Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಬಸವನಬಾಗೇವಾಡಿ: ಪಟ್ಟಣದ ಬಿಎಲ್ಡಿಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯವು ತಾಲೂಕಿನ ಟಕ್ಕಳಕಿ ಗ್ರಾಮದಲ್ಲಿ ಏಳು ದಿನಗಳ ಕಾಲ ಶೈಕ್ಷಣಿಕ ವರ್ಷದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರ ಆಯೋಜಿಸಿದ್ದು. ಈ ಶಿಬಿರದಲ್ಲಿ ಶಿಬಿರಾರ್ಥಿಗಳಿಗೆ ಕರಾಟೆ ತರಬೇತಿ ಆಯೋಜನೆ ಮಾಡಿದ್ದು ವಿಶೇಷ.ಕರಾಟೆ ತರಬೇತುದಾರ ಜಗದೀಶ ತಳವಾರ ಅವರು, ಪ್ರಾಚೀನ ಕಾಲದಿಂದಲೂ ಮಹಿಳೆ ಪುರುಷನ ಅಡಿಯಾಳಾಗಿ ಮತ್ತು ಅವರ ರಕ್ಷಣೆಯಲ್ಲಿಯೇ ಕಾಲ ಕಳೆಯುತ್ತಿದ್ದಳು. ಇಂದು ೨೧ ನೇ ಶತಮಾನದಲ್ಲಿಯೂ ಮುಂದುವರಿದಿದೆ. ಇಂದು ಮಹಿಳೆಯರು ತಮ್ಮನ್ನು ರಕ್ಷಿಸಿಕೊಳ್ಳಲು ಕರಾಟೆ ಕಲಿಯುವದು ತುಂಬಾ ಅಗತ್ಯವಿದೆ. ಈ ಶಿಬಿರದ ಏಳು ದಿನಗಳ ಕಾಲ ವಿದ್ಯಾರ್ಥಿನಿಯರಿಗೆ ತಮ್ಮ ಆತ್ಮರಕ್ಷಣೆಯಲ್ಲಿ ಪ್ರಮುಖ ಪಾತ್ರ ನಿರ್ವಹಿಸುವ ಕರಾಟೆ ಕಲೆಯನ್ನು ಕಲಿಸಿ ಅವರಲ್ಲಿ ಧೈರ್ಯ, ಸ್ವಾಭಿಮಾನದ ಬದುಕನ್ನು ಕಟ್ಟಿಕೊಳ್ಳುವ ತಂತ್ರಗಳನ್ನು ತಿಳಿಸಿಕೊಡಲಾಗುವುದು. ಪ್ರಜಾಪ್ರಭುತ್ವದಲ್ಲಿ ಸಂವಿಧಾನವು ನಮಗೆ ಎಲ್ಲ ಸ್ವಾತಂತ್ರ್ಯ ನೀಡಿದರೂ ನಾವು ಸ್ವಯಂ ಆತ್ಮರಕ್ಷಣೆ ಮಾಡಿಕೊಳ್ಳುವ ಕಲೆಯನ್ನು ಕರಗತಿ ಮಾಡಿಕೊಳ್ಳಬೇಕು. ನಾವು ಸದಾಕಾಲ ಪುರುಷರನ್ನೇ ಅವಲಂಬಿಸುವ ಹೊಣೆಗಾರಿಕೆಯಿಂದ ಹೊರಬಂದು ಸ್ವತಂತ್ರ, ಸ್ವಾವಲಂಬಿ…
ಬಸವನಬಾಗೇವಾಡಿ: ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಎಲ್ಲ ವ್ಯಸನಗಳನ್ನು ತ್ಯಾಗ ಮಾಡುತ್ತೇನೆ ಎಂದು ಸಂಕಲ್ಪ ಮಾಡಿಕೊಂಡು ಪರಿಶುದ್ಧ ಬದುಕು ಸಾಗಿಸಬೇಕೆಂದು ಯರನಾಳ ವಿರಕ್ತಮಠದ ಗುರು ಸಂಗನಬಸವ ಸ್ವಾಮೀಜಿ ಹೇಳಿದರು.