Author: editor.udayarashmi@gmail.com

ಬಸವನಬಾಗೇವಾಡಿ: ಹಡಪದ ಅಪ್ಪಣ್ಣ ಒಂದೇ ಸಮುದಾಯಕ್ಕೆ ಸೀಮಿತವಲ್ಲ. ಮಾನವ ಜನಾಂಗಕ್ಕೆ ಸಂದೇಶ ನೀಡಿದ್ದಾರೆ. ಶಿವಶರಣ ಹಡಪದ ಅಪ್ಪಣ್ಣನವರ ಆದರ್ಶವನ್ನು ನಮ್ಮ ಯುವಕರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾಗಿದೆ ಎಂದು ರಾಷ್ಟ್ರೀಯ ಬಸವ ಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಹೇಳಿದರುಪಟ್ಟಣದ ವೀರರಾಣಿ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ರಾಷ್ಟ್ರೀಯ ಬಸವ ಸೈನ್ಯದಿಂದ ಭಾನುವಾರ ಹಮ್ಮಿಕೊಂಡಿದ್ದ ಶಿವಶರಣ ಹಡಪದ ಅಪ್ಪಣ್ಣನವರ 890ನೇ ಜಯಂತೋತ್ಸವದಲ್ಲಿ ಹಡಪದ ಅಪ್ಪಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಶರಣ ಹಡಪದ ಅಪ್ಪಣ್ಣನವರು ಜಾತಿ, ಧರ್ಮ, ವರ್ಣರಹಿತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದಾರೆ.ಶರಣರ ಕಾಯಕ, ಬದುಕು ಯುವ ಪೀಳಿಗೆಗೆ ದಾರಿ ದೀಪವಾಗಬೇಕು. ಶರಣರು ಮಾಡಿದ ಹೋರಾಟದ ಉದ್ದೇಶದ ಬಗ್ಗೆ ತಿಳಿದುಕೊಳ್ಳಬೇಕಿದೆ.ಅದರ ಬಗ್ಗೆ ಹೆಚ್ಚು ಬೆಳಕು ಚೆಲ್ಲುವ ಪ್ರಯತ್ನಗಳು ನಿರಂತರವಾಗಿ ನಡೆಯಬೇಕು. ಅವರ ವಚನವನ್ನು ಆಳವಾಗಿ ಅಧ್ಯಯನ ಮಾಡಿದಾಗ ಮಾತ್ರ ಇವೆಲ್ಲವೂ ಸಾಧ್ಯ ಎಂದರು.ಇಂದಿನ ದಿನಗಳಲ್ಲಿ ಹೆಜ್ಜೆ ಹೆಜ್ಜೆಗೂ ಮೋಸ ವಂಚನೆ ನಡೆಯುತ್ತಿವೆ. 12ನೇ ಶತಮಾನದಲ್ಲಿ ಶರಣರಿಗೂ ಕೂಡಾ ಮೋಸವಾಗಿತ್ತು. ಈಗಲೂ ಸಮಾಜದಲ್ಲಿ ಅನ್ಯಾಯಗಳು…

Read More

ಬಸವನಬಾಗೇವಾಡಿ: ಪಟ್ಟಣದ ಹಿರೇಮಠದಲ್ಲಿ ಭಾನುವಾರ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಚಂದ್ರಶೇಖರ ಪಾಟೀಲ, ನೂತನ ನಿರ್ದೇಶಕರಾಗಿ ಆಯ್ಕೆಯಾದ ರವಿ ರಾಠೋಡ, ಬಸವೇಶ್ವರ ಜಾತ್ರಾಮಹೋತ್ಸವದ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಗುರಲಿಂಗಪ್ಪ(ಮುದುಕು) ಬಸರಕೋಡ, ಉಪಾಧ್ಯಕ್ಷರಾಗಿ ಆಯ್ಕೆಯಾದ ಬಸವರಾಜ ಅಳ್ಳಗಿ ಅವರನ್ನು ಶ್ರೀಮಠದಿಂದ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ ಭಾನುವಾರ ಸನ್ಮಾನಿಸಿದರು.ಈ ಸಂದರ್ಭದಲ್ಲಿ ಬಸವರಾಜ ಶೆಂಡೆ, ಸಂಕನಗೌಡ ಪಾಟೀಲ, ವಿಶ್ವ ಹಿಂದು ಪರಿಷತ್ತಿನ ಕಾರ್ಯಕರ್ತರು ಇತರರು ಇದ್ದರು.

