Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಕೆಯುಡಬ್ಲೂಜೆ ವಿಜಯಪುರ ಜಿಲ್ಲಾ ಘಟಕದ ವಾರ್ಷಿಕ ಪ್ರಶಸ್ತಿ ಪ್ರಕಟ ವಿಜಯಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ವತಿಯಿಂದ ನೀಡಲಾಗುವ ೨೦೨೪ನೇ ಸಾಲಿನ ಸಂಘದ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ.ಮಾಧ್ಯಮ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಸ್ಥಾನಿಕ ಸಂಪಾದಕರು, ಜಿಲ್ಲಾ, ತಾಲೂಕು ವರದಿಗಾರರು, ಕ್ಯಾಮೆರಾಮನ್ಗಳು ಹಾಗೂ ಪತ್ರಿಕಾ ವಿತರಕರು ಸೇರಿದಂತೆ ಒಟ್ಟು ೩೧ ಜನರಿಗೆ ವಾರ್ಷಿಕ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುವುದು.ಜು. ೨೮ರಂದು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ನಗರದ ಪೊಲೀಸ್ ಸಮುದಾಯ ಭವನದಲ್ಲಿ ನಡೆಯಲಿರುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಕೈಗಾರಿಕೆ ಮತ್ತು ಮೂಲಸೌಲಭ್ಯ ಸೌಕರ್ಯ ಸಚಿವ ಎಂ.ಬಿ. ಪಾಟೀಲ, ಸಕ್ಕರೆ ಮತ್ತು ಎಪಿಎಂಸಿ ಸಚಿವ ಶಿವಾನಂದ ಪಾಟೀಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್, ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ, ಸಂಸದ ರಮೇಶ ಜಿಗಜಿಣಗಿ ಹಾಗೂ ಜಿಲ್ಲೆಯ ಎಲ್ಲ ಶಾಸಕರು ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.ಪ್ರಶಸ್ತಿ ಪುರಸ್ಕೃತರ ಪಟ್ಟಿ…
ಕೆಯುಡಬ್ಲೂಜೆ ವಿಜಯಪುರ ಜಿಲ್ಲಾ ಘಟಕದ ವಾರ್ಷಿಕ ಪ್ರಶಸ್ತಿ ಪ್ರಕಟ ವಿಜಯಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ವತಿಯಿಂದ ನೀಡಲಾಗುವ ೨೦೨೪ನೇ ಸಾಲಿನ ಸಂಘದ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ.ಮಾಧ್ಯಮ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಸ್ಥಾನಿಕ ಸಂಪಾದಕರು, ಜಿಲ್ಲಾ, ತಾಲೂಕು ವರದಿಗಾರರು, ಕ್ಯಾಮೆರಾಮನ್ಗಳು ಹಾಗೂ ಪತ್ರಿಕಾ ವಿತರಕರು ಸೇರಿದಂತೆ ಒಟ್ಟು ೩೧ ಜನರಿಗೆ ವಾರ್ಷಿಕ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುವುದು.