Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಇಂಡಿ: ಅಕ್ರಮವಾಗಿ ವಾಹನದಲ್ಲಿ ಅಕ್ಕಿ ಸಾಗಾಟದ ವೇಳೆ ಪೊಲೀಸರು ಹಾಗೂ ಆಹಾರ ನಿರೀಕ್ಷಕ ಅಧಿಕಾರಿಗಳು ದಾಳಿಗೈದು ಅಕ್ಕಿ ಜಪ್ತಿಗೈದಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಕೊಳೂರಗಿ ಗ್ರಾಮದ ಬಳಿ ನಡೆದಿದೆ. ಅಬೂಬಕರ್ ಲಾಲಸಾಬ್ ಜಮಾದಾರ ಬಂಧಿತ ಆರೋಪಿ. ಇನ್ನು ಬಂಧಿತ ಆರೋಪಿಯಿಂದ 16,153 ಮೌಲ್ಯದ 500 ಕೆಜಿ 57 ಗ್ರಾಂದ ರೇಷನ್ ಅಕ್ಕಿ, 50 ಸಾವಿರ ಮೌಲ್ಯದ ವಾಹನ, ಒಂದು ಮಷಿನ್ ವಶಕ್ಕೆ ತೆಗೆದುಕೊಂಡಿದ್ದಾರೆ. ಹೊರ್ತಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಈ ಸಂದರ್ಭದಲ್ಲಿ ಆಹಾರ ನಿರೀಕ್ಷಕ ಪರಮಾನಂದ ಹೂಗಾರ, ಪಿಎಸ್ಐ ಸಿತಾರಾಮ ಹಾಗೂ ಪೆದೆ ಪಿ ಬಿ ಬಿರಾದಾರ, ಎಸ್ ಎಂ ಹುಣಶ್ಯಾಳ ಉಪಸ್ಥಿತರಿದ್ದರು.
ಬಸವನಬಾಗೇವಾಡಿ: ಪಟ್ಟಣದ ಹೃದಯ ಭಾಗದಲ್ಲಿ ಪುರಸಭೆಯಿಂದ ನಿರ್ಮಾಣಗೊಂಡಿರುವ ಮೆಗಾಮಾರುಕಟ್ಟೆ ಕಟ್ಟಡದ ಕೊಲ್ಹಾರಕ್ಕೆ ಹೋಗುವ ಮುಖ್ಯರಸ್ತೆಗೆ ಹೊಂದಿಕೊಂಡಿದ್ದ ಆವರಣಗೋಡೆ(ಕಂಪೌಂಡ್)ಯನ್ನು ತೆರವು ಗೊಳಿಸುವ ಕಾರ್ಯಾಚರಣೆ ಪುರಸಭೆಯಿಂದ ಗುರುವಾರ ನಡೆಸಲಾಯಿತು.ಆವರಣಗೋಡೆಗೆ ಹೊಂದಿಕೊಂಡು ಹಾಕಲಾಗಿದ್ದ ಡಬ್ಬಾ ಅಂಗಡಿಗಳನ್ನು ಪುರಸಭೆಯಿಂದ ಮೊದಲು ತೆರವು ಗೊಳಿಸಿದ ನಂತರ ಜೆಸಿಬಿಯಿಂದ ಆವರಣಗೋಡೆಯನ್ನು ತೆರವುಗೊಳಿಸಲಾಯಿತು. ಈ ಸಂದರ್ಭದಲ್ಲಿ ಆವರಣಗೋಡೆಗೆ ಇಟ್ಟಿದ್ದ ಡಬ್ಬಾ ಅಂಗಡಿಗಳ ವ್ಯಾಪಾರಿಗಳು ನಮ್ಮ ನಿತ್ಯ ಜೀವನ ಇದರಿಂದ ನಡೆಯುತ್ತಿದೆ. ಅಧಿಕಾರಿಗಳು ನಮ್ಮ ಬಗ್ಗೆ ಗಮನ ಹರಿಸಬೇಕು. ನಮ್ಮ ವ್ಯಾಪಾರಕ್ಕೆ ಅನುಕೂಲ ಮಾಡಿಕೊಡಬೇಕೆಂದು ಮನವಿ ಮಾಡಿಕೊಳ್ಳುವ ಜೊತೆಗೆ ಅಽಕಾರಿಗಳೊಂದಿಗೆ ಮಾತಿನ ವಾಗ್ವಾದ ನಡೆಯಿತು.