Read More

ಬಸವನಬಾಗೇವಾಡಿ: ಪಟ್ಟಣದ ತಹಸೀಲ್ದಾರ ಕಚೇರಿಯ ಸಭಾಂಗಣದಲ್ಲಿ ಭಾನುವಾರ ತಾಲೂಕಾಡಳಿತದಿಂದ ಶರಣ ಹಡಪದ ಅಪ್ಪಣ್ಣ ಜಯಂತಿಯಂಗವಾಗಿ ಶರಣ ಹಡಪದ ಅಪ್ಪಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಹಡಪದ ಅಪ್ಪಣ್ಣ ಜಯಂತಿ ಆಚರಿಸಲಾಯಿತು.ಗ್ರೇಡ್-೨ ತಹಸೀಲ್ದಾರ ಜೆ.ಎಸ್.ನಾಯಕ ಅವರು ಹಡಪದ ಅಪ್ಪಣ್ಣ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಿವಾನಂದ ಮಂಗಾನವರ ಮಾತನಾಡಿ, ೧೨ ನೇ ಶತಮಾನದ ಬಸವಾದಿ ಶರಣರಲ್ಲಿ ಹಡಪದ ಅಪ್ಪಣ್ಣನವರು ಒಬ್ಬರಾಗಿದ್ದಾರೆ. ಇವರು ಬಸವನಾಡಿನ ಮಸಬಿನಾಳ ಗ್ರಾಮದಲ್ಲಿ ಜನಿಸಿರುವದು ನಮ್ಮಗೆಲ್ಲರಿಗೂ ಹೆಮ್ಮೆಯ ಸಂಗತಿ. ಹಡಪದ ಅಪ್ಪಣ್ಣನವರು ಬಸವೇಶ್ವರರ ಆಪ್ತಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದು ಇತಿಹಾಸದಿಂದ ತಿಳಿದುಬರುತ್ತದೆ. ನಾವೆಲ್ಲರೂ ಬಸವಾದಿ ಶರಣರ ಸಂದೇಶಗಳನ್ನು ಅರಿತುಕೊಂಡು ಅದರಂತೆ ನಡೆಯುವಂತಾಗಬೇಕೆಂದರು.ಜಯಂತಿ ಕಾರ್ಯಕ್ರಮದಲ್ಲಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಎಸ್.ಎಸ್.ಅವಟಿ, ತಹಸೀಲ್ದಾರ ಕಚೇರಿಯ ಸಿಬ್ಬಂದಿಗಳಾದ ಮಂಜು ಹಳ್ಳೂರ, ರಾಮಚಂದ್ರ ಘಾಟಗೆ, ಹಡಪದ ಸಮಾಜ ಬಾಂಧವರಾದ ಗುರುಲಿಂಗಪ್ಪ ಹಡಪದ,ಅಶೋಕ ಬಾಗೇವಾಡಿ, ಸುಭಾಸ ಹಡಪದ, ಮುತ್ತಪ್ಪ ಇವಣಗಿ, ಮಲ್ಲು ಇವಣಗಿ, ಪ್ರಲ್ಹಾದ ಹಡಪದ, ಶಿವಾನಂದ ಹಡಪದ, ಚನ್ನು ಹಡಪದ,…