ತಾಲೂಕಿನ ಯರನಾಳ ಗ್ರಾಮದ ವಿರಕ್ತಮಠದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ವಿಜಯಪುರದ ಅಖಿಲಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್, ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮುಕ್ತಿ ಮತ್ತು ಸಂಶೋಧನಾ ಕೇಂದ್ರ ಹಾಗೂ ಯರನಾಳದ ಜಗದ್ಗುರು ಪಂಪಾಪತಿ ಮಹಾ ಶಿವಯೋಗೀಶ್ವರ ವಿದ್ಯಾವರ್ಧಕ ಸಂಘ ಸೇರಿದಂತೆ ವಿವಿಧ ಸ್ವಸಹಾಯ ಸಂಘಗಳ ಒಕ್ಕೂಟದ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಸಮಾಜದಲ್ಲಿ ಸಮಾಜಮುಖಿ ಚಟುವಟಿಕೆಗಳನ್ನು ಕೈಗೊಳ್ಳುವ ಮೂಲಕ ನಿಮ್ಮನ್ನು ಗುರುತಿಸುವಂತಹ ಮಹತ್ತರ ಕಾರ್ಯದಲ್ಲಿ ತೊಡಗಿಕೊಳ್ಳಬೇಕು. ಜೀವನವನ್ನು ಸನ್ಮಾರ್ಗದಲ್ಲಿ ಸಾಗಿಸಬೇಕೆಂದರು.ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಲಬುರಗಿ ಪ್ರಾದೇಶಿಕ ಯೋಜನಾ ಅಧಿಕಾರಿ ರಾಜೇಶ ಮಾತನಾಡಿ, ಕುಡಿತದಿಂದ ಎಷ್ಟೋ ಮನೆಗಳು ಹಾಳಾಗಿವೆ. ಕುಡಿತದ ಚಟ ಮಕ್ಕಳ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ. ಕುಡಿತದ ನಶೆಯಲ್ಲಿ ಅಹಿತಕರ ಘಟನೆಗಳು ಸಂಭವಿಸುತ್ತವೆ.…
ಬಸವನಬಾಗೇವಾಡಿ: ಪಟ್ಟಣದ ಹೃದಯಭಾಗದಲ್ಲಿ ನಿರ್ಮಾಣವಾಗಿರುವ ಮೆಗಾಮಾರುಕಟ್ಟೆಯಲ್ಲಿ ಅಂಗಡಿಯನ್ನು ಬಾಡಿಗೆ ಪಡೆದ ಅಂಗಡಿ ಮಾಲೀಕರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಂಗಳವಾರ ಪುರಸಭೆ ಮುಖ್ಯಾಧಿಕಾರಿ ಎಚ್.ಎಸ್.ಚಿತ್ತರಗಿ ಅವರಿಗೆ ಮನವಿ ಸಲ್ಲಿಸಿದರು.ಅವರು ಸಲ್ಲಿಸಿದ ಮನವಿಯಲ್ಲಿ ನಾವು ಪಟ್ಟಣದ ಮಧ್ಯದಲ್ಲಿ ನಿರ್ಮಿಸಿರುವ ಮೆಗಾ ಮಾರುಕಟ್ಟೆಯಲ್ಲಿ ಲೀಲಾವಿನಲ್ಲಿ ಅಂಗಡಿಗಳನ್ನು ಬಾಡಿಗೆ ಹಿಡಿದಿದ್ದೇವೆ. ಲೀಲಾವಿನ ಪ್ರಕಾರ ಡಿಪಾಜಿಟ್ ಕಟ್ಟಿರುತ್ತೇವೆ. ಆದರೆ ಹನುಮಾನ ಮಂದಿರದಿಂದ ನಾಗೂರ ರಸ್ತೆ ಕೂಡುವವರೆಗೆ ಮೆಗಾ ಮಾರುಕಟ್ಟೆಗೆ ಇರುವ ಕಂಪೌಂಡ ಗೋಡೆಯನ್ನು ತೆಗೆಸುವುದು. ಅಂಗಡಿಗಳಿಂದ ರಸ್ತೆಯವರೆಗೆ ಪಾವಟಿಗೆಗಳನ್ನು ಕಟ್ಟಿಸಿ ಕೊಡುವುದು. ಅಂಗಡಿಗಳಿಗೆ ಇರುವ ಶಟರಗಳನ್ನು ಸರಳವಾಗಿ ಏರಿಸಿ ಇಳಿಸಲು ಬರುವ ಹಾಗೆ ಮಾಡಿ ಕೊಡುವ ಮೂಲಕ ವ್ಯಾಪಾರಕ್ಕೆ ಅನುಕೂಲವಾಗುವ ಕೆಲಸಗಳನ್ನು ಮಾಡಿಕೊಡುವುದಾಗಿ ತಿಳಿಸಿದ್ದಿರಿ. ಆದರೆ ಯಾವ ಕೆಲಸಗಳು ಇದುವರೆಗೂ ಆಗಿರುವದಿಲ್ಲ. ತಾವುಗಳು ತಿಳಿಸಿದಂತೆ ನಮ್ಮ ಬೇಡಿಕೆಗಳನ್ನು ಈಡೇರಿಸುವ ಮೂಲಕ ಹೆಚ್ಚಿನ ಸಂಖ್ಯೆಯ ಗ್ರಾಹಕರನ್ನು ಆಕರ್ಷಿಸುವ ನಿಟ್ಟಿನಲ್ಲಿ ಶೀಘ್ರವೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗಿದೆ.ಈ ಸಂದರ್ಭದಲ್ಲಿ ಬಾಡಿಗೆ ಅಂಗಡಿಗಳ ಮಾಲೀಕರಾದ ಮಂಜುನಾಥ ಬಡಿಗೇರ, ಬಸವರಾಜ ಸೊನ್ನದ, ಈರಣ್ಣ…
ಮುದ್ದೇಬಿಹಾಳ: ತಾಲೂಕಿನಲ್ಲಿ ಸಾಹಿತ್ಯ ಕ್ಷೇತ್ರ ಬಡವಾಗಬಾರದು. ಸಾಹಿತ್ಯ ಕ್ಷೇತ್ರಕ್ಕೆ ನೆಲೆ ನೀಡುವ ಶತಪ್ರಯತ್ನವನ್ನು ತಾಲೂಕಿನ ಎಲ್ಲ ಹಿರಿಯ ಸಾಹಿತಿಗಳ ಮತ್ತು ಕನ್ನಡಾಭಿಮಾನಿಗಳ ಆಶೀರ್ವಾದದಿಂದ ಮಾಡುವೆ ಎಂದು ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ ಹೇಳಿದರು.ಪಟ್ಟಣದ ಮಾರುತಿ ನಗರದಲ್ಲಿರುವ ಕಾಶಿ ವಿಶ್ವನಾಥ ಮಠದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಆಯೋಜಿಸಲಾಗಿದ್ದ ಶರಣಯೋಗಿ ಹಡಪದ ಅಪ್ಪಣ್ಣನವರ ಮತ್ತು ವಚನ ಪಿತಾಮಹ ಫ.ಗು.ಹಳಕಟ್ಟಿ ಅವರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಕನ್ನಡದ ತೇರನ್ನು ಎಳೆಯುವ ಅವಕಾಶ ಸಿಕ್ಕಿರೋದು ನನ್ನ ಸೌಭಾಗ್ಯ. ಈ ಹುದ್ದೆಗೆ ನಾನು ಯಾವತ್ತೂ ಧಕ್ಕೆ ಬಾರದ ರೀತಿಯಲ್ಲಿ ಸಾಗುವೆ. ಇನ್ನು ಮೇಲಿಂದ ಮೇಲೆ ಕನ್ನಡದ ಕಾರ್ಯಕ್ರಮಗಳು ಜರುಗಲಿವೆ. ಅದಕ್ಕೆ ಎಲ್ಲ ಸಾಹಿತಿಗಳ ಸಹಾಯ ಸಹಕಾರ ಕೋರುವೆ ಎಂದರು.