸಿ ಮಂಡಳಿಯ ಸರ್ವ ಸದಸ್ಯರು ಹಾಗೂ ಶಿಕ್ಷಕರ ವೃಂದ ಸೇರಿ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿ, ಅಭಿನಂದಿಸಿದ್ದಾರೆ.

Read More

ತಾಳಿಕೋಟಿ: ಪಟ್ಟಣದ ಮುಸ್ಲಿಂ ಸಮಾಜದ ಪ್ರತಿಷ್ಠಿತ ದಿ. ಮುಸ್ಲಿಮ್ ಕೋ-ಆಪರೇಟಿವ್ಹ ಬ್ಯಾಂಕ್ ಲಿ.ಇದರ 2023-24 ನೇ ಸಾಲಿನ ವರ್ಷದಲ್ಲಿ ರೂ. 53.57 ಲಕ್ಷ ಲಾಭವನ್ನು ಹೊಂದಿದ್ದು ಇದರಲ್ಲಿ ರೂ.15 ಲಕ್ಷ ಆದಾಯ ತೆರಿಗೆಯನ್ನು ಸಲ್ಲಿಸಿ ರೂ.38.57 ಲಕ್ಷ ನಿವ್ವಳ ಲಾಭವನ್ನು ಗಳಿಸಿರುತ್ತದೆ ಎಂದು ಬ್ಯಾಂಕ್ ಅಧ್ಯಕ್ಷ ಡಿ.ಎಲ್.ಚೌದ್ರಿ ಹೇಳಿದರು.ಮಂಗಳವಾರ ಪತ್ರಿಕೆಯೊಂದಿಗೆ ಮಾತನಾಡಿದ ಅವರು, ವರದಿ ವರ್ಷದಲ್ಲಿ ಬ್ಯಾಂಕ್ ಗ್ರೇಡ್ 1 ರಲ್ಲಿ ಮುಂದುವರೆದಿದೆ. 2023-24 ಮಾರ್ಚ್ ಅಂತ್ಯದವರೆಗೆ ಬ್ಯಾಂಕಿನ ಒಟ್ಟು ಸದಸ್ಯರ ಸಂಖ್ಯೆ 5514 ಇದ್ದು, ರೂ.183.70 ಲಕ್ಷ ಶೇರು ಬಂಡವಾಳ ಹೊಂದಿದೆ.ರೂ.139.38 ಲಕ್ಷ ಕಾಯ್ದಿಟ್ಟ ನಿಧಿಗಳು. ರೂ.4697.74ಲಕ್ಷ ಠೇವು ಹಣ ಸಂಗ್ರಹವಾಗಿದ್ದು. ವರ್ಷಂತ್ಯಕ್ಕೇರೂ. 2931.45 ಲಕ್ಷ ಸಾಲವನ್ನು ನೀಡಲಾಗಿದೆ ಎಂದರು.ಈ ಬ್ಯಾಂಕ್ ಪ್ರತಿವರ್ಷ ಅಭಿವೃದ್ಧಿ ಪಥದತ್ತ ಸಾಗುತ್ತಿದ್ದು ಇದಕ್ಕೆ ಪ್ರಮುಖ ಕಾರಣೀಕರ್ತರು ಯಾವತ್ತೂ ಬ್ಯಾಂಕಿನ ಸದಸ್ಯರು, ಗ್ರಾಹಕರು, ನಿರ್ದೇಶಕ ಮಂಡಳಿಯ ಸದಸ್ಯರು ಹಾಗೂ ವಿಶೇಷವಾಗಿ ಬ್ಯಾಂಕಿನ ಸರ್ವತೋಮುಖ ಅಭಿವೃದ್ಧಿಗಾಗಿ ಸದಾ ಕಳಕಳಿ ಹಾಗೂ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿ ವರ್ಗದವರಿಗೆ…

