Author: editor.udayarashmi@gmail.com

ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆಯಡಿ ಆನ್‌ಲೈನ್ ಅರ್ಜಿ ಆಹ್ವಾನ ವಿಜಯಪುರ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದಿಂದ ವಿದೇಶದಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆಯಡಿಯಲ್ಲಿ ವಿದ್ಯಾಭ್ಯಾಸ ಸಾಲಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ವಿದೇಶ ವಿಶ್ವವಿದ್ಯಾಲಯದಲ್ಲಿ ಪದವಿ-ಸ್ನಾತಕೋತ್ತರ ಪದವಿ ಮಾಡಬಯಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಈ ಯೋಜನೆಯಡಿ ಸಾಲ ಪಡೆಯಲು ಬಯಸುವ ವಿದ್ಯಾರ್ಥಿಗಳು ನಿಗದಮ ವೆಬ್‌ಸೈಟ್ : https://kmdconlin.karnataka.gov.in ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ದಿನಾಂಕ : ೩೧-೦೮-೨೦೨೪ ಕೊನೆಯ ದಿನಾಂಕವಾಗಿದ್ದು, ಅರ್ಜಿ ಸಲ್ಲಿಸಿದ ಅರ್ಜಿಯ ಪ್ರಿಂಟ್‌ಔಟ್‌ನ್ನು ತೆಗೆದುಕೊಂಡು ಇತರೆ ಅವಶ್ಯಕ ದಾಖಲೆಗಳೊಂದಿಗೆ ನಿಗಮದ ಜಿಲ್ಲಾ ಕಚೇರಿ ಸಲ್ಲಿಸಬೇಕು.ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ, ಮೌಲಾನಾ ಆಝಾದ ಭವನ, ಜಿಲ್ಲಾ ಪಂಚಾಯತ್ ರಸ್ತೆ, ಕನಕದಾಸ ಬಡಾವಣೆ, ವಿಜಯಪುರ ದೂ: ೦೮೩೫೨-೨೭೮೩೪೪ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಜಿಲ್ಲಾ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಆದೇಶ ಉಲ್ಲಂಘನೆಗೆ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ :ಜಿಲ್ಲಾಧಿಕಾರಿ ಟಿ.ಭೂಬಾಲನ್ ಎಚ್ಚರಿಕೆ ವಿಜಯಪುರ: ಯಾವುದೇ ಸರ್ಕಾರಿ ಸಮಾರಂಭಗಳಲ್ಲಿ ಹಾರ, ಶಾಲು ಮತ್ತು ತುರಾಯಿ ಇತ್ಯಾದಿ ವಸ್ತುಗಳಿಂದ ಸನ್ಮಾನ ಮಾಡುವುದನ್ನು ಕಡ್ಡಾಯವಾಗಿ ನಿಷೇಧಿಸಿರುವುದರಿಂದ ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಈ ಆದೇಶ ಉಲ್ಲಂಘಿಸುವ ಅಧಿಕಾರಿಗಳ ಮೇಲೆ ಕೆ.ಸಿ.ಎಸ್.ಆರ್. ೧೯೫೭ರನ್ವಯ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದ್ದಾರೆ.ಜಿಲ್ಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಅಡಿಯಲ್ಲಿ ಶಾಲಾ ಶೈಕ್ಷಣಿಕ ಕಾರ್ಯಕ್ರಮಗಳಲ್ಲಿ ಮತ್ತು ಇತರೆ ಸರ್ಕಾರಿ ಸಮಾರಂಭಗಳಲ್ಲಿ ಅನಗತ್ಯವಾಗಿ ಹಣ ಖರ್ಚು ಮಾಡಿ ಹಾರ, ಶಾಲು, ನೆನಪಿನ ಕಾಣಿಕೆಗಳನ್ನು ಕೊಟ್ಟು ಸನ್ಮಾನಿಸುವುದರಿಂದ ಸಮಯದ ವ್ಯರ್ಥ ಹಾಗೂ ಅನಗತ್ಯ ಖರ್ಚಾಗಲಿರುವುದರಿಂದ ಅದರ ಬದಲಾಗಿ ಕಾಣಿಕೆಗಳಿಗೆ ತಗಲುವ ಮೊತ್ತದಲ್ಲಿ ಸರ್ಕಾರಿ ಶಾಲೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಕಲಿಕೆಗೆ ಪೂರಕ ಶೈಕ್ಷಣಿಕ ವಸ್ತುಗಳನ್ನು ನೀಡುವುದು ಸೂಕ್ತವೆಂದು ಜಿಲ್ಲಾ ಉಸ್ತುವಾರಿ ಸಚಿವರು ನಿರ್ದೇಶನ ನೀಡಿರುವ ಹಿನ್ನಲೆಯಲ್ಲಿ ಮೇಲಾಧಿಕಾರಿಗಳು ತಮ್ಮ ಅಧೀನ ಕಚೇರಿಗಳಿಗೆ ಭೇಟಿ ನಿಡಿದಾಗ ಅಥವಾ ಅಧಿಕಾರಿ-ನೌಕರರು ಮೇಲಾಧಿಕಾರಿಗಳನ್ನು ಭೇಟಿಯಾಗಲು ಕಚೇರಿಗೆ…

