Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ಮೀನುಗಾರಿಕೆ ಇಲಾಖೆಯಿಂದ ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ೨೦೨೦-೨೧ ರಿಂದ ೨೦೨೩-೨೪ನೇ ಸಾಲಿನವರೆಗಿನ ಬಾಕಿ ಉಳಿದ ಘಟಕಗಳಿಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.ಹೊಸ ಮೀನು ಕೃಷಿ ಕೊಳ ನಿರ್ಮಾಣ, ಸಣ್ಣ ಗಾತ್ರದ ಆರ್.ಎ.ಎಸ್. ಘಟಕ, ಮತ್ಸ್ಯವಾಹಿನಿ ಯೋಜನೆಯಡಿ ತ್ರಿಚಕ್ರ ವಾಹನ ಪರವಾನಿ ಆಧಾರದಲ್ಲಿ ಪಡೆಯಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ದಿನಾಂಕ : ೦೫-೦೮-೨೦೨೪ ಕೊನೆಯ ದಿನಾಂಕವಾಗಿದ್ದು, ಆಸಕ್ತ ಮೀನು ಕೃಷಿಕರು ಸಂಬಂಧಪಟ್ಟ ತಾಲೂಕಾ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಉಪನಿರ್ದೇಶಕರು ವಿಜಯಪುರ ಮೊ: ೯೯೮೬೧೩೨೭೧೭, ಮೀನುಗಾರಿಕೆ ಸಹಾಯಕ ನಿರ್ದೇಶಕರು ವಿಜಯಪುರ ಮೊ: ೯೮೪೫೯೨೭೧೧೦, ಮೀನುಗಾರಿಕೆ ಸಹಾಯಕ ನಿರ್ದೇಶಕರು ಮುದ್ದೇಬಿಹಾಳ ಮೊ: ೯೮೪೫೯೨೭೧೧೦ ಸಂಖ್ಯೆಗೆ ಸಂಪರ್ಕಿಸುವಂತೆ ಮೀನುಗಾರಿಕೆ ಇಲಾಖೆ ಉಪನಿದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂಡಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟನ್ನು ಇಂಡಿಯಲ್ಲಿ ಸ್ವಾಗತಿಸಿದ್ದು, ಇದು ಜನಸಾಮಾನ್ಯರಿಗೆ ಒತ್ತು ನೀಡುವ ಬಜೆಟ್ ಆಗಿದೆ ಎಂದಿದ್ದಾರೆ. ” ಸಾಮಾನ್ಯರ ಅಭಿವೃದ್ದಿಗೆ ಒತ್ತು ನೀಡುವ ಬಜೆಟ್ ಇದಾಗಿದೆ. ಯುವಕರು, ಮಹಿಳೆಯರು, ಬಡವರು, ಮತ್ತು ರೈತರ ಮೇಲೆ ಕೇಂದ್ರಿಕರಿಸಿ ಬಜೆಟ್ ಸಿದ್ದ ಪಡಿಸಲಾಗಿದೆ. ಕೃಷಿಯಲ್ಲಿ ಉತ್ಪಾದನೆ ಗುರಿ ಹೊಂದಿದ್ದು ರೈತರಿಗೆ ಉತ್ತೇಜನವಾಗಿದೆ ” ಎಂದು ವಿಜಯಪುರ ಜಿಲ್ಲಾ ಬಿಜೆಪಿ ರೈತ ಮೋರ್ಚಾ ಮಾಜಿ ಅಧ್ಯಕ್ಷ ಕಾಸುಗೌಡ ಬಿರಾದಾರ ಅಭಿಪ್ರಾಯಿಸಿದ್ದಾರೆ. ” ತೆರಿಗೆ ಪದ್ದತಿ ಮತ್ತಷ್ಟು ಸರಳೀಕರಣ, ಚಿನ್ನ ಮತ್ತು ಬೆಳ್ಳಿಯ ಮೇಲಿನ ಕಸ್ಟಮ್ಸ ಸುಂಕವನ್ನು ಶೇ.೬ ಇಳಿಕೆ ಸೇರಿದಂತೆ ಕೃಷಿಯಲ್ಲಿ ಉತ್ಪಾದಕತೆ ಮತ್ತು ಸ್ಥಿತಿ ಸ್ಥಾಪಕತ್ವ ಸಂಶೋಧನೆ ಮತ್ತು ಅಭಿವೃದ್ದಿಗೆ ಸುಧಾರಣೆಗಳ ಪ್ರಸ್ತಾಪ ಮಾಡಿದ್ದಾರೆ” ಎಂದು ಇಂಡಿಬಿಜೆಪಿ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಕಿವಡೆ ಪ್ರತಿಕ್ರಿಯಿಸಿದ್ದಾರೆ. ” ೨೦ ಲಕ್ಷ ಯುವಕರಿಗೆ ಕೌಶಲ್ಯಾಭಿವೃದ್ದಿ ಯೋಜನೆ, ಉನ್ನತ ಶಿಕ್ಷಣಕ್ಕೆ ೧೦ ಸಾಲ ಕೈಗಾರಿಕೆ ಕಾರಿಡಾರ್ ತೆರಿಗೆ ಪದ್ದತಿ ಸರಳೀಕರಣ ವರದಾನವಾಗಲಿದೆ” ಎಂದು…
ವಿಜಯಪುರ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಮಂಡಿಸಿದ ಕೇಂದ್ರ ಬಜೆಟ್ ಯುವಕರು, ಮಹಿಳೆಯರು, ಬಡವರು ಮತ್ತು ರೈತರ ಮೇಲೆ ಕೇಂದ್ರೀಕರಿಸಿ ಸಿದ್ದಪಡಿಸಲಾದ ಬಜೆಟ್ ಇದಾಗಿದೆ ಎಂದು ನಗರದ ಪ್ರಗತಿಪರ ಯುವಕ ಸೋಮನಾಥ ನಡಗೇರಿ ಅಭಿಪ್ರಾಯಪಟ್ಟಿದ್ದಾರೆ.ಕೃಷಿಯಲ್ಲಿ ಉತ್ಪಾದಕತೆ, ಮತ್ತು ಸ್ಥಿತಿಸ್ಥಾಪಕತ್ವ, ಉದ್ಯೋಗ ಮತ್ತು ಕೌಶಲ್ಯ-ಎಚ್ಆರ್ಡಿ ಮತ್ತು ಸಾಮಾಜಿಕ ನ್ಯಾಯ, ಉತ್ಪಾದಕತೆ, ಸೇವೆಗಳು, ನಗರಾಭಿವೃದ್ದಿ, ಶಕ್ತಿಬದ್ರತೆ, ಮೂಲಭೂತ ಸೌಕರ್ಯಗಳನ್ನು ಒಳಗೊಂಡ ಸರ್ವರಿಗೂ ಅನುಕೂಲವಾಗುವ ಬಜೆಟ್ ಇದಾಗಿದೆ. ಅಭಿವೃದ್ಧಿ ಪೂರಕ ಬಜೆಟ್ ನ್ನು ಸ್ವಾಗತಿಸುತ್ತೇನೆ.ಮಂಡಿಸಲು ಮಾರ್ಗದರ್ಶನ ಮಾಡಿದ ದೇಶವನ್ನು ಜಗದ್ಗುರುವನ್ನಾಗಿ ಮಾಡಿದ ವಿಶ್ವನಾಯಕ ನರೇಂದ್ರ ಮೋದಿಜಿ ಅವರಿಗೆ ನಡಗೇರಿ ಅಭಿನಂದನೆ ಸಲ್ಲಿಸಿದ್ದಾರೆ.