Read More

ಇಂಡಿ: ಗೊಳಸಾರ ಮಠದ ಧಾರ್ಮಿಕ, ಅಧ್ಯಾತ್ಮಿಕ ಮತ್ತು ಜನಪರ ಸಾಮಾಜಿಕ ಕಾಳಜಿಯ ಕಾರ್ಯಕ್ರಮಗಳು ಅನನ್ಯವೆಂದು ಶಿಬಿರದ ಸಂಚಾಲಕ ಬಿಎಲ್ಡಿಇ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರ ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ.ಮಂಜುನಾಥ ಕೋಟೆಣ್ಣವರ ಹೇಳಿದರು.ಅವರು ವಿಜಯಪುರದ ಬಿ ಎಲ್ ಡಿ ಈ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ ಎಂ ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಆಸ್ಪತ್ರೆಯ ವತಿಯಿಂದ ಗೊಳಸಾರದ ಶ್ರೀ ಪುಂಡಲಿಂಗೇಶ್ವರ ಮಹಾಶಿವಯೋಗಿಗಳ ೪೫ ನೆಯ ಪುಣ್ಯಾರಾಧನೆ ಮಹೋತ್ಸವದ ನಿಮಿತ್ತ ಬ್ರಹತ್ ಉಚಿತ ಆರೋಗ್ಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.ಶಿಬಿರವನ್ನು ಅಭಿನವ ತ್ರಿಮೂರ್ತಿ ಶಿವಯೋಗಿಗಳು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.ಅಭಿನವ ಪುಂಡಲಿಂಗ ಶಿವಯೋಗಿಗಳು ಸಾನ್ನಿಧ್ಯ ವಹಿಸಿದ್ದರು.ಈ ಶಿಬಿರದಲ್ಲಿ ಸುಮಾರು ೫೦೦ ಕ್ಕೂ ಹೆಚ್ಚು ರೋಗಿಗಳನ್ನು ಪರೀಕ್ಷಿಸಿ, ಉಚಿತವಾಗಿ ಔಷದೋಪಚಾರಗಳನ್ನು ಮಾಡಲಾಯಿತು.ಸುಮಾರು ೬೦ ಕಣ್ಣಿನ ಶಸ್ತ್ರಚಿಕಿತ್ಸೆ ಮತ್ತು ೫೦ ಹೆಚ್ಚಿನ ಚಿಕಿತ್ಸೆ ಅವಶ್ಯಕತೆ ಇರುವ ರೋಗಿಗಳಿಗೆ ಬಿ ಎಲ್ಡಿಇ ಆಸ್ಪತ್ರೆಗೆ ದಾಖಲಾಗಲು ಶಿಫಾರಸ್ಸು ಮಾಡಲಾಯಿತು.೨೦ ಜನರು ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಿದರು.ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ವೈ.ಎಂ.ಪೂಜಾರಿ…

