Author: editor.udayarashmi@gmail.com

ಲಿಂಬೆ ಅಭಿವೃದ್ಧಿ ನಿಗಮ ಮಂಡಳಿ ಮಾಜಿ ಅಧ್ಯಕ್ಷ ಅಶೋಕ ಅಲ್ಲಾಪೂರ ಅಭಿಮತ ಸಿಂದಗಿ: ಹಡಪದ ಅಪ್ಪಣ್ಣನವರ ವಚನಗಳು ಮನುಕುಲ ಉದ್ಧಾರಕ್ಕೆ ದಾರಿದೀಪ ಎಂದು ಲಿಂಬೆ ಅಭಿವೃದ್ಧಿ ನಿಗಮ ಮಂಡಳಿ ಮಾಜಿ ಅಧ್ಯಕ್ಷ ಅಶೋಕ ಅಲ್ಲಾಪೂರ ಹೇಳಿದರು.ಪಟ್ಟಣದ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಹಮ್ಮಿಕೊಂಡ ಹಡಪದ ಅಪ್ಪಣ್ಣನವರ ಜಯಂತಿ ಕಾರ್ಯಕ್ರಮದಲ್ಲಿ ಲಿಂಬೆ ಅಭಿವೃದ್ಧಿ ನಿಮಗ ಮಂಡಳಿ ಮಾಜಿ ಅಧ್ಯಕ್ಷ ಅಶೋಕ ಅಲ್ಲಾಪೂರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ವಿಶ್ವದ ಮೊದಲ ಪ್ರಜಾಪ್ರಭುತ್ವದ ಸಂಸತ್ತು ಎಂದು ಹೆಸರಾದ ಅನುಭವ ಮಂಟಪದಲ್ಲಿ ಬಸವಣ್ಣನವರ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಹಡಪದ ಅಪ್ಪಣ್ಣನವರು ತಮ್ಮ ಕಾಯಕ ನಿಷ್ಠೆ ಮತ್ತು ಮೌಲ್ಯಯುತ ವಚನಗಳಿಂದ ಬಸವಣ್ಣನವರ ಮೆಚ್ಚುಗೆಗೆ ಪಾತ್ರರಾಗಿದ್ದರು. ಸಮಾಜದಲ್ಲಿನ ಅಜ್ಞಾನ, ಅಸಮಾನತೆ, ಜಾತಿ ಪದ್ಧತಿ, ಮೂಡನಂಬಿಕೆ ವಿರುದ್ಧ ಹೋರಾಡಿ ವಚನಗಳ ಮೂಲಕ ಸಮಾಜದಲ್ಲಿ ಬದಲಾವಣೆ ತರಲು ಶ್ರಮಿಸಿದರು. ಇವರ ಸಾಮಾಜಿಕ ಚಿಂತನೆಗಳು ವೈಚಾರಿಕ ಸಮಾಜಕ್ಕೆ ಚೈತನ್ಯ ನೀಡುತ್ತವೆ ಎಂದರು.ಈ ವೇಳೆ ಶಿಕ್ಷಕಿ ಸೈನಾಬಿ ಮಸಳಿ ಮಾತನಾಡಿ,…