” ವಿಕಸಿತ ಭಾರತದ ಆಶಯದೊಂದಿಗೆ ಹಲವು ಆರ್ಥಿಕ ಸುಧಾರಣಾ ಕ್ರಮ. ಶಿಕ್ಷಣ, ಉದ್ಯೋಗ, ಕೌಶಲ್ಯಾಭಿವೃದ್ಧಿಗೆ 1.48 ಲಕ್ಷ ಕೋಟಿ ಮೀಸಲು, ಗ್ರಾಮೀಣ ಭಾಗದ ಆರ್ಥಿಕತೆ ವೃದ್ದಿಗೆ ಆದ್ಯತೆ, ಬಡವರು, ಮಹಿಳೆಯರು, ರೈತರು ಹಾಗೂ ಯುವಕರತ್ತ ಸರ್ಕಾರದ ಚಿತ್ತ , ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸತತ 7ನೇ ಬಾರಿಗೆ ಕೇಂದ್ರ ಬಜೆಟ್ ಮಂಡನೆ ಮಾಡಿದ್ದು ಇದೊಂದು ಐತಿಹಾಸಿಕ ಬಜೆಟ್ ಆಗಿದೆ.” – ರಮೇಶ ಜಿಗಜಿಣಗಿಸಂಸದರು, ವಿಜಯಪುರ
” ವಿಕಸಿತ ಭಾರತದ ಆಶಯದೊಂದಿಗೆ ಹಲವು ಆರ್ಥಿಕ ಸುಧಾರಣಾ ಕ್ರಮ. ಶಿಕ್ಷಣ, ಉದ್ಯೋಗ, ಕೌಶಲ್ಯಾಭಿವೃದ್ಧಿಗೆ 1.48 ಲಕ್ಷ ಕೋಟಿ ಮೀಸಲು, ಗ್ರಾಮೀಣ ಭಾಗದ ಆರ್ಥಿಕತೆ ವೃದ್ದಿಗೆ ಆದ್ಯತೆ, ಬಡವರು, ಮಹಿಳೆಯರು, ರೈತರು ಹಾಗೂ ಯುವಕರತ್ತ ಸರ್ಕಾರದ ಚಿತ್ತ , ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸತತ 7ನೇ ಬಾರಿಗೆ ಕೇಂದ್ರ ಬಜೆಟ್ ಮಂಡನೆ ಮಾಡಿದ್ದು ಇದೊಂದು ಐತಿಹಾಸಿಕ ಬಜೆಟ್ ಆಗಿದೆ.” – ರಮೇಶ ಜಿಗಜಿಣಗಿಸಂಸದರು, ವಿಜಯಪುರ
ಕೆಂಭಾವಿ: ರಾಜ್ಯದ ಪ.ಜಾತಿ/ಪ.ಪಂ ಜನರ ಸರ್ವಾಂಗೀಣ ಪ್ರಗತಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದ ವತಿಯಿಂದವಿವಿಧ ಬೇಡಿಕೆಗಳನ್ನೊಳಗೊಂಡ ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ಉಪತಹಸೀಲ್ದಾರವರ ಮೂಲಕ ಸಲ್ಲಿಸಲಾಯಿತು.ಕ.ರಾ.ದ.ಸ. ಸಮಿತಿಯು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಶಾಖೆಗಳನ್ನು ಹೊಂದಿದ್ದು, ಈ ಬಾರಿ ಪ್ರತಿಯೊಂದು ಕ್ಷೇತ್ರದಲ್ಲಿ ಕಾಂಗ್ರೆಸ್ ಪರ ಮತಗಳು ಚಲಾವಣೆ ಮಾಡಿ ತಮ್ಮ ಪಕ್ಷಕ್ಕೆ ಬೆಂಬಲ ನೀಡಿತ್ತು. ಸಾಮಾಜಿಕ ನ್ಯಾಯ ಈಡೇರಿಸುವ ಜನಪ್ರಿಯ ಮತ್ತು ಬದ್ಧತೆಯಿರುವ ಮುಖ್ಯಮಂತ್ರಿಗಳು ತಾವಾಗಿದ್ದು, ತಮ್ಮ ಆಡಳಿತಾವಧಿಯಲ್ಲಿ ರಾಜ್ಯದ ದಲಿತ, ಹಿಂದುಳಿದ, ಅಲ್ಪಸಂಖ್ಯಾತರ ಮತ್ತು ಸಮಸ್ತ ಶೋಷಿತ ಸಮುದಾಯಗಳ ಸರ್ವಾಂಗೀಣ ಪ್ರಗತಿ ಆಗಬೇಕಿದೆ.ಸಂವಿಧಾನಕ್ಕೆ ತರಲಾಗಿರುವ 93ನೇ ತಿದ್ದುಪಡಿಯನ್ವಯ ಉನ್ನತ ಸಂಸ್ಥೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಮೀಸಲಾತಿ, ಹಾಸ್ಟೆಲ್ ಗಳ ಮೂಲಭೂತ ಸೌಕರ್ಯ ಪೂರೈಕೆ, ಹಾಸ್ಟೆಲ್ ಬಯಸಿ ಅರ್ಜಿ ಸಲ್ಲಿಸುವ ಎಲ್ಲಾ ಎಸ್ಸಿ/ ಎಸ್ಟಿ ವಿದ್ಯಾರ್ಥಿಗಳಿಗೆ ಮುಕ್ತ ಪ್ರವೇಶ, ನಾಗರೀಕ ಹಕ್ಕುಗಳ ರಕ್ಷಣೆ ಕಾಯ್ದೆ, ದೌರ್ಜನ್ಯ ತಡೆ ಕಾಯ್ದೆ ಸಮರ್ಪಕ ಅನುಷ್ಠಾನ, ಅಪರಾಧಗಳ…