ಜು. ೨೮ರಂದು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ನಗರದ ಪೊಲೀಸ್ ಸಮುದಾಯ ಭವನದಲ್ಲಿ ನಡೆಯಲಿರುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಕೈಗಾರಿಕೆ ಮತ್ತು ಮೂಲಸೌಲಭ್ಯ ಸೌಕರ್ಯ ಸಚಿವ ಎಂ.ಬಿ. ಪಾಟೀಲ, ಸಕ್ಕರೆ ಮತ್ತು ಎಪಿಎಂಸಿ ಸಚಿವ ಶಿವಾನಂದ ಪಾಟೀಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್, ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ, ಸಂಸದ ರಮೇಶ ಜಿಗಜಿಣಗಿ ಹಾಗೂ ಜಿಲ್ಲೆಯ ಎಲ್ಲ ಶಾಸಕರು ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.ಪ್ರಶಸ್ತಿ ಪುರಸ್ಕೃತರ ಪಟ್ಟಿ…
ಬ್ರಹ್ಮದೇವನಮಡು: ಸಿಂದಗಿ ತಾಲೂಕಿನ ಹೊನ್ನಳ್ಳಿ – ಬ್ರಹ್ಮದೇವನಮಡು ನಡುವೆ ಬರುವ ಕಲ್ಶಾಣದೇಶ್ವರ ಕತೃ೯ ಗದ್ದುಗೆಯಲ್ಲಿ ಜು.೨೪ರಂದು ಲಿಂ.ಶ್ರೀ ವೀರಘಂಟಯ್ಶಾ ಕಲ್ಶಾಣದಯ್ಶಾ ಮಹಾಸ್ವಾಮಿಗಳ ೫ನೇ ಪುಣ್ಶಾರಾಧನೆ ಮಹೋತ್ಸವ ಆಚರಿಸಲಾಗುತ್ತಿದೆ.ಭಕ್ತರು ಹೆಚ್ಚಿನ ಸಂಖ್ಶೆಯಲ್ಲಿ ಪಾಲ್ಗೊಂಡು ಶ್ರೀಗಳ ದಶ೯ನ ಪಡೆಯಲು ಮಠದ ಪೀಠಾಧಿಪತಿ ವೆ.ಮೂತಿ೯ ಕಲ್ಶಾಣದಯ್ಶಾ ಗದ್ದುಗೆಮಠ ಸ್ವಾಮೀಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Udayarashmi kannada daily newspaper Udayarashmi kannada daily newspaper
ವಿಜಯಪುರ: ಜಿಲ್ಲಾ ತಳವಾರ ಸಮಾಜದ ಪ್ರತಿಭಾ ಪುರಸ್ಕಾರ ಸಮಿತಿ ಹಾಗೂ ಜ್ಞಾನಗಂಗಾ ವಿವಿಧೋದ್ದೇಶ ಸಹಕಾರಿ ವಿಜಯಪುರ ಇವರ ಸಹಯೋಗದಲ್ಲಿ ಜು.೨೭ರಂದು ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ೬ನೇ ವರ್ಷದ ಪ್ರತಿಭಾ ಪುರಸ್ಕಾರ ಹಾಗೂ ಸೇವಾ ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.ಅಂದು ಬೆಳಿಗ್ಗೆ ೧೦ ಗಂಟೆಗೆ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ ಉದ್ಘಾಟಿಸಲಿದಾರೆ. ಪ್ರತಿಭಾ ಪುರಸ್ಕಾರ ಸಮಿತಿ ಗೌರವ ಅಧ್ಯಕ್ಷರೂ ಆದ ಜ್ಞಾನಗಂಗಾ ವಿವಿಧೋದ್ಧೇಶ ಸಹಕಾರಿ ಸಂಘದ ಅಧ್ಯಕ್ಷ ಡಾ.