Read More

ಉದಯರಶ್ಮಿ’ ವರದಿಗಾರ ಚೇತನ ಶಿವಶಿಂಪಿ ಸೇರಿದಂತೆ ಐವರಿಗೆ “ತಾಲೂಕು ಉತ್ತಮ ಪತ್ರಕರ್ತ” ಪ್ರಶಸ್ತಿ ಮುದ್ದೇಬಿಹಾಳ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ೨೦೨೪-೨೫ ನೇ ಸಾಲಿನ ಪತ್ರಿಕಾ ದಿನಾಚರಣೆ ನಡೆಸುವ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ವಿಶೇಷ ಚರ್ಚೆಗಳು ನಡೆದವು.ಈ ವೇಳೆ ಸದಸ್ಯ ಚೇತನ ಶಿವಶಿಂಪಿ ಮಾತನಾಡಿ, ಕಾರ್ಯಕ್ರಮದ ಬಳಿಕ ಸದಸ್ಯರೆಲ್ಲರಿಗೆ ಲೆಕ್ಕಪತ್ರಗಳ ಮಾಹಿತಿ ನೀಡಿದಲ್ಲಿ ಸಂಘದ ಶಿಸ್ತನ್ನು ಕಾಯ್ದುಕೊಂಡಂತಾಗುತ್ತದೆ ಎಂದರು.ಹಿರಿಯ ಸದಸ್ಯ ಪರಶುರಾಮ ಕೊಣ್ಣೂರ ಮಾತನಾಡಿ, ಕೆಲವರು ತಮ್ಮ ಲಾಬಿಗಾಗಿ ಸಂಘದಲ್ಲಿ ಪತ್ರಕರ್ತರಲ್ಲದವರನ್ನು ಸೇರಿಸಿದ್ದಾರೆ. ಕೂಡಲೇ ಅಂತವರನ್ನು ಗುರುತಿಸಿ ಸಂಘದಿಂದ ಕೈಬಿಡಬೇಕು ಎಂದರು.ಎಚ್.ಆರ್.ಬಾಗವಾನ, ಅಲ್ಲಾಭಕ್ಷ ನಿಡಗುಂದಿ, ಡಿ.ಬಿ.ವಡವಡಗಿ ಮತ್ತೀತರರು ಮಾತನಾಡಿ ಸಲಹೆಗಳನ್ನು ನೀಡಿದರು.ಜು.೩೧ ಕ್ಕೆ ಪಟ್ಟಣದ ವಿದ್ಯಾನಗರದಲ್ಲಿರುವ ಅಭ್ಯುದಯ ಕಾಲೇಜಿನಲ್ಲಿ ಕಾರ್ಯಕ್ರಮವನ್ನು ನಡೆಸಲು ತೀರ್ಮಾನಿಸಲಾಯಿತು.ಈ ವೇಳೆ ರವೀಂದ್ರ ನಂದೆಪ್ಪನವರ, ಲಾಡ್ಲೇಮಶಾಕ ನದಾಫ, ಸಿದ್ದು ಚಲವಾದಿ, ಮುತ್ತು ಬೀರಗೊಂಡ, ಹಣಮಂತ ಬೀರಗೊಂಡ, ಯಲ್ಲಾಲಿಂಗ ಕೊಡೇಕಲ್, ಕೃಷ್ಣ ಕುಂಬಾರ, ಸಾಗರ ಉಕ್ಕಲಿ, ಈಶ್ವರ ಈಳಗೇರ, ಬಿ.ಎಸ್.ಪಾಟೀಲ ಇದ್ದರು.…