Read More

ಬಸವನಬಾಗೇವಾಡಿ: ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಕಡ್ಲಿಗಾರ ಹುಣ್ಣಿಮೆಯಂಗವಾಗಿ ಭಾನುವಾರ ಮಹಿಳೆಯರು ತಮ್ಮ ಹತ್ತಿರವಿರುವ ಭಾವಿ, ಬೋರವೆಲ್ಗಳಿಗೆ ಪೂಜೆ ಸಲ್ಲಿಸುವ ಮೂಲಕ ಗಂಗಾಮಾತೆಗೆ ನಮನ ಸಲ್ಲಿಸಿದರು. ಪಟ್ಟಣದ ಐತಿಹಾಸಿಕ ಬಸವೇಶ್ವರ ದೇವಸ್ಥಾನದ ಬಸವತೀರ್ಥ ಬಾವಿಗೆ ಆಗಾಗ್ಗೆ ಬರುತ್ತಿದ್ದ ಜಿಟಿ ಜಿಟಿ ಮಳೆಯಲ್ಲಿಯೇ ಮಹಿಳೆಯರು ತಮ್ಮ ಕುಟುಂಬ ಸದಸ್ಯರೊಂದಿಗೆ ತೆರಳಿ ಬಾವಿಗೆ ಪೂಜೆ ಸಲ್ಲಿಸಿ ಮುತ್ತೈದೆಯರಿಗೆ ಉಡಿ ತುಂಬಿದರು. ಕೆಲವರು ಬೋರವೆಲ್ಗಳಿಗೆ ಪೂಜೆ ಸಲ್ಲಿಸುವ ಮೂಲಕ ಕಡ್ಲಿಗಾರ ಹುಣ್ಣಿಮೆ ಆಚರಿಸಿದರು.ಮಣ್ಣೆತ್ತಿನ ಅಮವಾಸ್ಯೆಯ ನಂತರ ಬರುವ ಕಡ್ಲಿಗಾರ ಹುಣ್ಣಿಮೆಯಂದು ಉತ್ತರ ಕರ್ನಾಟಕದ ಜನರು ಗಂಗಾಮಾತೆ ಪೂಜೆ ಸಲ್ಲಿಸುವುದು ಸಂಪ್ರದಾಯ. ಈ ವರ್ಷ ಮುಂಗಾರು ಆರಂಭದಲ್ಲಿ ಉತ್ತಮ ಮಳೆಯಾಗಿದ್ದರಿಂದ ರೈತ ಬಾಂಧವರು ಈಗಾಗಲೇ ಬಿತ್ತನೆ ಮಾಡಿದ್ದಾರೆ. ನಿನ್ನೆಯಿಂದ ಆಗಾಗ್ಗೆ ಜಿಟಿ ಜಿಟಿ ಮಳೆ ಬರುವ ಮೂಲಕ ಮೋಡ ಕವಿದ ವಾತಾವರಣ ಕಂಡುಬರುತ್ತಿದೆ. ಬಿತ್ತನೆ ಮಾಡಿದ ಬೆಳೆಗೆ ಉತ್ತಮ ಮಳೆಯಾಗಬೇಕಿದೆ. ಮಹಿಳೆಯರು ಉತ್ತಮ ಮಳೆ-ಬೆಳೆ ಬರಲಿ, ಎಲ್ಲರೂ ಸುಖ-ಶಾಂತಿಯಿಂದ ಇರಲೆಂದು ಗಂಗಾಮಾತೆಗೆ ಪೂಜೆ ಸಲ್ಲಿಸಿದರು. ಇಂದು ಗುರುಪೂರ್ಣಿಮೆಯೆಂದು ಆಚರಣೆ…