ಮೆಗಾಮಾರುಕಟ್ಟೆಯಲ್ಲಿ ಬಾಡಿಗೆ ಹಿಡಿದ ಅಂಗಡಿ ಮಾಲೀಕರು ಪುರಸಭೆ ಮುಖ್ಯಾಧಿಕಾರಿಗಳಿಗೆ ಕೊಲ್ಹಾರ ರಸ್ತೆಗೆ ಹೊಂದಿಕೊಂಡಿರುವ ಆವರಣಗೋಡೆಯನ್ನು ತೆರವು ಗೊಳಿಸಿ ನಮ್ಮ ಅಂಗಡಿಗಳಿಗೆ ಜನರು ಬರುವಂತೆ ಅನುಕೂಲ ಮಾಡಿಕೊಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಬುಧವಾರವಷ್ಟೇ ಮನವಿ ಸಲ್ಲಿಸಿದ್ದರು. ಇದರ ಬೆನ್ನಲ್ಲೆಯಲ್ಲಿಯೇ ಇಂದು ತಾತ್ಕಾಲಿಕವಾಗಿ ಕಟ್ಟಲಾಗಿದ್ದ ಆವರಣಗೋಡೆಯ ತೆರವು ಕಾರ್ಯಾಚರಣೆಯನ್ನು ಇಂದು ಪುರಸಭೆಯಿಂದ ನಡೆದಿದೆ.ಪುರಸಭೆ ಮುಖ್ಯಾಧಿಕಾರಿ ಎಚ್.ಎಸ್.ಚಿತ್ತರಗಿ ಅವರನ್ನು ಸಂಪರ್ಕಿಸಿದಾಗ, ಮೆಗಾಮಾರುಕಟ್ಟೆಯ…
ಬಸವನಬಾಗೇವಾಡಿ: ಗ್ರಾಮೀಣ ಭಾಗದಲ್ಲಿ ಆಯೋಜಿಸುವ ರಾಷ್ಟ್ರೀಯ ಸೇವಾ ಯೋಜನೆ ಶಿಬಿರಗಳಿಂದ ಶಿಬಿರಾರ್ಥಿಗಳು ಸೇವಾ ಮನೋಭಾವ ಗುಣ ಅರಿತುಕೊಳ್ಳುವ ಜೊತೆಗೆ ಗ್ರಾಮೀಣ ಭಾಗದ ಸಂಸ್ಕ್ರತಿಯನ್ನು ಅರಿತುಕೊಳ್ಳಲು ಪೂರಕವಾಗುತ್ತದೆ ಎಂದು ರಾಷ್ಟ್ರೀಯ ಸೇವಾ ಯೋಜನೆಯ ಜಿಲ್ಲಾ ನೋಡಲ್ ಅಧಿಕಾರಿ ಡಾ.ಪ್ರಕಾಶ ರಾಠೋಡ ಹೇಳಿದರು.ತಾಲೂಕಿನ ಟಕ್ಕಳಕಿ ಗ್ರಾಮದಲ್ಲಿ ಈಚೆಗೆ ಒಂದು ವಾರ ಕಾಲ ಸ್ಥಳೀಯ ಬಿಎಲ್ಡಿಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯವು ಹಮ್ಮಿಕೊಂಡಿದ್ದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದರೆ ಉತ್ತಮ ವಿಷಯಗಳನ್ನು ತಿಳಿದುಕೊಳ್ಳಲು ಸಾಧ್ಯ. ಒಂದು ವಾರ ಕಾಲ ಈ ಗ್ರಾಮದಲ್ಲಿ ಜರುಗಿದ ಶಿಬಿರದಿಂದ ಗ್ರಾಮೀಣ ಸಂಸ್ಕ್ರತಿ, ಬದುಕು, ಕೃಷಿಕರ ಸಮಸ್ಯೆಗಳನ್ನು ಶಿಬಿರಾರ್ಥಿಗಳು ಅರಿತುಕೊಳ್ಳುವಲ್ಲಿ ಸಹಾಯಕವಾಗಿದೆ. ಗ್ರಾಮೀಣ ಭಾಗದ ಜನರಿಗೆ ಸ್ವಚ್ಛತೆ ಸೇರಿದಂತೆ ವಿವಿಧ ವಿಷಯಗಳನ್ನು ಜಾಗೃತಿ ಮೂಡಿಸುವಲ್ಲಿ ಶಿಬಿರವು ಮಾಡಿಸುವ ಮೂಲಕ ಯಶಸ್ವಿಯಾಗಿದೆ ಎಂದರು.