Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಹೆಚ್ ಡಿ ಕೋಟೆ: ತಾಲೂಕಿನಲ್ಲಿ ಮತ್ತೆ ಕಾಡುಪ್ರಾಣಿಗಳ ಆತಂಕ ಶುರುವಾಗಿದೆ. ಕಣಿಯನಹುಂಡಿ ಗ್ರಾಮದಲ್ಲಿ ಚಿರತೆ ಓಡಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಆತಂಕ ಮೂಡಿಸಿದೆ. ಜಿಲ್ಲಾ ಪಂಚಾಯತಿ ಮಾಜಿ ಸದಸ್ಯರಾದ ಕೃಷ್ಣ ಅವರ ಜಮೀನಿನಲ್ಲಿ ಚಿರತೆ ಕಾಣಿಸಿಕೊಂಡಿದ್ದು,ಅದರ ಓಡಾಟವನ್ನು ಸ್ಥಳೀಯರು ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ. ಇದನ್ನು ನೋಡಿ ರೈತರು ಜಮೀನುಗಳಿಗೆ ಹೋಗಲು ಭಯಪಡುತ್ತಿದ್ದಾರೆ.ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಬೋನು ಇರಿಸಿ ಚಿರತೆಯನ್ನು ಸೆರೆಹಿಡಿದು ಬೇರೆಡೆಗೆ ಸ್ಥಳಾಂತರ ಮಾಡಬೇಕೆಂದು ಆಗ್ರಹಿಸಿದ್ದಾರೆ.ಈ ಮೂಲಕ ಜನ ಮತ್ತು ಜಾನುವಾರಗಳ ರಕ್ಷಣೆಗೆ ಮುಂದಾಗಬೇಕೆಂದು ಒತ್ತಾಯಿಸಿದ್ದಾರೆ.ಸರಗೂರು ತಾಲೂಕಿನ ಬಂಡೀಪುರ ಅರಣ್ಯ ವಲಯ ವ್ಯಾಪ್ತಿಯಲ್ಲಿ ತಿಂಗಳ ಅಂತರದಲ್ಲೇ ನಾಲ್ವರ ಮೇಲೆ ಹುಲಿ ದಾಳಿ ನಡೆಸಿ ಮೂವರ ಬಲಿ ಪಡೆದಿತ್ತು. ಬಳಿಕ ಬಂಡೀಪುರ ಹಾಗೂ ನಾಗರಹೊಳೆ ಅರಣ್ಯದಲ್ಲಿ ಸಫಾರಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಇದಾದ ನಂತರ ಕಾಡುಪ್ರಾಣಿಗಳ ಹಾವಳಿ ಕಡಿಮೆಯಾಗಿತ್ತು. ಇದೀಗ ಮತ್ತೆ ಚಿರತೆ ಪ್ರತ್ಯಕ್ಷವಾಗಿರುವುದು ಜನರನ್ನು ಆತಂಕಕ್ಕೀಡುಮಾಡಿದೆ.