ಈ ವೇಳೆ ಹಿರಿಯ ಸಾಹಿತಿ ಬಿ.ಎಂ.ಹಿರೇಮಠರು ಮಾತನಾಡಿ, ಕ್ರಿಯಾಶೀಲ ಅಧ್ಯಕ್ಷರು ಭುವನೇಶ್ವರಿ ತಾಯಿಯ ತೇರನ್ನು ಎಳೆಯಲು ಎಲ್ಲ ಸಾಹಿತಿಗಳು, ಕನ್ನಡಾಭಿಮಾನಿಗಳು ಅದ್ಭುತ ಸಹಾಯ ಸಹಕಾರ ನೀಡೋಣ ಎಂದರು.ಮಹಾದೇಶ ಶಾಸ್ತ್ರಿಗಳು ಆಶೀರ್ವಚನ ನೀಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ…
ಮುದ್ದೇಬಿಹಾಳ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಿಜಯಪುರ ಜಿಲ್ಲಾ ಘಟಕದಿಂದ ಕೊಡಮಾಡುವ ವಾರ್ಷಿಕ ಪ್ರಶಸ್ತಿಗೆ ತಾಲೂಕಿನ ಢವಳಗಿ ಗ್ರಾಮದ ವಿಜಯವಾಣಿ ವರದಿಗಾರ ಜಿ.ಎನ್.ಬೀರಗೊಂಡ (ಮುತ್ತು) ಮತ್ತು ಡೈಲಿ ಸಾಲಾರ ವರದಿಗಾರ ಲಾಡ್ಲೆಮಶಾಕ ನದಾಫ ಆಯ್ಕೆಯಾಗಿದ್ದಾರೆ.ಜುಲೈ ೨೮ ರವಿವಾರದಂದು ವಿಜಯಪುರದ ಪೊಲೀಸ್ ಭವನದಲ್ಲಿ ನಡೆಯುತ್ತಿರುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಚಿವರು, ಶಾಸಕರು ಮತ್ತು ಗಣ್ಯರ ಸಮ್ಮುಖದಲ್ಲಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.
ಮುದ್ದೇಬಿಹಾಳ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಿಜಯಪುರ ಜಿಲ್ಲಾ ಘಟಕದಿಂದ ಕೊಡಮಾಡುವ ವಾರ್ಷಿಕ ಪ್ರಶಸ್ತಿಗೆ ತಾಲೂಕಿನ ಢವಳಗಿ ಗ್ರಾಮದ ವಿಜಯವಾಣಿ ವರದಿಗಾರ ಜಿ.ಎನ್.ಬೀರಗೊಂಡ (ಮುತ್ತು) ಮತ್ತು ಡೈಲಿ ಸಾಲಾರ ವರದಿಗಾರ ಲಾಡ್ಲೆಮಶಾಕ ನದಾಫ ಆಯ್ಕೆಯಾಗಿದ್ದಾರೆ.ಜುಲೈ ೨೮ ರವಿವಾರದಂದು ವಿಜಯಪುರದ ಪೊಲೀಸ್ ಭವನದಲ್ಲಿ ನಡೆಯುತ್ತಿರುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಚಿವರು, ಶಾಸಕರು ಮತ್ತು ಗಣ್ಯರ ಸಮ್ಮುಖದಲ್ಲಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.