Read More

ಮುದ್ದೇಬಿಹಾಳ: ಕರ್ನಾಟಕ ಮಾಧ್ಯಮ ಒಕ್ಕೂಟದ ತಾಲೂಕು ಅಧ್ಯಕ್ಷರಾಗಿ ಸಾಹಿತಿ, ಹಿರಿಯ ಪತ್ರಕರ್ತ ಪರಶುರಾಮ ಕೊಣ್ಣೂರ ಅವರನ್ನು ಸರ್ವಾನುಮತದಿಂದ ಸರ್ವ ಸದಸ್ಯರ ಸಮ್ಮುಖದಲ್ಲಿ ಸಂಘದ ರಾಜ್ಯಧ್ಯಕ್ಷ ನಾರಾಯಣ ಮಾಯಾಚಾರಿ ಘೋಷಿಸಿದರು.ಪಟ್ಟಣದ ಪ್ರವಾಸಿಮಂದಿರದಲ್ಲಿ ನಡೆದ ಕರ್ನಾಟಕ ಮಾಧ್ಯಮ ಒಕ್ಕೂಟದ ತಾಲೂಕು ಘಟಕದ ಸಭೆಯಲ್ಲಿ ಈ ಘೋಷಣೆ ಮಾಡಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪತ್ರಿಕಾರಂಗ ಶ್ರೇಷ್ಠವಾಗಿದೆ. ಸಮಾಜದ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಪತ್ರಕರ್ತರ ಶ್ರಮ ದೊಡ್ಡದು. ಜನರ ಮಧ್ಯೆ ಕೊಂಡಿಯಾಗಿ ಕೆಲಸ ಮಾಡುತ್ತಿರುವ ಮಾಧ್ಯಮ ಮತ್ತು ಪತ್ರಕರ್ತರು, ತಮ್ಮದೇ ಆದ ಮಹತ್ವದ ಜವಾಬ್ದಾರಿಯನ್ನು ಹೊಂದಿದ್ದು, ಸಾಮಾಜದ ಸ್ವಾಸ್ತ್ಯ ಕಾಪಾಡುತ್ತಿದ್ದಾರೆ. ಹೀಗಾಗಿ ಸಂಘದ ಅಧ್ಯಕ್ಷರು ಸದಸ್ಯರ ಹಿತಾಸಕ್ತಿ ಕಾಪಾಡಿಕೊಂಡು ಹೋಗಬೇಕು. ಮುಂದಿನ ದಿನಗಳಲ್ಲಿ ಸಂಘದ ಸದಸ್ಯರಿಗೆ ಸರ್ಕಾರದಿಂದ ಸಿಗುವಂತಹ ಸೌಲಭ್ಯಗಳನ್ನು ಕೊಡಿಸುವ ಪ್ರಾಮಾಣಿಕ ಜವಾಬ್ದಾರಿ ಇದೆ ಎಂದರು.ಈ ವೇಳೆ ನೂತನ ಅಧ್ಯಕ್ಷ ಪರಶುರಾಮ ಕೊಣ್ಣೂರ ಅವರು ಮಾತನಾಡಿ, ಪತ್ರಕರ್ತರ ಸಂಘಗಳು ಅನ್ಯಾಯಕ್ಕೊಳಗಾದ, ದೌರ್ಜನ್ಯಕ್ಕೊಳಗಾದ ಪತ್ರಕರ್ತರ ಪರ ಧ್ವನಿ ಎತ್ತುವ ಮೂಲಕ ಪತ್ರಕರ್ತರ ಶ್ರೇಯೋಭಿವೃದ್ಧಿಗೆ ಶ್ರಮಿಸಬೇಕೇ…

Read More

ಮುದ್ದೇಬಿಹಾಳ: ತಾಲೂಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಸಿದ್ದಗಂಗಾ ಪ್ಯಾರಾ ಮೆಡಿಕಲ್ ಕಾಲೇಜು ಇವರ ಸಹಯೋಗದಲ್ಲಿ ಡೆಂಗ್ಯೂ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು.ಡೆಂಗ್ಯೂ ರೋಗ ನಿಯಂತ್ರಣ ಮುಂಜಾಗ್ರತೆ ಹಾಗೂ ರೋಗ ಲಕ್ಷಣ ಚಿಕಿತ್ಸೆ ಕುರಿತು ತಾಲೂಕ ಆರೋಗ್ಯ ಅಧಿಕಾರಿಗಳ ಕಾರ್ಯಾಲಯದಲ್ಲಿ ಸಿದ್ದಗಂಗಾ ಪ್ಯಾರಾ ಮೆಡಿಕಲ್ ಕಾಲೇಜ್ ವಿದ್ಯಾರ್ಥಿಗಳಿಗೆ ಸೊಳ್ಳೆ ಕಡಿತದಿಂದ ಹರಡುವ ರೋಗಗಳ ಬಗ್ಗೆ ಮಾಹಿತಿ ನೀಡಲಾಯಿತು. ನಂತರ ಡೆಂಗೀ ಜ್ವರ ನಿಯಂತ್ರಿಸೋಣ ಎಂಬ ಘೋಷವಾಕ್ಯದೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ, ವಿವಿಧ ಬಡಾವಣೆಗಳಲ್ಲಿ ಮನೆ ಮನೆಗೆ ಭೇಟಿ ನೀಡಿ ಈಡಿಸ್ ಲಾರ್ವ್ ಸಮೀಕ್ಷೆ ಕೈಗೊಳ್ಳಲಾಯಿತು.ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ಲಾರ್ವ ತಾಣಗಳನ್ನು ತೋರಿಸಿ ಅವುಗಳನ್ನು ನಾಶಪಡಿಸುವ ಕ್ರಮಗಳನ್ನು ತಿಳಿಸಲಾಯಿತು.ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಅನುಸೂಯಾ ತೇರದಾಳ, ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿ ಎಸ್.ಸಿ.ಮಾನಕರ, ವ್ಹಿ.ಬಿ.ಡಿ ಮೇಲ್ವಿಚಾರಕ ಎಸ್.ಸಿ.ರುದ್ರವಾಡಿ, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಎಂ.ಎಸ್.ಗೌಡರ, ಎಸ್.ಐ.ಕಮಲಪ್ಪನವರ, ಇಸ್ಮಾಯಿಲ್ ವಾಲಿಕರ, ಎಸ್.ಆರ್.ಸಜ್ಜನ, ಎನ್.ಎಂ.ಯಾಳವಾರ, ರೇಷ್ಮಾ ರೂಡಗಿ, ಕೆ.ಟಿ.ಮುಲ್ಲಾ, ಕಾಲೇಜಿನ ವಿದ್ಯಾರ್ಥಿಗಳು ಆಶಾ ಕಾರ್ಯಕರ್ತೆಯರು ಇದ್ದರು.