Read More

ಇಂಡಿ: ಆಚಾರ ವಿಚಾರಕ್ಕೆ, ಪೂಜೆ ಪುನಸ್ಕಾರಗಳಿಗೆ, ಅಂಧಕಾರಕ್ಕೆ, ಮೂಡ ನಂಬಿಕೆಗಳಿಗೆ, ಕಟ್ಟಪ್ಪಣೆಗಳಿಗೆ ಸೀಮಿತವಾಗಿರುವ ಧರ್ಮ ಧರ್ಮವೇ ಅಲ್ಲ. ಸಮಾಜದಲ್ಲಿ ನೊಂದ ಮನುಷ್ಯನನ್ನು ದುಶ್ಚಟಗಳಿಗೆ ದಾಸನಾಗಿರುವವನನ್ನು, ಬಡತನದಿಂದ ಕಂಗೆಟ್ಟಿರುವವನ್ನು, ರೋಗಗಳಿಂದ ನರಳುತ್ತಿರುವವನನ್ನು ಆರೈಕೆ ಮಾಡಿ ಅವನನ್ನು ಮೇಲೆತ್ತಲು ಪ್ರಯತ್ನಿಸುವುದೇ ನಿಜವಾದ ಧರ್ಮ ಎಂದು ಅಭಿನವ ರಾಚೋಟೇಶ್ವರ ಶ್ರೀಗಳು ಅಭಿಪ್ರಾಯಪಟ್ಟರು.ಅವರು ಗುರುವಾರ ಇಂಡಿ ಪಟ್ಟಣದ ಕಾಳಿಕಾ ದೇವಿ ಮಂಗಲ ಕಾರ್ಯಾಲಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಟ್ರಸ್ಟ ಹಮ್ಮಿಕೊಂಡಿದ್ದ ೭ ದಿನಗಳ ಮಧ್ಯವರ್ಜನ ಶಿಬಿರದ ಸಾನಿಧ್ಯತೆ ವಹಿಸಿ ಮಾತನಾಡಿದರು.ಧರ್ಮಸ್ಥಳದ ಗ್ರಾಮೀಣಾಭಿವೃದ್ಧಿ ಸಂಸ್ಥೆ ದೂರದ ಇಂಡಿ ಪಟ್ಟಣದಲ್ಲಿಯೂ ಕಳೆದ ೭ ವರ್ಷಗಳಿಂದ ಅನೇಕ ಸಾಮಾಜಿಕ ಪ್ರಗತಿಪರ ಕೆಲಸಗಳನ್ನು ಮಾಡುತ್ತಿದೆ. ಗ್ರಾಮಗಳಲ್ಲಿ ಕುಡಿಯುವ ನೀರು, ಸ್ವಚ್ಚತೆ, ರಸ್ತೆ ಅಭಿವೃದ್ಧಿ, ನಿರುದ್ಯೋಗಿಗಳಿಗೆ ಕೆಲಸ, ಕೈಗಾರಿಕೋದ್ಯಮಿ ಬೆಳವಣಿಗೆ, ಬಡವರಿಗೆ ಉದ್ಯೋಗ, ನಿರುದ್ಯೋಗಿಗಳಿಗೆ ಆರ್ಥಿಕ ಸಹಾಯ ಮುಂತಾದ ಕೆಲಸಗಳೊಂದಿಗೆ ಮಧ್ಯವರ್ಜನಿಗಳನ್ನು ಕೂಡಿಸಿ, ಅವರಿಗೆ ತಿಳುವಳಿಕೆ ನೀಡಿ, ಉಟೋಪಚಾರ ಮಾಡಿಸಿ, ಮಧ್ಯ ಸೇವನೆಯಿಂದ ಆಗುವ ದುಷ್ಪರಿಣಾಮಗಳನ್ನು ತಿಳಿಸಿ, ದುಶ್ಚಟದಿಂದ ಮುಕ್ತಿ ಹೊಂದುವಂತೆ ಕೆಲಸ…