Read More

ಮಾಜಿ ಸಚಿವ ದಿ.ಎಮ್.ಸಿ.ಮನಗೂಳಿ ಪುಣ್ಯಸ್ಮರಣೆ ನಿಮಿತ್ತ “ಭಗೀರಥ ಕಪ್” ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ | ಸೌತ ಸೆಂಟ್ರಲ್ ರೈಲ್ವೆ ಹುಬ್ಬಳ್ಳಿ ರನ್ನರ್ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ದಿ.ಎಂ.ಸಿ.ಮನಗೂಳಿ ಅವರು ಒಬ್ಬ ಕ್ರೀಡಾಪಟುವಾಗಿದ್ದರು. ಅವರ ಸದಾಶಯದಂತೆ ಅವರ ಹೆಸರಿನ ಮೇಲೆ ರಾಜ್ಯ ಮಟ್ಟದ ಭಗೀರಥ ಕಪ್ ವಾಲಿಬಾಲ್ ಪಂದ್ಯವನ್ನು ಆಯೋಜನೆ ಮಾಡಲಾಗಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಸಿಂದಗಿ ನಗರದ ಎಚ್.ಜಿ. ಕಾಲೇಜಿನ ಮೈದಾನದಲ್ಲಿ ಕರ್ನಾಟಕ ವಾಲಿಬಾಲ್ ಸಂಸ್ಥೆ, ಶ್ರೀ ಎಮ್.ಸಿ.ಮನಗೂಳಿ ಪ್ರತಿಷ್ಠಾನದ ಸಂಯುಕ್ತ ಆಶ್ರಯದಲ್ಲಿ ಮಾಜಿ ಸಚಿವ ದಿ.ಎಮ್.ಸಿ.ಮನಗೂಳಿ ಅವರ ೫ನೇ ಪುಣ್ಯಸ್ಮರಣೆ ಅಂಗವಾಗಿ ಹಮ್ಮಿಕೊಂಡ ಭಗೀರಥ ಕಪ್ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯಲ್ಲಿ ಜಯಗಳಿಸಿದ ಕರ್ನಾಟಕ ರಾಜ್ಯ ಪೊಲೀಸ್ ತಂಡಕ್ಕೆ ೧ಲಕ್ಷ ನಗದು ಹಾಗೂ ಭಗೀರಥ ಕಪ್ ನ್ನು ಸಮಾರೋಪ ಸಮಾರಂಭದಲ್ಲಿ ವಿತರಿಸಿ ಮಾತನಾಡಿದ ಅವರು, ರಾಜಕೀಯ ಎಂದರೆ ಇದೊಂದು ಸಾಮಾಜಿಕ ಸೇವೆ. ಜನ ನಮಗೆ ನೀಡಿದ ಅಧಿಕಾರವನ್ನು ಅವರ ಸೇವೆಗಾಗಿಯೇ ಮುಡಿಪಾಗಿಡಬೇಕು. ಹಿರಿಯರು ಹಾಕಿಕೊಟ್ಟ ದಾರಿಯಲ್ಲಿ ನಡೆದು…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ತಾಲೂಕಿನ ಧೂಳಖೇಡ ಗ್ರಾಮದ ವಿಜಯಪುರ -ಸೋಲಾಪುರ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಶಿವಾನಂದ ಪಾಟೀಲ ಅವರಿಗೆ ಸೇರಿದ ರಸಗೊಬ್ಬರ ಅಂಗಡಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ, ಅಪಾರ ಮೌಲ್ಯದ ಗೊಬ್ಬರ , ಔಷಧಿ ಮತ್ತು ಕೃಷಿ ಉತ್ಪನ್ನಗಳು ಬೆಂಕಿ ಅವಘಡದಲ್ಲಿ ಕೊಟ್ಯಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಹಾನಿಯಾಗಿದೆ ಎಂದು ತಿಳಿದು ಬಂದಿದೆ. ಹಾನಿಯಾಗಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ.ರಸಗೊಬ್ಬರ ಗೋಡವಾನಕ್ಕೆ ಹತ್ತಿದ ಬೆಂಕಿ ಕಾಣಿಸಿಕೊಂಡಿದ್ದರಿಂದ ಸುತ್ತಲಿನ ಸಾರ್ವಜನಿಕರು ಬೆಂಕಿ ನಂದಿಸಲು ಶ್ರಮಿಸಿದ್ದರೂ, ಆದರೂ ಬೆಂಕಿಯ ತೀವ್ರತೆ ಹೆಚ್ಚಾಗುತ್ತಿದ್ದಂತೆ ಸ್ಥಳಕ್ಕೆ ಇಂಡಿ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಬೆಂಕಿ ಸಂಪೂರ್ಣ ನಂದಿಸುವಲ್ಲಿ ಯಶಸ್ವಿಯಾದರು.ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಪ್ರಾಥಮಿಕ ತನಿಖೆಯಲ್ಲಿ ವಿದ್ಯುತ್ ಶಾರ್ಟಸರ್ಕೀಟ್ ನಿಂದ ಬೆಂಕಿ ತಗುಲಿರಬಹುದು ಎಂದು ಶಂಕಿಸಲಾಗಿದೆ.ಪತ್ರಕರ್ತರೊಂದಿಗೆ ಮಾತನಾಡಿದ ರಸಗೊಬ್ಬರ ಅಂಗಡಿಯ ಮಾಲಿಕ ಶಿವಾನಂದ ಪಾಟೀಲ, ಅಂಗಡಿಗೆ ಶಾರ್ಟಸರರ್ಕೀಟ್ ನಿಂದ ಬೆಂಕಿ ತಗುಲಿದ್ದರಿಂದ ಗೊಡ್ವಾನನಲ್ಲಿ ಇಟ್ಟಿದ್ದ ಸುಮಾರು 2 ಕೋಟಿಗೂ ಅಧಿಕ ರೂಪಾಯಿಯ ಮೌಲ್ಯದ ರಸಗೊಬ್ಬರ, ಕೀಟನಾಶಕ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಭಾರತೀಯ ಅಂಚೆ ಇಲಾಖೆ ಇಂದು ಸರ್ಕಾರದ ಯೋಜನೆಗಳನ್ನು ಮನೆಬಾಗಿಲಿಗೆ ತಲುಪಿಸುವ ಕಾರ್ಯದಲ್ಲಿ ನಿರತವಾಗಿದೆ‌. ಜನತೆ ಸಹಕಾರ ನೀಡಿದಲ್ಲಿ ಮುಂದಿನ ದಿನಗಳಲ್ಲಿ ಇನ್ನಷ್ಟು ಸೇವೆಗಳನ್ನು ನೀಡಲು ಸಾಧ್ಯವಾಗುತ್ತದೆ ‌ಎಂದು ವಿಜಯಪುರ ಜಿಲ್ಲೆಯ ಅಂಚೆ ಅಧೀಕ್ಷಕ‌ ಮಹಾಂತೇಶ ತೊಗರಿ ಹೇಳಿದರು.ತಾಲೂಕೀನ ಬೊಮ್ಮನಜೋಗಿ ‌ಗ್ರಾಮದ ಹನುಮಾನ ಮಂದಿರದಲ್ಲಿ ಅಂಚೆ ಜನಸಂರ್ಪಕ ಅಭಿಯಾನದಲ್ಲಿ ಅವರು ಮಾತನಾಡಿದರು.ಅಂಚೆ ಇಲಾಖೆ ಹಲವು ವರ್ಷಗಳಿಂದ ಕೇವಲ ಸಂವಹನ ಹಾಗೂ ಪತ್ರವ್ಯವಹಾರಗಳ ನಿರ್ವಹಣೆಗೆ ಸೀಮಿತವಾಗಿತ್ತು. ಆದರೆ ಇಂದು ಬ್ಯಾಂಕುಗಳಂತೆ ಕೆಲಸ ಮಾಡುತಿದ್ದು ಇಲಾಖೆಯಡಿ ದೊರೆಯುವ ಪಿ ಎಲ್ ಐ ಹಾಗೂ‌ ಆರ್‌ ಪಿ ಎಲ್ ಐ, ಅಪಘಾತ ವಿಮೆ, ಆರ್‌ ಡಿ, ಸುಕನ್ಯ ಯೋಜನೆ, ಪಿ ಪಿ ಎಫ್, ಉಳಿತಾಯ‌ ಖಾತೆ‌ ಸಹಿತ‌ ಇರುವ‌ ಸೇವೆಗಳನ್ನು ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು‌ ಎಂದರು.ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಅಂಚೆ ಉಪ‌ಅಧಿಕ್ಷಕರಾದ ಬಿ.ಎಸ.ದಾಸರ್‌ ಅವರು, ಬಡವರ ಹಾಗೂ‌ ಕೂಲಿ ಕಾರ್ಮಿಕರ ಅವಶ್ಯಕತೆಗಳು ಅರಿತುಕೊಂಡ ಅಂಚೆ ಇಲಾಖೆಯು ಜನರ ವಯಸ್ಸಿನ ಅನುಗುಣವಾಗಿ ಹಲವಾರು ಸೇವೆಗಳಾದ…

Read More

ಇಂದು (ಜನೇವರಿ ೩೦) “ಹುತಾತ್ಮ ದಿನ” ಪ್ರಯುಕ್ತ ಈ ವಿಶೇಷ ಲೇಖನ ಲೇಖನ- ಮಲ್ಲಪ್ಪ. ಸಿ. ಖೊದ್ನಾಪೂರ (ತಿಕೋಟಾ)ವಿಜಯಪುರ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಮಹಾತ್ಮಾ ಗಾಂಧೀಜಿ ಅವರು, “ಆeಚಿಣh is ಚಿಣ ಚಿಟಿಥಿ ಣime bಟesseಜ buಣ iಣ is ಣತಿiಛಿe bಟesseಜ ಜಿoಡಿ ಚಿ ತಿಚಿಡಿಡಿioಡಿ ತಿho ಜies his ಛಿಚಿuse, ಣhಚಿಣ is ಣಡಿuಣh” ಎಂದು ಹೇಳಿದ್ದಾರೆ. ಸತ್ಯ, ಶಾಂತಿ, ಉಪವಾಸ, ಅಹಿಂಸೆ, ತ್ಯಾಗ ಮತ್ತು ಬಲಿದಾನಗಳೆಂಬ ಮೂಲ ಮಂತ್ರವನ್ನೇ ತನ್ನ ಉಸಿರಾಗಿಸಿಕೊಂಡು ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿ ಕೊಡುವಲ್ಲಿ ಅಮೂಲ್ಯ ಪಾತ್ರ ವಹಿಸಿದವರು ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರು. ಬ್ರಿಟಿಷರ ಕಪಿಮುಷ್ಠಿಯಿಂದ ದೇಶವನ್ನು ಸರ್ವತಂತ್ರ ಸ್ವತಂತ್ರಗೊಳಿಸಲು ಅನೇಕ ಹೋರಾಟಗಾರದು, ಮಹಾನ್ ನಾಯಕರು ಮತ್ತು ಕ್ರಾಂತಿಕಾರಿ ದೇಶಭಕ್ತರು ಹೋರಾಡಿದ್ದರ ಫಲಪ್ರದವಾಗಿ ಸ್ವಾತಂತ್ರ್ಯ ದೊರಕಿದೆ. ದೇಶಕ್ಕಾಗಿ ಹೋರಾಡಿ ಪ್ರಾಣ ತ್ಯಾಗ ಮಾಡಿದ ಮತ್ತು ವೀರ ಮರಣವನ್ನಪ್ಪಿದ ಯೋಧರು ಮತ್ತು ಹೋರಾಟಗಾರರನ್ನು ಸ್ಮರಿಸುವ ದಿನವೇ ಈ ಹುತಾತ್ಮ ದಿನವಾಗಿದೆ. ಈ ದಿನಕ್ಕೆ ಶಹೀದ್ ದಿವಸ…

Read More

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಇಂದಿನ ತಾಯಂದಿರು ಸಹ ಜೀಜಾಮಾತಾ ಅವರಂತೆ ತಮ್ಮ ಮಕ್ಕಳಿಗೆ ಉತ್ತಮ ಸಂಸ್ಕೃತಿ, ಸಂಸ್ಕಾರ ನೀಡಿ, ದೇಚಶಭಕ್ತಿ, ಧೈರ್ಯ, ಶೌರ್ಯ, ಸಾಹಸ ಮನೋಭಾವವನ್ನು ಬೆಳೆಸಿ, ಮಕ್ಕಳನ್ನು ದೇಶದ ಉತ್ತಮ ಪ್ರಜೆಗಳನ್ನಾಗಿ ರೂಪಿಸಲು ಪ್ರಯತ್ನಿಸಬೇಕು ಎಂದು ಮರಾಠಾ ಸಮಾಜದ ಜಗದ್ಗುರು ವೇದಾಂತಾಚಾರ್ಯ ಶ್ರೀ ಮಂಜುನಾಥ ಭಾರತಿ ಸ್ವಾಮೀಜಿ ಹೇಳಿದರು.