Read More

ಚಡಚಣ: ನೀರು ಅತ್ಯಮೂಲ್ಯ ಸಂಪತ್ತು.ಅದರ ಸಂರಕ್ಷಣೆ ನಮ್ಮೆಲ್ಲರ ಹೊಣೆ. ನದಿ,ಕೆರೆ,ಬಾವಿಯ ನೀರನ್ನು ಸಂರಕ್ಷಿಸುವ ಜೊತೆಗೆ ಮಳೆನೀರು ಕೊಯ್ಲು ಮೂಲಕ ಮಳೆ ನೀರನ್ನು ಸಂಗ್ರಹಿಸುವ ದಿಟ್ಟ ಪ್ರಯತ್ನ ಅಗತ್ಯ ಎಂದು ಶಿಕ್ಷಕ ಬಸವರಾಜ ಕರಜಗಿ ಹೇಳಿದರು.ಅವರು ಪಟ್ಟಣದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ನಂ-೨ ಮರಡಿ ಶಾಲೆಯಲ್ಲಿ ಹಮ್ಮಿಕೊಂಡ ಜಲಧೂತ ಜಾಗೃತಿ ಅಭಿಯಾನದ ನಿಮಿತ್ಯ ಜಲ ಸಂರಕ್ಷಣೆ-ನಮ್ಮ ಹೊಣೆ ಕುರಿತು ಮಾತನಾಡಿದರು.ಶಿಕ್ಷಕ ಡಿ ಎಸ್ ಬಗಲಿ ಮಾತನಾಡಿ, ನಾಳೆಯ ಅಭಾವ ತಪ್ಪಿಸಲು ಅತ್ಯಮೂಲ್ಯವಾದ ನೀರನ್ನು ಅಗತ್ಯಕ್ಕೆ ತಕ್ಕಂತೆ ಮಿತವಾಗಿ ಬಳಸಿ-ಮುಂಬರುವ ಪೀಳಿಗೆಗೆ ಉಳಿಸುವ ನಿಟ್ಟಿನಲ್ಲಿ ನಾವೆಲ್ಲರೂ ಕಾರ್ಯತತ್ಪರರಾಗಬೇಕಿದೆ ಎಂದು ಹೇಳಿದರು.ಶಿಕ್ಷಕ ಜಗದೀಶ ಚಲವಾದಿ ಮಾತನಾಡಿ, ನೀರು ಮುಗಿದು ಹೋಗುವ ಸಂಪನ್ಮೂಲ. ಸಕಲ ಜೀವಿಗಳಿಗೂ ನೀರು ಅತ್ಯಗತ್ಯ. ಮಾನವ ವೈಜ್ಞಾನಿಕವಾಗಿ ಬೆಳೆದರೂ ಸಹಿತ ನೀರನ್ನು ಸೃಷ್ಟಿಸುವ ತಂತ್ರಜ್ಞಾನದ ಆವಿಷ್ಕಾರ ಮಾಡಿಲ್ಲ. ನೀರಿನ ಮಿತ ಬಳಕೆ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವ ಕೆಲಸಗಳು ನಿರಂತರವಾಗಿರಬೇಕು ಎಂದು ಹೇಳಿದರು.ಮುಖ್ಯ ಶಿಕ್ಷಕ ಮಹಾಂತೇಶ ಉಮರಾಣಿ ಅಧ್ಯಕ್ಷತೆ ವಹಿಸಿದ್ದರು.ಶಿಕ್ಷಕರಾದ ಮಹಾದೇವ…