ಕೆಂಭಾವಿ: ಪಟ್ಟಣದ ಶ್ರೀಮತಿ ಗಂಗೂಬಾಯಿ ಶಾಂತಗೌಡ ಪೋಲೀಸ್ ಪಾಟೀಲ್ ಮೆಮೋರಿಯಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಕ್ರೆಡಿಟ್ ಎಕ್ಸಿಸ್ ಗ್ರಾಮೀಣ ಲಿಮಿಟೆಡ್ ಸಹಯೋಗದಲ್ಲಿ ಮಂಗಳವಾರ ಜರುಗಿದ ಉದ್ಯೋಗ ಮೇಳದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲ ಡಾ ನಾಗಪ್ಪ ಚಾವಲ್ಕರ್, ಪದವಿ ಓದುತ್ತಿರುವಾಗಲೇ ವಿದ್ಯಾರ್ಥಿಗಳಿಗೆ ಉದ್ಯೋಗ ಹುಡುಕಿಕೊಂಡು ಬರುತ್ತಿದ್ದು, ಇಂತಹ ಉದ್ಯೋಗ ಮೇಳ ನಿರುದ್ಯೋಗ ನಿವಾರಣೆಗೆ ಸಹಕಾರಿಯಾಗಲಿದೆ ಈ ಸೌಲಭ್ಯ ಸರ್ಕಾರಿ ಕಾಲೇಜುಗಳಲ್ಲಿ ಮಾತ್ರವಿದೆ, ಇದರ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಲು ಮುಂದಾಗಬೇಕೆಂದು ಕರೆ ನೀಡಿದರು.ಸಂಸ್ಥೆಯ ಮ್ಯಾನೇಜರ್ ಸುಧೀಂದ್ರ ಮಾತನಾಡಿ, ಸುಮಾರು 20 ವರ್ಷಗಳಿಂದ ಆರಂಭವಾದ ನಮ್ಮ ಸಂಸ್ಥೆ 17 ರಾಜ್ಯಗಳಲ್ಲಿ 19 ಸಾವಿರ ಉದ್ಯೋಗಿಗಳನ್ನು ಹೊಂದಿದ್ದು, ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ, ಆರ್ಥಿಕ ಧನ ಸಹಾಯ ನೀಡಿ ಸ್ವಂತ ಉದ್ಯೋಗ ಕೈಗೊಳ್ಳಲು ನೆರವು ನೀಡಲಾಗುತ್ತಿದೆ ಎಂದವರು. ಉದ್ಯೋಗ ಕೈಕೊಳ್ಳಲು ಮುಂದೆ ಬಂದು ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಮೂಲಕ ಆರಂಭದಲ್ಲಿ ರೂಪಾಯಿ 13500/- ಮಾಸಿಕ ವೇತನ, 6 ತಿಂಗಳೊಳಗೆ ಉದ್ಯೋಗ ಕಾಯಂ…
ಇಂಡಿ: ಪಟ್ಟಣದ ಶ್ರೀಕಾಂತ ಸಾಲೋಟಗಿಯವರಿಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಪಿ.ಎಚ್.ಡಿ ಪ್ರಧಾನ ಮಾಡಿ ಗೌರವಿಸಿದೆ.ಅವರು ಆಪ್ಟಿಮೈಜೇಷನ್ ಆಫ್ ರಿಸರ್ಚ ಅಲೋಕೆಷನಿನ್ ಇಂಟರ್ ನೆಟ್ ಆಫ್ ಥಿಂಗ್ಸ ಅಪ್ಲಿಕೇಷನ್ ವಿಷಯದ ಮೇಲೆ ಪ್ರಬಂಧ ಮಂಡಿಸಿದ್ದರು.ಅವರಿಗೆ ಡಾ. ಜಯಶ್ರೀ ಮಲ್ಲಾಪುರ ಮಾರ್ಗದರ್ಶಕ ರಾಗಿದ್ದರು.ಇವರು ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿ ಅಧ್ಯಯನ ಮಾಡಿದ್ದಾರೆ.