ಮಹಾವಿದ್ಯಾಲಯದ ಎನ್ಎನ್ಎಸ್ ಕಾರ್ಯಕ್ರಮಾಧಿಕಾರಿ ಡಾ.ವೈ.ಬಿ.ನಾಯಕ ಮಾತನಾಡಿ, ಜು.೧೫ ರಿಂದ ೨೧ ರವರೆಗೆ…
ಸಿಂದಗಿ: ಕರ್ನಾಟಕ ಕಾರ್ಯನಿರತ ಪರ್ತಕರ್ತರ ಸಂಘ ಜಿಲ್ಲಾ ಘಟಕ ವಿಜಯಪುರ ವತಿಯಿಂದ ೨೦೨೪ನೆಯ ಸಾಲಿನಲ್ಲಿ ಕೊಡಮಾಡುವ ಜಿಲ್ಲಾ ವಾರ್ಷಿಕ ಪ್ರಶಸ್ತಿಗೆ ಸಿಂದಗಿ ಕನ್ನಡಪ್ರಭ ತಾಲೂಕು ವರದಿಗಾರ ಸಿದ್ದಲಿಂಗ ಕಿಣಗಿ ಹಾಗೂ ವಿಜಯ ಕರ್ನಾಟಕ ತಾಲೂಕು ವರದಿಗಾರ ಸುದರ್ಶನ ಜಂಗಣ್ಣಿ ಅವರು ಆಯ್ಕೆಯಾಗಿದ್ದಾರೆ ಎಂದು ಕಾನಿಪ ತಾಲೂಕಾಧ್ಯಕ್ಷ ಆನಂದ ಶಾಬಾದಿ ಹೇಳಿದ್ದಾರೆ.ಜು.೨೮ರಂದು ವಿಜಯಪುರದ ಸೋಲಾಪೂರ ರಸ್ತೆಯಲ್ಲಿರುವ ಪೊಲೀಸ್ ಪರೇಡ್ ಮೈದಾನದ ಎದುರಿರುವ ಪೊಲೀಸ್ ಸಮುದಾಯ ಭವನ ನಡೆಯುವ ಪತ್ರಿಕಾ ದಿನಾಚರಣೆ, ಪ್ರತಿಭಾ ಪುರಸ್ಕಾರ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕಾನಿಪ ಜಿಲ್ಲಾಧ್ಯಕ್ಷ ಸಂಗಮೇಶ ಚೂರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಿಂದಗಿ: ತಾಲೂಕಿನ ನಬಿರೋಷನ್ ಪ್ರಕಾಶನ, ಬೋರಗಿ ವತಿಯಿಂದ ಆಗಸ್ಟ್ ತಿಂಗಳಲ್ಲಿ ನಡೆಯಲಿರುವ ಪೊಲೀಸ್ ಕಲಾ ಸಂಗಮ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮದ ಉದ್ಘಾಟಕರಾಗಿ ಕನ್ನಡ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ಡಾ.ಹಂಸಲೇಖ ಅವರಿಗೆ ಅವರ ನಿವಾಸದಲ್ಲಿ ಭೇಟಿಯಾಗಿ ಆಹ್ವಾನಿಸಲಾಯಿತು. ಇದೇ ವೇಳೆ ಪೊಲೀಸ್ ಅಧಿಕಾರಿ ಸುರೇಶ, ಆರಕ್ಷಕ ಮೌಲಾಲಿ ಆಲಗೂರ, ಜಲಾಲುದ್ದೀನ್ ದಲಾಲ್ ಇದ್ದರು.