ಅಶೋಕ ಸಾಸನೂರ ಅಧ್ಯಕ್ಷತೆ ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ವಿಜಯಪುರ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ವಿಧಾನ ಪರಿಷತ್ ಸದಸ್ಯರಾದ ತಿಪ್ಪಣ್ಣಪ್ಪ ಕಮಕನೂರ, ನಿವೃತ್ತ ಉಪನಿರ್ದೇಶಕ ಎಸ್.ವಾಯ್.ಹಳಿಂಗಳಿ, ವಾಣಿಜ್ಯ ತೆರಿಗೆ ಇಲಾಖೆ ಸಹಾಯಕ ಆಯುಕ್ತ ರಾಜಶೇಖರ ಕೊಲ್ಹಾರ, ನಿವೃತ್ತ ಪೊಲೀಸ್ ಉಪ ಅಧೀಕ್ಷಕ ಎಸ್.ಬಿ.ಕೋಲಕಾರ, ಜ್ಞಾನಗಂಗಾ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕ ಮಹಾದೇವಪ್ಪ ಲಗಮಣ್ಣಾ ಸೊನ್ನ, ನಿವೃತ್ತ ಕೃಷಿ ಅಧಿಕಾರಿ ರಾಮಚಂದ್ರ ಕಾಸಣ್ಣ ಅಂಬಿಗೇರ, ಬಳಗಾನೂರ ಕುವೆಂಪು ವಿದ್ಯಾವರ್ಧಕ ಸಂಘದ ಅಧ್ಯಕ್ಷ…
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ | ಸಿಎಂ ಸಿದ್ದರಾಮಯ್ಯ ಮತ್ತಿತರರ ಹೆಸರು ಹೇಳುವಂತೆ ಒತ್ತಡ | ಸಮಾಜ ಕಲ್ಯಾಣ ಇಲಾಖೆಯ ಎಡಿ ಕಲ್ಲೇಶ್ ದೂರು ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ 187 ಕೋಟಿ ರೂ. ಅವ್ಯವಹಾರ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹಣಕಾಸು ಇಲಾಖೆಯನ್ನು ಸಿಲುಕಿಸುವಂತೆ ರಾಜ್ಯ ಸರ್ಕಾರಿ ಅಧಿಕಾರಿಯೊಬ್ಬರಿಗೆ ಒತ್ತಡ ಹೇರಿದ ಆರೋಪದ ಮೇರೆಗೆ ಜಾರಿ ನಿರ್ದೇಶನಾಲಯದ ಇಬ್ಬರು ಅಧಿಕಾರಿಗಳ ವಿರುದ್ಧ ಸೋಮವಾರ ಪ್ರಕರಣ ದಾಖಲಾಗಿದೆ.ಸಮಾಜ ಕಲ್ಯಾಣ ಇಲಾಖೆಯ ಹೆಚ್ಚುವರಿ ನಿರ್ದೇಶಕ ಕಲ್ಲೇಶ್ ಬಿ ದೂರು ಆಧರಿಸಿ ಇಬ್ಬರು ಇಡಿ ಅಧಿಕಾರಿಗಳ ವಿರುದ್ಧ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದು ಕ್ರಿಮಿನಲ್ ಬೆದರಿಕೆ ಮತ್ತು ಶಾಂತಿಯನ್ನು ಹದಗೆಡಿಸುವ ಉದ್ದೇಶಕ್ಕೆ ಸಂಬಂಧಿಸಿದ್ದಾಗಿದೆ.ಮುರಳಿ ಕಣ್ಣನ್ ಎಂಬ ಇಡಿ ಅಧಿಕಾರಿ ಮತ್ತು ಮಿತ್ತಲ್ ಎಂಬ ಅಧಿಕಾರಿ ವಿರುದ್ಧ ಕಲ್ಲೇಶ್ ಆರೋಪ ಮಾಡಿದ್ದಾರೆ. ಹೈದರಾಬಾದ್ ಮೂಲದ ಕಂಪನಿಗಳಿಗೆ 88 ರೂಪಾಯಿ ಅಕ್ರಮ ವರ್ಗಾವಣೆ…