Read More

ಗ್ರಂಥಾಲಯ ನೌಕರರ ಮೇಲ್ವಿಚಾರಕರ ಸಂಘದ ತಾಲೂಕು ಗೌರವಾಧ್ಯಕ್ಷರಾಗಿ ಗುರು ಆರ್. ಹಿರೇಮಠ ಆಯ್ಕೆ ಸಿಂದಗಿ: ಗ್ರಂಥಾಲಯಗಳನ್ನು ಅರಿವು ಕೇಂದ್ರಗಳಾಗಿ ಮಾರ್ಪಡಿಸಿ ಮೇಲ್ದರ್ಜೆಗೆ ಏರಿಸುವ ಮೂಲಕ ಅವುಗಳ ಉನ್ನತಿಗೆ ಸರ್ಕಾರ ಶ್ರಮ ವಹಿಸುತ್ತಿದೆ. ಅದರ ಫಲವಾಗಿ ಇಂದು ವಿಧ್ಯಾರ್ಥಿಗಳು ಗ್ರಂಥಾಲಯಗಳತ್ತ ಮುಖಮಾಡಿದ್ದಾರೆ ಎಂದು ಗ್ರಂಥಾಲಯ ನೌಕರರ ಮೇಲ್ವಿಚಾರಕರ ಸಂಘದ ಜಿಲ್ಲಾ ಗೌರವಧ್ಯಕ್ಷ ಮಹಾಂತಗೌಡ ಕಾಶಿನಕುಂಟಿ ಹೇಳಿದರು.ಅವರು ಇಲ್ಲಿನ ಶಾಖಾ ಗ್ರಂಥಾಲಯದಲ್ಲಿ ನಡೆದ ಗ್ರಂಥಾಲಯ ನೌಕರರ ರಾಜ್ಯ ಅಧ್ಯಕ್ಷರಾದ ಸತ್ಯನಾರಾಯಣ ಅವರ ಮುಖಂಡತ್ವದ ಸಂಘದ ಮೇಲ್ವಿಚಾರಕರ ಸಭೆಯಲ್ಲಿ ಮಾತನಾಡಿದರು.ಗ್ರಂಥಾಲಯಗಳಿಗೆ ಮಕ್ಕಳು, ಹಿರಿಯರು ವಿಶೇಷವಾಗಿ ಮಹಿಳೆಯರು ಬಂದು ಪುಸ್ತಕಗಳನ್ನು ಓದುವ ರೀತಿಯಲ್ಲಿ ತಮ್ಮ ತಮ್ಮ ಗ್ರಂಥಾಲಯಗಳನ್ನು ಅಭಿವೃದ್ಧಿಪಡಿಸಲು ತಾವುಗಳು ಪ್ರಯತ್ನಿಸಬೇಕು. ಅಂದಾಗ ಅರಿವು ಕೇಂದ್ರಗಳು ಜನ ಸ್ನೆಹಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುವುದು ಎಂದರುಸಭೆಯಲ್ಲಿ ಜಿಲ್ಲಾ ಸಂಘದ ಮಾಜಿ ಗೌರವ ಅಧ್ಯಕ್ಷ ಪಿ ಸಿ ಬಿರಾದಾರ, ಗೌರವ ಸಲಹೆಗಾರ ರಾಮನಗೌಡ ಬಿರಾದಾರ ಸಾಸನೂರ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಶಂಕರ್ ಉಕುಮನಾಳ, ಖಜಾಂಚಿ ಶ್ರೀಮತಿ ಮುಕ್ತಬಾಯಿ ಹೆಗಡೆ, ಸಹ ಕಾರ್ಯದರ್ಶಿ ಶ್ರೀಮತಿ…