Read More

ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಸಮಾಜ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಡಾ.ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಪ್ರಯುಕ್ತ ವ್ಯಸನ ಮುಕ್ತ ದಿನಾಚರಣೆಯನ್ನು ಆ. ೧ರಂದು ನಗರದ ಶ್ರೀ ಕಂದಗಲ್ ಹನಮಂತರಾಯ ರಂಗಮಂದಿರದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ, ಅಂದು ಬೆಳಗ್ಗೆ ೯ ಗಂಟೆಗೆ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಜನ ಜಾಗೃತಿ ಜಾಥಾಕ್ಕೆ ಚಾಲನೆಗೊಳ್ಳಲಿದೆ. ಜಾಥಾವು ನಗರದ ಗಾಂಧಿ ವೃತ್ತ ಮಾರ್ಗವಾಗಿ, ಬಸವೇಶ್ವರ ವೃತ್ತ, ಡಾ.ಬಿ.ಆರ್. ಅಂಬೇಡ್ಕರ ವೃತ್ತ, ಕನಕದಾಸ ವೃತ್ತದ ಮೂಲಕ ಕಂದಗಲ್ ಹನುಮಂತರಾಯ ರಂಗ ಮಂದಿರಕ್ಕೆ ತಲುಪಲಿದೆ. ರಂಗ ಮಂದಿರದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಮಾದಕ ವಸ್ತು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ಶಾಲಾ, ಕಾಲೇಜು ವಿದ್ಯಾರ್ಥಿಗಳು,…

Read More

ವಿಜಯಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಕಾರ್ಯಕಾರಿಣಿ ಸಮಿತಿಗೆ ಇಬ್ಬರು ಹಿರಿಯ ಪತ್ರಕರ್ತರನ್ನು ನಾಮನಿರ್ದೇಶನ ಸದಸ್ಯರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.ಹೊಸ ಪತ್ರಿಕಾ ಭವನದಲ್ಲಿ ಸಂಗಮೇಶ ಚೂರಿ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಟಿವಿ೯ ವರದಿಗಾರ ಅಶೋಕ ಯಡಳ್ಳಿ ಮತ್ತು ಗುಮ್ಮಟನಗರಿ ಪ್ರಾದೇಶಿಕ ಕನ್ನಡ ದಿನಪತ್ರಿಕೆಯ ವ್ಯವಸ್ಥಾಪಕ ಸಂಪಾದಕ ಮಹಮ್ಮದ ಇರ್ಫಾನ್ ಮು. ಶೇಖ್ ಅವರನ್ನು ಕಾರ್ಯಕಾರಿ ಸಮಿತಿಗೆ ನಾಮನಿರ್ದೇಶಿತ ಸದಸ್ಯರನ್ನಾಗಿ ಒಕ್ಕೊರಲಿನಿಂದ ಆಯ್ಕೆ ಮಾಡಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಮೋಹನ ಪಿ. ಕುಲಕರ್ಣಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