Read More

ಇಂಡಿ: ವಿದ್ಯಾರ್ಥಿಗಳು ಆದರ್ಶ ನಾಯಕತ್ವದ ಗುಣಗಳನ್ನು ಬೆಳಸಿಕೊಳ್ಳಬೇಕು ಎಂದು ಬಿ.ಡಿ. ಇ ಕಾಲೇಜಿನ ಪ್ರೊ.ರಘೋತ್ತಮ ಅರ್ಜುಣಗಿ ಹೇಳಿದರು.ಅವರು ಇಂಡಿ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ವಾಣಿಜ್ಯಶಾಸ್ತ್ರ ವಿಭಾಗ ಮತ್ತು ಐಕ್ಯೂಎಸಿ ಅಡಿಯಲ್ಲಿ ಹಮ್ಮಿಕೊಂಡಿದ್ದ ನಾಯಕತ್ವದ ಗುಣಗಳು ಎಂಬ ವಿಶೇಷ ಉಪನ್ಯಾಸ ʼ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು.ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಚಾರ್ಯ ಆರ್.ಎಚ್.ರಮೇಶ ಮಾತನಾಡಿ ಭವಿಷ್ಯದ ಭಾರತಕ್ಕೆ ಉತ್ತಮ ನಾಯಕತ್ವದ ಗುಣಗಳನ್ನು ಯುವಜನತೆ ಅಳವಡಿಸಿಕಳ್ಳಬೇಕು ಎಂದರು.ಐಕ್ಯೂಎಸಿ ಸಂಯೋಜಕರಾದ ಡಾ.ಶೀರುನುಸುಲ್ತಾನ ಇನಾಂದಾರ, ಪ್ರೊ.ತಿಪ್ಪಣ್ಣ ವಗ್ದಾಳ,ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ರಾಜಲಕ್ಷ್ಮಿ ಆರ್, ಉಪನ್ಯಾಸಕರಾದ ಪ್ರೊ.ಪಿಎಸ್.ದೇವರ, ಎಂ.ಎಚ್.ಮೋಮಿನ್, ಪೂಜಾ ಡಿ.ಆರ್, ಭಾರತಿ ಕನ್ನೊಳ್ಳಿಮೊದಲಾದವರು ವೇದಿಕೆಯಲ್ಲಿದ್ದರು.ಕು.ರಾಹುಲ್ಭಾಸಗಿ ಸ್ವಾಗತಿಸಿದರು. ಕು.ರಮೇಶ ಮಾವನಿಹಳ್ಳಿ ನಿರೂಪಿಸಿದರು. ಕು.ಸ್ವಾಗತ ಸಾತಲಗಾಂವ ವಂದಿಸಿದರು.

Read More

ತಾಳಿಕೋಟಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕದ ವತಿಯಿಂದ ನೀಡಲಾಗುವ 2024 ನೇ ಸಾಲಿನ ಸಂಘದ ವಾರ್ಷಿಕ ಪ್ರಶಸ್ತಿಗೆ ಪಟ್ಟಣದ ಕ್ರಿಯಾಶೀಲ ವರದಿಗಾರ ಸುನೀಲ ತಳವಾರ ಆಯ್ಕೆಯಾಗಿದ್ದಾರೆ.ಮಾಧ್ಯಮ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಜಿಲ್ಲೆಯ ಒಟ್ಟು 31 ಜನರನ್ನು ಆಯ್ಕೆ ಮಾಡಲಾಗಿದ್ದು ಇದರಲ್ಲಿ ಪಟ್ಟಣದ ಕನ್ನಡಮ್ಮ ದಿನಪತ್ರಿಕೆಯ ತಾಲೂಕ ವರದಿಗಾರ ರಾಗಿರುವ ಸುನೀಲ ತಳವಾರ ಕೂಡಾ ಒಬ್ಬರಾಗಿದ್ದಾರೆ.ಜುಲೈ 28 ರಂದು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಯೋಗದಲ್ಲಿ ನಗರದ ಪೊಲೀಸ್ ಸಮುದಾಯ ಭವನದಲ್ಲಿ ನಡೆಯಲಿರುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಕೈಗಾರಿಕೆ ಮತ್ತು ಮೂಲ ಸೌಲಭ್ಯ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ, ಸಕ್ಕರೆ ಮತ್ತು ಎಪಿಎಂಸಿ ಸಚಿವ ಶಿವಾನಂದ ಪಾಟೀಲ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್, ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ, ಸಂಸದ ರಮೇಶ ಜಿಗಜಿಣಗಿ ಹಾಗೂ ಜಿಲ್ಲೆಯ ಎಲ್ಲ ಶಾಸಕರ ಸಮ್ಮುಖದಲ್ಲಿ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಲಾಗುತ್ತಿದೆ…

Read More

ವಿಜಯಪುರ: ರಾಷ್ಟ್ರೀಯ ಬಂಜಾರಾ ಪರಿಷದ್ ಯುವ ಘಟಕದ ರಾಜ್ಯಾಧ್ಯಕ್ಷರನ್ನಾಗಿ, ಬಿಜೆಪಿ ನಗರ ಮಂಡಲ ಎಸ್.ಸಿ ಮೋರ್ಚಾ ಅಧ್ಯಕ್ಷರಾದ ಪ್ರಕಾಶ ಚವ್ಹಾಣ ಅವರನ್ನು ನೇಮಕ ಮಾಡಿ ಪರಿಷದ್ ರಾಷ್ಟ್ರೀಯ ಅಧ್ಯಕ್ಷ ವಿಲಾಸಬಾಹು ರಾಠೋಡ ಆದೇಶ ಹೊರಡಿಸಿದ್ದಾರೆ.