Read More

ಜಿಲ್ಲೆಯ ಪ್ರಥಮ ಪ್ರೊಬೊನೊ ನ್ಯಾಯವಾದಿ ಮಲ್ಲಿಕಾರ್ಜುನ ಭೃಂಗಿಮಠರಿಗೆ ಸನ್ಮಾನ ವಿಜಯಪುರ: ಮಹಿಳಿಯರ ಕಾರ್ಮಿಕರ, ಸಮಾಜದ ಕಟ್ಟ ಕಡೆಯ ಪ್ರಜೆಗಳ ಹಕ್ಕುಗಳು ಬಗ್ಗೆ ಪಾಶ್ಚಿಮಾತ್ಯ ರಾಷ್ಟ್ರದಲ್ಲಿ ಯಾರಿಗೂ ಕನಸು ಕೂಡಾ ಬೀಳದ ೧೨ ನೇ ಶತಮಾನದಲ್ಲಿ ಬಸವಣ್ಣನವರು ಎಲ್ಲರ ಹಕ್ಕುಗಳು ಬಗ್ಗೆ ಮಾತಾಡಿದ್ದರು. ಶರಣರ ವಚನಗಳು ಹಲವು ಸಂವಿಧಾನಗಳ ಪ್ರತೀಕವಾಗಿದೆ. ಅದಕ್ಕಾಗಿ ನಾವು ವಚನ ಸಾಹಿತ್ಯವನ್ನು ತಗೆದುಕೊಂಡು ಲೋಕದ ನ್ಯಾಯಾಂಗ ವ್ಯವಸ್ಥೆಗೆ ಹೋಗಬೇಕು ಎಂದು ಹಿರಿಯ ಸಾಹಿತಿ ಶಂಕರ ಬೈಚವಾಳ ಹೇಳಿದರುಅವರು ಕನ್ನಡ ಪ್ರಸ್ತಕ ಪರಿಷತ್ತು ವಿಜಯಪುರ ಹಾಗೂ ಕಾನೂನು ಕ್ರಿಯಾತ್ಮಕ ವೇದಿಕೆ ವಿಜಯಪುರ ಅಡಿಯಲ್ಲಿ ನಡೆದ ’ನ್ಯಾಯ ಶಾಸ್ತ್ರ ಹಾಗೂ ವಚನಗಳು’ ವಿಷಯ ಕುರಿತ ವಿಚಾರ ಸಂಕಿರಣ ಮತ್ತು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ನೂತನ ಆಡಳಿತ ಮಂಡಳಿಯ ಸದಸ್ಯ ಮತ್ತು ಜಿಲ್ಲೆಯ ಪ್ರಥಮ ಪ್ರೊಬೊನೊ [ಜನಸ್ನೇಹಿ] ವಕೀಲರಾಗಿ ಕಾನೂನು ಸೇವೆ ಪ್ರಾಧಿಕಾರದಿಂದ ನೇಮಕಗೊಡ ನ್ಯಾಯವಾದಿ ಮಲ್ಲಿಕಾರ್ಜುನ ಭೃಂಗಿಮಠ ಅವರ ಸನ್ಮಾನ ಸಮಾರಂಭದಲ್ಲಿ ಉಪನ್ಯಾಸ ನೀಡಿ ಮಾತನಾಡುತ್ತಿದ್ದರು,ಸನ್ಮಾನ…