ಆಲಮಟ್ಟಿ: ಶಿಲೆಯಂತಿದ್ದ ವಿದ್ಯಾರ್ಥಿಗಳನ್ನು ಮೂರ್ತಿಯನ್ನಾಗಿ ಮಾಡಲು ನೀವು ಕಲಿತ ಶಾಲೆ ಹಾಗೂ ಗುರುಗಳು ಕಾರಣ, ಕಲಿತ ಶಾಲೆಯನ್ನು ಸದಾ ಸ್ಮರಿಸಿ ಎಂದು ನಿವೃತ್ತ ಮುಖ್ಯ ಶಿಕ್ಷಕ ಎಂ.ವಿ. ಪಾಟೀಲ ಹೇಳಿದರು.ಸಮೀಪದ ವಂದಾಲ ಗ್ರಾಮದ ಶ್ರೀ ಶಾಕಂಬರಿ ಪ್ರೌಢಶಾಲೆಯಲ್ಲಿ ಗುರುಪೂರ್ಣಿಮೆ ನಿಮಿತ್ತ ಭಾನುವಾರ ಆ ಶಾಲೆಯ ೨೦೦೦ ನೇ ವರ್ಷ ಎಸ್ ಎಸ್ ಎಲ್ ಸಿ ಪಾಸಾದ ವಿದ್ಯಾರ್ಥಿಗಳು ಏರ್ಪಡಿಸಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.ಸಾಹಿತಿ, ಶಿಕ್ಷಕ ಅಶೋಕ ಹಂಚಲಿ ಮಾತನಾಡಿ, ೨೫ ವರ್ಷಗಳ ನಂತರೂ ಎಲ್ಲ ಶಿಷ್ಯ ಬಳಗದ ಹೆಸರು ಅವರ ವಿಶೇಷತೆಗಳನ್ನು ಹೇಳಿ ಬೆರಗುಗೊಳಿಸಿದ ಸಾಹಿತಿ ಶಿಕ್ಷಕ ಅಶೋಕ ಹಂಚಲಿ, ಆಧುನಿಕ ಕಾಲದಲ್ಲಿಯೂ ಗುರು- ಶಿಷ್ಯರ ಸಂಬಂಧಗಳನ್ನು ವಿವಿಧ ಉದಾಹರಣೆಗಳ ಮೂಲಕ, ಹರಿಶ್ಚಂದ್ರ ಕಾವ್ಯದ ಚಂದ್ರಮತಿಯ ಪ್ರಲಾಪದ ಭಾಗವನ್ನು ಹಳಗನ್ನಡದ ಕಾವ್ಯ ಭಾಗದಂತೆಯೇ ಹೇಳಿ ಕೇಳುಗರನ್ನು ರೋಮಾಂಚನಗೊಳ್ಳುವಂತೆ ಮಾಡಿದರು.ನಿವೃತ್ತ ಶಿಕ್ಷಕ ಎಂ.ಬಿ.ಗುಡದಿನ್ನಿ, ಎಸ್. ಎಸ್ ಭಾವಿಕಟ್ಟಿ, ಸಿ.ವಿ. ಖೇಡದ, ಬಿ.ಎನ್. ವಂದಾಲ, ಡಿ.ಜಿ. ಪಿಂಜಾರ, ಜಿ.ಎಸ್. ಪತ್ತಾರ, ಎಚ್.ಸಿ.ಭಜಂತ್ರಿ,…
ವಿಜಯಪುರ: ವಿದ್ಯಾರ್ಥಿನಿಯರು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಭಾಗವಹಿಸುವ ಮೂಲಕ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿ, ಸಾಧನೆಗೈದು ಕಾಲೇಜು ಮತ್ತು ಜಿಲ್ಲೆಗೆ ಕೀರ್ತಿ ತರುವಂತೆ ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಉಪನಿರ್ದೇಶಕ ಡಾ.ಸಿ.ಕೆ.ಹೊಸಮನಿ ಕರೆ ನೀಡಿದರು.ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜ್ನಲ್ಲಿ ಸೋಮವಾರ ಜರುಗಿದ ೨೦೨೪-೨೫ನೇ ಸಾಲಿನ ಕಾಲೇಜ್ ಸಂಸತ್ತು, ಕ್ರೀಡೆ, ಎನ್.ಎಸ್.ಎಸ್., ಭಾರತೀಯ ಸೇವಾ ದಳ, ರೋರ್ಸ್ ಮತ್ತು ರೇಂರ್ಸ್, ಪ್ರಥಮ ಪಿಯುಸಿ ವಿದ್ಯಾರ್ಥಿನಿಯರಿಗೆ ಸ್ವಾಗತ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, ವಿದ್ಯಾರ್ಥಿನಿಯರು ಶ್ರದ್ಧೆ ಹಾಗೂ ಪ್ರಾಮಾಣಿಕತೆಯಿಂದ ವಿಧ್ಯಾಬ್ಯಾಸದೊಂದಿಗೆ ವಿವಿಧ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ ಸಾಧನೆ ಮಾಡಬೇಕು ಎಂದು ಅವರು ಸಲಹೆ ನೀಡಿದರು.