– ವೀಣಾ ಹೇಮಂತ್ ಗೌಡ ಪಾಟೀಲ್, ಮುಂಡರಗಿ-ಗದಗ ಪ್ರಸ್ತುತ ನಾವು ಬದುಕುತ್ತಿರುವ ಸಮಾಜದಲ್ಲಿರಕ್ತದೊತ್ತಡ ಮಧುಮೇಹ ಥೈರಾಯಿಡ್ ಅಜೀರ್ಣ ಸಂಬಂಧಿ ಕಾಯಿಲೆಗಳು ಆಮ್ಲ ಪಿತ್ತ, ಹಾರ್ಮೋನುಗಳ ಅಸಮತೋಲನದಿಂದ ಆಗುವ ತೊಂದರೆಗಳಾದ ಥೈರಾಯಿಡ್, ಪಿಸಿಓಡಿ ಮುಂತಾದ ತೊಂದರೆಗಳಿಂದ ಜನರು ಬಳಲುತ್ತಿರುವುದನ್ನು ಕಾಣುತ್ತೇವೆ. ಪ್ರಸ್ತುತ ದಿನಮಾನಗಳಲ್ಲಿ ಇವೆಲ್ಲವೂ ಸಾಮಾನ್ಯ ಕಾಯಿಲೆಗಳು ಎಂದು ಬಿಂಬಿತವಾಗಿರುವುದನ್ನು ಕೂಡ ನಾವು ಕಾಣುತ್ತಿದ್ದೇವೆ. ನಾವು ನಡೆಸುತ್ತಿರುವ ಜೀವನ ಶೈಲಿ ನಮ್ಮ ಈ ತೊಂದರೆಗಳಿಗೆ ಕಾರಣ ಎಂಬುದು ಬಹುತೇಕರ ವಾದ. ಪರಿಣಾಮವಾಗಿ ಜೀವಮಾನಪೂರ್ತಿ ನಾವು ಔಷಧಿ ಗುಳಿಗೆಗಳ ಮೇಲೆ ಅವಲಂಬಿತರಾಗುತ್ತೇವೆ. ಆದರೆ ಈ ರೀತಿ ಔಷಧಿ ಗುಳಿಗೆಗಳ ಮೇಲೆ ಜೀವನವನ್ನು ನಡೆಸುವುದು ತಪ್ಪು ನಿರ್ಧಾರ ಎಂಬುದು ಜೀವನದ ಯಾವುದೋ ಒಂದು ಘಳಿಗೆಯಲ್ಲಿ ಮನುಷ್ಯನಿಗೆ ಅರಿವಾಗುವ ಹೊತ್ತಿಗೆ ಕಾಲ ಮೀರಿ ಹೋಗಿರುತ್ತದೆ. ಯಾಕೆ ಹೀಗಾಗುತ್ತಿದೆ?? ಎಂಬುದು ಮಿಲಿಯನ್ ಡಾಲರ್ಗಳ ಪ್ರಶ್ನೆ.ಯಾಕೆ ಈ ಆರೋಗ್ಯ ತೊಂದರೆಗಳ ಹಿಂದೆ ಭಾವನಾತ್ಮಕ ಆರೋಗ್ಯದ ಸಮಸ್ಯೆಯನ್ನು ಯಾರೂ ಗುರುತಿಸುತ್ತಿಲ್ಲ. ದೈಹಿಕ ಆರೋಗ್ಯ ಕೆಟ್ಟರೆ ಫಿಜಿಷಿಯನ್ಗಳ ಬಳಿಗೆ ತೆರಳುವ ನಾವು ಮಾನಸಿಕ…