ಕೊಲ್ಹಾರ: ತಾಲೂಕಿನ ಬಳೂತಿ ಗ್ರಾಮದ ಭಾವಿ ಬಸವೇಶ್ವರ ಹೆಜ್ಜೆ ಮೇಳ ಸಹಯೋಗದಲ್ಲಿ ಕನ್ನಡ ಜಾನಪದ ಪರಿಷತ್ ಜಿಲ್ಲಾ ಘಟಕ ವಿಜಯಪುರ ಮತ್ತು ತಾಲೂಕು ಘಟಕ ಕೊಲ್ಹಾರ ವತಿಯಿಂದ ಬಳೂತಿ ಗ್ರಾಮದಲ್ಲಿ ” ಜಿಲ್ಲಾ ಮಟ್ಟದ ರಿವಾಯತ ಸಂಭ್ರಮ ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಬೀಬಿ ಫಾತೀಮಾಳ ಹತ್ತು ದಿನಗಳ ಜಾರತ ಉತ್ಸವ ಪ್ರಯುಕ್ತ ದಿನಾಂಕ ೨೫ ಮತ್ತು ೨೬ ರಂದು ಎರಡು ದಿನಗಳ ಕಾಲ ನಡೆಯುವ ಈ ಕಾರ್ಯಕ್ರಮ ನಾಗರದಿನ್ನಿಯ ಪೂಜ್ಯ ಮಲ್ಲಿಕಾರ್ಜುನ ಸ್ವಾಮಿಗಳ ಸಾನಿಧ್ಯದಲ್ಲಿ ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಡಾ ಎಸ್ ಜಾನಪದ ಬಾಲಾಜಿ ಉದ್ಘಾಟಿಸುವರು. ಕನ್ನಡ ಜಾನಪದ ಪರಿಷತ್ ವಿಜಯಪುರ ಜಿಲ್ಲಾಧ್ಯಕ್ಷ ಬಾಳನಗೌಡ ಪಾಟೀಲ (ಪಡಗನೂರ) ಅಧ್ಯಕ್ಷತೆ ವಹಿಸುವರು. ಕೊಲ್ಹಾರ ತಾಲೂಕಾಧ್ಯಕ್ಷ ಮಲ್ಲಪ್ಪ ಗಣಿ ಹಾಗೂ ಜಿಲ್ಲಾ, ತಾಲೂಕಾ ಮತ್ತು ವಲಯ ಪದಾಧಿಕಾರಿಗಳು ಹಾಗೂ ಬಳೂತಿ ಗ್ರಾಮದ ಗಣ್ಯರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯುವದು.ಜಿಲ್ಲೆಯ ವಿವಿಧ ಭಾಗಗಳಿಂದ ೧೦೧ ಹೆಜ್ಜೆ ಮೇಳ ಕಲಾ ತಂಡಗಳು ಪ್ರದರ್ಶನ ನೀಡಲಿವೆ. ಕಲಾತಂಡಗಳಿಗೆ ಸನ್ಮಾನ -…
– ಜಯಶ್ರೀ.ಜೆ. ಅಬ್ಬಿಗೇರಿ,ಇಂಗ್ಲೀಷ ಉಪನ್ಯಾಸಕರು, ಬೆಳಗಾವಿ, ಮೊ.೯೪೪೯೨೩೪೧೪೨ ದಿನವೆಲ್ಲ ಅದೆಷ್ಟೋ ಜನರನ್ನು ಭೇಟಿಯಾಗುತ್ತೇವೆ. ಹೊಸದಾಗಿ ಕೈ ಕುಲುಕಿದವರ ಮಾತುಗಳಿಗೆ ಮಾತ್ರ ಚೂಪಾಗುವ ಕಿವಿಗಳು, ಉಳಿದವರ ಮಾತುಗಳನ್ನು ಲೆಕ್ಕಾಚಾರದಲ್ಲಿ ಕೇಳಿಸಿಕೊಳ್ಳುತ್ತೇವೆ. ಇನ್ನು ಮನೆ ಮಂದಿಯ ಮಾತುಗಳನ್ನಂತೂ ಈ ಕಡೆಯಿಂದ ಕೇಳಿ ಆ ಕಡೆಯಿಂದ ಬಿಟ್ಟು ಬಿಡುತ್ತೇವೆ. ಬೇರೆಯವರೆಲ್ಲ ನಮ್ಮ ಮಾತುಗಳನ್ನು ಮೆಚ್ಚಿಕೊಳ್ಳಬೇಕು. ಹ್ಞೂಂಗುಡಬೇಕು. ಆದರೆ ಎದುರಿಗಿನವರ ಮಾತಿಗೆ ಬೇಸರದಿಂದ ತಲೆ ಅಲ್ಲಾಡಿಸುವ ವಿಚಿತ್ರ ಸ್ವಭಾವ ನಮ್ಮದು. ಇದೆಂತಹ ವೈರುದ್ಧವಿಲ್ಲವೇ? ಇತರರು ಮಾತುಗಳನ್ನು ತಿರಸ್ಕರಿಸಿದರಂತೂ ನೋವು ಬೇಸರ ಸಿಟ್ಟು ನೆತ್ತಿಗೇರುತ್ತದೆ. ನಮಗೆ ಬೇಕಾದ ಕಿವಿಗಳು ಜಗತ್ತಿನ ಅದ್ಯಾವ ಮೂಲೆಯಲ್ಲಿಯೇ ಅಡಗಿರಲಿ ಅವುಗಳನ್ನು ಬಿಡದೇ ಹಿಡಿದು, ಬೇಕಾದ ಬೇಡವಾದ ಭಾವಗಳೆಲ್ಲವನ್ನು ತುಂಬುತ್ತೇವೆ. ವಿಶ್ವ ವಿಖ್ಯಾತ ವ್ಯಕ್ತಿಗಳ ಜೀವನಗಾಥೆಯನ್ನು ತೆರೆದು ಸೂಕ್ಷ್ಮವಾಗಿ ಅವಲೋಕಿಸಿದರೆ ಆಸ್ಥೆಯಿಂದ ಆಲಿಸುವಿಕೆಯ ಗುಣವೇ ಅವರು ಹೀಗೆ ಶಾಶ್ವತವಾಗಿ ಉಳಿಯಲು ಕಾರಣ ಎಂಬುದು ಅರಿವಿಗೆ ಬರುತ್ತದೆ. ನಾವು ಕೇಳಿಸಿಕೊಳ್ಳುವ ಮಾತುಗಳಲ್ಲೆಲ್ಲ ಬಹು ಬೇಸರದಿಂದ ಪಡೆದುಕೊಳ್ಳುವುದು ಬುದ್ಧಿವಾದವನ್ನು. ಅರೆ ! ಇದೇನು ನಾನು ಇತರರ ಮಾತುಗಳನ್ನು…
ಯಡ್ರಾಮಿ ವಿರಕ್ತಮಠದಲ್ಲಿ ಪುಣ್ಯಾರಾಧನೆ | ಉಚಿತ ಆರೋಗ್ಯ ತಪಾಸಣೆ | ರಕ್ತದಾನ ಶಿಬಿರ ಯಡ್ರಾಮಿ: ಜೀವನದಲ್ಲಿನ ಅನೇಕ ಬಗೆಯ ತೊಂದರೆಗಳನ್ನು ಹೊತ್ತುಕೊಂಡು ಬಂದ ಭಕ್ತರ ಪಾಲಿಗೆ ಲಿಂ. ಸಿದ್ದರಾಮ ಮಹಾಸ್ವಾಮಿಗಳು ಕಷ್ಟಗಳ ನೀಗಿಸುವ ವೈದ್ಯರಂತಿದ್ದರು ಎಂದು ಸೊನ್ನದ ಡಾ.ಶಿವಾನಂದ ಮಹಾಸ್ವಾಮಿಗಳು ನುಡಿದರು.ಪಟ್ಟಣದ ಶ್ರೀ ಮುರುಘೇಂದ್ರ ಶಿವಯೋಗಿ ವಿರಕ್ತ ಮಠದಲ್ಲಿ ಬುಧವಾರ ಆಯೋಜಿಸಿದ್ದ ಲಿಂ.ಸಿದ್ಧರಾಮ ಮಹಾಸ್ವಾಮಿಗಳವರ ತೃತೀಯ ಪುಣ್ಯಸ್ಮರಣೆಯ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು.ಪೂಜ್ಯ ಸಿದ್ಧರಾಮ ಮಹಾಸ್ವಾಮಿಗಳು ಸರಳ ಮತ್ತು ಸೌಮ್ಯ ಸ್ವಭಾವದವರು. ಹಾಗೆಯೇ ತ್ರಿಕಾಲ ಲಿಂಗ ಪೂಜಾ ನಿಷ್ಠರು ಆಗಿದ್ದರು. ಯಾವ ಗದ್ದಲ ಗೋಜಲುಗಳಿಲ್ಲದೇ ತಮ್ಮ ಬಳಿ ಭಕ್ತಿಯಿಂದ ಬರುವ ಭಕ್ತರ ತೊಂದರೆಗಳನ್ನು ಸಮಾಧಾನದಿಂದಲೇ ಆಲಿಸಿ ಸೂಕ್ತ ಪರಿಹಾರಗಳನ್ನು ನೀಡುವುದರ ಮೂಲಕ ಭಕ್ತರ ಪಾಲಿಗೆ ಆರಾಧ್ಯದೈವವಾಗಿದ್ದಾರೆ. ಅವರ ಸಾಮಾಜಿಕ, ಶೈಕ್ಷಣಿಕ ಹಾಗೂ ಧಾರ್ಮಿಕ ಸೇವೆ ಸ್ಮರಣೀಯವಾಗಿದೆ ಎಂದರು.