Read More

ವಿಜಯಪುರ: ಗುಮ್ಮಟ ನಗರಿ ವಿಜಯಪುರದ ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ ಉಪ ಸಂಪಾದಕ ಚಲನಚಿತ್ರ ನಟ ವಿಶ್ವಪ್ರಕಾಶ ಟಿ ಮಲಗೊಂಡ ಅವರಿಗೆ ಕರುನಾಡು ಕಿರುಚಿತ್ರೋತ್ಸವದಲ್ಲಿ “ಬೆಸ್ಟ್ ಆಕ್ಟರ್” ಅವಾರ್ಡ್ ದೊರೆತಿದೆ.ಜು.21ರಂದು ಕೊಪ್ಪಳದ ಜೆ.ಕೆ.ಎಸ್ ಹೊಟೇಲ್ ನಲ್ಲಿ ಕವಿತಾ ಮೀಡಿಯಾ ಸೋರ್ಸ ಪ್ರೈ.ಲಿ ಹೈಬ್ರೀಡ್ ನ್ಯೂಸ್ ಕನ್ನಡ ಸುದ್ದಿ ವಾಹಿನಿ ಆಯೋಜಿಸಿದ “ಕರುನಾಡ ಕಿರುಚಿತ್ರೋತ್ಸವ” ದಲ್ಲಿ ವಿಶ್ವಪ್ರಕಾಶ ಟಿ ಮಲಗೊಂಡ ಅವರ ಸಿನಿಮಾ ಕ್ಷೇತ್ರದಲ್ಲಿನ ಸೇವೆಯನ್ನು ಗುರುತಿಸಿ ಕರುನಾಡ ಕಿರುಚಿತ್ರೋತ್ಸವದಲ್ಲಿ “ಸಿನಿ ಸಿರಿ” ಅವಾರ್ಡ್ ಪ್ರಶಸ್ತಿ ನೀಡಿ ಗೌರವಿಸಿದೆ.ಕರುನಾಡ ಕಿರುಚಿತ್ರೋತ್ಸವ (Short Film Festival) ಸ್ಪರ್ಧೆಯಲ್ಲಿ “ತುಷಾರ್” ಚಿತ್ರವೂ ಸಹ ಭಾಗವಹಿಸಿತ್ತು. ಚಿತ್ರದಲ್ಲಿನ ನಾಯಕನ ಅಭಿನಯಕ್ಕೆ “ಬೆಸ್ಟ್ ಆಕ್ಟರ್ ಅವಾರ್ಡ್” ನೀಡಿ ಗೌರವಿಸಿದೆ.ಕಿರುಚಿತ್ರೋತ್ಸವದಲ್ಲಿ ರಾಜ್ಯದ ಹಲವು ಕಿರುಚಿತ್ರಗಳು ಭಾಗವಹಿಸಿದ್ದವು. ಬೆಸ್ಟ್ ಶಾರ್ಟ ಫಿಲಂ, ಬೆಸ್ಟ್ ಸ್ಟೋರಿ, ಹೀಗೆ ಒಟ್ಟು ಹತ್ತು ವಿಭಾಗಗಳಲ್ಲಿ ಪ್ರಶಸ್ತಿ ನೀಡಲಾಗಿದೆ.ಅದರಲ್ಲಿ “2024 ಅತ್ಯುತ್ತಮ ನಟ ಬೆಸ್ಟ್ ಆಕ್ಟರ್” ಎಂದು ವಿಶ್ವಪ್ರಕಾಶ ಟಿ ಮಲಗೊಂಡ ಅವರಿಗೆ ಅವಾರ್ಡ್ ನೀಡಲಾಗಿದೆ.ಕಿರುಚಿತ್ರೋತ್ಸವದಲ್ಲಿ ಹಿರಿಯ…