Read More

ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ನಡೆದ ಕಾರ್ಯಾಗಾರ ವಿಜಯಪುರ: ಶಿಕ್ಷಣದಲ್ಲಿ ಮುಂದುವರೆಯಬೇಕಾದರೆ ನಮಗೆ ಆರ್ಥಿಕವಾಗಿ ಸಹಾಯ ಬೇಕು ಅದರಂತೆ ಸರ್ಕಾರದ ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಮತ್ತು ಇನ್ನಿತರ ಇಲಾಖೆಗಳ ಸಂಬಂಧಿಸಿದ ಯೋಜನೆಗಳು ವಿದ್ಯಾರ್ಥಿಗಳಿಗೆ ಆರ್ಥಿಕವಾಗಿ ತುಂಬಾ ಸಹಾಯಕವಾಗಿವೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿಜಯಪುರ ತಾಲೂಕು ಅಧಿಕಾರಿ ಬಸವರಾಜ ಎಸ್.ಅಂಗಡಿ ಹೇಳಿದರು.ನಗರದ ಬಿ.ಎಲ್.ಡಿ. ಇ ಸಂಸ್ಥೆಯ ಎಸ್.ಬಿ. ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದ ಐಕ್ಯೂಎಸಿ, ಓಬಿಸಿ ಮತ್ತು ಅಲ್ಪಸಂಖ್ಯಾತರ ಸೆಲ್ ವತಿಯಿಂದ ಅಯೋಜಿಸಲಾದ ‘ಒಬಿಸಿ ಮತ್ತು ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ಕಲ್ಯಾಣ ಯೋಜನೆಗಳು ಮತ್ತು ಉದ್ಯಮಶೀಲತೆ’ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಹಿಂದುಳಿದ, ಅಲ್ಪಸಂಖ್ಯಾತರ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಹತ್ತು ಹಲವು ಯೋಜನೆಗಳಿವೆ ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು.ಅಲ್ಲದೆ ವಿದ್ಯಾರ್ಥಿಗಳ ವಸತಿ ವ್ಯವಸ್ಥೆಗೆ ಹಾಸ್ಟೇಲ್ ಕಲ್ಪಿಸಲಾಗಿದೆ. ಉತ್ತಮ ಅಂಕಗಳನ್ನು ಪಡೆದುಕೊಂಡು ಹಾಸ್ಟೇಲ್ ಸೌಲಭ್ಯ ಪಡೆದುಕೊಂಡು ಉನ್ನತ ವ್ಯಾಸಂಗಕ್ಕೆ ಮುಂದಾಗಬೇಕು. ಮತ್ತು ವಿದ್ಯಾರ್ಥಿವೇತನವು ವಿದ್ಯಾರ್ಥಿಗಳಿಗೆ ಆರ್ಥಿಕವಾಗಿ ಉತ್ತೇಜನ ಒದಗಿಸುವ ಪ್ರಮುಖ ಯೋಜನೆಯಾಗಿದೆ. ಇದಕ್ಕೆ ಸಂಬಂಧಿಸಿದ…