Read More

ಆಲಮೇಲ: ವಿಜಯಪುರ ಜಿಲ್ಲೆಯ ಕಡಣಿ ಗ್ರಾಮದ ಬೆರಗು ಪ್ರಕಾಶನವು ರಾಜ್ಯಮಟ್ಟದ ಪ್ರೊ. ಎಚ್.ಟಿ.ಪೋತೆ ಕಾವ್ಯ, ಕಥಾ ಪ್ರಶಸ್ತಿ ನೀಡಲು ಹಸ್ತಪ್ರತಿಗಳನ್ನು ಆವ್ಹಾನಿಸಿದೆ. ಪ್ರಶಸ್ತಿ ರೂ ೧೦ ಸಾವಿರ ನಗದು, ಪ್ರಶಸ್ತಿ ಫಲಕ ಸ್ಮರಣಿಕೆ ಒಳಗೊಂಡಿದೆ. ಆಯ್ಕೆಯಾದ ಹಸ್ತಪ್ರತಿಯನ್ನು ಪ್ರಕಾಶನದಿಂದ ಪ್ರಕಟಿಸಿ ಪ್ರಕಾಶನದ ೭ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಚಾಲಕಿ ವಿಜಯಲಕ್ಷ್ಮಿ ಕತ್ತಿ ತಿಳಿಸಿದ್ದಾರೆ.ಕನಿಷ್ಠ ೧೦ ಕತೆಗಳನ್ನೊಳಗೊಂಡ ಅಥವಾ ೪೦ ಕವಿತೆಯನ್ನೊಳಗೊಂಡ ಹಸ್ತಪ್ರತಿಯು ನುಡಿ ಅಥವಾ ಬರಹದಲ್ಲಿ ಟೈಪ್ ಮಾಡಿದ ತಮ್ಮ ಅಪ್ರಕಟಿತ ಕೃತಿಯ ಎರಡು ಪ್ರತಿಗಳನ್ನು ಇದೇ ಅಗಷ್ಟ.೩೦ ರೊಳಗೆ ತಲುಪುವಂತೆ ಕಳಿಸಲು ಕೋರಲಾಗಿದೆ.ಪ್ರಕಟಿತ ಕೃತಿಗಳ ಆವ್ಹಾನ:ಕಡಣಿ ಬೆರಗು ಪ್ರಕಾಶನವು ದಿ. ಯಮುನಾಬಾಯಿ ರಾಜಣ್ಣ ಭೋವಿ ಸ್ಮರಣಾರ್ಥ ಅವರ ಹೆಸರಿನಲ್ಲಿ ಪ್ರತಿವರ್ಷ ನೀಡುವ ಬೆರಗು ಪ್ರಶಸ್ತಿ-೨೦೨೧ ನೀಡಲು ೨೦೨೩ನೇ ಸಾಲಿನಲ್ಲಿ ಪ್ರಕಟವಾದ ಸಾಹಿತ್ಯದ ಎಲ್ಲಾ ಪ್ರಕಾರಗಳ ಕೃತಿಗಳನ್ನು ಆವ್ಹಾನಿಸಿದೆ. ಪ್ರಶಸ್ತಿಯು ೫ಸಾವಿರ ರೂ. ನಗದು ಮತ್ತು ಪ್ರಶಸ್ತಿ ಪತ್ರ ಒಳಗೊಂಡಿದೆ. ಆಸಕ್ತ ಲೇಖಕರು ತಮ್ಮ ಕೃತಿಯ ಎರಡು…

Read More

ಕಾಯಕಯೋಗಿ ಹಡಪದ ಅಪ್ಪಣ ಜಯಂತಿಯಲ್ಲಿ ಕಾಂಗ್ರೆಸ್ ಮುಖಂಡ ರಮೇಶ ಬಂಟನೂರ ಅಭಿಮತ ಆಲಮೇಲ: ಕಲ್ಯಾಣ ಕ್ರಾಂತಿಯ ಮೂಲಕ ಅನುಭವ ಮಂಟಪವನ್ನು ಸ್ಥಾಪಿಸಿದವರಲ್ಲಿ ಅನುಭವ ಮಂಟಪದ ಕಾರ್ಯದರ್ಶಿಗಳಾದವರು ಹಡಪದ ಅಪ್ಟಣವರು. ಧರ್ಮ ಕ್ರಾಂತಿಯಲ್ಲಿ ಸಾಮಾಜಿಕ ಕ್ರಾಂತಿಗಳು ನಡೆದಾಗ ಬಸವಣ್ಣವರ ಜೊತೆ ಹೆಗಲಿಗೆ ಹೆಗಲು ಕೊಟ್ಟು ಅವರ ಕಾರ್ಯದರ್ಶಿಗಳಾಗಿ ಸಾಗಿದವರು ಹಡಪದ ಅಪ್ಪಣ್ಣನವರು ಎಂದು ಜಿಲ್ಲಾ ಕಾಂಗ್ರೆಸ್ ಮುಖಂಡ ರಮೇಶ ಬಂಟನೂರ ಹೇಳಿದರುಪಟ್ಟಣದ ತಾಲೂಕಾ ದಂಡಾಧಿಕಾರಿಗಳ ಕಾರ್ಯಲಯದಲ್ಲಿ ಹಡಪದ ಅಪ್ಪಣ್ಣನವರ ೮೯೦ನೇ ಜಯಂತಿ ಆಚರಣೆ ಮಾಡಿ ಅವರು ಮಾತನಾಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ತಾಲೂಕಾ ದಂಡಾಧಿಕಾರಿ ಸುರೇಶ ಚವಾಲರ್ ಮಾತನಾಡಿ, ಸರಕಾರದ ಆದೇಶದ ಪ್ರಕಾರ ಇಂತಹ ಮಾಹಾನಿಯರ ಜಯಂತಿಯನ್ನು ನಾವು ಆಚರಣೆ ಮಾಡುತ್ತಾ ಇರುತ್ತವೆ. ಈ ಜಯಂತಿ ಆಚರಣೆಗೆ ಸೀಮಿತವಾಗದೆ ಇಂತಹ ಮಹನೀಯರು ಸಮಾಜಕ್ಕೆ ನೀಡಿದ ಕೊಡುಗೆಯನ್ನು ನಾವು ಅವಲೋಕನ ಮಾಡಿಕೊಳ್ಳಬೇಕಾಗಿದೆ ಮತ್ತು ನಾವು ಬಡವರಾಗಿದ್ದರೆ ಒಂದು ಹೊತ್ತಿನ ಉಟಬಿಟ್ಟು ನಮ್ಮ ಮಕ್ಕಳಿಗೆ ಶಿಕ್ಷಣ ನೀಡಬೇಕಾಗಿದೆ. ನಮ್ಮ ಮಕ್ಕಳಿಗೆ ದುಷ್ಟ ಚಟಗಳ ಕಡೆಗೆ ಸಾಗದಂತೆ ನೋಡಿಕೊಳ್ಳಬೇಕು…