Read More

ಇಂಡಿ: ತಾಲ್ಲೂಕಿನಲ್ಲಿ ಸಮಸ್ಯೆಗಳ ಸರಮಾಲೆ ತುಂಬಿಕೊಂಡಿವೆ. ಅವುಗಳನ್ನು ಕೂಡಲೇ ಸರಕಾರದ ಗಮನಕ್ಕೆ ತಂದು ಪರಿಹರಿಸಬೇಕು ಎಂದು ಬಿಜೆಪಿ ಮುಖಂಡ ಅದೃಷಪ್ಪ ವಾಲಿ (ಮಸಳಿ) ಅವರು ಜಿಲ್ಲಾಧಿಕಾರಿ ಟಿ ಭೂಬಾಲನ್ ಅವರಿಗೆ ಮನವಿ ಸಲ್ಲಿಸಿದರು.ಬುಧವಾರ ಪಟ್ಟಣದ ಆಡಳಿತ ಸೌಧಕ್ಕೆ ಡೆಂಗ್ಯೂ ಜಾಗೃತಿ ಜಾಥಾ ಚಾಲನೆ‌ ನೀಡಲು ಜಿಲ್ಲಾಧಿಕಾರಿ ಆಗಿಮಿಸಿದ್ದರು. ಈ ಸಂದರ್ಭದಲ್ಲಿ ಮಸಳಿ ಹಾಗೂ ಇತರೆ ಗ್ರಾಮಸ್ಥರು ತಾಲ್ಲೂಕಿನಲ್ಲಿ ಹಲವಾರು ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿ ಗಮನಕ್ಕೆ ತಂದು ಮನವಿ ಸಲ್ಲಿಸಿದರು.ತಾಲ್ಲೂಕು ಆಸ್ಪತ್ರೆಯಲ್ಲಿ ವೈದ್ಯ ಅಧಿಕಾರಿ, ಹಾಗೂ ಗರ್ಭಿಣಿಯರಿಗೆ ಬಿಸಿ ನೀರು ಸೇರಿದಂತೆ ಇತರೆ ಸಮಸ್ಯೆಗಳು ಎದ್ದು ಕಾಣುತ್ತಿವೆ.‌ ಇನ್ನೂ ತಾಲ್ಲೂಕಿನ ಗ್ರಾಮೀಣ ಭಾಗದ ರಸ್ತೆಗಳು ಹದಗೆಟ್ಟು ಹೋಗಿವೆ. ಜನರು ವ್ಯಾಪಾರ, ವಹಿವಾಟು, ಆಸ್ಪತ್ರೆ, ಶಾಲೆಗೆ ಬರುವ ಮಕ್ಕಳ ಗೋಳು ಹೇಳತಿರದಂತಾಗಿದೆ. ಇನ್ನೂ ಪಡಿತರ ಚೀಟಿ, ಶುದ್ದ ಕುಡಿಯುವ ನೀರಿನ ಸಮಸ್ಯೆ ಇನ್ನೂ ಹಲವಾರು ಸಮಸ್ಯೆಗಳು ತಾಲ್ಲೂಕಿನಲ್ಲಿ ತಾಂಡವಾಡುತ್ತಿವೆ. ಕೂಡಲೇ ಜಿಲ್ಲಾಧಿಕಾರಿಗಳು ಸರಕಾರದ ಗಮನಕ್ಕೆ ತಂದು ಜನಸಾಮಾನ್ಯರ ಸಾರ್ವಜನಿಕ ಸಮಸ್ಯೆಗಳು ಪರಿಹಾರ ನೀಡಬೇಕು ಎಂದು…

Read More