Read More

ಕೆಂಭಾವಿ: ಪಠ್ಯದಲ್ಲಿದ್ದನ್ನು ಪ್ರಾತ್ಯಕ್ಷಿಕೆ ತೋರಿಸಿ ಪ್ರಜಾಪ್ರಭುತ್ವದ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಶಾಲಾ ಸಂಸತ್ತು ಚುನಾವಣೆಯನ್ನು ಲೋಕಸಭೆ ಮತ್ತು ರಾಜ್ಯ ವಿಧಾನಸಭೆ ಚುನಾವಣೆ ಮಾದರಿಯಲ್ಲಿಯೇ ಬುಧವಾರ ಪಟ್ಟಣದ ಸಮೀಪವಿರುವ ಮುದನೂರು ಪ್ರೌಢ ಶಾಲೆಯಲ್ಲಿ ನಡೆಯಿತು.ಒಟ್ಟು 15 ವಿದ್ಯಾರ್ಥಿಗಳು ಚುನಾವಣೆಯಲ್ಲಿ ಸ್ಪರ್ಧಿಸಿದ್ದರು,10 ನೇ ತರಗತಿಯಿಂದ 3 ವಿದ್ಯಾರ್ಥಿಗಳು, 9 ನೇ ತರಗತಿಯಿಂದ 4, ಮತ್ತು 8 ನೇ ತರಗತಿಯಿಂದ 4 ವಿದ್ಯಾರ್ಥಿಗಳು ಆಯ್ಕೆಯಾದರು. ಒಟ್ಟು 151 ಮಕ್ಕಳು ಅರ್ಹ ಮತದಾರರಾಗಿದ್ದು 132 ಮಕ್ಕಳು ಮತದಾನ ಮಾಡಿದರು. ಮತದಾನಕ್ಕೆ ಮುನ್ನ ನಾಲ್ಕು ದಿನಗಳ ಮುಂಚೆ ನಾಮಪತ್ರ ಸಲ್ಲಿಕೆ, ಚುನಾವಣೆ ಪ್ರಚಾರ, ಗುಪ್ತ ಮತದಾನ, ಮತಪತ್ರ ನೀಡುವಿಕೆ, ಶಾಯಿ ಹಚ್ಚುವಿಕೆ, ಮತ ಒತ್ತುವುದು, ಸಹಿ ಮಾಡುವುದು ನಿಜವಾದ ಚುನಾವಣೆಯನ್ನೇ ನಾಚಿಸುವಂತೆ ನೂರಾರು ವಿದ್ಯಾರ್ಥಿಗಳು ತಾಸು ಗಟ್ಟಲೇ ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸುವ ಮೂಲಕ ಶಾಲಾ ಸಂಸತ್ತು ರಚನೆ ಮಾಡಿಕೊಂಡರು.ಮುಖ್ಯ ಶಿಕ್ಷಕರಾದ ಎಂ.ಬಿ.ಪಾಟೀಲ, ಮುಖ್ಯ ಚುನಾವಣೆ ಅಧಿಕಾರಿಯಾಗಿ, ಅಬ್ದುಲ್ ಖಯೂಮ್, ಶರಣಬಸಯ್ಯ ಹಿರೇಮಠ, ನಿಂಗನಗೌಡ…

Read More

ವಿಜಯಪುರ: ಹಿಂದೆ ಗ್ರಾಮೀಣ ಪ್ರದೇಶದಲ್ಲಿ ಗೌಡರೇ ಮುಖ್ಯಸ್ಥರು. ಗ್ರಾಮದ ರಾಜಕೀಯ, ಸಾಮಾಜಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಗೌಡರೇ ಮುಖ್ಯಸ್ಥರಾಗಿದ್ದರು. ಸ್ವಾತಂತ್ರ್ಯ ಪೂರ್ವದಲ್ಲಿ ಗ್ರಾಮದ ಎಲ್ಲಾ ನಿಣ೯ಯಗಳನ್ನು ಗೌಡರೇ ಕೈಗೊಳ್ಳುತ್ತಿದ್ದರು ಎಂದು ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಎಚ್.ಎಂ.ಕಡಕೋಳ ಅಭಿಪ್ರಾಯ ವ್ಯಕ್ತಪಡಿಸಿದರು.ಜಿಲ್ಲಾ, ತಾಲೂಕಾ ಹಾಗೂ ನಗರ ಘಟಕ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಜರುಗಿದ ಪ್ರೊ ಸಿದ್ದಣ್ಣ ಬೀಡಗೊಂಡ ರಚಿಸಿದ “ವಿಜಯಪುರ ಜಿಲ್ಲೆಯ ಗೌಡ ಮನೆತನಗಳ ಆಡಳಿತ ಮತ್ತು ಸಂಸ್ಕೃತಿ” ಎಂಬ ಸಂಶೋಧನಾತ್ಮಕ ಕೃತಿಯನ್ನು ಅನಾವರಣಗೊಳಿಸಿ ಅವರು ಮಾತನಾಡುತ್ತಾ, ಬ್ರಿಟಿಷರ ಕಾಲದಲ್ಲಿ ಅದರಲ್ಲೂ ವಿಶೇಷವಾಗಿ ಉತ್ತರ ಕರ್ನಾಟಕದಲ್ಲಿ ಪ್ರತಿ ಗ್ರಾಮಗಳಲ್ಲಿ ಗೌಡರದೇ ಆಡಳಿತ ಇತ್ತೆಂದು ನಮ್ಮೆಲ್ಲರ ಪೂರ್ವಜರಿಂದ ತಿಳಿದು ಬರುತ್ತದೆ ಎಂದರು.ಕೃತಿಯನ್ನು ಪರಿಚಯಿಸಿದ ವಿಜಯಪುರ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಆನಂದ ಕುಲಕರ್ಣಿ ಮಾತನಾಡುತ್ತಾ, ಇದೊಂದು ಮೌಲಿಕ ಕೃತಿ. ಗ್ರಾಮೀಣ ಭಾಗದ ಬಹುತೇಕ ವಿಚಾರಗಳನ್ನು ಈ ಕೃತಿ ಒಳಗೊಂಡಿದೆ. ಲೇಖಕರು ಸಂಶೋಧನೆಯ ಎಲ್ಲ ಆಯಾಮಗಳನ್ನು ಈ…