ಸಿಂದಗಿ: ಚುನಾವಣಾ ಸಾಕ್ಷರತಾ ಕ್ಲಬ್ ಆಸಕ್ತಿದಾಯಕ ಚಟುವಟಿಕೆಗಳ ಮೂಲಕ ಶಾಲಾ ವಿದ್ಯಾರ್ಥಿಗಳನ್ನು ತೊಡಗಿಸಿಕೊಳ್ಳುವ ವೇದಿಕೆಯಾಗಿದೆ. ಮತ್ತು ಚುನಾವಣಾ ಹಕ್ಕುಗಳ ಬಗ್ಗೆ ಅವರಿಗೆ ಅರಿವು ಮೂಡಿಸಲು, ನೋಂದಣಿ ಮತ್ತು ಮತದಾನದ ಪ್ರಕ್ರಿಯೆಯೊಂದಿಗೆ ಪರಿಚಿತರಾಗಲು ಅನುಭವವನ್ನು ನೀಡುತ್ತದೆ. ಇಎಲ್ಸಿಗಳು ಕಾಲೇಜು ಮತ್ತು ಗ್ರಾಮೀಣ ಸಮುದಾಯಗಳಲ್ಲಿಯೂ ಇವೆ ಎಂದು ಪ್ರಾಚಾರ್ಯ ಭೀಮನಗೌಡ ಸಿಂಗನಳ್ಳಿ ಹೇಳಿದರು.ಪಟ್ಟಣದ ಶ್ರೀ ಪ.ವಿ.ವ.ಸಂಸ್ಥೆಯ ಆರ್.ಡಿ.ಪಾಟೀಲ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಚುನಾವಣಾ ಸಾಕ್ಷರತಾ ಕ್ಲಬ್ ಸಹಯೋಗದೊಂದಿಗೆ ಹಮ್ಮಿಕೊಂಡ ಮತದಾನದ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಎಲ್ಸಿ ಮೂಲಕ ಭಾರತದ ಚುನಾವಣಾ ಆಯೋಗ, ಯುವ ಮತ್ತು ಭವಿಷ್ಯದ ಮತದಾರರಲ್ಲಿ ಚುನಾವಣಾ ಭಾಗವಹಿಸುವಿಕೆಯ ಸಂಸ್ಕೃತಿಯನ್ನು ಬಲಪಡಿಸುವ ಗುರಿಯನ್ನು ಹೊಂದಿದೆ ಎಂದರು.ಈ ವೇಳೆ ಪಿ.ಎಂ.ಮಹಲಿನಮಠ ಮಾತನಾಡಿ, ಭಾರತದ ಚುನಾವಣಾ ಆಯೋಗವು ಶಾಲೆ ಮತ್ತು ಕಾಲೇಜುಗಳಲ್ಲಿ ಚುನಾವಣಾ ಸಾಕ್ಷರತೆಯನ್ನು ಮುಖ್ಯವಾಹಿನಿಗೆ ತೆಗೆದುಕೊಂಡು ಬರಲು ತನ್ನ ಮಹತ್ವಾಕಾಂಕ್ಷೆಯ ಯೋಜನೆಯಾದ ಚುನಾವಣಾ ಸಾಕ್ಷರತಾ ಕ್ಲಬ್ಗಳನ್ನು ಈಗ ಹೊರತರುತ್ತಿದೆ. ಎಲ್ಲಾ ವಿದ್ಯಾರ್ಥಿಗಳು ಸಂಘಕ್ಕೆ ನೋಂದಣಿಯಾಗಬೇಕು. ಈ…
ಮಹಾರಾಷ್ಟ್ರ ಪಶ್ಚಿಮ ಘಟ್ಟಗಳಲ್ಲಿ ನಿರಂತರ ಮಳೆ | ಆಲಮಟ್ಟಿ ಡ್ಯಾಂನಿಂದ ನದಿಪಾತ್ರಕ್ಕೆ ನೀರು | ಅಧಿಕಾರಿಗಳಿಗೆ ಡಿಸಿ ಟಿ.ಭೂಬಾಲನ್ ಸೂಚನೆ ವಿಜಯಪುರ: ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಆಲಮಟ್ಟಿ ಜಲಾಶಯ ಪೂರ್ಣಗೊಳ್ಳುವ ಹಂತದಲ್ಲಿದ್ದು, ನದಿಪಾತ್ರಕ್ಕೆ ನೀರು ಹರಿಸುವುದರಿಂದ ಮುನ್ನೆಚ್ಚರಿಕೆಯಾಗಿ ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಸನ್ನದ್ಧರಾಗಿರುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ನೀಡಿದರು.ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಪರೆನ್ಸ್ ಕೆಸ್ವಾನ ಸಭೆಯಲ್ಲಿ ಮಾತನಾಡಿ, ಜಲಾಶಯದಿಂದ ಹೆಚ್ಚುವರಿ ನೀರು ಹರಿಸುವುದರಿಂದ ಮುನ್ನೆಚ್ಚರಿಕೆಯಾಗಿ ಸಂಬಂಧಿಸಿದ ತಹಶೀಲ್ದಾರರು ತಮ್ಮ ವ್ಯಾಪ್ತಿಯಲ್ಲಿ ಅಪಾಯಕ್ಕೊಳಗಾಗುವ ಪ್ರದೇಶವನ್ನು ಗುರುತಿಸಿಕೊಂಡು ಯಾವುದೇ ಹಾನಿ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಂಡು ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಲು ಪೂರ್ವ ತಯಾರಿ ಮಾಡಿಕೊಳ್ಳಬೇಕು. ಪ್ರವಾಹ ಪರಿಸ್ಥಿತಿ ಉಂಟಾದಲ್ಲಿ ಜನ-ಜಾನುವಾರುಗಳಿಗೆ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವುದು ಸೇರಿದಂತೆ ಸೂಕ್ತ ಸ್ಥಳಗಳಲ್ಲಿ ಕಾಳಜಿ ಕೇಂದ್ರದ ವ್ಯವಸ್ಥೆಗೆ ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.ಮುದ್ದೇಬಿಹಾಳ, ನಿಡಗುಂದಿ, ಕೋಲಾರ ತಾಲೂಕಿನ ಆಯಾ ತಹಶೀಲ್ದಾರ್ಗಳು ಕೆಬಿಜೆಎನ್ಎಲ್ ಅಧಿಕಾರಿಗಳೊಂದಿಗೆ…
ಶಿಕ್ಷಕರ ವರ್ಗಾವಣೆ ಕೌನ್ಸಲಿಂಗ್ ಪರಿಶೀಲಿಸಿದ ಜಿ.ಪಂ.ಸಿಇಓ ರಿಷಿ ಆನಂದ ಕಿವಿಮಾತು ವಿಜಯಪುರ: ಕೌನ್ಸಲಿಂಗ್ ಪ್ರಕ್ರಿಯೆ ಮೂಲಕ ವಿವಿಧ ಪ್ರಾಧಾನ್ಯತೆಗಳಡಿಯಲ್ಲಿ ತಮಗೆ ಅನುಕೂಲವಾಗುವ ಸ್ಥಳಗಳಲ್ಲಿ ವರ್ಗಾವಣೆ ಪಡೆಯುವ ಶಿಕ್ಷಕರು ಸಂತೃಪ್ತಿಯಿಂದ ಬೋಧನಾ ಕಾರ್ಯವನ್ನು ನಿರ್ವಹಿಸಿ ಇಲಾಖೆಯ ಗುರಿ ಉದ್ದೇಶಗಳ ಸಫಲತೆಗೆ ಹೆಚ್ಚು ಪರಿಶ್ರಮವಹಿಸಬೇಕೆಂದು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಿಷಿ ಆನಂದ ಹೇಳಿದರು.