ಕಾರ್ಯಕ್ರಮದಲ್ಲಿ ವಿಶ್ರಾಂತ ಸಹ ಶಿಕ್ಷಕರಾದ ತೋಟಯ್ಯ ಶಿರೋಳಮಠ ಹಾಗೂ ರಾಷ್ಟ್ರ ಮಟ್ಟದ ವಿವಿಧ ಪ್ರಶಸ್ತಿಗಳಿಗೆ ಭಾಜನರಾದ ಸಂಗೀತ ಶಿಕ್ಷಕ ಹಿರಿಯ ಕನ್ನಡಭಾಷಾ ಉಪನ್ಯಾಸಕ ಸಿದ್ದು ಸಾವಳಸಂಗ ಅವರಿಗೆ ಸನ್ಮಾನಿಸಲಾಯಿತು. ೨೦೨೩-೨೪ನೇ ಸಾಲಿನಲ್ಲಿ ದ್ವೀತಿಯ ಪಿಯುಸ ವಾರ್ಷಿಕ ಪರೀಕ್ಷೆಯ ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗಗಳಲ್ಲಿ ಕಾಲೇಜಿಗೆ ಪ್ರಥಮ…
ವಿಜಯಪುರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ಪಿಯುಸಿ ಮತ್ತು ಪಿಯು ಸಮಾನಾಂತರ ಕೋರ್ಸ್ಗಳ ಹೊಸದಾಗಿ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ದಿನಾಂಕ : ೨೩-೦೭-೨೦೨೪ರವರೆಗೆ ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ಅಂತರ್ರಾಷ್ಟ್ರೀಯ ವಲಸೆ ಕೇಂದ್ರ-ಕರ್ನಾಟಕ ವತಿಯಿಂದ ಜರ್ಮನಿ ಸರ್ಕಾರದಿಂದ ಮಾನ್ಯತೆ ಪಡೆದಿರುವ ಮೆ:ಟ್ಯಾಲೆಂಟ್ ಆರೇಂಜ್ ಸಂಸ್ಥೆಯು ಭಾರತ ದೇಶದಿಂದ ನರ್ಸ್ ಆಗಿ ಕೆಲಸ ನಿರ್ವಹಿಸಲು ಬಿಎಸ್ಸಿ/ಜಿಎನ್ಎಂ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಜರ್ಮನಿಯಲ್ಲಿ ಉದ್ಯೋಗ ಕಲ್ಪಿಸಲು ಮುಂದಾಗಿದ್ದು, ಜರ್ಮನಿಯಲ್ಲಿ ಕೆಲಸ ನಿರ್ವಹಿಸಲು ಆಸಕ್ತ ಇರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಜರ್ಮನಿಯಲ್ಲಿ ಕೆಲಸ ನಿರ್ವಹಿಸಲು ಉತ್ಸುಕರಾದ ಅಭ್ಯರ್ಥಿಗಳನ್ನು ಸಂಸ್ಥೆ ವತಿಯಿಂದ ಆಯ್ಕೆ ಮಾಡಿ ಅವರಿಗೆ ಕೇರಳ ರಾಜ್ಯದ ತಿರುವನಂತಪುರದ ತರಬೇತಿ ಕೇಂದ್ರದಲ್ಲಿ ೮ ತಿಂಗಳ ಕಾಲ ಜರ್ಮನ್ ಭಾಷೆ ಬಗ್ಗೆ ತರಬೇತಿ ನೀಡುತ್ತಿದ್ದು, ತರಬೇತಿಯೊಂದಿಗೆ ಊಟ ಮತ್ತು ಉಚಿತ ವಸತಿ ಸೌಲಭ್ಯ ಕಲ್ಪಿಸಲಾಗುತ್ತದೆ.ನರ್ಸಿಂಗ್ ಪೂರ್ಣಗೊಳಿಸಿದ ಉದ್ಯೋಗಾಕಾಂಕ್ಷಿಗಳು ಕಾರ್ಮಿಕ ಅಧಿಕಾರಿಗಳ ಕಚೇರಿ, ಅಲ್ಲಾಪುರ ಓಣಿ, ಸಿಂದಗಿ ನಾಕಾ ಕಾರ್ಮಿಕ ಭವನ ವಿಜಯಪುರ ಕಚೇರಿಯಲ್ಲಿ ನೊಂದಾಯಿಸಿಕೊಳ್ಳಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಮೊ: ೯೧೬೪೨೬೫೫೪೨ ಸಂಖ್ಯೆಗೆ ಸಂಪರ್ಕಿಸುವಂತೆ ಕಾರ್ಮಿಕ ಅಧಿಕಾರಿ ಉಮಾಶ್ರೀ ಕೋಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