Read More

ಬಸವನಬಾಗೇವಾಡಿ: ವಿದ್ಯಾರ್ಥಿಗಳು ಪಾಠ ಬೋಧನೆಯೊಂದಿಗೆ ಪಠ್ಯೇತರ ಚಟುವಟಿಕೆ ಹಾಗೂ ಕ್ರೀಡಾ ಚಟುವಟಿಕೆಯನ್ನು ಅಳವಡಿಸಿಕೊಳ್ಳಬೇಕೆಂದು ಜನತಾ ಎಜ್ಯುಕೇಶನ್ ಸೊಸೈಟಿಯ ನಿರ್ದೇಶಕ ರವಿಗೌಡ ಪಾಟೀಲ ಹೇಳಿದರು.ತಾಲೂಕಿನ ಮನಗೂಳಿ ಪಟ್ಟಣದ ಬಿ.ಎಸ್. ಪಾಟೀಲ ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ, ಪಠ್ಯೇತರ ಹಾಗೂ ಕ್ರೀಡಾ ಚಟುವಟಿಕೆ ಉದ್ಘಾಟನೆ ಮತ್ತು ರಾಷ್ಟೀಯ ಭಾವೈಕ್ಯತೆ, ರಾಷ್ಟ್ರಧ್ವಜ, ರಾಷ್ಟ್ರಗೀತೆ ಕುರಿತಾದ ಕಾಯಾ೯ಗಾರವನ್ನು ಸಸಿಗೆ ನೀರುಣಿಸುವ ಉದ್ಘಾಟಿಸಿ ಮಾತನಾಡಿದ ಅವರು,ಪಠ್ಯೇತರ ಚಟುವಟಿಕೆ ಮನಸ್ಸಿಗೆ ಮುದ ನೀಡಿದರೆ, ಕ್ರೀಡಾ ಚಟುವಟಿಕೆಯಲ್ಲಿ ಭಾಗವಹಿಸುವದರಿಂದ ದೇಹದ ಸದೃಢತೆಯನ್ನು, ಆರೋಗ್ಯವನ್ನು ಕಾಪಾಡುತ್ತದೆ. ಸದೃಡವಾದ ದೇಹದಲ್ಲಿ ಸದೃಡವಾದ ಮನಸ್ಸು ಇರುತ್ತದೆ. ಹಾಗೇ ಇದರ ಜೊತೆಗೆ ವಿದ್ಯಾರ್ಥಿಗಳು ದೇಶಪ್ರೇಮ, ಶಿಸ್ತು, ಸಮಯಪ್ರಜ್ಞೆ, ಸೇವಾಮನೋಭವನೆಯನ್ನು ಬೆಳೆಸಿಕೊಳ್ಳಬೇಕೆಂದು ಹೇಳಿದರು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಭಾರತ ಸೇವಾದಳದ ವಲಯ ಸಂಘಟಕ ನಾಗೇಶ ಡೋಣೂರ ಮಾತನಾಡಿದ ಅವರು, ಧ್ವಜಾರೋಹಣ, ಅವರೋಹಣ, ಧ್ವಜ ನೀತಿಸಂಹಿತೆ, ಧ್ವಜ ನಿಯಮಗಳ ಕುರಿತು ಹಾಗೂ ರಾಷ್ಟ್ರಗೀತೆ, ನಾಡಗೀತೆಯನ್ನು,ರಾಗ,ಲಯ,ತಾಳ, ಸಮಯ, ಹಾಗೂ ಸಂಪೂರ್ಣ ಸಂಪೂರ್ಣ ಹಾಡಿನ ಶಬ್ದಗಳ ಅರ್ಥವನ್ನು…