ನಗರದ ಶ್ರೀ ಅಂಬಾಭವಾನಿ ಜಾತ್ರಾ ಮಹೋತ್ಸವಯು ನಾಲ್ಕನೇ ದಿನ ಧರ್ಮಸಭೆ ಹಾಗೂ ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮವನ್ನು ಚಾಲನೆ ನೀಡಿ ಮಾತನಾಡಿ, ಅವರು ನಾಲ್ಕು ದಿನಗಳ ಕಾಲ ಅತಿ ವಿಜೃಂಭಣೆಯಿಂದ ಜಾತ್ರಾ ಮಹೋತ್ಸವ ಕಾರ್ಯಕ್ರಮವನ್ನು ಮಾಡುತ್ತಾ ಬಂದಿದ್ದೀರಿ ತಾಯಿ ಭವಾನಿ ಮಾತಾ ಎಲ್ಲರಿಗೂ ಒಳ್ಳೆಯದು ಮಾಡಲಿ ಎಂದು ದೇವಿಯಲ್ಲಿ ಪ್ರಾರ್ಥಿಸುತ್ತೇನೆ ಎಂದು ಆರ್ಶೀವಚನ ನೀಡಿದರು.ಶಿವಾಜಿ ಮಹಾರಾಜರು ಧೀರ ಮತ್ತು ಪರಾಕ್ರಮಿ ಆಗಿದ್ದರು. ಅವರು ಒಂದು ಸಮುದಾಯಕ್ಕೆ ಸೀಮಿತವಾದವರಲ್ಲ. ಭಾರತವೇ ತನ್ನ ದೇಶ, ಭಾರತೀಯರೆಲ್ಲರೂ ತನ್ನವರು ಎಂಬ ಭಾವ ಹೊಂದಿದ್ದರು ಶಿವಾಜಿ ಮಹಾರಾಜರಂತೆ ನಮ್ಮ ದೇಶದ ಯುವಕರಲ್ಲಿ ಧೈರ್ಯ, ಸ್ಥೈರ್ಯ ಬೆಳೆಸಬೇಕಿದೆ. ಶಿವಾಜಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಫೆಬ್ರವರಿ 4 ರಂದು ವಿಶ್ವ ಕ್ಯಾನ್ಸರ್ ದಿನಾಚರಣೆ ಅಂಗವಾಗಿದೆ ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಆಸ್ಪತ್ರೆಯ ಶಸ್ತ್ರ ಚಿಕಿತ್ಸೆ ವಿಭಾಗವು, ಕಾಲೇಜಿನ ವೈಜ್ಞಾನಿಕ, ಶೈಕ್ಷಣಿಕ, ಸಂಶೋಧನಾ ಸಮಿತಿ (SARS), ವಿಜಯಪುರ ಜಿಲ್ಲಾ ಶಸ್ತ್ರ ಚಿಕಿತ್ಸಕರ ಸಂಘ (ASI) ಮತ್ತು ಭಾರತೀಯ ವೈದ್ಯಕೀಯ ಸಂಘ (IMA) ಸಹಯೋಗದೊಂದಿಗೆ ನಾನಾ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿದೆ.ಫೆಬ್ರವರಿ 3 ಮತ್ತು 4 ರಂದು ಮಧ್ಯಾಹ್ನ 12 ರಿಂದ 1ರ ವರೆಗೆ ಸ್ನಾತಕ ಮತ್ತು ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳಿಗೆ ಈ ವರ್ಷದ ಧ್ಯೇಯವಾಕ್ಯ “ಅನನ್ಯತೆಯಿಂದ ಒಂದುಗೂಡಿದೆ” ವಿಷಯದ ಕುರಿತು ನಿಬಂಧ ಮತ್ತು ಚಿತ್ರಕಲೆ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.