Read More

ಇಂಡಿ: ಮಹಿಳೆ ಇಲ್ಲದ ಸಮಾಜವನ್ನು ಕಲ್ಪಿಸಲು ಸಾಧ್ಯವಿಲ್ಲ, ಪ್ರಸ್ತುತ ದಿನಗಳಲ್ಲೂ ನಿರಂತರ ಶೋಷಣೆಗಳು ನಡೆಯುತ್ತಿರುವುದು ಆಘಾತಕಾರಿ ವಿಷಯವಾಗಿದೆ ಎಂದು ಜಿ.ಆರ್.ಗಾಂಧಿ ಕಲಾ ಮಹಾವಿದ್ಯಾಲಯದ ಡಾ. ಸುರೇಂದ್ರ ಕುಮಸಿ ಅವರು ಹೇಳಿದರು.ಅವರು ಇಂಡಿ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ಸಮಾಜಶಾಸ್ತ್ರ ವಿಭಾಗವು ಹಮ್ಮಿಕೊಂಡಿದ್ದ ʼವಿಶೇಷ ಉಪನ್ಯಾಸ ʼ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಚಾರ್ಯ ಆರ್. ಎಚ್.ರಮೇಶ ಮಾತನಾಡಿ ʼ ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ, ಶಿಕ್ಷಣವನ್ನು ಮಹಿಳೆಗೆ ಎಲ್ಲ ಹಂತಗಳಲ್ಲೂ ದೊರೆಯುವಂತಾಗಬೇಕು ಎಂದರು.ಐಕ್ಯೂಎಸಿ ಸಂಯೋಜಕರಾದ ಡಾ.ಶೀರುನುಸುಲ್ತಾನ ಇನಾಂದಾರ, ಪ್ರೊ. ಕಿರಣ ರೇವಣಕರ, ಸಮಾಜಶಾಸ್ತ್ರದ ವಿಭಾಗದ ಮುಖ್ಯಸ್ಥರಾದ ಸುನಂದ ಎಚ್. ಪೂಜಾರಿ‌, ಡಾ. ಸಚಿನ ಹುಗ್ಗಿ, ಪ್ರೊ. ಆರ್.ಬಿ.ಮುದ್ದೇಬಿಹಾಳ ಮೊದಲಾದವರು ವೇದಿಕೆಯಲ್ಲಿದ್ದರು.ಕು.ಮಂಜುನಾಥ ಶಿವಣಗಿ ಸ್ವಾಗತಿಸಿದರು. ಕು.ಸದಾಶಿವ ಕಂಬಾರ ನಿರೂಪಿಸಿದರು. ಕು.ಶಿವಾನಂದ ಬನಸೋಡೆ ವಂದಿಸಿದರು.

Read More