ಅವರು ಗುರುವಾರ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿಯಲ್ಲಿ ನಡೆಯುತ್ತಿರುವ ೨೦೨೪-೨೫ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್ನಲ್ಲಿ ಭಾಗವಹಿಸಿರುವ ಶಿಕ್ಷಕರು ಆನ್-ಲೈನ್ ಪ್ರಕ್ರಿಯೆ ಮೂಲಕ ಸ್ಥಳ ಆಯ್ಕೆ ಮಾಡಿಕೊಳ್ಳುವ ಪ್ರಕ್ರಿಯೆಯಲ್ಲಿ ಖುದ್ದಾಗಿ ವೀಕ್ಷಿಸಿ ಮಾತನಾಡಿದರು.ಶಿಕ್ಷಕರ ಪಾತ್ರ ಅನನ್ಯವಾಗಿದೆ. ವಿಜಯಪುರ ಜಿಲ್ಲೆಯ ಎಲ್ಲ ಶಾಲಾ ಶಿಕ್ಷಕರು ವೃತ್ತಿಪರ ಕೌಶಲ್ಯಗಳನ್ನು ಬಳಸಿಕೊಂಡು ಜಿಲ್ಲೆಯ ಶಾಲಾ ಶಿಕ್ಷಣ ವ್ಯವಸ್ಥೆಯ ಗುಣಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಶ್ರಮಿಸಬೇಕು೨೦೨೪-೨೫ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್ನಲ್ಲಿ ಭಾಗವಹಿಸಿರುವ ಶಿಕ್ಷಕರು ಆನ್-ಲೈನ್ ಪ್ರಕ್ರಿಯೆ ಮೂಲಕ ಸ್ಥಳ ಆಯ್ಕೆ ಮಾಡಿಕೊಳ್ಳುವ…
ತಿಕೋಟಾ ತಾಲೂಕಿನ ತೊರವಿ ಗ್ರಾಪಂ ಗೆ ಭೇಟಿ ನೀಡಿದ ಜಿ.ಪಂ ಸಿ.ಇ.ಓ ರಿಷಿ ಆನಂದ್ ಅಭಿಮತ ವಿಜಯಪುರ: ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ತಿಕೋಟಾ ತಾಲೂಕಿನ ತೊರವಿ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ವಿವಿಧ ಯೋಜನೆಗಳ ಕಾಮಗಾರಿ ಪರಿಶೀಲನೆ ನಡೆಸಿದರು.ತೊರವಿ ಗ್ರಾಮದ ಕೂಸಿನ ಮನೆಗೆ ಭೇಟಿ ನೀಡಿ, ಮಕ್ಕಳ ಆಟಿಕೆ ಸಾಮಗ್ರಿಗಳು ಹಾಗೂ ಇತರೆ ಪರಿಕರಗಳ ವ್ಯವಸ್ಥೆ ಕುರಿತು ಪ್ರಶಂಸಿದ ಅವರು, ಕೂಸಿನ ಮನೆಗೆ ಅಗತ್ಯ ಇರುವ ಆಟಿಕೆ ಸಾಮಾನುಗಳು, ಅಡುಗೆ ಕೋಣೆ ಸಾಮಗ್ರಿಗಳು, ರೆಫ್ರಿಜರೇಟರ್ ಹಾಗೂ ಕೇಂದ್ರದ ಮಕ್ಕಳ ಆರೈಕೆದಾರರ ಹಾಜರಾತಿ, ಮಕ್ಕಳ ಹಾಜರಾತಿ, ಮಕ್ಕಳ ದಾಖಲಾತಿ, ದಾಸ್ತಾನು ವಹಿ ಹಾಗೂ ಇತರೆ ವಿವಿಧ ದಾಖಲಾತಿ ಸೇರಿ ಎಲ್ಲವನ್ನು ಅಚ್ಚುಕಟ್ಟಾಗಿ ನಿರ್ವಹಿಸಲಾಗಿದೆ. ಈ ಕೂಸಿನ ಮನೆಯು ಜಿಲ್ಲೆಯ ಮಾದರಿಯಾಗಿದೆ ಎಂದು ಹೇಳಿದರು.ಬಳಿಕ ಗ್ರಾಮದ ಸರ್ಕಾರಿ ಗ್ರಂಥಾಲಯಕ್ಕೆ ಭೇಟಿ ನೀಡಿ, ಅಲ್ಲಿನ ವಾಚಕರೊಡನೆ ಸಮಾಲೋಚನೆ ನಡೆಸಿದರು.ಈ ಗ್ರಂಥಾಲಯದಲ್ಲಿ ಎಲ್ಲ ವ್ಯವಸ್ಥೆ ಕಲ್ಪಿಸಲಾಗಿದೆ ತುಂಬಾ ಅನುಕೂಲವಾಗಿದೆ ಎಂದು…
ಸರ್ಕಾರಿ ಶಾಲೆ ಆಟದ ಮೈದಾನ ಅಭಿವೃದ್ಧಿ-ಮಳೆ ನೀರು ಕೊಯ್ಲು ಘಟಕ- ಪೌಷ್ಟಿಕ ಕೈತೋಟ ವಿಜಯಪುರ: ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಬುಧವಾರ ಕೊಲ್ಹಾರ ತಾಲೂಕಿನ ತೆಲಗಿ, ರೋಣಿಹಾಳ ಹಾಗೂ ಮುಳವಾಡ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ ವಿವಿಧ ಯೋಜನೆಗಳ ಕಾಮಗಾರಿಗಳ ಪರಿಶೀಲನೆ ನಡೆಸಿದರು.ತೆಲಗಿಗೆ ಭೇಟಿ ನೀಡಿದ ಅವರು, ಕೂಸಿನ ಮನೆ ಕೇಂದ್ರಕ್ಕೆ ಮಕ್ಕಳ ನೋಂದಣಿ, ಮಕ್ಕಳ ಹಾಜರಾತಿ, ಪೌಷ್ಟಿಕ ಆಹಾರ, ಆಟದ ಸಾಮಗ್ರಿಗಳನ್ನು ವೀಕ್ಷಿಸಿ, ಮಕ್ಕಳ ನೋಂದಣಿ ಸಂಖ್ಯೆ ಹೆಚ್ಚಿಸಲು ಜನರಲ್ಲಿ ತಿಳುವಳಿಕೆ ಮೂಡಿಸಿ, ಮತ್ತು ಕೂಸಿನ ಮನೆ ಕೇಂದ್ರದ ಮಕ್ಕಳ ಆರೈಕೆದಾರರು ಮಕ್ಕಳನ್ನು ಕಾಳಜಿವಹಿಸಬೇಕು. ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸಬೇಕು. ಸ್ವಚ್ಛತೆ ಕಾಪಾಡಿಕೊಂಡು ಜವಾಬ್ದಾರಿಯಿಂದ ನಿರ್ವಹಣೆ ಮಾಡಬೇಕು ಎಂದು ಗ್ರಾಪಂ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮತ್ತು ಮಕ್ಕಳ ಆರೈಕೆದಾರರಿಗೆ ಸೂಚಿಸಿದರು.ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ನಿರ್ಮಾಣವಾದ ಫಲಾನುಭವಿ ಮನೆಗೆ ಭೇಟಿ ನೀಡಿ ಫಲಾನುಭವಿಯೊಂದಿಗೆ ಚರ್ಚಿಸಿದರು.ತೆಲಗಿ ಗ್ರಾಮದಲ್ಲಿ ನಿರ್ಮಾಣಗೊಂಡ ಸರ್ಕಾರಿ ಗ್ರಂಥಾಲಯಕ್ಕೆ ಭೇಟಿ ನೀಡಿ ಅಲ್ಲಿ ಕಲ್ಪಿಸಿರುವ…