ಫೆಬ್ರವರಿ 4 ರಂದು ಮುಂಜಾನೆ 11 ಘಂಟೆಗೆ ಬಿ.ಎಲ್.ಡಿ.ಇ ಮಹಿಳಾ ವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕ ಮತ್ತು ಕ್ಯಾನ್ಸರ್ ಶಸ್ತ್ರಚಿಕಿತ್ಸಕ ಡಾ. ಸಂಜೀವ ರಾಠೋಡ ಕ್ಯಾನ್ಸರ್ ಕುರಿತು ಉಪನ್ಯಾಸ ನೀಡಲಿದ್ದಾರೆ.ಇದೇ ದಿನ ಮತ್ತೋರ್ವ ಸಹಾಯಕ ಪ್ರಾಧ್ಯಾಪಕ ಮತ್ತು ಕ್ಯಾನ್ಸರ್ ಶಸ್ತ್ರಚಿಕಿತ್ಸಕ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಂಜಾರ ಭಾಷೆಯನ್ನು ಭಾರತ ಸಂವಿಧಾನದ 8 ನೇ ಪರಿಚ್ಛೇದದಲ್ಲಿ ಸೇರ್ಪಡೆಗೊಳಿಸುವ ಸಲುವಾಗಿ, ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಅಧ್ಯಕ್ಷ ಡಾ.ಮೋತಿಲಾಲ ಚವ್ಹಾಣ ಅವರ ಅಧ್ಯಕ್ಷತೆಯಲ್ಲಿ ಜ.28 ರಂದು ಬಂಜಾರ ಸಮುದಾಯದ ತಜ್ಞರ ಸಭೆಯನ್ನು ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯಲ್ಲಿ ಆಯೋಜಿಸಲಾಗಿತ್ತು.ಈ ಸಭೆಯಲ್ಲಿ ಬಂಜಾರ ಸಮುದಾಯದ ಹಿರಿಯ ತಜ್ಞರುಗಳಾದ ಡಾ ಡಿ.ಬಿ. ನಾಯಕ್‌, ಡಾ.ಹರಿಲಾಲ ಪವಾರ, ಪ್ರೊ.ಸಣ್ಣರಾಮ ನಾಯ್ಕ್‌, ಬಿ.ಹೀರಾ ನಾಯ್ಕ್‌, ಭೋಜ್ಯಾ ನಾಯಕ್, ಬಾಲರಾಜ್‌ ನಾಯಕ್ ಇವರುಗಳು ಬಂಜಾರಾ ಸಮುದಾಯದ ಐತಿಹಾಸ, ಭಾಷೆ, ಸಂಸ್ಕೃತಿಯ ಹಿನ್ನೆಲೆಯನ್ನು ಚರ್ಚೆಸಿ, ವರದಿಯನ್ನು ಸಿದ್ದಪಡಿಸಿ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ಅಧ್ಯಕ್ಷರಾದ ಡಾ.ಮೋತಿಲಾಲ್‌ ಚವ್ಹಾಣ್‌ ಹಾಗೂ ರಿಜಿಸ್ಟ್ರಾರ್‌ ಡಿ.ಎಂ.ರವಿಕುಮಾರ್ ಅವರಿಗೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಅಕಾಡೆಮಿ ಸದಸ್ಯರಾದ ಡಾ.ಎಂ.ರವಿ ನಾಯ್ಕ ಅವರು ಉಪಸ್ಥಿತರಿದ್ದರು.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸೂರ್ಯ ಪೌಂಡೇಶನ್ ಹಾಗೂ ಸ್ಪಾರ್ಕ್ ಅಕಾಡೆಮಿ ಮತ್ತು ಲಕ್ಷ್ಯ ಕರಿಯರ್ ಅಕಾಡೆಮಿ ಅವರು ನೀಡುವ ರಾಜ್ಯ ಮಟ್ಟದ “ಶಿಕ್ಷಣ ಚೈತನ್ಯ ಪ್ರಶಸ್ತಿ “ಗೆ ಆಕ್ಸಫರ್ಡ್ ಇಂಟರನ್ಯಾಷನಲ್ ಸ್ಕೂಲ್ ಹಾಗೂ ಬಿ ಎಂ ಪಾಟೀಲ್ ಪ್ರೌಢ ಶಾಲೆ ಗುಬ್ಬೆವಾಡ ಶಾಲೆಯನ್ನು ಆಯ್ಕೆ ಮಾಡಿ ಆ ಪ್ರಶಸ್ತಿ ಯನ್ನು ನೀಡಿದ್ದಕ್ಕಾಗಿ ಗಣರಾಜ್ಯೋತ್ಸವ ದಿನದಂದು ಊರಿನ ಎಲ್ಲ ಗಣ್ಯರು, ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಎಲ್ಲ ಸದಸ್ಯರು ಸೇರಿ ಶ್ರೀ ಅಪ್ಪಾಜಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಾಪೂಗೌಡ ಎಂ ಪಾಟೀಲ್ ಅವರಿಗೆ ಸನ್ಮಾನಿಸಿ, ಗೌರವಿಸಿದರು.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಆಧುನಿಕತೆ ಬೆಳದಂತೆ ಮೋಬೈಲ್, ದೂರದರ್ಶನ ಮತ್ತು ಸಾಮಾಜಿಕ ಜಾಲತಾಣಗಳ ಪ್ರಭಾವದಿಂದ ನಮ್ಮ ಗ್ರಾಮೀಣ ಜಾನಪದ ಸಂಸ್ಕೃತಿ, ನೃತ್ಯ, ಯಕ್ಷಗಾನ, ಮಹಾಭಾರತ-ರಾಮಾಯಣದಂತಹ ಕಥಾರೂಪಕಗಳು ಮಾಯವಾಗುತ್ತಿರುವದು ತೀರ ಆತಂಕಕಾರಿ ಸಂಗತಿ. ಮಕ್ಕಳಲ್ಲಿರುವ ಅಭಿರುಚಿ, ಆಸಕ್ತಿ ಮತ್ತು ಪ್ರತಿಭೆ ಗುರುತಿಸಿ, ಸುಪ್ತವಾದ ಕಲೆ-ಕೌಶಲ್ಯ ಅನಾವರಣಗೊಳ್ಳಲು ಸಾಂಸ್ಕೃತಿಕ ವೇದಿಕೆಗಳು ಇಂದಿನ ಅಗತ್ಯತೆಯಾಗಿದೆ ಎಂದು ನಿವೃತ್ತ ಪ್ರಾಂಶುಪಾಲೆ ಶಾಂತಾ ಹೆರಕಲ್ ಅವರು ಅಭಿಪ್ರಾಯಪಟ್ಟರು.ಅವರು ಮಾತನಾಡುತ್ತಾ, ಪ್ರತಿಯೊಂದು ಮಗುವಿನಲ್ಲಿ ಒಂದೊಂದು ವಿಶಿಷ್ಟವಾದ ಪ್ರತಿಭೆ ಮತ್ತು ನೈಪುಣ್ಯತೆ ಇದ್ದೇ ಇರುತ್ತದೆ. ಆ ಪ್ರತಿಬೆಯು ಸಮಾಜದ ಮುಖ್ಯವಾಹಿನಿಗೆ ಬರಲು ಜಾತ್ರಾ ಮಹೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವದರ ಮೂಲಕ ವೇದಿಕೆ ಕಲ್ಪಿಸಿಕೊಡಬೇಕು. ಅಳಿವಿನ ಅಂಚಿನಲ್ಲಿರುವ ನಮ್ಮ ದೇಶೀಯ ಸಂಗೀತ, ಸಾಹಿತ್ಯ, ಕಲೆ-ಸಂಸ್ಕೃತಿ, ಗರತಿಯ ಹಾಡುಗಳು, ಕೋಲಾಟ, ನೃತ್ಯ, ಯಕ್ಷಗಾನ, ಶಿವತಾಂಡವ ಇವೆಲ್ಲವನ್ನು ಮುಂದಿನ ಪೀಳಿಗೆಗೆ ಉಳಿಸಿ-ಬೆಳೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದರು.ಕಾರ್ಯಕ್ರಮದಲ್ಲಿ ನಟರಾಜ ಡ್ಯಾನ್ಸ್ ಅಕ್ಯಾಡೆಮಿಯ ಸುಮಾರು ೬೦ ಕ್ಕೂ ಹೆಚ್ಚು ಮಕ್ಕಳಿಂದ ಹೇ ಶಾರದೆ, ವೀಣಾ ಪುಸ್ತಕ, ಗರುಡ…

Read More