Read More

ಯಾದಗಿರಿ: ಯಾದಗಿರಿ ತಾಲೂಕಿನ ಮುದ್ನಾಳ್ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಸಣ್ಣ ತಾಂಡಾದ ರೈತ ರಾಮು ರಾಥೋಡ್ ಜಮೀನಿನಲ್ಲಿ ಕಟ್ಟಿಕೊಂಡಿರುವ ಮನೆಯನ್ನ ಅಧಿಕಾರಿಗಳು ಒತ್ತುವರಿ ಆರೋಪದ ಮೇಲೆ ದ್ವಂಸ ಮಾಡಿದ್ದಾರೆ.ಸುರಿಯುತ್ತಿರುವ ಮಳೆಯಲ್ಲಿ ರೈತನಿಗೆ ಸಮಯಾವಕಾಶ ನೀಡದೇ ಅಧಿಕಾರಿಗಳು ಮನೆ ದ್ವಂಸ ಮಾಡಿದ್ದು ಖಂಡನೀಯ ಎಂದು ಸಾರ್ವಜನಿಕರು ಕಿಡಿ ಕಾರಿದ್ದಾರೆ.ಇದೇ ಮುದ್ನಾಳ ಗ್ರಾಮದ ಗ್ರಾಮ ಪಂಚಾಯತ್ ಉಪಾಧ್ಯಕ್ಷನೊಬ್ಬ ಸರ್ಕಾರಿ ಜಾಗೆಯಲ್ಲಿ ಬೃಹತ್ ಮನೆ ನಿರ್ಮಿಸಿಕೊಂಡಿದ್ದಾರೆ. ಮನೆ ನಿರ್ಮಾಣ ಹಂತದಲ್ಲಿರುವಾಗಲೇ ಸಾಮಾಜಿಕ ಹೋರಾಟಗಾರ ದೂರು ನೀಡಿದ್ರು ಸಹ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೇ ಗ್ರಾಮ ಪಂಚಾಯತ್ ಉಪಾಧ್ಯಕ್ಷನಿಗೆ ಶಾಮೀಲು ಆಗಿ ಉಪಾಧ್ಯಕ್ಷ ಯಾವುದೇ ನೋಟಿಸ್ ನೀಡದೇ ಗ್ರಾಮ ಪಂಚಾಯತ್ ಪಿಡಿಓ, ತಾಲೂಕು ಪಂಚಾಯತ್ ಇಒ ಬಸವರಾಜ ಶೆರಬೈ ಮನೆ ಕಟ್ಟಡ ಮುಗಿಯುವರೆಗೂ ಬೆಂಗಾವಲಾಗಿ ನಿಂತಿದ್ರು. ಆದರೇ ಸುಮಾರು ಹತ್ತು ವರ್ಷಗಳ ಹಿಂದೆ ಬಡ ರೈತ ನಿರ್ಮಿಸಿಕೊಂಡಿರುವ ಮನೆ ದ್ವಂಸ ಮಾಡಿರೋದು ಎಷ್ಟು ಸರಿ ಅಂತ ಪ್ರಶ್ನಿಸಿದ್ದಾರೆ.ಈ ಸಂದರ್ಭದಲ್ಲಿ ಚಂದ್ರು, ರಾಮು, ರಾಜು, ಶಂಕರ, ಜಯರಾಮ್,…

Read More

ವಿಜಯಪುರ: ಕನ್ನಡರಿಗೆ ಉದ್ಯೋಗ ಮೀಸಲಾತಿ ಕಲ್ಪಿಸುವಂತೆ ಆಗ್ರಹಿಸಿ ಜಯ ಕರ್ನಾಟಕ ಸಂಘಟನೆಯ ವತಿಯಿಂದ ವಿಜಯಪುರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಜಿಲ್ಲಾದ್ಯಕ್ಷ ಸಂಗಮೇಶ ದಾಶ್ಯಾಳ ಮಾತನಾಡಿ, ಕರ್ನಾಟಕ ಕನ್ನಡಿಗರು ಸಾರ್ವಬೌಮ ಹೌದೂ ಅಲ್ಲಾ? ಎಂಬುವ ವಿಷಯ ಕನ್ನಡಿಗರಿಗೆ ತಿಳಿಯದಂತಾಗಿದೆ, ಹೊರ ರಾಜ್ಯದಿಂದ ಬಂದು ಕನ್ನಡದ ನೆಲ,ಜಲ, ಮೂಲಭೂತ ಸೌಕಯ್ಯಗಳನ್ನು ಪಡೆದುಕೊಂಡು ಆದರೆ ಕನ್ನಡಿಗನಿಗೆ ಉದ್ಯೋಗ ಕೊಡುವದಿಲ್ಲ.ನ್ಯಾಯ ಒದಗಿಸುವ ನಿಟ್ಟಿನಲ್ಲಿ ಅದಿವೇಶನದಲ್ಲಿ ಚರ್ಚೆಗೆ ತೆಗೆದುಕೊಂಡು ಮೀಸಲಾತಿಯ ವಿದೇಯಕ ಜಾರಿಗೊಳಿಸಿ ನಂತರ ಈ ಆದೇಶವನ್ನು ತಡೆಹಿಡಿಯಲಾಯಿತು. ಹೀಗಾದರೆ ಕನ್ನಡಿಗ ಹೇಗೆ ಸಾರ್ವಭೌಮನಾಗುತ್ತಾನೆ? ಪ್ರತಿಯೊಂದು ಖಾಸಗಿ ಕಾರ್ಖಾನೆ ಹಾಗೂ ದೊಡ್ಡ ದೊಡ್ಡ ಅಂಗಡಿ ಮುಗ್ಗಟಗಳನ್ನು ಹೊರ ರಾಜ್ಯದಿಂದ ಬಂದು ನೆಲೆ ಊರಿ ನಮ್ಮ ಕನ್ನಡಿಗರಿಗೆ ಕೆಲಸಗಳನ್ನು ಕೊಡದೇ ತಮ್ಮ ರಾಜ್ಯದವರನ್ನು ತೆಗೆದುಕೊಂಡು ಬಂದು ಕನ್ನಡಿಗರಿಗೆ ಕೆಲಸ ಇಲ್ಲದಂತೆ ಮಾಡಿದ್ದಾರೆ. ಆದರಿಂದ ಕನ್ನಡರಿಗೆ ಪ್ರತಿ ಶತ ೭೦ % ಭಾಗ ಉದ್ಯೋಗ ಮೀಸಲಾತಿಯನ್ನು ಸರ್ಕಾರದ ನೀತಿ ನಿಯಮದ ಅಡಿಯಲ್ಲಿ ಉದ್ಯೋಗ ಭದ್ರತೆಯನ್ನು ಒದಗಿಸಿಕೊಡಬೇಕು‌. ಒಂದು ವೇಳೆ ಮೀಸಲಾತಿಯ…