ಅವರು ಹಾಕಿಕೊಟ್ಟ ಸುಮಾರ್ಗದಲ್ಲಿಯೇ ಸದ್ಯದ ಪೀಠಾಧಿಪತಿಗಳಾದ ಸಿದ್ಧಲಿಂಗ ಸ್ವಾಮಿಗಳು ಸಮಾಜೋ ಧಾರ್ಮಿಕ ಸೇವೆ ಮುಂದುವರಿಸಿಕೊಂಡು ಹೋಗುತ್ತಿರುವುದು ಉತ್ತಮ ಕಾರ್ಯವಾಗಿದೆ ಎಂದು ಶ್ಲಾಘಿಸಿದರು.ಪುಣ್ಯಸ್ಮರಣೆಯ ನಿಮಿತ್ತವಾಗಿ ಶ್ರೀ…
ದೇವರಹಿಪ್ಪರಗಿ: ಆಲಮಟ್ಟಿ ಆಣೆಕಟ್ಟಿನಲ್ಲಿ ಸಾಕಷ್ಟು ನೀರು ಸಂಗ್ರಹವಾಗಿದ್ದು ತಕ್ಷಣವೇ ಚಿಮ್ಮಲಗಿ ಮುಖ್ಯ ಕಾಲುವೆಯ ನಾಗಠಾಣ ಉಪಕಾಲುವೆಗೆ ನೀರು ಹರಿಸಬೇಕೆಂದು ನಿವಾಳಖೇಡ ಗ್ರಾಮದ ರೈತರು ಆಗ್ರಹಿಸಿದ್ದಾರೆ.ತಾಲ್ಲೂಕು ಸೇರಿದಂತೆ ಮತಕ್ಷೇತ್ರದಲ್ಲಿ ವಾಡಿಕೆಯಂತೆ ಮುಂಗಾರಿನ ಬಹುತೇಕ ಮಳೆಗಳು ರೈತ ಸಮುದಾಯದ ನಿರೀಕ್ಷೆಯಂತೆ ಆಗದೇ ಇದ್ದು, ಇದೇ ಸಂದರ್ಭದಲ್ಲಿ ಕಾಲುವೆಗಳಿಗೆ ನೀರು ಪೂರೈಸುವ ಆಲಮಟ್ಟಿ ಆಣೆಕಟ್ಟಿನಲ್ಲಿ ದಿನದಿಂದ ದಿನಕ್ಕೆ ನೀರು ಸಂಗ್ರಹವಾಗುತ್ತಿದೆ. ಜೊತೆಗೆ ಈಗ ಮಹಾರಾಷ್ಟ್ರ ಸೇರಿದಂತೆ ಕೃಷ್ಣಾ ನದಿ ತೀರದ ಪ್ರದೇಶಗಳಲ್ಲಿ ಉತ್ತಮ ಮಳೆಯಾಗಿದ್ದು, ಆಲಮಟ್ಟಿ ಆಣೆಕಟ್ಟಿನಲ್ಲಿ ಹೆಚ್ಚಿನ ನೀರು ಸಂಗ್ರಹವಾಗಿದೆ. ಈ ನೀರನ್ನು ಕಾಲುವೆಗಳಿಗೆ ಹರಿಸಲು ಯಾವುದೇ ತೊಂದರೆಯಿಲ್ಲ. ಅದಕ್ಕಾಗಿ ತಕ್ಷಣವೇ ಕಾಲುವೆಗಳ ಮುಖಾಂತರ ನಿರಂತರ ನೀರು ಹರಿಸಿ ರೈತ ಸಮುದಾಯಕ್ಕೆ ಅನುಕೂಲ ಮಾಡಿಕೊಡಬೇಕು.ದೇವರಹಿಪ್ಪರಗಿ ಭಾಗದ ಚಿಮ್ಮಲಗಿ ಮುಖ್ಯ ಕಾಲುವೆ ಹಾಗೂ ನಾಗಠಾಣ ಉಪಕಾಲುವೆಗಳಿಗೆ ಕಾಲುವೆಯ ಕೊನೆಯ ಭಾಗದವರೆಗೂ ತಲುಪುವಂತೆ ಕೂಡಲೇ ನೀರು ಹರಿಸಲು ಕೆಬಿಜೆಎನ್ಎಲ್ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಗ್ರಾಮದ ರೈತಸಂಘದ ಪದಾಧಿಕಾರಿಗಳಾದ ಚನ್ನಪ್ಪ ಕಾರಜೋಳ, ಬಸವರಾಜ ಭಂಟನೂರ, ವಿನೋದ ತಳವಾರ,…