ವಿಜಯಪುರ: ಪ್ರತೀ ವರ್ಷದಂತೆ ಈ ವರ್ಷವೂ ನಗರದ ಇಬ್ರಾಹಿಂಪುರದಲ್ಲಿ ಮಾತಾ ಶ್ರೀ ಮರಗಮ್ಮ ದೇವಿ ಜಾತ್ರಾ ಮಹೋತ್ಸವ ಮಂಗಳವಾರ ವಿಜೃಂಭಣೆಯಿಂದ ಜರುಗಿತು.ಜಾತ್ರೆಯ ಪ್ರಯುಕ್ತ ಶ್ರೀ ಮರಗಮ್ಮದೇವಿ ದೇವಸ್ಥಾನಕ್ಕೆ ಆಕರ್ಷಕ ವಿದ್ಯುತ್ ದೀಪಾಲಂಕಾರ ಮಾಡಿ ಮುಂಭಾಗದಲ್ಲಿ ಭವ್ಯ ಶಾಮೀಯಾನ ನಿರ್ಮಿಸಿ ಬಾಳೆಗಿಡ, ತಳಿರು-ಹೂವಿನ ತೋರಣ ಕಟ್ಟಲಾಗಿತ್ತು.ದೇವಿಗೆ ಹೂವಿನದಂಡೆ, ಹಾರಗಳಿಂದ ವಿಶೇಷ ಅಲಂಕಾರ ಮಾಡಲಾಗಿತ್ತು.ಬೆಳಗ್ಗೆ ದೇವಿಗೆ ಅಭಿಷೇಕ, ಆರತಿ, ವಿಶೇಷ ಪೂಜೆ ನಡೆಯಿತು. ದೇವಿಯ ದರ್ಶನಕ್ಕೆ ಜಿಟಿ-ಜಿಟಿ ಮಳೆಯ ನಡುವೆಯೇ ಭಕ್ತರು ಬೆಳಗಿನ ಜಾವದಿಂದಲೇ ದೇವಸ್ಥಾನಕ್ಕೆ ತೆರಳುತ್ತಿದ್ದುದು ಕಂಡುಬಂತು. ದೇವಸ್ಥಾನಕ್ಕೆ ಬರುವ ಭಕ್ತರಲ್ಲಿ ಮಹಿಳೆಯರ ಸಂಖ್ಯೆಯೇ ಅಧಿಕವಾಗಿತ್ತು.ಇಬ್ರಾಹಿಂಪುರ ಹಾಗೂ ಸುತ್ತಮುತ್ತಲಿನ ವಿವಿಧ ಬಡಾವಣೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಆಗಮಿಸಿ ಸರತಿ ಸಾಲಿನಲ್ಲಿ ನಿಂತು ದೇವಿಗೆ ನೀರೆರೆದು ಹೂವು, ಕಾಯಿ, ನೈವೇದ್ಯ ಸಮರ್ಪಿಸಿ ಭಕ್ತಿಭಾವದಿಂದ ನಮಿಸಿದರು.ಮಧ್ಯಾಹ್ನ ಗ್ರಾಮದಲ್ಲಿ ಡೊಳ್ಳು ಹಾಗೂ ವಿವಿಧ ವಾದ್ಯಮೇಳಗಳೊಂದಿಗೆ ಮರಗಮ್ಮ ದೇವಿಯ ಪಲ್ಲಕ್ಕಿ ಉತ್ಸವ ವೈಭವದಿಂದ ನಡೆಯಿತು.ಪಲ್ಲಕ್ಕಿ ಉತ್ಸವದ ಬಳಿಕ ಸಂಜೆ ಮರಗಮ್ಮ ದೇವಿ ದೇವಸ್ಥಾನದ ಮುಂದೆ ಪ್ರತೀ ವರ್ಷದ…