Read More

ದೇವರಹಿಪ್ಪರಗಿ: ಹಡಪದ ಅಪ್ಪಣ್ಣ ನವರು ೧೨ ನೇ ಶತಮಾನದಲ್ಲಿ ಸಾಮಾಜಿಕ ಸಮಾನತೆ ಸಾರಿದ ಬಸವಾದಿ ಶರಣರಲ್ಲಿ ಪ್ರಮುಖರಾಗಿದ್ದಾರೆ ಎಂದು ಬಸವ ಶರಣ ಸಂಗಮ ಸೇವಾ ಸಮಿತಿ ಅಧ್ಯಕ್ಷ ಸಂಗಪ್ಪ ತಡವಲ್ ಹೇಳಿದರು.ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ಭಾನುವಾರ ಜರುಗಿದ ಹಡಪದ ಅಪ್ಪಣ್ಣ ಜಯಂತಿ ಅಂಗವಾಗಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.ಬಸವಣ್ಣನ ಬಾಲ್ಯದ ಒಡನಾಡಿಗಳಾಗಿ, ಕಲ್ಯಾಣದ ಅನುಭವ ಮಂಟಪದಲ್ಲಿ ಆರಂಭದಲ್ಲಿ ಸಭಿಕರಾಗಿ ನಂತರ ತಾಂಬೂಲ ಸೇವೆಯನ್ನು ಒದಗಿಸುವ ಸೇವೆ ಮಾಡಿ, ತದನಂತರ ಬಸವಣ್ಣನಿಗೆ ಪ್ರಧಾನಕಾರ್ಯದರ್ಶಿಗಳಾಗಿ ಕಾರ್ಯ ನಿರ್ವಹಿಸಿದ ಹೆಗ್ಗಳಿಕೆ ಅಪ್ಪಣ್ಣನವರದಾಗಿದೆ. ಅಂತೆಯೇ ಬಸವಣ್ಣನವರು ಸಹ ಇವರ ಕಾರ್ಯಕ್ಷಮತೆಯನ್ನು ಮೆಚ್ಚಿ ಯಾರೇ ಬಂದರು ಮೊದಲು ಅಪ್ಪಣ್ಣನವರನ್ನು ನೋಡಿಕೊಂಡು ಬನ್ನಿ ಎಂದು ಕಳಿಸುತ್ತಿದ್ದರಂತೆ, ಇಂತಹ ಮಹಾನ್ ಶರಣ ಅಪ್ಪಣ್ಣ ೨೫೦ ಕ್ಕಿಂತಲೂ ಹೆಚ್ಚು ವಚನಗಳನ್ನು ಬಸವಪ್ರೀಯ ಕೂಡಲ ಚೆನ್ನಬಸವಣ್ಣ ಎಂಬ ಅಂಕಿತನಾಮದಿಂದ ರಚಿಸಿ ವಚನಸಾರದ ಭಾಗವಾಗಿದ್ದಾರೆ ಎಂದರು.ಅಧ್ಯಕ್ಷತೆ ವಹಿಸಿದ ತಹಶೀಲ್ದಾರ ಪ್ರಕಾಶ ಸಿಂದಗಿ ಹಾಗೂ ಕಸಾಪ ತಾಲ್ಲೂಕು ಅಧ್ಯಕ್ಷ ಜಿ.ಪಿ.ಬಿರಾದಾರ ಮಾತನಾಡಿದರು.ಶಿರಸ್ತೇದಾರ ಸುರೇಶ ಮ್ಯಾಗೇರಿ, ಕಂದಾಯ ನಿರೀಕ್ಷಕ…