Read More

ಬೆಂಗಳೂರಿನಲ್ಲಿ ರಾಜ್ಯ ಭೂ-ಮಾಪನ ಇಲಾಖೆಯ ಆಯುಕ್ತ ಮಂಜುನಾಥ ಗೆ ರೈತ ಸಂಘದಿಂದ ಮನವಿ ಬಸವನಬಾಗೇವಾಡಿ: ರಾಜ್ಯದಲ್ಲಿರುವ ಎಲ್ಲ ಜಮೀನುಗಳನ್ನು ಮೋಜಣಿ ಮಾಡಿ ಸರಿಯಾದ ಹದ್ದು ಗುರುತಿಸುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ಸೋಮವಾರ ರಾಜ್ಯ ಭೂ-ಮಾಪನ ಇಲಾಖೆಯ ಆಯುಕ್ತ ಮಂಜುನಾಥ ಜೆ. ಅಖಂಡ ಕರ್ನಾಟಕ ರೈತ ಸಂಘದಿಂದ ಸಂಘದ ವಿಜಯಪುರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮನವಿ ಪತ್ರ ಸಲ್ಲಿಸಿದರು.ಅವರು ಸಲ್ಲಿಸಿದ ಮನವಿಯಲ್ಲಿ ರಾಜ್ಯದ ಪ್ರತಿಯೊಂದು ಗ್ರಾಮದಲ್ಲಿರುವ ಜಮೀನುಗಳು ಒತ್ತುವರಿಯಾಗಿ ಜಮೀನುಗಳ ಹದ್ದು ಗುರುತು ಸಿಗದಂತಾಗಿದೆ. ಇದರಿಂದಾಗಿ ಎಷ್ಟೋ ರೈತ ಬಾಂಧವರಲ್ಲಿ ಮಧ್ಯ ವೈಮನಸ್ಸು ಉಂಟಾಗಿ ಬಡಿದಾಟ-ಹೊಡೆದಾಟ ನಡೆಯುತ್ತಿವೆ. ಬ್ರಿಟಿಷರ ಆಡಳಿತ ಕಾಲದಲ್ಲಿ ಸರ್ವೆ ಮಾಡಿದ್ದನ್ನು ಬಿಟ್ಟರೆ ಇದುವರೆಗೂ ಮತ್ತೆ ಜಮೀನುಗಳ ಸರ್ವೇ ಕಾರ್ಯ ಮಾಡಿಲ್ಲ. ಪ್ರತಿ ೩೦ ವರ್ಷಕ್ಕೊಮ್ಮೆ ಸರ್ವೆ ಮಾಡಬೇಕೆಂಬ ನಿಯಮವಿದೆ. ಆದರೂ ಸ್ವತಂತ್ರ ಬಂದು ೭೬ ವರ್ಷ ಗತಿಸಿದರೂ ಇದುವರೆಗೂ ಜಮೀನುಗಳ ಸರ್ವೆ ಕಾರ್ಯ ಮಾಡಿಲ್ಲ. ಕೆಲವೆಡೆ ಜಮೀನುಗಳಿಗೆ ಹೋಗುವ ವಹಿವಾಟು ದಾರಿ ಗುರುತು ಸಹ ಸಿಗದಂತಾಗಿದೆ. ಇದು…

Read More