ಆಮ್ ಆದ್ಮಿ ಪಕ್ಷದ ವಿಜಯಪುರ ಜಿಲ್ಲಾಧ್ಯಕ್ಷ ಭೋಗೇಶ್ ಸೋಲಾಪುರ್ ಆರೋಪ ವಿಜಯಪುರ: ಬಜೆಟ್ 2024 ” ಪ್ರಧಾನ ಮಂತ್ರಿ ಸರ್ಕಾರ ಬಚಾವೋ” ಬಜೆಟ್ ಎಂದು ಆಮ್ ಆದ್ಮಿ ಪಕ್ಷ ವಿಜಯಪುರ ಜಿಲ್ಲಾಧ್ಯಕ್ಷ ಭೋಗೇಶ್ ಸೋಲಾಪುರ್ ಆರೋಪ ಮಾಡಿದ್ದಾರೆ.ವಿಫಲವಾದ ಸರ್ಕಾರದ ವಿಫಲ ಹಣಕಾಸು ಸಚಿವರಿಂದ ಪ್ರಸ್ತುತಪಡಿಸಲಾದ ಶೂನ್ಯ ವಾರಂಟಿಯೊಂದಿಗೆ ಈ ಬಜೆಟ್ ಸಂಪೂರ್ಣ ವಿಫಲವಾಗಿದೆ. ನಿರುದ್ಯೋಗ, ಏರುತ್ತಿರುವ ಬೆಲೆಗಳು ಮತ್ತು ಹೆಚ್ಚುತ್ತಿರುವ ಹಣದುಬ್ಬರದಂತಹ ತುರ್ತು ಸಮಸ್ಯೆಗಳನ್ನು ನಿಭಾಯಿಸುವ ಬದಲು, ಬಿಜೆಪಿಯು ತನ್ನ ಸಮ್ಮಿಶ್ರ ಪಾಲುದಾರರಿಗೆ ಲಂಚ ನೀಡಲು ಈ ಬಜೆಟ್ ರೂಪಿಸಿದೆ. ಬಜೆಟ್ 2024 ಒಕ್ಕೂಟ ವ್ಯವಸ್ಥೆಯ ವಿರೋಧಿ, ಕರ್ನಾಟಕ ವಿರೋಧಿ ಬಜೆಟ್ ಆಗಿದೆ.ಬಿಜೆಪಿಯು ತನ್ನ ಸರ್ಕಾರವನ್ನು ಉಳಿಸಲು ಬಯಸುತ್ತಿದೆ ಮತ್ತು ಬಿಹಾರ ಮತ್ತು ಆಂಧ್ರಪ್ರದೇಶಕ್ಕೆ ಬಜೆಟ್ನ ದೊಡ್ಡ ಮೊತ್ತವನ್ನು ನೀಡುತ್ತಿದೆ ಎಂಬುದನ್ನು ನಾನು ಅರ್ಥಮಾಡಿಕೊಳ್ಳಬಲ್ಲೆ.ಆದರೆ ಕರ್ನಾಟಕದ ತಪ್ಪೇನು? ನಾವು ಅತಿ ಹೆಚ್ಚು ತೆರಿಗೆ ಕಟ್ಟುತ್ತೇವೆ. ನಾವು ಕೊಡುಗೆ ನೀಡುವುದರ ಬದಲಾಗಿ ನಾವು ಏನು ಪಡೆದುಕೊಂಡಿದ್ದೇವೆ?ಬಜೆಟ್ನಲ್ಲಿ ಕರ್ನಾಟಕದ ಬಗ್ಗೆ ಒಮ್ಮೆಯಾದರೂ ಪ್ರಸ್ತಾಪಿಸಲಾಗಿದೆಯೇ? ಬಿಜೆಪಿಯವರು…