Read More

ದೇವರಹಿಪ್ಪರಗಿ: ಸರಕಾರಿ ಶಾಲೆಗಳ ಅಭಿವೃದ್ದಿಯಲ್ಲಿ ಸಮುದಾಯದ ಪಾತ್ರ ಮತ್ತು ಸಹಕಾರ ತುಂಬಾ ಮಹತ್ವದ್ದಾಗಿದೆ. ಸಹಯೋಗ ಹಾಗೂ ಪ್ರೋತ್ಸಾಹದ ಮೂಲಕ ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸೋಣ ಎಂದು ಹಿರಿಯ ಶಿಕ್ಷಣ ಪ್ರೇಮಿ ಮಲ್ಲಪ್ಪ ದುದ್ದಗಿ ಹೇಳಿದರು.ತಾಲ್ಲೂಕಿನ ಗಂಗನಳ್ಳಿ ಗ್ರಾಮದ ಸರ್ಕಾರಿ ಕಿರಿಯ, ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಗಳ ಮಕ್ಕಳಿಗೆ ಸದಾಶಿವ ದುದ್ದಗಿ ಇವರು ಕೊಡುಗೆಯಾಗಿ ನೀಡಿದ ಗುಣಮಟ್ಟದ ೪೦೦ ಶಾಲಾ ಬ್ಯಾಗುಗಳನ್ನು ಮಕ್ಕಳಿಗೆ ವಿತರಿಸಿ ಮಾತನಾಡಿದರು.ಖಾಸಗಿ ಶಾಲೆಗಳ ಪೈಪೋಟಿಯಲ್ಲಿ ಸರಕಾರಿ ಶಾಲೆಗಳಿಗೆ ತೊಂದರೆಯಾಗಬಾರದು. ಅದಕ್ಕಾಗಿ ಸರಕಾರಿ ಶಾಲಾ ಮಕ್ಕಳಿಗೆ ಬ್ಯಾಗ ವಿತರಿಸಲಾಗುತ್ತಿದೆ ಎಂದರು.ನಿವೃತ್ತ ಮುಖ್ಯಶಿಕ್ಷಕ ವಾಯ್.ಎಮ್. ಹಿರೇಕುರುಬರ, ಅಕ್ಷಯ ಕೇರಿ ಮಾತನಾಡಿ, ಶಿಕ್ಷಣ ಪ್ರೇಮಿ ಮಲ್ಲಪ್ಪ ದುದ್ದಗಿ ಹಾಗೂ ಸದಾಶಿವ ದುದ್ದಗಿಯವರ ಈ ಶೈಕ್ಷಣಿಕ ಸೇವಾ ಕಾರ್ಯ ಶ್ಲಾಘನೀಯವಾಗಿದೆ ಎಂದರು.ನಂತರ ಎಸ್‌ಡಿಎಮ್‌ಸಿ ಅಧ್ಯಕ್ಷ ಬಸವರಾಜ ಈಶ್ವರಪ್ಪಗೋಳ ಅವರ ನೇತೃತ್ವದಲ್ಲಿ ಬ್ಯಾಗುಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ದಾನಿ ಸದಾಶಿವ ದುದ್ದಗಿ ಇವರನ್ನು ಸನ್ಮಾನಿಸಲಾಯಿತು.ಪ್ರೌಢಶಾಲಾ ಮುಖ್ಯಶಿಕ್ಷಕ ಬಿ.ಜಿ.ಸಜ್ಜನ, ಪ್ರಾಥಮಿಕ ಶಾಲಾ ಪ್ರಭಾರಿ ಮುಖ್ಯಶಿಕ್ಷಕ ಶ್ರೀಶೈಲ…

Read More

ಸಿಂದಗಿ: ನೀರಿನ ಬಳಕೆ ಮತ್ತು ಸಂರಕ್ಷಣೆಯನ್ನು ನಾವು ನಿತ್ಯ ಅನುಸರಿಸಿದ್ದಲ್ಲಿ, ನೀರಿನ ಕೊರತೆಯಿಂದ ತಕ್ಕಮಟ್ಟಿಗೆ ಮುಕ್ತತೆಯನ್ನು ಪಡೆಯುತ್ತೇವೆ ಎಂದು ಶ್ರೀಪದ್ಮರಾಜ ಪಬ್ಲಿಕ್ ಶಾಲೆಯ ಪ್ರಾಚಾರ್ಯ ವಿ.ಬಿ. ಲಮಾಣಿ ಹೇಳಿದರು.ಪಟ್ಟಣದಲ್ಲಿ ಶ್ರೀಪದ್ಮರಾಜ ಪಬ್ಲಿಕ್ ಶಾಲೆಯಲ್ಲಿ ಹಮ್ಮಿಕೊಂಡ ಜಲದೂತ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಇಂದು ನೀರನ್ನು ನಾವೆಲ್ಲ ಪೋಲು ಮಾಡುತ್ತಿದ್ದೇವೆ. ಜಲ ಸಂಪನ್ಮೂಲವನ್ನು ಸಂರಕ್ಷಿಸಿದಾಗ ಮಾತ್ರ ಕೈಗಾರಿಕೆ, ಕೃಷಿ ಸೇರಿದಂತೆ ಅನೇಕ ಕ್ಷೇತ್ರಗಳು ಅಭಿವೃದ್ಧಿಯಾಗಲಿವೆ. ಪ್ರತಿ ಕಾರ್ಯಕ್ಕೂ ನೀರಿನ ಹೆಚ್ಚು ಅವಶ್ಯಕತೆ ಇರುವುದರಿಂದ ನೀರಿನ ಬಳಕೆಯ ಬಗ್ಗೆ ಹೆಚ್ಚು ಗಮನದಲ್ಲಿಟ್ಟುಕೊಂಡು ಬಳಕೆ ಮಾಡಬೇಕು. ನೀರಿಲ್ಲದ ಕಾರಣ ಅನೇಕ ಕೃಷಿ ಜಮೀನುಗಳು ಇಂದು ನಿವೇಶನಗಳಾಗಿ ಮಾರ್ಪಾಡಾಗುತ್ತಿವೆ. ನೀರಿನ ಸದ್ಬಳಕೆ ಮತ್ತು ಮಹತ್ವವನ್ನು ಮಕ್ಕಳಲ್ಲಿ ಬಿಂಬಿಸುವ ಉದ್ದೇಶದಿಂದ ಜಲದೂತ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದರು.ಅಭಿಯಾನ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ಪಟ್ಟಣದ ವಿವಿಧ ಬೀದಿಗಳ ಮೂಲಕ ಸಂಚಾರ ಮಾಡಿ ನೀರಿನ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಿದರು.ಕಾರ್ಯಕ್ರಮದಲ್ಲಿ ಶಾಲೆಯ ಸಿಬ್ಬಂದಿಗಳಾದ ರಾಣಿ ಜೋಗೂರ, ಕೆ.ಎಸ್.ಲಾತೂರ, ಎಸ್.ಎಸ್.ಪೋದ್ದಾರ, ಸಾವಿತ್ರಿ…

Read More